Video: ಇದೆಂಥಾ ಪರಿಸ್ಥಿತಿ! ಕುಡಿವ ನೀರಿಗಾಗಿ ಜೀವವನ್ನೇ ಪಣಕ್ಕಿಡುತ್ತಿದ್ದಾರೆ ಈ ಹಳ್ಳಿಯ ಮಹಿಳೆಯರು

ವೈರಲ್ ನ್ಯೂಸ್

Video: ಇದೆಂಥಾ ಪರಿಸ್ಥಿತಿ! ಕುಡಿವ ನೀರಿಗಾಗಿ ಜೀವವನ್ನೇ ಪಣಕ್ಕಿಡುತ್ತಿದ್ದಾರೆ ಈ ಹಳ್ಳಿಯ ಮಹಿಳೆಯರು

Madhya Pradesh: ನೀರಿನ ಸಮಸ್ಯೆಗೊಂದು ಪರಿಹಾರ ಕೊಡಿ ಎಂದು ಎಷ್ಟೇ ಬಾರಿ ಮನವಿ ಮಾಡಿದರೂ ರಾಜಕಾರಣಿಗಳು, ಸ್ಥಳೀಯ ಅಧಿಕಾರಿಗಳು ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ ಎಂದು ಈ ಜನರು ಆರೋಪಿಸಿದ್ದಾರೆ.

VISTARANEWS.COM


on

woman risking their life for water
ನೀರಿರುವ ಬಾವಿಗೆ ಮೆಟ್ಟಿಲುಗಳ ಮೂಲಕ ಇಳಿದು-ಏರುವ ಮಹಿಳೆಯರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಘುಸಿಯಾ: ಬೇಸಿಗೆ ಬಂತೆಂದರೆ ಸಾಕು ದೇಶದ ಅನೇಕ ಪ್ರದೇಶಗಳಲ್ಲಿ ನೀರಿನ ಅಭಾವದ ಸಮಸ್ಯೆ ತಲೆದೋರುತ್ತದೆ. ಅದರಲ್ಲೂ ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್‌, ಉತ್ತರಾಖಂಡ್‌ ಮತ್ತು ಹರ್ಯಾಣಗಳಲ್ಲಿ ಇದು ಹೆಚ್ಚು. ಈಗ ವೈರಲ್‌ ಆದ ವಿಡಿಯೋವೊಂದು ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನೀರಿಗಾಗಿ ಮಹಿಳೆಯರು ಎಷ್ಟು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ ಎಂಬುದನ್ನು ತೋರಿಸಿದೆ. ಈ ಮಹಿಳೆಯರು ಬಾವಿಯಿಂದ ನೀರು ತರಲು ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ.

ಮಧ್ಯಪ್ರದೇಶದ ಘುಸಿಯಾ ಎಂಬ ಹಳ್ಳಿಯಲ್ಲಿ ನೀರಿನ ಅಭಾವ ತೀವ್ರವಾಗಿದೆ. ಇರುವ ಬಾವಿ-ಕೆರೆಗಳೆಲ್ಲ ಬತ್ತಿ ಹೋಗಿವೆ. ಒಂದೆರಡು ಬಾವಿಗಳಲ್ಲಿ ನೀರಿದ್ದರೂ ತಳದಲ್ಲಿ ಇದೆ. ಮೇಲೆ ನಿಂತು ಕೊಡವನ್ನೋ, ಪಾತ್ರೆಯನ್ನೋ ಬಾವಿಗೆ ಹಗ್ಗದ ಮೂಲಕ ಇಳಿಬಿಟ್ಟು ನೀರನ್ನು ಮೇಲೆತ್ತುವ ಸ್ಥಿತಿಯಿಲ್ಲ. ಬಾವಿಗೆ ಇಳಿದು ಪಾತ್ರೆಯಲ್ಲಿ/ಬಕೆಟ್‌ಗಳಲ್ಲಿ ನೀರು ಮೊಗೆಯಬೇಕು. ಅಂತೆಯೇ ಇಲ್ಲಿನ ಮಹಿಳೆಯರೂ ಬಾವಿ ಬಳಿ ಹೋಗಿ ಅದರೊಳಗೆ ಇಳಿಯುತ್ತಾರೆ. ಇಲ್ಲಿ ಅತ್ಯಂತ ಭಯ ಹುಟ್ಟಿಸುವ ಅಂಶವೆಂದರೆ ಬಾವಿಗೆ ಇಳಿಯುವಾಗ ಅವರು ಹಗ್ಗದ ಸಹಾಯವನ್ನು ತೆಗೆದುಕೊಳ್ಳುವುದಿಲ್ಲ. ಬದಲಿಗೆ ಆಳದ ಬಾವಿಗೆ ಇರುವ ಚಿಕ್ಕಚಿಕ್ಕ ಮೆಟ್ಟಿಲುಗಳ ಮೂಲಕ ಇಳಿದು, ನೀರನ್ನು ಪಾತ್ರೆಯಿಂದ ಮೊಗೆದುಕೊಳ್ಳುತ್ತಾರೆ. ಬಳಿಕ ನೀರು ತುಂಬಿದ ಬಕೆಟ್‌ಗೆ ಹಗ್ಗ ಕಟ್ಟಿದರೆ, ಮೇಲಿದ್ದವರು ಅದನ್ನು ಎಳೆದುಕೊಳ್ಳುತ್ತಾರೆ. ಆದರೆ ಕೆಳಗೆ ಹೋದವರು ಅದೇ ಸಣ್ಣ ಮೆಟ್ಟಿಲುಗಳ ಮೇಲೆ ಹೆಜ್ಜೆಯಿಡುತ್ತ ಹತ್ತುತ್ತಾರೆ. ಇವರಿಗೆ ಹಗ್ಗದ ಸಪೋರ್ಟ್‌ ಇರುವುದಿಲ್ಲ. ಮೆಟ್ಟಿಲುಗಳು ಅತ್ಯಂತ ಚಿಕ್ಕದಾಗಿರುವ ಕಾರಣ ಸ್ವಲ್ಪವೇ ಆಯ ತಪ್ಪಿದರೂ ಅವರು ಕೆಳಗೆ ಬೀಳುತ್ತಾರೆ. ನೀರಿಲ್ಲದ ಕಾರಣ ಬಾವಿಯ ತಳದಲ್ಲಿ ದೊಡ್ಡದೊಡ್ಡ ಕಲ್ಲುಗಳಿವೆ. ಹೀಗಾಗಿ ಗಂಭೀರ ಸ್ವರೂಪದ ಪೆಟ್ಟಾಗಬಹುದು ಅಥವಾ ಜೀವವೇ ಹೋಗಬಹುದು.

ತಮಗೆ ಎದುರಾಗಿರುವ ಈ ಪರಿಸ್ಥಿತಿಯ ಬಗ್ಗೆ ಘುಸಿಯಾ ಜನರು ಆಕ್ರೋಶಿತರಾಗಿದ್ದಾರೆ. ನಮಗೆ ನೀರಿನ ಸಮಸ್ಯೆ ಇಂದು-ನಿನ್ನೆಯದಲ್ಲ. ಸಂಬಂಧಪಟ್ಟವರಿಗೆ ದೂರು ನೀಡಿ ಸಾಕಾಯಿತು. ನೀರು ಬೇಕೆಂದರೆ ಬಾವಿಯೊಳಗೆ ಇಳಿಯಬೇಕು. ನಮ್ಮ ಹಳ್ಳಿಯ ಸುತ್ತಮುತ್ತ ಇರುವ ಬಾವಿಗಳೆಲ್ಲ ಬತ್ತಿ ಹೋಗಿವೆ. ಒಂದೇ ಒಂದು ಬೋರ್‌ನಲ್ಲೂ ನೀರು ಬರುತ್ತಿಲ್ಲ. ಚುನಾವಣೆ ಬಂತೆಂದರೆ ಸಾಕು, ಜನಪ್ರತಿನಿಧಿಗಳು, ಅಧಿಕಾರಿಗಳೆಲ್ಲ ಇಲ್ಲಿಗೆ ಬರುತ್ತಾರೆ. ಆದರೆ ನೀರಿನ ಸಮಸ್ಯೆಗೆ ಪರಿಹಾರವೇ ಸಿಗುವುದಿಲ್ಲ. ಈ ಸಲ ಯಾರನ್ನೂ ಹಳ್ಳಿಗೆ ಬಿಟ್ಟುಕೊಳ್ಳುವುದಿಲ್ಲ ಮತ್ತು ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ವಿಟಮಿನ್‌ ಡಿ ಕೊರತೆ ನೀಗಿಸಲು ಹಾಲು, ನೀರು ಪರಿಣಾಮಕಾರಿ; ಅಧ್ಯಯನ ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading

ಪ್ರಮುಖ ಸುದ್ದಿ

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Mahua Moitra: “ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Mahua Moitra
Koo

ನವದೆಹಲಿ: ಸಂಸತ್‌ನ ವಿಶೇಷ ಅಧಿವೇಶನದಲ್ಲಿ (Parliament Session 2024) ಪ್ರತಿಪಕ್ಷಗಳು ನೀಟ್‌ ಅಕ್ರಮ, ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯಗಳ ಕುರಿತು ಚರ್ಚೆ, ಗಲಾಟೆ, ವಾಗ್ವಾದ, ಆರೋಪ ಮಾಡಿವೆ. ಯಾವುದೇ ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷವು ಆರೋಪ, ಗಲಾಟೆ, ಪ್ರತಿಭಟನೆ ಮಾಡುವುದು ಸಹಜ. ಇನ್ನು ಸೋಮವಾರ (ಜುಲೈ 1) ಸಂಸತ್‌ನಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಮಾತನಾಡುವಾಗ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೇ ಕುಳಿತುಕೊಳ್ಳಿ ಎಂಬುದಾಗಿ ಸೂಚಿಸಿದ್ದಾರೆ.

“ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಆಗ ಆಡಳಿತ ಪಕ್ಷದ ಸದಸ್ಯರು ಗೇಲಿ ಮಾಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮಹುವಾ ಮೊಯಿತ್ರಾ, “ಅವರು ನಮ್ಮ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರು ಅರ್ಥ ಮಾಡಿಕೊಳ್ಳುತ್ತಾರೆ” ಎಂದು ತಿರುಗೇಟು ನೀಡಿದರು.

ಇದೇ ವೇಳೆ ಆಡಳಿತ ಪಕ್ಷದ ವಿರುದ್ಧ ಟಿಎಂಸಿ ಸಂಸದೆ ಹರಿಹಾಯ್ದರು. “ಸಂಸತ್‌ನಲ್ಲಿ ನಾನು ಪ್ರಶ್ನೆ ಕೇಳಲು, ಮಾತನಾಡಲು ಬಿಡಲಿಲ್ಲ. ನಾನು ಸಂಸತ್‌ನಲ್ಲಿ ಮಾತನಾಡಲು ಎದ್ದು ನಿಂತಾಗ, ನನ್ನ ಧ್ವನಿಯನ್ನು ಹುದುಗಿಸಲಾಯಿತು. ಆದರೆ, ಚುನಾವಣೆ ವೇಳೆ ಏನಾಯಿತು? ಆಡಳಿತ ಪಕ್ಷದ ಸದಸ್ಯ ಬಲವು 303ರಿಂದ 240ಕ್ಕೆ ಇಳಿಸಲಾಯಿತು. ಟಿಎಂಸಿ ಸಂಸದೆಯಾದ ನನ್ನನ್ನು ಕುಳಿತುಕೊಳ್ಳುವಂತೆ ಮಾಡಿದರು. ಆದರೆ, ಬಿಜೆಪಿಯ 63 ಸಂಸದರನ್ನು ಮನೆಯಲ್ಲಿಯೇ ಕುಳಿತುಕೊಳ್ಳುವಂತೆ ದೇಶದ ಜನ ಮಾಡಿದರು” ಎಂಬುದಾಗಿ ಹೇಳಿದರು.

ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು “ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

Continue Reading

Latest

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Viral Video: ಪಾಕಿಸ್ತಾನದಲ್ಲಿ ಟಿವಿ ವರದಿಗಾರ್ತಿಯೊಬ್ಬಳು ಗೂಳಿ ದಾಳಿಗೆ ಒಳಗಾದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ವರದಿಗಾರ್ತಿ ಗೂಳಿ ಮಾಲೀಕರ ಬಳಿ ಅವುಗಳ ದರಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಳು. ಆಗ ಹಿಂದಿನಿಂದ ಬಂದ ಗೂಳಿಯೊಂದು ಆಕೆಯನ್ನು ಗುದ್ದಿದೆ. ಇದರಿಂದ ಆಕೆ ಕಿರುಚುತ್ತಾ ಓಡಿದ್ದಾಳೆ. ಅವಳ ಕೈಯಲ್ಲಿದ್ದ ಮೈಕ್ ಗೂಳಿಯ ಕೊಂಬಿನಲ್ಲಿ ಸಿಲುಕಿಕೊಂಡಿದ್ದು, ನಂತರ ಅದನ್ನು ಒಬ್ಬ ವ್ಯಕ್ತಿಯೊಬ್ಬರು ತೆಗೆದು ಕೊಟ್ಟಿದ್ದಾರೆ!

VISTARANEWS.COM


on

Viral Video
Koo

ಇತ್ತೀಚಿನ ದಿನಗಳಲ್ಲಿ ಗೂಳಿಗಳು, ಹಸುಗಳು ಮುಂತಾದ ಪ್ರಾಣಿಗಳು ಮನುಷ್ಯರ ಮೇಲೆ ಆಕ್ರಮಣ ಮಾಡುವಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿಂದೆ ಭಾರತದಲ್ಲಿ ಎಮ್ಮೆ ಮತ್ತು ಹಸುವಿನ ದಾಳಿಗೆ ಮಹಿಳೆಯರು ಗಾಯಗೊಂಡಿದ್ದರು. ಇದೀಗ ಪಾಕಿಸ್ತಾನದಲ್ಲಿ ಟಿವಿ ವರದಿಗಾರ್ತಿಯೊಬ್ಬಳು ಗೂಳಿ ದಾಳಿಗೆ ಒಳಗಾಗಿದ್ದಾಳೆ. ಅದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಪಾಕಿಸ್ತಾನದ ಟಿವಿ ವರದಿಗಾರ್ತಿ ಲೈವ್ ಪ್ರಸಾರದ ವೇಳೆ ಗೂಳಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹಾಗಾಗಿ ಅಲ್ಲಿದ್ದ ಗೂಳಿ ಮಾಲೀಕರ ಬಳಿ ಅವುಗಳ ದರಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಳು. ಆಗ ಹಿಂದಿನಿಂದ ಬಂದ ಗೂಳಿಯೊಂದು ಆಕೆಯನ್ನು ಗುದ್ದಿದೆ. ಇದರಿಂದ ಆಕೆ ಕಿರುಚುತ್ತಾ ಓಡಿದ್ದಾಳೆ. ಅವಳ ಕೈಯಲ್ಲಿದ್ದ ಮೈಕ್ ಗೂಳಿಯ ಕೊಂಬಿನಲ್ಲಿ ಸಿಲುಕಿಕೊಂಡಿದ್ದು, ನಂತರ ಅದನ್ನು ಒಬ್ಬ ವ್ಯಕ್ತಿಯೊಬ್ಬರು ತೆಗೆದು ಕೊಟ್ಟಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಇದಕ್ಕೆ 2,89,000ಕ್ಕೂ ಹೆಚ್ಚು ವೀವ್ಸ್ ಬಂದಿದೆ. ಈ ವೀಡಿಯೊ ಬಗ್ಗೆ ಹಲವಾರು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಅನಿರೀಕ್ಷಿತ ಘಟನೆಯಾಗಿದ್ದು, ಇಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ವರದಿಗಾರ್ತಿ ಸಂಯಮ ಕಾಪಾಡಿಕೊಂಡಿದ್ದಕ್ಕೆ ನೆಟ್ಟಿಜನ್ ಒಬ್ಬರು ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಇನ್ನೊಬ್ಬರು ಇಷ್ಟಾದರೂ ಕ್ಯಾಮೆರಾ ಮ್ಯಾನ್ ಸಹಾಯಕ್ಕೆ ಬರಲಿಲ್ಲವೆಂದು ಆತನ ಬಗ್ಗೆ ಟೀಕೆ ಮಾಡಿದ್ದಾರೆ. ಈ ವಿಡಿಯೊದಲ್ಲಿ ಮಾಹಿತಿ ಸಿಗುತ್ತದೆ ಎಂದು ನೋಡಿದರೆ ಅಲ್ಲಿ ದೊಡ್ಡ ತಿರುವು ಎದುರಾಗಿದೆ ಎಂದು ಇನ್ನೊಬ್ಬ ನೆಟ್ಟಿಜನ್ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಯಗೊಂಡು ರಸ್ತೆಯಲ್ಲಿ ಪರದಾಡುತ್ತಿದ್ದ ಜೈನ ಸನ್ಯಾಸಿಗಳಿಗೆ ನೆರವಾದ ಮಹಾರಾಷ್ಟ್ರ ಸಿಎಂ

ಗೂಳಿಗಳ ಆಕ್ರಮಣ ಪ್ರಕರಣ ಇತ್ತೀಚೆಗೆ ಕೆಲವು ಕಡೆ ಕಂಡುಬರುತ್ತಿದೆ. ಈ ಹಿಂದೆ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಗೂಳಿಯೊಂದು ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಹಾಲಕ್ಷ್ಮಿ ಲೇಔಟ್ ಈಜುಕೊಳ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಪ್ರದರ್ಶನಕ್ಕಾಗಿ ಅಲಂಕರಿಸಿದ್ದ ಗೂಳಿ ಬೈಕ್ ಸವಾರನ ಮೇಲೆ ದಾಳಿ ಮಾಡಿದೆ. ಗೂಳಿಯ ಹೊಡೆತದಿಂದ ವ್ಯಕ್ತಿ ಟ್ರಕ್‌ನ ಚಕ್ರಗಳ ಅಡಿಯಲ್ಲಿ ಬಿದ್ದಿದ್ದರು. ಅದೃಷ್ಟವಶಾತ್, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದರು. ಹಾಗೇ ಈ ಹಿಂದೆ ಜೂನ್ 16ರಂದು ಗುಜರಾತ್ ನ ಮೊದಸಾದಲ್ಲಿ ಬೈಕ್ ನಲ್ಲಿ ಪತಿಯ ಜೊತೆ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಬೀಡಾಡಿ ಹಸುವೊಂದು ಬೆನ್ನಟ್ಟಿ ಗುದ್ದಿತ್ತು. ಆಕೆಗೆ ಗಂಭೀರ ಗಾಯಗಳಾಗಿದ್ದವು.

Continue Reading

ವೈರಲ್ ನ್ಯೂಸ್

Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Viral News: ಜೂನ್ 2ರಂದು ಮೊದಲ ಬಾರಿ ಮನೆಯಲ್ಲಿ ಮಲಗಿದ್ದಾಗ ವಿಕಾಸ್ ದುಬೆ ಅವರಿಗೆ ಹಾವು ಕಚ್ಚಿತ್ತು. ಹಾವು ಕಚ್ಚಿದ ತಕ್ಷಣ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ವಿಕಾಸ್ ದುಬೆ ಮನೆಗೆ ಹಿಂದಿರುಗಿದ್ದರು. ನಂತರ ಜೂನ್ 10ರಂದು ಎರಡನೇ ಬಾರಿ ಹಾವು ಕಚ್ಚಿದೆ. ಕೂಡಲೇ ಪೋಷಕರು ಅದೇ ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖರಾಗಿ ಬಂದ ಬಳಿಕ ಮನೆಗೆ ಬಂದ ವಿಕಾಸ್ ದುಬೆ ಬಹಳ ಭಯಭೀತರಾಗಿದ್ದರು.

VISTARANEWS.COM


on

Snake Bites
Koo

ಉತ್ತರಪ್ರದೇಶ: ವ್ಯಕ್ತಿಯೊಬ್ಬನಿಗೆ ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಚ್ಚಿದ್ದು(Snake Bite), ಪವಾಡವೆನ್ನುವಂತೆ ಆತ ಅಪಾಯದಿಂದ ಪಾರಾಗಿರುವ ಘಟನೆ(Viral News) ಉತ್ತರಪ್ರದೇಶದಲ್ಲಿ ನಡೆದಿದೆ. ಫತ್ಹೇಪುರ ನಿವಾಸಿ ವಿಕಾಸ್ ದುಬೆ ಎಂಬವರಿಗೆ 45 ದಿನದಲ್ಲಿ 5 ಬಾರಿ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಶೀಘ್ರದಲ್ಲಿಯೇ ಚಿಕಿತ್ಸೆ ಪಡೆದುಕೊಂಡ ಪರಿಣಾಮ ವಿಕಾಸ್ ದುಬೆ ಜೀವ ಉಳಿದಿದೆ. ಇನ್ನು ಈ ರೀತಿಯಾಗಿ ಒಬ್ಬನ್ನೇ ವ್ಯಕ್ತಿ ಪದೇ ಪದೆ ಹಾವು ಕಡಿತಕ್ಕೆ ಒಳಗಾಗುತ್ತಿರುವ ಸಂಗತಿ ಕೇಳಿ ವೈದ್ಯರು ಮಾತ್ರವಲ್ಲದೇ ಸ್ಥಳೀಯರು ಶಾಕ್‌ ಆಗಿದ್ದಾರೆ.

ಜೂನ್ 2ರಂದು ಮೊದಲ ಬಾರಿ ಮನೆಯಲ್ಲಿ ಮಲಗಿದ್ದಾಗ ವಿಕಾಸ್ ದುಬೆ ಅವರಿಗೆ ಹಾವು ಕಚ್ಚಿತ್ತು. ಹಾವು ಕಚ್ಚಿದ ತಕ್ಷಣ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ವಿಕಾಸ್ ದುಬೆ ಮನೆಗೆ ಹಿಂದಿರುಗಿದ್ದರು. ನಂತರ ಜೂನ್ 10ರಂದು ಎರಡನೇ ಬಾರಿ ಹಾವು ಕಚ್ಚಿದೆ. ಕೂಡಲೇ ಪೋಷಕರು ಅದೇ ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖರಾಗಿ ಬಂದ ಬಳಿಕ ಮನೆಗೆ ಬಂದ ವಿಕಾಸ್ ದುಬೆ ಬಹಳ ಭಯಭೀತರಾಗಿದ್ದರು. ಅದೂ ಅಲ್ಲದೇ ಒಬ್ಬರೇ ಇರುವುದಕ್ಕೆ ಭಯ ಬಿದ್ದು ವಿಕಾಸ್ ಸ್ವಂತ ಮನೆ ತೊರೆದು ಚಿಕ್ಕಮ್ಮನ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ ಅಲ್ಲಿಯೂ ವಿಷಕಾರಿ ಹಾವು ಕಚ್ಚಿದೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ವಿಕಾಸ್ ದುಬೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವು ಕಚ್ಚುವ ಭಯದಿಂದ ಸದಾ ಜನರೊಂದಿಗೆ ವಿಕಾಸ್ ಇರಿಸಲು ಆರಂಭಿಸಿದರು. ರಾತ್ರಿ ಮಲಗುವ ಸ್ಥಳದಲ್ಲಿ ಹಾವು ಬರದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು. ಇಷ್ಟೆಲ್ಲಾ ವ್ಯವಸ್ಥೆ ಮಾಡಿಕೊಂಡರೂ ಜೂನ್ 17ರಂದು ಮನೆಯಲ್ಲಿಯೇ ಮೂರನೇ ಬಾರಿ ಹಾವು ಕಚ್ಚಿದೆ. ನಂತರ ಚಿಕಿತ್ಸೆ ಪಡೆದು ಹಿಂದಿರುಗಿ ಬರುತ್ತಿದ್ದಂತೆ ನಾಲ್ಕನೇ ಬಾರಿ ಹಾವು ಕಚ್ಚಿದೆ. ಮತ್ತೆ ಚಿಕಿತ್ಸೆ ವಿಕಾಸ್ ದುಬೆ ಅವರಿಗೆ ಚಿಕಿತ್ಸೆ ಕೊಡಿಸಲಾಯ್ತು. ನಂತರ ಗ್ರಾಮದ ಹಿರಿಯರು ಸಲಹೆ ಮೇರೆಗೆ ವಿಕಾಸ್ ದುಬೆ ಅವರನ್ನು ರಾಧಾ ನಗರದಲ್ಲಿರುವ ಅವರ ಚಿಕ್ಕಮ್ಮನ ಮನೆಗೆ ಕಳುಹಿಸಲಾಗಿತ್ತು. ಆದರೆ ಅಲ್ಲಿಯೂ ವಿಕಾಸ್‌ ದುಬೆಗೆ ಐದನೇ ಬಾರಿ ಹಾವು ಕಚ್ಚಿದೆ.

ಇನ್ನು ಘಟನೆ ಬಗ್ಗೆ ವೈದ್ಯರು ಪ್ರತಿಕ್ರಿಯಿಸಿದ್ದು, ಇದೊಂದು ವಿಚಿತ್ರ ಘಟನೆಯಾಗಿದೆ. ಮೂರನೇ ಬಾರಿ ಹಾವು ಕಚ್ಚಿದಾಗ ಊರು ತೊರೆಯುವಂತೆ ಸಲಹೆ ನೀಡಿದ್ದೆ. ಆದರೂ ಮತ್ತೆ ಹಾವು ಕಚ್ಚಿದೆ. ಸದ್ಯ ವಿಕಾಸ್ ದುಬೆ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಇಂತಹದ್ದೇ ಒಂದು ಘಟನೆ ರಾಜಸ್ಥಾನದಲ್ಲಿ ನಡೆದಿತ್ತು. ಹಾವಿನ ಬಳಿ ಕಚ್ಚಿಸಿಕೊಂಡು ಹಾಗೋ-ಹೀಗೋ ಬದುಕಿ ಉಳಿದಿದ್ದವನ ಜೀವ ಹಾವಿನಿಂದಲೇ ಹೋಗಿದೆ. ಹೀಗೊಂದು ವಿಚಿತ್ರ ಘಟನೆ ರಾಜಸ್ಥಾನದ ಜೋಧ್​ಪುರದ (Rajasthan News) ಮೆಹ್ರಾನ್ ಗಢ್​​ನಲ್ಲಿ ನಡೆದಿತ್ತು. 44 ವರ್ಷದ ಜಸಬ್​ ಖಾನ್​ ಎಂಬುವರಿಗೆ ಒಂದು ಹಾವು ಕಚ್ಚಿತ್ತು. ಕಚ್ಚಿದ್ದು ವಿಷಕಾರಿ ವೈಪರ್ ಹಾವು. ಹೀಗಾಗಿ ಜಸಬ್​ ಖಾನ್​ ಕೂಡಲೇ ಪೋಖ್ರಾನ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ಆದರೆ ಅದಾಗಿ ಒಂದೇ ವಾರದಲ್ಲಿ ಜಸಬ್ ಖಾನ್ ಪ್ರಾಣ ಹಾವಿನಿಂದಲೇ ಹೋಗಿದೆ. ಜೂ.26ರಂದು ಮತ್ತೆ ಅವರಿಗೆ ಮನೆ ಬಳಿಯೇ ಹಾವು ಕಡಿದಿದೆ. ಜೂ.20ರಂದು ಕಚ್ಚಿದ ಹಾವೇ ಕಚ್ಚಿತಾ? ಅಥವಾ ಬೇರೆ ಹಾವು ಕಚ್ಚಿದ್ದಾ? ಎಂಬುದು ಗೊತ್ತಿಲ್ಲ. ಆದರೆ ಎರಡನೇ ಸಲವೂ ಕೂಡ ಕಡಿದಿದ್ದು ವಿಷಕಾರಿ ವೈಪರ್​. ಮೊದಲ ಸಲ ಹಾವಿನ ಬಳಿ ಕಚ್ಚಿಸಿಕೊಂಡು ಬದುಕುಳಿದಿದ್ದ ಜಸಬ್ ಈ ಸಲ ಬದುಕಲಿಲ್ಲ. ಜೋಧಪುರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಜಸಬ್​ ಮೃತಪಟ್ಟಿದ್ದಾರೆ.

ಇದನ್ನೂ ಓದಿ:Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Continue Reading
Advertisement
ಆಟೋಮೊಬೈಲ್46 mins ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ2 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ2 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ3 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ3 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ4 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ5 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest5 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ5 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ5 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌