Police Corruption | ಬೆಂಗಳೂರು ಪೋಲೀಸ್‌ ಸಿಬ್ಬಂದಿಯಿಂದ ಮತ್ತೆ ಸುಲಿಗೆ? ಮಾನವ ಹಕ್ಕು ಆಯೋಗದಿಂದ ತನಿಖೆ - Vistara News

ಕ್ರೈಂ

Police Corruption | ಬೆಂಗಳೂರು ಪೋಲೀಸ್‌ ಸಿಬ್ಬಂದಿಯಿಂದ ಮತ್ತೆ ಸುಲಿಗೆ? ಮಾನವ ಹಕ್ಕು ಆಯೋಗದಿಂದ ತನಿಖೆ

ಸಾರ್ವಜನಿಕರಿಂದ ಹಣ ಸುಲಿಗೆ ಮಾಡುವ ಕೆಲ ಪೊಲೀಸರ ಕೃತ್ಯ ಬಯಲಾದ ಹಿನ್ನೆಲೆಯಲ್ಲಿ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದ್ದರೂ, ಪೊಲೀಸ್ ಸಿಬ್ಬಂದಿ ವಿರುದ್ಧ ಸುಲಿಗೆ ಆರೋಪ ಮುಂದುವರಿದಿದೆ.

VISTARANEWS.COM


on

police extortion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾರ್ವಜನಿಕರಿಂದ ಹಣ ಸುಲಿಗೆ ಮಾಡುವ ಕೆಲ ಪೊಲೀಸರ ಕೃತ್ಯ ಬಯಲಾದ ಹಿನ್ನೆಲೆಯಲ್ಲಿ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದ್ದರೂ, ಪೊಲೀಸ್ ಸಿಬ್ಬಂದಿ ವಿರುದ್ಧ ಸುಲಿಗೆ ಆರೋಪ ಮುಂದುವರಿದಿದೆ.

ಯುವಕನೊಬ್ಬನನ್ನು ಸ್ಟೇಷನ್‌ನಲ್ಲಿ ಕೂಡಿಹಾಕಿ 40 ಸಾವಿರ ರೂ. ಹಣ ವಸೂಲಿ ಮಾಡಿದ ಆರೋಪವನು ಬೊಮ್ಮನಹಳ್ಳಿ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಲಕ್ಷ್ಮಣ್ ಕೆ. ಪವಾರ್ ಎಂಬವರ ಮೇಲೆ ಹೊರಿಸಲಾಗಿದೆ. ಕಳೆದ ಜುಲೈ 29ರಂದು ಈಜಿಪುರ ಸಿಗ್ನಲ್ ಬಳಿ ನಿಂತಿದ್ದ ಆಶೀಶ್ ಅವರನ್ನು ಕರೆದೊಯ್ದಿದ್ದ ಹೆಡ್ ಕಾನ್‌ಸ್ಟೇಬಲ್, ಎರಡು ಗಂಟೆಗಳ ಕಾಲ ಲಾಕಪ್‌ನಲ್ಲಿ ಕೂಡಿ ಹಾಕಿ ಡ್ರಗ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ 40 ಸಾವಿರ ಹಣ ಪಡೆದಿದ್ದರು. ಲಕ್ಷ್ಮಣ್‌ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಡೆಸಿದ್ದ ಕೃತ್ಯ ಇದಾಗಿದೆ.

ಇದನ್ನೂ ಓದಿ | Hoysala Police Corruption | ಮಧ್ಯರಾತ್ರಿ ಪಾರ್ಟಿ ಮುಗಿಸಿ ಬರುತ್ತಿದ್ದ ದಂಪತಿಯನ್ನು ತಡೆದು ಹಣ ಸುಲಿಗೆ, ಇಬ್ಬರು ಹೊಯ್ಸಳ ಪೊಲೀಸರು ಮನೆಗೆ!

ಹಣ ಕೊಟ್ಟು ಹೊರಬಂದಿದ್ದ ಆಶೀಶ್ ಪೊಲೀಸರ ದೌರ್ಜನ್ಯದ ವಿರುದ್ಧ ಮಾನವಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಆಯೋಗಕ್ಕೆ ಲಕ್ಷ್ಮಣ್ ಕರ್ತವ್ಯಲೋಪ ಎಸಗಿರುವುದು ಖಚಿತವಾಗಿದೆ. ಆಶೀಶ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಮೊಬೈಲ್ ಸಿಡಿಆರ್ ಮಾಹಿತಿ ಪಡೆದಾಗ, ಆ ವೇಳೆ ಆಶೀಶ್ ಹಾಗೂ ಲಕ್ಷ್ಮಣ್ ಬಂಡೇಪಾಳ್ಯ ಪೊಲೀಸ್ ಠಾಣೆ ಮೊದಲ ಮಹಡಿಯಲ್ಲಿ ಒಟ್ಟಿಗೆ ಇದ್ದ ಮಾಹಿತಿ ದೊರೆತಿದೆ. ಆದರೆ ಆಶೀಶ್‌ನನ್ನು ಠಾಣೆಗೆ ಕರೆತಂದಿರಲಿಲ್ಲ, ಅಲ್ಲೇ ವಿಚಾರಣೆ ಮಾಡಿ ಬಿಟ್ಟಿದ್ದಾಗಿ ಲಕ್ಷ್ಮಣ್‌ ಹೇಳಿದ್ದರು.

ಆಶಿಶ್‌ ಹೇಳಿದ ಠಾಣೆಯ ಸ್ಕೆಚ್ ಹಾಕಿಸಿದಾಗ, ಅದು ಬಂಡೇಪಾಳ್ಯ ಠಾಣೆ ಎಂದು ದೃಢಪಟ್ಟಿದೆ. ಪೊಲೀಸರು ಪಡೆದ ಹಣ ಎಟಿಎಂನಿಂದ ಡ್ರಾ ಆಗಿದ್ದುದಕ್ಕೆ ಎಟಿಎಂ ಸ್ಲಿಪ್ ದಾಖಲೆಯಿದೆ. ಈ ಎಲ್ಲಾ ಆಧಾರದ ಮೇಲೆ ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ್ ಹಣ ಪಡೆದಿರುವುದು ಸಾಬೀತಾಗಿದ್ದು, ಸೂಕ್ತ ಕ್ರಮಕ್ಕೆ ಆಯೋಗದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. ಜನವರಿ 5ರೊಳಗೆ ಇಲಾಖೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Theft case | ಏಳು ಮಂದಿ ಖತರ್ನಾಕ್‌ ಕಳ್ಳರು, ಸುಲಿಗೆಕೋರರ ಬಂಧನ: 2೦ ಲಕ್ಷ ಮೌಲ್ಯದ ಸೊತ್ತು ವಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

Physical Abuse: 2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

VISTARANEWS.COM


on

Physical abuse
Koo

ನವದೆಹಲಿ: ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ(Physical Abuse) ಎಸಗಿದ್ದ ಕಿಡಿಗೇಡಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಈ ಮಹತ್ವ ತೀರ್ಪು ಹೊರಹಾಕಿದೆ.

2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದು, ಅಂಕಿತ್‌ಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಈ ಘಟನೆಯ ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಇನ್ನು ಅಂಕಿತ್ ಅಲಿಯಾಸ್ ಮೊಗ್ಲಿ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆಯೂ ಇಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. 85 ವರ್ಷದ ವೃದ್ಧೆಯ ಮೇಲೆ 35 ವರ್ಷದ ಕಿಡಿಗೇಡಿಯೊಬ್ಬ ಬರ್ಬರವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಮೃತಪಟ್ಟಿರುವ ಹೀನಕೃತ್ಯ ಉತ್ತರಪ್ರದೇಶದ ಬರೇಲಿಯ ಹಫೀಜ್‌ಗಂಜ್‌ನಲ್ಲಿ ನಡೆದಿದೆ. 85 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ(Physical Abuse)ಕ್ಕೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ನೆರೆಮನೆಯಲ್ಲಿ ವಾಸಿಸುವ ರಾಕೇಶ್ ಎಂದು ಗುರುತಿಸಲಾದ 35 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ. ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂತ್ರಸ್ತೆಯ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು ಎಂದು ಆರ್ಯ ಹೇಳಿದರು.

ಬಳಿಕ ಆಕೆ ಆತನಿಗೆ ಎಚ್ಚರಿಕೆ ನೀಡಿದಾಗ ಆರೋಪಿ ಪರಾರಿಯಾಗಿದ್ದು, ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಈ ಭೀಕರ ಕೃತ್ಯದ ಬಳಿಕ ವೃದ್ಧೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ. ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: Akshay Kumar: ನಾನು ಸತ್ತೇ ಹೋದೆ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ ಎಂದು ಗರಂ ಆದ ಅಕ್ಷಯ್‌ ಕುಮಾರ್‌!

Continue Reading

ಚಿತ್ರದುರ್ಗ

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

Road Accident: ಚಿತ್ರದರ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ಸ್ಥಳದಲ್ಲಿ ಗಂಟೆಗಳ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ.

VISTARANEWS.COM


on

By

road Accident
Koo

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ (Road Accident) ಗುದ್ದಿದೆ. ಗುದ್ದಿದ ರಭಸಕ್ಕೆ ಓರ್ವ ವಿಧ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗೇಟ್ ಬಳಿ ಅಪಘಾತ‌ ನಡೆದಿದೆ.

ತೋರಣಗಲ್ಲು ಮೂಲದ ಪಲ್ಲವಿ (18) ಮೃತ ದುರ್ದೈವಿ. ಚಾಲಕ ಸುರೇಶ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಕಾರೊಂದು ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿತ್ತು. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ರಾಂಪೂರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಾಖಲು ಮಾಡಲಾಗಿದೆ.

ರಸ್ತೆ ದಾಟುತ್ತಿದ್ದ ವಿಕಲಚೇತನನ ಪ್ರಾಣ ಕಸಿದ ಲಾರಿ

ಚಿತ್ರದುರ್ಗದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುವ ವ್ಯಕ್ತಿ ಮೇಲೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದವನ ಮೇಲೆ ಹರಿದಿದ್ದು, ಕ್ಷಣಾರ್ಧದಲ್ಲಿ ವ್ಯಕ್ತಿಯ ಪ್ರಾಣಪಕ್ಷಿ ಹಾರಿಹೋಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ಘಟನೆ ನಡೆದಿದೆ.

Road Accident
Road Accident

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲಿಕಾರ್ಜುನ್ (52) ಮೃತ ದುರ್ದೈವಿ. ತಿರುಮಲಾಪುರ ಗ್ರಾಮದ ನಿವಾಸಿಯಾದ ಮಲ್ಲಿಕಾರ್ಜುನ ವಿಕಲಚೇತನರಾಗಿದ್ದರು. ರಸ್ತೆ ದಾಟುವ ವೇಳೆ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ನಾಪತ್ತೆಯಾಗಿದ್ದ ಲಾರಿ ಚಾಲನನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್‌ಐ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ಒಂದು ಗಂಟೆ ಅಂತರದಲ್ಲಿ ಒಂದೇ ಕಡೆ ಎರಡು ಅಪಘಾತ!

ಒಂದೇ ಸ್ಥಳದಲ್ಲಿ ಒಂದೆರಡು ಗಂಟೆ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ವಿಂಡ್ಸರ್ ಮ್ಯಾನರ್ ಬ್ರಿಡ್ಜ್‌ ಎಡ್ಜ್‌ಗೆ ಒಂದೇ ಜಾಗದಲ್ಲಿ ಪ್ರತ್ಯೇಕವಾಗಿ ಎರಡು ಆಟೋಗಳು ಡಿಕ್ಕಿ ಹೊಡೆದಿವೆ.

ಶನಿವಾರ ಬೆಳಗ್ಗೆ 4 ಗಂಟೆಗೆ ಹಾಗೂ 6 ಗಂಟೆಯ ಸಂದರ್ಭದಲ್ಲಿ ಅಪಘಾತ ನಡೆದಿದೆ. ಒಂದೇ ಜಾಗದಲ್ಲಿ ಪ್ರತ್ಯೇಕ ಆಟೋಗಳ ಅಪಘಾತದಿಂದಾಗಿ ನಝೀರ್ ಎಂಬಾತನ ತಲೆಗೆ ಗಂಭೀರ ಗಾಯವಾಗಿದೆ. ಪ್ಯಾಸೆಂಜರ್ ಕರೆದೊಯ್ಯುವ ವೇಳೆ ಅಪಘಾತ ನಡೆದಿದೆ. ಪ್ಯಾಸೆಂಜರ್‌ಗೆ ತರಚಿದ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

Ramakrishna Ashram: ಬಾಲಕನೊಬ್ಬ ಪೆನ್ನು ಕದ್ದ ಎಂದು ರಾಯಚೂರಿನ ರಾಮಕೃಷ್ಣ ಆಶ್ರಮದ ಗುರೂಜಿ ಮನಸೋ ಇಚ್ಛೆ ಥಳಿಸಿದ್ದಾರೆ. ಮತ್ತೊಂದು ಕಡೆ ಕಳ್ಳರ ಗ್ಯಾಂಗ್‌ವೊಂದು ವ್ಯಕ್ತಿಗೆ ಹಲ್ಲೆ ನಡೆಸಿ, ಲೂಟಿ ಮಾಡಿ ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

By

Ramakrishna Ashram
Koo

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ (Assault Case) ನಡೆಸಿದ್ದಾರೆ. ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ ಬಡತನದ ಕಾರಣ ಆಶ್ರಮದಲ್ಲಿದ್ದ. ಸಹಪಾಠಿಗಳ ಜತೆ ಆಟವಾಡುತ್ತಾ ಪೆನ್ನು ಕದ್ದಿದ್ದ. ಶ್ರವಣಕುಮಾರ್ ವಿರುದ್ಧ ಸಹಪಾಠಿಗಳು ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬಾತ ಶ್ರವಣಗೆ ಮನಬಂದಂತೆ ಥಳಿಸಿದ್ದಾರೆ. ಚಿಕ್ಕ ಹುಡುಗ ಎಂಬುದನ್ನು ಪರಿಗಣಿಸಿದೇ ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರು ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಟ್ಟ ಬಾಲಕನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

ಯುವತಿಯ ಪರ್ಸ್‌ ಕಿತ್ತುಕೊಂಡು ಮಂಗಳಮುಖಿಯರಿಂದ ಕಿರುಕುಳ

ಮಂಗಳಮುಖಿಯರ ಕುಕೃತ್ಯವನ್ನು ಯುವತಿಯೊಬ್ಬಳು ಬಿಚ್ಚಿಟ್ಟಿದ್ದಾಳೆ. 10 ರೂಪಾಯಿ ನಿವಾಳಿಸಿ ಕೊಡುತ್ತಿನಿ ಎಂದು 700 ರೂಪಾಯಿ ಪಡೆದರಂತೆ. ಪರ್ಸ್ ಕಿತ್ತು ಅದರಲ್ಲಿದ್ದ ಹಣವನ್ನು ಬಲವಂತವಾಗಿ ಪಡೆದು ಕಿರುಕುಳ ನೀಡಿದ್ದರಂತೆ. 700 ಪಡೆದು ಹತ್ತು ರೂಪಾಯಿ ವಾಪಾಸ್ ಕೊಟ್ಟರಂತೆ. ಮೂರು ಮಂಗಳಮುಖಿಯರಿಂದ ಯುವತಿಗೆ ಬೆಂಗಳೂರಿನ ಮಾರತ್ ಹಳ್ಳಿ ಸಿಗ್ನಲ್ ಬಳಿ ಕಿರುಕುಳ ನೀಡಿದ್ದಾರೆ. ಅಷ್ಟು ಜನ ಇದ್ದರೂ ಏನೂ ಮಾಡೋದಕ್ಕೆ ಸಾಧ್ಯವಾಗಿಲ್ಲ ಎಂದು ವಿಡಿಯೋ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾಳೆ.

ರಾಯಚೂರಿನಲ್ಲಿ ವ್ಯಕ್ತಿಗೆ ಹಲ್ಲೆ ನಡೆಸಿ ದರೋಡೆ

ರಾಯಚೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ದರೋಡೆ ನಡೆಸಲಾಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ನಿನ್ನೆ ಶುಕ್ರವಾರ ಮದ್ಯಾಹ್ನ ಮುದಗಲ್ ಪಟ್ಟಣದ ಮೇಗಳಪೇಟೆ ಬಡಾವಣೆಯಲ್ಲಿ ಕಳ್ಳರ ಗ್ಯಾಂಗ್‌ವೊಂದು ಕಳ್ಳತನಕ್ಕೆ ಯತ್ನಿಸಿತ್ತು.

ಈ ವೇಳೆ ಕಳ್ಳರನ್ನು ತಡೆಯಲು ಸ್ಥಳೀಯ ವ್ಯಕ್ತಿ ನಿಂಗಪ್ಪ ಮುಂದಾಗಿದ್ದರು. ಕಳ್ಳರು ಗ್ಯಾಂಗ್ ನಿಂಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ. ತಲೆಗೆ ಕಬ್ಬಿಣದ ರಾಡಿನಿಂದ ಎರಡು ಬಾರಿ ಬಲವಾಗಿ ಹೊಡೆದು ಹಲ್ಲೆ ನಡೆಸಿದ್ದಾರೆ. ಬಳಿಕ ಆತ ಕುಸಿದು ಬೀಳಿತ್ತಿದ್ದಂತೆಯೇ ಮನೆಗಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Robbery Case: ಹಾಡಹಗಲೇ ಬಂದೂಕು ತೋರಿಸಿ ಆಭರಣ ಮಳಿಗೆ ದೋಚಿದ ದರೋಡೆಕೋರರು; ವಿಡಿಯೊ ನೋಡಿ

Robbery Case: ಹಾಡಹಗಲೇ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ದರೋಡೆಕೋರರು ಅಂಗಡಿಗೆ ನುಗ್ಗಿ ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ಅಂಗಡಿಯೊಳಗಿನ ವ್ಯಕ್ತಿಯ ಮೇಲೆ ಬಂದೂಕನ್ನು ಗುರಿಯಾಗಿಸಿಕೊಂಡು ಆಭರಣ ಮಳಿಗೆಯಲ್ಲಿದ್ದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇಡೀ ಘಟನೆ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Robbery Case
Koo


ಪುಣೆ: ಇತ್ತೀಚಿನ ದಿನಗಳಲ್ಲಿ ಹಾಡಹಗಲಿನಲ್ಲಿ ಕಳ್ಳರು ಕಳ್ಳತನ ಶುರುಮಾಡಿದ್ದಾರೆ. ಹಗಲಿನಲ್ಲಿ ಜನಸಂದಣಿ ಇರುವಂತಹ ಸ್ಥಳಗಳಲ್ಲೇ ದರೋಡೆಕೋರರು ಜನರ ಮೇಲೆ, ಅಂಗಡಿಗಳ ಮೇಲೆ ದಾಳಿ ಮಾಡಿ ಲೂಟಿ ಮಾಡುತ್ತಿದ್ದಾರೆ. ಅದೇರೀತಿ ಇತ್ತೀಚೆಗೆ ಹಾಡಹಗಲೇ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ಇಡೀ ಘಟನೆ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Robbery Case) ಆಗಿದೆ.

ದರೋಡೆಕೋರರು ಅಂಗಡಿಗೆ ನುಗ್ಗಿ ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ವಿಡಿಯೊದಲ್ಲಿ, ದರೋಡೆಕೋರರಲ್ಲಿ ಒಬ್ಬರು ಅಂಗಡಿಯೊಳಗಿನ ವ್ಯಕ್ತಿಯ ಮೇಲೆ ಬಂದೂಕನ್ನು ಗುರಿಯಾಗಿಸಿಕೊಂಡರೆ, ಇನ್ನೊಬ್ಬ ವ್ಯಕ್ತಿಯ ಕಾಲರ್ ಹಿಡಿದು ಕೆಳಕ್ಕೆ ತಳ್ಳುತ್ತಿದ್ದಾನೆ. ಮೂರನೆಯವನು ಅಂಗಡಿಯೊಳಗೆ ಇದ್ದ ವಸ್ತುಗಳನ್ನು ತೆಗೆದುಕೊಂಡಿದ್ದಾನೆ ಮತ್ತು ನಂತರ, ಮೂವರು ಅಂಗಡಿಯಿಂದ ಹೊರಗೆ ಹೋಗಿದ್ದಾರೆ.

ಪುಣೆಯ ಲಕ್ಷ್ಮಿ ಚೌಕ್ ಹಿಂಜೇವಾಡಿಯಲ್ಲಿ ಬೆಳಿಗ್ಗೆ 10:30 ಕ್ಕೆ ಈ ಘಟನೆ ನಡೆದಿದ್ದು, ಕೆಲವೇ ಸೆಕೆಂಡುಗಳಲ್ಲಿ ದರೋಡೆಕೋರರು ಅಂಗಡಿಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಜಾಗ ಖಾಲಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಪೊಲೀಸರು ಅದನ್ನು ಪರೀಶಿಲಿಸಿ ಕಳ್ಳರನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

ಕಳೆದ ತಿಂಗಳು, ಇದೇ ರೀತಿಯ ಕಳ್ಳತನದ ಪ್ರಕರಣ ನಡೆದಿದ್ದು, ಖಾರ್ಘರ್ ಪ್ರದೇಶದಲ್ಲಿ ರಾತ್ರಿ 10:00 ರ ಸುಮಾರಿಗೆ ಮೂವರು ದರೋಡೆಕೋರರು ಹೆಲ್ಮೆಟ್ ಧರಿಸಿ ಆಭರಣ ಅಂಗಡಿಗೆ ನುಗ್ಗಿ ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ್ದರು. ಕಳ್ಳತನದ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಹಿಡಿಯಾಗಿದೆ, ಮುಖವಾಡ ಧರಿಸಿದ ಮೂವರು ದರೋಡೆಕೋರರನ್ನು ಪತ್ತೆಹಚ್ಚಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ದರೋಡೆಯ ಸಮಯದಲ್ಲಿ, ದರೋಡೆಕೋರರು ಅಂಗಡಿಯೊಳಗೆ ಹಲವಾರು ಬಾರಿ ಗುಂಡುಗಳನ್ನು ಹಾರಿಸಿದರು. ಅವರು ತಪ್ಪಿಸಿಕೊಳ್ಳುವಾಗ, ಅವರು ಹೆಚ್ಚುವರಿ ಸುತ್ತು ಗುಂಡು ಹಾರಿಸಿದ್ದಾರೆ.

Continue Reading
Advertisement
Physical abuse
ದೇಶ11 mins ago

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

BJP-JDS Padayatra ST Somashekhar
ಪ್ರಮುಖ ಸುದ್ದಿ17 mins ago

BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

road Accident
ಚಿತ್ರದುರ್ಗ20 mins ago

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

Gold Rate Today
ಚಿನ್ನದ ದರ24 mins ago

Gold Rate Today: ಕೊನೆಗೂ ಆಭರಣ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಳಿಕೆ

Akshay Kumar Bollywood folks send him condolence messages
ಬಾಲಿವುಡ್28 mins ago

Akshay Kumar: ನಾನು ಸತ್ತೇ ಹೋದೆ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ ಎಂದು ಗರಂ ಆದ ಅಕ್ಷಯ್‌ ಕುಮಾರ್‌!

PV Sindhu
ಕ್ರೀಡೆ30 mins ago

PV Sindhu: ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಅವಳಿ ಒಲಿಂಪಿಕ್​ ಪದಕ ವಿಜೇತೆ ಪಿ.ವಿ. ಸಿಂಧು

Ramakrishna Ashram
ರಾಯಚೂರು46 mins ago

Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

IPL 2025
ಕ್ರೀಡೆ1 hour ago

IPL 2025: ಇನ್ನು ಮುಂದೆ ಹೀಗೆ ಮಾಡಿದರೆ ವಿದೇಶಿ ಆಟಗಾರರಿಗೆ ಐಪಿಎಲ್​ನಿಂದ 2 ವರ್ಷ ನಿಷೇಧ?

Wayanad Landslide
ದೇಶ1 hour ago

Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

meghashree DC Wayanad landslide 2
ಪ್ರಮುಖ ಸುದ್ದಿ1 hour ago

Wayanad Landslide: ವಯನಾಡ್‌ನಲ್ಲಿ ಕರ್ತವ್ಯಪರತೆ ಮೆರೆದ ಕನ್ನಡತಿ ಜಿಲ್ಲಾಧಿಕಾರಿ, ಭೂಕುಸಿತ ಸ್ಥಳದಲ್ಲೇ ಮೊಕ್ಕಾಂ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ6 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌