Supermodel Robot | ದುಬೈ ಹೋಟೆಲ್‌ನಲ್ಲಿ ಇನ್ನು ಸೂಪರ್‌ಮಾಡೆಲ್‌ ರೋಬೊಗಳಿಂದ ಸರ್ವ್, ಇದು ಜಗತ್ತಲ್ಲೇ ಮೊದಲು - Vistara News

ಪ್ರಮುಖ ಸುದ್ದಿ

Supermodel Robot | ದುಬೈ ಹೋಟೆಲ್‌ನಲ್ಲಿ ಇನ್ನು ಸೂಪರ್‌ಮಾಡೆಲ್‌ ರೋಬೊಗಳಿಂದ ಸರ್ವ್, ಇದು ಜಗತ್ತಲ್ಲೇ ಮೊದಲು

2023ರಿಂದ ದುಬೈ ಹೋಟೆಲ್‌ನಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಸೂಪರ್‌ಮಾಡೆಲ್‌ ರೋಬೊಗಳ (Supermodel Robot) ಯುಗ ಆರಂಭವಾಗಲಿದೆ.

VISTARANEWS.COM


on

Supermodel Robo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಜಗತ್ತು ತಂತ್ರಜ್ಞಾನಕ್ಕೆ ಒಗ್ಗಿಕೊಂಡಿದೆ. ಮನುಷ್ಯನ ನಿರೀಕ್ಷೆ, ಆಸೆ, ಮಹತ್ವಾಕಾಂಕ್ಷೆಯನ್ನೂ ಮೀರಿ ತಂತ್ರಜ್ಞಾನ ಬೆಳೆದುನಿಂತಿದೆ. ಇಂತಹ ತಂತ್ರಜ್ಞಾನ ಉಚ್ಛ್ರಾಯ ತಲುಪಿರುವುದಕ್ಕೆ ನಿದರ್ಶನ ಎಂಬಂತೆ ದುಬೈನಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ಸೂಪರ್‌ಮಾಡೆಲ್‌ ರೋಬೊಗಳೇ (Supermodel Robot) ಹೋಟೆಲ್‌ಗಳಲ್ಲಿ ಸರ್ವ್‌ ಮಾಡಲಿದ್ದಾರೆ.‌

ಹೌದು, ದುಬೈನ ದೊನ್ನ ಸೈಬರ್‌ ಕೆಫೆ ಎಂಬ ಕೆಫೆಯಲ್ಲಿ 2023ರಿಂದ ಸಂಪೂರ್ಣವಾಗಿ ಸೂಪರ್‌ಮಾಡೆಲ್‌ ರೋಬೊಗಳೇ ಜನರಿಗೆ ಸೇವೆ ಒದಗಿಸಲಿವೆ. ಸರ್ವ್ ಮಾಡಲು ಒಬ್ಬರೇ ಒಬ್ಬರು ವ್ಯಕ್ತಿಗಳು ಹೋಟೆಲ್‌ನಲ್ಲಿ ಇರುವುದಿಲ್ಲ. ಲಲನೆಯರಂತೆ ಕಾಣುವ, ನೋಡಲು ಎರಡು ಕಣ್ಣು ಕೂಡ ಸಾಲದಂತೆ ಇರುವ ಸೂಪರ್‌ ಮಾಡೆಲ್‌ ರೋಬೊಗಳೇ ಸರ್ವ್‌ ಮಾಡಲಿವೆ ಎಂದು ತಿಳಿದುಬಂದಿದೆ.

ಹೇಗೆ ಕಾರ್ಯನಿರ್ವಹಣೆ?
ಈ ಸೂಪರ್‌ಮಾಡೆಲ್‌ ರೋಬೊಗಳು ಗ್ರಾಹಕರಿಗೆ ಏನು ಬೇಕೋ ಅದನ್ನು ಪೂರೈಸುವ ಜತೆಗೆ ಮನುಷ್ಯರ ಭಾವನೆಗಳಿಗೆ ಸ್ಪಂದಿಸುತ್ತವೆ. ಬೇಕು ಎಂದರೆ ಕತೆಗಳನ್ನು ಕೂಡ ಹೇಲುತ್ತವೆ. ನಿಜವಾಗಿಯೂ ಮನುಷ್ಯರೇ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬಂತೆ ವರ್ತಿಸುತ್ತವೆ. ಅಂದಹಾಗೆ, ದಿನದ 24 ಗಂಟೆಯೂ ಕೆಫೆ ತೆರೆದಿರಲಿದ್ದು, ಇಲ್ಲಿ ಲಲನೆಯರಂತೆ ಕಾಣುವ ರೋಬೊಗಳ ಕೈಯಿಂದ ತಿಂಡಿ ತಿನ್ನಲು, ಕಾಫಿ ಕುಡಿಯಲು ತುಂಬ ಜನ ಕಾತುರದಿಂದ ಕಾಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Janhvi Kapoor | ಮತ್ತೆ ಒಟ್ಟಿಗೆ ಕಾಣಿಸಿಕೊಂಡ ಜಾಹ್ನವಿ ಕಪೂರ್-ಶಿಖರ್: ವೈರಲ್‌ ಆಯ್ತು ಫೋಟೊ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

Mobile Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗುತ್ತಿದೆ. ಏರ್‌ಟೆಲ್‌, ವೋಡಾಫೋನ್-ಐಡಿಯಾ ಸಂಸ್ಥೆಗಳು ಕೂಡ ಬೆಲೆಯೇರಿಕೆ ಮಾಡಿವೆ.

VISTARANEWS.COM


on

Mobile Tariffs
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ. ರಿಲಯನ್ಸ್‌ ಜಿಯೋ (Reliance Jio) ಹಾಗೂ ಏರ್‌ಟೆಲ್‌ (Airtel) ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿದ ಬೆನ್ನಲ್ಲೇ ವೋಡಾಫೋನ್‌ ಐಡಿಯಾ (Vodafone Idea) ಸಂಸ್ಥೆಯೂ ಬೆಲೆಯೇರಿಕೆ ಮಾಡಿದೆ. ಹಾಗಾಗಿ, ಕೇಂದ್ರ ಸರ್ಕಾರವು (Central Government) ಮಧ್ಯಪ್ರವೇಶಿಸಿ, ರಿಚಾರ್ಜ್‌ ಶುಲ್ಕವನ್ನು ಕಡಿಮೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮಹತ್ವದ ಸ್ಪಷ್ಟನೆ ನೀಡಿದೆ. ಯಾವುದೇ ಕಾರಣಕ್ಕೂ ಖಾಸಗಿ ಟೆಲಿಕಾಂ ಕಂಪನಿಗಳ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.

“ಖಾಸಗಿ ಕಂಪನಿಗಳ ಬೆಲೆಯೇರಿಕೆ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ನಿಯಮಗಳ ಅನ್ವಯವೇ ಖಾಸಗಿ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಹಾಗಾಗಿ, ಇಂತಹ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ” ಎಂದು ಕೇಂದ್ರ ಸರ್ಕಾರವು ಪ್ರಕಟಣೆ ತಿಳಿಸಿದೆ. ಮೂರೂ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಮಾಡಿದ ಕಾರಣ ಸರ್ಕಾರವು ಬೆಲೆ ಇಳಿಸಬೇಕು ಎಂಬುದಾಗಿ ಜನ ಆಗ್ರಹಿಸಿದ್ದರು.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಏರ್‌ಟೆಲ್‌ ಮೊಬೈಲ್‌ ರಿಚಾರ್ಜ್‌ ದರಪಟ್ಟಿ ಇಲ್ಲಿದೆ

ಡೇಟಾ
ಅವಧಿ ಹಿಂದಿನ ದರ ಹೊಸ ದರ
ವಾಯಿಸ್‌ ಕಾಲ್‌ ಪ್ಲಾನ್‌
2 GB
28179199
8 GB 84455509
ಡೈಲಿ ಡೇಟಾ ಪ್ಲಾನ್‌
1.5 ಜಿಬಿ28299349
2.5 ಜಿಬಿ, 28, 359, 409
3 ಜಿಬಿ, 28, 399, 449
Add- On ಪ್ಲಾನ್‌
111922
212933

ವೋಡಾಫೋನ್-ಐಡಿಯಾ ಬೆಲೆ ಇಷ್ಟಿದೆ

ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ವಾರ್ಷಿಕ ಯೋಜನೆಯ ಮೊತ್ತವನ್ನು 2,899 ರೂ.ನಿಂದ 3,499 ರೂ.ಗೆ ಏರಿಕೆ ಮಾಡಿದೆ. ಆದರೆ, 365 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು ಹಾಗೂ 24 ಜಿಬಿ (ಪ್ರತಿದಿನ ಅಲ್ಲ) ಇಂಟರ್‌ನೆಟ್‌ ಪ್ಲಾನ್‌ ಬೆಲೆಯೇರಿಕೆ ಮಾಡಿಲ್ಲ. ಅದು ಮೊದಲಿನಂತೆ ಶೇ.1,799 ರೂ. ಇರಲಿದೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Continue Reading

ಪ್ರಮುಖ ಸುದ್ದಿ

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Rahul Dravid : ದ್ರಾವಿಡ್​ 2021 ರಲ್ಲಿ ಭಾರತ ರಾಷ್ಟ್ರೀಯ ತಂಡಕ್ಕೆ ಕೋಚ್​ ಆಗಿ ಬಂದರು. ಅಂದಿನಿಂದ, ಭಾರತವು 2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್​ ಫೈನಲ್​​ನಲ್ಲಿ ಸೋತಿತು. ಕೊನೆಯದಾಗಿ ಅವರ ಕೋಚಿಂಗ್ ಅಡಿಯಲ್ಲಿ, ಮೆನ್ ಇನ್ ಬ್ಲೂ 2024 ರಲ್ಲಿ ಟಿ 20 ವಿಶ್ವಕಪ್ ಅನ್ನು ಎತ್ತಿಹಿಡಿದಿದ್ದರಿಂದ ಅವರು ಖುಷಿಯಿಂದ ನಿರ್ಗಮಿಸಿದರು.

VISTARANEWS.COM


on

Rahul Dravid
Koo

ಬೆಂಗಳೂರು: ರಾಹುಲ್ ದ್ರಾವಿಡ್ (Rahul Dravid) ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಸೋಲು ಹಾಗೂ ಅವಮಾನಗಳನ್ನು ಎದುರಿಸಿದ್ದಾರೆ. ಒಬ್ಬ ಆಟಗಾರನಾಗಿ, ಬಳಿಕ ಎನ್​​ಸಿಎ ಮುಖ್ಯಸ್ಥ ಹಾಗೂ ಕೋಚ್​ ಆಗಿ 51 ವರ್ಷದ ಕ್ರಿಕೆಟಿಗ ಹಲವು ಬಾರಿ ನೋವುಗಳನ್ನು ಉಂಡಿದ್ದಾರೆ. 2003 ರ ಏಕದಿನ ವಿಶ್ವಕಪ್​​ನ ಫೈನಲ್​​ನಲ್ಲಿ ಸೋತರು ಮತ್ತು ನಂತರ 2007 ರ ಆವೃತ್ತಿಯಲ್ಲಿ ಗುಂಪು ಹಂತದ ನಿರ್ಗಮನದ ದುಃಖ ಅನುಭವಿಸಿದರು. ಇದರಲ್ಲಿ ಅವರು ತಂಡವನ್ನು ಮುನ್ನಡೆಸಿದರು. 2011 ರ ಏಕದಿನ ವಿಶ್ವಕಪ್ನಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಲಿಲ್ಲ ಮತ್ತು ಆಟಗಾರ ಮತ್ತು ತರಬೇತುದಾರರಾಗಿ ಐಪಿಎಲ್ ಗೆಲ್ಲಲು ವಿಫಲರಾದರು.

ದ್ರಾವಿಡ್​ 2021 ರಲ್ಲಿ ಭಾರತ ರಾಷ್ಟ್ರೀಯ ತಂಡಕ್ಕೆ ಕೋಚ್​ ಆಗಿ ಬಂದರು. ಅಂದಿನಿಂದ, ಭಾರತವು 2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್​ ಫೈನಲ್​​ನಲ್ಲಿ ಸೋತಿತು. ಕೊನೆಯದಾಗಿ ಅವರ ಕೋಚಿಂಗ್ ಅಡಿಯಲ್ಲಿ, ಮೆನ್ ಇನ್ ಬ್ಲೂ 2024 ರಲ್ಲಿ ಟಿ 20 ವಿಶ್ವಕಪ್ ಅನ್ನು ಎತ್ತಿಹಿಡಿದಿದ್ದರಿಂದ ಅವರು ಖುಷಿಯಿಂದ ನಿರ್ಗಮಿಸಿದರು.

ಒಬ್ಬ ಆಟಗಾರನಾಗಿ ದ್ರಾವಿಡ್ ಸಾಕಷ್ಟು ರನ್ ಗಳಿಸಿದ್ದಾರೆ. ಭಾರತ ತಂಡವನ್ನು ಪ್ರತಿ ಬಾರಿಯೂ ದೊಡ್ಡ ಎತ್ತರಕ್ಕೆ ಕೊಂಡೊಯ್ದರು. ದ್ರಾವಿಡ್ ಅವರ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಶೇಷವೆಂದರೆ, ಇದು ಭಾರತ ಗಣರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ದ್ರಾವಿಡ್ ಈ ಗೌರವಕ್ಕೆ ಪಾತ್ರರಾಗುವಷ್ಟು ಸಾಧನೆ ಮಾಡಿದ್ದಾರೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರವು ಅವರಿಗೆ ಭಾರತ ರತ್ನವನ್ನು ನೀಡಿ ಗೌರವಿಸುವುದು ಸೂಕ್ತವಾಗಿದೆ, ಏಕೆಂದರೆ ಅವರು ನಿಜವಾಗಿಯೂ ಅದಕ್ಕೆ ಅರ್ಹರಾಗಿದ್ದಾರೆ. ವೆಸ್ಟ್ ಇಂಡೀಸ್​​ನಲ್ಲಿ ವಿಶ್ವ ಕಪ್​ ಗೆಲ್ಲುವುದರ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದಾರೆ. ಅವರು ವಿದೇಶಿ ನೆಲದಲ್ಲಿ ಅತ್ಯುತ್ತಮ ಬ್ಯಾಟರ್​ ಆಗಿದ್ದರು. ಇಂಗ್ಲೆಂಡ್​​ನಲ್ಲಿ ಗೆಲುವು ಅಲ್ಲಿ ಟೆಸ್ಟ್ ಪಂದ್ಯ ಸರಣಿಯನ್ನು ಗೆದ್ದ ಮೂವರು ಭಾರತೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಮತ್ತು ನಂತರ ಹಿರಿಯ ತಂಡದ ತರಬೇತುದಾರರಾಗಿ ಅದ್ಭುತ ಪ್ರತಿಭೆಗಳನ್ನು ಬೆಳೆಸಿದ್ದರು ಎಂದು ಗವಾಸ್ಕರ್​ ಹೇಳಿದ್ದಾರೆ.

ಇದನ್ನೂ ಓದಿ: Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್. ದ್ರಾವಿಡ್ ಅವರ ಸಾಧನೆಗಳು ಎಲ್ಲಾ ಪಕ್ಷಗಳು, ಜಾತಿ, ಮತ ಮತ್ತು ಸಮುದಾಯಗಳನ್ನು ಮೀರಿವೆ. ಇಡೀ ದೇಶಕ್ಕೆ ಹೇಳಲಾಗದ ಸಂತೋಷವನ್ನು ಕೊಟ್ಟಿದ್ದಾರೆ. ಅದಕ್ಕಾಗಿಯೇ ಅವರನ್ನು ಪರಿಗಣಿಸಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Abhishek Sharma: ಬ್ರಿಯಾನ್ ಬೆನೆಟ್ ಅವರ ಓವರ್​​ನಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲಿಯೇ ಅವರು ಸಿಕ್ಸರ್ ಬಾರಿಸಿದರು. ಸ್ಕ್ವೇರ್​ ಲೆಗ್ ಕಡೆಗೆ ಗರಿಷ್ಠ ಮಟ್ಟಕ್ಕೆ ಸಿಕ್ಸರ್ ಬಾರಿಸಿದರು. ಅಂದ ಹಾಗೆ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ನಂತರ ಟಿ 20 ಪಂದ್ಯಗಳಲ್ಲಿ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸೂರ್ಯಕುಮಾರ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಸಿಕ್ಸರ್ ಬಾರಿಸಿದರೆ, ತಿಲಕ್ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಮೊದಲ ಎಸೆತಕ್ಕೆ ಸಿಕ್ಸರ್ ಹೊಡೆದಿದ್ದರು.

VISTARANEWS.COM


on

Abhishek Sharma
Koo

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಸಿಕ್ಸರ್ ಬಾರಿಸಿದ ಅಪರೂಪದ ದಾಖಲೆಯ ಪಟ್ಟಿಗೆ ಅಭಿಷೇಕ್ ಶರ್ಮಾ (Abhishek Sharma) ಸೇರ್ಪಡೆಯಾಗಿದ್ದಾರೆ. ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಪರ ತಮ್ಮ ಪವರ್ ಹಿಟ್ಟಿಂಗ್ ಮತ್ತು ನಿರ್ಭೀತ ಆಟದ ಮೂಲಕ ಕಾಣಿಸಿಕೊಂಡ ಅಭಿಷೇಕ್ ಜುಲೈ 6 ರಂದು ಜಿಂಬಾಬ್ವೆ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಆದರೆ ಬ್ಯಾಟರ್​​ ಡಕ್ ಔಟ್ ಆಗಿ ಬೇಸರ ಮೂಡಿಸಿದರು. ಆದರೆ ಜುಲೈ 7 ರಂದು ನಡೆದ ಎರಡನೇ ಟಿ 20 ಅವರು ಅತ್ಯುತ್ತಮ ಪ್ರದರ್ಶನ ನೀಡಿ ಶತಕ ಬಾರಿಸಿದರು.

ಬ್ರಿಯಾನ್ ಬೆನೆಟ್ ಅವರ ಓವರ್​​ನಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲಿಯೇ ಅವರು ಸಿಕ್ಸರ್ ಬಾರಿಸಿದರು. ಸ್ಕ್ವೇರ್​ ಲೆಗ್ ಕಡೆಗೆ ಗರಿಷ್ಠ ಮಟ್ಟಕ್ಕೆ ಸಿಕ್ಸರ್ ಬಾರಿಸಿದರು. ಅಂದ ಹಾಗೆ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ನಂತರ ಟಿ 20 ಪಂದ್ಯಗಳಲ್ಲಿ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸೂರ್ಯಕುಮಾರ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಸಿಕ್ಸರ್ ಬಾರಿಸಿದರೆ, ತಿಲಕ್ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಮೊದಲ ಎಸೆತಕ್ಕೆ ಸಿಕ್ಸರ್ ಹೊಡೆದಿದ್ದರು.

ಇದನ್ನೂ ಓದಿ: Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

ನಾಯಕ ಶುಬ್ಮನ್ ಗಿಲ್ ಎರಡನೇ ಓವರ್ನಲ್ಲಿ ನಿರ್ಗಮಿಸಿದ ನಂತರ ಅಭಿಷೇಕ್ ತಮ್ಮ ಬ್ಯಾಟಿಂಗ್​ ದಾಳಿಯನ್ನು ಮುಂದುವರಿಸಿದರು. ಋತುರಾಜ್ ಗಾಯಕ್ವಾಡ್ ಉತ್ತಮ ಬೆಂಬಲ ನೀಡಿ ಭಾರತವನ್ನು 11 ಓವರ್ ಗಳಲ್ಲಿ ಮೂರಂಕಿಯ ಸ್ಕೋರ್​ ಕಡೆ ಮುನ್ನಡೆಸಿದರು. ಆರಂಭಿಕ ಆಟಗಾರ ತನ್ನ ಮೊದಲ ಅರ್ಧಶತಕವನ್ನು ಕೇವಲ 33 ಎಸೆತಗಳಲ್ಲಿ ಮುಗಿಸಿದರು. ಮುಂದಿನ 13 ಎಸೆತಗಳಲ್ಲಿ ಅವರ ಶತಕ ಬಾರಿಸಿದರು.

ಪಂಜಾಬ್ ಬ್ಯಾಟರ್​ ಅಭಿಷೇಕ್ ಅವರನ್ನು ಟಿ 20 ಕ್ರಿಕೆಟ್​ನ ದೈತ್ಯ ಎಂದು ಏಕೆ ಕರೆಯಲಾಗುತ್ತದೆ ಎಂಬುದನ್ನು ತೋರಿಸಿದರು. ಬಳಿಕ ಬ್ಯಾಟಿಂಗ್​ ವೇಗವನ್ನು ಹೆಚ್ಚಿಸಿದರು. ಕೇವಲ 47 ಎಸೆತಗಳಲ್ಲಿ ತಮ್ಮ ಮೊದಲ ಶತಕ ಗಳಿಸಿದರು. ಅವರು 47 ಎಸೆತಗಳಲ್ಲಿ 100 ರನ್​ ಬಾರಿಸಿ ನಿರ್ಗಮಿಸಿದರು. ಅಂತಾರಾಷ್ಟ್ರಿಯ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಬಾರಿಸಿ ನಿರ್ಗಮಿಸಿದರು. ಕೇವಲ 13 ಎಸೆತಗಳನ್ನು ತೆಗೆದುಕೊಂಡರು. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 23ರ ವರ್ಷದ ಆಟಗಾರ 7 ಬೌಂಡರಿ ಹಾಗೂ 8 ಸಿಕ್ಸರ್ ಬಾರಿಸಿದ್ದರು.

Continue Reading

ದೇಶ

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Mahua Moitra: ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು.

VISTARANEWS.COM


on

Mahua Moitra
Koo

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW Chief) ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಜುಲೈ 1ರಂದು ಜಾರಿಗೆ ಬಂದ ಹೊಸ ಕಾನೂನುಗಳ ಪೈಕಿ ಒಂದಾದ ಭಾರತೀಯ ನ್ಯಾಯ ಸಂಹಿತೆ (BNS) ಅನ್ವಯ ಮಹುವಾ ಮೊಯಿತ್ರಾ ಅವರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮಹುವಾ ಮೊಯಿತ್ರಾ ಹೇಳಿದ್ದೇನು?

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ರೇಖಾ ಶರ್ಮಾ ಅವರು ಹತ್ರಾಸ್‌ಗೆ ಭೇಟಿ ನೀಡಿದ ವಿಡಿಯೊವನ್ನು ಮಹುವಾ ಮೊಯಿತ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, “ತಮ್ಮ ಬಾಸ್‌ನ ಪೈಜಾಮಾ ಹಿಡಿದುಕೊಳ್ಳುವುದರಲ್ಲಿಯೇ ಇವರು ನಿರತರಾಗಿದ್ದಾರೆ” ಎಂಬುದಾಗಿ ಟಿಎಂಸಿ ಸಂಸದೆ ಬರೆದುಕೊಂಡಿದ್ದರು.

ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು. ಅಲ್ಲದೆ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೂ ರಾಷ್ಟ್ರೀಯ ಮಹಿಳಾ ಆಯೋಗವು ಪತ್ರ ಬರೆದು, ಮಹುವಾ ಮೊಯಿತ್ರಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಮನವಿ ಮಾಡಿತ್ತು. ಈಗ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ವಿವಾದಗಳಿಗೂ ಮಹುವಾ ಮೊಯಿತ್ರಾ ಅವರಿಗೂ ಎಲ್ಲಿಲ್ಲದ ನಂಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ಗುರಿಯಾಗಿಸಿಕೊಂಡು ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿಯ ನಿಶಿಕಾಂತ್‌ ದುಬೆ ಆರೋಪ ಮಾಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಕುರಿತು ತನಿಖೆ ಕೂಡ ನಡೆಸಲಾಗಿತ್ತು. “ಉದ್ಯಮಿ ದರ್ಶನ್‌ ಹಿರಾನಂದನಿ ಅವರಿಗೆ ಸಂಸತ್‌ ಐಡಿ ಹಾಗೂ ಪಾಸ್‌ವರ್ಡ್‌ ಕೊಟ್ಟಿದ್ದು ನಿಜ. ಆದರೆ, ಹಣ ಪಡೆದು ಪ್ರಶ್ನೆ ಕೇಳುವ ದಿಸೆಯಲ್ಲಿ ಐಡಿ, ಪಾಸ್‌ವರ್ಡ್‌ ಕೊಟ್ಟಿಲ್ಲ” ಎಂಬುದಾಗಿ ಮಹುವಾ ಮೊಯಿತ್ರಾ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading
Advertisement
Viral Video
ವೈರಲ್ ನ್ಯೂಸ್3 mins ago

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

Mobile Tariffs
ದೇಶ8 mins ago

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

karnataka weather Forecast
ಮಳೆ10 mins ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Puri Jagannath Yatra
ದೇಶ23 mins ago

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Rahul Dravid
ಪ್ರಮುಖ ಸುದ್ದಿ28 mins ago

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Abhishek Sharma
ಪ್ರಮುಖ ಸುದ್ದಿ56 mins ago

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Bengaluru's Second Airport
ಕರ್ನಾಟಕ59 mins ago

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Mahua Moitra
ದೇಶ1 hour ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self harming
ವಿಜಯನಗರ1 hour ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ2 hours ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 mins ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ3 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ3 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ14 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌