Actor Saif Ali Khan | ಕರೀನಾ-ಸೈಫ್‌ ಅಲಿ ಖಾನ್‌ ಪುತ್ರ ತೈಮೂರ್‌ ಪ್ರೀಬರ್ತ್‌ಡೇ ಫೋಟೊ ವೈರಲ್‌! - Vistara News

ಬಾಲಿವುಡ್

Actor Saif Ali Khan | ಕರೀನಾ-ಸೈಫ್‌ ಅಲಿ ಖಾನ್‌ ಪುತ್ರ ತೈಮೂರ್‌ ಪ್ರೀಬರ್ತ್‌ಡೇ ಫೋಟೊ ವೈರಲ್‌!

ಕರೀನಾ-ಸೈಫ್‌ ಅಲಿ ಖಾನ್‌ ಪುತ್ರ ತೈಮೂರ್‌ (Actor Saif Ali Khan ) ಪ್ರೀ ಬರ್ತ್‌ಡೇ ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Actor Saif Ali Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ (Actor Saif Ali Khan) ಅವರ ಮಗ ತೈಮೂರ್‌ ಪ್ರೀ ಬರ್ತ್‌ಡೇ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಪಾಪರಾಜಿಗಳ ನೆಚ್ಚಿನ ಸ್ಟಾರ್ ಕಿಡ್ ಅಂದರೆ ತೈಮೂರ್‌ ಆಗಿದ್ದಾನೆ. ತೈಮೂರ್ ಡಿಸೆಂಬರ್ 20, 2022ರಂದು 6 ನೇ ವರ್ಷಕ್ಕೆ ಕಾಲಿಡಲಿದ್ದಾನೆ. ಜನ್ಮದಿನದ ಪೂರ್ವ ಸಮಾರಂಭವನ್ನು ಕರೀನಾ ಕಪೂರ್ ದಂಪತಿ ಅದ್ಧೂರಿಯಾಗಿ ಆಯೋಜಿಸಿದ್ದಾರೆ.

ಹೇಗಿತ್ತು ಜನುಮದಿನದ ಸಂಭ್ರಮ?
ತೈಮೂರ್‌ನ ಜನ್ಮದಿನ ಪೂರ್ವ ಸಂಭ್ರಮವು ನಗು ಮತ್ತು ಸಂತೋಷದಿಂದ ತುಂಬಿತ್ತು. ತೈಮೂರ್‌ ತಂದೆ – ತಾಯಿ ಹಾಗೂ ಸಹೋದರ ಜೆಹ್ ಅಲಿ ಖಾನ್ ಅವರೊಂದಿಗೆ ಆತ ಹುಟ್ಟುಹಬ್ಬದ ಕೇಕ್ ಕತ್ತರಿಸಿದ್ದಾನೆ. ಪಾರ್ಟಿಯ ಥೀಮ್ ಸ್ಟಾರ್ ವಾರ್ ಆಗಿದ್ದರಿಂದ ಎಲ್ಲರೂ ಅದಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದರು. ಕರೀನಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಲವಾರು ಫೋಟೊಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

Actor Saif Ali Khan
Actor Saif Ali Khan

ಕರೀನಾ ಕಪೂರ್‌ ಕೊನೆಯದಾಗಿ ಅದ್ವೈತ್ ಚಂದನ್ ಅವರ ಚಿತ್ರ ಲಾಲ್ ಸಿಂಗ್ ಛಡ್ಡಾದಲ್ಲಿ ಕಾಣಿಸಿಕೊಂಡಿದ್ದರು. 2009ರ ಚಲನಚಿತ್ರ 3 ಈಡಿಯಟ್ಸ್ ನಂತರ ಆಮೀರ್ ಖಾನ್ ಅವರೊಂದಿಗೆ ನಟಿ ಪರದೆಯನ್ನು ಹಂಚಿಕೊಂಡರು. ಮುಂದೆ, ಅವರು ಹನ್ಸಲ್ ಮೆಹ್ತಾ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಶೂಟಿಂಗ್‌ ಲಂಡನ್‌ನಲ್ಲಿ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Aishwarya Rai Bachchan: ನಟಿ ಐಶ್ವರ್ಯ ರೈ ಧರಿಸಿರುವ ವಿ ಆಕಾರದ ಉಂಗುರವನ್ನು “ವಂಕಿʼ ಉಂಗುರ ಅಥವಾ “ವಡುಂಗಿಲಾ” ಎಂದು ಕರೆಯಲಾಗುತ್ತದೆ. ಈ ಉಂಗುರವನ್ನು ಮದುವೆಯಾದ ಮಹಿಳೆಯರು ಧರಿಸುವ ಸಂಪ್ರದಾಯವಿದೆ. ವಿವಾಹಿತ ಮಹಿಳೆಯ ಜೀವನದಲ್ಲಿ ಈ ಉಂಗುರಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ವಂಕಿ ಉಂಗುರವನ್ನು ವಧು ತಮ್ಮ ಮದುವೆಯ ದಿನದಂದು ಧರಿಸುತ್ತಾರೆ. ಈ ಉಂಗುರವನ್ನು ಆಕೆಯ ಕುಟುಂಬದ ತಂದೆಯ ಕಡೆಯಿಂದ ಅಥವಾ ಮಹಿಳೆಯ ಸಂಬಂಧಿಕರು ನೀಡುತ್ತಾರೆ.

VISTARANEWS.COM


on

Aishwarya Rai Bachchan
Koo

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Actress Aishwarya Rai Bachchan) ತಮ್ಮ ಅಭಿನಯದ ಮೂಲಕ ಮಾತ್ರವಲ್ಲದೇ ತಮ್ಮ ವಿಶೇಷ ಫ್ಯಾಷನ್ ಶೈಲಿ ಮತ್ತು ಸೌಂದರ್ಯದಿಂದ ಕೂಡ ಅನೇಕ ಅಭಿಮಾನಿಗಳನ್ನು ಆಕರ್ಷಿಸಿದ್ದಾರೆ. ನಿಮಗೂ ಐಶ್ವರ್ಯಾ ಅವರ ಫ್ಯಾಷನ್ ಶೈಲಿಯನ್ನು ಅನುಸರಿಸುವ ಆಸಕ್ತಿ ಇದ್ದರೆ, ನಟಿ ತಮ್ಮ ಬಲಗೈಗೆ ಧರಿಸಿದ ವಿ-ಆಕಾರದ ವಜ್ರದ ಉಂಗುರದ ಬಗ್ಗೆ ತಿಳಿದುಕೊಳ್ಳಿ! ನಟಿ ಈ ಉಂಗುರವನ್ನು ಧರಿಸದೆ ಎಂದಿಗೂ ಹೊರಗೆ ಹೋಗುವುದಿಲ್ಲ. ಹಾಗಾದ್ರೆ ನಟಿ ಧರಿಸಿದ ಈ ಉಂಗುರದ ವಿಶೇಷತೆ ಏನು ಎಂಬುದನ್ನು ತಿಳಿಯಿರಿ. ನಟಿ ಐಶ್ವರ್ಯ ರೈ ಧರಿಸಿರುವ ವಿ ಆಕಾರದ ಉಂಗುರವನ್ನು “ವಂಕಿ” ಉಂಗುರ ಅಥವಾ “ವಡುಂಗಿಲಾ” ಎಂದು ಕರೆಯಲಾಗುತ್ತದೆ. ಈ ಉಂಗುರವನ್ನು ಮದುವೆಯಾದ ಮಹಿಳೆಯರು ಧರಿಸುವ ಸಂಪ್ರದಾಯವಿದೆ. ಹಾಗಾಗಿ ವಿವಾಹಿತ ಮಹಿಳೆಯ ಜೀವನದಲ್ಲಿ ಈ ಉಂಗುರಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ವಂಕಿ ಉಂಗುರವನ್ನು ವಧು ತಮ್ಮ ಮದುವೆಯ ದಿನದಂದು ಧರಿಸುತ್ತಾರೆ ಮತ್ತು ಈ ಉಂಗುರವನ್ನು ಆಕೆಯ ಕುಟುಂಬದ ತಂದೆಯ ಕಡೆಯಿಂದ ಅಥವಾ ಮಹಿಳೆಯ ಸಂಬಂಧಿಕರು ನೀಡುತ್ತಾರೆ. ಅವರ ಸಂಪ್ರದಾಯದಲ್ಲಿ ಮದುವೆಯ ನಂತರ ಮಂಗಳಸೂತ್ರವನ್ನು ಧರಿಸುವ ಹಾಗೇ ಈ ಉಂಗುರವನ್ನು ಧರಿಸಬೇಕಾಗುತ್ತದೆ.

Aishwarya Rai Bachchan V shape dimond ring

ಬಂಟ ಸಮುದಾಯದ ಸಂಪ್ರದಾಯ

ಈ ಉಂಗುರವು ಹೆಚ್ಚಾಗಿ ಮಂಗಳೂರಿನ ಬಂಟ ಸಮುದಾಯದವರು ಧರಿಸುತ್ತಾರೆ. ಈ ಉಂಗುರವು ವಿವಾಹಿತ ಮಹಿಳೆಯರು ಮತ್ತು ನವ ವಧುವನ್ನು ಕೆಟ್ಟ ಸಂದರ್ಭಗಳಿಂದ ರಕ್ಷಿಸುತ್ತದೆ ಎಂಬುದು ಬಂಟ ಸಮುದಾಯದ ನಂಬಿಕೆಯಾಗಿದೆ. ಬಂಟ ಸಮುದಾಯಕ್ಕೆ ಸೇರಿದ ನಟಿ ಐಶ್ವರ್ಯ ರೈ 2007ರಲ್ಲಿ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾದ ನಂತರ ತಮ್ಮ ಸಮುದಾಯದ ಸಂಪ್ರದಾಯದಂತೆ ಯಾವಾಗಲೂ ತನ್ನ ಕೈಯಲ್ಲಿ ವಂಕಿ ಉಂಗುರವನ್ನು ಧರಿಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಉಂಗುರವನ್ನು ಬಂಟ ಸಮುದಾಯ ಮಾತ್ರವಲ್ಲದೇ ದಕ್ಷಿಣ ಭಾರತದ ಸಮುದಾಯದ ಅನೇಕ ವಿವಾಹಿತ ಮಹಿಳೆಯರು ಧರಿಸುತ್ತಾರೆ.

ಇದನ್ನೂ ಓದಿ: Bollywood Cinema: ಜೀವನ ಪ್ರೀತಿಯ ತೀವ್ರತೆ ಸಾರಿದ 5 ಬಾಲಿವುಡ್ ಚಿತ್ರಗಳಿವು

ಹಲವಾರು ವಿನ್ಯಾಸಗಳಲ್ಲಿ ಲಭ್ಯ:
ಈ ವಂಕಿ ಉಂಗುರವು ಹಲವಾರು ವಿನ್ಯಾಸಗಳಲ್ಲಿ ಲಭ್ಯವಿದೆ, ಉದಾಹರಣೆಗೆ ವಿ-ಆಕಾರದ ತೆಳುವಾದ ಚಿನ್ನದ ಬ್ಯಾಂಡ್ ಅಥವಾ ನಟಿ ಐಶ್ವರ್ಯ ರೈ ಧರಿಸಿದಂತೆ ವಜ್ರದ ಬ್ಯಾಂಡ್ ನಲ್ಲಿ ಸಿಗುತ್ತದೆ. ಈ ಉಂಗುರವನ್ನು ಮಂಗಳೂರಿನ ವಿವಾಹಿತ ಮಹಿಳೆಯರು ತಮ್ಮ ಬಲಗೈಯ ಉಂಗುರ ಬೆರಳಿಗೆ ಧರಿಸುತ್ತಾರೆ. ಇದರಿಂದ ಅವರು ವಿವಾಹಿತರು ಎಂದು ಹೇಳುತ್ತಾರೆ. ಅಲ್ಲದೇ ಈ ಉಂಗುರವು ಮಹಿಳೆಯರಿಗೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ, ಉದಾಹರಣೆಗೆ ದುಷ್ಟ ಶಕ್ತಿಗಳಿಂದ ಅವರನ್ನು ರಕ್ಷಿಸುತ್ತದೆ ಮತ್ತು ಅವರಿಗೆ ಶಕ್ತಿಯನ್ನು ನೀಡುತ್ತದೆ ಮತ್ತು ಅವರ ವೈವಾಹಿಕ ಜೀವನ ಸಂತೋಷ ಮತ್ತು ಪ್ರೀತಿಯಿಂದ ತುಂಬಿರುವಂತೆ ಮಾಡುತ್ತದೆ ಎಂಬ ನಂಬಿಕೆ ಇದೆ. ಐಶ್ವರ್ಯ ರೈ ಮತ್ತು ಅಭಿಷೇಕ್‌ ಬಚ್ಚನ್‌ ವಿವಾಹ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ ಈ ಉಂಗುರ ವಿಶೇಷವಾಗಿ ಗಮನ ಸೆಳೆದಿದೆ.

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ಬಾಲಿವುಡ್

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Malaika Arora: ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ.

VISTARANEWS.COM


on

Malaika Arora breakup rumours rushes past Arjun Kapoor
Koo

ಬೆಂಗಳೂರು: ಬ್ರೇಕಪ್ ವದಂತಿಗಳ ಬಳಿಕ, ನಟ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ (Malaika Arora) ಶುಕ್ರವಾರ ದೆಹಲಿಯಲ್ಲಿ ನಡೆದ ಇಂಡಿಯಾ ಕೌಚರ್ ವೀಕ್‌ನಲ್ಲಿ ಡಿಸೈನರ್ ಕುನಾಲ್ ರಾವಲ್ ಅವರ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ.

ವೀಡಿಯೊವೊಂದರಲ್ಲಿ, ಅರ್ಜುನ್ ಕಪೂರ್ ಮತ್ತು ಮಲೈಕಾ ಮುಂದಿನ ಸಾಲಿನಲ್ಲಿ ಕುಳಿತಿದ್ದಾರೆ. ಪರಸ್ಪರ ಅಕ್ಕ ಪಕ್ಕದಲ್ಲಿ ಕುಳಿತುಕೊಳ್ಳಲಿಲ್ಲ. ಮತ್ತೊಂದು ಕ್ಲಿಪ್‌ನಲ್ಲಿ, ಅರ್ಜುನ್ ಕಪೂರ್ ಎದುರಲ್ಲೇ ಮಲೈಕಾ ಹಾದು ಹೋಗಿದ್ದಾರೆ. ಈ ವೇಳೆ ಅಭಿಮಾನಿಗಳು ಮುತ್ತಿಕೊಳ್ಳದಂತೆ ತಡೆದಿದ್ದಾರೆ ಅರ್ಜುನ್ ಕಪೂರ್. ಆದರೆ, ಇದನ್ನು ಮಲೈಕಾ ಅರೋರಾ ಗಮನಿಸಿಯೂ ಇಲ್ಲ. ಅವರು ನೇರವಾಗಿ ಹೊರಟು ಹೋಗಿದ್ದಾರೆ. ಈ ಮೂಲಕ ಬ್ರೇಕಪ್ ವಿಚಾರ ಖಚಿತವಾಗಿದೆ. ಸ್ವತಃ ಮಲೈಕಾ ಅವರೇ ಬ್ರೇಕಪ್ ಮಾಡಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಅರ್ಜುನ್ ಕಪೂರ್​ಗೆ ಮಲೈಕಾ ಮೇಲೆ ಇನ್ನೂ ಕಾಳಜಿ ಇದೆ. ಆದರೆ, ಈ ಕಾಳಜಿ ಮಲೈಕಾಗೆ ಇಲ್ಲ.

ಈವೆಂಟ್‌ಗಾಗಿ, ಮಲೈಕಾ ವೈಟ್ ಬ್ಲೇಜರ್ ಕೋ-ಆರ್ಡರ್ ಸೆಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ಅರ್ಜುನ್ ಕಪ್ಪು ಶೆರ್ವಾನಿ ಮತ್ತು ಧೋತಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

11 ವರ್ಷಗಳ ಅಂತರ

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

Continue Reading

ಸಿನಿಮಾ

Salman Khan: ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿಯಲ್ಲಿ ಸಖತ್‌ ಎಂಜಾಯ್‌ ಮಾಡಿದ ಸಲ್ಮಾನ್ ಖಾನ್!

Salman Khan: ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ಅದ್ಧೂರಿ ವಿವಾಹದಲ್ಲಿ ಸಲ್ಮಾನ್‌ ಭಾಗಿಯಾಗಿದ್ದರು. ಹಾಗೇ ಶನಿವಾರ ಆಯೋಜಿಸಲಾದ ಸ್ಟಾರ್-ಸ್ಟಡ್ಡ್ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಸಲ್ಮಾನ್‌ ಇದ್ದರು. . ಸಲ್ಲು ಜೊತೆ ಮಾಜಿ ಗೆಳತಿ ಯುಲಿಯಾ ವಂಟೂರ್ ( Iulia Vantur) ಅವರು ಈ ಕಾರ್ಯಕ್ರಮದಲ್ಲಿ ಮಿಂಚಿದ್ದರು.

VISTARANEWS.COM


on

Salman Khan New Pics From Iulia Vantur Birthday Party
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರು ಯೂಲಿಯಾ ವಂಟೂರ್ (Iulia Vantur) ಅವರ ಬರ್ತ್​ಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಗಾಯಕರಾದ ಹಿಮೇಶ್ ರೇಶಮಿಯಾ ಮತ್ತು ಮಿಕಾ ಸಿಂಗ್ ಹಂಚಿಕೊಂಡ ಪಾರ್ಟಿಯ ಫೋಟೊಗಳಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಹಿಮೇಶ್ ರೇಶಮಿಯಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಪಾರ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು “ಭಾಯಿ ಮತ್ತು ಕುಟುಂಬ, ಸ್ನೇಹಿತರೊಂದಿಗೆ ಐತಿಹಾಸಿಕ ಸ್ಮರಣೀಯ ಸುಂದರ ಸಂಜೆ. ಬರ್ತ್‌ಡೇ ಹುಡುಗಿ ಯುಲಿಯಾ ವಂಟೂರ್‌ಗೆ ಶುಭ ಹಾರೈಕೆಗಳುʼʼಎಂದು ಶೀರ್ಷಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ಈಗ ಅವರು ಯೂಲಿಯಾ ಜೊತೆ ಸುತ್ತಾಟ ನಡೆಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.ಯೂಲಿಯಾ ವಂಟೂರ್ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಒಳ್ಳೆಯ ಗೆಟ್​ ಟುಗೇದರ್ ಆಯೋಜಿಸಲಾಗಿತ್ತು’ ಎಂದು ಮಿಕಾ ಸಿಂಗ್ ಬರೆದುಕೊಂಡಿದ್ದಾರೆ. ಈ ಬರ್ತ್​ಡೇ ಸೆಲೆಬ್ರೇಷನ್​ನಿಂದ ಸಲ್ಲು ಹಾಗೂ ಯೂಲಿಯಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವಿಚಾರ ಅಧಿಕೃತ ಆದಂತೆ ಆಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

ಅಂಬಾನಿ ಮದುವೆಯಲ್ಲಿಯೂ ಒಟ್ಟಿಗೆ ಕಂಡಿತ್ತು ಜೋಡಿ!

ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ಅದ್ಧೂರಿ ವಿವಾಹದಲ್ಲಿ ಸಲ್ಮಾನ್‌ ಭಾಗಿಯಾಗಿದ್ದರು. ಹಾಗೇ ಶನಿವಾರ ಆಯೋಜಿಸಲಾದ ಸ್ಟಾರ್-ಸ್ಟಡ್ಡ್ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಸಲ್ಮಾನ್‌ ಇದ್ದರು. . ಸಲ್ಲು ಜೊತೆ ಮಾಜಿ ಗೆಳತಿ ಯುಲಿಯಾ ವಂಟೂರ್ ( Iulia Vantur) ಅವರು ಈ ಕಾರ್ಯಕ್ರಮದಲ್ಲಿ ಮಿಂಚಿದ್ದರು. ಸಲ್ಮಾನ್ ಮತ್ತು ಯೂಲಿಯಾ ಇಬ್ಬರೂ ಭಾಗಿಯಾಗಿದ್ದು, ಇನ್ನೂ ರಿಲೇಶನ್​ಶಿಪ್​ನಲ್ಲಿದ್ದಾರಾ ಎನ್ನುವ ಪ್ರಶ್ನೆ ನೆಟ್ಟಿಗರಿಗೆ ಕಾಡಿತ್ತು. ಇತ್ತೀಚೆಗೆ, ಅನಂತ್ ಮತ್ತು ರಾಧಿಕಾ ಅವರ ಸಂಗೀತ ಕಾರ್ಯಕ್ರಮದಲ್ಲಿ “ಓ ಓ ಜಾನೆ ಜಾನಾ” ಹಾಡಿಗೆ ಒಟ್ಟಿಗೆ ನೃತ್ಯ ಮಾಡಿರುವ ವಿಡಿಯೊ ಕೂಡ ವೈರಲ್‌ ಆಗಿತ್ತು.

ಸಿನಿಮಾ ವಿಚಾರಕ್ಕೆ ಬಂದರೆ ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Mumbai Girl
ದೇಶ7 mins ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ15 mins ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ35 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ45 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ56 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ1 hour ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್2 hours ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ3 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ3 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌