Cockroach files: ಜಿರಳೆಗಳೇತಕೆ ಹಾರವು ದೂರಕೆ, ಇದ್ದರೂ ಎರಡು ರೆಕ್ಕೆ? - Vistara News

ನಿಮಗಿದು ಗೊತ್ತೇ?

Cockroach files: ಜಿರಳೆಗಳೇತಕೆ ಹಾರವು ದೂರಕೆ, ಇದ್ದರೂ ಎರಡು ರೆಕ್ಕೆ?

cockroach files: ಜಿರಳೆಯನ್ನು ಎಲ್ಲರೂ ಹತ್ತಿರದಿಂದಲೇ ನೋಡಿರುತ್ತೇವೆ. ಅದಕ್ಕೆ ರೆಕ್ಕೆಗಳಿರುವುದನ್ನು ಗಮನಿಸಿದ್ದೇವೆ. ಆದರೆ ಅದು ತುಂಬ ದೂರಕೆ ಹಾರುವುದಿಲ್ಲ ಯಾಕೆ ಎನ್ನುವ ಪ್ರಶ್ನೆ ಆಗಾಗ ಕಾಡುತ್ತದೆ. ಇಲ್ಲಿದೆ ಅದಕ್ಕೆ ಉತ್ತರ.

VISTARANEWS.COM


on

cockroaches
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ʻರೆಕ್ಕೆಯೊಂದಿದ್ದರೆ ಮನೋವೇಗದಲ್ಲಿ ಎಲ್ಲಿಂದೆಲ್ಲಿಗೆ ಹಾರಿಬಿಡುತ್ತಿದ್ದೆʼ ಎಂದು ಅದೆಷ್ಟು ಬಾರಿ ಯೋಚಿಸಿಲ್ಲ ನಾವು! ಚಿಟ್ಟೆ-ಜೇನು-ಖಗ-ಭೃಂಗಗಳ ರೆಕ್ಕೆಗಳನ್ನು ಕಂಡು ಒಂದಿಲ್ಲೊಂದು ಬಾರಿ ಆಸೆ ಕಣ್ಣು ಬಿಟ್ಟೇ ಇರುತ್ತೇವೆ. ಹಾಗೆಂದು ರೆಕ್ಕೆ ಇರುವ ಪ್ರಾಣಿಗಳನ್ನೆಲ್ಲಾ ಕಂಡು ಆಸೆ ಪಡುವುದಕ್ಕಾದೀತೆ… ಜಿರಲೆ (cockroach) ಯನ್ನೂ ಕಂಡು! ಛೀ! ಥೂ! ಅನಿಷ್ಟ… ಎನ್ನುತ್ತಾ ಒಂದೋ ಹೆದರಿ ಓಡುತ್ತೇವೆ; ಅಥವಾ ಬೆನ್ನಟ್ಟಿ ಹೊಡೆಯುತ್ತೇವೆ. ಮನೆಯನ್ನು ಎಷ್ಟೇ ಸ್ವಚ್ಛ ಇಟ್ಟುಕೊಂಡರೂ ಕೆಲವೊಮ್ಮೆ ತಮ್ಮ ಸಂತತಿಯನ್ನು ಸತತ ಹೆಚ್ಚಿಸಿಕೊಂಡು ನಮ್ಮ ನಿದ್ದೆಗೆಡಿಸುತ್ತದೆ ಈ ಕ್ಷುದ್ರಜೀವಿಗಳು. ಅವುಗಳಿಂದಾಗುವ ಕೊಳಕಂತೂ ಹೇಳಲಸಾಧ್ಯ. ಎಷ್ಟೇ ಗುಡಿಸಿ-ಒರೆಸಿ ಶುಚಿ ಮಾಡಿದರೂ ಅಗೋಚರ ಸಂದಿ-ಗೊಂದಿಗಳಿಂದ ತೂರಿಬಂದು ತಲೆ ಕೆಡಿಸುತ್ತವೆ. ತರುವ ರೋಗಗಳೂ ಆತಂಕಕಕಾರಿ. ಯಾವ್ಯಾವ ಅಂಗಡಿಗಳಲ್ಲಿ ಜಿರಳೆಗಳ ನಿಯಂತ್ರಣಕ್ಕೆ ಏನೇನು ದೊರೆಯುತ್ತದೆಯೊ ಅದೆಲ್ಲವನ್ನೂ ತಂದು ಪ್ರಯೋಗ ಮಾಡಿದರೂ, ಅವುಗಳಿಂದ ಮುಕ್ತಿ ದೊರೆಯತ್ತದೆಂಬ ಖಾತ್ರಿಯಿಲ್ಲ. ಅದರಲ್ಲೂ ಮನೆಗೆ ಅತಿಥಿಗಳು ಬಂದಾಗ ಈ ಅ‍ಭ್ಯಾಗತ ಪ್ರಾಣಿಗಳು ಎದುರಿಗೆ ಕಾಣಿಸಿಕೊಂಡು ತರುವ ಮುಜುಗರ… ಈ ಲೋಕದ್ದಲ್ಲ! ನಾವು ಮಾನವರು ಹೀಗೆಂದುಕೊಂಡರೆ, ಪ್ರಕೃತಿಯ ರೀತಿ ಭಿನ್ನ.

ಕಾಣುವುದಕ್ಕೆ ಎಂಥಾ ಕ್ಷುಲ್ಲಕ ಜೀವಿಯೇ ಆದರೂ, ಅದಕ್ಕೊಂದಿಷ್ಟು ವೈಶಿಷ್ಟ್ಯಗಳನ್ನು ಪ್ರಕೃತಿ ನೀಡಿಯೇ ಇರುತ್ತದೆ… ಜಿರಳೆಗಳಿಗೂ ಸಹಾ ಬದುಕಿ ಉಳಿಯುವುದಕ್ಕೆ ಎಲ್ಲಾ ಜೀವಿಗಳೂ ಒಂದಿಷ್ಟು ತಂತ್ರಗಳನ್ನು ಅನುಸರಿಸುವಂತೆ ಜಿರಳೆಗಳೂ ಮಾಡುತ್ತವೆ. ಉದಾ, ನೀರಿನಡಿಯಲ್ಲಿ ಸುಮಾರು 40  ನಿಮಿಷಗಳವರೆಗೂ ತಮ್ಮ ಉಸಿರು ಹಿಡಿದು ಬದುಕಬಲ್ಲವಂತೆ ಈ ಜೀವಿಗಳು. ಮಾತ್ರವಲ್ಲ, ತಲೆ ಕಡಿದು ಹೋದರೂ ಕೆಲವು ದಿನಗಳವರೆಗೆ ಜೀವಂತ ಇರಬಲ್ಲವು ಎಂಬುದಂತೂ ಚೋದ್ಯ! ಅಷ್ಟೇಕೆ, ಯಾವುದೇ ಆಹಾರವಿಲ್ಲದೆ ಸುಮಾರು ಮೂರು ತಿಂಗಳುಗಳವರೆಗೆ ಜೀವ ಹಿಡಿಯಬಲ್ಲವು ಎನ್ನುತ್ತಾರೆ ವಿಜ್ಞಾನಿಗಳು.

ಇಂಥ ವೈಚಿತ್ರ್ಯಗಳನ್ನು ಹೊಂದಿರುವ ಈ ಜೀವಿಗಳು ರೆಕ್ಕೆಗಳಿದ್ದರೂ ದೂರಕ್ಕೆ ಏಕೆ ಹಾರುವುದಿಲ್ಲ? ಹಕ್ಕಿಗಳಂತೆ ನಭಕ್ಕೆ ಹಾರಿ ಖಂಡಾಂತರ ಪ್ರವಾಸ ಹೋಗಬಹುದಿತ್ತಲ್ಲ. ʻಅಯ್ಯೋ! ಭಾರತದಲ್ಲಿ ಜಿರಳೆಗಳಿವೆʼ ಎಂದು ಮೂಗು ಮುರಿಯುವ ಎಲ್ಲಾ ದೇಶಗಳಿಗೂ ಇವುಗಳನ್ನು ಸುಲಭಕ್ಕೆ ಹಾರಿಸಬಹುದಿತ್ತೇನೊ! ಜಿರಳೆಗಳ ದೇಹಕ್ಕಿಂತ ಅವುಗಳ ರೆಕ್ಕೆ ತುಂಬಾ ಹಗುರ. ದೇಹದ ಭಾರವನ್ನು ಹೊತ್ತು, ಹೆಚ್ಚು ಕಾಲ ಗಾಳಿಯಲ್ಲಿ ಹಾರಬಲ್ಲ ಸಾಮರ್ಥ್ಯ ಈ ರೆಕ್ಕೆಗಳಿಗೆ ಇಲ್ಲ. ಉಳಿದೆಲ್ಲ ಕೀಟಗಳಿಗೆ ಇರುವಂತೆಯೇ ಜಿರಳೆಗಳಲ್ಲೂ ಕಾರ್ಯನಿರ್ವಹಿಸುವ ನರಮಂಡಲ, ಅವು ಹಾರುವ ದಿಕ್ಕು ಮತ್ತು ದೂರವನ್ನು ನಿರ್ಧರಿಸುತ್ತದೆ. ಹಾಗಾಗಿ ನಮ್ಮ ಗುರಿಯಿಂದ ತಪ್ಪಿಸಿಕೊಂಡು ಪಕ್ಕದ ಗೋಡೆಯ ಮೇಲಷ್ಟೇ ಅವು ಹಾರುವುದು, ಇನ್ನೂ ದೂರಕ್ಕಲ್ಲ. ಆದರೆ ಅದು ಹಾರುವ ವೇಗವನ್ನು ಲೆಕ್ಕ ಹಾಕುವುದಾದರೆ, ಗಂಟೆಗೆ ಐದು ಕಿ.ಮೀ.ವರೆಗೆ ಹಾರಬಲ್ಲದು ಎನ್ನುತ್ತಾರೆ ವಿಜ್ಞಾನಿಗಳು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ನಿಮಗಿದು ಗೊತ್ತೇ?

Mosquito magnets | ಸೊಳ್ಳೆಗಳು ನಿಮ್ಮನ್ನೇ ಹುಡುಕಿ ಬರುತ್ತವೆಯೇ! ಇಲ್ಲಿದೆ ಕಾರಣ

ಸೊಳ್ಳೆಗಳನ್ನು ಬಳಿಗೆ ಸೆಳೆಯುವವರು ತಮ್ಮ ಜೀವನವಿಡೀ ಬದಲಾಗುವುದಿಲ್ಲ. ಅವರಿಗೆ ಸೊಳ್ಳೆ ಕಾಟ ತಪ್ಪಿದ್ದಲ್ಲ- ಎಂದು ವಿಜ್ಞಾನಿಗಳು ಹೇಳಿದ್ದಾರೆ. ಅದ್ಯಾಕೆ ಹಾಗೆ?

VISTARANEWS.COM


on

Mosquito
Koo

ಹತ್ತಾರು ಜನರ ನಡುವೆ ಕುಳಿತಾಗ ನಿಮಗೆ ಮಾತ್ರ ಸೊಳ್ಳೆ ಕಚ್ಚುವಂತೆ ಭಾಸವಾಗುತ್ತದೆಯೇ? ಯಾರಿಗೂ ಕಾಣದ ಸೊಳ್ಳೆಗಳು ನಿಮ್ಮನ್ನೇ ಹುಡುಕಿಕೊಂಡು ಬಂದು ಕಚ್ಚುತ್ತವೆಯೆಂಬ ಭ್ರಮೆ ನಿಮಗಿದೆಯೇ? ಇದು ಭ್ರಮೆಯಲ್ಲ ಎನ್ನುತ್ತವೆ ವೈಜ್ಞಾನಿಕ ಅಧ್ಯಯನಗಳು. ಸೊಳ್ಳೆಗಳು ಕೆಲವರತ್ತಲೇ ಸದಾ ಆಕರ್ಷಿತವಾಗುತ್ತವೆ ಎಂಬುದು ಇತ್ತೀಚಿನ ಸಂಶೋಧನೆಯೊಂದರ ಸಾರ.

ಇದೆಂಥ ಆಕರ್ಷಣೆ ಮಾರಾಯರೆ! ಸಂಪತ್ತು, ಯಶಸ್ಸು, ಕೀರ್ತಿ ಅಥವಾ ಹೆಸರನ್ನೋ ಆಕರ್ಷಿಸುವಂತಿದ್ದರೆ ಎಷ್ಟು ಒಳ್ಳೆಯದಿತ್ತು. ಸುಂದರ ರೂಪಿನಿಂದ ಸಂಗಾತಿಯನ್ನು ಆಕರ್ಷಿಸುವುದಾಗಿದ್ದರೆ ಇನ್ನೂ ಒಳ್ಳೆಯದಿತ್ತು. ಎಲ್ಲಾ ಬಿಟ್ಟು ರಕ್ತ ಹೀರಿ, ರೋಗ ತರಿಸುವ ಸೊಳ್ಳೆ! ಅದೂ ಹೆಣ್ಣು ಸೊಳ್ಳೆ!! ನಮ್ಮದೃಷ್ಟವೇ ಖೊಟ್ಟಿ ಎಂದು ಲೊಚಗುಟ್ಟಬಹುದು. ವಿಷಯವೇನೆಂದರೆ, ಸೊಳ್ಳೆಗಳನ್ನು ಸೂಜಿಗಲ್ಲಿನಂತೆ (“mosquito magnets”) ಸೆಳೆಯುವ ಈ ಮಹಾಶಯರ ಚರ್ಮದ ಮೇಲೆ ಉಳಿದವರಿಗಿಂತ ಹೆಚ್ಚಿನ ಪ್ರಮಾಣದ ಕಾರ್ಬಾಕ್ಸಿಲಿಕ್‌ ಆಮ್ಲ ಜಮಾವಣೆ ಆಗುತ್ತದೆ. ಎಲ್ಲರ ಚರ್ಮದ ಮೇಲೂ ಜಮಾವಣೆಯಾಗುವ ಈ ಆಮ್ಲದ ಪ್ರಮಾಣ ಬೇರೆಯಾಗಿಯೇ ಇರುತ್ತದೆ. ಹಾಗಾಗಿ ಕಾರ್ಬಾಕ್ಸಿಲಿಕ್‌ ಆಮ್ಲದ ವಾಸನೆ ಹೆಚ್ಚು ಸೂಸುವವರು ಉಳಿದವರಿಗಿಂತ ನೂರು ಪಟ್ಟು ಹೆಚ್ಚಾಗಿ ಸೊಳ್ಳೆಗಳನ್ನು ಆಕರ್ಷಿಸುತ್ತಾರೆ ಎನ್ನುತ್ತಾರೆ ನ್ಯೂಯಾರ್ಕ್‌ನ ರಾಕ್ಫೆಲ್ಲರ್‌ ವಿಶ್ವವಿದ್ಯಾಲಯದ ಅಧ್ಯಯನಕಾರರು.

ಇದನ್ನೂ ಓದಿ | ಚೀತಾ, ಚಿರತೆ, ಜಾಗ್ವಾರ್‌ | ಇವುಗಳ ನಡುವಿನ ವ್ಯತ್ಯಾಸ ತಿಳಿದಿರಲಿ!

ಸೊಳ್ಳೆಗಳನ್ನು ಸೂಜಿಗಲ್ಲಿನಂತೆ ಸೆಳೆಯುವ ಈ ಜನ ಎಲ್ಲೇ ಹೋಗಲಿ, ಎಂಥಾ ವಸ್ತ್ರಗಳನ್ನೇ ತೊಡಲಿ, ಎಂಥಾ ಆಹಾರವನ್ನೇ ಸೇವಿಸಲಿ, ಎಂಥಾ ಡಿಯೋಡರೆಂಟ್‌ ಸುರಿದುಕೊಳ್ಳಲಿ ಅಥವಾ ಅವರಿಗೆ ಎಷ್ಟೇ ವಯಸ್ಸಾಗಲಿ- ಗಂಟುಬಿದ್ದಿರುವ ಈ ಗ್ರಹಚಾರ ಸುಲಭಕ್ಕೆ ಬಿಡುವುದಿಲ್ಲ ಎನ್ನುತ್ತಾರೆ ತಜ್ಞರು. ಇದಕ್ಕಾಗಿ ಹಲವಾರು ತಿಂಗಳುಗಳವರೆಗೆ ವಿಸ್ತೃತವಾಗಿ ಪ್ರಯೋಗಗಳನ್ನು ನಡೆಸಲಾಯಿತು. “ಈ ಸುದ್ದಿ ಸಿಹಿಯೋ ಕಹಿಯೋ ಗೊತ್ತಿಲ್ಲ, ಆದರೆ ಸೊಳ್ಳೆಗಳನ್ನು ಸೆಳೆಯುವವರು ತಮ್ಮ ಜೀವನವಿಡೀ ಬದಲಾಗುವುದಿಲ್ಲ. ಅವರಿಗೆ ಸೊಳ್ಳೆ ಕಾಟ ತಪ್ಪಿದ್ದಲ್ಲ” ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಪ್ರಯೋಗದ ವಿವರ: ಒಟ್ಟು ೬೪ ಮಂದಿ ಪಾಲ್ಗೊಂಡಿದ್ದ ಈ ಪ್ರಯೋಗದ ವಿವರ ಹೀಗಿದೆ. ಚರ್ಮದ ವಾಸನೆಯನ್ನು ಚನ್ನಾಗಿ ಹೀರಬಲ್ಲಂಥ ನೈಲಾನ್‌ ಸ್ಟಾಕಿಂಗ್ಸ್‌ ಹಾಕಿಕೊಳ್ಳಲು ಎಲ್ಲರಿಗೂ ಹೇಳಲಾಗಿತ್ತು. ನಂತರ ಈ ವಸ್ತ್ರಗಳನ್ನು ಉದ್ದನೆಯ ಕೊಳವೆಯೊಂದರ ತುದಿಗೆ ಇರಿಸಿ, ಅದರೊಳಗೆ ಈಡೆಸ್ ಹೆಣ್ಣು ಸೊಳ್ಳೆಗಳನ್ನು ಬಿಡಲಾಗಿತು. ಒಬ್ಬೊಬ್ಬ ವ್ಯಕ್ತಿಯ ವಸ್ತವನ್ನೂ ಒಂದಕ್ಕಿಂತ ಹೆಚ್ಚು ಕೊಳವೆಯೊಳಗೆ ಇರಿಸಿ, ಎಲ್ಲಾ ಕೊಳವೆಯೊಳಗೂ ಆಯಾ ವಸ್ತ್ರಗಳಿಗೆ ಇಂಥವೇ ಪ್ರತಿಕ್ರಿಯೆ ಬರುತ್ತದೆಯೇ ಎಂಬುದನ್ನು ಪರಿಶೀಲಿಸಲಾಯಿತು. ಹೌದು, ಕೆಲವರ ವಸ್ತ್ರಗಳು ಸೊಳ್ಳೆಗಳು ಸೂಜಿಗಲ್ಲಿನಂತೆ ಸೆಳೆದವು. ಕೆಲವರ ವಸ್ತ್ರಗಳಂತೂ ಸುಮಾರು ನೂರು ಪಟ್ಟು ಹೆಚ್ಚು ಆಕರ್ಷಣೀಯವಾಗಿ ಸೊಳ್ಳೆಗಳಿಗೆ ಕಂಡವು. ಈ ರೀತಿಯ ಪ್ರಯೋಗಗಳನ್ನು ಮತ್ತೆಮತ್ತೆ ಮಾಡಿದಾಗಲೂ ಫಲಿತಾಂಶದಲ್ಲಿ ವಿಶೇಷ ವ್ಯತ್ಯಾಸ ಕಂಡುಬರಲಿಲ್ಲ ಎನ್ನುತ್ತಾರೆ ಅಧ್ಯಯನಕಾರರು. ಸೊಳ್ಳೆಗಳು ಪದೇಪದೆ ಕಚ್ಚುತ್ತಿವೆ ಎಂದರೆ ಯಾವುದಕ್ಕೂ ಸ್ವಲ್ಪ ಜಾಗ್ರತೆ ವಹಿಸಿ.

ಇದನ್ನೂ ಓದಿ | Egg usage: ಹೊಟ್ಟೆ ಸೇರುವ ಮೊದಲೇ ಮೊಟ್ಟೆಯ ಬಗೆಗೆ ನಿಮಗಿವು ತಿಳಿದಿರಲಿ!

Continue Reading

ಆರೋಗ್ಯ

Chromotherapy | ಬಣ್ಣದ ಔಷಧಿಯಲ್ಲ, ಬಣ್ಣವೇ ಔಷಧಿ!

ಬಣ್ಣಗಳು ನಮ್ಮ ಮನಸ್ಸಿನ ಆರೋಗ್ಯದ ಮೇಲೆ ನಾನಾ ಬಗೆಯಲ್ಲಿ ಪರಿಣಾಮ ಬೀರುವುದನ್ನು ನೀವು ಗಮನಿಸಿರಬಹುದು. ಇದನ್ನು ಆಧರಿಸಿದ ಚಿಕಿತ್ಸಾ ಕ್ರಮವೇ color therapy ಅಥವಾ chromotherapy.

VISTARANEWS.COM


on

color
Koo

ಬಣ್ಣಗಳಿಗೆ ಅದ್ಭುತ ಶಕ್ತಿಯಿದೆ. ಕಳೆಗುಂದಿದ ನಮ್ಮ ಮೂಡ್‌ ಅನ್ನು ಇದ್ದಕ್ಕಿದ್ದಂತೆ ಸರಿ ಮಾಡುವ, ಖುಷಿಯನ್ನು ಪಸರಿಸುವ ಸಾಮರ್ಥ್ಯ ಬಣ್ಣಗಳಿಗಿವೆ. ಗಾಢ ಹಾಗೂ ಬೆಚ್ಚನೆಯ ಭಾವ ಕೊಡುವ ಬಣ್ಣಗಳು ಒಮ್ಮಿಂದೊಮ್ಮೆ ನಮ್ಮ ದೇಹಕ್ಕೆ ಮನಸ್ಸಿಗೆ ರಿಲ್ಯಾಕ್ಸ್‌ ಕೊಡಬಹುದು. ಹಾಗಾಗಿ ಬಣ್ಣಗಳನ್ನೇ ಇಟ್ಟುಕೊಂಡು ಮನುಷ್ಯನ ಭಾವನೆಗಳಿಗೆ, ಮನಸ್ಸಿಗೆ ಚಿಕಿತ್ಸೆ ಕೊಡಬಹುದು. ಇದಕ್ಕೆ ಕಲರ್‌ ಥೆರಪಿ ಅಥವಾ ಕ್ರೋಮೋಥೆರಪಿ ಎಂದೂ ಕರೆಯುತ್ತಾರೆ.

ವಿಜ್ಞಾನಿಗಳು ಹೇಳುವ ಪ್ರಕಾರ, ಬಹಳಷ್ಟು ನಮ್ಮ ದೈಹಿಕ ಸಮಸ್ಯೆಗಳ ಮೂಲ ಮಾನಸಿಕ ಸಮಸ್ಯೆಯಲ್ಲೇ ಇರುತ್ತದೆ. ಅಂದರೆ, ನಾವು ನೆಮ್ಮದಿಯಾಗಿದ್ದಂತೆ ಮೇಲ್ನೋಟಕ್ಕೆ ಕಂಡರೂ, ಮನಸ್ಸಿನಾಳದಲ್ಲಿ ಬಾಧಿಸುವ ವಿಚಾರಗಳು ನಮ್ಮ ದೇಹದ ಸಮಸ್ಯೆಗಳ ಮೂಲಕ ವ್ಯಕ್ತವಾಗಬಹುದು. ಅಂದರೆ, ಮನಸ್ಸಿನಾಳದಲ್ಲಿ ಹುದುಗಿದ ಬೇಸ, ದುಃಖಗಳನ್ನು ವ್ಯಕ್ತಪಡಿಸಲಾಗದೆ ತೊಳಲುವ ಮಂದಿಗೆ ಹಲವಾರು ದೈಹಿಕ ಸಮಸ್ಯೆಗಳ ರೂಪದಲ್ಲಿ ಅವರನ್ನು ಕಾಡುತ್ತವೆ. ಮುಖ್ಯವಾಗಿ, ದೇಹದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೋವುಗಳು ಮಾನಸಿಕ ತಳಮಳದ ಪ್ರತಿಫಲನವೂ ಆಗಿರುವ ಸಾಧ್ಯತೆಗಳಿರುತ್ತದೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಈ ಬಣ್ಣಗಳ ಮೂಲಕ ಚಿಕಿತ್ಸೆ ನೀಡುವುದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಇಳಿದುಬಂದಿದೆ.

ಉದಾಹರಣೆಗೆ, ನೀಲಿ ಬಣ್ಣದ ಬೆಳಕನ್ನು ಹೊಂದಿದ ಕೋಣೆಯಲ್ಲಿ ಕೂತು ಶಾಂತಿ ಸಮಾಧಾನವನ್ನು ಕಂಡುಕೊಳ್ಳುವುದು, ಪಿಂಕ್‌ ಬಣ್ಣದ ಬೆಳಕಿನಲ್ಲಿ ಕೂತು ತುಮುಲಗಳಿಂದ ಹೊರಬರುವುದಕ್ಕೆ ನೆರವಾಗುತ್ತದೆ. ಆದರೆ, ಇದನ್ನು ತಜ್ಞರ ಸಹಕಾರದಿಂದ ಮಾಡುವುದು ಮುಖ್ಯವಾಗುತ್ತದೆ.

ತಲೆನೋವಿಗೆ ಬಣ್ಣಗಳು ಬಹಳ ಒಳ್ಳೆಯ ಔಷಧಿಯಂತೆ. ಮೈಗ್ರೇನ್‌ ಹಾಗೂ ಪದೇ ಪದೇ ತಲೆನೋವಿನಿಂದ ಬಳಲುವವರಿಗೆ ಬಣ್ಣಗಳ ಥೆರಪಿ ಚೆನ್ನಾಗಿ ಕೆಲಸ ಮಾಡುತ್ತದೆ ಎನ್ನುತ್ತಾರೆ ವೈದ್ಯರು. ಇದಕ್ಕೆ ಪ್ರತ್ಯೇಕವಾಗಿ ಬಣ್ಣಗಳ ಟ್ರೀಟ್ಮೆಂಟ್‌ ತೆಗೆದುಕೊಳ್ಳುವ ಅಗತ್ಯವೂ ಇಲ್ಲ. ಸುಮ್ಮನೆ ಪ್ರಶಾಂತವಾದ ಹಸಿರು ಹಸಿರಿನ ಪ್ರಕೃತಿಯಲ್ಲಿ ಸುಮ್ಮನೆ ಕೆಲಹೊತ್ತು ಕಳೆದರೂ ಸಾಕು, ತಲೆನೋವು ಎಷ್ಟೋ ಬೆಟರ್‌ ಅನಿಸುತ್ತದೆ. ಇಲ್ಲಿ ಹಸಿರು ಬಣ್ಣ ನಮ್ಮ ತಲೆನೋವಿನ ಶಮನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ.

ಇದನ್ನೂ ಓದಿ: ಈಗೀಗ 30-40ನೇ ವಯಸ್ಸಿನಲ್ಲೇ ಸ್ತನ ಕ್ಯಾನ್ಸರ್‌ ಕಾಡುವುದೇಕೆ? ಎಲ್ಲಿ ಎಡವಿದ್ದೇವೆ ನಾವು?

ವಿಜ್ಞಾನಿಗಳ ಪ್ರಕಾರ, ಪ್ರಕೃತಿಯ ಸಂಗವೇ ಒಂದು ಥೆರಪಿ. ಪ್ರಕೃತಿಯ ಒಡನಾಟ ಇದ್ದರೆ ಧ್ಯಾನದಂತಹ ಮನೋನಿಗ್ರಹ ಚಟುವಟಿಕೆಗಳ ಅಗತ್ಯವೂ ಇಲ್ಲ. ಪ್ರಕೃತಿ ಕೊಡುವ ಶಾಂತಿ, ನೆಮ್ಮದಿ ಕೊಡುತ್ತದೆ. ವೈಜ್ಞಾನಿಕವಾಗಿಯೂ ಪ್ರಕೃತಿಯಲ್ಲಿರುವ ಹಸಿರು ಬಣ್ಣ ನೋವು ನಿವಾರಕ ಎಂಬುದು ಸಾಬೀತಾಗಿದೆ.

ಕ್ರೋಮೋಥೆರಪಿಯಲ್ಲಿ ಯಾವ ಬಣ್ಣ ದೇಹದ ಯಾವ ಭಾಗದೊಂದಿಗೆ ವಿಶೇಷ ಸಂಬಂಧ ಹೊಂದಿದೆ ಎಂದು ನೋಡೋಣ.

೧. ಕೆಂಪು: ಕೆಂಪು ಎಂದರೆ ಶಕ್ತಿ, ಇದು ರಕ್ತಪರಿಚಲನೆ ಹಾಗೂ ಉಸಿರಾಟಕ್ಕೆ ನೇರ ಸಂಬಂಧ ಹೊಂದಿದೆ. ಹಾಗಾಗಿ ಈ ಬಣ್ಣ ರಕ್ತದೊತ್ತಡವನ್ನು ಸಹಜ ಸ್ಥಿತಿಗೆ ತರುವಲ್ಲಿ ಸಹಾಯ ಮಾಡುವುದಲ್ಲದೆ, ಹೃದಯವನ್ನು ಆರೋಗ್ಯವಾಗಿರಿಸಲು ನೆರವಾಗುತ್ತದೆ.

೨. ಹಳದಿ: ಹಳದಿ ಬಣ್ಣ ಜೀರ್ಣಾಂಗ ವ್ಯವಸ್ಥೆ ಹಾಗೂ ನರಮಂಡಲವನ್ನು ಪ್ರತಿನಿಧಿಸುತ್ತದೆ. ಇದಲ್ಲದೆ, ಉಸಿರಾಟದ ತೊಂದರೆ, ಅಸ್ತಮಾ ಮತ್ತಿತರ ಕಾಯಿಲೆಗಳ ಗುಣಪಡಿಸುವಿಕೆಯಲ್ಲಿ ಹಳದಿ ಬಣ್ಣ ಸಹಾಯ ಮಾಡುತ್ತದೆ.

೩. ನೀಲಿ: ನೀಲಿ ಎಂದರೆ ಶಾಂತಿ, ನೆಮ್ಮದಿ. ಇದು ಶೀತ, ಕೆಮ್ಮು, ಜ್ವರ, ತಲೆನೋವು ಮತ್ತಿತರ ಸಮಸ್ಯೆಯ ಪರಿಹಾರದಲ್ಲಿ ಪಾತ್ರ ವಹಿಸುತ್ತದೆ.

೪. ನೇರಳೆ ಮತ್ತು ಇಂಡಿಗೋ: ಈ ಬಣ್ಣಗಳು ಕಣ್ಣಿಗೆ ಒಳ್ಳೆಯದು. ಕಿವಿ ಹಾಗೂ ಮೂಗಿನ ಸಂಬಂಧಿ ತೊಂದರೆಗೂ ಈ ಬಣ್ಣಗಳು ಒಳ್ಳೆಯದು. ನಮ್ಮ ಮಾಂಸಖಂಡಗಳನ್ನು ರಿಲ್ಯಾಕ್ಸ್‌ ಮಾಡಿಸಿ, ಶಾಂತಿ, ನೆಮ್ಮದಿಯ ಭಾವ ಮೂಡಿಸುವಲ್ಲಿ ಈ ಬಣ್ಣದ ಸಹಾಯ ಮಾಡುತ್ತದೆ.

ಇದನ್ನೂ ಓದಿ: Kids food: ಮಕ್ಕಳು ಲಂಬೂಜಿ ಆಗಬೇಕಾದರೆ ಅವರ ಆಹಾರದಲ್ಲಿ ಇವು ಇರಲಿ

Continue Reading

ದೇಶ

world snake day | ಇದು ಭಾರತದ ಉರಗ ವಿಚಾರ – ಇಲ್ಲಿದೆ ಕ್ಯೂರಿಯಸ್‌ ಸಮಾಚಾರ

ಹಾವುಗಳ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಜುಲೈ 16ರಂದು ವಿಶ್ವ ಹಾವು ದಿನವನ್ನು ಪ್ರಪಂಚದಾದ್ಯಂತ ಆಚರಣೆಗೆ ತರಲಾಗಿದೆ. ವಿಶ್ವದಲ್ಲಿ ಒಟ್ಟು 3,500ಕ್ಕೂ ಹೆಚ್ಚು ಪ್ರಭೇದದ ಹಾವುಗಳಿದ್ದು, ಇವುಗಳಲ್ಲಿ ಭಾರತದ ಪ್ರಮುಖ ಪ್ರಭೇದಗಳ ಇಂಟ್ರೆಸ್ಟಿಂಗ್‌ ಮಾಹಿತಿಯನ್ನು ತಿಳಿಯೋಣ.

VISTARANEWS.COM


on

world snake day
Koo

ಹಾವು ಎಂದಾಕ್ಷಣ ಒಂದು ರೀತಿಯ ಭಯ ನಮ್ಮಲ್ಲಿ ಮೂಡುತ್ತದೆ. ಇದು ಸರೀಸೃಪ ಜಾತಿಗೆ ಸೇರಿರುವ ಜೀವಿಯಾಗಿದೆ. ಹಾವುಗಳ ಬಗ್ಗೆ ಮನುಷ್ಯರಿಗೆ ಇರುವ ಸಾಮಾನ್ಯ ಕಲ್ಪನೆ ಅಂದರೆ ಕಚ್ಚಿದರೆ ಸಾವು ಗ್ಯಾರಂಟಿ ಎಂಬುದು. ಆದರೆ, ಎಲ್ಲ ಹಾವುಗಳೂ ವಿಷಪೂರಿತ ಅಲ್ಲ, ಕಚ್ಚುವುದೂ ಇಲ್ಲ. ಇವುಗಳ ಬಗ್ಗೆ ನಮಗೆ ತಿಳಿವಳಿಕೆ ಕಡಿಮೆ ಇರುತ್ತದೆ. ಇನ್ನೊಂದು ವಿಚಾರವೆಂದರೆ ಹಾವು ತಾನಾಗೇ ಬಂದು ಕಚ್ಚುವುದು ಬಹಳವೇ ಕಡಿಮೆ. ಆದರೆ, ಅವುಗಳಿಗೆ ತೊಂದರೆ ಕೊಟ್ಟರೆ ಮಾತ್ರ ಪರಿಣಾಮವನ್ನು ಎದುರಿಸಲು ಸಿದ್ಧರಾಗಿರಬೇಕು. ಭಾರತದಲ್ಲಿ ಕಾಣಸಿಗುವ ಪ್ರಮುಖ ಹಾವುಗಳ ಬಗ್ಗೆ ಇಲ್ಲಿದೆ ಸಣ್ಣ ಝಲಕ್‌.

ಇದನ್ನೂ ಓದಿ| Snakes in Bangalore | ಕಬ್ಬನ್‌ ಪಾರ್ಕ್‌ನಲ್ಲಿ ನಾಗರಹಾವು ಸೆರೆ

Continue Reading

ನಿಮಗಿದು ಗೊತ್ತೇ?

ಮೊಸಳೆ ಬಾಯಿ ತೆರೆದರೆ ಭಯಂಕರ, ಅಗಿಯೋಕೆ ಮಾತ್ರ ಬರಲ್ಲ!

ಮೊಸಳೆ ಬಾಯಿ ತೆರೆದರೆ ನೋಡಲು ಭಯಂಕರವಾಗಿ ಕಾಣಿಸುತ್ತದೆ. ಆದರೆ ಅವುಗಳಿಗೆ ಅಗಿಯೋಕೆ ಬರೋಲ್ಲ. ಹಾಗಂತ ಮೊಸಳೆ ಬಾಯಿಯಲ್ಲಿ ನಿಮ್ಮ ತಲೆ ಇಟ್ಟು ಪರೀಕ್ಷಿಸಲು ಹೋಗಬೇಡಿ!

VISTARANEWS.COM


on

crocodile
Koo

ಬಾಯಿ ಬಿಟ್ಟರೆ ತಮ್ಮ ಹಲ್ಲುಗಳ ದೆಸೆಯಿಂದಲೇ ನೋಡುಗರಲ್ಲಿ ಗಾಬರಿ ಹುಟ್ಟಿಸುವ ಮೊಸಳೆಗಳಿಗೆ ಅಗಿಯುವುದಕ್ಕೆ ಬರುವುದಿಲ್ಲ ಎಂದರೆ ನಂಬುವ ಮಾತೇ? ಆದರೆ ನಂಬಲೇ ಬೇಕು! ಗರಗಸದಂತಹ ಹಲ್ಲುಗಳಿಗೆ ಖ್ಯಾತವಾಗಿರುವ ಈ ಸರೀಸೃಪಗಳ ದವಡೆಗಳು, ಮೇಲೆ-ಕೆಳಗೆ ಮಾತ್ರ ಚಲಿಸಬಲ್ಲವು. ಉಳಿದ ಪ್ರಾಣಿಗಳಂತೆ ಅಡ್ಡಡ್ಡ ಚಲನೆ ಸಾ‍ಧ್ಯವಿಲ್ಲ.

ಹಾಗಂತ ಮೊಸಳೆ ಬಾಯಿಗೆ ತಲೆ ಕೊಡೋಕೆ ಹೋಗಬೇಡಿ. ಅದು ಸಲೀಸಾಗಿ ನಿಮ್ಮನ್ನು ಅರ್ಧಕ್ಕೆ ಕತ್ತರಿಸಿಬಿಡಬಲ್ಲುದು.

ಹಾಗಿದ್ದರೆ ಮಾಂಸಾಹಾರಿ ಪ್ರಾಣಿಗಳಾದ ಮೊಸಳೆಗಳು ಹೇಗೆ ತಿಂದು ಜೀರ್ಣಿಸಿಕೊಳ್ಳುತ್ತವೆ ಎಂಬುದು ಸಹಜ ಪ್ರಶ್ನೆ. ಮೀನು, ಹಕ್ಕಿ, ಕಪ್ಪೆ, ಇಲಿಯಂಥ ಪ್ರಾಣಿಗಳು ಅವುಗಳ ನಿತ್ಯದ ಆಹಾರ. ಹಾಗೆಂದು ಕೆಲವೊಮ್ಮೆ ದೊಡ್ಡ ಪ್ರಾಣಿಗಳನ್ನು ತಿನ್ನುವುದೂ ಉಂಟು ಅಥವಾ ಅಪರೂಪಕ್ಕೊಮ್ಮೆ ತಮ್ಮದೇ ಜಾತಿಯ ಮೊಸಳೆಯನ್ನೇ ಭಕ್ಷಿಸುವುದೂ ಹೌದು. ಬೇಟೆ ಸಣ್ಣದಾಗಿದ್ದರೆ, ಅವುಗಳನ್ನು ಹಾಗೆಯೇ ಗುಳುಂ ಮಾಡುತ್ತವೆ. ದೊಡ್ಡದಾಗಿದ್ದರೆ ಸೀಳಿ ತುಂಡಾಗಿಸಿಕೊಂಡು ನುಂಗುತ್ತವೆ. ಆದರೆ ಉಳಿದ ಪ್ರಾಣಿಗಳಂತೆ ಅಗಿದು-ನುರಿದು ತಿನ್ನುವುದು ಅವಕ್ಕೆ ಅಸಾಧ್ಯ.

ತಮ್ಮ ನೈಸರ್ಗಿಕ ಆವಾಸದಲ್ಲಿರುವ ಮೊಸಳೆಗಳು ಬೇಟೆಯಾಡಿದ ನಂತರ, ಆ ಪ್ರಾಣಿಯನ್ನು ನುಂಗಲು ಸಾಧ್ಯವಿರುವ ತುಂಡುಗಳನ್ನಾಗಿ ಮಾಡಿಕೊಳ್ಳುತ್ತವೆ. ಅದೇ ಬಂಧನದಲ್ಲಿರುವ ಮೊಸಳೆಗಳಿಗೆ ಬೇಟೆಯಾಡುವ ಕಷ್ಟ ಮತ್ತು ಆನಂದ ಎರಡೂ ಇರುವುದಿಲ್ಲವಾದ್ದರಿಂದ, ತಮಗಾಗಿ ತಂದ ಮೀನು, ಇಲಿ-ಹೆಗ್ಗಣಗಳನ್ನೇ ನುಂಗಬೇಕಾಗುತ್ತದೆ. ಮೊಸಳೆಗಳಿಗೆ ಹೊಟ್ಟೆಯಿರುವುದು ಒಂದಲ್ಲ, ನಾಲ್ಕು! ಹಾಗಾಗಿ ಪ್ರಾಣಿಗಳನ್ನು ಜಗಿಯದೆ ಇಡಿಯಾಗಿ ನುಂಗಿದರೂ ಪಚನ ಮಾಡುವ ಹೆಚ್ಚಿನ ಸವಲತ್ತು ಅದಕ್ಕೆ ನಿಸರ್ಗದತ್ತವಾಗಿ ಸಿದ್ಧಿಸಿದೆ. ಅಲ್ಲದೆ, ಬೇರೆಲ್ಲ ಪ್ರಾಣಿಗಳಿಂತ ಹೆಚ್ಚಾಗಿಯೇ ಜಠರ ರಸ ಅದರ ಉದರದಲ್ಲಿ ಇರುತ್ತದಂತೆ.

ಮಿಯಾಮಿ ವಿಜ್ಞಾನ ವಸ್ತುಸಂಗ್ರಹಾಲಯದ ತಜ್ಞರ ಪ್ರಕಾರ, ಆಸ್ಟ್ರಿಚ್‌ನಂತೆಯೇ ಮೊಸಳೆಗಳೂ ಸಣ್ಣ ಕಲ್ಲುಗಳನ್ನು ನುಂಗುತ್ತವಂತೆ… ಹೊಟ್ಟೆಯಲ್ಲಿ ಅವುಗಳನ್ನು ರುಬ್ಬುವುದು ಸುಲಭ ಎಂಬ ಕಾರಣಕ್ಕೆ! ದೊಡ್ಡ ಬೇಟೆಯನ್ನೇನಾದರೂ ನುಂಗಿದರೆ, ಮುಂದಿನ ಹಲವು ದಿನಗಳ ಕಾಲ ಅವುಗಳಿಗೆ ಆಹಾರವೇ ಬೇಕಿಲ್ಲ. ಇರುವ ನಾಲ್ಕು ಜಠರದ ಪೈಕಿ ಒಂದಾದಮೇಲೊಂದರಲ್ಲಿ ಆಹಾರವನ್ನು ಜೀರ್ಣಿಸುತ್ತಾ ಕಾಲಕಳೆಯುತ್ತವೆ.

ಹೆಣ್ಣು ಮೊಸಳೆ ೧೨-೪೮ ಮೊಟ್ಟೆಗಳನ್ನು ಒಂದು ಸಲಕ್ಕೆ ಇಡುತ್ತದೆ. ಇವು ಒಡೆಯಲು ೫೫-೧೦೦ ದಿನಗಳವರೆಗೆ ಬೇಕಾಗುತ್ತದೆ. ಹುಟ್ಟಿದ ಮರಿಗಳು ೭-೧೦ ಇಂಚು ಉದ್ದವಿರುತ್ತವೆ. ಅವುಗಳ ಪ್ರಬೇಧದ ಆಧಾರದ ಮೇಲೆ, ೪-೧೫ ವರ್ಷಗಳ ಅವಧಿಯಲ್ಲಿ ಮೊಸಳೆಗಳು ಪ್ರಾಯಪ್ರಬುದ್ಧವಾಗುತ್ತವೆ. ಜೀವಿತಾವಧಿಯೂ ಪ್ರಬೇಧವನ್ನಾಧರಿಸಿ, ೪೦-೮೦ ವರ್ಷಗಳು.

ಇದನ್ನೂ ಓದಿ | ಖ್ಯಾತ ಫುಟ್‌ಬಾಲರ್‌ ಝಿಝು ಬಗ್ಗೆ ನಿಮಗಿದು ಗೊತ್ತೆ?

Continue Reading
Advertisement
maoists killed bastar
ಪ್ರಮುಖ ಸುದ್ದಿ9 mins ago

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Labour Day 2024
ಮನಿ ಗೈಡ್9 mins ago

Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

Hassan Pen Drive Case will tell Rakesh Siddaramaiah died history says HD Kumaraswamy
ಕ್ರೈಂ16 mins ago

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

IPL 2024
ಕ್ರೀಡೆ27 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಸಿನಿಮಾ30 mins ago

Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

Hassan Pen Drive Case Sexual assault case Prajwal Revanna suspended from JDS
ಕ್ರೈಂ33 mins ago

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Khalistani Separatist Gurpatwant Singh Pannun
ಪ್ರಮುಖ ಸುದ್ದಿ40 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ʼರಾʼ ಕೈವಾಡ: ವಾಷಿಂಗ್ಟನ್‌ ವರದಿಗೆ ಭಾರತ ಕಟು ಟೀಕೆ

Ayushman Bharat Diwas 2024
ಆರೋಗ್ಯ50 mins ago

Ayushman Bharat Diwas 2024: 50 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ಅಯುಷ್ಮಾನ್ ಭಾರತ್

Hassan Pen Drive Case Revanna and Siddaramaiah pact in Prajwal case Says Pralhad Joshi
ಕ್ರೈಂ1 hour ago

Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

amith shah Hassan pen drive case:
ಪ್ರಮುಖ ಸುದ್ದಿ1 hour ago

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ8 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌