Lionel Messi | ಚಾಂಪಿಯನ್​ ಲಿಯೋನೆಲ್​ ಮೆಸ್ಸಿ ಜತೆ ನಟಿ ಶ್ರದ್ಧಾ ಕಪೂರ್​ ಮಾಜಿ ಬಾಯ್​ಫ್ರೆಂಡ್​; ಫೋಟೊ ವೈರಲ್​ - Vistara News

ಕ್ರೀಡೆ

Lionel Messi | ಚಾಂಪಿಯನ್​ ಲಿಯೋನೆಲ್​ ಮೆಸ್ಸಿ ಜತೆ ನಟಿ ಶ್ರದ್ಧಾ ಕಪೂರ್​ ಮಾಜಿ ಬಾಯ್​ಫ್ರೆಂಡ್​; ಫೋಟೊ ವೈರಲ್​

ಫೋಟೋಗ್ರಾಫರ್​ ಆಗಿರುವ ರೋಹನ್​ ಶ್ರೇಷ್ಠ ತಿಂಗಳ ಹಿಂದೆ ಫೊಟೊ ಶೂಟ್​ ಮಾಡುವಾಗ ಮೆಸ್ಸಿ (Lionel Messi) ಜತೆ ಸೆಲ್ಫಿ ತೆಗೆಸಿಕೊಂಡಿದ್ದರು.

VISTARANEWS.COM


on

lionel messi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್​ ನಟಿ ಶ್ರದ್ಧಾ ಕಪೂರ್​ ಅವರ ಮಾಜಿ ಪ್ರಿಯತಮ ರೋಹನ್​ ಶ್ರೇಷ್ಠ ಅವರು ಫುಟ್ಬಾಲ್​ ವಿಶ್ವ ಕಪ್​ ಚಾಂಪಿಯನ್ ಲಿಯೋನೆಲ್​ ಮೆಸ್ಸಿ (Lionel Messi) ಅವರೊಂದಿಗೆ ತೆಗೆಸಿಕೊಂಡಿರುವ ಫೋಟೊ ವೈರಲ್​ ಆಗಿದೆ. ಬಾಲಿವುಡ್​ ಸ್ಟಾರ್​ಗಳೆಲ್ಲರೂ ಆ ಚಿತ್ರಕ್ಕೆ ಪ್ರೀತಿಯ ಸಂದೇಶ ರವಾನಿಸಿದ್ದಾರೆ.

ಅಂದ ಹಾಗೆ ರೋಹನ್​ ಶ್ರೇಷ್ಠ ಅವರು ಸಲೆಬ್ರಿಟಿ ಫೋಟೋಗ್ರಾಫರ್​. ಹೀಗಾಗಿ ವಿಶ್ವ ಕಪ್​ ಆರಂಭಕ್ಕೆ ಮೊದಲು ಅವರು ಮೆಸ್ಸಿಯ ಫೋಟೋ ಶೂಟ್​ ಮಾಡಿದ್ದರು. ಈ ವೇಳೆ ಅವರು ಮೆಸ್ಸಿ ಜತೆ ಸೆಲ್ಫಿ ಕೂಡ ತೆಗೆಸಿಕೊಂಡಿದ್ದರು. ಆ ಎಲ್ಲ ಚಿತ್ರಗಳನ್ನು ಅವರೀಗ ಇನ್​ಸ್ಟಾಗ್ರಾಮ್​ನಲ್ಲಿ ಬಿಡುಗಡೆ ಮಾಡಿದ್ದಾರೆ.

ಒಂದೂವರೆ ತಿಂಗಳ ಹಿಂದೆ ತೆಗೆದಿರುವ ಚಿತ್ರ ಇದಾಗಿದೆ. ಇದೀಗ ಅವರು ವಿಶ್ವ ಕಪ್​ ಗೆದ್ದುಕೊಂಡಿದ್ದಾರೆ. ಈ ಖುಷಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ ಎಂಬುದಾಗಿ ರೋಹನ್​ ಶ್ರೇಷ್ಠ ಅವರು ಬರೆದುಕೊಂಡಿದ್ದಾರೆ. ರೋಹನ್​ ಅವರಿಗೆ ಗೆಳೆಯರೊಬ್ಬರ ಮೂಲಕ ಮೆಸ್ಸಿಯ ಫೋಟೋ ಶೂಟ್​ ಮಾಡುವ ಅವಕಾಶ ಲಭಿಸಿತ್ತು. ಅಂತೆಯೇ ಪ್ಯಾರಿಸ್​ಗೆ ಹೋಗಿ ಫೋಟೊ ತೆಗೆದಿದ್ದರು. ಅದನ್ನವರು ಹಂಚಿಕೊಂಡಿದ್ದಾರೆ. ಅಲ್ಲದೆ, ತಮಗೆ ಸಿಕ್ಕ ಅಪರೂಪದ ಅವಕಾಶವನ್ನು ಬಣ್ಣಿಸಿದ್ದಾರೆ.

ಅನನ್ಯಾ ಪಾಂಡೆ, ಅಲಿಯಾ ಭಟ್, ಇಶಾನ್​ ಕಟ್ಟರ್​, ಪೂಜಾ ಹೆಗ್ಡೆ, ಡಿನೊ ಮೊರಿಯಾ, ಇಲಿಯಾನಾ ಡಿಕ್ರೂಸ್​, ತಾರಾ ಸುತಾರಿಯಾ, ಮಲೈಕಾ ಅರೋರಾ. ಅಹಾನ್​ ಶೆಟ್ಟಿ ಸೇರಿ ಬಾಲಿವುಡ್ ಸೆಲೆಬ್ರಿಟಿಗಳು ಈ ಚಿತ್ರಕ್ಕೆಶಹಬ್ಬಾಸ್​ಗಿರಿ ಕೊಟ್ಟಿದ್ದಾರೆ.

ಮುರಿದು ಬಿದ್ದ ಶ್ರದ್ಧಾ ಜತೆಗಿನ ಸಂಬಂಧ

ಶ್ರದ್ಧಾಕಪೂರ್​ ಹಾಗೂ ರೋಹನ್​ ಶ್ರೇಷ್ಠ ಕಾಲೇಜು ದಿನಗಳಿಂದಲೇ ಗೆಳೆತನ ಹೊಂದಿದ್ದರು. ಅವರಿಬ್ಬರೂ ಡೇಟಿಂಗ್​ನಲ್ಲಿದ್ದರು. ಶ್ರದ್ಧಾ ಅವರ ಕುಟುಂಬದವರೂ ರೋಹನ್​ ಜತೆ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಅವರಿಬ್ಬರ ನಡುವಿನ ಬಾಂಧವ್ಯ ಏಕಾಏಕಿ ಮುರಿದು ಬಿದ್ದಿತ್ತು. ಅದಕ್ಕೆ ನೈಜ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ.

ಇದನ್ನೂ ಓದಿ | Lionel Messi | ಪಿಎಸ್‌ಜಿ ಜತೆಗಿನ ಒಪ್ಪಂದದ ಅವಧಿಯನ್ನು ವಿಸ್ತರಿಸಲಿದ್ದಾರೆ ಲಿಯೋನೆಲ್​ ಮೆಸ್ಸಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Uber Cup 2024 Quarterfinal: ಭಾರತದ ಸವಾಲು ಅಂತ್ಯ; ಜಪಾನ್​ ವಿರುದ್ಧ ಕ್ವಾ. ಫೈನಲ್​ನಲ್ಲಿ ಸೋಲು

Uber Cup 2024 Quarterfinal: ಭಾರತ 1957, 2014 ಮತ್ತು 2016ರಲ್ಲಿ ಮೂರು ಬಾರಿ ಉಬರ್ ಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು. ಈ ಬಾರಿ ಚೊಚ್ಚಲ ಬಾರಿಗೆ ಫೈನಲ್​ ಪ್ರವೇಶಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಕ್ವಾರ್ಟರ್​ ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನಿರೀಕ್ಷೆ ಹುಸಿಯಾಗಿದೆ.

VISTARANEWS.COM


on

Uber Cup 2024 Quarterfinal
Koo

ಚೆಂಗ್ಡು (ಚೀನಾ): ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟರ್​ ಫೈನಲ್(Uber Cup 2024 Quarterfinal)​ ಪಂದ್ಯದಲ್ಲಿ ಭಾರತದ(India) ಮಹಿಳಾ ತಂಡ ಜಪಾನ್(Japan)​ ವಿರುದ್ಧ 3-0 ಅಂತರದ ಸೋಲು ಕಾಣುವ ಮೂಲಕ ತನ್ನ ಅಭಿಯಾನವನ್ನು ಅಂತ್ಯಗೊಳಿಸಿದೆ. ಗುರುವಾರ ನಡೆದ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಜಪಾನ್​ ಸೆಮಿಫೈನಲ್​ಗೆ ಪ್ರವೇಶಿಸಿದೆ. ಶುಕ್ರವಾರ ನಡೆಯಲಿರುವ ಸೆಮಿಫೈನಲ್​ ಪಂದ್ಯದಲ್ಲಿ ಜಪಾನ್​ ತಂಡ 6 ಬಾರಿಯ ಚಾಂಪಿಯನ್​ ​ಚೀನಾದ ಸವಾಲು ಎದುರಿಸಲಿದೆ.

ಮೊದಲ ಮಹಿಳಾ ಸಿಂಗಲ್ಸ್‌ನಲ್ಲಿ ಅಶ್ಮಿತಾ ಚಲಿಹಾ 10-21, 22-20, 15-21 ರಲ್ಲಿ ಅಯಾ ಒಹೊರಿ ವಿರುದ್ಧ ಸೋತರು. ಮೊದಲ ಗೇಮ್‌ನಲ್ಲಿ ಲಯ ಕಂಡುಕೊಳ್ಳಲು ಹರಸಾಹಸಪಟ್ಟ ಚಲಿಹಾ ಎರಡನೇ ಗೇಮ್​ನಲ್ಲಿ ತಿರುಗಿ ಬಿದ್ದು 22-20 ಅಂತರದಿಂದ ಕೈವಶ ಮಾಡಿಕೊಳ್ಳುವ ಮೂಲಕ ಸಮಬಲ ಸಾಧಿಸಿದರು. ಆದರೆ ನಿರ್ಣಾಯಕ ಗೇಮ್​ನಲ್ಲಿ ಸೋಲು ಕಂಡರು.

ಮೊದಲ ಮಹಿಳಾ ಡಬಲ್ಸ್​ನಲ್ಲಿ ಕೆ.ಪ್ರಿಯಾ-ಶ್ರುತಿ ಮಿಶ್ರಾ ಜೋಡಿಯನ್ನು ನಮಿ ಮತ್ಸುಯಾಮಾ-ಚಿಹರು ಶಿದಾ ಸೇರಿಕೊಂಡು 8-21, 9-21 ನೇರ ಗೇಮ್​ಗಳಿಂದ ಹಿಮ್ಮೆಟ್ಟಿಸಿದರು. ದ್ವಿತೀಯ ಮಹಿಳಾ ಸಿಂಗಲ್ಸ್​ನಲ್ಲಿ ಇಶಾರಾಣಿ ಶಾರಾಣಿ ಬರುಹಾ ಅವರನ್ನು 15-21, 12-21 ನೇರ ಗೇಮ್​ಗಳ ಅಂತದಿಂದ 2017ರ ವಿಶ್ವ ಚಾಂಪಿಯನ್‌ ಜಪಾನಿನ ನೊಜೊಮಿ ಒಕುಹಾರ ಮಣಿಸಿದರು. ಈ ಸೋಲಿನೊಂದಿಗೆ ಭಾರತ ತಂಡದ ಸವಾಲು ಕೂಡ ಅತ್ಯಂಗೊಂಡಿತು. ಭಾರತ 1957, 2014 ಮತ್ತು 2016ರಲ್ಲಿ ಮೂರು ಬಾರಿ ಉಬರ್ ಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು. ಈ ಬಾರಿ ಚೊಚ್ಚಲ ಬಾರಿಗೆ ಫೈನಲ್​ ಪ್ರವೇಶಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಕ್ವಾರ್ಟರ್​ ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನಿರೀಕ್ಷೆ ಹುಸಿಯಾಗಿದೆ.

ಇದನ್ನೂ ಓದಿ Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

ಥಾಮಸ್‌ ಕಪ್‌: ಇಂದು ಭಾರತ-ಚೀನಾ ಸೆಣಸಾಟ


ಇಂದು ನಡೆಯುವ ಪುರುಷರ ಥಾಮಸ್‌ ಕಪ್‌(Thomas Cup 2024) ಟೂರ್ನಿಯ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಗಿರುವ ಭಾರತ(Indian men’s Badminton team) ತಂಡ ಬದ್ಧ ಎದುರಾಳಿ ಚೀನಾ ತಂಡದ ಸವಾಲು ಎದುರಿಸಲಿದೆ. ಬುಧವಾರ ನಡೆದಿದ್ದ ಅಂತಿಮ ಲೀಗ್​ ಪಂದ್ಯದಲ್ಲಿ ಭಾರತ 14 ಬಾರಿಯ ಚಾಂಪಿಯನ್ ಇಂಡೊನೇಷ್ಯಾ ವಿರುದ್ಧ 1-4 ಅಂತರದಿಂದ ಸೋಲನುಭವಿಸಿತ್ತು. ಸೋಮವಾರ ನಡೆದಿದ್ದ ‘ಸಿ’ ಗುಂಪಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 5-0 ಅಂತರದಿಂದ, ಮೊದಲ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ 4-1 ಅಂತರದ ಭರ್ಜರಿ ಗೆಲುವು ಸಾಧಿಸಿತ್ತು.

Continue Reading

ಕ್ರೀಡೆ

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

IPL 2024: ಪರ್ಪಲ್​ ಕ್ಯಾಪ್​ಗಾಗಿ ಮೂರು ಬೌಲರ್​ಗಳ ಮಧ್ಯೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಜಸ್​ಪ್ರೀತ್​ ಬುಮ್ರಾ, ಮುಸ್ತಫಿಜುರ್​ ರೆಹಮಾನ್​, ಹರ್ಷಲ್​ ಪಟೇಲ್​ ತಲಾ 14 ವಿಕೆಟ್​ ಕಿತ್ತು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಬೆರಳೆಣಿಕೆಯ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಎಲ್ಲ ತಂಡಗಳು ಪ್ಲೇ ಆಫ್​ ಪ್ರವೇಶಿಸಲು ಹರಸಾಹಸ ಪಡುತ್ತಿವೆ. ಜತೆಗೆ ಕೆಲವು ಆಟಗಾರರ ಮಧ್ಯೆ ಆರೆಂಜ್​ ಕ್ಯಾಚ್(Orange Cap)​ ಮತ್ತು ಪರ್ಪಲ್​ ಕ್ಯಾಪ್​ಗಾಗಿ(purple cap)​ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ಆವೃತ್ತಿಯಲ್ಲಿ 48 ಪಂದ್ಯದ ಮುಕ್ತಾಯದ ವರೆಗೆ ರನ್​ಗಳಿಕೆಯಲ್ಲಿ ಅಗ್ರಸ್ಥಾನ ಪಡೆದು ಆರೆಂಜ್​ ಕ್ಯಾಪ್​ ಧರಿಸಿದ್ದ ವಿರಾಟ್​ ಕೊಹ್ಲಿ(500 ರನ್​​)ಯನ್ನು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಋತುರಾಜ್​ ಗಾಯಕ್ವಾಡ್(509 ರನ್​)​ ಹಿಂದಿಕ್ಕಿದ್ದಾರೆ. ನಿನ್ನೆ(ಬುಧವಾರ) ನಡೆದ ಪಂಜಾಬ್​ ಕಿಂಗ್ಸ್​ ಎದುರಿನ ಪಂದ್ಯದಲ್ಲಿ 62 ರನ್​ ಬಾರಿಸುವ ಮೂಲಕ ಗಾಯಕ್ವಾಡ್(Ruturaj Gaikwad)​​ ಈ ಸಾಧನೆ ಮಾಡಿದರು. ಸದ್ಯ ಉಭಯ ಆಟಗಾರರ ಮಧ್ಯೆ ಆರೆಂಜ್​ ಕ್ಯಾಪ್​ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಟೂರ್ನಿಯ ಅಂತ್ಯದಲ್ಲಿ ಯಾರು ಅತ್ಯಧಿಕ ರನ್​ ಗಳಿಸಿರುತ್ತಾರೋ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ ಟಾಟಾ ಕಂಪೆನಿಯ ಎಲೆಕ್ಟ್ರಿಕ್​ ಕಾರ್​ ಸಿಗಲಿದೆ.

ಆರೆಂಜ್ ಕ್ಯಾಪ್​​ ರೇಸ್​ನಲ್ಲಿರುವ ಟಾಪ್​ 5 ಬ್ಯಾಟರ್​ಗಳು


ಋತುರಾಜ್​ ಗಾಯಕ್ವಾಡ್​-509 ರನ್​(10 ಇನಿಂಗ್ಸ್​)

ವಿರಾಟ್​ ಕೊಹ್ಕಿ-500 ರನ್​(10 ಇನಿಂಗ್ಸ್​)

ಸಾಯಿ ಸುದರ್ಶನ್​- 418 ರನ್​( 10 ಇನಿಂಗ್ಸ್​)

ಕೆ.ಎಲ್​ ರಾಹುಲ್​-406 ರನ್​( 10 ಇನಿಂಗ್ಸ್​)

ರಿಷಭ್​ ಪಂತ್​-398 ರನ್​(11 ಇನಿಂಗ್ಸ್​)

ಇದನ್ನೂ ಓದಿ Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತು ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

ಪರ್ಪಲ್​ ಕ್ಯಾಕ್​ಗೆ ಮೂರು ಮಂದಿಯ ಮಧ್ಯೆ ಫೈಟ್​


ಅತ್ಯಧಿಕ ವಿಕೆಟ್​ ಪಡೆದ ಬೌಲರ್​ಗೆ ನೀಡುವ ಪರ್ಪಲ್​ ಕ್ಯಾಪ್​ಗಾಗಿ ಮೂರು ಬೌಲರ್​ಗಳ ಮಧ್ಯೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಜಸ್​ಪ್ರೀತ್​ ಬುಮ್ರಾ, ಮುಸ್ತಫಿಜುರ್​ ರೆಹಮಾನ್​, ಹರ್ಷಲ್​ ಪಟೇಲ್​ ತಲಾ 14 ವಿಕೆಟ್​ ಕಿತ್ತು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತಮ ಬೌಲಿಂಗ್​ ಇಕಾನಮಿ ಹೊಂದಿರುವ ಕಾರಣ ಸದ್ಯ ಈ ಕ್ಯಾಪ್​ ಬುಮ್ರಾ ಬಳಿ ಇದೆ. ಇನ್ನುಳಿದಂತೆ ಆರು ಮಂದಿ ಬೌಲರ್​ಗಳು ತಲಾ 13 ವಿಕೆಟ್​ ಕಿತ್ತಿದ್ದಾರೆ. ಇವರಿಗೂ ಕೂಡ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ವಿಕೆಟ್​ ಕಿತ್ತರೆ ಪರ್ಪಲ್​ ಕ್ಯಾಪ್​ ಪಡೆಯುವ ಅವಕಾಶವಿದೆ.

ಪರ್ಪಲ್​ ಕ್ಯಾಪ್​​ ರೇಸ್​ನಲ್ಲಿರುವ ಟಾಪ್​ 5 ಬೌಲರ್​ಗಳು


ಜಸ್​ಪ್ರೀತ್​ ಬುಮ್ರಾ-14 ವಿಕೆಟ್​(10 ಪಂದ್ಯ)

ಮುಸ್ತಫಿಜುರ್​ ರೆಹಮಾನ್​-14 ವಿಕೆಟ್​(9 ಪಂದ್ಯ​)

ಹರ್ಷಲ್​ ಪಟೇಲ್​-14 ವಿಕೆಟ್​(10 ಪಂದ್ಯ​)

ಮತೀಶ ಪತಿರಾಣ-13 ವಿಕೆಟ್​(6 ಪಂದ್ಯ)

ಟಿ ನಟರಾಜನ್​-13 ವಿಕೆಟ್​(7 ಪಂದ್ಯ)

Continue Reading

ಕ್ರಿಕೆಟ್

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

T20 World Cup: ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

VISTARANEWS.COM


on

T20 World Cup
Koo

ದುಬೈ: ಟಿ20 ವಿಶ್ವಕಪ್​ಗೆ(T20 World Cup) ಈಗಾಗಲೇ ಭಾರತ 15 ಸದಸ್ಯರ ಮತ್ತು ಮೀಸಲು ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಸ್ಟಾರ್​ ಆಟಗಾರ ಕೆ.ಎಲ್​ ರಾಹುಲ್(KL Rahul)​ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಆದರೆ, ರಾಹುಲ್​ಗೆ ಇನ್ನೂ ಕೂಡ ತಂಡ ಸೇರುವ ಅವಕಾಶವೊಂದಿದೆ. ಇದು ಹೇಗೆ ಎನ್ನುವ ಮಾಹಿತಿ ಇಂತಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಅವಕಾಶ ಸಿಕ್ಕ ಆಟಗಾರರ ಪೈಕಿ ಯಾರಾದರು ಗಾಯಗೊಂಡು ಅಲಭ್ಯರಾದರೆ ಆಗ ರಾಹುಲ್​ಗೆ ಅವಕಾಶ ಸಿಗಬಹುದು. ಇನ್ನೊಂದು ಸಾಧ್ಯತೆ ಎಂದರೆ ತಂಡ ಬದಲಾವಣೆಯ ಅಂತಿಮ ದಿನವಾದ 25ರಂದು ಅಚ್ಚರಿ ಎಂಬಂತೆ ರಾಹುಲ್​ ಆಯ್ಕೆಯಾಗುವ ಸಾಧ್ಯತೆಯೂ ಇದೆ.

ಕೆಲ ತಂಡಗಳು ಗೇಮ್ ಸ್ಟ್ರಟಜಿ ಮಾಡಿಕೊಂಡು ಕೆಲ ಸ್ಟಾರ್​ ಆಟಗಾರರನ್ನು ಮೊದಲ ಪಟ್ಟಿಯಿಂದ ಕೈಬಿಟ್ಟು ಆ ಬಳಿಕ ಅಚ್ಚರಿ ಎಂಬಂತೆ ತಂಡಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ. ಇದರ ಹಿಂದಿರುವ ಕಾರಣವೆಂದರೆ ಎದುರಾಳಿ ತಂಡಗಳ ಪೂರ್ವ ಯೋಜನೆಯನ್ನು ಬುಡಮೇಲು ಮಾಡುವುದು. ಕಳೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಅನುಭವಿ ಆಟಗಾರ ಮಾರ್ನಸ್​ ಲನುಶೇನ್​ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನೇನು ತಂಡ ಬದಲಾವಣೆಗೆ ಅಂತಿಮ ದಿನ ಬಾಕಿ ಇರುವಾಗ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಹೀಗಾಗಿ ಭಾರತ ಕೂಡ ರಾಹುಲ್​ ಅವರನ್ನು ಈ ರೀತಿ ಆಯ್ಕೆ ಮಾಡುವ ಸಾಧ್ಯತೆಯೂ ಕಂಡು ಬಂದಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading

ಕ್ರೀಡೆ

MS Dhoni: ರನ್​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

MS Dhoni: ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮಾಜಿ ನಾಯಕ​ ಮಹೇಂದ್ರ ಸಿಂಗ್ ಧೋನಿ(MS Dhoni) ಬುಧವಾರ ನಡೆದ ಪಂಜಾಬ್​ ಲಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ತೋರಿದ ವರ್ತನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದು ಮಾಡುತ್ತಿದೆ. ಹಲವು ನೆಟ್ಟಿಗರು ಧೋನಿ ಇಷ್ಟೊಂದು ಸ್ವಾರ್ಥಿಯಾಗಬಾರದೆಂದು ಟೀಕಿಸಿದ್ದಾರೆ.

ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಧೋನಿಯ ಈ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನಲ್ಲಿ ಅರ್ಷದೀಪ್​ ಎಸೆದ ಈ ಓವರ್​ನ ಮೂರನೇ ಎಸೆತವನ್ನು ಧೋನಿ ಬಲವಾಗಿ ಹೊಡೆದರು. ಚೆಂಡು ಬೌಂಡರಿ ಲೈನ್​ ಬಳಿ ಹೋದರೂ ಕೂಡ ಧೋನಿ ರನ್​ ಓಡದೆ ಸ್ವಾರ್ಥ ತೋರಿದರು. ನಾನ್​ಸ್ಟ್ರೈಕ್​ನಲ್ಲಿದ್ದ ಡೇರಿಯಲ್​ ಮಿಚೆಲ್​ ಅವರು ರನ್​ಗಾಗಿ ಓಡಿ ಕ್ರೀಸ್​ ಬಳಿ ಬಂದರು. ಈ ವೇಳೆ ಧೋನಿ ಅವೇಶದಲ್ಲಿಯೇ ಮಿಚೆಲ್​ಗೆ ಹಿಂದೆ ಹೋಗುವಂತೆ ತಿಳಿಸಿದರು. ಸ್ಟ್ರೈಕ್​ ತನಕ ಓಡಿದ್ದ ಮಿಚೆಲ್​ ಮತ್ತೆ ನಾನ್​ಸ್ಟ್ರೈಕರ್​ ಬಳಿಗೆ ಓಡಿ ಬಂದರು. ಮುಂದಿನ ಎಸೆತವನ್ನು ಧೋನಿ ಬೀಟ್​ ಮಾಡಿದರು. 5ನೇ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಅಂತಿಮ ಎಸೆತದಲ್ಲಿ ರನೌಟ್​ ಆದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಬ್ಯಾಟಿಂಗ್​ಗಾಗಿ ಆಸೆ ತೋರಿದ ಧೋನಿಯ ಈ ಸ್ವಾರ್ಥವನ್ನು ಅನೇಕ ನೆಟ್ಟಿಗರು ಟೀಕಿಸಿದ್ದಾರೆ. ಇದು ಮತ್ತೊಬ್ಬ ಆಟಗಾರನಿಗೆ ಮಾಡುವ ಅವಮಾನ ಎಂದು ಕಮೆಂಟ್​ ಮಾಡಿದ್ದಾರೆ. ಈ ಘಟನೆಯ ವಿಡಿಯೊ ಎಲ್ಲಡೆ ವೈರಲ್(viral video)​ ಆಗಿದೆ. ಧೋನಿ ಸ್ಟ್ರೈಕ್​ ಉಳಿಸಿಕಿಕೊಂಡರೂ ಕೂಡ ಅವರಿಂದ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ. 11  ಎಸೆತಗಳಿಂದ 14 ರನ್ ಮಾತ್ರ ಗಳಿಸಿದರು.

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವು ಸಾಧಿಸಿತು.

Continue Reading
Advertisement
Prajwal Revanna Case HD DeveGowda and HD Kumaraswamy slams HD Revanna
ಕ್ರೈಂ5 mins ago

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Pawan Kalyan Hari Hara Veera Mallu Part 1 teaser Out
ಟಾಲಿವುಡ್10 mins ago

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

supreme court
ದೇಶ11 mins ago

Supreme Court: CBI ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ; ಸುಪ್ರೀಂಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

Viral News
ವೈರಲ್ ನ್ಯೂಸ್24 mins ago

Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

Uber Cup 2024 Quarterfinal
ಕ್ರೀಡೆ33 mins ago

Uber Cup 2024 Quarterfinal: ಭಾರತದ ಸವಾಲು ಅಂತ್ಯ; ಜಪಾನ್​ ವಿರುದ್ಧ ಕ್ವಾ. ಫೈನಲ್​ನಲ್ಲಿ ಸೋಲು

Ambedkar statue
ಕಲಬುರಗಿ39 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣ ಸಿಐಡಿಗೆ ಹಸ್ತಾಂತರ! ಡಾ. ಜಿ. ಪರಮೇಶ್ವರ್‌

Prajwal Revanna Case These are the questions SIT will ask Prajwal
ಕ್ರೈಂ47 mins ago

Prajwal Revanna Case: ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

Narendra Modi
ದೇಶ59 mins ago

Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

gold rate today
ಚಿನ್ನದ ದರ1 hour ago

Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

Self Harming
ಕಲಬುರಗಿ1 hour ago

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌