Jasmine Flower Farming | ಟೆರೇಸ್‌ ಮೇಲೆ 400 ಮಲ್ಲಿಗೆ ಗಿಡ! ವರ್ಷಕ್ಕೆ 250 ಕೆ.ಜಿ ಹೂವು! - Vistara News

ಕೃಷಿ

Jasmine Flower Farming | ಟೆರೇಸ್‌ ಮೇಲೆ 400 ಮಲ್ಲಿಗೆ ಗಿಡ! ವರ್ಷಕ್ಕೆ 250 ಕೆ.ಜಿ ಹೂವು!

VISTARANEWS.COM


on

Jasmine Flower
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Hassan News: ಮರ ಆಧಾರಿತ ಕೃಷಿ ಮಾದರಿ ಅಳವಡಿಸಿಕೊಳ್ಳಲು ರೈತರಿಗೆ ಸಲಹೆ

Hassan News: ಈಶ ಸಂಸ್ಥೆಯ “ಕಾವೇರಿ ಕೂಗು” ಅಭಿಯಾನದಿಂದ “ಸಮೃದ್ಧ ಭವಿಷ್ಯಕ್ಕಾಗಿ ಮರ ಆಧಾರಿತ ಕೃಷಿ” ಎಂಬ ತರಬೇತಿ ಕಾರ್ಯಕ್ರಮವು ಹಾಸನದಲ್ಲಿ ಜರುಗಿತು. ತರಬೇತಿಯಲ್ಲಿ ಕೃಷಿ-ಅರಣ್ಯ ಮಾದರಿಯ ಯಶಸ್ಸಿನ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಯಿತು.

VISTARANEWS.COM


on

Koo

ಹಾಸನ: ಈಶ ಸಂಸ್ಥೆಯ “ಕಾವೇರಿ ಕೂಗು” ಅಭಿಯಾನದಿಂದ “ಸಮೃದ್ಧ ಭವಿಷ್ಯಕ್ಕಾಗಿ ಮರ ಆಧಾರಿತ ಕೃಷಿ” ಎಂಬ ತರಬೇತಿ ಕಾರ್ಯಕ್ರಮವನ್ನು (Hassan News) ಹಾಸನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾವೇರಿ ಕೂಗು ಅಭಿಯಾನದ ಕ್ಷೇತ್ರ ಸಂಯೋಜಕ ತಮಿಳ್ ಮಾರನ್ ಮಾತನಾಡಿ, ರೈತರಿಗೆ ಮರ ಮತ್ತು ಮಣ್ಣಿನ ಸೂಕ್ತತೆ ಮತ್ತು ತೋಟದ ವಿನ್ಯಾಸದ ವಿವರಗಳ ಮೂಲ ಪರಿಕಲ್ಪನೆಗಳನ್ನು ಪರಿಚಯಿಸಿದರು. ಬಳಿಕ ಮಾತನಾಡಿದ ಅವರು, “ಕಾವೇರಿ ಕೂಗು” ಅಭಿಯಾನವು ಕೃಷಿ ಭೂಮಿಯಲ್ಲಿ ಸ್ಥಳೀಯ ಮತ್ತು ನಿಧಾನವಾಗಿ ಬೆಳೆಯುವ ಟಿಂಬರ್ ಮರಗಳನ್ನು ನೆಡಲು ರೈತರನ್ನು ಉತ್ತೇಜಿಸುತ್ತದೆ, ಆ ಮೂಲಕ ರೈತರ ಆರ್ಥಿಕ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಮತ್ತು ಮಣ್ಣಿನ ಜೈವಿಕ ಅಂಶವನ್ನು ಸಹ ಹೆಚ್ಚಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

ರೈತರು ಮರ ಆಧಾರಿತ ಕೃಷಿ ಮಾದರಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಣ್ಣಿನ ಅವನತಿ ಮತ್ತು ಹವಾಮಾನ ಬದಲಾವಣೆಯಂತಹ ಪ್ರಸ್ತುತ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುವ ದೇವರ ಹಾಗೆ ಎಂದು ಅಭಿಪ್ರಾಯಪಟ್ಟರು.

ತುಮಕೂರಿನ ಯಶಸ್ವಿ ರೈತ ಶಿವನಂಜಯ್ಯ ಬಾಳೇಕಾಯಿ ಮಾತನಾಡಿ, ಉತ್ತಮ ಆದಾಯ ಗಳಿಸಲು ಮರ ಆಧಾರಿತ ಕೃಷಿಯೇ ಉತ್ತಮ. ಒಂದು ವರ್ಷದಲ್ಲಿ ನಾನು ಕೇವಲ 60 ರಿಂದ 70 ಸಾವಿರ ಖರ್ಚು ಮಾಡುತ್ತೇನೆ ಮತ್ತು ಮರ ಆಧಾರಿತ ಕೃಷಿಯಿಂದ 15 ಲಕ್ಷ ಗಳಿಸುತ್ತೇನೆ ಎಂದು ಹೇಳಿದ ಅವರು, ಇದೇ ವೇಳೆ ತೋಟದ ಗಡಿಯಲ್ಲಿರುವ ಟಿಂಬರ್ ಮರಗಳೊಂದಿಗೆ ವಿವಿಧ ಬೆಳೆಗಳನ್ನು ಬೆಳೆಯಲು ಸೂರ್ಯನ ಬೆಳಕನ್ನು ಬಳಸುವ ಬಗ್ಗೆಯೂ ವಿವರವಾಗಿ ಮಾತನಾಡಿದರು.

ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಸಿಲ್ವಿಕಲ್ಚರ್ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ಹೆಗಡೆ ತಾಂತ್ರಿಕ ತರಬೇತಿಯ ನೇತೃತ್ವ ವಹಿಸಿ ಮಾತನಾಡಿ, ಮರದ ಸಸಿಗಳನ್ನು ನೆಡುವ ಪೂರ್ವ ಮತ್ತು ನಂತರದ ವೈಜ್ಞಾನಿಕ ವಿಧಾನಗಳ ಕುರಿತು ಚರ್ಚಿಸಿದರು.

ಇದನ್ನೂ ಓದಿ: Drain Pipe collapse: 700 ಮೀಟರ್‌ ಉದ್ದದ ಕಬ್ಬಿಣದ ಪೈಪ್ ಕುಸಿತ; ವಾಹನಗಳು ಸಂಪೂರ್ಣ ಜಖಂ; ವಿಡಿಯೋ ವೈರಲ್‌

ಈ ವೇಳೆ ಮಾತನಾಡಿದ ಡಾ. ರಾಮಕೃಷ್ಣ ಹೆಗಡೆ, ಭಾರತೀಯ ಮಾರುಕಟ್ಟೆಯಲ್ಲಿ ಟಿಂಬರ್ ಮರಗಳ ಬೇಡಿಕೆ ತುಂಬಾ ಹೆಚ್ಚಾಗಿದೆ; ಈ ಬೇಡಿಕೆಯನ್ನು ಪೂರೈಸುವಲ್ಲಿ ನಾವು ಕೊರತೆಯನ್ನು ಎದುರಿಸುತ್ತಿದ್ದೇವೆ. ರೈತರು ಮಾತ್ರ ಈ ಬೇಡಿಕೆಯನ್ನು ಪೂರೈಸಬಹುದು ಎಂದು ತಿಳಿಸಿದ ಅವರು, ಮರ ಆಧಾರಿತ ಕೃಷಿಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಅನುಸರಿಸುವುದರಿಂದ ಲಾಭದಾಯಕ ಆದಾಯವನ್ನು ಗಳಿಸಬಹುದು ಎಂದು ಹೇಳಿದರು.

ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕೆಂಚ ರೆಡ್ಡಿ ಅವರು ಕಾಡು ಮರಗಳು ಮತ್ತು ಇತರ ಬೆಳೆಗಳ ಜತೆಗೆ ಜೇನು ಕೃಷಿಯನ್ನು ಮಾಡುವ ಕುರಿತು ವಿವರಿಸಿದರು.

ಮರ ಆಧಾರಿತ ಕೃಷಿಯ ಕುರಿತು ಮಾತನಾಡಿದ ದಯಾನಂದ, ನಾನು 40 ವರ್ಷಗಳ ಹಿಂದೆ 100 ತೇಗದ ಮರಗಳನ್ನು ನೆಟ್ಟಿದ್ದೆ, ಕೆಲವು ತಿಂಗಳ ಹಿಂದೆ 10 ಲಕ್ಷ ಮೌಲ್ಯದ 6-8 ಮರಗಳನ್ನು ಕಟಾವು ಮಾಡಿದ್ದೇನೆ. ನಾನು ಈ ಮರಗಳನ್ನು ನನ್ನ ಮಗಳಿಗೆ ಅವಳ ಹೊಸ ಮನೆಯನ್ನು ನಿರ್ಮಿಸಲು ಉಡುಗೊರೆಯಾಗಿ ನೀಡಿದೆ. ಉಳಿದ ಮರಗಳಿಂದ ನಾನು ಇನ್ನೂ 1 ಕೋಟಿ ರೂ. ಗಳಿಸಬಹುದು ಎಂದು ತಿಳಿಸಿದರು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ತರಬೇತಿಯಲ್ಲಿ ಕೃಷಿ-ಅರಣ್ಯ ಮಾದರಿಯ ಯಶಸ್ಸಿನ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಯಿತು.

Continue Reading

ಕೃಷಿ

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ರಾಯಚೂರಿನ ಗುಡಿಪಾಡು ಆಂಜನೇಯ (Success Story) ಅವರು ಆನ್‌ಲೈನ್‌ನಲ್ಲಿ ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿ ಸುದ್ದಿಯಲ್ಲಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿರುವ ಆಂಜನೇಯ ಅವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಏಳು ವರ್ಷಗಳ ಕಾಲ ಕೆಲಸ ಮಾಡಿ ಈಗ ಸಂಪೂರ್ಣವಾಗಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಮಾವು ಮಾರಾಟದ ಇವರ ಸಕ್ಸೆಸ್ ಸ್ಟೋರಿ ಇಲ್ಲಿದೆ.

VISTARANEWS.COM


on

By

Success Story
Koo

ಕೃಷಿ ಕೆಲಸಗಳಲ್ಲಿ ಕೇವಲ ಕಷ್ಟ ಪಟ್ಟು ದುಡಿದರೆ ಸಾಲದು, ಬುದ್ದಿವಂತಿಕೆಯೂ ಬೇಕು. ಆಗ ಮಾತ್ರ ಉತ್ತಮ ಆದಾಯ ಗಳಿಸಬಹುದು ಎಂಬುದನ್ನು ರೈತನೊಬ್ಬ (Success Story) ಸಾಬೀತು ಮಾಡಿದ್ದಾನೆ. ಈ ರೈತ ಬೇರೆಯಾರೂ ಅಲ್ಲ ನಮ್ಮ ಕರ್ನಾಟಕದವರೇ (karnataka) ಆಗಿದ್ದಾರೆ. ಮಾವಿನ ಕೃಷಿ (Mango Cultivation) ಮಾಡಿ ರಾಯಚೂರಿನ (Raichur) ಗುಡಿಪಾಡು ಆಂಜನೇಯ (Gudipadu Anjaneya) ಅವರು ಈಗ ಎಲ್ಲೆಡೆ ಸುದ್ದಿ ಮಾಡುತ್ತಿದ್ದಾರೆ. ಗುಡಿಪಾಡು ಆಂಜನೇಯ ಅವರು ಆನ್‌ಲೈನ್‌ನಲ್ಲಿ ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿ ಸುದ್ದಿಯಾಗುತ್ತಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿರುವ ಆಂಜನೇಯ ಅವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಏಳು ವರ್ಷಗಳ ಕಾಲ ಕೆಲಸ ಮಾಡಿದ್ದರು. ಬಳಿಕ ಕೃಷಿಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡರು.

Success Story

ತೋಟಗಾರಿಕೆ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಹಣ್ಣು, ತರಕಾರಿ, ಹೂವು, ಅಲಂಕಾರಿಕ ಸಸ್ಯಗಳನ್ನು ಬೆಳೆಯುವ ವಿಜ್ಞಾನ ಮತ್ತು ಕಲೆಯನ್ನು ಕಲಿತು ಆನ್‌ಲೈನ್ ಪೋರ್ಟಲ್ ಮೂಲಕ ಮಾವಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆಂಜನೇಯ ಅವರು ಆನ್‌ಲೈನ್ ನಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ಮಾವಿನ ತಳಿಗಳಲ್ಲಿ ಪ್ರಮುಖವಾದವು ಬನಗನಪಲ್ಲಿ, ಮಲ್ಲಿಕಾ ಮತ್ತು ಕೇಸರಿ ಮಾವುಗಳು. ಇವರು ತಮ್ಮ ಮಾವಿನ ಹಣ್ಣುಗಳ ಮಾರಾಟ ಜಾಲವನ್ನು ರಾಯಚೂರಿನ ಹೊರಗೂ ವಿಸ್ತರಿಸಿದ್ದಾರೆ. ಬೆಂಗಳೂರಿನ ಜಯನಗರ, ವೈಟ್‌ಫೀಲ್ಡ್ ಮತ್ತು ಲಾಲ್ ಬಾಗ್‌ನ ಎಂಇಎಸ್ ಮೈದಾನದಲ್ಲಿ ಮಾವು ಮೇಳದಲ್ಲಿ ಪಾಲ್ಗೊಂಡಿರುವ ಇವರು, ಆನ್ ಲೈನ್ ಮೂಲಕ ರಾಜ್ಯದ ಮೂಲೆಮೂಲೆ ಮಾತ್ರವಲ್ಲ ಹೊರರಾಜ್ಯ, ವಿದೇಶಗಳಿಗೂ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ವಿದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ರೂಪಿಸುವ ಗುರಿ ಹೊಂದಿರುವ ಅವರು ಇತರ ಕೃಷಿಕರಿಗೂ ಪ್ರೇರಣೆಯಾಗಿದ್ದಾರೆ.

ಸಾಕಷ್ಟು ಶ್ರಮ

ಆಂಜನೇಯ ತಮ್ಮ ವ್ಯವಹಾರದ ಆರಂಭದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಸಾಕಷ್ಟು ಶ್ರಮಿಸಿದ್ದಾರೆ. ಅವರು ಗ್ರಾಹಕರ ವಿಳಾಸವನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಿ, ಪ್ರತಿಯೊಂದು ಹಂತವನ್ನು ಅನುಸರಿಸಿ, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಅದನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಮಾರ್ಗಗಳನ್ನು ಹುಡುಕುತ್ತಿದ್ದರು. ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಮೊದಲು, ಆಂಜನೇಯ ಅವರು ಮೋಸಂಬಿ ಮತ್ತು ನಿಂಬೆಯನ್ನು ಮಾರುಕಟ್ಟೆ ಮತ್ತು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು.

Mango Breeds

ಆನ್ ಲೈನ್ ಪೋರ್ಟಲ್ ಪ್ರಾರಂಭ

ಬಳಿಕ ಆಂಜನೇಯ ಅವರು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ (KSMDMCL) ಅಂಚೆ ಇಲಾಖೆಯ ಸಹಯೋಗದೊಂದಿಗೆ ತಮ್ಮ ಪೋರ್ಟಲ್ ಅನ್ನು ಪ್ರಾರಂಭಿಸಿದರು. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ ಪ್ರಾರಂಭಿಸಿರುವ ಕರ್ ಸಿರಿ ಮ್ಯಾಂಗೋಸ್ (https://www.karsirimangoes.karnataka.gov.in) ವೆಬ್‌ಸೈಟ್ 2022ರಲ್ಲಿ ವಿವಿಧ ಬಗೆಯ ಹಣ್ಣುಗಳಿಗಾಗಿ ಆರ್ಡರ್‌ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತು. ಈ‌ ವೆಬ್ ಸೈಟ್ ಮೂಲಕವೇ ಈ ರೈತ ಮಾವು ಮಾರಿ ಲಾಭ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

ಇದು ಗ್ರಾಹಕರ ಮನೆ ಬಾಗಿಲಿಗೆ ಹಣ್ಣುಗಳನ್ನು ತಲುಪಿಸುತ್ತದೆ. ಹಣ್ಣುಗಳ ಚಿತ್ರಗಳು ಮತ್ತು ಹೆಸರುಗಳ ಜೊತೆಗೆ ವೆಬ್‌ಸೈಟ್ ಮಾವಿನ ಸರಬರಾಜಿಗೆ ಕಾರಣರಾದ ರೈತರ ಹೆಸರು ಮತ್ತು ಸಂಖ್ಯೆಗಳನ್ನು ಸಹ ಪ್ರದರ್ಶಿಸುತ್ತದೆ. ಮಾವು ಬೆಳೆಗಾರರಿಗೆ ಈ ವೆಬ್‌ಸೈಟ್ ಆಶಾದಾಯಕವಾಗಿದೆ. ಇದನ್ನು ಬಳಸಿಕೊಂಡೇ ಆಂಜನೇಯ ಅವರು ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿದ್ದಾರೆ.

Continue Reading

ತುಮಕೂರು

Koratagere News: ಕೊರಟಗೆರೆ ತಾಲೂಕಿನಲ್ಲಿ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ: ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ

Koratagere News: 2024-25 ನೇ ಸಾಲಿನಲ್ಲಿ ಕೊರಟಗೆರೆ ತಾಲೂಕಿನ ವಾರ್ಷಿಕ ಮಳೆಯು ಒಟ್ಟು 637.5 ಮಿ.ಮೀ. ಇದೆ ಆದರೆ ಮೇ 2024 ರ ವರೆಗೆ ವಾಡಿಕೆ ಮಳೆಯು 78.5 ಮಿ.ಮೀ. ಇದ್ದು, ಇಲ್ಲಿಯವರೆಗೂ 121.8 ಮಿ.ಮೀ ರಷ್ಟು ಮಳೆಯಾಗಿದೆ ಎಂದು ಕೊರಟಗೆರೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಆರ್ ರುದ್ರಪ್ಪ ತಿಳಿಸಿದ್ದಾರೆ.

VISTARANEWS.COM


on

There is no shortage of seed for sowing in Koratagere taluk says M R Rudrappa
ಕೊರಟಗೆರೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಆರ್. ರುದ್ರಪ್ಪ
Koo

ಕೊರಟಗೆರೆ: 2024-25 ನೇ ಸಾಲಿನಲ್ಲಿ ಕೊರಟಗೆರೆ ತಾಲೂಕಿನ (Koratagere News) ವಾರ್ಷಿಕ ಮಳೆಯು (Rain) ಒಟ್ಟು 637.5 ಮಿ.ಮೀ. ಇದೆ ಆದರೆ ಮೇ 2024ರವರೆಗೆ ವಾಡಿಕೆ ಮಳೆಯು 78.5 ಮಿ.ಮೀ. ಇದ್ದು, ಇಲ್ಲಿಯವರೆಗೂ 121.8 ಮಿ.ಮೀ ರಷ್ಟು ಮಳೆಯಾಗಿದೆ ಎಂದು ಕೊರಟಗೆರೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಆರ್. ರುದ್ರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

ಕೊರಟಗೆರೆ ತಾಲೂಕಿನಲ್ಲಿ ಮುಂಗಾರು ಕೃಷಿ ಬೆಳೆಗಳ ಒಟ್ಟು ವಿಸ್ತೀರ್ಣ 32553 ಹೆಕ್ಟೇರ್ ಗುರಿ ಇದ್ದು, ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ಕೃಷಿ ಇಲಾಖೆ ಕೊರಟಗೆರೆ ವ್ಯಾಪ್ತಿಯ 4 ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಬೆಳೆಗಳಾದ ರಾಗಿ ( ಎಂ.ಆರ್. 6), ಭತ್ತ (ತೆಲ್ಲ ಹಂಸ), ಮುಸುಕಿನ ಜೋಳ (ಹೈಬ್ರೀಡ್), ಅಲಸಂದೆ (ಡಿಸಿ-15), ತೊಗರಿ (ಬಿ.ಆರ್.ಜಿ.-3 ಮತ್ತು ಬಿ.ಆರ್.ಜಿ-5) ಹಾಗೂ ಶೇಂಗಾ (ಕೆ-6) ಪ್ರಮಾಣಿತ ಬಿತ್ತನೆ ಬೀಜಗಳ ಒಟ್ಟು 367.4 ಕ್ವಿಂಟಾಲ್ ದಾಸ್ತಾನಿದ್ದು, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದ್ದು ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

ತಾಲೂಕಿನ ವ್ಯಾಪ್ತಿಯಲ್ಲಿರುವ ರಸಗೊಬ್ಬರ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ ರಸ ಗೊಬ್ಬರಗಳಾದ ಯೂರಿಯಾ-1042.5 ಮೆ. ಟನ್, ಡಿ.ಎ.ಪಿ-387.95 ಮೆ.ಟನ್, ಎಂ.ಒ.ಪಿ – 11.1 ಮೆ. ಟನ್, ಎನ್.ಪಿ.ಕೆ ಕಾಂಪ್ಲೆಕ್ಸ್ ಗೊಬ್ಬರಗಳು 826.38 ಮೆ. ಟನ್ ಹಾಗೂ ಇತರೆ ಗೊಬ್ಬರ 3.6 ಮೆ. ಟನ್ ಒಟ್ಟು ರಸಗೊಬ್ಬರ 2263.5 ಮೆ. ಟನ್ ದಾಸ್ತಾನಿದ್ದು, ಪ್ರಸಕ್ತ ಹಂಗಾಮಿಗೆ ಯಾವುದೇ ರಸಗೊಬ್ಬರದ ಕೊರತೆ ಇರುವುದಿಲ್ಲ. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಿತ್ತನೆ ಬೀಜ ಮತ್ತು ಬೆಳೆಗಳ ಬಗ್ಗೆ ತಾಂತ್ರಿಕ ಮಾಹಿತಿಯನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದೊಂದು ವಾರದಿಂದ (Arecanut Price) ಅಡಿಕೆ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಹಾಗಂತ ಅಡಿಕೆ ತೋಟದ ಉಪ ಬೆಳೆಗಳ ಧಾರಣೆ ಏರುತ್ತಿದೆ. ಈ ಕುರಿತ ನಿಖರ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

arecanut price
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ
ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ, ದಿನ ದಿನವೂ ಇಳಿಯುತ್ತ, ಇವತ್ತು ₹ 53,009 ಬಂದು ನಿಂತಿದೆ. ಸರಿ ಸುಮಾರು ₹ 1,500 ದರ ‘ಅಡಿಕೆ ರಾಶಿ ಇಡಿ’ಯಲ್ಲಿ ಕೊರತೆ ಕಾಣಿಸಿದೆ.

ಅಡಿಕೆ ರಾಶಿ ಇಡಿಯಲ್ಲಿ ₹1,500 ಇಳಿಮುಖವಾಗಿದ್ದರೆ, ಅಡಿಕೆ ಬೆಟ್ಟೆ ಧಾರಣೆಯಲ್ಲಿ ಕೇವಲ ₹.500 ಮಾತ್ರ ಇಳಿಕೆಯಾಗಿದ್ದು, ಆಲ್‌ಮೋಸ್ಟ್ ಸ್ಥಿರತೆಯನ್ನೇ ಉಳಿಸಿಕೊಂಡಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ (ಪೂರೈಕೆ) ಗಣನೀಯವಾಗಿ ಅತ್ತ-ಇತ್ತ ಆಗುತ್ತಿರುವುದು ಕಂಡು ಬಂದಿದೆ. ಅಡಿಕೆ ಆವಕ ಏರಿಳಿಕೆ ಆಗುತ್ತಿದ್ದರೂ, ಅಡಿಕೆ ಧಾರಣೆ ಮಾತ್ರ ಇಳಿಯುತ್ತಿರುವುದು ಒಂದು ವಿಶೇಷ.

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ‘ರಾಶಿ ಇಡಿ ಅಡಿಕೆ’ ಆವಕದ ‘ಏರಿಳಿಕೆ’ ಹೀಗಿದೆ:
ದಿನಾಂಕ 14.05.2024 – 15,921 ಕ್ವಿಂಟಾಲ್
ದಿನಾಂಕ 15.05.2024 – 5,435 ಕ್ವಿಂಟಾಲ್
ದಿನಾಂಕ 16.05.2024 – 14,464ಕ್ವಿಂಟಾಲ್
ದಿನಾಂಕ 20.05.2024 – 3231 ಕ್ವಿಂಟಾಲ್
ದಿನಾಂಕ 21.05.2024 – 11,538 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,009ಕ್ಕೆ ಇಳಿಕೆಯಾದಾಗ, ಗೊರಬಲು ಅಡಿಕೆ ₹.38,800 ಸನಿಹದಲ್ಲಿದೆ.

ಸಿಪ್ಪೆ ಗೋಟು ದರ ಏರಿಕೆ

ಈ ಎಲ್ಲ ವೆರೈಟಿಗಳ ಧಾರಣೆಯ ಇಳಿಕೆ ಕಾಣುತ್ತಿರುವಾಗ, ಸಿಪ್ಪೆ ಗೋಟು ದರ ಮಾತ್ರ ಸಣ್ಣ ಮಟ್ಟದ ಏರಿಕೆಯನ್ನು ದಾಖಲಿಸಿದೆ. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ಅಡಿಕೆ ವ್ಯವಹಾರ ಬಹಳ ಕಮ್ಮಿ ಮತ್ತು ನಗದು ಮಾರುಕಟ್ಟೆಯಲ್ಲೇ ಹೆಚ್ಚಾಗಿ ಸಿಪ್ಪೆ ಗೋಟು ಅಡಿಕೆ ವ್ಯಾಪಾರ ಕಾಣುವುದು.

ಪ್ರತೀ ವರ್ಷವೂ ನಗದು ಮಾರುಕಟ್ಟೆಯಲ್ಲಿ ಮೇ 15 ರ ನಂತರ ಸಿಪ್ಪೆ ಗೋಟು ಅಡಿಕೆ ಚೇತರಿಕೆ ಕಾಣುವುದು ಎಂದು ನಂಬಿಕೆ ಮತ್ತು ವಾಡಿಕೆಯಾಗಿದೆ. ಅದರಂತೆ ಮೇ 15 ರಿಂದ ಸಿಪ್ಪೆ ಗೋಟು ಅಡಿಕೆ ಏರಿಕೆಯೊಂದಿಗೆ ₹.19,000 ದಲ್ಲಿ ವ್ಯಾಪಾರ ನೆಡೆಯುತ್ತಿದೆ ಎಂದು ವರದಿಯಾಗಿದೆ. (ಸಿಪ್ಪೆ ಗೋಟಿನ ಅಡಿಕೆಗೆ ಬಿಲ್ಲ ಇರುವುದಿಲ್ಲ. ಅಧಿಕೃತವಾಗಿ APMC ಯಲ್ಲಿ ಇದರ ವ್ಯವಹಾರ ಕಡಿಮೆ ಇರುವುದರಿಂದ, ವ್ಯಾಪಾರಸ್ತರು/ಏಜಂಟರು ನೇರವಾಗಿ ರೈತರ ಅಂಗಳದಲ್ಲೇ ಖರೀಧಿ ಮಾಡುವುದರಿಂದ ವ್ಯಾವಹಾರಿಕ ದಾಖಲೆಗಳು ಎಲ್ಲಾ ಕಡೆ ಇರುವುದು ಕಮ್ಮಿ.)
ಸಿಪ್ಪೆ ಗೋಟು ದರ ಇನ್ನಷ್ಟು ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ ₹.20,000 ದಾಟುವ ನಿರೀಕ್ಷೆ ರೈತರದು.

ಅಡಿಕೆ ಬೆಳೆಗಾರರ ನಿರೀಕ್ಷೆ ಮತ್ತು ಅಭಿಪ್ರಾಯ ಪ್ರಕಾರ, ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ಧಾರಣೆಗಳು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಮೇಲೆ, ವ್ಯಾಪಾರ ವಹಿವಾಟು ತೀವ್ರತೆ ಪಡೆದು, ಧಾರಣೆ ಗ್ರಾಫ್ ಮೇಲ್ಮುಖವಾಗಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉಪ ಬೆಳೆ ಧಾರಣೆ ಏರಿಕೆ

ಅಡಿಕೆ ಬೆಲೇ ಏರಿಳಿತವಾಗುವ ಸಮಯದಲ್ಲಿ, ಅಡಿಕೆಯ ತೋಟದಲ್ಲಿನ ಉಪ ಬೆಳೆಯಾದ ಕಾಳು ಮೆಣಸು ಧಾರಣೆ ಗಣನೀಯವಾಗಿ ಏರುತ್ತಿದ್ದು, ಕಳೆದ ವಾರ ₹.56,500 (ಕ್ವಿಂಟಾಲಿಗೆ) ಇದ್ದ ದರ, ಇವತ್ತು ₹.60,000 ದಾಟಿದೆ. ವಿಯಟ್ಣಾಮ್‌ನಲ್ಲಿ ಕಾಳು ಮೆಣಸು ಬೆಳೆ ತೀವ್ರ ಕುಸಿತ ಕಂಡ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದು, ಭಾರತದ ಕಾಳು ಮೆಣಸಿಗೆ ಜಾಕ್ ಪಾಟ್ ಧಾರಣೆ ಸಿಗಲಿದೆ ಎಂದು ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಬಹುಶಃ ಎಲ್ಲ ಧಾರಣೆಗಳ ಗಣನೀಯ ಏರಿಳಿತಗಳಿಗೂ ಚಾಲನೆ ಸಿಗುವುದು ಜೂನ್ ನಾಲ್ಕರ ನಂತರ? ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್ಕಿ ಬಾರ್ ₹ 60,000 ಪಾರ್’ ಆಗಲಿದೆಯಾ? ಕಾದು ನೋಡಬೇಕು!

ಇದನ್ನೂ ಓದಿ: Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ4 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ4 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ5 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ5 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ5 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ6 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ6 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ6 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ6 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು16 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌