Mahesh Babu | ಸಿನಿಮಾದಿಂದ ದೂರ ಉಳಿಯಲು ಕಾರಣ ಮಹೇಶ್‌ ಬಾಬು ಎಂದ ಪತ್ನಿ ನಮ್ರತಾ - Vistara News

ಟಾಲಿವುಡ್

Mahesh Babu | ಸಿನಿಮಾದಿಂದ ದೂರ ಉಳಿಯಲು ಕಾರಣ ಮಹೇಶ್‌ ಬಾಬು ಎಂದ ಪತ್ನಿ ನಮ್ರತಾ

ವೈಯಕ್ತಿಕ ವಿಚಾರಗಳನ್ನು ಸಂದರ್ಶನವೊಂದರಲ್ಲಿ ಮಹೇಶ್‌ ಬಾಬು (Mahesh Babu) ಪತ್ನಿ ನಮ್ರತಾ ಶಿರೋಡ್ಕರ್ ಹೇಳಿಕೊಂಡಿದ್ದಾರೆ.

VISTARANEWS.COM


on

Mahesh Babu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಪತ್ನಿ ನಮ್ರತಾ ಶಿರೋಡ್ಕರ್ ಸ್ಟಾರ್ ನಟಿಯಾಗಿ ಸಿನಿ ಜಗತ್ತಿನಲ್ಲಿ ಮಿಂಚಿದವರು. ಇದೀಗ ತಮ್ಮ ವೈಯಕ್ತಿಕ ವಿಚಾರಗಳನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಮಹೇಶ್‌ ಬಾಬು ಅವರಿಗೋಸ್ಕರವಾಗಿ ಸಿನಿ ಜೀವನವನ್ನೇ ತ್ಯಾಗ ಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಮಹೇಶ್ ಅವರ ಬಾಳಸಂಗಾತಿಯಾದ ನಂತರ ನಮ್ರತಾ ಸಿನಿಮಾ ಕ್ಷೇತ್ರಕ್ಕೆ ವಿದಾಯ ಹೇಳಬೇಕಾಯಿತು ಎಂದು ತಿಳಿಸಿದ್ದಾರೆ. ʻʻವಿವಾಹ ಆದ ನಂತರವೂ ಹಲವಾರು ಆಫರ್‌ಗಳು ಬಂದಿತ್ತು. ಒಳ್ಳೊಳ್ಳೆ ಸಿನಿಮಾಗಳನ್ನು ನಾನು ಬಿಟ್ಟೆ. ಆ ಬಗ್ಗೆ ನನಗೆ ಸ್ವಲ್ಪವೂ ಬೇಸರವಿಲ್ಲ. ನನಗೆ ಮಹೇಶ್‌ ಅವರು ತುಂಬಾ ಮುಖ್ಯವಾಗಿದ್ದರು. ನಮ್ಮಲ್ಲಿ ಭಿನ್ನಾಭಿಪ್ರಾಯ ಒಂದೇ ಅದು ಮಕ್ಕಳ ವಿಚಾರಕ್ಕೆ. ಮಕ್ಕಳಾದ ಗೌತಮ್ ಹಾಗೂ ಸಿತಾರಾ ವಿಷಯದಲ್ಲಿ ನಾವು ಸಾಮಾನ್ಯವಾಗಿ ಜಗಳಾಡುತ್ತೇವೆ. ಅಂತೆಯೇ ನಮ್ಮ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿವೆʼʼ ಎಂಬುದನ್ನು ಹೇಳಿದ್ದಾರೆ.

ಇದನ್ನೂ ಓದಿ | ಮಹೇಶ್‌ ಬಾಬು ತಂದೆ ನಟ ಕೃಷ್ಣಗೆ ಹೃದಯಾಘಾತ, ಗಂಭೀರ ಸ್ಥಿತಿಯಲ್ಲಿ ವೆಂಟಿಲೇಟರ್‌ಗೆ

Mahesh Babu

ʻʻಗೌತಮ್‌ ಹುಟ್ಟಿದ ನಂತರ ನಾವು ಮಗು ಬೇಡ ಎಂದು ನಿರ್ಧಾರ ಮಾಡಿದ್ದೆವು. ಆದರೆ, ಸಿತಾರಾ ಇಲ್ಲದೆ ನಮ್ಮ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲʼʼ ಎಂಬುದು ನಮ್ರತಾ ಮಾತಾಗಿದೆ. ‘ಜಬ್ ಪ್ಯಾರ್ ಕಿಸಿಸೇ ಹೋತಾ ಹೈ’ ಚಿತ್ರದ ಪುಟ್ಟ ಪಾತ್ರದ ಮೂಲಕ ನಮ್ರತಾ ಚಿತ್ರರಂಗಕ್ಕೆ ಪರಿಚಿತರಾಗಿದ್ದರು. ಅದಕ್ಕೂ ಮುನ್ನ ಬಾಲನಟಿಯಾಗಿಯೂ ಬಣ್ಣ ಹಚ್ಚಿದ್ದರು. ತೆಲುಗಿನಲ್ಲಿ ‘ವಂಶಿ’ ನಮ್ರತಾ ನಟಿಸಿದ ಮೊದಲ ಚಿತ್ರ. ‘ಹೆರಾ ಪೇರಿ’, ‘ಅಸ್ತಿತ್ವ’, ‘ಅಂಜಿ’ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದರು. ಕನ್ನಡದ ‘ಚೋರ ಚಿತ್ತ ಚೋರ’ ಚಿತ್ರದಲ್ಲಿ ನಮ್ರತಾ, ಕ್ರೇಜಿಸ್ಟಾರ್ ರವಿಚಂದ್ರನ್ ಜೋಡಿಯಾಗಿ ಮಿಂಚಿದ್ದರು.

ಇದನ್ನೂ ಓದಿ | ಮಹೇಶ್‌ ಬಾಬು ತಂದೆ ನಟ ಕೃಷ್ಣ ಹೃದಯಸ್ತಂಭನದಿಂದ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

Kalki 2898 AD: ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

VISTARANEWS.COM


on

Koo

ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು (Kalki 2898 AD) ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ನಟಿಸಿದ ಈ ಚಿತ್ರ ಮೂರು ದಿನಗಳಲ್ಲಿ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 220 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಎರಡನೇ ದಿನ 57.6 ಕೋಟಿ ರೂ. ಭಾರತದಲ್ಲಿ ಗಳಿಕೆ ಕಂಡಿತ್ತು. ನಿನ್ನೆ ಅಂದರೆ ಮೂರನೇ ದಿನ 67.1 ಕೋಟಿ ರೂ. ಗಳಿಸಿ, ಒಟ್ಟು 220 ಕೋಟಿ ವರೆಗೆ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಈ ಚಿತ್ರವು ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಎರಡು ದಿನಗಳಲ್ಲಿ 298.5 ಕೋಟಿ ರೂ. ಗಳಿಸಿದೆ. ಭಾನುವಾರದಂದು (ಇಂದು) ಚಿತ್ರ ಯಾವ ರೀತಿ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಗಿದೆ.

ಭಾರತದಲ್ಲಿ ಕೇವಲ ಮೂರು ದಿನಕ್ಕೆ 200 ಕೋಟಿ ಕಲೆಕ್ಷನ್ ಅನ್ನು ದಾಟಿದೆ. ಭಾರತದಲ್ಲಿ ಮೂರು ದಿನದಲ್ಲಿ ‘ಕಲ್ಕಿ’ ಸಿನಿಮಾ ಸುಮಾರು 225 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ಕಮಲ್, “ಭಾರತೀಯ ಸಿನಿಮಾ ಜಾಗತಿಕವಾಗಿ ಮನರಂಜನೆ ನೀಡುತ್ತಿದೆ. ಅವುಗಳಲ್ಲಿ ಕಲ್ಕಿ 2898 ಎಡಿ ಸಿನಿಮಾ ಕೂಡ. ನಾಗ್ ಅಶ್ವಿನ್ ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪುರಾಣದ ವಿಷಯವನ್ನು ಎಚ್ಚರಿಕೆಯಿಂದ ನಿಭಾಯಿಸಿದ್ದಾರೆ. ಪ್ರಪಂಚದಾದ್ಯಂತ, ಜಪಾನ್, ಚೀನಾ ಮತ್ತು ಗ್ರೀಕ್ ನಾಗರಿಕತೆಗಳು ಮಾತ್ರ ಭಾರತೀಯ ಪರಂಪರೆಯ ಕಥಾಹಂದರದ ಹತ್ತಿರ ಬರಬಹುದು. ಅಶ್ವಿನ್ ಅದರಲ್ಲಿ ಕಥೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಮತ್ತು ಎಲ್ಲರನ್ನು ಒಟ್ಟಿಗೆ ಸೇರಿಸುವ ಮೂಲಕ ಹೆಚ್ಚು ತಾಳ್ಮೆಯಿಂದ ನಿಭಾಯಿಸಿದ್ದಾರೆʼʼಎಂದರು.

ಇದನ್ನೂ ಓದಿ: Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!


ಚಿತ್ರದಲ್ಲಿ ಪ್ರಭಾಸ್ ಭೈರವನಾಗಿ, ದೀಪಿಕಾ SUM-80 ಆಗಿ, ಅಮಿತಾಭ್‌ ಅಶ್ವತ್ಥಾಮನಾಗಿ ಮತ್ತು ಕಮಲ್ ಸುಪ್ರೀಂ ಯಾಸ್ಕಿನ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ದಿಶಾ ಪಟಾನಿ ರಾಕ್ಸಿಯಾಗಿ ನಟಿಸಿದ್ದಾರೆ. ವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್, ದುಲ್ಕರ್ ಸಲ್ಮಾನ್, ಫರಿಯಾ ಅಬ್ದುಲ್ಲಾ ಮತ್ತು ಇತರರು ಅತಿಥಿ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading

ಸಿನಿಮಾ

Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Varalaxmi Sarathkumar: ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Varalaxmi Sarathkumar invite PM Narendra Modi for wedding
Koo

ಬೆಂಗಳೂರು: ತಮಿಳು-ತೆಲುಗು ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಅವರು ತಮ್ಮ ಮದುವೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು. ಭಾವಿ ಪತಿ ನಿಕೋಲಾಯ್ ಜತೆ ವರಲಕ್ಷ್ಮಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಫೋಟೊಗೆ ಪೋಸ್‌ ಕೊಟ್ಟಿದ್ದಾರೆ. ವರಲಕ್ಷ್ಮಿ ಅವರು ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಸೆಲ್ಫಿ ಸೇರಿದಂತೆ ಹಲವಾರು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ʻʻನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದೆವು. ಅವರನ್ನು ಆಹ್ವಾನಿಸಿದ್ದು ನಮ್ಮ ಭಾಗ್ಯ. ನಿಮ್ಮ ಬ್ಯುಸಿ ಶೆಡ್ಯೂಲ್‌ನ ಹೊರತಾಗಿಯೂ ನಮ್ಮೊಂದಿಗೆ ಸಮಯ ಕಳೆದಿದ್ದೀರಿ. ನಿಜವಾಗಿಯೂ ಗೌರವ ಇದುʼʼಎಂದು ಬರೆದುಕೊಂಡಿದ್ದಾರೆ. ಈ ಮೊದಲು ರಜನಿಕಾಂತ್, ಅವರ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರನ್ನು ಭೇಟಿಯಾಗಿ ಕರೆಯೋಲೆ ನೀಡಿದ್ದರು.

ವರಲಕ್ಷ್ಮಿ ಶರತ್‌ಕುಮಾರ್ ಜತೆ ತಂದೆ ಶರತ್‌ಕುಮಾರ್, ತಾಯಿ ಮತ್ತು ಸಹೋದರಿ ಸೇರಿ ಇಡೀ ಕುಟುಂಬವೇ ಜತೆಗೆ ಇತ್ತು. ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜುಲೈ 2ರಂದು ಜೋಡಿ ವಿವಾಹವಾಗಲಿದೆ.

ಇದನ್ನೂ ಓದಿ: Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಟಾಲಿವುಡ್

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

Kalki 2898 AD: ಎಸ್‌ಎಸ್ ರಾಜಮೌಳಿ, ಅವರ ಮಗ ಎಸ್‌ಎಸ್ ಕಾರ್ತಿಕೇಯ ಮತ್ತು ವಿಜಯ್ ದೇವರಕೊಂಡ ಮುಂತಾದವರು ಚಿತ್ರದ ಬಗ್ಗೆ ಈಗಾಗಲೇ ಪ್ರಶಂಸೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲ ಅನೇಕ ನಟರುಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಯಶ್‌ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.

VISTARANEWS.COM


on

Kalki 2898 AD Yash calls visually stunning spectacle
Koo

ಬೆಂಗಳೂರು: ವಿಶ್ವದಾದ್ಯಂತ (world) ಅದ್ಧೂರಿಯಾಗಿ ಬಿಡುಗಡೆಯಾದ 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ (Kalki 2898 AD 2) ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲ ಅನೇಕ ನಟರುಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಯಶ್‌ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.

ಶುಕ್ರವಾರ ಸಿನಿಮಾ ಬಗ್ಗೆ ಯಶ್ ಟ್ವೀಟ್‌ ಮಾಡಿ, “ಕಣ್ಣಿಗೆ ಹಬ್ಬವಾಗುವ ರೀತಿಯಲ್ಲಿ ಸೃಷ್ಟಿಸಿದ ಕಲ್ಕಿ 2898AD ತಂಡಕ್ಕೆ ಅಭಿನಂದನೆಗಳು! ಈ ಚಿತ್ರವು ಹೆಚ್ಚು ಸೃಜನಶೀಲ ಕಥೆಯನ್ನು ಹೇಳಲು ದಾರಿ ಮಾಡಿಕೊಡುತ್ತದೆ. ನಾಗ್‌ ಅಶ್ವಿನ್‌ ಮತ್ತು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸ್ಫೂರ್ತಿ ನೀಡಿದೆ. ಡಾರ್ಲಿಂಗ್ ಪ್ರಭಾಸ್‌, ಅಮಿತಾಭ್‌, ದೀಪಿಕಾ, ಕಮಲ್‌ ಹಾಸನ್‌ ಹಾಗೇ ಕೆಲವು ಅತಿಥಿ ಪಾತ್ರಗಳನ್ನು ಒಟ್ಟಿಗೆ ನೋಡುವುದು ಒಂದು ಅದ್ಭುತ ಅನುಭವವಾಗಿದೆ. . ಇಂಥಹಾ ಒಂದು ಅದ್ಭುತವಾದ ಸಿನಿಮಾವನ್ನು ಪ್ರೇಕ್ಷಕರ ಎದುರು ತಂದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ಈ ಸಿನಿಮಾ ನಿಜಕ್ಕೂ ಬೆಳ್ಳಿತೆರೆಯನ್ನು ಬೆಳಗಿಸುತ್ತಿದೆ’ ಎಂದಿದ್ದಾರೆ.

ಎಸ್‌ಎಸ್ ರಾಜಮೌಳಿ, ಅವರ ಮಗ ಎಸ್‌ಎಸ್ ಕಾರ್ತಿಕೇಯ ಮತ್ತು ವಿಜಯ್ ದೇವರಕೊಂಡ ಮುಂತಾದವರು ಚಿತ್ರದ ಬಗ್ಗೆ ಈಗಾಗಲೇ ಪ್ರಶಂಸೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ. ಮಾತ್ರವಲ್ಲದೆ ಇದೀಗ ಚಿತ್ರ ತಂಡ ಪ್ರೇಕ್ಷಕರಿಗೆ ಇನ್ನೊಂದು ಸಿಹಿ ಸುದ್ದಿಯನ್ನೂ ನೀಡಿದೆ.

ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಮಹಾಕಾವ್ಯವನ್ನು ಆಧರಿಸಿದ ಚಿತ್ರವೂ ಸಂಪೂರ್ಣವಾಗಿ ತೆರೆದುಕೊಳ್ಳಲು ಒಂದಕ್ಕಿಂತ ಹೆಚ್ಚು ಕಂತುಗಳ ಅಗತ್ಯವಿದೆ ಎಂದು ನಿರ್ದೇಶಕ ನಾಗ್ ಅಶ್ವಿನ್ ಕೂಡ ದೃಢಪಡಿಸಿದ್ದಾರೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

Continue Reading

ಟಾಲಿವುಡ್

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

Kalki 2898 AD: ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kalki 2898 AD box office day 2 prediction Prabhas
Koo

ಬೆಂಗಳೂರು: ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ (Kalki 2898 AD) ಮತ್ತು ಕಮಲ್ ಹಾಸನ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿತ್ತು. ಎರಡನೇ ದಿನ ಭಾರದಲ್ಲಿ ಸುಮಾರು 50 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ. ಒಟ್ಟು ಸಂಗ್ರಹ 150 ಕೋಟಿ ರೂ. ಆಗಿದೆ ಎಂದು ವರದಿಯಾಗಿದೆ. ಈ ಮೂಲಕ ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರವೂ ಸೇರಿದರೆ ಸಿನಿಮಾದ ಒಟ್ಟಾರೆ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ.

ಶನಿವಾರದಿಂದ ಸಿನಿಮಾ ಕಲೆಕ್ಷನ್‌ನಲ್ಲಿ ಹೆಚ್ಚಾಗುವ ನಿರೀಕ್ಷೆಯಿದೆ. ಈ ಮುಂಚೆ ಸಲಾರ್‌ ಸಿನಿಮಾ ಎರಡನೇ ದಿನ 147.05 ಕೋಟಿ ರೂ. ಗಳಿಕೆ ಕಂಡಿತ್ತು. ‘ಬಾಹುಬಲಿ 2’ ಎರಡನೇ ದಿನದಲ್ಲಿ 90 ಕೋಟಿ ರೂ. ‘ಆದಿಪುರುಷ’ 2ನೇ ದಿನದಲ್ಲಿ 65.25 ಕೋಟಿ ರೂ ಕಲೆಕ್ಷನ್‌ ಮಾಡಿತ್ತು. ಇವುಗಳಿಗೆ ಹೋಲಿಸಿದರೆ ಕಲ್ಕಿ ಎರಡನೇ ದಿನ ಸಂಗ್ರಹ ಮಾಡಿದ್ದು ತುಂಬಾ ಕಡಿಮೆಯಾಗಿದೆ.

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿತ್ತು, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿತ್ತು. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿತ್ತು. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿತ್ತು. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.’

ಇದನ್ನೂ ಓದಿ: Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

ಕಲ್ಕಿಯ ಆಗಮನವು ಹಿಂದೂಗಳಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಈತ ಕಲಿಯುಗದ ಅಂತ್ಯದಲ್ಲಿ ಕಾಣಿಸಿಕೊಳ್ಳುತ್ತಾನೆ ಎಂದೇ ಭಾವಿಸಲಾಗಿದೆ. ಕಲಿಯುಗ ವಂಚನೆ, ಪಾಪ ಮತ್ತು ಅನೈತಿಕತೆಯಿಂದ ತುಂಬಿರುವ ಯುಗವಾಗಿದೆ. ಇದೀಗ ತೆರೆಗೆ ಬಂದಿರುವ ‘ಕಲ್ಕಿ 2898 ಎಡಿ’ ಈ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ತೆಲುಗು ಸೂಪರ್‌ಸ್ಟಾರ್ ಪ್ರಭಾಸ್, ಬಾಲಿವುಡ್ ತಾರೆಗಳಾದ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ತಮಿಳಿನ ಹಿರಿಯ ನಟ ಕಮಲ್ ಹಾಸನ್ ಒಳಗೊಂಡ ಈ ಚಿತ್ರದಲ್ಲಿ ಪೌರಾಣಿಕ ಕಥೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ಅದ್ಭುತವಾಗಿ ನಿರ್ಮಿಸಲಾಗಿದೆ. ನಾಗ್ ಅಶ್ವಿನ್ ನಿರ್ದೇಶನದ ಬಹುತೇಕ ಎಲ್ಲಾ ಪ್ರಮುಖ ಪಾತ್ರಗಳನ್ನು ಹಿಂದೂ ಧರ್ಮಗ್ರಂಥಗಳಲ್ಲಿ ಗುರುತಿಸಬಹುದು. ಟ್ರೇಲರ್‌ನಲ್ಲಿ ಭವಿಷ್ಯ ನುಡಿದ ಕಲ್ಕಿಯ ಗುರುತಿನ ಬಗ್ಗೆ ಅಶ್ವಿನ್ ಯಾವುದೇ ಸುಳಿವು ನೀಡಲಿಲ್ಲ.

Continue Reading
Advertisement
Jay Shah Promise
ಪ್ರಮುಖ ಸುದ್ದಿ4 mins ago

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

snake Bite
ಕಲಬುರಗಿ14 mins ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ32 mins ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ32 mins ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Virat Kohli video calls Anushka Sharma after winning
ಬಾಲಿವುಡ್33 mins ago

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Sabja Seeds Benefits
ಆರೋಗ್ಯ35 mins ago

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Physical Abuse
ಚಿಕ್ಕಬಳ್ಳಾಪುರ44 mins ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Mann Ki Baat
ದೇಶ53 mins ago

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Rahul Dravid
ಕ್ರೀಡೆ55 mins ago

Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

Shiva Rajkumar Tweet About India's T20 Victory about rahul
ಕ್ರಿಕೆಟ್1 hour ago

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌