Yatnal Vs Ashok | ಅಶೋಕ್‌ 50 ಸೀಟ್‌ ಗೆಲ್ಲಿಸಿಕೊಂಡು ಬರಲಿ, ಆಮೇಲೆ ಮೀಸಲಾತಿ ಕೊಡೋಣ ಎಂದ ಯತ್ನಾಳ್‌! - Vistara News

ಕರ್ನಾಟಕ

Yatnal Vs Ashok | ಅಶೋಕ್‌ 50 ಸೀಟ್‌ ಗೆಲ್ಲಿಸಿಕೊಂಡು ಬರಲಿ, ಆಮೇಲೆ ಮೀಸಲಾತಿ ಕೊಡೋಣ ಎಂದ ಯತ್ನಾಳ್‌!

ಕಂದಾಯ ಸಚಿವ ಆರ್‌ ಅಶೋಕ್‌ ಅವರು ಒಕ್ಕಲಿಗರ ಸಮುದಾಯದ ನಾಯಕನಾಗಿ ಬೆಳೆಯಬೇಕು ಎಂದು ಯತ್ನಾಳ್‌ ಸಲಹೆ ನೀಡಿದ್ದಾರೆ. ಆದರೆ, ಬಿಜೆಪಿಗಾಗಿ 50 ಸೀಟು ಗೆದ್ದು ತರಬೇಕು ಎಂದು ಸವಾಲೂ ಹಾಕಿದ್ದಾರೆ.

VISTARANEWS.COM


on

R Ashok Yatnal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ರಾಜ್ಯದಲ್ಲಿ ಮೀಸಲಾತಿ ಬೇಡಿಕೆ ಮತ್ತು ಚರ್ಚೆ ಜೋರಾಗಿದೆ. ಒಂದು ಕಡೆ ಪಂಚಮಸಾಲಿ ಸಮುದಾಯ ತಮ್ಮನ್ನು ೨ಎ ಪ್ರವರ್ಗಕ್ಕೆ ಸೇರಿಸಬೇಕು ಎಂದು ಹಠ ಹಿಡಿದು ಕೂತಿದ್ದರೆ, ಒಕ್ಕಲಿಗರಿಂದಲೂ ಮೀಸಲಾತಿ ಹೆಚ್ಚಳದ ಬೇಡಿಕೆ ಹೆಚ್ಚಾಗಿದೆ. ಇದರ ನಡುವೆ, ಕಂದಾಯ ಸಚಿವರಾಗಿರುವ ಆರ್‌. ಅಶೋಕ್‌ ಅವರು ಒಕ್ಕಲಿಗರಿಗಾಗಿ ಮೀಸಲಾತಿ ಕೇಳುತ್ತಿರುವ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೆಣಕುವ ಮಾತನ್ನಾಡಿದ್ದಾರೆ.

ಒಕ್ಕಲಿಗರು ಮೀಸಲಾತಿ ಕೇಳುತ್ತಿರುವ ವಿಚಾರವಾಗಿ ವಿಸ್ತಾರ ನ್ಯೂಸ್‌ ಜತೆ ಮಾತನಾಡುತ್ತಾ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಲಿಂಗಾಯತರು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಐವತ್ತು ಸ್ಥಾನ ಕೊಡ್ತಾ ಇದ್ದೇವೆ. ಆರ್ ಅಶೋಕ್ ಅವರು ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ. ಆಮೇಲೆ ಮೀಸಲಾತಿ ಕೊಡೋಣ ಎಂದರು. ಮಾಜಿ ಪ್ರಧಾನಿ ದೇವೇಗೌಡರ ರೀತಿ ಅಶೋಕ್ ಸೀಟು ಗೆದ್ದು ಬರಲಿ ಎಂದರು ಯತ್ನಾಳ್‌.

ʻʻನಮ್ಮ ಸಮುದಾಯಕ್ಕೆ ಮೀಸಲಾತಿ ಕೊಡುವಂತೆ ಒತ್ತಾಯ ಮಾಡಿದ್ದೇವೆ. ನಮ್ಮ ಸಮುದಾಯ ಮೊದಲಿಂದಲೂ ಬಿಜೆಪಿ ಜತೆ ಇದೆ. ನಮ್ಮ ಸಮುದಾಯದಿಂದ ಈ ಭಾಗದಲ್ಲಿ ಹೆಚ್ಚು ಶಾಸಕರು ಆಯ್ಕೆ ಆಗಿ ಹೋಗುತ್ತಿದ್ದಾರೆ. ಹೀಗಾಗಿ ಕಂದಾಯ ಸಚಿವರಾಗಿರುವ ಅಶೋಕ್‌ ಅವರು ನಮಗೆ ಹೇಳಲು ಬರುವುದು ಬೇಡʼʼ ಎಂದು ಗರಂ ಆಗಿ ಹೇಳಿದರು.

ಸಚಿವರಾದ ಅಶೋಕ್, ಸುಧಾಕರ್‌ ಅವರು ಬೆಳಗ್ಗಿನಿಂದ ಸಂಜೆವರೆಗೂ ಸಿಎಂ ಜತೆಯಲ್ಲಿ ಇರ್ತಾರೆ. ಅವರ ಮಾತನ್ನು ಸಿಎಂ ಕೇಳಬಹುದು. ಮೀಸಲಾತಿ ಕೊಡಬಹುದು ಎಂದರು.

ಅಶೋಕ್‌ಗೆ ಹೆಚ್ಚು ಸ್ಥಾನ ಗೆಲ್ಲೊಕ್ಕಾಗಲ್ಲ!
ʻʻಒಕ್ಕಲಿಗರಿಗೆ ದೇವೇಗೌಡರೇ ನಾಯಕ. ಆ ಭಾಗದಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲುತ್ತೆ. ಬಿಜೆಪಿ ಮತ್ತು ಅಶೋಕ್‌ ಸೇರಿ ನಾಲ್ಕೈದು ಸ್ಥಾನ ಗೆಲ್ತಾರೆ. ಅಶೋಕ್‌ ಅವರು ಹೆಚ್ಚು ಸ್ಥಾನ ಗೆದ್ದು ರಾಜ್ಯದ ನಾಯಕರಾಗಲಿ. ದೇವೇಗೌಡರ ರೀತಿಯಲ್ಲಿ ಇವರು ಸಮುದಾಯದ ನಾಯಕರಾಗಿ ಬೆಳೆಯಲಿ. ನಲವತ್ತು ಸ್ಥಾನ ಗೆಲ್ಲಿಸಿಕೊಂಡು ಬರಲಿ. ನಾವು ಇಲ್ಲಿಂದ ಜಾಸ್ತಿ ಗೆದ್ದು ಕೊಂಡು ಹೋಗ್ತೀವಿ. ಹೀಗಾಗಿ ನಾವು ಗಟ್ಟಿಯಾಗಿ ಕೇಳುತ್ತಿದ್ದೇವೆʼʼ ಎಂದು ನುಡಿದರು ಯತ್ನಾಳ್‌.

ʻʻ2ಎ ಅಡಿಯಲ್ಲಿ ಕುರುಬ ಸೇರಿದಂತೆ ಹಲವು ಸಮುದಾಯಗಳು ಬರುತ್ತವೆ. ಹೀಗಾಗಿ ಹೊಸ ಪ್ರವರ್ಗ ಮಾಡಿ ಮೀಸಲಾತಿ ಕೊಟ್ಟರೂ ನಮಗೆ ಬೇಸರವಿಲ್ಲ. ನಮಗೆ ಡಿಸೆಂಬರ್‌ 29ಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುವ ಭರವಸೆ ಸಿಕ್ಕಿದೆ. 29ಕ್ಕೆ ನಮಗೆ ಮೀಸಲಾತಿ ಸಿಗುತ್ತದೆʼʼ ಎಂದು ಭರವಸೆಯಿಂದ ನುಡಿದರು.

ನಮ್ಮಲ್ಲಿನ ಶ್ರೀಮಂತರಿಗೆ ಮೀಸಲಾತಿ ಬೇಡ
ʻʻಪಂಚಮಸಾಲಿಗೆ 2ಎ ಆದ್ರೂ ಕೊಡಿ. ಯಾವುದೇ ಎಬಿಸಿಸಿ ಯಾವುದಾದರೂ ಕೊಡಿ. ಆದರೆ ಅದಕ್ಕೆ ೨ಎಗೆ ಇರುವ ಸೌಲಭ್ಯ ಇರಬೇಕು. ಬಡವರಿಗಾಗಿ ಮಾತ್ರ ನಾವು ಮೀಸಲಾತಿ ಕೇಳ್ತಾ ಇದ್ದೇವೆ. ನನ್ನ ಹಾಗೆ ಶಾಸಕ ಆದವರಿಗೆ, ಡಿಸಿ ಆದವರಿಗೆ ಶ್ರೀಮಂತರಿಗೆ ಈ ಮೀಸಲಾತಿ ಬೇಡ. ಈ ಕಂಡಿಷನ್ ಹಾಕಿಯೇ ಮೀಸಲಾತಿ ನೀಡಿʼʼ ಎಂದು ಹೇಳಿದ ಯತ್ನಾಳ್‌, ನಾವು ರಾಜಕೀಯಕ್ಕೆ ಕೇಳ್ತಾ ಇಲ್ಲ ಮೀಸಲಾತಿ, ನನಗೆ ಅದರ ಅಗತ್ಯ ಇಲ್ಲ. ನಾನು ಹೇಗಾದರೂ ಗೆಲ್ತೇನೆʼʼ ಎಂದರು ಯತ್ನಾಳ್.

ಇದನ್ನೂ ಓದಿ | ಪಂಚಮಸಾಲಿ ಮೀಸಲಾತಿ | ಬೀಸೋ ದೊಣ್ಣೆಯಿಂದ 7 ದಿನ ತಪ್ಪಿಸಿಕೊಂಡ ಬೊಮ್ಮಾಯಿ ಸರ್ಕಾರ; ತಾಯಿ ಮೇಲೆ ಆಣೆ ಮಾಡಿದ್ದಾರೆ ಎಂದ ಯತ್ನಾಳ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Actor Darshan: ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

VISTARANEWS.COM


on

Actor Darshan In Central Jail remembering mother and son
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಭೇಟಿಗೆ ಸಹೋದರ ದಿನಕರ್ ಹಾಗೆ ತಾಯಿ ಮೀನಾ ಇಂದು ತೆರಳುವ ಸಾಧ್ಯತೆ ಇದೆ. ಬೆಳಿಗ್ಗೆ 11 ಘಂಟೆ ನಂತರ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೈಲು ಸೇರಿರುವ ದರ್ಶನ್ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರ ಭೇಟಿಗೂ ಮನಸ್ಸು ಮಾಡಿಲ್ಲ. ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್‌ ಇತ್ತೀಚೆಗೆ ಭೇಟಿಯಾಗಿದ್ದರು.

ಆದರೆ ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

ದರ್ಶನ್‌ ಭೇಟಿ ಮಾಡಿದ ರಕ್ಷಿತಾ- ಪ್ರೇಮ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಇದನ್ನೂ ಓದಿ: Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Continue Reading

ಪ್ರಮುಖ ಸುದ್ದಿ

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

Milk Price Hike: ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

shubham milk price hike
Koo

ಬಳ್ಳಾರಿ: ಶುಭಂ ಗೋಲ್ಡ್‌ ಹಾಲಿನ ದರವನ್ನು (Shubham Gold Milk) ಅರ್ಧ ಲೀಟರ್‌ಗೆ ಏಕಾಏಕಿ 4 ರೂ. ಹೆಚ್ಚಳ ಮಾಡಲಾಗಿದೆ. ಘೋಷಿತ ದರ ಏರಿಕೆಗಿಂತ (Milk Price Hike) ಹೆಚ್ಚು ದರ ಏರಿಸಲಾಗಿದೆ ಎಂದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕೆಎಂಎಫ್‌ ನಂದಿನ ಹಾಲಿನ (KMF Nandini Milk) ದರ ಹೆಚ್ಚಿಸಿ ಪರಿಷ್ಕೃತ ದರದ ಪಟ್ಟಿ ಬಿಡುಗಡೆ ಮಾಡಿತ್ತು. ಪ್ರತಿ ಲೀಟರ್‌ ಹಾಗೂ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲಿ 50 ಎಂಎಲ್‌ ಹಾಲಿನ ಪ್ರಮಾಣ ಹೆಚ್ಚಿಸಿ 2 ರೂ. ಹೆಚ್ಚಳ ಮಾಡಿರುವುದಾಗಿ ಘೋಷಣೆ ಮಾಡಿತ್ತು. ಆದ್ರೆ ಶುಭಂ ಗೋಲ್ಡ್ ಹಾಲಿನ ದರವನ್ನು ತಾನೇ ಘೋಷಿಸಿದಂತೆ 2 ರೂ. ಹೆಚ್ಚಳ ಮಾಡುವ ಬದಲು ಅರ್ಧ ಲೀಟರ್‌ಗೆ 3 ರೂ. ಹಾಗೂ 1 ಲೀಟರ್‌ಗೆ 4 ರೂ. ಹೆಚ್ಚಳ ಮಾಡಿದೆ. ಈಗ ಬಂದಿರುವ ಹೊಸ ಪ್ಯಾಕೆಟ್‌ನಲ್ಲಿ ದುಬಾರಿ ಬೆಲೆ ಮುದ್ರಿತವಾಗಿದೆ. ಈ ಮೊದಲು ಅರ್ಧ ಲೀಟರ್‌ಗೆ 26 ರೂ. ಇದ್ದ ಶುಭಂ ಗೋಲ್ಡ್ ಹಾಲು 28 ರೂ. ಬದಲು 29 ರೂ. ಆಗಿದೆ. 1 ಲೀಟರ್‌ಗೆ 49 ರೂ. ಇದ್ದ ಹಾಲು 51 ರೂ. ಬದಲು 53 ರೂಪಾಯಿ ಆಗಿದೆ.

ಹೀಗಾಗಿ, ಹಾಲಿನ ದರ ಏರಿಕೆ ವಿಚಾರದಲ್ಲಿ ಕೆಎಂಏಫ್‌ ಹಾಗೂ ಸರ್ಕಾರ ಸುಳ್ಳು ಹೇಳಿದೆ ಎಂದು ಬಳಕೆದಾರರು ಆಕ್ರೋಶಿಸಿದ್ದಾರೆ. ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

ಕೆಎಂಎಫ್‌ ದರ ಹೆಚ್ಚಳ ಹೀಗಿತ್ತು:

ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 44 ರೂ.

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 45 ರೂ.

ಹೋಮೋಜಿನೈಸ್ಡ್‌ ಹಸುವಿನ ಹಾಲು
550 ಎಂಎಲ್‌ – 26 ರೂ.
1050 ಎಂಎಲ್‌ – 48 ರೂ.

ಸ್ಪೆಷಲ್‌ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಸಮೃದ್ಧಿ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 53 ರೂ.

ಹೋಮೋಜಿನೈಸ್ಡ್‌ ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 51 ರೂ.

ಸಂತೃಪ್ತಿ ಹಾಲು
550 ಎಂಎಲ್‌ – 30 ರೂ.
1050 ಎಂಎಲ್‌ – 57 ರೂ.

ಶುಭಂ ಗೋಲ್ಡ್‌ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 51 ರೂ.

ಡಬಲ್‌ ಟೋನ್ಡ್‌ ಹಾಲು
550 ಎಂಎಲ್‌ – 23 ರೂ.
1050 ಎಂಎಲ್‌ – 43 ರೂ.

ಇದನ್ನೂ ಓದಿ: Nandini Milk Price Hike : ಕೈಗೆ ಸಿಗದ ನಂದಿನಿ ಹಾಲು; ಪರಿಷ್ಕೃತ ದರ ಎಷ್ಟು?

Continue Reading

ಪ್ರಮುಖ ಸುದ್ದಿ

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Hosur Airport: ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು.

VISTARANEWS.COM


on

hosur airport
Koo

ಬೆಂಗಳೂರು: ಹೊಸೂರಿನಲ್ಲಿ (Hosur) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಿಸುವುದಾಗಿ (Hosur Airport) ಘೋಷಿಸಿದ ತಮಿಳುನಾಡು ಸರ್ಕಾರ (Tamil Nadu Govt) ಇದೀಗ ಅದರ ಹೊಣೆಯನ್ನು ಬಿಐಎಎಲ್‌ಗೆ (BIAL) ವಹಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್‌ ಮಾಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Kempegowda Internationa Airport) ನಿರ್ವಹಿಸುತ್ತಿರುವ ಬಿಐಎಎಲ್‌ಗೆ ಜವಾಬ್ದಾರಿ ನೀಡಲು ಮಾತುಕತೆ ನಡೆದಿದೆ. ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು. ಬಿಐಎಎಲ್‌ ಜುಲೈ 5, 2004ರಂದು ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ದೃಷ್ಟಿಯಿಂದ 2033ರವರೆಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ತಲೆ ಎತ್ತುವಂತಿಲ್ಲ.

ಈ ತಡೆಯನ್ನು ಮೀರಲು ಸ್ಟಾಲಿನ್‌ ಸರ್ಕಾರ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಗ್ಗೆ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಟಿಡ್ಕೊದ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ಬಿಐಎಎಲ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಐಎಎಲ್‌ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಐಎಎಲ್‌ಗೆ ಹೊಸೂರು ವಿಮಾನ ನಿಲ್ದಾಣ ಟೆಂಡರ್ ಕೊಟ್ಟರೆ ಈ ಒಪ್ಪಂದ ಅನ್ವಯ ಆಗುವುದಿಲ್ಲ ಎನ್ನಲಾಗುತ್ತಿದೆ.

ಹೊಸೂರು ಕೈಗಾರಿಕಾ ವಲಯಕ್ಕೆ ಹೆಚ್ಚಿದ ಬೇಡಿಕೆ

ತಮಿಳುನಾಡು ಏರ್‌ಪೋರ್ಟ್ ಘೋಷಣೆ‌ ಬೆನ್ನಲ್ಲೇ ಹೊಸೂರು ಕೈಗಾರಿಕಾ ವಲಯಕ್ಕೆ ಬೇಡಿಕೆ ಹೆಚ್ಚಿದೆ. ಕಳೆದ ಐದು ವರ್ಷದಲ್ಲಿ ಹೊಸೂರು ಸುತ್ತ 200 ಹೊಸ ಕಂಪನಿಗಳು- ಕಾರ್ಖಾನೆಗಳು ಆರಂಭವಾಗಿವೆ. ಬೆಂಗಳೂರು ಸುತ್ತ ಅನುಷ್ಠಾನ ಆಗಬೇಕಿದ್ದ ಕಂಪನಿಗಳು ಹೊಸೂರಿಗೆ ಶಿಫ್ಟ್ ಆಗಿವೆ.

ಇದಕ್ಕೆ ಕಾರಣ, ತಮಿಳುನಾಡು ಸರ್ಕಾರ ಕೈಗಾರಿಕಾ ಕಂಪನಿಗಳಿಗೆ ಕಡಿಮೆ ಬೆಲೆಗೆ ಭೂಮಿ ನೀಡಿತ್ತು. ಮೆಟ್ರೋ ನಗರ ಬೆಂಗಳೂರಿಗೆ ಹತ್ತಿರದಲ್ಲೇ ಇರಿವುದರಿಂದ ಮೂಲಸೌಕರ್ಯಗಳಿಗೆ ಮೋಸವಿಲ್ಲ. ಇನ್ನು ಅತ್ತಿಬೆಲೆವರೆಗೂ ಮೆಟ್ರೋ ವಿಸ್ತೀರ್ಣದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅದೂ ಅನುಷ್ಠಾನಗೊಳ್ಳಲಿದೆ. ಹೊಸೂರು ಹೊಸ ಇಂಡಸ್ಟ್ರಿಗಳಿಗೆ ವರದಾನವಾಗುತ್ತಿದೆ. ಬೆಂಗಳೂರಿನ ಕಂಪನಿಗಳು ಹೊಸೂರಿಗೆ ಸ್ಥಳಾಂತರಕ್ಕೆ ಇದೂ ಕೂಡಾ ಕಾರಣ.

ಹೊಸೂರಿನಲ್ಲಿ ಕಾಸ್ಟ್ ಆಫ್ ಲಿವಿಂಗ್ ಕಡಿಮೆ, ಟ್ರಾನ್ಸ್ ಪೋರ್ಟ್ ಕನೆಕ್ಟಿವಿಟಿ ಹೆಚ್ಚು ಇದೆ. ಟ್ರಾಫಿಕ್ ಸಮಸ್ಯೆ ಕಡಿಮೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಾಗಿ ಲಭ್ಯವಿದೆ. ಹೀಗಾಗಿ ದೊಡ್ಡ ಕಂಪನಿಗಳು ಅತ್ತ ಶಿಫ್ಟ್‌ ಆಗಲು ಯೋಚಿಸುತ್ತಿವೆ. ನಗರದೊಳಗೆ ಹೆಚ್ಚುತ್ತಿರುವ ಟ್ರಾಫಿಕ್‌, ಜೀವನವೆಚ್ಚ ಜಾಗದ ಕೊರತೆಗಳು ಇದನ್ನು ಇನ್ನಷ್ಟು ಪ್ರಚೋದಿಸುತ್ತಿವೆ.

ಇದನ್ನೂ ಓದಿ: Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Continue Reading

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Team India Captain
ಕ್ರೀಡೆ9 mins ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ11 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ22 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ23 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ44 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ57 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ57 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್57 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ59 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್1 hour ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌