Actor Vishnuvardhan | ʻಕೋಟಿಗೊಬ್ಬʼ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್ - Vistara News

ಸಿನಿಮಾ

Actor Vishnuvardhan | ʻಕೋಟಿಗೊಬ್ಬʼ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

‘ಕೋಟಿಗೊಬ್ಬ ಕ್ಯಾಲೆಂಡರ್’ (Actor Vishnuvardhan) ಡಿಸೆಂಬರ್‌ 17 ಶನಿವಾರ ಬೆಂಗಳೂರಿನ ಲಲಿತಕಲಾ ಅಕಾಡೆಮಿಯ ಆವರಣದಲ್ಲಿ ಬಿಡುಗಡೆ ಮಾಡಲಾಯಿತು. ಹನ್ನೆರಡು ಚಿತ್ರಗಳನ್ನು ಬಿಡಿಸಲಾಗಿದ್ದು, ಹನ್ನೆರಡು ಚಿತ್ರಗಳೂ ಒಂದೊಂದು ಕಾನ್ಸೆಪ್ಟ್ ಹೊಂದಿರುವುದು ವಿಶೇಷವಾಗಿತ್ತು.

VISTARANEWS.COM


on

Actor Vishnuvardhan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಡಾ.ವಿಷ್ಣು ಸೇನಾ ಸಮಿತಿಯು ಸತತ ಹತ್ತು ವರ್ಷಗಳಿಂದ ಹೊರತರುತ್ತಿರುವ ‘ಕೋಟಿಗೊಬ್ಬ ಕ್ಯಾಲೆಂಡರ್’ (Actor Vishnuvardhan) ಡಿಸೆಂಬರ್‌ 17 ಶನಿವಾರ ಬೆಂಗಳೂರಿನ ಲಲಿತಕಲಾ ಅಕಾಡೆಮಿಯ ಆವರಣದಲ್ಲಿ ಬಿಡುಗಡೆ ಮಾಡಲಾಯಿತು. ಪ್ರತಿ ವರ್ಷವೂ ವಿಭಿನ್ನ, ವಿಶೇಷ ಶೈಲಿಯಲ್ಲೇ ಮೂಡಿಬರುತ್ತಿರುವ ಈ ಕ್ಯಾಲೆಂಡರ್‌ಗೆ ದಶಕದ ಸಂಭ್ರಮವಾಗಿದ್ದರಿಂದ, ಈ ಬಾರಿ ಮತ್ತಷ್ಟು ವಿಭಿನ್ನತೆಯಿಂದ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ನಾಡಿನ ಸುಪ್ರಸಿದ್ಧ ಕಲಾವಿದರಾದ ಬಾಗೂರು ಮಾರ್ಕಂಡೇಯ ಮತ್ತು ತಂಡ ಈ ಕ್ಯಾಲೆಂಡರ್‌ಗೆ ಚಿತ್ರಬಿಡಿಸಲೆಂದೇ ಕಲಾಶಿಬಿರ ಮಾಡಿ, ಹನ್ನೆರಡು ಚಿತ್ರಗಳನ್ನು ಬಿಡಿಸಲಾಗಿದ್ದು, ಹನ್ನೆರಡು ಚಿತ್ರಗಳೂ ಒಂದೊಂದು ಕಾನ್ಸೆಪ್ಟ್ ಹೊಂದಿರುವುದು ವಿಶೇಷವಾಗಿತ್ತು.

ಕ್ಯಾಲೆಂಡರ್ ತಯಾರಿಕೆ ಮತ್ತು ವಿನ್ಯಾಸದ ಕುರಿತು ಮಾತನಾಡಿದ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ “ಕೋಟಿಗೊಬ್ಬ ಕ್ಯಾಲೆಂಡರ್ ಪ್ರಾರಂಭ ಮಾಡಿದ್ದು 2011ರಲ್ಲಿ. ಆಗ ಸಾವಿರ ಕ್ಯಾಲೆಂಡರ್ ಮುದ್ರಣ ಮಾಡಲಾಗಿತ್ತು. ಮಾರಾಟವಾಗಿದ್ದು ಕೇವಲ 200 ಮಾತ್ರ. ಆದರೆ, ಈಗ ಇಪ್ಪತ್ತೈದು ಸಾವಿರ ಕ್ಯಾಲೆಂಡರ್ ಮುದ್ರಣವಾಗುತ್ತಿವೆ. ಯಜಮಾನರ ಅಭಿಮಾನಕ್ಕಾಗಿ ಮುದ್ರಣಕ್ಕೆ ಖರ್ಚಾದ ಹಣಕ್ಕಿಂತಲೂ ಕಡಿಮೆ ದರದಲ್ಲಿ ಮನೆಮನೆಗೂ ತಲುಪಿಸಲಾಗುತ್ತಿದೆ’ ಎಂದರು.

ಇದನ್ನೂ ಓದಿ | ಡಿಸೆಂಬರ್ ಒಳಗೆ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Actor Vishnuvardhan


ಹೊಸವರ್ಷದ ಕ್ಯಾಲೆಂಡರ್‌ನಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಹೊಸ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದ್ದು ಯುವಕರ ಪ್ರತಿನಿಧಿ, ಮಾತೃಪ್ರೇಮಿ, ಸಿಂಹರೂಪಿ, ಕನ್ನಡಪರ ಹೋರಾಟಗಾರ, ದಾನವೀರ ಶೂರ, ಮಹಿಳಾಪರ, ವೃಕ್ಷಪ್ರೇಮಿ, ಸಂತ, ರೈತ, ಸಂಗೀತ ಪ್ರೇಮಿ, ದೇಶಭಕ್ತ, ವಿಷ್ಣುವರ್ಧನ್ ಹಾಗೂ ಕಟೌಟ್ ಜಾತ್ರೆಯ ಕಾನ್ಸೆಪ್ಟ್‌ಗಳನ್ನು ಇದು ಹೊಂದಿದೆ. ಮತ್ತೊಂದು ವಿಶೇಷವೆಂದರೆ ‘ಸಿಂಬಲ್ ಆಫ್ ವಿಷ್ಣು ಕುಲ’ ಎನ್ನುವ ಸ್ಲೋಗನ್ ಆಗಿಸುವ ಚಿತ್ರ ಕೂಡ ಇದೆʼʼ ಎಂದರು.

ಈ ಕ್ಯಾಲೆಂಡರ್ ಬಿಡುಗಡೆಗಾಗಿ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಬಾಲಣ್ಣ ಆಸ್ಟ್ರೇಲಿಯಾದಿಂದ ಆಗಮಿಸಿದ್ದರು. ಕ್ಯಾಲೆಂಡರ್ ಕುರಿತು ಮಾತನಾಡಿದ ಅವರು ‘ʻಕ್ಯಾಲೆಂಡರ್ ನಲ್ಲಿ ಅದ್ಭುತ ಲೋಕವೊಂದು ತೆರೆದುಕೊಂಡಿದೆ. ವಿಷ್ಣುವರ್ಧನ್ ಅವರು ಪ್ರತಿ ಪುಟಪುಟದಲ್ಲೂ ಜೀವಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್ ಅವರು ದಾದಾ ಅವರ ಕನಸುಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹೆಮ್ಮೆ ಅನಿಸುತ್ತಿದೆ’ ಅಂದರು.

ಅತಿಥಿಯಾಗಿ ಆಗಮಿಸಿದ್ದ ಮತ್ತು ಕ್ಯಾಲೆಂಡರ್‌ನಲ್ಲಿ ಕೆಲವು ಚಿತ್ರಗಳನ್ನೂ ಬಿಡಿಸಿರುವ ಸುನೀಲ್ ಮಿಶ್ರ ಮಾತನಾಡಿ ‘ʻವಿಷ್ಣುವರ್ಧನ್ ಅವರ ವಿವಿಧ ಭಂಗಿಯನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸುತ್ತಿದ್ದೆವು. ವಿಷ್ಣುವರ್ಧನ್ ಅವರನ್ನು ಈ ರೀತಿ ಕೆಲಸಗಳ ಮೂಲಕ ಜೀವಂತವಾಗಿಸುತ್ತಿರುವುದು ಖುಷಿ ತಂದಿದೆ. ಕ್ಯಾಲೆಂಡರ್‌ನಲ್ಲಿ ಕೇವಲ ಅಂಕಿಗಳು ಮಾತ್ರವಿಲ್ಲ, ಭಾವಗಳು ಅಲ್ಲಿವೆ. ಒಂದೊಂದು ಪುಟಕ್ಕೂ ಕಾನ್ಸೆಪ್ಟ್ ಮಾಡಿಯೇ ರೆಡಿ ಮಾಡಲಾಗಿದೆ. ಬಳಸಲಾದ ಬಣ್ಣ ಮತ್ತು ಭಾವಕ್ಕೂ ಒಂದೊಂದು ಅರ್ಥವಿದೆ. ಒಂದು ರೀತಿಯಲ್ಲಿ ವಿಷ್ಣುವರ್ಧನ್ ಅವರ ಜೀವನ ಜರ್ನಿಯೇ ಇದರಲ್ಲಿದೆʼʼ ಅಂದರು.

ಈ ವಿಶೇಷ ಕ್ಯಾಲಂಡರ್‌ಗಾಗಿ ಬಾಗೂರು ಮಾರ್ಕಂಡೇಯ, ಸುನಿಲ್ ಮಿಶ್ರಾ, ಕೀರ್ತಿ ವರ್ಮಾ, ಮಂಜು, ವಿನಯ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕಲಾವಿದರ ಶಿಬಿರದಲ್ಲಿ ಭಾಗಿಯಾಗಿ ಚಿತ್ರಗಳನ್ನು ಬಿಡಿಸಿದ್ದು ವಿಶೇಷ.

ಇದನ್ನೂ ಓದಿ | Actor Vishnuvardhana | ಡಾ. ವಿಷ್ಣುವರ್ಧನ್‌ ನಿವಾಸದ ಗೃಹಪ್ರವೇಶ: ಕನಸಿನ ಮನೆಗೆ ಚೆಂದದ ಹೆಸರು, ವಿಡಿಯೊ ಇಲ್ಲಿದೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

Niveditha Gowda :ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

Niveditha Gowda
Koo

ಬೆಂಗಳೂರು : ದಾಂಪತ್ಯ ಜೀವನದಿಂದ ಪ್ರತ್ಯೇಕಗೊಳ್ಳಲು ನಿರ್ಧರಿಸಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (Niveditha Gowda) ದೂರವಾಗುವ ಒಂದೊಂದು ಲಕ್ಷಣವನ್ನು ತೋರಿಸುತ್ತಿದ್ದಾರೆ. ಹಾಗೆಯ ನಿವೇದಿತಾ ಗೌಡ ಅವರು ಸಂಜೆಯ ವೇಳೆಗೆ ಚಂದನ್ ಶೆಟ್ಟಿಯನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಈ ಮೂಲಕ ಅವರು ಒಂದೊಂದಾಗಿಯೇ ತಮ್ಮ ಸಂಬಂಧವನ್ನು ಕಳಚಿಕೊಳ್ಳುತ್ತಿದ್ದಾರೆ. ಅನ್​ಫಾಲೋ ಮಾಡುವ ಜತೆಗೆ ತಆವು ಪ್ರತ್ಯೇಕಗೊಳ್ಳುತ್ತಿರುವ ಮಾಹಿತಿಯನ್ನು ಸೋಶಿಯಲ್​ ಮೀಡಿಯಾದ ಮೂಲಕ ಅಧಿಕೃತಗೊಳಿಸಿದ್ದಾರೆ.

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾಧ್ಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಪೀಠಕ್ಕೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

Continue Reading

ಪ್ರಮುಖ ಸುದ್ದಿ

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Niveditha Gowda: ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

Niveditha Gowda
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ  ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅವರಿಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಕೈಕೈ ಹಿಡಿದುಕೊಂಡು ವಾಪಸ್‌ ಹೊರಟಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ ಜನಪ್ರಿಯರಾಗಿದ್ದ ಈ ಜೋಡಿಯು ಬೇರ್ಪಡುವುದು ಅವರ ಫಾಲೋಯರ್ಸ್​ಗಳಿಗೆ ಅಚ್ಚರಿಯ ವಿಷಯ. ಹೀಗಾಗಿ ಈ ಕುರಿತು ಬಗೆಬಗೆಯ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ನಡುವೆ ಸಂಜೆಯ ವೇಳೆಗೆ ನಿವೇದಿತಾ ಅವರು ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾರ್ಧಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಪೀಠಕ್ಕೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.
ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದನ್ನೂ ಓದಿ: Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸಿನಿಮಾ

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Hamare Baarah: ಹಮಾರೆ ಬಾರಾ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

VISTARANEWS.COM


on

Hamare Baarah
Koo

ಮುಂಬೈ: ಇಸ್ಲಾಂ, ಮುಸ್ಲಿಂ ಮಹಿಳೆಯರು, ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ (Hamare Baarah) ಸಿನಿಮಾವನ್ನು ಬಿಡುಗಡೆಗೊಳಿಸಲು ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಹಮಾರೆ ದೋ ಸಿನಿಮಾವನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್‌ (Bombay High Court) ಅನುಮತಿ ನೀಡಿದ್ದು, ಅದರಂತೆ ಶುಕ್ರವಾರ (ಜೂನ್‌ 6) ಸಿನಿಮಾ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ತಿಳಿಸಿತು. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Continue Reading

ಸ್ಯಾಂಡಲ್ ವುಡ್

Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

Niveditha Gowda: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

VISTARANEWS.COM


on

Chandan Shetty divorce main Reason children
Koo

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರೂ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಖುಷಿಯಾಗಿಯೇ ವಾಪಸ್‌ ಹೊರಟ್ಟಿದ್ದಾರೆ. ಮಗು ವಿಚಾರಕ್ಕೆ ಸಂಬಂಧ ಪಟ್ಟಂತೆ ಡಿವೋರ್ಸ್‌ಗೆ ಮುಂದಾಗಿದೆ ಈ ದಂಪತಿ. ಮಗು ಈಗಲೇ ಬೇಡ ಎಂದು ನಿವೇದಿತಾ ಕೌಟುಂಬಿಕ ನ್ಯಾಯಾಲಯದ ಮಧ್ಯಸ್ಥಿಕೆ ಸಂದರ್ಭದಲ್ಲಿ ಹೇಳಿದ್ದಾರೆ.

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು.ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda : ಬೇಡ ನಾವು ಜತೆಯಾಗಿ ಇರಲ್ಲ; ಸಂಧಾನಕ್ಕೆ ಒಪ್ಪದ ಚಂದನ್​- ನಿವೇದಿತಾ

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading
Advertisement
Narendra Modi
ಸಂಪಾದಕೀಯ3 mins ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ4 mins ago

T20 World Cup : ಪಾಕಿಸ್ತಾನ ತಂಡದ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ8 mins ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ37 mins ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ41 mins ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ41 mins ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Shreyas Iyer
ಕ್ರೀಡೆ2 hours ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ2 hours ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Narendra Modi
ದೇಶ2 hours ago

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Niveditha Gowda
ಸಿನಿಮಾ2 hours ago

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌