Karnataka Election | 2023ರ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಸೆಣಸುತ್ತಿರುವ ಯುವ ರಾಜಕಾರಣಿಗಳು ಇವರು - Vistara News

ಕರ್ನಾಟಕ

Karnataka Election | 2023ರ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಸೆಣಸುತ್ತಿರುವ ಯುವ ರಾಜಕಾರಣಿಗಳು ಇವರು

ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕು ಎಂಬ ಕೂಗು ಕೇಳಿದಂತೆಯೇ ವಿವಿಧ ಪಕ್ಷಗಳು ಅವಕಾಶಗಳನ್ನೂ ನೀಡುತ್ತಿವೆ. ಈಗಾಗಲೆ ಸಾಕಷ್ಟು ಕ್ಷೇತ್ರಗಳಲ್ಲಿ ಯುವ ರಾಜಕಾರಣಿಗಳು ಟಿಕೆಟ್‌ ಕೇಳುತ್ತಿದ್ದು, ಅವರಲ್ಲಿ ಪ್ರಮುಖರ ಪಟ್ಟಿ ಇಲ್ಲಿದೆ.

VISTARANEWS.COM


on

karnataka-election-Young ticket aspirants from three parties
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಮೇಶ ದೊಡ್ಡಪುರ, ಬೆಂಗಳೂರು
ವಿಧಾನಸಭೆ ಚುನಾವಣೆ (Karnataka Election) ಹತ್ತಿರವಾದಂತೆಲ್ಲ ಟಿಕೆಟ್‌ ಆಕಾಂಕ್ಷಿಗಳ ಚಟುವಟಿಕೆಯೂ ತೀವ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕರಿಗೆ ರಾಜಕೀಯ ಪಕ್ಷಗಳು ಹೆಚ್ಚೆಚ್ಚು ಮಣೆ ಹಾಕುತ್ತಿರುವುದು ಯುವ ರಾಜಕಾರಣಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಮೂರೂ ಪಕ್ಷಗಳಲ್ಲಿ ಮುಂದಿನ ಪೀಳಿಗೆಯ ಟಿಕೆಟ್‌ ಆಕಾಂಕ್ಷಿಗಳಿದ್ದು, ಇವರಲ್ಲಿ ಬಹಳಷ್ಟು ಜನರು ರಾಜಕೀಯ ಕುಟುಂಬದ ಹಿನ್ನೆಲೆ ಉಳ್ಳವರು. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಕೆಲವರೂ ಹೇಗಾದರೂ ಮಾಡಿ ಟಿಕೆಟ್‌ ಗಿಟ್ಟಿಸಿ ವಿಧಾನಸೌಧ ಪ್ರವೇಶಿಸುವ ಉಮೇದಿನಲ್ಲಿದ್ದಾರೆ.

ಕುಟುಂಬದ ಹಿನ್ನೆಲೆ ಹೊಂದಿರುವವರು, ಹೊಂದಿಲ್ಲದೆ ಇರುವವರೂ ಟಿಕೆಟ್‌ ಪಡೆಯಲು ಮೊದಲಿಗೆ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿದ್ದಾರೆ ಎನ್ನುವುದು ಮುಖ್ಯ ಅಂಶ. ಯುವಕರಾದ್ಧರಿಂದ ಬಹುತೇಕರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಇರುವಿಕೆ ಹಾಗೂ ಕೆಲಸಗಳನ್ನು ಜನರಿಗೆ ಮತ್ತು ಪಕ್ಷದ ವರಿಷ್ಠರಿಗೆ ಮುಟ್ಟಿಸುತ್ತಿದ್ದಾರೆ. ಮೂರೂ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ಕೆಲ ಪ್ರಮುಖರ ಪಟ್ಟಿ ಹಾಗೂ ಕಿರುಪರಿಚಯ ಕೆಳಗಿನಂತಿದೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳು

ಡಾ. ಸಂದೀಪ್ ಕುಮಾರ್, ಆನೇಕಲ್

karnataka-election-Young ticket aspirants from three parties Dr Sandeep Kumar

ರಾಜ್ಯ ಯುವಮೋರ್ಚಾ ಅಧ್ಯಕ್ಷರಾಗಿರುವ ಡಾ. ಸಂದೀಪ್‌ ಕುಮಾರ್‌, ಎಸ್‌ಸಿ ಮೀಸಲು ಕ್ಷೇತ್ರ ಆನೇಕಲ್‌ನಿಂದ ಟಿಕೆಟ್‌ ಆಕಾಂಕ್ಷಿ. ಯುವ ಮೋರ್ಚಾ ವತಿಯಿಂದ ಸಂಘಟನಾತ್ಮಕವಾಗಿ ಅನೇಕ ಕಾರ್ಯಗಳನ್ನು ನಡೆಸಿದ್ದು, ಪ್ರತಿ ಮಂಡಲದವರೆಗೆ ಪದಾಧಿಕಾರಿಗಳನ್ನು ನೇಮಿಸಿ ಕ್ರಿಯಾಶೀಲವಾಗಿಸಿದ್ದಕ್ಕೆ ವರಿಷ್ಠರಿಂದ ಮೆಚ್ಚುಗೆ ಗಳಿಸಿದ್ದಾರೆ. ಮಾಜಿ ಐಎಎಸ್‌ ಅಧಿಕಾರಿ ಕೆ. ಶಿವರಾಮ್‌ಗಿಂತ ಟಿಕೆಟ್‌ ಸಿಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಮುದಾಯ ಲೆಕ್ಕಾಚಾರದಲ್ಲೂ ಮೇಲುಗೈ ಹೊಂದಿದ್ದಾರೆ. ಸಂಘ ಪರಿವಾರದ ಬೆಂಬಲವಿದೆ.

ಅನಿಲ್ ಶೆಟ್ಟಿ‌, ಬಿಟಿಎಂ ಲೇಔಟ್‌

karnataka-election-Young ticket aspirants from three parties Anil Shetty

ಬಿಜೆಪಿ ಯುವಮೋರ್ಚಾ ಪದಾಧಿಕಾರಿಯಾಗಿರುವ ಅನಿಲ್‌ ಶೆಟ್ಟಿ ಅನೇಕ ಘಟಾನುಘಟಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಕ್ಷೇತ್ರದಲ್ಲಿ ಈಗಾಗಲೆ ಎರಡು ಮೂರು ವರ್ಷದಿಂದ ಕ್ರಿಯಾಶೀಲರಾಗಿದ್ದಾರೆ. ಅನೇಕ ಬಾರಿ ರಾಮಲಿಂಗಾರೆಡ್ಡಿ ಅವರ ಬೆಂಬಲಿಗರ ಜತೆಗೆ ವಾಗ್ವಾದ, ಹಗ್ಗಜಗ್ಗಾಟ ನಡೆದಿದೆ. ಬಿಜೆಪಿಯಿಂದ ಬೇರೆ ಆಕಾಂಕ್ಷಿಗಳು ಕಡಿಮೆ ಇರುವುದರಿಂದ ಟಿಕೆಟ್‌ ಲಭಿಸುವುದು ಸುಲಭ ಎನ್ನಲಾಗುತ್ತಿದೆ.

ಎಚ್‌.ಸಿ. ತಮ್ಮೇಶ್ ಗೌಡ, ಬ್ಯಾಟರಾಯನಪುರ

karnataka-election-Young ticket aspirants from three parties Thammesh Gowda

ಎಬಿವಿಪಿ ಹಿನ್ನೆಲೆಯ ತಮ್ಮೇಶ್‌ಗೌಡ, ಈ ಹಿಂದೆ ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿಯಾಗಿದ್ದವರು. ಇತ್ತೀಚಿನವರೆಗೂ ಕರ್ನಾಟಕ ವಿದ್ಯುತ್‌ ಕಂಪನಿ ಅಧ್ಯಕ್ಷರಾಗಿದ್ದರು. ಬಿ.ವೈ. ವಿಜಯೇಂದ್ರ ತಂಡದಲ್ಲಿದ್ದು, ಪಕ್ಷದ ಅಸ್ತಿತ್ವವೇ ಇಲ್ಲದ ಕೆ.ಆರ್‌. ಪೇಟೆ ಹಾಗೂ ಶಿರಾ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದ ಕ್ರೆಡಿಟ್‌ ಇದೆ. ಬ್ಯಾಟರಾಯನಪುರದಲ್ಲಿ ಈಗಾಗಲೆ ಕೇಸರಿ ಫೌಂಡೇಶನ್‌ ಮೂಲಕ ವಿವಿಧ ಸೇವಾ ಕಾರ್ಯಗಳು, ಜನಸಂಪರ್ಕ ಯಾತ್ರೆಗಳನ್ನು ನಡೆಸುತ್ತ ಸಕ್ರಿಯರಾಗಿದ್ದಾರೆ.

ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಕುಂದಗೋಳ

karnataka-election-Young ticket aspirants from three parties Mallikarjun Balikai

ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಟಿಕೆಟ್‌ ಆಕಾಂಕ್ಷಿ. ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಬಾಳಿಕಾಯಿ, ಸಂಘಟನೆಯಲ್ಲಿ ಸಾಕಷ್ಟು ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಶಾಸಕ ಸಿ.ಎಸ್‌. ಶಿವಳ್ಳಿ ಅವರ ನಿಧನದ ನಂತರ ತೆರವಾಗಿದ್ದ ಕ್ಷೇತ್ರದಲ್ಲಿ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಶಾಸಕಿಯಾಗಿದ್ದಾರೆ.

ಅಮರೇಶ್ ರೈತನಗರ್, ಕನಕಗಿರಿ

karnataka-election-Young ticket aspirants from three parties Amaresh Raithanagar

ಬಿಜೆಪಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ್‌ ರೈತನಗರ್‌, ಕನಕಗಿರಿಯಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿ. ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಜತೆಗೆ ಸ್ಥಳೀಯವಾಗಿಯೂ ತಮ್ಮದೇ ತಂಡದ ಮೂಲಕ ಗುರುತಿಸಿಕೊಂಡಿದ್ದಾರೆ.

ಸಪ್ತಗಿರಿ ಗೌಡ, ಗಾಂಧಿನಗರ

karnataka-election-Young ticket aspirants from three parties Sapthagiri Gowda

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ಪುತ್ರ ಸಪ್ತಗಿರಿ ಗೌಡ ಗಾಂಧಿನಗರ ಬಿಜೆಪಿ ಟಿಕೆಟ್‌ ಆಕಾಂಕ್ಷಿ. ಕಳೆದ ಬಾರಿ ಅಂತಿಮ ಹಂತದಲ್ಲಿ ಟಿಕೆಟ್‌ ದಕ್ಕಿಸಿಕೊಂಡು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಸಾಕಷ್ಟು ಪೈಪೋಟಿ ನೀಡಿದ್ದರು. ಈ ಬಾರಿ ಸಿದ್ಧತೆ ನಡೆಸಿ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದು, ಟಿಕೆಟ್‌ ಸಿಕ್ಕರೆ ಫಲಿತಾಂಶವನ್ನು ತಮ್ಮ ಕಡೆ ಮಾಡಿಕೊಳ್ಳುವ ವಿಶ್ವಾಸ ಹೊಂದಿದ್ದಾರೆ.

ಬಿ.ವೈ. ವಿಜಯೇಂದ್ರ, ಶಿಕಾರಿಪುರ

karnataka-election-Young ticket aspirants from three parties BY Vijayendra

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಈ ಬಾರಿ, ಶಿಕಾರಿಪುರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ. ಸ್ವತಃ ಬಿ.ಎಸ್‌. ಯಡಿಯೂರಪ್ಪ ಅವರೇ ಈ ಘೋಷಣೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ವರುಣ ಕ್ಷೇತ್ರದ ಕುರಿತೂ ಆಸಕ್ತಿಯ ಮಾತನ್ನು ವಿಜಯೇಂದ್ರ ಆಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಬಲ ಸಿಗುತ್ತದೆ ಎನ್ನುವುದು ಅನೇಕರ ಲೆಕ್ಕಾಚಾರ. ಆದರೆ ಈಗಿನ ಬಿಜೆಪಿ ಹೈಕಮಾಂಡ್‌ ನಿರ್ಧಾರವನ್ನು ಊಹೆ ಮಾಡುವುದು ಕಷ್ಟವಾದ್ಧರಿಂದ ಟಿಕೆಟ್‌ ಸಿಕ್ಕರೆ ಎಲ್ಲಿ ಸಿಗುತ್ತದೆ ಎನ್ನುವ ಪ್ರಶ್ನೆ ಉಳಿದಿದೆ. ಟಿಕೆಟ್‌ ಲಭಿಸಿದರೆ ಗೆದ್ದುಕೊಂಡು ಬರುತ್ತಾರೆ ಎನ್ನುವುದರಲ್ಲಿ ಬಿಜೆಪಿಗರಿಗೆ ಅನುಮಾನವಿಲ್ಲ.

ಶರಣು ತಳ್ಳಿಕೇರಿ, ಕುಷ್ಟಗಿ

karnataka-election-Young ticket aspirants from three parties Sharanu Thallikeri

ವಿದ್ಯಾರ್ಥಿಪರ ಹಾಗೂ ರೈತಪರ ಹೋರಾಟಗಳಲ್ಲಿ ಗುರುತಿಸಿಕೊಂಡ ಶರಣು ತಳ್ಳಿಕೇರಿ ಈ ಹಿಂದೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿದ್ದವರು. ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದ ಶರಣು ತಳ್ಳಿಕೇರಿ ಇದೀಗ ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷರಾಗಿದ್ದಾರೆ. ಕರ್ನಾಟಕ ಕುರಿಗಾರರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳ ಅಧ್ಯಕ್ಷರೂ ಆಗಿ ರಾಜಕೀಯ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದಾರೆ. ವಿವಿಧ ಉಪಚುನಾವಣೆಗಳಲ್ಲಿ ಜಯಗಳಿಸಿದ್ದ ಬಿ.ವೈ. ವಿಜಯೇಂದ್ರ ತಂಡದಲ್ಲಿ ಗುರುತಿಸಿಕೊಂಡಿದ್ದಾರೆ.

ಸಂತೋಷ್ ಕೆಂಚಾಂಬ‌, ಬೇಲೂರು

karnataka-election-Young ticket aspirants from three parties Santosh Kenchaamba

ಹಾಸನ ಜಿಲ್ಲೆಯ ಸಾಮಾಜಿಕ ಚಟುವಟಿಕೆಗಳಲ್ಲಿ ಹೆಸರುವಾಸಿಯಾಗಿದ್ದ , ವೀರಶೈವ ಲಿಂಗಾಯತ ಸಮುದಾಯದ ಕೆಂಚಾಂಬ ಕುಟುಂಬದ ಸಂತೋಷ್‌ ಕೆಂಚಾಂಬ ಕ್ಷೇತ್ರದಲ್ಲಿ ಸಕ್ರಿಯವಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಾಗಲೆ ಸುಮಾರು ಎರಡು ವರ್ಷದಿಂದ ಬೇಲೂರಿನಲ್ಲೇ ನೆಲೆಸಿ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

ಜಿ.ಎಸ್‌. ಶ್ಯಾಮ್‌, ಮಾಯಕೊಂಡ

karnataka-election-Young ticket aspirants from three parties GS Shyam

ಉದ್ಯಮಿ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ. ಸಂಘ ಪರಿವಾರದ ಜತೆ ಉತ್ತಮ ಬಾಂಧವ್ಯ ಹೊಂದಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯುವ ಆಕಾಂಕ್ಷಿ, ಈಗಾಗಲೆ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ.

ಉಳಿದಂತೆ ದೊಡ್ಡಬಳ್ಳಾಪುರದಿಂದ ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ವಸಂತ ಗೌಡ, ಕಾಪು ಕ್ಷೇತ್ರದಿಂದ ಶೇಷಾ ನಾಯಕ್, ಮಧುಗಿರಿ ಕ್ಷೇತ್ರದಿಂದ ಚಿತ್ರದುರ್ಗ ಯುವಮೋರ್ಚಾ ಅಧ್ಯಕ್ಷ ಹನುಮಂತೇಗೌಡ, ಬೀಳಗಿಯಿಂದ ಆನಂದ ಇಂಗಳಗೋವಿ ಸೇರಿ ಅನೇಕ ಯುವಕರು ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳು

ಐಶ್ವರ್ಯ ಮಹದೇವ್‌, ಕೆ.ಆರ್‌. ನಗರ

karnataka-election-Young ticket aspirants from three parties Aishwarya Mahadev

ಸಿದ್ದರಾಮಯ್ಯ ಆಪ್ತರಾಗಿದ್ದ ಮಂಚನಹಳ್ಳಿ ಮಹದೇವ್‌ ಅವರ ಪುತ್ರಿ ಐಶ್ವರ್ಯ ಮಹದೇವ್‌, ಇದೀಗ ಎಐಸಿಸಿ ಮಾಧ್ಯಮ ಸಂವಹನಕಾರರ ತಂಡದಲ್ಲಿದ್ದಾರೆ. ಕೆ.ಆರ್‌. ನಗರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲೂ ಐಶ್ವರ್ಯ ಟಿಕೆಟ್‌ ಕೇಳಿದ್ದರು. ಆದರೆ ಸಭೆಯೊಂದರಲ್ಲಿ ರವಿಶಂಕರ್‌ ಅವರ ಹೆಸರನ್ನು ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ನಂತರ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನ ಸಾ.ರಾ. ಮಹೇಶ್‌ ವಿರುದ್ಧ ರವಿಶಂಕರ್‌ ಸೋಲುಂಡಿದ್ದರು. ಈ ಬಾರಿಯೂ ಐಶ್ವರ್ಯ ಟಿಕೆಟ್‌ ಅಕಾಂಕ್ಷಿ. ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

ಸಂಯುಕ್ತ ಪಾಟೀಲ್‌, ವಿಜಯಪುರ ನಗರ

karnataka-election-Young ticket aspirants from three parties Samyuktha Patil

ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತ ಪಾಟೀಲ್‌, ವಿಜಯಪುರ ನಗರ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿ. ಜಿಲ್ಲಾ ಸಹಕಾರ ಬ್ಯಾಂಕ್‌ ನಿರ್ದೇಶಕಿಯಾಗುವ ಮೂಲಕ ಈಗಾಗಲೆ ರಾಜಕೀಯ ಪಟ್ಟುಗಳನ್ನು ಅರಿತಿರುವ ಸಂಯುಕ್ತ, ಇದೀಗ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯೂ ಹೌದು. ಕಾಂಗ್ರೆಸ್‌ನಿಂದ ಟಿಕೆಟ್‌ ಲಭಿಸಿದರೆ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿರುದ್ಧ ಸೆಣಸಲು ಸಿದ್ಧರಾಗಿದ್ದಾರೆ.

ನಿಖಿಲ್‌ ಕೊಂಡಜ್ಜಿ, ಹರಿಹರ

karnataka-election-Young ticket aspirants from three parties Nikhil Kondajji

ಕೇಂದ್ರದ ಮಾಜಿ ಸಚಿವ ಕೊಂಡಜ್ಜಿ ಬಸಪ್ಪ ಅವರ ಮೊಮ್ಮಗ ನಿಖಿಲ್‌ ಕೊಂಡಜ್ಜಿ ಅವರ ಹೆಸರು ಈ ಹಿಂದೆ ದಾವಣಗೆರೆ ಕ್ಷೇತ್ರಕ್ಕೆ ಕೇಳಿಬಂದಿತ್ತು. ಇದೀಗ ಹರಿಹರ ಕ್ಷೇತ್ರದಲ್ಲಿ ಟಿಕೆಟ್‌ ಕೇಳುತ್ತಿದ್ದಾರೆ. ಕೆಪಿಸಿಸಿ ಮಾಧ್ಯಮ ತಂಡದ ಸದಸ್ಯರಾಗಿರುವ ಆಗಿರುವ ನಿಖಿಲ್‌ ಕೊಂಡಜ್ಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ರಘುವೀರಗೌಡ, ರಾಜಾಜಿನಗರ

karnataka-election-Young ticket aspirants from three parties Raghuveer Gowda

ಸದ್ಯ ಬಿಜೆಪಿ ಶಾಸಕ ಎಸ್‌. ಸುರೇಶ್‌ ಕುಮಾರ್‌ ಪ್ರತಿನಿಧಿಸುವ ರಾಜಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಬೆಂಗಳೂರು ನಗರ ಯುವ ಮೋರ್ಚಾ ಮಾಜಿ ಅಧ್ಯಕ್ಷ ರಘುವೀರ ಗೌಡ ಉತ್ಸುಕರಾಗಿದ್ದಾರೆ. ಈಗಾಗಲೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮನೆ ಭೇಟಿ ಮೂಲಕ ಜನರ ನಡುವೆ ಇದ್ದಾರೆ.

ಭವ್ಯ ನರಸಿಂಹಮೂರ್ತಿ, ರಾಜಾಜಿನಗರ

karnataka-election-Young ticket aspirants from three parties Bhavya Narasimha murhy

ವಿವಿಧ ಕಾರ್ಪೊರೇಟ್‌, ಎನ್‌ಜಿಒ, ಕೊಲಂಬಿಯಾ ವಿವಿಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿ ಅನುಭವವಿರುವ ಭವ್ಯ ನರಸಿಂಹಮೂರ್ತಿ ರಾಜಾಜಿನಗರದಿಂದ ಟಿಕೆಟ್‌ ಕೇಳುತ್ತಿದ್ದಾರೆ. ಕೆಪಿಎಂಜಿ ಸಂಸ್ಥೆಯಲ್ಲಿದ್ದಾಗ ಕಾಂಗ್ರೆಸ್‌ ಪ್ರಣಾಳಿಕೆ ಸಿದ್ಧಪಡಿಸುವಿಕೆಯಿಂದ ಕಾಂಗ್ರೆಸ್‌ ಸಂಪರ್ಕಕ್ಕೆ ಬಂದ ಭವ್ಯ, ನಂತರದಲ್ಲಿ ರಾಹುಲ್‌ ಗಾಂಧಿ ಕಚೇರಿ ಮೂಲಕ ಕಾಂಗ್ರೆಸ್‌ ಸೇರ್ಪಡೆಯಾದರು. ಕೆಪಿಸಿಸಿ ವಕ್ತಾರೆಯಾಗಿರುವ ಭವ್ಯಾ, ಈಗಾಗಲೆ ರಾಜಾಜಿನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಟುವಟಿಕೆ ನಡೆಸುತ್ತಿದ್ದಾರೆ.

ಸುನೀಲ್‌ ಬೋಸ್‌, ತಿ. ನರಸೀಪುರ

karnataka-election-Young ticket aspirants from three parties Sunil Bose

ಮಾಜಿ ಸಚಿವ ಹಾಗೂ ಸಿದ್ದರಾಮಯ್ಯ ಅತ್ಯಾಪ್ತರಲ್ಲಿ ಒಬ್ಬರಾದ ಡಾ. ಎಚ್‌.ಸಿ. ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌, ತಿ. ನರಸೀಪುರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. ಈಗಾಗಲೆ ರಾಜಕೀಯ ಕಣದಲ್ಲಿ ಸಾಕಷ್ಟು ತೊಡಗಿಸಿಕೊಂಡಿರುವ ಸುನೀಲ್‌ ಬೋಸ್‌, ತಮಗೇ ಟಿಕೆಟ್‌ ಸಿಗುವ ವಿಶ್ವಾಸದಲ್ಲಿದ್ದಾರೆ. ಈ ಹಿಂದೆ ಮರಳು ಗಣಿಗಾರಿಕೆ ಕುರಿತಂತೆ ಆರೋಪವೊಂದು ಕೇಳಿಬಂದಿತ್ತು, ಆ ನಂತರ ಅದರಿಂದ ಹೊರಬಂದಿದ್ದಾರೆ ಎನ್ನಲಾಗಿದೆ.

ಮಿಥುನ್‌ ರೈ, ಮೂಡಬಿದ್ರೆ

karnataka-election-Young ticket aspirants from three parties Mithun Rai

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಆಪ್ತರಲ್ಲಿ ಗುರುತಿಸಿಕೊಂಡಿರುವ ಮಿಥುನ್‌ ರೈ ಟಿಕೆಟ್‌ ಕೇಳುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ಅಭಯಚಂದ್ರ ಜೈನ್‌ಗೆ ಕ್ಷೇತ್ರದಲ್ಲಿ ಪರ್ಯಾಯ ನಾಯಕರು ಇಲ್ಲವಾದರೂ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೈನ್‌ ಹೇಳಿರುವುದು ಮಿಥುನ್‌ ರೈಗೆ ಅವಕಾಶವನ್ನು ತಂದಿಟ್ಟಿದೆ. ಬಂಟ ಸಮುದಾಯದವರಾಗಿರುವುದು ಟಿಕೆಟ್‌ ಲಭಿಸಲು ಮತ್ತಷ್ಟು ಅನುಕೂಲವಾಗುತ್ತದೆ ಎನ್ನಲಾಗುತ್ತಿದೆ.

ನಿವೇದಿತ್‌ ಆಳ್ವ, ಶಿರಸಿ

karnataka-election-Young ticket aspirants from three parties Nivedit alva

ಕಾಂಗ್ರೆಸ್‌ನ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಪುತ್ರ ನಿವೇದಿತ್‌ ಆಳ್ವಾ, ಶಿರಸಿಯಿಂದ ಟಿಕೆಟ್‌ಗೆ ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ವಿಧಾನ ಪರಿಷತ್‌ ಚುನಾವಣೆ ಸಂದರ್ಭದಲ್ಲೂ ನಿವೇದಿತ್‌ ಹೆಸರು ಕೇಳಿಬಂದಿತ್ತು. ಆದರೆ ಆಗ ಟಿಕೆಟ್‌ ಸಿಕ್ಕಿರಲಿಲ್ಲ. ಜಿಲ್ಲೆಯಲ್ಲಿ ಪುತ್ರನ ನೆಲೆಯನ್ನು ಭದ್ರಪಡಿಸಲು ಮಾರ್ಗರೇಟ್‌ ಆಳ್ವಾ ಪ್ರಯತ್ನಿಸುತ್ತಿದ್ದಾರೆ.

ನಯನ, ಮೋಟಮ್ಮ

karnataka-election-Young ticket aspirants from three parties Nayana Motamma

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಟಿಕೆಟ್‌ ಆಕಾಂಕ್ಷಿ. ಮೋಟಮ್ಮ ಪುತ್ರಿಗೆ ಟಿಕೆಟ್‌ ನೀಡಬಾರದು ಎಂದು ಕಾಂಗ್ರೆಸ್‌ನ ಒಂದು ಗುಂಪು ಇತ್ತೀಚೆಗೆ ಸಭೆ ನಡೆಸಿದರೂ ವಿವಿಧ ಕಾರ್ಯಕ್ರಮಗಳು, ಮನೆ ಭೇಟಿ, ಸಾರ್ವಜನಿಕರ ಸಮಸ್ಯೆ ಆಲಿಸುವ ಮೂಲಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

ಕೀರ್ತಿ ಮೋರೆ, ಹುಬ್ಬಳ್ಳಿ-ಧಾರವಾಡ ಪಶ್ಚಿಮ

karnataka-election-Young ticket aspirants from three parties Keerthi morey

ಮಾಜಿ ಸಚಿವ ಎಸ್‌.ಆರ್‌. ಮೋರೆ ಪುತ್ರಿ ಕೀರ್ತಿ ಮೋರೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. ಸೆಪ್ಟೆಂಬರ್‌ನಲ್ಲಿ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಈ ಘೋಷಣೆ ಮಾಡಿದ್ದ ಕೀರ್ತಿ ಮೋರೆ, ಟಿಕೆಟ್‌ ನೀಡಲು ಹೈಕಮಾಂಡ್‌ ಒಪ್ಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು, ಉದ್ಘಾಟನಾ ಸಮಾರಂಭಗಳು, ಆರೋಗ್ಯ ತಪಾಸಣಾ ಶಿಬಿರಗಳ ಆಯೋಜನೆ ಮೂಲಕ ಕ್ರಿಯಾಶೀಲರಾಗಿದ್ದಾರೆ.

ಪ್ರಿಯಾಂಕಾ ಜಾರಕಿಹೊಳಿ, ಯಮಕನಮರಡಿ

Priyanka jarkiholi

ಬೆಳಗಾವಿ ರಾಜಕಾರಣದಲ್ಲಿ ತನ್ನದೇ ಛಾಪು, ಹಿಡಿತ ಹೊಂದಿರುವ ಜಾರಕಿಹೊಳಿ ಕುಟುಂಬದಿಂದ ಎರಡನೇ ತಲೆಮಾರು ರಾಜಕಾರಣ ಪ್ರವೇಶಿಸುವ ಸಾಧ್ಯತೆಯಿದೆ. ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಈ ಬಾರಿ ಟಿಕೆಟ್‌ ಪಡೆಯುವ ಸಾಧ್ಯತೆಯಿದೆ. ಈಗಾಗಲೆ ಕ್ಷೇತ್ರದಲ್ಲಿ ಚಟುವಟಿಕೆ ನಡೆಸುತ್ತಿದ್ದು, ರಾಜಕೀಯಕ್ಕೆ ಆಗಮಿಸುವುದಾಗಿ ಸ್ಪಷ್ಟಪಡಿಸಿದ್ದರು. ಪುತ್ರಿಗೆ ಯಮಕನಮರಡಿ ಕ್ಷೇತ್ರವನ್ನು ಬಿಟ್ಟುಕೊಟ್ಟು ತಾವು ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಸ್ಪರ್ಧಿಸಲು ಸತೀಶ್‌ ಜಾರಕಿಹೊಳಿ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ರಕ್ಷಿತ್‌ ಶಿವರಾಂ, ಬೆಳ್ತಂಗಡಿ

ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಜೊತೆ ಸಕ್ರೀಯವಾಗಿರುವ ರಕ್ಷಿತ್ ಶಿವರಾಂ ಅವರಿಗೆ ಮುಂದಿನ ಚುನಾವಣೆಯಿಂದ ಕಾಂಗ್ರೆಸ್ ಟಿಕೇಟ್ ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅವರ ಸೋದರ ಅಳಿಯ ಹಾಗೂ ನಿವೃತ್ತ ಎಸ್ಪಿ ಬಿ.ಕೆ.ಶಿವರಾಂ ಪುತ್ರ ರಕ್ಷಿತ್ ಶಿವರಾಂ. ಬೆಳ್ತಂಗಡಿ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಸದ್ದಿಲ್ಲದೇ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಗೆಲುವಿಗಾಗಿ ರಕ್ಷಿತ್ ಶಿವರಾಂ ಪ್ರಯತ್ನ ನಡೆಸಿದ್ದಾರೆ.

ಇನಾಯತ್‌ ಅಲಿ, ಮಂಗಳೂರು ಉತ್ತರ

ಉದ್ಯಮಿಯಾಗಿ, ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಇನಾಯತ್‌ ಅಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಡಿ.ಕೆ.ಶಿವಕುಮಾರ್ ಅವರಿಗೂ ಆಪ್ತರಾಗಿದ್ದಾರೆ. ಸಣ್ಣ ವಯಸ್ಸಿನಲ್ಲೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಗುತ್ತಿಗೆಯನ್ನು ವಹಿಸಿಕೊಂಡವರು. ತಮ್ಮ ಸಮುದಾಯದ ಜತೆಗೆ ಎಲ್ಲರ ಜತೆಗೂ ವಿಶ್ವಾಸ ಇರಿಸಿಕೊಂಡಿದ್ದಾರೆ.

ಎಸ್‌.ಎ. ಹುಸೇನ್‌, ಶಿವಾಜಿನಗರ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಎಸ್‌.ಎ. ಹುಸೇನ್‌, ಶಿವಾಜಿನಗರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. 2019ರಲ್ಲಿ ಉಪಚುನಾವಣೆ ನಡೆದಾಗಲೂ ತಮಗೆ ಟಿಕೆಟ್‌ ನೀಡುವಂತೆ ಹುಸೇನ್‌ ಒತ್ತಾಯಿಸಿದ್ದರು. ಈ ಹಿಂದೆ ಸೋಲುಂಡಿರುವ ರಿಜ್ವಾನ್‌ ಅರ್ಷ್‌ ಅವರಿಗೆ ಟಿಕೆಟ್‌ ನೀಡುವುದು ಬೇಡ ಎಂದು ಕೇಳಿದ್ದರು. ಈಗ ಮತ್ತೆ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಹಾಲಿ ಶಾಸಕರು ಇರುವುದರಿಂದ ಹುಸೇನ್‌ ಮನವಿಗೆ ಎಷ್ಟು ಸ್ಪಂದನೆ ದೊರಕುತ್ತದೆ ಎನ್ನುವುದು ಕಾದುನೋಡಬೇಕಿದೆ.

ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳು

ನಾಲ್ವರಿಗೆ ಟಿಕೆಟ್‌ ಘೋಷಣೆ

ಜೆಡಿಎಸ್‌ನಲ್ಲಿಯೂ ಯುವ ನಾಯಕರ ಸಂಖ್ಯೆ ಕಡಿಮೆಯಿಲ್ಲ. ಈಗಾಗಲೆ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜೆಡಿಎಸ್‌ ಘೋಷಣೆ ಮಾಡಿದೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪುತ್ರ, ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ರಾಮನಗರದಿಂದ, ಮಾಜಿ ಸಚಿವ ಜಿ.ಟಿ. ದೇವೇಗೌಡ ಪುತ್ರ ಜಿ.ಡಿ. ಹರೀಶ್‌ ಗೌಡ ಅವರಿಗೆ ಹುಣಸೂರಿನಿಂದ, ರಾಜ್ಯ ಜೆಡಿಎಸ್‌ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಪುತ್ರ ಸಿ.ಎಂ. ಫಯಾಜ್‌ ಅವರಿಗೆ ಹುಮನಾಬಾದ್‌ನಿಂದ ಟಿಕೆಟ್‌ ನೀಡಲಾಗಿದೆ. ಗುರುಮಿಟ್ಕಲ್‌ ಕ್ಷೇತ್ರಕ್ಕೆ ಹಾಲಿ ಶಾಸಕ ನಾಗನಗೌಡ ಕಂದಕೂರು ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿತ್ತಾದರೂ, ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ, ಅವರ ಪುತ್ರ ಶರಣಗೌಡ ಕಂದಕೂರು ಅವರಿಗೆ ಟಿಕೆಟ್‌ ನೀಡಲಾಗುವುದು ಎಂದು ಘೋಷಿಸಲಾಗಿದೆ.

ಎಚ್‌.ಪಿ. ಸ್ವರೂಪ್‌, ಹಾಸನ

karnataka-election-Young ticket aspirants from three parties HP Swarup

ಹಾಸನದಲ್ಲಿ ನಾಲ್ಕು ಅವಧಿಗೆ ಜೆಡಿಎಸ್‌ ಶಾಸಕರಾಗಿದ್ದ ಎಚ್‌.ಎಸ್‌. ಪ್ರಕಾಶ್‌ ಪುತ್ರ ಎಚ್‌.ಪಿ. ಸ್ವರೂಪ್‌ ಹೆಸರು ಈ ಬಾರಿ ಟಿಕೆಟ್‌ ಲಭಿಸುವವರ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಕಳೆದ ಚುನಾವಣೆಯಲ್ಲಿ ಎಚ್‌.ಎಸ್‌. ಪ್ರಕಾಶ್‌ ಸೋತಿದ್ದರು. ನಂತರ ನಿಧನರಾದರು. ಪುತ್ರ ಎಚ್‌.ಪಿ. ಸ್ವರೂಪ್‌ ಈಗಾಗಲೆ ರಾಜಕೀಯ ಕಣಕ್ಕೆ ಧುಮುಕಿದ್ದಾರೆ. ಹಾಸನ ಕ್ಷೇತ್ರವನ್ನು ಶತಾಯ ಗತಾಯ ಮರಳಿ ಪಡೆಯಬೇಕು ಎಂದು ಮುಂದಾಗಿರುವ ಜೆಡಿಎಸ್‌, ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಎಚ್‌.ಡಿ. ರೇವಣ್ಣ ಪತ್ನಿ ಭವಾನಿ ಅವರೇ ಕಣಕ್ಕಿಳಿದರೆ ಹೇಗೆ ಎಂದೂ ಸಮೀಕ್ಷೆ ಮಾಡುತ್ತಿದೆ. ಈಗಾಗಲೆ ಘೋಷಣೆಯಾಗಿರುವ 93 ಕ್ಷೇತ್ರಗಳಲ್ಲಿ ಹಾಸನದ ಯಾವುದೇ ಕ್ಷೇತ್ರ ಸೇರಿಲ್ಲ. ಮೃದು ಸ್ವಭಾವದ ಸ್ವರೂಪ್‌ಗೆ ಟಿಕೆಟ್‌ ನೀಡಬೇಕು, ಅದೇ ಸ್ವಭಾವವು ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹಾಯಕವಾಗುತ್ತದೆ ಎಂದು ಜೆಡಿಎಸ್‌ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Chamarajanagar Lok Sabha Constituency : ಚಾಮರಾಜನಗರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಈ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು 1962 ರಲ್ಲಿ ಅಸ್ತಿತ್ವಕ್ಕೆ ಬಂದಿತು.

VISTARANEWS.COM


on

Chamarajanagar Lok Sabha Constituency
Koo

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು. ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

Continue Reading

ಪ್ರಮುಖ ಸುದ್ದಿ

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Bangalore Rain News : ಸಂಜೆ ಶುರುವಾರ ಮಳೆ ರಾತ್ರಿ 12 ಗಂಟೆಯ ವರೆಗೆ ಬಿಡದೇ ಸುರಿಯಿತು. ಹೀಗಾಗಿ ಭಾನುವಾರದ ವಾರಾಂತ್ಯದ ಸಂಚಾರಕ್ಕೆ ಹೊರಗಡೆ ಬಂದಿದ್ದ ನಗರದ ಮಂದಿ ಅಲ್ಲಲ್ಲೇ ಉಳಿಯುವಂತಾಯಿತು. ಅವರ ಖುಷಿಗೆ ಮಳೆರಾಯನ ಅಡಚಣೆಯೂ ಉಂಟಾಯಿತು. ವಾಹನ ಸಂಚಾರಕ್ಕೆ ಅಡಚಣೆಯಾದ ಕಾರಣ ಕುಟುಂಬ ಸಮೇತ ಹೊರಟಿದ್ದವರು ರಸ್ತೆಯ ಬದಿಯಲ್ಲಿ ಕಾಯುವ ಪರಿಸ್ಥಿತಿ ಸೃಷ್ಟಿಯಾಯಿತು.

VISTARANEWS.COM


on

Banglore rain
Koo

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಭಾನುವಾರ ಸಂಜೆ ಏಕಾಏಕಿ ಭರ್ಜರಿ (Bangalore Rain News) ಮಳೆಯಾಯಿತು. ಸಂಜೆ 6 ಗಂಟೆಯ ಬಳಿಕ ಬೆಂಗಳೂರಿನ ನಗರ ವ್ಯಾಪ್ತಿಯ ಬಹುತೇಕ ಕಡೆ ಜೋರು ಮಳೆಯಾಯಿತು. ಈ ಮಳೆಯ ಅಬ್ಬರಕ್ಕೆ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದವು. ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಮರಗಳು ಉರುಳಿ ಬಿದ್ದ ಮರಗಳಿಂದಾಗಿ ವಾಹನಗಳಿಗೆ ಹಾನಿ ಉಂಟಾದವು. ಅದೇ ರೀತಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಸಂಜೆ ಶುರುವಾರ ಮಳೆ ರಾತ್ರಿ 12 ಗಂಟೆಯ ವರೆಗೆ ಬಿಡದೇ ಸುರಿಯಿತು. ಹೀಗಾಗಿ ಭಾನುವಾರದ ವಾರಾಂತ್ಯದ ಸಂಚಾರಕ್ಕೆ ಹೊರಗಡೆ ಬಂದಿದ್ದ ನಗರದ ಮಂದಿ ಅಲ್ಲಲ್ಲೇ ಉಳಿಯುವಂತಾಯಿತು. ಅವರ ಖುಷಿಗೆ ಮಳೆರಾಯನ ಅಡಚಣೆಯೂ ಉಂಟಾಯಿತು. ವಾಹನ ಸಂಚಾರಕ್ಕೆ ಅಡಚಣೆಯಾದ ಕಾರಣ ಕುಟುಂಬ ಸಮೇತ ಹೊರಟಿದ್ದವರು ರಸ್ತೆಯ ಬದಿಯಲ್ಲಿ ಕಾಯುವ ಪರಿಸ್ಥಿತಿ ಸೃಷ್ಟಿಯಾಯಿತು. ಬಸ್ ಸಂಚಾರವೂ ನಿಧಾಗೊಂಡಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸಲು ಹರಸಾಹಸಪಟ್ಟರು.

ಮೆಟ್ರೊ ಸಂಚಾರ ಬಂದ್​

ಮಳೆರಾಯನ ಅಬ್ಬರಕ್ಕೆ ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೊ ಸಂಚಾರಕ್ಕೂ ಅಡಚಣೆ ಉಂಟಾಯಿತು. ನೇರಳೆ ಲೈನ್​​ನ ಇಂದಿರಾನಗರ ಮತ್ತು ಎಂಜಿ ರಸ್ತೆಯ ನಡುವಿನ ಮೆಟ್ರೊ ಬ್ರಿಜ್​ ಮೇಲೆ ಮರವೊಂದು ಉರುಳಿ ಬಿತ್ತು. ಹೀಗಾಗಿ ಮೆಟ್ರೊ ಸಂಚಾರವನ್ನು ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ಇದರಿಂದಾಗಿ ಬೆಂಗಳೂರಿನ ಹೃದಯ ಭಾಗವಾಗಿರುವ ಎಂಜಿ ರಸ್ತೆಯ ನಿಲ್ದಾಣದಲ್ಲಿ ಪ್ರಯಾಣಿಕ ಕಿಕ್ಕಿರಿದು ತುಂಬಿಕೊಂಡರು. ಒಂದು ಕಡೆ ಹೊರಗಡೆ ಸುರಿಯುತ್ತಿರುವ ಮಳೆ ಮತ್ತೊಂಡೆದೆ ರೈಲು ಸಂಚಾರ ಬಂದ್​. ಹೀಗಾಗಿ ಜನರ ಎಲ್ಲಿಗೂ ಹೋಗಲು ಸಾಧ್ಯವಾಗದೇ ಪರಿತಪಿಸಿದರು.

ಮನೆಗಳಿಗೆ ನುಗ್ಗಿದ ನೀರು

ಕೆ.ಪಿ ಅಗ್ರಹಾರ, ಇಂದಿರಾನಗರ, ಬಸವೇಶ್ವರ ನಗರ, ಮಂತ್ರಿ ಮಾಲ್​ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿತು. ಏಕಾಏಕಿ ಕುಂಭದ್ರೋಣ ಮಳೆ ಸುರಿದ ಕಾರಣ ಚರಂಡಿಯಲ್ಲಿ ನೀರು ಹೋಗದೇ ಸಮೀಪದ ಮನೆಗಳಿಗೆ ನುಗ್ಗಿದವು. ಬಿಬಿಎಂಪಿ ಅಧಿಕಾರಿಗಳು ಮಳೆಗಾಲದ ಮುನ್ಸೂಚನೆಯ ಹೊರತಾಗಿಯೂ ಒಳಚರಂಡಿಗಳು ಹಾಗೂ ಮಳೆ ನೀರು ಕಾಲುವೆಗಳನ್ನು ಸರಿಯಾದ ಸಮಯಕ್ಕೆ ಸರಿಪಡಿಸಿಲ್ಲ. ಇದರಿಂದಾಗಿ ಮನೆಗಳಿಗೆ ಹಾಗೂ ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ ಎಂದು ಜನರು ಆರೋಪಿಸಿದರು.

ಉರುಳಿ ಬಿದ್ದ ಮರಗಳು

ಮಳೆಯ ಜತೆಗೆ ಮಾರುತವೂ ಜೋರಾಗಿತ್ತು. ಹೀಗಾಗಿ ಬೆಂಗಳೂರಿನ ನಾನಾ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದವು. ಅಧಿಕಾರಿಗಳ ಪ್ರಕಾರ ಒಂದೇ ರಾತ್ರಿಯಲ್ಲಿ 100ಕ್ಕೂ ಅಧಿಕ ಮರಗಳು ಧರಾಶಾಹಿಯಾಗಿವೆ. ಬಸವೇಶ್ವರ ನಗರ ವ್ಯಾಪ್ತಿಯೊಂದರಲ್ಲೇ 40 ಮರಗಳು ಉರುಳಿ ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಗಳು ಬೀಳುವ ಸಮಯದಲ್ಲಿ ವಿದ್ಯುತ್​ ತಂತಿಗಳು ಕೂಡ ತುಂಡಾದ ಕಾರಣ ಬೆಂಗಳೂರಿನ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಯಿತು. ನಾಗರಿಕರು ರಾತ್ರಿಯೆಲ್ಲ ಕತ್ತಲೆಯಲ್ಲಿ ಕಳೆಯುವಂತಾಯಿತು.

ಇದನ್ನೂ ಓದಿ: Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

ಟ್ರಾಫಿಕ್ ಜಾಮ್​

ವಿಪರೀತ ಮಳೆಗೆ ನಗರದ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಯಿತು. ಟ್ರಾಫಿಕ್ ಜಾಮ್ ನಿಂದ ಜನರು ಪರದಾಡುವಂತಾಯಿತು. ಹೆಬ್ಬಾಳದಿಂದ ಕೋಡಿಗೆಹಳ್ಳಿವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು. ಎಂಜಿ ರೋಡ್, ಮಾಗಡಿ ರೋಡ್, ಮೈಸೂರು ರೋಡ್, ಕೆಂಗೇರಿಯವರೆಗೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್ ಉಂಟಾಯಿತು. ತುಮಕೂರು ರೋಡ್ ನಲ್ಲಿ ಟ್ರಾಫಿಕ್ ಜಾಮ್ ಜೋರಾಯಿತು. ಮಳೆ ಕಡಿಮೆಯಾಗಿದ್ದರೂ ರಾತ್ರಿಯವರೆಗೂ ಟ್ರಾಫಿಕ್ ಜಾಮ್ ಕಂಡು ಬಂತು. ಅಲ್ಲಲ್ಲಿ ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ಅದರ ಮೇಲೆ ಓಡಾಡಿದ ವಾಹಗಳು ಅಲ್ಲಲ್ಲಿ ಕೆಟ್ಟು ನಿಂತವು.

ಅಂಡರ್ ಪಾಸ್​ಗಳಲ್ಲಿ ಕೆಟ್ಟು ನಿಂತ ವಾಹನಗಳು

ಬೆಂಗಳೂರಿನ ಹವಲಾರು ಕಡೆಗಳಲ್ಲಿ ಅಂಡರ್​ ಪಾಸ್​ ಕೆಳಗೆ ತುಂಬಿದ್ದ ನೀರಿನಲ್ಲಿ ವಾಹನಗಳು ಕೆಟ್ಟು ನಿಂತವು. ಇಂಥ ಪ್ರಕರಣಗಳಲ್ಲಿ ಹಲವಾರು ಮಂದಿ ಪ್ರಾಣಾಪಾಯಿಂದ ಪಾರಾದರು. ಶೇಷಾದ್ರಿಪುರದಲ್ಲಿ ಬಿಎಂಟಿಸಿ ಬಸ್​ ಕೆಟ್ಟು ನಿಂತ ಕಾರಣ ಆತಂಕ ಸೃಷ್ಟಿಯಾಗಿತ್ತು. ಸ್ಥಳೀಯರು ಬಸ್​ನಲ್ಲಿದ್ದ 22 ಮಂದಿಯನ್ನು ಕಾಪಾಡಿದರು.

ದಾಖಲಾದ ಮಳೆ (ಮಿಲಿಮೀಟರ್‌ಗಳಲ್ಲಿ)

ಹೊರಮಾವು(2) (ಮಹದೇವಪುರ): 80 ಮಿ.ಮೀ, ಕೊಡಿಗೇಹಳ್ಳಿ (ಯಲಹಂಕ): 78ಮಿ.ಮೀ, ವಿದ್ಯಾಪೀಠ (ದಕ್ಷಿಣ ವಲಯ) : 65.5 ಮಿ.ಮೀ, ಜಕ್ಕೂರು(1) (ಯಲಹಂಕ): 56 ಮಿ.ಮೀ, ಕಾಟನ್‌ಪೇಟೆ (ಪಶ್ಚಿಮ ವಲಯ): 55.5 ಮಿ.ಮೀ.
ಕೊಟ್ಟಿಗೆಪಾಳ್ಯ (ಆರ್‌ಆರ್‌ನಗರ): 54 ಮಿ.ಮೀ, ನಂದಿನಿಲೇಔಟ್ (ಪಶ್ಚಿಮ ವಲಯ): 52.5 ಮಿ.ಮೀ, ದಯಾನಂದನಗರ (ಪಶ್ಚಿಮ ವಲಯ): 49 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ (ಪಶ್ಚಿಮ ವಲಯ): 47.5 ಮಿ.ಮೀ, ಪೀಣ್ಯ ಸ್ಥಳೀಯ ಪ್ರದೇಶ (ದಾಸರಹಳ್ಳಿ): 45.5 ಮಿ.ಮೀ, ಯಲಹಂಕ (ಯಲಹಂಕ): 45.5 ಮಿ.ಮೀ, ವಿಶ್ವನಾಥ ನಾಗೇನಹಳ್ಳಿ (ಪೂರ್ವವಲಯ): 44.5 ಮಿ.ಮೀ, ಬೊಮ್ಮನಹಳ್ಳಿ (ಬೊಮ್ಮನಹಳ್ಳಿ ವಲಯ): 43.5 ಮಿ.ಮೀ, ಮಾರುತಿ ಮಂದಿರ ವಾರ್ಡ್ (ಪಶ್ಚಿಮ ವಲಯ): 43 ಮಿ.ಮೀ, ನಾಗಾಪುರ (ಪಶ್ಚಿಮ ವಲಯ): 41.5 ಮಿ.ಮೀ, ಹಂಪಿ ನಗರ (ದಕ್ಷಿಣ ವಲಯ): 40.5 ಮಿ.ಮೀ, ಸಂಪಂಗಿ ರಾಮನಗರ (1) (ಪೂರ್ವವಲಯ): 40 ಮಿ.ಮೀ, ಚೌಡೇಶ್ವರಿ ವಾರ್ಡ್ (ಯಲಹಂಕ): 39 ಮಿ.ಮೀ, ಬಿಟಿಎಂ ಲೇಔಟ್ (ದಕ್ಷಿಣ ವಲಯ): 38 ಮಿ.ಮೀ, ನಾಯಂಡಹಳ್ಳಿ (ಪಶ್ಚಿಮ ವಲಯ): 37 ಮಿ.ಮೀ, ಚಾಮರಾಜಪೇಟೆ (ಪಶ್ಚಿಮ ವಲಯ): 36.5 ಮಿ.ಮೀ, ಪುಲಕೇಶಿನಗರ (ಪೂರ್ವವಲಯ): 34.5 ಮಿ.ಮೀ, ಹೇರೋಹಳ್ಳಿ 33.5 ಮಿ.ಮೀ, ರಾಜಾಜಿನಗರ (ಪಶ್ಚಿಮ ವಲಯ): 33 ಮಿ.ಮೀ, ರಾಜರಾಜೇಶ್ವರಿ ನಗರ 31.5 ಮಿ.ಮೀ, ಉತ್ತರಹಳ್ಳಿ: 28 ಮಿ.ಮೀ, ಎಚ್ಎಸ್ಆರ್ ಲೇಔಟ್ ದಾಖಲಾದ 27.5 ಮಿ.ಮೀ, ಬಿಳೇಕಹಳ್ಳಿ (ಬೊಮ್ಮನಹಳ್ಳಿ ವಲಯ): 25.5 ಮಿ.ಮೀ, ದೊರೆಸಾನಿಪಾಳ್ಯ: 24.5 ಮಿ.ಮೀ, ಹೆಮ್ಮಿಗೆಪುರ 23.5 ಮಿ.ಮೀ, ಪಟ್ಟಾಭಿರಾಮನಗರ: 22 ಮಿ.ಮೀ, ಕುಶಾಲನಗರ 21 ಮಿ.ಮೀ, ಕೋಣನಕುಂಟೆ: 19.5 ಮಿ.ಮೀ.
ಸಿಂಗಸಂದ್ರ-2: 18.5 ಮಿ.ಮೀ, ಅರಕೆರೆ: 18.5 ಮಿ.ಮೀ, ರಾಜರಾಜೇಶ್ವರಿನಗರ: 18 ಮಿ.ಮೀ, ವಿದ್ಯಾರಣ್ಯಪುರ: 17.5 ಮಿ.ಮೀ, ದೊಡ್ಡನೆಕ್ಕುಂದಿ: 16.5 ಮಿ.ಮೀ, ಬಾಣಸವಾಡಿ: 15 ಮಿ.ಮೀ, ಮನೋರಾಯನಪಾಳ್ಯ: 15 ಮಿ.ಮೀ
ವನ್ನರಪೇಟ್: 14.5 ಮಿ.ಮೀ, ಹೆಮ್ಮಿಗೆಪುರ: 14 ಮಿ.ಮೀ, ಬೆಳ್ಳಂದೂರು: 13 ಮಿ.ಮೀ, ಹೊಯ್ಸಳನಗರ: 12 ಮಿ.ಮೀ, ಎಚ್.ಗೊಲ್ಲಹಳ್ಳಿ: 11.5 ಮಿ.ಮೀ, ಚೊಕ್ಕಸಂದ್ರ: 11 ಮಿ.ಮೀ, ಕಮ್ಮನಹಳ್ಳಿ: 10 ಮಿ.ಮೀ, ಹಾಲ್ ವಿಮಾನ ನಿಲ್ದಾಣ: 10 ಮಿ.ಮೀ, ಕೆಂಗೇರಿ: 10 ಮಿ.ಮೀ, ಎಚ್​ಎ ವಿಮಾನ ನಿಲ್ದಾಣ-2: 10 ಮಿ.ಮೀ, ಮಾರತ್ತಹಳ್ಳಿ: 10 ಮಿ.ಮೀ.

Continue Reading

ಪ್ರಮುಖ ಸುದ್ದಿ

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Mysore lok sabha Constituency :ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

VISTARANEWS.COM


on

Mysore lok sabha constituency
Koo

ಬೆಂಗಳೂರು: ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಎರಡು ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದೆ. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಿಡಿತ ಹೊಂದಿರುವ ಬಿಜೆಪಿಯ ಮೈತ್ರಿ ಪಾಲುದಾರ ಜೆಡಿಎಸ್ ಅವರ ಗೆಲುವಿನ ಅಭಿಯಾನದಲ್ಲಿ ಸಾಥ್ ನೀಡಿದೆ. ಹೀಗಾಗಿ ಈ ಬಾರಿಯ ಚುನಾವಣೆ ‘ಕಿಂಗ್ ವರ್ಸಸ್ ಆರ್ಡಿನರಿ ಸಿಟಿಜನ್’ ಎಂಬ ಟ್ಯಾಗ್ ಲೈನ್ ಹೊಂದಿದೆ. ಕಾಂಗ್ರೆಸ್​ನಿಂದ ಆ ಪಕ್ಷದ ರಾಜ್ಯ ವಕ್ತಾರ ಲಕ್ಷ್ಮಣ ಕಣದಲ್ಲಿದ್ದಾರೆ.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರವು ಮುಖ್ಯವಾಗಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ.ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಹಿಂದಿನ ಮೂರು ಚುನಾವಣಾ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ : Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Continue Reading

ಹಾವೇರಿ

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Haveri Lok Sabha Constituency: ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

VISTARANEWS.COM


on

Haveri Lok Sabha Constituency
Koo

ಹಾವೇರಿ: ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಆಗಿರುವ, ಅರೆ ಮಲೆನಾಡು ಎಂದು ಕೂಡ ಖ್ಯಾತಿ ಗಳಿಸಿರುವ ಹಾವೇರಿಯಲ್ಲಿ (Haveri Lok Sabha Constituency) ರಾಜಕೀಯ ಸನ್ನಿವೇಶ ಬದಲಾಗಿದೆ. ಇದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಅವರು ಬಿಜೆಪಿಯಿಂದ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಇನ್ನು, ಇವರ ವಿರುದ್ಧ ಕಾಂಗ್ರೆಸ್‌ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡಿದ್ದು, ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆದಿದೆ.

ಬಿಜೆಪಿಯ ಶಿವಕುಮಾರ್‌ ಉದಾಸಿ ಅವರು ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದು, ಈ ಬಾರಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. 2008ರಲ್ಲಿ ಹಾವೇರಿ ಲೋಕಸಭೆ ಕ್ಷೇತ್ರ ರಚನೆಯಾಗಿದ್ದು, ಇದುವರೆಗೆ ಬಿಜೆಪಿ ಭದ್ರಕೋಟೆಯೇ ಆಗಿದೆ. ಲಿಂಗಾಯತ ಸಮುದಾಯದವರೇ ನಿರ್ಣಾಯಕರಾಗಿರುವ, ಕುರುಬ ಸಮುದಾಯದ ಮತದಾರರೂ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ಸ್ಪರ್ಧಿಸಿದ್ದು, ಜಾತಿ ಬಲ, ಮೋದಿ ನಾಮಬಲದಿಂದ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಮತದಾರರ ಸಂಖ್ಯೆ

ಪುರುಷರು9.02 ಲಕ್ಷ
ಮಹಿಳೆಯರು8.90 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು83
ಒಟ್ಟು17.92 ಲಕ್ಷ

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಹಾವೇರಿಯ 5 ಹಾಗೂ ಗದಗದ 3 ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಶಿರಹಟ್ಟಿ, ಗದಗ, ರೋಣ, ಹಾನಗಲ್‌, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು ವಿಧಾನಸಭೆ ಕ್ಷೇತ್ರಗಳು ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸಿದ್ದು, ಈ ಬಾರಿಯ ವಿಶ್ವಾಸ ಹೆಚ್ಚಾಗಲು ಕಾರಣ ಎಂದು ತಿಳಿದುಬಂದಿದೆ.

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್‌ ಉದಾಸಿ ಅವರು 1.40 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಡಿ.ಆರ್.ಪಾಟೀಲ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಶಿವಕುಮಾರ್‌ ಉದಾಸಿ ಅವರು ಕಾಂಗ್ರೆಸ್‌ನ ಸಲೀಂ ಅಹ್ಮದ್‌ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Continue Reading
Advertisement
Tattoo Care
ಆರೋಗ್ಯ7 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ37 mins ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ37 mins ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ37 mins ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ5 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ6 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ7 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ8 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20248 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌