Kannada New Movie | ʻಕುಬುಸʼ ಚಿತ್ರಕ್ಕೆ ಯು ಸರ್ಟಿಫಿಕೇಟ್: ಪ್ರಮುಖ ಪಾತ್ರದಲ್ಲಿ ಜೋಗತಿ ಮಂಜಮ್ಮ - Vistara News

ಸಿನಿಮಾ

Kannada New Movie | ʻಕುಬುಸʼ ಚಿತ್ರಕ್ಕೆ ಯು ಸರ್ಟಿಫಿಕೇಟ್: ಪ್ರಮುಖ ಪಾತ್ರದಲ್ಲಿ ಜೋಗತಿ ಮಂಜಮ್ಮ

ತಾಯಿ ಮಗನ ಬಾಂಧವ್ಯ ಹೊತ್ತ ʻಕುಬುಸʼ ಚಿತ್ರಕ್ಕೆ (Kannada New Movie ) ಯು ಸರ್ಟಿಫಿಕೇಟ್ ಪಡೆದುಕೊಂಡಿದೆ. ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದಾರೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕುಂ. ವೀರಭದ್ರಪ್ಪ ‘ಕುಬುಸ’ (Kannada New Movie) ಕಥೆ ಆಧಾರಿಸಿ ರಘು ರಾಮಚರಣ್ ಹೂವಿನ ಹಡಗಲಿ ‘ಕುಬುಸ’ ಸಿನಿಮಾ ನಿರ್ದೇಶಿಸಿದ್ದಾರೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ಈ ಚಿತ್ರ ಜನವರಿ ಕೊನೆಯಲ್ಲಿ ತೆರೆಗೆ ಬರಲು ಸಜ್ಜಾಗಿದೆ. ತಾಯಿ ಮಗನ ಬಾಂಧವ್ಯ ಹೊತ್ತ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿ ಪಾಸ್ ಆಗಿದ್ದು ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡಲಿದೆ.

‘ಕುಬುಸ’ ಆರ್. ಚಂದ್ರು ಶಿಷ್ಯ ರಘು ರಾಮಚರಣ್ ಹೂವಿನ ಹಡಗಲಿ ನಿರ್ದೇಶನದ ಮೊದಲ ಸಿನಿಮಾ. ನಿರ್ದೇಶಕರಾದ ಟಿ.ಎಸ್. ನಾಗಾಭರಣ, ಪ್ರೇಮ್, ಸತ್ಯ ಪ್ರಕಾಶ್ ಸಿನಿಮಾಗಳಲ್ಲೂ ಸಹಾಯಕ ನಿರ್ದೇಶಕನಾಗಿ, ಕಲಾವಿದನಾಗಿ ಗುರುತಿಸಿಕೊಂಡಿರುವ ಇವರು ‘ಕುಬುಸ’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

Kannada New Movie

ಇದನ್ನೂ ಓದಿ | Kannada New Movie | ʻಜೋರ್ಡನ್‌ʼ ಟ್ರೈಲರ್‌ ಔಟ್‌: ಡಿಸೆಂಬರ್ 30ಕ್ಕೆ ಸಿನಿಮಾ ತೆರೆಗೆ

ಏನಿದು ‘ಕುಬುಸ’ ಕಥೆ?
ಕಲ್ಲು ಒಡೆದು ಹಳ್ಳಿಯಲ್ಲಿ ಜೀವನ ಸಾಗಿಸುವ ತಾಯಿ ತನ್ನ ಮಗನನ್ನು ದೂರದ ಊರಿನಲ್ಲಿ ಓದಿಸುತ್ತಿರುತ್ತಾಳೆ. ಯಾವತ್ತೂ ಬೇರೆ ಊರಿಗೆ ಪಯಣ ಬೆಳೆಸದ, ಬಸ್ಸು ಕೂಡ ಹತ್ತಿರದ ಆಕೆಯನ್ನು ಮಗ ಕೆಲಸ ಸಿಕ್ಕ ಮೇಲೆ ನಗರಕ್ಕೆ ಕರೆದುಕೊಂಡು ಬರುತ್ತಾನೆ. ಮೊದಲಿನಿಂದಲೂ ಕುಬುಸ ಧರಿಸಿ ಅಭ್ಯಾಸವಿರದ ಆಕೆ ಈ ಕಾರಣದಿಂದ ನಗರಕ್ಕೆ ಬಂದಾಗ ಹೇಗೆಲ್ಲ ಜನರಿಂದ ಮುಜುಗರಕ್ಕೆ ಒಳಗಾಗುತ್ತಾಳೆ, ಮುಂದೆ ಏನಾಗುತ್ತೆ ಎನ್ನುವುದೇ ಸಿನಿಮಾದ ಕಥೆ.

ತಾಯಿ ಮಗನ ಸೆಂಟಿಮೆಂಟ್ ಇರುವ ಈ ಚಿತ್ರದಲ್ಲಿ ʻʻರಾಮ ರಾಮ ರೇʼ ಸಿನಿಮಾ ಖ್ಯಾತಿಯ ನಟರಾಜ್. ಎಸ್. ಭಟ್, ರಂಗಭೂಮಿ ಕಲಾವಿದೆ ಹನುಮಕ್ಕ ಮರಿಯಮ್ಮನ ಹಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ನಟರಾಜ್. ಎಸ್. ಭಟ್ ಚಿತ್ರದಲ್ಲಿ ಎರಡು ಶೇಡ್ ನಲ್ಲಿ ನಟಿಸಿದ್ದು, ಆರ್ಯ ಮೈಸೂರು, ಅನಿಕ ರಮ್ಯ, ಮಹಾಲಕ್ಷ್ಮೀ ಕೂಡ ಚಿತ್ರದ ಮುಖ್ಯ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ ಚಿತ್ರದ ಪ್ರಮುಖ ಆಕರ್ಷಣೆ
ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದು, ದೊಡ್ಡ ಪಾತ್ರವೊಂದನ್ನು ಪೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಯುವ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗುಂಡಿ ರಮೇಶ್ ಹಾಗೂ ಪತ್ನಿ ಗುಂಡಿ ಭಾರತಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಹೊನ್ನಾವರ ಸ್ವಾಮಿ, ಹುಲಿಗಪ್ಪ ಕಟ್ಟೋಮನಿ, ಕನ್ನಡ ಕಲಾ ಸಂಘ ಹೊಸಪೇಟೆ ಕಲಾವಿದರು ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಕಲಾತ್ಮಕ ಸಿನಿಮಾಗಳಿಗಿಂತ ಭಿನ್ನವಾದ ಹೊಸತನ ಒಳಗೊಂಡ ಸಿನಿಮಾ ‘ಕುಬುಸ’. ಚಿತ್ರದಲ್ಲಿ ಮೂಲ ಕಥೆಯಲ್ಲಿರುವಂತೆ ಬಳ್ಳಾರಿ ಭಾಷೆಯ ಸೊಗಡನ್ನು ಕಾಣಬಹುದಾಗಿದೆ. ಮ್ಯೂಸಿಕಲ್ ಸಿನಿಮಾ ಕೂಡ ಆಗಿದ್ದು ಸನ್ನಿವೇಶಕ್ಕೆ ತಕ್ಕ ಹಾಗೆ ನಾಲ್ಕು ಹಾಡುಗಳಿದ್ದು ನಾಲ್ಕು ಬಿಟ್ ಗಳಿವೆ. ಜೋಗಿ ಪ್ರೇಮ್, ವಾಸುಕಿ ವೈಭವ್, ಶೃತಿ.ವಿ.ಎಸ್, ಶಿಲ್ಪ ಮುಡ್ಬಿ, ಪ್ರದೀಪ್ ಚಂದ್ರ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ.

Kannada New Movie

ಪ್ರದೀಪ್ ಚಂದ್ರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಶರ್ಮಾ. ಎ ಕ್ಯಾಮೆರಾ ವರ್ಕ್, ಶಿವಮೂರ್ತಿ ಡೋಣಿಮಲೈ ಸಹ ನಿರ್ದೇಶನ ಚಿತ್ರಕ್ಕಿದೆ. ವಿ. ಶೋಭಾ ಸಿನಿಮಾಸ್ ಬ್ಯಾನರ್ ನಡಿ ವಿ. ಶೋಭಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜನವರಿ ಕೊನೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲಿದೆ ಚಿತ್ರತಂಡ.

ಇದನ್ನೂ ಓದಿ | Kannada New Movie | ‘ಥಗ್ಸ್ ಆಫ್ ರಾಮಘಡ’ ಚಿತ್ರಕ್ಕೆ ಡಾಲಿ ಧನಂಜಯ ಸಾಥ್: ಪೋಸ್ಟ್‌ ವೈರಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

Thalapathy Vijay ಸಿನಿಮಾ ತಾರೆಯರು ಎಂದರೆ ಎಲ್ಲರೂ ಇಷ್ಟಪಡುತ್ತಾರೆ. ಅವರ ಜೊತೆ ನಿಂತು ಸೆಲ್ಫಿ ತೆಗೆದುಕೊಲ್ಳುವುದು, ಅವರ ಜೊತೆ ಮಾತನಾಡುವುದು ಎಂದರೆ ಅಭಿಮಾನಿಗಳಿಗೆ ಹಬ್ಬ. ಆದರೆ ಇಲ್ಲೊಬ್ಬಳು ಹುಡುಗಿ ತಮಿಳು ನಟ ದಳಪತಿ ವಿಜಯ್ ಹೆಗಲ ಮೇಲೆ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಕೇಳಿಕೊಂಡ ವಿಡಿಯೊವೊಂದು ಸಖತ್ ವೈರಲ್ ಆಗಿದೆ. ಸಮಾರಂಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿತ್ತು. ಆ ವೇಳೆ ಉತ್ತಮ ಅಂಕ ಪಡೆದು ಗೌರವಿಸಲ್ಪಟ್ಟ ಹುಡುಗಿಯೊಬ್ಬಳ ಭುಜದ ಮೇಲೆ ನಟ ವಿಜಯ್ ಕೈ ಹಾಕಿದ್ದು, ತಕ್ಷಣ ಆ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಹೇಳಿದ್ದಾಳಂತೆ.

VISTARANEWS.COM


on

Thalapathy Vijay
Koo

ಚೆನ್ನೈ : ಸಿನಿಮಾ ತಾರೆಯರು ಎಂದರೆ ಎಲ್ಲರಿಗೂ ತುಂಬಾ ಇಷ್ಟ. ಅವರು ಒಂದು ವೇಳೆ ಕಣ್ಣಮುಂದೆ ಬಂದರೆ ಉತ್ಸಾಹದಲ್ಲಿ ಅವರ ಜೊತೆ ಸೆಲ್ಫಿ ತೆಗೆಯುವುದು, ಅವರನ್ನು ಹಗ್, ಕಿಸ್ ಮಾಡುವುದು ಹೀಗೆ ವಿಚಿತ್ರವಾಗಿ ವರ್ತಿಸುತ್ತಾರೆ ಜನ. ಆದರೆ ಇಲ್ಲೊಂದು ಹುಡುಗಿ ತನ್ನ ಭುಜದ ಮೇಲೆ ಕೈ ಹಾಕಿದ ಸೂಪರ್ ಸ್ಟಾರ್‌ಗೆ ಕೈ ತೆಗೆಯುವಂತೆ ಹೇಳಿದ್ದಾಳೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Thalapathy Vijay) ಆಗಿದೆ.

ತಮಿಳು ನಟ ವಿಜಯ್ ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಕಾಲಿವುಡ್ ಚಿತ್ರರಂಗದಲ್ಲಿ ಹೆಸರಾಂತ ನಟ ದಳಪತಿ ವಿಜಯ್. ಕಾಲಿವುಡ್ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಈ ನಟನಿಗೆ ಅಪಾರ ಅಭಿಮಾನಿ ಬಳಗವೂ ಇದೆ. ನಟ‌ ವಿಜಯ್‌ ಜೂನ್ 28ರಂದು, ಚೆನ್ನೈನಲ್ಲಿ ತಮಿಳಗ ವೆಟ್ರಿ ಕಳಗಂ ಆಯೋಜಿಸಿದ್ದ ಎರಡನೇ ವಾರ್ಷಿಕ ಶಿಕ್ಷಣ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸಮಾರಂಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿತ್ತು. ಆ ವೇಳೆ ಉತ್ತಮ ಅಂಕ ಪಡೆದು ಗೌರವಿಸಲ್ಪಟ್ಟ ಹುಡುಗಿಯೊಬ್ಬಳ ಭುಜದ ಮೇಲೆ ನಟ ವಿಜಯ್ ಕೈ ಹಾಕಿದ್ದು, ತಕ್ಷಣ ಆ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಹೇಳಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ನಟ ವಿಜಯ್‌ನನ್ನು ಕೇಳುತ್ತಿರುವುದನ್ನು ತೋರಿಸುತ್ತದೆ. ಈ ವಿಡಿಯೊ ಶೀರ್ಷಿಕೆಯಲ್ಲಿ ನಟನನ್ನು ಟೀಕಿಸಲಾಗಿತ್ತು.

ಆದರೆ ಪೋಸ್ಟ್ ಮಾಡಿದ ಈ ವಿಡಿಯೊ ಕೇವಲ ಭಾಗಶಃ ಕ್ಲಿಪ್ ಆಗಿದೆ. ವಿಜಯ್ ಅವರ ಕೈಯನ್ನು ತೆಗೆಯುವಂತೆ ಕೇಳಿದ ನಂತರ, ಹುಡುಗಿ ಕ್ಯಾಮೆರಾಗಳಿಗೆ ಪೋಸ್ ನೀಡುವಾಗ ಅವರ ತೋಳನ್ನು ಹಿಡಿದಿದ್ದಾಳೆ ಎನ್ನಲಾಗಿದೆ. ಅರ್ಧ ವಿಡಿಯೊ ಹಂಚಿಕೊಳ್ಳುವ ಮೂಲಕ ನಟ ವಿಜಯ್ ಅವರ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ನೆಟ್ಟಿಗರು ಕಿಡಿಕಾರಿದ್ದಾರೆ.

ಈ ಸಮಾರಂಭದಲ್ಲಿ ನಟ ವಿಜಯ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವ ಮೂಲಕ ಅವರನ್ನು ಶಿಕ್ಷಣದ ಕಡೆಗೆ ಪ್ರೇರೆಪಿಸಿದ್ದಾರೆ. ಕೆಟ್ಟ ಚಟಗಳಿಂದ ದೂರವಿರಲು ಒತ್ತಾಯಿಸಿದ್ದಾರೆ. ಮತ್ತು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹಾಗೂ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗದಿದ್ದರೆ ಅದೇ ಕೊನೆ ಅವಕಾಶವೆಂದು ಅಂದುಕೊಳ್ಳಬಾರದು. ಯಶಸ್ಸು ಎಂದಿಗೂ ಕೊನೆಗೊಳ್ಳುವುದಿಲ್ಲ ಮತ್ತು ವೈಫಲ್ಯವು ಎಂದಿಗೂ ಅಂತಿಮವಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Viral Video

ವಿಜಯ್ ತಮ್ಮ ಮುಂದಿನ ಚಿತ್ರ “ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಜಿಒಎಟಿ) ಗಾಗಿ ಸಜ್ಜಾಗುತ್ತಿದ್ದಾರೆ. ಪ್ರಶಾಂತ್, ಪ್ರಭುದೇವ, ಸ್ನೇಹಾ, ಅಜ್ಮಲ್ ಅಮೀರ್, ವೈಭವ್, ಲೈಲಾ, ಮೋಹನ್, ಅರವಿಂದ್ ಆಕಾಶ್, ಅಜಯ್ ರಾಜ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ.

ಈ ಚಿತ್ರದಲ್ಲಿ ವಿಜಯ್ ನಾಯಕ ಮತ್ತು ಖಳನಾಯಕನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 5, 2024ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

Actor Yash: ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

VISTARANEWS.COM


on

Actor Yash to recreate the 50s and 70s era in Toxic
Koo

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್‌ ಆಗುತ್ತಿದೆ.

ʼಟಾಕ್ಸಿಕ್‌ʼ (Toxic) ಸಿನಿಮಾ 1950- 1970ರ ಘಟ್ಟದಲ್ಲಿ ನಡೆಯುವ ಕಥೆಯಾಗಿದೆ ಎಂದು ವರದಿಯಾಗಿದೆ. ಡ್ರಗ್ಸ್ ಮಾಫಿಯಾ ಹಿನ್ನಲೆಯಲ್ಲಿ ಈ ಚಿತ್ರವು ತಯಾರಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್‌ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್‌ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್‌ ಟಾಕ್ಸಿಕ್‌ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಖಚಿತವಾಗಿದೆ.

Continue Reading

ಸ್ಯಾಂಡಲ್ ವುಡ್

Meghana Raj: ಮೇಘನಾ ರಾಜ್‌  ಫಿಲ್ಮ್​ಗೆ ಎಂಟ್ರಿ ಕೊಟ್ಟಿದ್ದು ಇಷ್ಟವಿರಲಿಲ್ಲ; ಬೇಸರ ಹೊರಹಾಕಿದ್ದ ಅಪ್ಪ ಸುಂದರರಾಜ್​ 

Meghana Raj: ಇದೀಗ ಮೇಘನಾ ಕುರಿತು ತಂದೆ ನಟ ಸುಂದರರಾಜ್ ಅವರು ಹಲವು ಸಂಗತಿಗಳನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಹಾಗೇ ಮೇಘನಾ ಅವರು ಸಿನಿಮಾ ಕರಿಯರ್‌ ಆಯ್ಕೆ ಮಾಡಿಕೊಂಡಿದ್ದು ಮೊದಲಿಗೆ ಇಷ್ಟವರಲಿಲ್ಲ ಎಂದರು.

VISTARANEWS.COM


on

Meghana Raj didn't want to enter the film Father Sundarraj
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ (Actress Meghana Raj) ಹೊಸ ಯುಟ್ಯೂಬ್‌ ಚಾನೆಲ್ ಶುರು ಮಾಡಿರುವುದು ಗೊತ್ತೇ ಇದೆ. ಪುತ್ರ ರಾಯನ್ ರಾಜ್ ಸರ್ಜಾ, ಪ್ರಮೀಳಾ ಜೋಶಾಯ್ ಹಾಗೂ ಸುಂದರ್ ರಾಜ್ ಜತೆ ಹಲವಾರು ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದಾರೆ. ಇದೀಗ ಮೇಘನಾ ಕುರಿತು ತಂದೆ ನಟ ಸುಂದರರಾಜ್ ಅವರು ಹಲವು ಸಂಗತಿಗಳನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಹಾಗೇ ಮೇಘನಾ ಅವರು ಸಿನಿಮಾ ಕರಿಯರ್‌ ಆಯ್ಕೆ ಮಾಡಿಕೊಂಡಿದ್ದು ಮೊದಲಿಗೆ ಇಷ್ಟವರಲಿಲ್ಲ ಎಂದರು.

ಮೇಘನಾ ರಾಜ್‌ ಮಾತನಾಡಿ ʻʻ ಮೇಘನಾ ಅವರು ಮೊದಲು ಸಿನಿಮಾ ಕರಿಯರ್‌ ಆಯ್ಕೆ ಮಾಡಿಕೊಂಡಾಗ ಖುಷಿ ಆಗಿಲ್ಲ. ಏಕೆಂದರೆ ಅವಳು ಪೂರ್ಣಾವಧಿ ಮಾಡುತ್ತಾಳಾ ಎನ್ನುವ ಡೌಟ್‌ ಇತ್ತು. ಹುಡುಗರಿಗೆ ಚಿತ್ರರಂಗ ಬೇರೆಯದ್ದೇ ಮಾತು, ಹುಡುಗಿಯರ ವಿಷಯದಲ್ಲಿ ಅದು ಬೇರೆಯದ್ದೇ ಮಾತು. ನಮ್ಮ ಚಿತ್ರರಂಗದಲ್ಲಿ ಕೆಲವರಿಗೆ ಯಶಸ್ಸು ಸಿಗತ್ತೆ.. ಇನ್ನು ಕೆಲವರಿಗೆ ಇರಲ್ಲ. ನನ್ನ ಮಗಳು ಯಾವುದೇ ಡ್ರಾಮಾ ಸ್ಕೂಲ್‌ಗೆ ಹೋಗಿ ಕಲಿತು ಇರಲಿಲ್ಲ. ಒಳ್ಳೆಯ ಅಭ್ಯಾಸ ಮಾಡಿಕೊಂಡು ಬಂದಳು. ಆಮೇಲೆ ಅವರ ಸ್ನೇಹಿತರ ಮಾತಿನಿಂದ ನಟಿಯಾದಳು. 2008 ಇಂದ ತತ್ಸಮ- ತದ್ಭವ ವರೆಗೂ ಚೆನ್ನಾಗಿ ನಿಭಾಯಿಸಿದ್ದಾಳೆ. ನನಗೆ ಒಂದೊದು ಸಲ ಅವಳ ನಟನೆ ನೋಡಿ ರೋಮಾಚಂನ ಆಗತ್ತೆ. ಆ ನಿಟ್ಟಿನಲ್ಲಿ ಒಳ್ಳೆಯ ಕಲಾವಿದೆ, ಸಿಂಗರ್‌ ಹಾಗೇ ಒಳ್ಳೆಯ ಡ್ಯಾನ್ಸರ್‌. ಇನ್ನು ಮುಂದೆ ಒಳ್ಳೆಯ ಕರಿಯರ್‌ ಇದೆʼʼಎಂದರು.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ದ್ದ ಮೇಘನಾ 2009 ರಲ್ಲಿ ತೆರಕಂಡ `ಬೆಂಡು ಅಪ್ಪಾರಾವ್ RMP’ ಚಿತ್ರದಿಂದ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು. ಇದಕ್ಕೂ ಮೊದಲು ಕೆ.ಬಾಲಚಂದರ್ ನಿರ್ಮಾಣದ `ಕೃಷ್ಣಲೀಲೈ’ ಚಿತ್ರದಲ್ಲಿ ನಟಿಸಿದ್ದರೂ ಅದು ತೆರೆ ಕಾಣಲಿಲ್ಲ. 2010ರಲ್ಲಿ ತೆರೆಕಂಡ ಯೋಗೇಶ್ ಚಿತ್ರ `ಪುಂಡ’ ಮೂಲಕ ಚಂದನವನದಲ್ಲಿ ಕೂಡ ನಾಯಕಿಯಾಗಿ ಇನ್ನಿಂಗ್ಸ್ ಆರಂಭಿಸಿದರು.ಮೇಘನಾಗೆ ಸಿನಿ ಕರಿಯರ್‌ಗೆ ಬ್ರೇಕ್ ನೀಡಿದ್ದು ಮಲಯಾಳಂ ಚಿತ್ರರಂಗ. ಹಲವು ಯಶಸ್ವಿ ಮಲಯಾಳಂ ಚಿತ್ರಗಳಲ್ಲಿ ನಟಿಸಿದ ಮೇಘನಾ 2013 ರಲ್ಲಿ ತೆರೆಕಂಡ `ರಾಜಾಹುಲಿ’ ಚಿತ್ರದಿಂದ ಮತ್ತೆ ಕನ್ನಡಕ್ಕೆ ಬಂದರು. ನಂತರ `ಬಹುಪರಾಕ್’,`ಆಟಗಾರ’ ಇತ್ತೀಚಿಗೆ ತತ್ಸಮ ತದ್ಭವ ಸೇರಿದಂತೆ ಮುಂತಾದ ಹಿಟ್ ಚಿತ್ರ ನೀಡಿದ್ದಾರೆ. 

ಮೇಘನಾ ರಾಜ್​ ಬದುಕಲ್ಲಿ 2020 ಕೆಟ್ಟವರ್ಷ. ಅವರು ಐದು ತಿಂಗಳ ಗರ್ಭಿಣಿಯಾಗಿದ್ದಾಗಲೇ, ಪತಿ ಚಿರಂಜೀವಿ ಸರ್ಜಾರನ್ನು ಕಳೆದು ಕೊಂಡರು. 2020ರ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದಾದ ಬಳಿಕ ಮಗ ರಾಯನ್​ ಹುಟ್ಟಿದ. ಬಳಿಕ ʻತತ್ಸಮ ತದ್ಭವʼ ಸಿನಿಮಾ ಮೂಲಕ ತೆರೆಗೆ ಮತ್ತೆ ಬಂದರು ನಟಿ. ತತ್ಸಮ ತದ್ಭವ ಸಿನಿಮಾಕ್ಕೆ ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್‌ ಅವರು ಬಂಡವಾಳ ಸುರಿದಿದ್ದಾರೆ. ವಿಶಾಲ್‌ ಆತ್ರೇಯ ಅವರು ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಾಸುಕಿ ವೈಭವ್‌ ಅವರ ಸಂಗೀತ, ಶ್ರೀನಿವಾಸ್‌ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಅವರ ಸಂಕಲನವಿದೆ.

Continue Reading

ಕರ್ನಾಟಕ

Actor Darshan: ದರ್ಶನ್ ಅಪ್ಪಿಕೊಂಡು ಕಣ್ಣೀರಿಟ್ಟ ತಾಯಿ ಮೀನಾ; ಕುಟುಂಬಸ್ಥರನ್ನು ಕಂಡು ನಟ ಭಾವುಕ

Actor Darshan: ದರ್ಶನ್‌ ಅವರ ತಾಯಿ ಮೀನಾ, ತಮ್ಮ ದಿನಕರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್‌ ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ ಭೇಟಿ ನೀಡಿದ್ದರು. ಕುಟುಂಬಸ್ಥರನ್ನು ಕಂಡು ದರ್ಶನ್‌ ಕೂಡ ಭಾವುಕರಾಗಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಕುಟುಂಬಸ್ಥರು ಸೋಮವಾರ ಭೇಟಿ ಮಾಡಿದರು. ಕುಟುಂಬಸ್ಥರನ್ನು ನೋಡುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದು, ಈ ವೇಳೆ ಮಗನನ್ನು ಅಪ್ಪಿಕೊಂಡು ತಾಯಿ ಮೀನಾ ಕೂಡ ಕಣ್ಣೀರು ಹಾಕಿದ್ದಾರೆ. ತನ್ನ ಸ್ಥಿತಿ ಕಂಡು ಗೋಳಾಡುತ್ತಿದ್ದ ತಾಯಿಗೆ ದರ್ಶನ್ (Actor Darshan) ಸಮಾಧಾನ ಹೇಳಿದ್ದಾರೆ.

ಭೇಟಿ ವೇಳೆ ಮಗ ವಿನೀಶ್‌ನನ್ನು ತೊಡೆಯ ಮೇಲೆ ಕೂರಿಸಿಕೊಂಡು ದರ್ಶನ್ ಮುದ್ದಾಡಿದ್ದಾರೆ. ಸ್ನೇಹಿತರಂತಿದ್ದ ತಂದೆ-ಮಗನ ಸ್ಥಿತಿ ಕಂಡು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭಾವುಕರಾಗಿದ್ದಾರೆ. ಇನ್ನು ದರ್ಶನ್‌ಗೆ ಸಹೋದರ ದಿನಕರ್ ತೂಗುದೀಪ್ ಧೈರ್ಯ ತುಂಬಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಕಳೆದ ಹತ್ತು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಹೀಗಾಗಿ ಹಲವು ನಟ, ನಟಿಯರು ಹಾಗೂ ಕುಟುಂಬಸ್ಥರು ನಟ ದರ್ಶನ್‌ರನ್ನು ಭೇಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ | Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

ಇನ್ನು ಬಂದಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ದರ್ಶನ್‌ಗೆ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ‌ ಕೊಡಬೇಕಾದರೆ ಹತ್ತಾರು ರೂಲ್ಸ್‌ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ರಾಜಾರೋಷವಾಗಿ ನಟ ದರ್ಶನ್ ಕುಟುಂಬದವರಿಗೆ ಜೈಲು ಎಂಟ್ರಿ ನೀಡಲಾಗಿದೆ. ಮಾಧ್ಯಮಗಳ ಕಣ್ತಪ್ಪಿಸಿ ನಟ ದರ್ಶನ್ ಅವರನ್ನು ಕುಟುಂಬ ಭೇಟಿ ಮಾಡಿದೆ. ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ ತಾಯಿ, ತಮ್ಮ ಪತ್ನಿ ಮಗ ಎಂಟ್ರಿ ಕೊಟ್ಟರು. ಹತ್ತು ಗಂಟೆ ಸುಮಾರಿಗೆ ಕುಟುಂಬ ಜೈಲಿಗೆ ಬಂದಿತ್ತು. ಪರಪ್ಪನ ಅಗ್ರಹಾರ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಉದಯ್ ದರ್ಶನ್ ಭೇಟಿಗೆ ಕರೆದೊಯ್ದರು. ಉದಯ್‌ ಅವರು ಕಳೆದ ಸೋಮವಾರ ಸಹ ಮಾಧ್ಯಮಗಳ ಕಣ್ತಪ್ಪಿಸಿ ಪತ್ನಿ ಮಗನನ್ನು ಕರೆದೊಯ್ದಿದ್ದರು. ಇಂದು ಕೂಡ ಖಾಸಗಿ ಕಾರಿನಲ್ಲಿ ಉದಯ್‌ ಕುಟುಂಬವನ್ನು ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ.

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Actor Darshan is like my son says hamsalekha

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ಈಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಂಸಲೇಖ ಮಾತನಾಡಿ ʻʻನಾವು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷ ಇದೆಯಲ್ಲ ಅದನ್ನು ಕ್ಯಾರೆಕ್ಟರ್ ಮಾಡಬೇಕು. ಸಿಟ್ಟು ಅಂದರೆ ಅದೊಂದು ಸ್ಕ್ರಿಪ್ಟ್‌ . ದ್ವೇಷ ಅಂದರೆ ಅದು ಕ್ಯಾರೆಕ್ಟರ್ ಅಯ್ಯ. ಆತರ ಸಿನಿಮಾದಲ್ಲಿ ತೋರಿಸಬೇಕಷ್ಟೆ ನಾವು. ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಅನ್ನು ತರಬಾರದು. ಇದು ಕಲಾವಿದರ ಕರ್ತವ್ಯ.” ಎಂದು ಹಂಸಲೇಖ ಹೇಳಿದ್ದಾರೆ.

“ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ನನ್ನ ಮಗು ತಪ್ಪು ಮಾಡಿದ್ದರೆ, ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನಾನು ನೋವು ತಿನ್ನುತ್ತೀನಿ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ನೋಡೋಣ.” ಎಂದು ದರ್ಶನ್ ಜೈಲು ಸೇರಿರುವ ಬಗ್ಗೆ ಹಂಸಲೇಖ ಹೇಳಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ನಷ್ಟದ ಹಾದಿ ಹಿಡಿದಿರುವ ಬಗ್ಗೆನೂ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. “ಚಂದನವನ ಎಷ್ಟು ಕೀರ್ತಿಯನ್ನು ಗಳಿಸಿತು. ಎಷ್ಟು ಪ್ರಶಸ್ತಿಗಳು. ಎಷ್ಟು ರಾಷ್ಟ್ರ ಪ್ರಶಸ್ತಿಗಳು. ಎಷ್ಟು ಗೌರವ. ಎಂತಹ ಪ್ರತಿಭಾವಂತರು ಹುಟ್ಟಿ ಬೆಳೆದಿದ್ದಾರೆ. ಅಂದರೆ, ಆ ಎತ್ತರಕ್ಕೆ ಏರಿದ್ದಾರೆ. ಆ ಎತ್ತರಕ್ಕೆ ಹೋದ ಮೇಲೆ ಅಲ್ಲಿಂದ ಕೆಳಗೆ ಬೀಳಬೇಕಾಗುತ್ತೆ. ಹಾಗಾಗುವುದು ಬೇಡ. ಅಲ್ಲಿಂದ ಬಿದ್ದ ಕೂಡಲೇ ಅಲ್ಲಿಂದ ಮತ್ತೆ ಏಳುವ ಚಾನ್ಸ್ ಇದೆ.” ಎಂದು ಹಂಸಲೇಖ ಚಿತ್ರರಂಗದ ಬಗ್ಗೆ ಹೇಳಿದ್ದಾರೆ.

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

Continue Reading
Advertisement
MUDA site scandal
ಕರ್ನಾಟಕ3 mins ago

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Fashion Show News
ಫ್ಯಾಷನ್24 mins ago

Fashion Show News: ಸಿಇಎಸ್‌ ಫ್ಯಾಷನ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ರ‍್ಯಾಂಪ್‌ ಶೋ

karnataka Weather Forecast
ಮಳೆ31 mins ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Medha Patkar
ದೇಶ60 mins ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ1 hour ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ1 hour ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Thalapathy Vijay
Latest2 hours ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

The whole society should be very careful about fake news says CM Siddaramaiah
ಕರ್ನಾಟಕ2 hours ago

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Money Guide
ಮನಿ-ಗೈಡ್2 hours ago

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Suraj Revanna Case
ಪ್ರಮುಖ ಸುದ್ದಿ2 hours ago

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ31 mins ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌