Panchamasali Reservation | ನಾಳೆ ಪಂಚಮಸಾಲಿ ಮೀಸಲು ಘೋಷಿಸಿದರೆ ಸಿಎಂಗೆ ಸನ್ಮಾನ, ಇಲ್ಲದಿದ್ದರೆ ಅಪಮಾನ: ಶ್ರೀ ಎಚ್ಚರಿಕೆ - Vistara News

ಕರ್ನಾಟಕ

Panchamasali Reservation | ನಾಳೆ ಪಂಚಮಸಾಲಿ ಮೀಸಲು ಘೋಷಿಸಿದರೆ ಸಿಎಂಗೆ ಸನ್ಮಾನ, ಇಲ್ಲದಿದ್ದರೆ ಅಪಮಾನ: ಶ್ರೀ ಎಚ್ಚರಿಕೆ

ಡಿಸೆಂಬರ್‌ 22ರಂದು ಪಂಚಮಸಾಲಿಗಳಿಗೆ ಮೀಸಲಾತಿ (Panchamasali Reservation) ಘೋಷಣೆ ಮಾಡಿದರೆ ಸಿಎಂ ಅವರನ್ನು ಸನ್ಮಾನಿಸಲಾಗುತ್ತದೆ. ಒಂದು ವೇಳೆ ಘೋಷಿಸದೆ ಹೋದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Jaya mruthyunjaya
ಪಂಚಮಸಾಲಿ ಮೀಸಲಾತಿ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧದ ಕಡೆಗೆ ಕಾಲ್ನಡಿಗೆ ಜಾಥಾ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಪಂಚಮಸಾಲಿಗಳ ಮೀಸಲಾತಿ ಹೋರಾಟ (Panchamasali Reservation) ಒಂದು ನಿರ್ಣಾಯಕ ಘಟ್ಟ ತಲುಪಿದಂತೆ ಕಾಣುತ್ತಿದೆ. ಪಂಚಮಸಾಲಿಗಳನ್ನು ೨ಎ ವರ್ಗಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕಳೆದ ಒಂದು ವರ್ಷದಿಂದಲೇ ಹೋರಾಟ ತೀವ್ರವಾಗಿ ನಡೆಯುತ್ತಿದ್ದು, ಹಲವು ಗಡುವುಗಳನ್ನು ದಾಟಿ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮವಾಗಿ ಡಿ.೧೯ರ ಗಡುವನ್ನು ನೀಡಿದ್ದು ಅದು ಕೂಡಾ ಪಾಲನೆಯಾಗಿಲ್ಲ ಎಂದು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರು ಸಿಟ್ಟಿಗೆದ್ದಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಬೆಳಗಾವಿಯಲ್ಲಿ ಪಂಚಮಸಾಲಿ ವಿರಾಟ್‌ ಸಮಾವೇಶವನ್ನು ಆಯೋಜಿಸಿದೆ.

ಗುರುವಾರ ಬೆಳಗಾವಿಯ ಸುವರ್ಣ ಸೌಧ ಬಳಿಯ ರಾಘವೇಂದ್ರ ಬಡಾವಣೆ ಪ್ರದೇಶದಲ್ಲಿ ಬೃಹತ್‌ ಸಮಾವೇಶ ಅಯೋಜಿಸಲಾಗಿದೆ ಎಂದು ಕೂಡಲಸಂಗಮ ಪೀಠದ ಶ್ರೀ ಜಯ ಮೃತುಂಜಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ʻʻಸಮುದಾಯಕ್ಕೆ ಮೀಸಲಾತಿ ಕಲ್ಪಿಸುವುದಕ್ಕಾಗಿ ಶ್ರೀಪೀಠ ಬಿಟ್ಟು ಕಳೆದ ಎರಡು ವರ್ಷದಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನಮ್ಮ ಹೋರಾಟ ಈಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ನಾಳೆ (ಡಿಸೆಂಬರ್‌ ೨೨) ನಮಗೆ ಜಯ ಸಿಗುವ ಸಾಧ್ಯತೆ ಇದೆʼʼ ಎಂದು ಅವರು ಹೇಳಿದ್ದಾರೆ.

ʻʻಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳ ಮನೆಯಲ್ಲಿ ಸಭೆ ನಡೆಸಲಾಗಿತ್ತು. ಆಗ ನೀವು ಬೆಂಗಳೂರಿಗೆ ಬಂದು ಹೋರಾಟ ಮಾಡೋದು ಬೇಡ, ಡಿಸೆಂಬರ್ 19ರೊಳಗೆ ಮೀಸಲಾತಿ ನೀಡುವ ಗಡುವು ಕೊಟ್ಟಿದ್ದರು. ನಾಳೆ (ಡಿಸೆಂಬರ್‌ ೨೨) ಬೆಳಗಾವಿಯಲ್ಲಿ 25 ಲಕ್ಷ ಜನರೊಂದಿಗೆ ಬೃಹತ್ ಸಮಾವೇಶ ನಡೆಯಲಿದೆ. ಒಂದು ವೇಳೆ ಮುಖ್ಯಮಂತ್ರಿಗಳು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಟ್ಟಿರೆ ಇದೇ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಗೆ ಸನ್ಮಾನ ನಡೆಯಲಿದೆ. ಡೈಮಂಡ್ ಕಲ್ಲು ಸಕ್ಕರೆಯ ತುಲಾಭಾರ ಮಾಡುತ್ತೇವೆ. ವಿಜಯಪುರ ಪೇಟ ತೊಡಿಸಿ ಸನ್ಮಾನ ಮಾಡುತ್ತೇವೆ. ಅದೇ ಹೊತ್ತಿಗೆ ಮೀಸಲಾತಿ ಘೋಷಣೆ ಮಾಡದೆ ಹೋದರೆ ಹರಹರ ಮಹಾದೇವ ಎಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಮೀಸಲಾತಿ ‌ಸಿಗುವವರೆಗೆ ಸೌಧದ ಎದುರು ಧರಣಿ ಕುಳಿತುಕೊಳ್ಳುತ್ತೇವೆʼʼ ಎಂದು ಸ್ವಾಮೀಜಿ ಹೇಳಿದರು.

ಮೀಸಲಾತಿ ಕೊಟ್ಟರೆ ಸನ್ಮಾನ ಇಲ್ಲದಿದ್ದರೆ ಅಪಮಾನ
ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ನಾಳೆ ಸಮಾವೇಶ ನಡೆಯುವ ಮುನ್ನ ನಮಗೆ ಮೀಸಲಾತಿ ಸಿಗುವ ವಿಶ್ವಾಸವಿದೆ. ಮೀಸಲಾತಿ ಕೊಟ್ಟರೆ ಸನ್ಮಾನದ ಜೊತೆ ಗೌರವ, ಇಲ್ಲ ಅಂದ್ರೆ ಅಪಮಾನ ಎಂದರು.

ʻʻಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಡಿ.19ರ ಗಡುವು ಕೊಟ್ಟಿದ್ದರು. ಡಿ. 19ರ ಒಳಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ತರೆಸಿಕೊಳ್ಳುತ್ತೇನೆ ಅಂದಿದ್ದರು. ಅವರೇ ಕೊಟ್ಟ ಮಾತನ್ನು ತಿರುಚಿದ್ದಕ್ಕೆ ವಿಷಾದವಿದೆ. ನಿರಾಸೆ ಆದರೂ ಶಾಸಕ ಯತ್ನಾಳ ಮಾತು ಕೇಳಿ ಸರ್ಕಾರದ ಮೇಲೆ ವಿಶ್ವಾಸ ಉಳಿಸಿಕೊಂಡಿದ್ದೇವೆ. ಬೊಮ್ಮಾಯಿ ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಈ ಸಮಾಜದ ಋಣವನ್ನ ತೀರಿಸುತ್ತಾರೆ ಅನ್ನೋ ಭರವಸೆಯಲ್ಲಿ ನಾವಿದ್ದೇವೆ. ಮೀಸಲಾತಿ ಕೊಟ್ಟರೆ ಸನ್ಮಾನ ಇಲ್ಲವಾದರೆ ಅವಮಾನʼʼ ಎಂದು ಹೇಳಿದರು ಕಾಶಪ್ಪನವರ್‌.

ಸಮಾವೇಶ ವಿಫಲಕ್ಕೆ ಸಂಚು?
ʻʻನಾಳೆ ಸಮಾವೇಶಕ್ಕೆ ಜನರು ಬಾರದಂತೆ ತಡೆಯುವ ಪ್ರಯತ್ನ ನಡೆಯುತ್ತಿರುವ ಮಾಹಿತಿ ಬಂದಿದೆ. ಪೊಲೀಸರು ಟೋಲ್ ಬ್ಲಾಕ್ ಮಾಡಲಿದ್ದಾರೆ ಎನ್ನುವ ಸುದ್ದಿ ಇದೆ. ಸಮಾವೇಶಕ್ಕೆ ಹೋಗಬೇಡಿ ಎಂದು ಕೆಲವರು ಹೇಳುತ್ತಿದ್ದಾರಂತೆ. ಅದರೆ, ನೆನಪಿರಲಿ, ಯಾರನ್ನಾದರೂ ಅಡ್ಡಿಪಡಿಸಿದರೆ ಜನರು ಸಹನೆಯನ್ನು ಕಳೆದುಕೊಂಡು ಉಗ್ರ ರೂಪಕ್ಕೆ ತಿರುಗುವ ಸಾಧ್ಯತೆ ಇದೆ. ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಿದರೆ, ಏನಾದ್ರೂ ಅನಾಹುತ ಆದರೆ ಅದಕ್ಕೆ ಸರ್ಕಾರವೇ ಹೊಣೆʼʼ ಎಂದು ಕಾಶಪ್ಪನವರ್‌ ಎಚ್ಚರಿಕೆ ನೀಡಿದ್ದಾರೆ.

ಹಿಂದೆ ಡಿಸಿಎಂ ಆಗಿದ್ದವರಿಂದಲೇ ಅಡ್ಡಿ?
ʻʻಹಿಂದೆ ಡಿಸಿಎಂ ಆಗಿದ್ದವರು ಈಗ ಮೀಸಲಾತಿಗೆ ಅಡ್ಡಿ ಪಡೆಸುತ್ತಿದ್ದಾರೆ. ಸಮಯ ಬಂದಾಗ ಅವರು ಯಾರು ಅಂತ ಹೇಳ್ತೀನಿʼʼ ಎಂದ ಕಾಶಪ್ಪನವರು. ʻʻಮೀಸಲಾತಿ ಕೊಡದೇ ಎಲ್ಲಿ ಹೋಗ್ತಾರೆ, ಹೋಗಲಿ‌ ನೋಡೋಣ. ಮುಂದೆ ಕೆಲವೇ ತಿಂಗಳಲ್ಲಿ ಚುನಾವಣೆ ಇದೆʼʼ ಎಂದು ಎಚ್ಚರಿಕೆ ನೀಡಿದರು ಕಾಶಪ್ಪನವರ್.

ಇದನ್ನೂ ಓದಿ | Panchamasali Reservation | ಸವದತ್ತಿಯಲ್ಲಿ ಬೃಹತ್‌ ಪಂಚಮಸಾಲಿ ಪಾದಯಾತ್ರೆಗೆ ಚಾಲನೆ; ಸುವರ್ಣಸೌಧ ಮುತ್ತಿಗೆಗೆ ನಿರ್ಧಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

Ballari News: ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಇರಿಸಲಾದ ಅನುದಾನದ ಹಗರಣ ಹಾಗೂ ಮುಡಾ ಹಗರಣ ಸೇರಿದಂತೆ ಅನೇಕ ಹಗರಣಗಳಿಂದ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯವೆಸಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ.

VISTARANEWS.COM


on

Former minister B Sriramulu alleged that the Congress government is not interested in the construction of the Kampli bridge
Koo

ಕಂಪ್ಲಿ: ಕಂಪ್ಲಿ ಸೇತುವೆ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು (Ballari News) ಆರೋಪಿಸಿದರು.

ಕಂಪ್ಲಿ ಕೋಟೆಯಲ್ಲಿ ತುಂಗಭದ್ರಾ ಜಲಾಶಯದ ಪ್ರವಾಹದಿಂದ ಸಮಸ್ಯೆ ಅನುಭವಿಸುತ್ತಿರುವ ನದಿ ಪಾತ್ರದ ಜನರ ಮನೆಗಳಿಗೆ ಗುರುವಾರ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಂಪ್ಲಿ ಸೇತುವೆ ನಿರ್ಮಾಣಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 69 ಕೋಟಿ ರೂ. ಅನುದಾನವನ್ನು ತರುವ ಮೂಲಕ ಸೇತುವೆ ನಿರ್ಮಾಣ ವಿಚಾರಕ್ಕೆ ಜೀವ ತರುವಂತಹ ಕೆಲಸ ಮಾಡಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷಗಳಾಗುತ್ತಾ ಬಂದಿದ್ದರೂ ಈ ಕುರಿತು ಚಕಾರ ಎತ್ತದಿರುವುದು ಶೋಚನಿಯ. ಶಾಸಕರು, ಸಂಬಂಧಪಟ್ಟ ಸಚಿವರು ಹಾಗೂ ಸರ್ಕಾರ ಹಿತಾಸಕ್ತಿ ವಹಿಸಿ, ನೂತನ ಸೇತುವೆ ನಿರ್ಮಿಸುವ ಮೂಲಕ ಈ ಭಾಗದ ಜನರಿಗೆ ಅನುಕೂಲತೆ ಕಲ್ಪಿಸಿಕೊಡಬೇಕು ಎಂದರು.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಕಂಪ್ಲಿ-ಸಿರುಗುಪ್ಪ ಭಾಗ ಸೇರಿ ಅಂದಾಜು 1 ಸಾವಿರ ಎಕರೆಯಷ್ಟು ಬೆಳೆ ನಷ್ಟವಾಗಿದ್ದು, ನಮ್ಮ ಭಾಗದ ರೈತರು ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ನಲುಗಿ ಹೋಗಿದ್ದಾರೆ. ಪ್ರವಾಹದ ಭೀಕರತೆಯಿಂದ ನಷ್ಟಕ್ಕೊಳಗಾದ ರೈತರ ಕುರಿತು ವರದಿ ಪಡೆದು ಸರ್ಕಾರದ ಗಮನ ಸೆಳೆಯುವ ಮೂಲಕ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕೋಟೆಯಲ್ಲಿನ ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರವನ್ನು ಗಂಗಾನಗರದ ಶಾಲೆಯೊಂದರಲ್ಲಿ ತೆರೆಯಲಾಗಿದ್ದು, ನಿತ್ಯ ಅಲ್ಲಿಗೆ ಸಂಚರಿಸಲು ಸಮಸ್ಯೆಯಾಗುತ್ತಿದೆ. ಕೋಟೆಯ ಶಾಲೆಯಲ್ಲಿಯೇ ಕಾಳಜಿ ಕೇಂದ್ರ ಆರಂಭಿಸುವಂತೆ ಸ್ಥಳೀಯರು ಬಿ. ಶ್ರೀರಾಮುಲು ಅವರಿಗೆ ಒತ್ತಾಯಿಸಿದರು. ಸ್ಥಳದಲ್ಲಿದ್ದ ತಹಸೀಲ್ದಾರ್‌ಗೆ ಈ ಕುರಿತು ಗಮನ ಹರಿಸಿ ಸ್ಥಳೀಯರಿಗೆ ಅನುಕೂಲವಾಗುವಂತೆ ಸಮೀಪದಲ್ಲೇ ಕಾಳಜಿ ಕೇಂದ್ರ ಆರಂಭಿಸಲು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲಿ ಬೇಕೆಂದರಲ್ಲಿ ಕೊಲೆ, ಸುಲಿಗೆ, ದರೋಡೆ, ಕಳ್ಳತನ ಹಾಗೂ ಎಲ್ಲಾ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಸರ್ಕಾರ ಇದ್ದರೂ ಸತ್ತಂತಿದೆ ಎಂದು ಆರೋಪಿಸಿದ ಅವರು, ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಇರಿಸಲಾದ ಅನುದಾನದ ಹಗರಣ ಹಾಗೂ ಮುಡಾ ಹಗರಣ ಸೇರಿದಂತೆ ಅನೇಕ ಹಗರಣಗಳಿಂದ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯವೆಸಗುತ್ತಿದೆ ಎಂದು ದೂರಿದರು.

ಪಾದಯಾತ್ರೆ ವಿಚಾರ ಕುರಿತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಏನೇ ಹೇಳಿಕೆ ನೀಡಿರಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿನ ಹಗರಣದ ಹೊಣೆ ಹೊತ್ತು ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3 ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸರ್ಕಾರದ ವಿರುದ್ಧವಾಗಿ ಮೈಸೂರಿನಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರ ಅನುವು ನೀಡಿದರು ಸರಿಯೇ ಇಲ್ಲದಿದ್ದರೂ ಸರಿಯೇ ಪಾದಯಾತ್ರೆಯಿಂದ ಹಿಂದೆ ಸರಿಯುವ ಮಾತಿಲ್ಲ. ಅಲ್ಲದೇ ವಾಲ್ಮೀಕಿ ನಿಗಮ ಹಗರಣವನ್ನು ಖಂಡಿಸಿ, ಬಳ್ಳಾರಿಯಿಂದ ಕೂಡಲಸಂಗಮದವರೆಗೂ ಪಾದಯಾತ್ರೆ ನಡೆಸುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಈ ಸಂದರ್ಭದಲ್ಲಿ ಸಿರುಗುಪ್ಪ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ಬಿಜೆಪಿ ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು ಮೋಕಾ, ಕಂಪ್ಲಿ ಮಂಡಲ ಅಧ್ಯಕ್ಷ ಅಳ್ಳಳ್ಳಿ ವೀರೇಶ್, ಮುಖಂಡರಾದ ಪಿ. ಬ್ರಹ್ಮಯ್ಯ, ಬಿ.ಸಿದ್ದಪ್ಪ, ವಿ.ಎಲ್. ಬಾಬು, ಸಿ.ಆರ್. ಹನುಮಂತ, ಆರ್. ಆಂಜನೇಯ, ರಾಮಾಂಜಿನಿ, ಚಂದ್ರಕಾಂತ್ ರೆಡ್ಡಿ, ಕರಿಬಸವರಾಜ್ ಸ್ವಾಮಿ ಸೇರಿದಂತೆ ಇತರರಿದ್ದರು.

Continue Reading

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

Vijayanagara News: ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಗುರುವಾರ ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು.

VISTARANEWS.COM


on

vyasana mukta dinacharane programme in hosapete
Koo

ಹೊಸಪೇಟೆ: ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ಸೇವನೆಯು ಆರೋಗ್ಯಕ್ಕೆ ಹಾನಿಕರವಾಗಿದ್ದು, ಇದನ್ನರಿತು ವಿದ್ಯಾರ್ಥಿ ಯುವಜನರು ಸೇರಿದಂತೆ ಪ್ರತಿಯೊಬ್ಬರು ವ್ಯಸನಮುಕ್ತರಾಗಿ ಮುನ್ನುಗ್ಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. (Vijayanagara News) ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ವಿಜಯನಗರ ಜಿಲ್ಲೆ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಹಯೋಗದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಜ್ಞಾನದ ಕಾರಣದಿಂದಲು ಸಹ ಬಹುತೇಕರು ಒಂದಿಲ್ಲೊಂದು ದುಶ್ಚಟಕ್ಕೆ ಒಳಗಾಗಿರುತ್ತಾರೆ. ಜೀವಕ್ಕೆ ಹಾನಿ ಎಂದು ಗೊತ್ತಿದ್ದು ಬಹುತೇಕರು ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ. ಇದರಿಂದ ವ್ಯಕ್ತಿಯೊಬ್ಬರಷ್ಟೇ ಅಲ್ಲ, ಇಡೀ ಕುಟುಂಬದ ಸ್ವಾಸ್ತ್ಯ ಹಾಳಾಗುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Pralhad Joshi: ಕೇಂದ್ರ ಸರ್ಕಾರದಿಂದ 80 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ; ಪ್ರಲ್ಹಾದ್‌ ಜೋಶಿ

ಸಾರ್ವಜನಿಕರ ಆರೋಗ್ಯವು ಸಹ ದೇಶದ ಅಭಿವೃದ್ಧಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ವಯಸ್ಸಿನ ಮಿತಿಯಿಲ್ಲದೇ ದುಶ್ಚಟಗಳಿಗೆ ದಾಸರಾಗುವುದನ್ನು ತಡೆಯುವ ಕೆಲಸವು ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಹಿಟ್ನಾಳ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಸವರಾಜ ಟಿ.ಎಚ್. ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಪ್ರಾಸ್ತಾವಿಕ ಮಾತನಾಡಿ, ಡಾ.ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಆಂದೋಲನದ ಹರಿಕಾರರಾಗಿದ್ದಾರೆ. ಶ್ರೀಗಳ ಜನ್ಮದಿನದ ನಿಮಿತ್ತ ರಾಜ್ಯ ಸರ್ಕಾರವು ಪ್ರತಿ ವರ್ಷ ಆಗಸ್ಟ್ 1 ಅನ್ನು ವ್ಯಸನ ಮುಕ್ತ ದಿನವನ್ನಾಗಿ ಆಚರಿಸುತ್ತಿದೆ. ವಿದ್ಯಾರ್ಥಿ, ಯುವಜನರು ದುಶ್ಚಟಗಳಿಂದ ದೂರವಾಗಿ ಆರೋಗ್ಯಕರ ಜೀವನ ನಡೆಸುವ ಸಂಕಲ್ಪ ಮಾಡಿ, ಶ್ರೀಗಳು ಹೇಳಿದ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.

ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಮಂಜುನಾಥ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ: kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ವಿವೇಕಾನಂದ ಪಿ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಶಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರಪ್ಪ ಕೆ.ಬಿ., ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿ ಅವಿನಾಶ ಗೋಟಖಿಂಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಮುತ್ತು ದೊಡ್ಡಮನಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

Utthana Katha Spardhe 2024: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ʼಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2024ʼ ಆಯೋಜಿಸಲಾಗಿದ್ದು, ಕಥೆಗಳನ್ನು ತಲುಪಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ. ಕಥಾಸ್ಪರ್ಧೆಯಲ್ಲಿ ಮೊದಲ ಬಹುಮಾನ 15 ಸಾವಿರ ರೂ., 2ನೇ ಬಹುಮಾನ 12 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ಹಾಗೂ ಐದು ಮೆಚ್ಚುಗೆಯ ಬಹುಮಾನಗಳು ತಲಾ 2 ಸಾವಿರ ರೂ. ಇರಲಿದೆ.

VISTARANEWS.COM


on

utthana vaarshika katha spardhe the last date for submission of the story is october 10
Koo

ಬೆಂಗಳೂರು: ಸದಭಿರುಚಿಯ ಮಾಸ ಪತ್ರಿಕೆ ʼಉತ್ಥಾನʼ ವತಿಯಿಂದ ʼಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2024ʼ ಆಯೋಜಿಸಲಾಗಿದ್ದು, ಕಥೆಗಳನ್ನು ತಲುಪಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ. ಕಥಾ ಸ್ಪರ್ಧೆಯಲ್ಲಿ (Utthana Katha Spardhe 2024) ಮೊದಲ ಬಹುಮಾನ 15 ಸಾವಿರ ರೂ., ಎರಡನೇ ಬಹುಮಾನ 12 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ಹಾಗೂ ಐದು ಮೆಚ್ಚುಗೆಯ ಬಹುಮಾನಗಳು ತಲಾ 2 ಸಾವಿರ ರೂ. ಇರಲಿದೆ.

ಕಥಾ ಸ್ಪರ್ಧೆಯ ನಿಯಮಗಳು

ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.

ಬಹುಮಾನಿತ ಕಥೆ ‘ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ.

ಪೋಸ್ಟ್‌ ಮೂಲಕ ಕಳುಹಿಸುವವರು: ಕಾಗದದ ಒಂದೇ ಮಗ್ಗುಲಲ್ಲಿ ಸ್ಪುಟವಾಗಿ ಬರೆದಿರಬೇಕು ಅಥವಾ ವಿರಳವಾಗಿ ಬೆರಳಚ್ಚು ಮಾಡಿರಬೇಕು. ಕಾರ್ಬನ್/ಜೆರಾಕ್ಸ್ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ.

ಇಮೇಲ್‌ ಮೂಲಕ ಕಳುಹಿಸುವವರು: ಕಥೆಯನ್ನು ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ (ವರ್ಡ್ ಮತ್ತು ಪಿಡಿಎಫ್ 2 ರೂಪದಲ್ಲಿ) ಇ-ಮೇಲ್ ಮೂಲಕವೂ ಕಳುಹಿಸಬಹುದು. ಇ-ಮೇಲ್ ವಿಳಾಸ: utthanakathaspardhe@gmail.com

ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು.

ಹಸ್ತಪ್ರತಿಯನ್ನು ಹಿಂದಕ್ಕೆ ಕಳುಹಿಸುವ ಯಾವುದೇ ವ್ಯವಸ್ಥೆ ಇರುವುದಿಲ್ಲ

ಲೇಖಕರು ತಮ್ಮ ಹೆಸರು, ವಿಳಾಸ, ದೂರವಾಣಿ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜತೆಗೆ ಲೇಖಕರ ಭಾವಚಿತ್ರವೂ ಇರಬೇಕು.
ಬಹುಮಾನಿತ ಕಥೆಗಳನ್ನು ಯಾವುದೇ ರೂಪದಲ್ಲಿ, ಯಾವಾಗ ಬೇಕಾದರೂ ಬಳಸುವ ಸಂಪೂರ್ಣ ಹಕ್ಕು ‘ಉತ್ಥಾನ’ದ್ದು.

ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ‘ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರ ವ್ಯವಹಾರ ಸಾಧ್ಯವಾಗದು. ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಕಥೆ ತಲುಪಿಸುವ ವಿಳಾಸ

ಕಥೆಗಳನ್ನು ಅಕ್ಟೋಬರ್‌ 10ರೊಳಗೆ ವಿಳಾಸ: ಸಂಪಾದಕರು, ʼಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2024ʼ ಕೇಶವ ಶಿಲ್ಪ, ಕೆಂಪೇಗೌಡನಗರ, ಬೆಂಗಳೂರು-560004 ಇಲ್ಲಿಗೆ ತಲುಪಿಸಬೇಕು. ಮೊಬೈಲ್‌ 77954 41894, ದೂರವಾಣಿ: 080-26604673 ಇ-ಮೇಲ್: utthanakathaspardhe@gmail.com

Continue Reading

ವಾಣಿಜ್ಯ

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

kotak bank smart watch: ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (ಕೆಎಂಬಿಎಲ್/ಕೋಟಕ್) ಮತ್ತು ಜಿಓಕ್ಯೂಐಐ ಸಹಯೋಗದಲ್ಲಿ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡಲಾಗಿದೆ. ರುಪೇ ಆನ್-ದ-ಗೋ ಮೂಲಕ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ ವಾಚ್ ಮೂಲಕ ಪಿನ್ ಹಾಕದೆಯೇ ರೂ. 5000ವರೆಗಿನ ಕಾಂಟಾಕ್ಟ್ ಲೆಸ್ ಪೇಮೆಂಟ್‌ಗಳನ್ನು ಮಾಡಬಹುದು ಅನ್ನುವುದು ವಿಶೇಷ. ಈ ವಿಶಿಷ್ಟವಾದ ಸ್ಮಾರ್ಟ್ ವಾಚ್‌ನ ಬೆಲೆ 3499 ರೂ. ಆಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

kotak bank smart watch
Koo

ಬೆಂಗಳೂರು: ಡಿಜಿಟಲ್ ಪೇಮೆಂಟ್ ಕ್ಷೇತ್ರದಲ್ಲಿ ಕ್ರಾಂತಿ (kotak bank smart watch) ಮಾಡುವ ನಿಟ್ಟಿನಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (ಕೆಎಂಬಿಎಲ್/ಕೋಟಕ್) ಮತ್ತು ಜಿಓಕ್ಯೂಐಐ ಸಹಯೋಗದಲ್ಲಿ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ವಾಚ್ (Smart Watch) ಬಿಡುಗಡೆ ಮಾಡಲಾಗಿದೆ. ರುಪೇ ಆನ್-ದ-ಗೋ ಮೂಲಕ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ ವಾಚ್ ಮೂಲಕ ಪಿನ್ ಹಾಕದೆಯೇ ರೂ. 5000ವರೆಗಿನ ಕಾಂಟಾಕ್ಟ್ ಲೆಸ್ ಪೇಮೆಂಟ್‌ಗಳನ್ನು ಮಾಡಬಹುದು ಅನ್ನುವುದು ವಿಶೇಷ. ಈ ವಿಶಿಷ್ಟವಾದ ಸ್ಮಾರ್ಟ್ ವಾಚ್‌ನ ಬೆಲೆ 3499 ರೂ. ಆಗಿದೆ.

ಕೋಟಕ್ ಮಹೀಂದ್ರಾ ಬ್ಯಾಂಕ್‌ನ ರಿಟೇಲ್ ಲಯಬಿಲಿಟೀಸ್ ಪ್ರೊಡಕ್ಟ್ ಹೆಡ್ ಆಂಡ್ ಚೀಫ್ ಮಾರ್ಕೆಟಿಂಗ್ ಆಫೀಸರ್ ರೋಹಿತ್ ಭಾಸಿನ್, ಈ ಸ್ಮಾರ್ಟ್ ವಾಚ್ ಉತ್ಪನ್ನವನ್ನು ಬಿಡುಗಡೆ ಮಾಡಿ ಮಾತನಾಡಿ, “ಡಿಜಿಟಲ್ ಪೇಮೆಂಟ್ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ ಉಂಟಾಗಿದೆ. ಗ್ರಾಹಕರು ಪದೇಪದೇ ಕಡಿಮೆ ಮೊತ್ತಗಳನ್ನು ಪಾವತಿ ಮಾಡಲು ನಗದು ರಹಿತ ಪೇಮೆಂಟ್ ವಿಧಾನವನ್ನೇ ಇಷ್ಟ ಪಡುತ್ತಾರೆ. ಅದಕ್ಕಾಗಿಯೇ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ ವಾಚ್ ಅನ್ನು ಬಿಡುಗಡೆ ಮಾಡಿದ್ದು, ಈ ಸಾಧನ ಇದ್ದರೆ ನಗದು, ಕಾರ್ಡ್‌ಗಳು ಅಥವಾ ಸ್ಮಾರ್ಟ್‌ಫೋನ್‌ಗಳು ಬೇಕಾಗಿಯೇ ಇಲ್ಲ. ಈ ಮೂಲಕ ಸುರಕ್ಷಿತ ಮತ್ತು ಸುಲಭ ಬ್ಯಾಂಕಿಂಗ್ ವ್ಯವಸ್ಥೆಯನ್ನು ಒದಗಿಸುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಕೋಟಕ್–ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ವಾಚ್ ಅನ್ನು ಬಳಸುವ ಬಳಕೆದಾರರು ತಮ್ಮ ರಕ್ತದೊತ್ತಡ, ದೇಹದ ಉಷ್ಣತೆ ಮತ್ತು ಎಸ್ ಪಿ ಓ2 ಮಟ್ಟವನ್ನು ತಮ್ಮ ಮಣಿಕಟ್ಟಿನಲ್ಲಿಯೇ ಚೆಕ್ ಮಾಡಬಹುದು. ಜತೆಗೆ ಈ ಸ್ಮಾರ್ಟ್ ವಾಚ್ ಬಳಕೆದಾರ ಸ್ನೇಹಿ ಇಂಟರ್ಫೇಸ್ ಹೊಂದಿದ್ದು, ಸುಲಭವಾಗಿ ಪಾವತಿ ಮಾಡಲು ಅನುವು ಮಾಡಿಕೊಡುತ್ತದೆ. ಗ್ರಾಹಕರು ತಮ್ಮ ಕೋಟಕ್ ಖಾತೆಗಳಿಗೆ ಸುಲಭವಾಗಿ ಸೈನ್ ಇನ್ ಆಗಬಹುದು ಮತ್ತು ಸ್ಮಾರ್ಟ್ ವಾಚ್ ಅನ್ನು ಬಳಸಿಕೊಂಡು ಕಾಂಟಾಕ್ಟ್ ಲೆಸ್ ಪೇಮೆಂಟ್ ಅನ್ನು ಮಾಡಬಹುದು. ಈ ವಿಧಾನವು ಸಾಂಪ್ರದಾಯಿಕ ಕಾಂಟಾಕ್ಟ್ ಲೆಸ್ ಕಾರ್ಡ್‌ಗಳು ಮತ್ತು ಮೊಬೈಲ್ ಸಾಧನಗಳಂತೆಯೇ ಅದೇ ಮಟ್ಟದ ಸುರಕ್ಷತೆ ಮತ್ತು ಭದ್ರತೆಯನ್ನು ನೀಡುತ್ತದೆ.

ಈ ಕುರಿತು ಜಿಓಕ್ಯೂಐಐ ಸಂಸ್ಥಾಪಕ ಮತ್ತು ಸಿಇಓ ವಿಶಾಲ್ ಗೊಂಡಲ್ ಮಾತನಾಡಿ, “ಆರೋಗ್ಯವೇ ಭಾಗ್ಯ ಎಂಬುದು ಎಲ್ಲಾ ಕಾಲದಲ್ಲೂ ಪ್ರಸ್ತುತ ಅನ್ನಿಸುವ ಒಂದು ಗಾದೆ. ಮೊದಲೇ ರೋಗ ತಡೆಗಟ್ಟುವ ಪ್ರಕ್ರಿಯೆ ಮತ್ತು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಪ್ರಾಮುಖ್ಯತೆಯನ್ನು ಜಿಓಕ್ಯೂಐಐ ಯಾವಾಗಲೂ ನಂಬುತ್ತದೆ. ಅದಕ್ಕೆ ಪೂರಕವಾಗಿರುವ ಜಿಓಕ್ಯೂಐಐನ ಅತ್ಯಾಧುನಿಕ ಆರೋಗ್ಯ ಫೀಚರ್‌ಗಳ ಜತೆಗೆ ಕೋಟಕ್ ಬ್ಯಾಂಕ್‌ನ ಕಾಂಟಾಕ್ಟ್ ಲೆಸ್ ಪೇಮೆಂಟ್ ಫೀಚರ್ ಅನ್ನು ಸಂಯೋಜಿತಗೊಳಿಸಿರುವ ಸ್ಮಾರ್ಟ್ ವಾಚ್ ಅನ್ನು ಗ್ರಾಹಕರಿಗೆ ಒದಗಿಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ: Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಈ ಒಟ್ಟುಗೂಡುವಿಕೆ ಬಹಳ ಮುಖ್ಯವಾಗಿದೆ. ಯಾಕೆಂದರೆ ಈ ಸಹಯೋಗವು ಗ್ರಾಹಕರ ಅನುಕೂಲತೆಯನ್ನು ಹೆಚ್ಚಿಸುತ್ತದೆ, ಆರೋಗ್ಯ ಮತ್ತು ಸುರಕ್ಷತೆ ಕಾಪಾಡಿಕೊಳ್ಳಲು ಪ್ರೇರೇಪಿಸುತ್ತದೆ, ಸುರಕ್ಷಿತ ವಹಿವಾಟು ಮಾಡುವ ಸೌಲಭ್ಯಗಳನ್ನು ನೀಡುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಾಧನವು ಈ ಕಾಲಕ್ಕೆ ಅವಶ್ಯವಾಗಿ ಬೇಕಾದ ಆರೋಗ್ಯಕರ ಮತ್ತು ಪರಿಣಾಮಕಾರಿ ಜೀವನಶೈಲಿ ಕಾಪಾಡಿಕೊಳ್ಳಲು ಬೆಂಬಲ ಒದಗಿಸುತ್ತದೆ”ಎಂದು ಹೇಳಿದರು.

ಎನ್‌ಪಿಸಿಐನ ಚೀಫ್ ರಿಲೇಷನ್ ಶಿಪ್ ಮ್ಯಾನೇಜ್ಮೆಂಟ್ ರಾಜೀತ್ ಪಿಳ್ಳೈ ಮಾತನಾಡಿ, “ಎನ್‌ಪಿಸಿಐ ಪರಿಚಯಿಸಿರುವ ಹೊಸ ರುಪೇ ಆನ್-ದ-ಗೋ ಅನ್ನು ಬಳಸಿಕೊಂಡು ಕಾಂಟಾಕ್ಟ್ ಲೆಸ್ ಪೇಮೆಂಟ್ ಸೌಲಭ್ಯ ಒದಗಿಸುವ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್ ವಾಚ್ ಅನ್ನು ಬಿಡುಗಡೆ ಮಾಡಿರುವುದು ನಮಗೆ ಸಂತೋಷದ ವಿಚಾರವಾಗಿದೆ. ಈ ಸಹಯೋಗವು ಬಳಕೆದಾರರಿಗೆ ತಮ್ಮ ದೈನಂದಿನ ವಹಿವಾಟುಗಳನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿ ಮಾಡಲು ಅನುವು ಮಾಡಿಕೊಡುತ್ತದೆ. ಈ ಹೊಸ ವೈಶಿಷ್ಟ್ಯಗಳು ಕಾಂಟಾಕ್ಟ್ ಲೆಸ್ ಪೇಮೆಂಟ್ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲಿದೆ. ಜತೆಗೆ ವಹಿವಾಟು ಮಾಡಲು ಸುಲಭವಾಗುವುದರಿಂದ ಬಳಕೆದಾರರ ಅನುಭವವನ್ನು ಉತ್ತಮಗೊಳಿಸುತ್ತದೆ. ಟೆಕ್ ಸ್ಯಾವಿ ಗ್ರಾಹಕರ ಕಾರಣದಿಂದ ಕಾಂಟಾಕ್ಟ್ ಲೆಸ್ ಪೇಮೆಂಟ್ ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಉಂಟಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

ಕೋಟಕ್ ಬ್ಯಾಂಕ್ ಗ್ರಾಹಕರು ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಸ್ಮಾರ್ಟ್ ವಾಚ್ ಅನ್ನು ಖರೀದಿಸಬಹುದು. ಕೋಟಕ್ ಗ್ರಾಹಕರಲ್ಲದವರು ಈ ಸೌಲಭ್ಯವನ್ನು ಪಡೆಯಲು ಕೋಟಕ್‌ನಲ್ಲಿ ಖಾತೆಯನ್ನು ತೆರೆಯಬೇಕಾಗುತ್ತದೆ.

Continue Reading
Advertisement
Former minister B Sriramulu alleged that the Congress government is not interested in the construction of the Kampli bridge
ಬಳ್ಳಾರಿ4 mins ago

Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

Whatsapp Shutdown
ತಂತ್ರಜ್ಞಾನ8 mins ago

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

Kerala Floods
ದೇಶ56 mins ago

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Paris Olympics 2024
ಪ್ರಮುಖ ಸುದ್ದಿ58 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ವಿವಾದ; ಮಹಿಳೆ ವಿರುದ್ಧ ಸ್ಪರ್ಧಿಸಲು ಬಾಕ್ಸಿಂಗ್​ ಕಣಕ್ಕೆ ಇಳಿದ ಪುರುಷ!

vyasana mukta dinacharane programme in hosapete
ವಿಜಯನಗರ1 hour ago

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

utthana vaarshika katha spardhe the last date for submission of the story is october 10
ಬೆಂಗಳೂರು1 hour ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ2 hours ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್2 hours ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ2 hours ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ9 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ9 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌