ʼಆರಂಭʼ ಖ್ಯಾತಿಯ ನಟ ಉದಯ್‌ ಹುತ್ತಿನಗದ್ದೆ ಇನ್ನಿಲ್ಲ - Vistara News

ಸಿನಿಮಾ

ʼಆರಂಭʼ ಖ್ಯಾತಿಯ ನಟ ಉದಯ್‌ ಹುತ್ತಿನಗದ್ದೆ ಇನ್ನಿಲ್ಲ

ಉದಯ್‌ ಹುತ್ತಿನಗದ್ದೆ 90ರ ದಶಕದಲ್ಲಿ ಕ್ರಮೇಣ ವ್ಯಾಪಾರದಲ್ಲಿ ತೊಡಗಿಸಿಕೊಂಡು ಚಿತ್ರರಂಗದಿಂದ ದೂರವೇ ಉಳಿದ್ದಿದ್ದರು.

VISTARANEWS.COM


on

ಉದಯ್‌ ಹುತ್ತಿನಗದ್ದೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼಆರಂಭʼ ಸೇರಿದಂತೆ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ್ದ ಹಿರಿಯ ನಟ ಉದಯ್‌ ಹುತ್ತಿನಗದ್ದೆ (62) ಗುರುವಾರ ಉಸಿರಾಟದ ಸಮಸ್ಯೆಯಿಂದ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

1987ರಲ್ಲಿ ಬಿಡುಗಡೆಯಾದ ʼಆರಂಭʼ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದ ಅವರು, ನಂತರದ ವರ್ಷಗಳಲ್ಲಿ ʼಶಿವಯೋಗಿ ಅಕ್ಕಮಹಾದೇವಿʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

ಇದನ್ನೂ ಓದಿ | SDM ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಯಶೋವರ್ಮ ಸಿಂಗಾಪುರದಲ್ಲಿ ವಿಧಿವಶ

ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ ʼಉಂಡೂ ಹೋದ ಕೊಂಡೂ ಹೋದʼ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು. 90ರ ದಶಕದಲ್ಲಿ ಕ್ರಮೇಣ ವ್ಯಾಪಾರದಲ್ಲಿ ತೊಡಗಿಸಿಕೊಂಡು ಚಿತ್ರರಂಗದಿಂದ ದೂರವೇ ಉಳಿದ್ದಿದ್ದರು. ಮೆಜಿಸ್ಟಿಕ್‌ ಮತ್ತು ರಾಜಾಜಿನಗರದಲ್ಲಿ ಪ್ರಿಂಟಿಂಗ್‌ ಮತ್ತು ವಿಡಿಯೋ ಶೂಟಿಂಗ್ ವ್ಯವಹಾರ ಮಾಡುತ್ತಿದ್ದ ಅವರು, ಅದರಲ್ಲೇ ಸಕ್ರಿಯರಾಗಿದ್ದರು. ಗುರುವಾರ ಸಂಜೆ 5.30ರ ಹೊತ್ತಿಗೆ ಉಸಿರಾಟದ ಸಮಸ್ಯೆಯಿಂದಾಗಿ ತಮ್ಮ ಮನೆಯಲ್ಲೇ ಮೃತಪಟ್ಟರು.

ಉದಯ್‌ ಹುತ್ತಿನಗದ್ದೆ ಅವರ ಅಂತಿಮ ಸಂಸ್ಕಾರ ಶುಕ್ರವಾರ ಮಧ್ಯಾಹ್ನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ನಡೆಯಲಿದೆ.
ಇದನ್ನೂ ಓದಿ | ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ್‌ ಚೌಟ ಇನ್ನಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Janhvi Kapoor: ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor felt sexualised at the age of 12
Koo

ಬೆಂಗಳೂರು:  ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ (Janhvi Kapoor) ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.  ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ನಟಿ ಮಾತನಾಡಿ ʻʻನಾನು ಮಾಧ್ಯಮಗಳಿಂದ ಮೊದಲ ಬಾರಿಗೆ ಲೈಂಗಿಕವಾಗಿ ಸಮಸ್ಯೆ ಎದುರಿಸಿದ್ದೆ. ಆಗ ನನಗೆ 12-13 ವರ್ಷ ವಯಸ್ಸು. ಒಮ್ಮೆ ನನ್ನ ತಾಯಿ ಮತ್ತು ತಂದೆಯೊಂದಿಗೆ ಈವೆಂಟ್‌ಗೆ ಹೋಗಿದ್ದೆ. ಆ ಚಿತ್ರಗಳು ಆನ್‌ಲೈನ್‌ನಲ್ಲಿ ವೈರಲ್‌ ಆಗಿದ್ದವು. ಮಾರ್ಫಿಂಗ್ ಮಾಡಿ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಹಾಕಿದ್ದರು. ಆದರೆ ಇದು ಮಾರ್ಫ್‌ ಮಾಡಿದ ಚಿತ್ರಗಳು ಎಂದು ಹಲವರಿಗೆ ತಿಳಿದೇ ಇರಲಿಲ್ಲ. ನಿಜ ಎಂದು ನಂಬಿದ್ದರು. ಆ ಚಿಕ್ಕ ವಯಸ್ಸಿನಲ್ಲಿಯೇ ನನಗೆ ತುಂಬಾ ಆಘಾತವಾಗಿತ್ತು. ನನ್ನ ಫ್ರೆಂಡ್ಸ್‌ ಕೂಡ ಗೇಲಿ ಮಾಡುತ್ತಿದ್ದರು. ಆ ವಯಸ್ಸಿನಲ್ಲಿ ಏನಾಗುತ್ತಿದೆ ಎಂದು ನನಗೆ ತಿಳಿದೇ ಇರಲಿಲ್ಲʼ ಎಂದಿದ್ದಾರೆ.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಮಿಸ್ಟರ್& ಮಿಸೆಸ್​ ಮಹಿ

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಸಿನಿಮಾ

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

VISTARANEWS.COM


on

Kannada New Movie Sambavami Yuge Yuge 4K Motion Poster
Koo

ಬೆಂಗಳೂರು: ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” (Kannada New Movie) ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ‌. ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ.

ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.

“ಸಂಭಾವಮಿ ಯುಗೇಯಗೇ” ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಕಿರುತೆರೆ

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

Ninagagi Kannada Serial: ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

VISTARANEWS.COM


on

Ninagagi Kannada Serial Ritvvikk Mathad Playing Lead In Divya Uruduga
Koo

ಬೆಂಗಳೂರು: ಕನ್ನಡ ಕಿರುತೆರೆ ಲೋಕದಲ್ಲಿ ಕಲರ್ಸ್ ಕನ್ನಡ ವಾಹಿನಿ (Ninagagi Kannada Serial) ವಿಭಿನ್ನ ಬಗೆಯ ಸೀರಿಯಲ್‌ಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಇದೀಗ ಮತ್ತೊಂದು ಹೊಸ ಕಥೆ ಮೂಲಕ ಕಿರುತೆರೆ ಪ್ರೇಕ್ಷಕರ ಎದುರು ಬರುತ್ತಿದೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ʻನಿನನಾಗಿʼ ಇದೇ 27ನೇ ತಾರೀಖಿನಿಂದ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಹಿನ್ನೆಲೆ ಇಡೀ ತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿತು.

ಬೆಂಗಳೂರಿನ ಅಕ್ಷಯ್ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಸಂಪಥ್ವಿ ಮಾತನಾಡಿ, ʻʻತುಂಬಾ ಎಕ್ಸೈಟ್ ಆಗಿದ್ದೇನೆ. ಯಾಕೆಂದರೆ ಹೆಮ್ಮೆಯಿಂದ ಹೇಳುತ್ತೇನೆ.‌ ಒಂದೊಳ್ಳೆ ಪ್ರಾಜೆಕ್ಟ್ ತೆಗೆದುಕೊಂಡು ಬಂದಿದ್ದೇನೆ. ನಿನಗಾಗಿ ಶೋ ಬಂದ‌ ಮೇಲೆ ತುಂಬಾ ಸ್ಕೋರ್ ಮಾಡುತ್ತದೆ. ಯಾಕೆಂದರೆ ನನ್ನ ಬೆಂಬಲವಾಗಿ ನಿಂತಿರುವವರು ಜೈ ಮಾತಾ ಕಂಬೈನ್ಸ್ ನ ಅಶ್ವಿನಿ‌ ಮೇಡಂ. ಇಡೀ‌ ಕಲರ್ಸ್ ತಂಡ. ಪ್ರತಿಯೊಬ್ಬರಿಗೂ ಸಪೋರ್ಟಿವ್ ಆಗಿತು. ಈ ಪ್ರಾಜೆಕ್ಟ್ ಮಾಡಿಸಿದ್ದಾರೆ. ಈ ಪ್ರಾಜೆಕ್ಟ್ ಕಲರ್ಸ್‌ಗೆ ಗೆಲುವು ತಂದುಕೊಡುತ್ತದೆ. ನಾಯಕ ಒಂದು ಪಡೆಯಾದರೆ, ನಾಯಕಿ ಕೂಡ ಒಂದು ಪಡೆ. ಇವರೆಲ್ಲಾ ಬಲ ತಂದುಕೊಡುತ್ತಿದ್ದಾರೆ. ಪ್ರೋವೋ ನೋಡಿ ಇಷ್ಟಪಟ್ಟಿದ್ದೀರಾ. ನಾನು ಈ ಹಿಂದೆ ನಮ್ಮನೆ ಯುವರಾಣಿ ಸೀರಿಯಲ್ ಮಾಡಿದ್ದೇನೆ. ಈ ಬಾರಿ ಒಂದು ಹೊಸ ಕಥೆ ಹೇಳಲು ಬರುತ್ತಿದ್ದೇವೆʼʼ ಎಂದರು.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

ನಾಯಕ ಋತ್ವಿಕ್ ಮಠದ್ ಮಾತನಾಡಿ, ʻʻಶಿವರಾಮ್ ಮಾಸ್‌ನಲ್ಲಿ‌ ನೋಡಿದ್ದೀರಾ. ಆದರೆ ಆ ಮಾಸ್ ಜೀವನ್‌ನಲ್ಲಿ ಇರುವುದಿಲ್ಲ. ತುಂಬಾ ಸರಳ ವ್ಯಕ್ತಿ.‌ಒಬ್ಬ ಮಗುವಿನ ತಂದೆ. ದುಡ್ಡಿನ ಹಿಂದೆ ಹೋಗುವ ಮನುಷ್ಯ ಅಲ್ಲ. ಆ ರೀತಿ ಪಾತ್ರ ಮಾಡುತ್ತಿದ್ದೇನೆʼʼ ಎಂದು ಮಾಹಿತಿ ನೀಡಿದರು.

ನಾಯಕಿ ದಿವ್ಯಾ ಉರುಡುಗ ಮಾತನಾಡಿ, ʻʻನನಗೆ ಹೆಮ್ಮೆ ಅನಿಸುತ್ತದೆ. ಪ್ರತಿ ವಿಷಯದಲ್ಲಿಯೂ ಯೂನಿಕ್ ಆಗಿ ಮಾಡುತ್ತಿದ್ದೇವೆ. ರಚ್ಚು ಎಂಬ ಮುದ್ದಾದ ಹುಡುಗಿ ಪಾತ್ರ ಮಾಡುತ್ತಿದ್ದೇನೆ. ರಚ್ಚು ಎಂಬ ಸೂಪರ್ ಸ್ಟಾರ್ ಸಿಂಪಲ್ ಆಗಿ ಲೈಫ್ ಲೀಡ್ ಮಾಡುವ ಕನಸು ಕಾಣುತ್ತಾ ಇರುತ್ತಾಳೆ. ಅಮ್ಮನ ಮಾತೇ ವೇದ ವಾಕ್ಯ.‌ ಆ ರೀತಿ ಪಾತ್ರ ನನ್ನದು. ಅವಳ ವೈಯಕ್ತಿಕ ಜೀವನ, ಅವಳ ಆಸೆ ನೆರವೇರುತ್ತಾ? ಅನ್ನೋದನ್ನು ನೀವು ನೋಡ್ಬೇಕು.‌ಒಂದೊಳ್ಳೆ ತಂಡದ ಜೊತೆ ಕೆಲಸ‌ ಮಾಡುತ್ತಿರುವ ಖುಷಿ ಇದೆ. ಸಿನಿಮಾ ರೀತಿಯೇ ಸೀರಿಯಲ್ ಶೂಟ್ ಮಾಡಲಾಗುತ್ತಿದೆʼʼ ಎಂದರು.

ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ.

ನಮ್ಮನೆ ಯುವರಾಣಿಯನ್ನು ನಿರ್ದೇಶಿಸಿದ್ದ ಸಂಪೃಥ್ವಿ ‘ನಿನಗಾಗಿʼಯ ಸೂತ್ರಧಾರಿ. ಭಾಗ್ಯಲಕ್ಷ್ಮಿ, ನಮ್ಮನೆ ಯುವರಾಣಿ, ಕನ್ನಡತಿಯಂಥ ಸುಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಿಸಿದ ಜೈ ಮಾತಾ ಕಂಬೈನ್ಸ್ ‘ನಿನಗಾಗಿʼಯ ನಿರ್ಮಾಣದ ಹೊಣೆ ಹೊತ್ತಿದೆ.

Continue Reading

ಸಿನಿಮಾ

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Pavithra Jayaram ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲ ಎಂದರು.

VISTARANEWS.COM


on

Pavithra Jayaram Trinayani Serial Son Prajwal Reaction
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್‌ ಈ ಬಗ್ಗೆ ಮಾತನಾಡಿ ʻಅಮ್ಮನಿಗೆ ಊರಿನ ಜತೆ ಒಡನಾಟ ತುಂಬ ಚೆನ್ನಾಗಿಯೇ ಇತ್ತು. ಚಿತ್ರರಂಗ ಎಂದರೆ ನಿಮಗೆ ಗೊತ್ತು. ನಾನು ಇಂಡಸ್ಟ್ರಿಗೆ ಬಂದರೂ ನನ್ನ ಜತೆ ಯಾರಾದರೂ ಇದ್ದಾರೆ ಅಂದರೆ ಫಸ್ಟ್‌ ಈ ರೀತಿ ರೂಮರ್ಸ್‌ ಹುಟ್ಟಿಕೊಳ್ಳುತ್ತೆ. ಚಂದ್ರಕಾಂತ್‌ ಕುಟುಂಬ ಕೂಡ ಬೇಸರದಲ್ಲಿದೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

ಚಂದ್ರಕಾಂತ್‌ ಪತ್ನಿ ಹೇಳಿದ್ದೇನು?

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದಿದ್ದರು.

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ

Continue Reading
Advertisement
Thailand Open 2024
ಬ್ಯಾಡ್ಮಿಂಟನ್56 seconds ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ5 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್14 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ18 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್24 mins ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ32 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್45 mins ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ46 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ58 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌