oscars 2023 Shortlist | ಆಸ್ಕರ್ ರೇಸಿನಲ್ಲಿ ಟಾಪ್‌ಗನ್-2, ಅವತಾರ್-2 ಮುನ್ನಡೆ! ಆರ್‌ಆರ್‌ಆರ್ ಕತೆ ಏನು? - Vistara News

ಪ್ರಮುಖ ಸುದ್ದಿ

oscars 2023 Shortlist | ಆಸ್ಕರ್ ರೇಸಿನಲ್ಲಿ ಟಾಪ್‌ಗನ್-2, ಅವತಾರ್-2 ಮುನ್ನಡೆ! ಆರ್‌ಆರ್‌ಆರ್ ಕತೆ ಏನು?

95ನೇ ಆಸ್ಕರ್ ಪ್ರಶಸ್ತಿಯ ನಾಮನಿರ್ದೇಶನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಟಾಪ್ ಗನ್: ಮೇವರಿಕ್, ಬ್ಲ್ಯಾಕ್ ಪ್ಯಾಂಥರ್: ವಕಾಂಡಾ ಫಾರೆವರ್, ಅವತಾರ್-2 ಸಿನಿಮಾಗಳು ಮುನ್ನಡೆ ಪಡೆದುಕೊಂಡಿವೆ(oscars 2023 Shortlist).

VISTARANEWS.COM


on

oscars 2023 Shortlist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2023 ಸಾಲಿನ ಆಸ್ಕರ್ ಪ್ರಶಸ್ತಿ ನಾಮನಿರ್ದೇಶನ ಪ್ರಕ್ರಿಯೆಗಳು ನಡೆದಿವೆ. ಬ್ಲಾಕ್‌ಬಸ್ಟರ್ ಚಿತ್ರಗಳಾದ ಟಾಪ್ ಗನ್: ಮೇವರಿಕ್(Top Gun: Maverick), ಬ್ಲ್ಯಾಕ್ ಪ್ಯಾಂಥರ್: ವಕಾಂಡಾ ಫಾರೆವರ್(Black Panther: Wakanda Forever), ಅವತಾರ್-2 (Avatar: The Way of Water) ಸಿನಿಮಾಗಳು ಆಸ್ಕರ್ ನಾಮನಿರ್ದೇಶನ ರೇಸ್‌ನಲ್ಲಿ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿವೆ. ಜತೆಗೆ, ಪಾಪ್ ಸ್ಟಾರ್‌ಗಳಾದ ಲೇಡಿ ಗಾಗಾ, ಟೇಲರ್ ಸ್ವಿಫ್ಟ್, ರಿಹನ್ನಾ ಕೂಡ ನಾಮನಿರ್ದೇಶನ ರೇಸ್‌ನಲ್ಲಿ ಮುಂದಿದ್ದಾರೆ(oscars 2023 Shortlist).

ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಆಸ್ಕರ್) ಸಂಸ್ಥೆಯು, 95ನೇ ಆಸ್ಕರ್‌ ನಾಮನಿರ್ದೇಶನದ ಶಾರ್ಟ್‌ಲಿಸ್ಟ್ ಪ್ರಕಟಿಸಿದೆ. ಸಾಕ್ಷ್ಯಚಿತ್ರಗಳು, ಅಂತಾರಾಷ್ಟ್ರೀಯ ಚಿತ್ರಗಳು, ಪ್ರಸಾದನ ಮತ್ತು ಕೇಶ ವಿನ್ಯಾಸ, ಸಂಗೀತ, ಓರಿಜನಲ್ ಸಾಂಗ್, ಸೌಂಡ್ ಮತ್ತು ವಿಷವಲ್ ಎಫೆಕ್ಟ್ ಮತ್ತು ಕಿರು ಚಿತ್ರಗಳ ವಿಭಾಗದಲ್ಲಿ ನಾಮನಿರ್ದೇಶನ ಮಾಡಲಾಗುತ್ತಿದೆ.

ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಪಾನ್ ನಳಿನ್ ಅವರ ಗುಜರಾತಿ ಸಿನಿಮಾ ಛೆಲ್ಲೋ ಶೋ ನಾಮನಿರ್ದೇಶನ ಮಾಡಲಾಗಿದೆ. ವಾಸ್ತವದಲ್ಲಿ ಎಸ್ ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಸಿನಿಮಾ ಅಧಿಕೃತವಾಗಿ ಪ್ರವೇಶ ಪಡೆಯಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದಾಗ್ಯೂ,
ಓರಿಜನಲ್ ಸಾಂಗ್ ವಿಭಾಗದಲ್ಲಿ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಹಾಡು ಸೇರಿದಂತೆ ವಿವಿಧ ಕೆಟಗರಿಯಲ್ಲಿ ಸ್ವತಂತ್ರವಾಗಿ ನಾಮನಿರ್ದೇಶನವಾಗುತ್ತಿದೆ.

ಇದನ್ನು ಓದಿ | RRR Movie | ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ಆರ್‌ಆರ್‌ಆರ್‌ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗುತ್ತಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Narendra Modi :2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

VISTARANEWS.COM


on

Narendra Modi
Koo

ಚೆನ್ನೈ: ಹಲವಾರು ತಿಂಗಳ ಲೋಕ ಸಭಾ ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಕೈಗೊಂಡಿದ್ದ 45 ಗಂಟೆಗಳ ಧ್ಯಾನವನ್ನು ಪೂರ್ಣಗೊಳಿಸಿದ್ದಾರೆ. ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾಗಿರುವ ಧ್ಯಾನ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಧ್ಯಾತ್ಮಿಕ ಕೈಂಕರ್ಯ ಮಾಡಿದ್ದರು.

2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

ಇದು ಭಾರತದ ದಕ್ಷಿಣ ತುದಿಯಾಗಿದೆ. ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಪ್ರದೇಶ ಸಂಗಮವಾಗುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳ. ಕನ್ಯಾಕುಮಾರಿಗೆ ಹೋಗುವ ಮೂಲಕ ಮೋದಿ ರಾಷ್ಟ್ರೀಯ ಏಕತೆಯ ಸಂಕೇತವನ್ನು ಸಾರಿದ್ದರು ಎನ್ನಲಾಗಿದೆ.

ಜೂನ್ 1 ರಂದು ನಡೆಯಲಿರುವ 2024 ರ ಲೋಕಸಭಾ ಚುನಾವಣೆಯ ಅಂತಿಮ ಮತ್ತು ಏಳನೇ ಹಂತದ ಹಿನ್ನೆಲೆಯಲ್ಲಿ ಮೋದಿ ಗುರುವಾರ ಪಂಜಾಬ್​​ ಹೋಶಿಯಾರ್​ಪುರದಲ್ಲಿ ತಮ್ಮ ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದರು.

ಸುದೀರ್ಘ ಪ್ರಚಾರ ರ್ಯಾಲಿ

ಮೋದಿ 75 ದಿನಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳು ಸೇರಿದಂತೆ ಸುಮಾರು 206 ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅವರು ವಿವಿಧ ಸುದ್ದಿ ಮತ್ತು ಮಾಧ್ಯಮ ವೇದಿಕೆಗಳೊಂದಿಗೆ ಸುಮಾರು 80 ಸಂದರ್ಶನಗಳನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಆಧ್ಯಾತ್ಮಿಕ ಪ್ರವಾಸಗಳನ್ನು ಕೈಗೊಂಡಿದ್ದರು. 2019ರಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ್ದ ಅವರು, 2014ರಲ್ಲಿ ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮುಖಂಡ ತೇಜಸ್ವಿ ಯಾದವ್ ಅವರು ಶನಿವಾರ ಕನ್ಯಾಕುಮಾರಿಯಲ್ಲಿ ಮೋದಿಯವರ ನಡೆಸುತ್ತಿರುವ ಆಧ್ಯಾತ್ಮಿಕ ಚಟುವಟಿಕೆಯನ್ನು ಫೋಟೋ ಶೂಟ್” ಎಂದು ಲೇವಡಿ ಮಾಡಿದ್ದರು. ಮೋದಿ ಅವರು ಯಾವುದೇ ಧ್ಯಾನ ಮಾಡುತ್ತಿಲ್ಲ, ಫೋಟೋ ಶೂಟ್ ಮಾತ್ರ ನಡೆಯುತ್ತಿದೆ. ಫೋಟೋ ಶೂಟ್ ಮುಗಿದ ನಂತರ, ಅವರು ಹಿಂತಿರುಗುತ್ತಾರೆ” ಎಂದು ತೇಜಸ್ವಿ ಯಾದವ್ ಹೇಳಿದರು.

Continue Reading

ಕರ್ನಾಟಕ

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

KCET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2024 ಫಲಿತಾಂಶ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

VISTARANEWS.COM


on

KCET Result 2024
Koo

ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET Result 2024) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಜೂನ್‌ ಮೊದಲ ವಾರದಲ್ಲಿ (KCET Result 2024) ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಇದೀಗ ಅಧಿಕೃತವಾಗಿ ಕೆಇಎ ಫಲಿತಾಂಶ ಬಿಡುಗಡೆ ಮಾಡಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿತ್ತು.

ಇದನ್ನೂ ಓದಿ | Spoken English Classes : ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ; ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಇಂಗ್ಲಿಷ್‌ ಕ್ಲಾಸ್‌!

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

Continue Reading

Live News

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿ ಇಲ್ಲಿ ಲಭ್ಯವಿದೆ.

VISTARANEWS.COM


on

Exit Poll Live 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

Continue Reading

ಪ್ರಮುಖ ಸುದ್ದಿ

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Rohit Sharma :ಒಲಿ ಪೋಪ್ ಅವರನ್ನು ಔಟ್​ ಮಾಡುವಾಗ ಅವರ ಚಲನೆಯನ್ನು ಮೊದಲು ಗಮನಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿತ್ತು. ಪೋಪ್ ಅವರನ್ನು ಔಟ್ ಮಾಡುವ ಮೊದಲು ವಿಕೆಟ್​ ಹಿಂದಿನಿಂದ ಬಂದ ಧ್ವನಿ ಜುರೆಲ್ ಅವರದ್ದು ಎಂದು ಹೇಳಲಾಗಿತ್ತು. ಆದರೆ, ಸರ್ಫರಾಜ್ ಇದಕ್ಕೆ ವ್ಯತಿರಿಕ್ತವಾಗಿ, ಲೆಗ್ ಸ್ಲಿಪ್​ನಲ್ಲಿ ನಿಂತಿದ್ದ ನಾನೇ ಎಚ್ಚರಿಸಿದ್ದೆ ಎಂದು ಹೇಳಿದ್ದರು.

VISTARANEWS.COM


on

Rohit Sharma
Koo

ಬೆಂಗಳೂರು: ಮೂರು ತಿಂಗಳ ಹಿಂದೆ ನಡೆದ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 4-1 ಮುನ್ನಡೆ ಸಾಧಿಸಿತ್ತು. ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಅವರಂತಹ ಹಿರಿಯ ಆಟಗಾರರು ವಿವಿಧ ಕಾರಣಗಳಿಂದಾಗಿ ಅಲಭ್ಯರಾಗಿದ್ದರಿಂದ ಸರಣಿಯಲ್ಲಿ ಸಾಕಷ್ಟು ಯುವ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಸರಣಿಯ ಸಮಯದಲ್ಲಿ ವಿಕೆಟ್ ಕೀಪಿಂಗ್ ಕರ್ತವ್ಯಗಳಿಗಾಗಿ ಧ್ರುವ್ ಜುರೆಲ್ ಅವರನ್ನು ಕ್ರಮವಾಗಿ ಮೂರು, ನಾಲ್ಕನೇ ಮತ್ತು ಐದನೇ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ, ರೋಹಿತ್ ಶರ್ಮಾ (Rohit Sharma) ನೇತೃತ್ವದ ಬಳಗ ಸರಣಿಯನ್ನು ಸುಲಭವಾಗಿ ವಶಕ್ಕೆ ತೆಗೆದುಕೊಂಡಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಅವರ ನಡುವೆ ನಡೆದ ಸ್ಟಂಪಿಂಗ್​ ವಿಚಾರದ ನಡುವಿನ ಚರ್ಚೆ ವ್ಯಾಪಕ ಗಮನ ಸೆಳೆದಿತ್ತು. ಕುಲ್ದೀಪ್ ಯಾದವ್ ಬೌಲಿಂಗ್​ನಲ್ಲಿ ಒಲಿ ಪೋಪ್ ಅವರನ್ನು ಔಟ್​ ಮಾಡುವಾಗ ಅವರ ಚಲನೆಯನ್ನು ಮೊದಲು ಗಮನಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿತ್ತು. ಪೋಪ್ ಅವರನ್ನು ಔಟ್ ಮಾಡುವ ಮೊದಲು ವಿಕೆಟ್​ ಹಿಂದಿನಿಂದ ಬಂದ ಧ್ವನಿ ಜುರೆಲ್ ಅವರದ್ದು ಎಂದು ಹೇಳಲಾಗಿತ್ತು. ಆದರೆ, ಸರ್ಫರಾಜ್ ಇದಕ್ಕೆ ವ್ಯತಿರಿಕ್ತವಾಗಿ, ಲೆಗ್ ಸ್ಲಿಪ್​ನಲ್ಲಿ ನಿಂತಿದ್ದ ನಾನೇ ಎಚ್ಚರಿಸಿದ್ದೆ ಎಂದು ಹೇಳಿದ್ದರು.

ಈ ಎಲ್ಲಾ ಗದ್ದಲಗಳ ನಡುವೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಕೆಟ್ ಪಡೆದ ಆಟಗಾರ ಯಾರು ಬಹಿರಂಗಪಡಿಸಿದ್ದಾರೆ. ಚೆಂಡನ್ನು ಎಸೆಯುವ ಮೊಲದೇ ಔಟ್ ಆಗಿದ್ದನ್ನು ನಿರೀಕ್ಷಿಸಿದ್ದಕ್ಕಾಗಿ ಅವರು ಸರ್ಫರಾಜ್ ಅವರನ್ನು ಶ್ಲಾಘಿಸಿದ್ದರು. ಹೀಗಾಗಿ ವಿಕೆಟ್ ಕೀಪರ್ ಜುರೆಲ್ ಅವರನ್ನು ರೆಡಿಯಾಗಿ ಇರುವಂಥೆ ಎಚ್ಚರಿಸಿದರು. ಈ ಎಲ್ಲ ಸಂದರ್ಭಗಳನ್ನು ಉಲ್ಲೇಖಿಸಿದ ರೋಹಿತ್ ಶರ್ಮಾ. ಭಾರತೀಯ ತಂಡದ ಯುವ ಬ್ಯಾಚ್​ನೊಂದಿಗೆ ಆಡುವುದನ್ನು ಇಷ್ಟಪಡುತ್ತೇನೆ ಎಂದು ಅವರು ಹೇಳಿದ್ದರು. ವಿಶೇಷವೆಂದರೆ ಆ ರೆಡ್-ಬಾಲ್ ಸರಣಿಯಲ್ಲಿ ಆಶ್ಚರ್ಯಕರ ಸಂಖ್ಯೆಯ ಐದು ಆಟಗಾರರು ಭಾರತಕ್ಕಾಗಿ ಪಾದಾರ್ಪಣೆ ಮಾಡಿದ್ದರು.

ಇದನ್ನೂ ಓದಿ: Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

ಅಂದಹಾಗೆ, ಆ ಸ್ಟಂಪಿಂಗ್ ಅದ್ಭುತವಾಗಿತ್ತು. ಅದನ್ನು ನಿರೀಕ್ಷಿಸಿದವರ ಸರ್ಫರಾಜ್ ಖಾನ್. ನಾನು ಅವನನ್ನು ಸ್ವಲ್ಪ ಮುಂದೆ ನಿಲ್ಲಿಸಿದ್ದೆ, ಸರ್ಫರಾಜ್​ ಆಗ ಹೇಳಿದ್ದರು ‘ಈಗ, ಅವರು ಕ್ರೀಸ್ ನಿಂದ ಹೊರಹೋಗುತ್ತಾರೆ. ಸ್ಟಂಪಿಂಗ್ ಗೆ ಸಿದ್ಧರಾಗಿರಿ ಎಂದು ಹೇಳಿದ್ದರು. ಈ ರೀತಿಯ ಎಲ್ಲ ಭಾವನೆಗಳೊಂದಿಗೆ ಹುಡುಗರೊಂದಿಗೆ ಆಡುವುದನ್ನು ನಾನು ಸಂಪೂರ್ಣವಾಗಿ ಆನಂದಿಸಿದೆ. ಭವಿಷ್ಯದಲ್ಲಿ ನಾವು ಖುಷಿಯಿಂದ ಆಡುತ್ತೇವೆ ಎಂದು ಆಶಿಸುತ್ತೇವೆ, “ಎಂದು ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಹೇಳಿದ್ದಾರೆ.

ಐಪಿಎಲ್​ನಲ್ಲಿ ಒಂದಾದ ರೋಹಿತ್ ಶರ್ಮಾ

ಐಪಿಎಲ್​​ನ 17 ನೇ ಋತುವಿಗೆ ಮುಂಚಿತವಾಗಿ ಭಾರತದ ನಾಯಕ ಮುಂಬೈ ಇಂಡಿಯನ್ಸ್ (ಎಂಐ) ಗಾಗಿ ತಮ್ಮ ಕರ್ತವ್ಯಗಳನ್ನು ವಹಿಸಿಕೊಂಡಿದ್ದಾರೆ. ಆದರೆ ನಾಯಕನಾಗಿ ಅಲ್ಲ. ಅವರ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಯಶಸ್ವಿ ಫ್ರಾಂಚೈಸಿಯ ನಾಯಕರನ್ನಾಗಿ ನೇಮಿಸಲಾಯಿತು. ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ (ಜಿಟಿ) ಮುಂಬೈ ಇಂಡಿಯನ್ಸ್ 15 ಕೋಟಿ ರೂ.ಗೆ ಖರೀದಿಸಿದ ನಂತರ ಈ ಬದಲಾವಣೆ ಮಾಡಲಾಗಿದೆ. ಭಾರತೀಯ ಆಲ್ರೌಂಡರ್ ಗುಜರಾತ್ ತಂಡಕ್ಕೆ 2022 ರಲ್ಲಿ ಐಪಿಎಲ್ ಟ್ರೋಫಿ ಗೆಲ್ಲಿಸಿಕೊಟ್ಟಿದ್ದರು. 2023 ರಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾದರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ವಿರುದ್ಧ ಸೋತಿದ್ದರು.

ಆದಾಗ್ಯೂ, ರೋಹಿತ್ ಶರ್ಮಾ ಮುಂಬೈ ತಂಡವನ್ನು ಐದು ಚಾಂಪಿಯನ್ಶಿಪ್ ಪ್ರಶಸ್ತಿಗಳಿಗೆ ಮುನ್ನಡೆಸಿದ ಅಪೇಕ್ಷಣೀಯ ದಾಖಲೆಯನ್ನು ಹೊಂದಿದ್ದಾರೆ, ನಾಯಕನಾಗಿ ಅಷ್ಟೇ ಸಂಖ್ಯೆಯ ಪ್ರಶಸ್ತಿಗಳನ್ನು ಹೊಂದಿರುವ ಎಂಎಸ್ ಧೋನಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ನಂತರ, ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಜೂನ್ನಿಂದ ಪ್ರಾರಂಭವಾಗಲಿರುವ ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಏಸ್ ಬ್ಯಾಟ್ಸ್ಮನ್ ಭಾರತೀಯ ತಂಡವನ್ನು ಮುನ್ನಡೆಸಲಿದ್ದಾರೆ.

Continue Reading
Advertisement
World Milk Day
ಆರೋಗ್ಯ11 seconds ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ8 mins ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ14 mins ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News20 mins ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್32 mins ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು41 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ44 mins ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ48 mins ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Exit Poll 2024
ದೇಶ59 mins ago

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

POK
ವಿದೇಶ60 mins ago

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು41 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌