Jagdish Tytler | ಟೀಕೆ ಹಿನ್ನೆಲೆ ಭಾರತ್‌ ಜೋಡೋ ಯಾತ್ರೆಯಿಂದ ಹಿಂದೆ ಸರಿದ ಸಿಖ್‌ ವಿರೋಧಿ ದಂಗೆ ಆರೋಪಿ ಟೈಟ್ಲರ್ - Vistara News

ದೇಶ

Jagdish Tytler | ಟೀಕೆ ಹಿನ್ನೆಲೆ ಭಾರತ್‌ ಜೋಡೋ ಯಾತ್ರೆಯಿಂದ ಹಿಂದೆ ಸರಿದ ಸಿಖ್‌ ವಿರೋಧಿ ದಂಗೆ ಆರೋಪಿ ಟೈಟ್ಲರ್

ನಾನೂ ಕೂಡ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಇದಕ್ಕೂ ಮೊದಲು ಜಗದೀಶ್‌ ಟೈಟ್ಲರ್‌ (Jagdish Tytler) ಘೋಷಿಸಿದ್ದರು. ಆದರೆ, ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ.

VISTARANEWS.COM


on

Jagdish Tytler
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 1984ರಲ್ಲಿ ನಡೆದ ಸಿಖ್‌ ವಿರೋಧಿ ದಂಗೆಯ ಆರೋಪಿ, ಕಾಂಗ್ರೆಸ್‌ನ ವಿವಾದಿತ ನಾಯಕ ಜಗದೀಶ್‌ ಟೈಟ್ಲರ್‌ (Jagdish Tytler) ಅವರು ಭಾರತ್‌ ಜೋಡೋ ಯಾತ್ರೆಯಿಂದ ಹಿಂದೆ ಸರಿದಿದ್ದಾರೆ. ಅವರು ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ.

ರಾಹುಲ್‌ ಗಾಂಧಿ ಅವರು ಕೈಗೊಳ್ಳುತ್ತಿರುವ ಭಾರತ್‌ ಜೋಡೋ ಯಾತ್ರೆಯು ಡಿಸೆಂಬರ್‌ 24ರಂದು ಹರಿಯಾಣದಿಂದ ದೆಹಲಿಗೆ ಪ್ರವೇಶಿಸಲಿದೆ. ಬಾದರ್‌ಪುರ ಗಡಿಯಲ್ಲಿ ಹಲವು ನಾಯಕರು ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಲಿದ್ದಾರೆ. ಈ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಇದಕ್ಕೂ ಮೊದಲು ಜಗದೀಶ್‌ ಟೈಟ್ಲರ್‌ ಅವರು ಘೋಷಿಸಿದ್ದರು. ಆದರೆ, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟೈಟ್ಲರ್‌, “ನನಗೆ ರಾಹುಲ್‌ ಗಾಂಧಿ ಅವರು ಕೈಗೊಳ್ಳುತ್ತಿರುವ ಭಾರತ್‌ ಜೋಡೋ ಯಾತ್ರೆ ಅಷ್ಟೇ ಮುಖ್ಯ. ಹಾಗಾಗಿ, ನಾನು ಭಾಗವಹಿಸದಿರಲು ತೀರ್ಮಾನಿಸಿದ್ದೇನೆ” ಎಂದಿದ್ದಾರೆ. ಸಿಖ್‌ ವಿರೋಧಿ ದಂಗೆ ಕೇಸ್‌ ಹಿನ್ನೆಲೆಯಲ್ಲಿ ಮೊದಲು ಟೈಟ್ಲರ್‌ ಅವರಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿತ್ತು. ಆದರೆ, ಇತ್ತೀಚೆಗೆ ಟೈಟ್ಲರ್‌ ಅವರನ್ನು ಪಕ್ಷದ ಚಟುವಟಿಕೆಗಳಲ್ಲಿ ಸಹಭಾಗಿತ್ವ ನೀಡಲಾಗುತ್ತಿದೆ.

ಇದನ್ನೂ ಓದಿ | ‘ಸಚಿನ್​ ಪೈಲಟ್​​ರಂಥ ಸಿಎಂ ಬೇಕು’; ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿ ಎದುರೇ ಮೊಳಗಿತು ಯುವಕರ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Amit Shah: ಎಸ್​​ಸಿ, ಎಸ್​ಟಿ ಮೀಸಲು ರದ್ದು; ಅಮಿತ್​ ಶಾ ನಕಲಿ ವಿಡಿಯೊ ಬಗ್ಗೆ ಡೆಲ್ಲಿಯಲ್ಲಿ ಎಫ್​ಐಆರ್​​

Amit Shah: ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

VISTARANEWS.COM


on

Amith Shah
Koo

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

ಮೂಲಗಳನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿ ಬಂಧನಗಳು ದೇಶಾದ್ಯಂತ ನಡೆಯುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ (ಐ 4 ಸಿ) ಡಿಸಿ ಸಿಂಕು ಶರಣ್ ಸಿಂಗ್ ಅವರು ಸಲ್ಲಿಸಿದ ದೂರಿನ ಪ್ರಕಾರ, “ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶದಿಂದ ಕೆಲವು ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ, ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಲಿಂಕ್​​ಗಳ ಸಂಗ್ರಹ

ಮುಂದಿನ ಕ್ರಮಕ್ಕಾಗಿ ವೀಡಿಯೊಗಳನ್ನು ಹಂಚಿಕೊಂಡ ಲಿಂಕ್​​ಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಎಕ್ಸ್ ಮತ್ತು ಫೇಸ್ಬುಕ್​​ಗೆ ಪತ್ರ ಬರೆದಿದ್ದು, ಅಮಿತ್ ಶಾ ಅವರ ನಕಲಿ ಕ್ಲಿಪ್​ನ ಮೂಲ ಮತ್ತು ವೀಡಿಯೊವನ್ನು ಮೊದಲು ಹಂಚಿಕೊಂಡ ಖಾತೆಯ ಬಗ್ಗೆ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಮಾಹಿತಿ ಕೋರಿದ್ದಾರೆ.

ಹಿಂಸಾಚಾರಕ್ಕೆ ಕಾರಣವಾಗಬಹುದು

ಗೃಹ ಸಚಿವರ ನಕಲಿ ವೀಡಿಯೊಗಳನ್ನು ಕಾಂಗ್ರೆಸ್ ಹರಡಿಸಿದೆ ಎಂಬುದಾಗಿ ಬಿಜೆಪಿ ಹೇಳಿದೆ. ಎಡಿಟ್ ಮಾಡಿದ ತುಣುಕುಗಳನ್ನು ಪ್ರಸಾರ ಮಾಡುವ ಮತ್ತು ಹಂಚಿಕೊಳ್ಳುವ ಮೂಲಕ ವಿರೋಧ ಪಕ್ಷವು ದೇಶದಲ್ಲಿ ಕೋಮು ಸಾಮರಸ್ಯವನ್ನು ಹರಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಕಾಂಗ್ರೆಸ್ ತೆಲಂಗಾಣ ಘಟಕವು ಅಮಿತ್ ಶಾ ಅವರ ನಕಲಿ ವೀಡಿಯೊವನ್ನು ಪ್ರಸಾರ ಮಾಡುತ್ತಿದೆ, ಇದು “ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ತೆಲಂಗಾಣ ಕಾಂಗ್ರೆಸ್ ಎಡಿಟ್ ಮಾಡಿದ ವೀಡಿಯೊವನ್ನು ಹರಡುತ್ತಿದೆ, ಇದು ಸಂಪೂರ್ಣವಾಗಿ ನಕಲಿ ಮತ್ತು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಮಾಳವೀಯ ಬರೆದಿದ್ದಾರೆ.

ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನೀಡಲಾಗುವ “ಅಸಂವಿಧಾನಿಕ ಮೀಸಲಾತಿ” ಪ್ರಯೋಜನಗಳನ್ನು ತೆಗೆದುಹಾಕುವ ಬಗ್ಗೆ ಮಾತ್ರ ಶಾ ಮಾತನಾಡುತ್ತಿದ್ದಾರೆ ಎಂದು ಅವರು ಗಮನಸೆಳೆದರು.

ಅನನುಕೂಲಕರ ಮೀಸಲಾತಿ

ಕಾಂಗ್ರೆಸ್ ಮತ್ತು ಅದರ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಮಿತ್ ಶಾ ತಮ್ಮ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದೆ ಅಸಂವಿಧಾನಿಕ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೀಸಲಾತಿ ಬಗ್ಗೆ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ತುಷ್ಟೀಕರಣಕ್ಕಾಗಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಮೂಲಕ ಮತ್ತು ಜಾಮಿಯಾ ಮತ್ತು ಎಎಂಯುನಂತಹ ಸಂಸ್ಥೆಗಳಲ್ಲಿ ಎಸ್ಸಿ-ಎಸ್ಟಿ ಮತ್ತು ಒಬಿಸಿಯನ್ನು ವಂಚಿತಗೊಳಿಸಲಾಗುತ್ತಿದೆ ಎಂದು” ಎಂದು ಶಾ ಆರೋಪಿಸಿದರು.

Continue Reading

ಪ್ರಮುಖ ಸುದ್ದಿ

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

Physical Abuse: ನಾನು ಏಪ್ರಿಲ್ 19 ರಂದು ಮನೆಗೆ ಸಾಮಗ್ರಿ ಖರೀದಿಸಲು ಅಂಗಡಿಗೆ ಹೋಗಿದ್ದೆ. ಅವನು ನನ್ನನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ದಿದ್ದ. ಅಲ್ಲಿ ತಪ್ಪು ಕೆಲಸಗಳನ್ನು ಮಾಡಿದನು. ನಂತರ ಅವನು ನನ್ನ ಮುಖವನ್ನು ರಾಡ್ ನಿಂದ ಸುಟ್ಟು ತನ್ನ ಹೆಸರನ್ನು ಬರೆದನು, ಅವನ ಸಹೋದರಿ ಮತ್ತು ತಾಯಿ ನನ್ನನ್ನು ಹಿಡಿದುಕೊಂಡಿದ್ದರು. ನಾನು ಕೂಗುತ್ತಲೇ ಇದ್ದೆ, ಆದರೆ ಯಾರೂ ನಮ್ಮನ್ನು ರಕ್ಷಿಸಲು ಬರಲಿಲ್ಲ” ಎಂದು ಬಾಲಕಿ ತಿಳಿಸಿದ್ದಾರೆ.

VISTARANEWS.COM


on

Physical Abuse
Koo

ಲಖನೌ: ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ 17 ವರ್ಷದ ಬಾಲಕಿಯೊಬ್ಬಳನ್ನು ಮೂರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿ, ಅತ್ಯಾಚಾರ ಎಸಗಿದ (Physical Abuse) ಘಟನೆ ಲಖೀಂಪುರದಲ್ಲಿ ನಡೆದಿದೆ. ಕ್ರೂರಿಗಳು ಆಕೆಯ ಮುಖದ ಮೇಲೆ ಕಬ್ಬಿಣದ ರಾಡ್​​ನಿಂದ ಬರೆಯೂ ಎಳೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 19 ರಂದು, 21 ವರ್ಷದ ಯುವಕ ಈ ಕೆಲಸ ಮಾಡಿದ್ದಾರೆ. ತನ್ನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಆಕೆಯನ್ನು ಬಲವಂತವಾಗಿ ತನ್ನ ಮನೆಗೆ ಕರೆಯೊಯ್ದಿದ್ದ. ಅವಳನ್ನು ಮೂರು ದಿನಗಳ ಕಾಲ ಅಲ್ಲಿ ಬಂಧಿಯಾಗಿಟ್ಟು ಹಲ್ಲೆ ಹಾಗೂ ಅತ್ಯಾಚಾರ ಮಾಡಿದ್ದ.

ನಾನು ಏಪ್ರಿಲ್ 19 ರಂದು ಮನೆಗೆ ಸಾಮಗ್ರಿ ಖರೀದಿಸಲು ಅಂಗಡಿಗೆ ಹೋಗಿದ್ದೆ. ಅವನು ನನ್ನನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ದಿದ್ದ. ಅಲ್ಲಿ ತಪ್ಪು ಕೆಲಸಗಳನ್ನು ಮಾಡಿದನು. ನಂತರ ಅವನು ನನ್ನ ಮುಖವನ್ನು ರಾಡ್ ನಿಂದ ಸುಟ್ಟು ತನ್ನ ಹೆಸರನ್ನು ಬರೆದನು, ಅವನ ಸಹೋದರಿ ಮತ್ತು ತಾಯಿ ನನ್ನನ್ನು ಹಿಡಿದುಕೊಂಡಿದ್ದರು. ನಾನು ಕೂಗುತ್ತಲೇ ಇದ್ದೆ, ಆದರೆ ಯಾರೂ ನಮ್ಮನ್ನು ರಕ್ಷಿಸಲು ಬರಲಿಲ್ಲ” ಎಂದು ಬಾಲಕಿ ತಿಳಿಸಿದ್ದಾರೆ.

ಬಾಲಕಿ ಹೇಗೋ ಸೆರೆಯಿಂದ ತಪ್ಪಿಸಿಕೊಂಡು ಏಪ್ರಿಲ್ 21 ರಂದು ಮನೆಗೆ ಹಿಂದಿರುಗಿದ್ದಳು. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 343 (ಅಕ್ರಮ ಬಂಧನ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 504 (ಉದ್ದೇಶಪೂರ್ವಕ ಅವಮಾನ) ಮತ್ತು ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ನಿಬಂಧನೆಗಳನ್ನು ಸೇರಿಸಲಾಯಿತು.

Continue Reading

ದೇಶ

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

Pakistan Spy: ಪಾಕಿಸ್ತಾನ ಪರ ಗೂಢಾಚಾರಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಜರಾತ್‌ನ ಭಯೋತ್ಪಾದಕ ನಿಗ್ರಹ ದಳ ಬಂಧಿಸಿದೆ.

VISTARANEWS.COM


on

Koo

ಗುಜರಾತ್‌: ಪಾಕಿಸ್ತಾನ ಪರ ಗೂಢಾಚಾರಿಕೆ(Pakistan Spy) ಮಾಡುತ್ತಿದ್ದ ವ್ಯಕ್ತಿಯನ್ನು ಗುಜರಾತ್‌ನ ಭಯೋತ್ಪಾದಕ ನಿಗ್ರಹ ದಳ(Gujarat anti terrorist squad) ಬಂಧಿಸಿದೆ. ಗುಜರಾತ್‌ನ ಜಾಮ್‌ನಗರ ನಿವಾಸಿ ಮೊಹಮ್ಮದ್‌ ಸಾಕ್ಲೈನ್‌ ಎಂಬಾತ ಬಂಧಿತ ಆರೋಪಿ. ಈತ ಭಾರತದ ಸಿಮ್‌ ಖರೀದಿಸಿ ವಾಟ್ಸಾಪ್‌ ಆಕ್ಟೀವೇಟ್‌ ಮಾಡಿಕೊಂಡಿದ್ದ. ಈ ಸಿಮ್‌ ಅನ್ನು ಪಾಕಿಸ್ತಾನ ಕೆಲವು ವ್ಯಕ್ತಿಗಳು ಆಪರೇಟ್‌ ಮಾಡುತ್ತಿದ್ದರು ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರ(Jammu and Kashmir)ದಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆ ವಿರುದ್ಧ ಗೂಢಾಚಾರಿಕೆ ಮಾಡುತ್ತಿದ್ದ ಈತ ಕೆಲವೊಂದು ಗೌಪ್ಯ ವಿಚಾರಗಳನ್ನು ಪಾಕಿಸ್ತಾಕ್ಕೆ ರವಾನಿಸಿದ್ದ ಆರೋಪ ಈತನ ಮೇಲಿತ್ತು.

2023 ಅಕ್ಟೋಬರ್‌ನಲ್ಲಿ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಲಾಭ್‌ಶಂಕರ್‌ ಮಹೇಶ್ವರಿ ಎಂಬಾತನನ್ನು ಗುಜರಾತ್‌ನ ತಾರಾಪುರದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಈತನಿಗೆ ಸಾಕ್ಲೈನ್‌ ಸಿಮ್‌ ಕಾರ್ಡ್‌ ನೀಡಿದ್ದ. ಮೂಲದ ಲಾಭ್‌ ಶಂಕರ್‌ ಪಾಕಿಸ್ತಾನದವನಾಗಿದ್ದು, ಈತನ ತನ್ನ ಗರ್ಭಿಣಿ ಪತ್ನಿ ಸಮೇತ ಗುಜರಾತ್‌ನಲ್ಲಿ ಬಂದು ನೆಲೆಸಿದ್ದ. ಅಲ್ಲದೇ ಭಾರತೀಯ ಪೌರತ್ವವನ್ನೂ ಪಡೆದಿದ್ದ. ಈತ ವಾಟ್ಸ್‌ಆಪ್‌ ಮೂಲಕ ಭಾರತೀಯ ಸೇನೆ ಬಗ್ಗೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ. 2023ರಲ್ಲಿ ಎಟಿಎಸ್‌ ಆತನನ್ನು ಅರೆಸ್ಟ್‌ ಮಾಡಿತ್ತು. ಇದಾದ ಬಳಿಕ ಸಾಕ್ಲೈನ್‌ ತಲೆ ಮರೆಸಿಕೊಂಡಿದ್ದ.

ಕಳೆದ ವರ್ಷ ಪಾಕಿಸ್ತಾನ ಗುಪ್ತಚರ ದಳ ಐಎಸ್​ಐ ಜತೆ ಸಂಪರ್ಕ ಹೊಂದಿದ್ದ ಯುವಕನೊಬ್ಬನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ATS) ಅರೆಸ್ಟ್ ಮಾಡಿದೆ. ಆರೋಪಿ ಹೆಸರು ಮೊಹಮ್ಮದ್​ ರಯೀಸ್ ಎಂದಾಗಿದ್ದು, ಈತ ಐಎಸ್​​ಐಗಾಗಿ ಕೆಲಸ ಮಾಡುತ್ತಿದ್ದ. ಭಾರತದ ಸೇನಾ ಸಂಸ್ಥೆಗಳ ಬಗ್ಗೆ ಐಎಸ್​​ಐಗೆ ಪ್ರಮುಖ ಮಾಹಿತಿಗಳನ್ನು ರವಾನೆ ಮಾಡುತ್ತಿದ್ದ ಎಂದು ಉತ್ತರ ಪ್ರದೇಶ ಎಟಿಎಸ್​ ತಿಳಿಸಿತ್ತು.

ಮೊಹಮ್ಮದ್​ ರಯೀಸ್​ ಉತ್ತರ ಪ್ರದೇಶದ ಗೊಂಡಾದ ತರಬ್​ಗಂಜ್​ ಏರಿಯಾದ ನಿವಾಸಿ. ಮುಂಬಯಿಯಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್​ ಎಂಬಾತನ ಸಂಪರ್ಕಕ್ಕೆ ಬಂದ ನಂತರ ಅವನು ಐಎಸ್​ಐ ಗೂಢಾಚಾರನಾಗಿ ಬದಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದರು. ಮೊಹಮ್ಮದ್ ರಯೀಸ್​, ಎಟಿಎಸ್​ ಎದುರು ಹೇಳಿಕೆ ಕೊಡುವಾಗ ಅರ್ಮಾನ್​ ಹೆಸರನ್ನು ಹೇಳಿದ್ದಾನೆ. ಆತನೇ ನನ್ನ ಸಂಪರ್ಕಕ್ಕೆ ಬಂದ. ಭಾರತದಲ್ಲಿ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ ಎಂಬ ವಿಷಯವನ್ನು ನನ್ನ ತಲೆಗೆ ತುಂಬಿದ. ನಾನೂ ಅವನ ಮಾತನನ್ನು ನಂಬಿ, ಐಎಸ್​ಐಗಾಗಿ ಕೆಲಸ ಮಾಡಲು ಶುರು ಮಾಡಿದೆ ಎಂದು ರಯೀಸ್ ಹೇಳಿಕೊಂಡಿದ್ದ.

ಇದನ್ನೂ ಓದಿ:Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ

ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುಜರಾತ್ ಕರಾವಳಿಯಲ್ಲಿ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿ ಅವರ ಬಳಿ 602 ಕೋಟಿ ಮೌಲ್ಯದ 86 ಕೆಜಿ ನಿಷೇಧ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ. ಕಾರ್ಯಾಚರಣೆಯ ಸಮಯದಲ್ಲಿ ಕಿಡಿಗೇಡಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. ಆಗ ಆರೋಪಿಗಳು ಕಾಲಿಗೆ ಗುಂಡು ಹಾರಿಸಿ ಅವರನ್ನು ಅರೆಸ್ಟ್‌ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

PM Narendra Modi: “ಅವರ ಪ್ರಕಾರ ಎಕ್ಸ್-ರೇ ಎಂದರೆ ಪ್ರತಿ ಮನೆಯ ಮೇಲೆ ದಾಳಿ ಮಾಡುವುದು. ಯಾವುದೇ ಮಹಿಳೆ ಧಾನ್ಯಗಳನ್ನು ಸಂಗ್ರಹಿಸಿಡುವ ಸ್ಥಳದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದರೆ, ಅದನ್ನು ಕೂಡ ಎಕ್ಸ್-ರೇ ಮಾಡಲಾಗುವುದು. ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗುವುದು. ಭೂ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮತ್ತು ಅವುಗಳನ್ನು ಮರುಹಂಚಿಕೆ ಮಾಡಲಾಗುವುದು” ಎಂದು ಪಿಎಂ ಮೋದಿ ಆಪಾದಿಸಿದ್ದಾರೆ.

VISTARANEWS.COM


on

PM Not OBC Said by Rahul Gandhi and BJP hits back to him
Koo

ಹೊಸದಿಲ್ಲಿ: ಸಂಪತ್ತಿನ ಮರು ಹಂಚಿಕೆಯ (wealth redistribution) ಕುರಿತು ರಾಹುಲ್‌ ಗಾಂಧಿಯವರ ಐಡಿಯಾ ʼನಗರ ನಕ್ಸಲ್‌ʼ (Urban naxal) ಚಿಂತನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಿಡಿ ಕಾರಿದ್ದಾರೆ. ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ (PM Modi interview) ಅವರು ಇದನ್ನು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ (Congress manifesto) ಉಲ್ಲೇಖಿಸಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು (social-economic survey) ಸಮರ್ಥಿಸಿಕೊಂಡಿದ್ದು, ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು. “ಅವರ ಪ್ರಕಾರ ಎಕ್ಸ್-ರೇ ಎಂದರೆ ಪ್ರತಿ ಮನೆಯ ಮೇಲೆ ದಾಳಿ ಮಾಡುವುದು. ಯಾವುದೇ ಮಹಿಳೆ ಧಾನ್ಯಗಳನ್ನು ಸಂಗ್ರಹಿಸಿಡುವ ಸ್ಥಳದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದರೆ, ಅದನ್ನು ಕೂಡ ಎಕ್ಸ್-ರೇ ಮಾಡಲಾಗುವುದು. ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗುವುದು. ಭೂ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮತ್ತು ಅವುಗಳನ್ನು ಮರುಹಂಚಿಕೆ ಮಾಡಲಾಗುವುದು. ಈ ಮಾವೋವಾದಿ ಸಿದ್ಧಾಂತವು ಜಗತ್ತಿಗೆ ಎಂದಿಗೂ ಸಹಾಯ ಮಾಡಿಲ್ಲ. ಇದು ಸಂಪೂರ್ಣವಾಗಿ ‘ಅರ್ಬನ್ ನಕ್ಸಲ್’ ಚಿಂತನೆ” ಎಂದು ಪ್ರಧಾನಿ ಹೇಳಿದರು.

“ಸಾಮಾನ್ಯವಾಗಿ ಮಾತನಾಡುತ್ತಲೇ ಇರುವ ಜಮಾತ್ 10 ದಿನಗಳ ನಂತರವೂ ಪ್ರಣಾಳಿಕೆಯ ಬಗ್ಗೆ ಮೌನವಾಗಿದೆ. ಏಕೆಂದರೆ ಅದು ಅವರಿಗೆ ಸಹಾಯ ಮಾಡುತ್ತದೆ. ಕಾಂಗ್ರೆಸನ್ನು ರಕ್ಷಿಸಲು ಅವರು ಮೌನವಾಗಿದ್ದಾರೆ. ಕಾಂಗ್ರೆಸ್‌ನವರು ನಿಮ್ಮನ್ನು ಲೂಟಿ ಮಾಡಲು ಯೋಜಿಸುತ್ತಿದ್ದಾರೆ ಎಂದು ದೇಶವನ್ನು ಜಾಗೃತಗೊಳಿಸುವುದು ನನ್ನ ಜವಾಬ್ದಾರಿ. ಅವರ ಕಾರ್ಯಯೋಜನೆಯ ಮುಂದಿನ ಭಾಗವೆಂದರೆ, ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಯಾರಿಗೆ ಇದೆ ಎಂದು ಡಾ.ಮನಮೋಹನ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ” ಎಂದಿದ್ದಾರೆ ಪಿಎಂ.

“ವಿವಾದಿತ ಪಿತ್ರಾರ್ಜಿತ ತೆರಿಗೆಯನ್ನು ಕಾಂಗ್ರೆಸ್ ಪ್ರತಿಪಾದಿಸುತ್ತಿದೆ ಮತ್ತು ಬಿಜೆಪಿ ಅದನ್ನು ಜಾರಿಗೊಳಿಸುವ ಅಥವಾ ಪರಿಗಣಿಸುವ ಯಾವುದೇ ಯೋಜನೆ ಹೊಂದಿಲ್ಲ. ಅವರ ಮಹಾಶಯರೊಬ್ಬರು (ರಾಹುಲ್‌ ಗಾಂಧಿ) ಅಮೇರಿಕಾದಲ್ಲಿ ಸಂದರ್ಶನವನ್ನು ನೀಡಿದಾಗ ಅವರು ಪಿತ್ರಾರ್ಜಿತ ತೆರಿಗೆಯ ವಿಷಯವನ್ನು ಪ್ರಸ್ತಾಪಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55 ಪ್ರತಿಶತ ತೆರಿಗೆ ವಿಧಿಸಲಾಗುತ್ತದೆ. ಈಗ ನಾನು ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪರಂಪರೆಯನ್ನು ಲೂಟಿ ಮಾಡುವ ಮಾತನಾಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಮಾಡುವುದೇ ಅವರ ಇಂದಿನ ಇತಿಹಾಸ. ದೇಶವನ್ನು ಆ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ದೇಶವಾಸಿಗಳಿಗೆ ತಿಳಿಸುವುದು ನನ್ನ ಜವಾಬ್ದಾರಿಯಾಗಿದೆ. ನೀವು ಅವರ ಜೊತೆ ಹೋಗಬೇಕೆ ಅಥವಾ ಬೇಡವೇ ಎಂದು ಈಗ ನೀವು ನಿರ್ಧರಿಸಿ” ಎಂದು ಮೋದಿ ನುಡಿದರು.

ಪಿತ್ರಾರ್ಜಿತ ತೆರಿಗೆ (Inheritance tax) ಕುರಿತು ಬಿಜೆಪಿ ನಿಲುವನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು. “ಭಾರತೀಯ ಜನತಾ ಪಕ್ಷ ಏನು ಮಾಡಲು ಯೋಜಿಸಿದೆ ಎಂಬುದನ್ನು ನಮ್ಮ ಪ್ರಣಾಳಿಕೆಯಲ್ಲಿ ಬರೆಯಲಾಗಿದೆ. ಅವರ ಯೋಜನೆಯನ್ನು ನಾವು ಮುಂದುವರಿಸುವುದಿಲ್ಲ. ನಾವು ನಮ್ಮ ಪ್ರಣಾಳಿಕೆ ಮತ್ತು ಕೆಲಸಗಳೊಂದಿಗೆ ದೇಶದ ಮುಂದೆ ಹೋಗುತ್ತೇವೆ. ದಯವಿಟ್ಟು ಅವರ ಆಲೋಚನೆಗಳನ್ನು ನಮ್ಮ ಮೇಲೆ ಹೇರಬೇಡಿ” ಎಂದು ಅವರು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದರು.

ಕಾಂಗ್ರೆಸ್‌ನ ಸಾಗರೋತ್ತರ ವಿಭಾಗದ ಅಧ್ಯಕ್ಷ ಪಿತ್ರೋಡಾ ಅವರು ಸಂಪತ್ತಿನ ಮರುಹಂಚಿಕೆಯ ಕುರಿತು ಮಾತನಾಡುತ್ತ, ಯುಎಸ್‌ನಲ್ಲಿರುವ ಪಿತ್ರಾರ್ಜಿತ ಆಸ್ತಿ ತೆರಿಗೆಯ ಬಗ್ಗೆ ಉಲ್ಲೇಖಿಸಿ ವಿವಾದವನ್ನು ಹುಟ್ಟುಹಾಕಿದ್ದರು. ಈ ಮಾತುಗಳು ಬಿಜೆಪಿಗೆ ಮೇವು ಒದಗಿಸಿದ್ದು, ಕಾಂಗ್ರೆಸ್‌ ಕಂಗಾಲಾಗಿದೆ. ಉತ್ತರಾಧಿಕಾರ ತೆರಿಗೆಯು, ಮೃತ ವ್ಯಕ್ತಿಯ ಹಣ ಮತ್ತು ಆಸ್ತಿಯ ಒಟ್ಟು ಮೌಲ್ಯದ ಮೇಲೆ ವಿಧಿಸುವ ತೆರಿಗೆಯಾಗಿದ್ದು, ಅದನ್ನು ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವಿತರಿಸಲಾಗುತ್ತದೆ. ಭಾರತದಲ್ಲಿ ಅಂತಹ ವ್ಯವಸ್ಥೆ ಇಲ್ಲ.

“ನಾನು ಮೊದಲ ದಿನವೇ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಕಾಮೆಂಟ್ ಮಾಡಿದ್ದೆ. ಪ್ರಣಾಳಿಕೆ ನೋಡಿದ ಮೇಲೆ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ಅನಿಸುತ್ತಿದೆ. ಮಾಧ್ಯಮದವರು ಬೆಚ್ಚಿ ಬೀಳುತ್ತಾರೆ ಎಂದುಕೊಂಡೆ. ಆದರೆ ಅವರು ಕಾಂಗ್ರೆಸ್ ಪ್ರಸ್ತುತಪಡಿಸಿದ್ದನ್ನು ಹೇಳುತ್ತಲೇ ಇದ್ದಾರೆ. ಪ್ರಣಾಳಿಕೆಯಲ್ಲಿನ ಕೆಡುಕುಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಏಕೆಂದರೆ ಅದನ್ನು ಪಕ್ಷಪಾತವಿಲ್ಲದ ರೀತಿಯಲ್ಲಿ ಹೊರತಂದರೆ ಒಳ್ಳೆಯದು. ಅಂತಿಮವಾಗಿ ನಾನು ಈ ಸತ್ಯಗಳನ್ನು ಹೊರತರಲೇಬೇಕಾಯಿತು” ಎಂದು ಪಿಎಂ ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Continue Reading
Advertisement
Amith Shah
ಪ್ರಮುಖ ಸುದ್ದಿ2 mins ago

Amit Shah: ಎಸ್​​ಸಿ, ಎಸ್​ಟಿ ಮೀಸಲು ರದ್ದು; ಅಮಿತ್​ ಶಾ ನಕಲಿ ವಿಡಿಯೊ ಬಗ್ಗೆ ಡೆಲ್ಲಿಯಲ್ಲಿ ಎಫ್​ಐಆರ್​​

Mahanati Show complaint against Gagana Contestant and Ramesh
ಕಿರುತೆರೆ12 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ27 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ37 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ2 hours ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ2 hours ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202423 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌