Jawan Teaser: ಲಿಯಾಮ್ ನೀಸನ್ ಅವರ 1990ರ ಚಿತ್ರ ಡಾರ್ಕ್‌ಮ್ಯಾನ್ ಕಾಪಿ ಮಾಡಿದ್ರಾ SRK? - Vistara News

ಬಾಲಿವುಡ್

Jawan Teaser: ಲಿಯಾಮ್ ನೀಸನ್ ಅವರ 1990ರ ಚಿತ್ರ ಡಾರ್ಕ್‌ಮ್ಯಾನ್ ಕಾಪಿ ಮಾಡಿದ್ರಾ SRK?

ಶಾರುಖ್‌ ಅಭಿನಯದ Jawan Teaser ಹೊರಬಿದ್ದಿದೆ. ಇದಕ್ಕೂ ಹಾಲಿವುಡ್‌ನ ಲಿಯಾಮ್‌ ನೀಸನ್‌ ಅಭಿನಯದ ಡಾರ್ಕ್‌ಮ್ಯಾನ್‌ಗೂ ಲುಕ್‌ನಲ್ಲಿ ಹೋಲಿಕೆ ಹುಡುಕಿದ್ದಾರೆ ಸಿನಿ ಪರಿಣತರು.

VISTARANEWS.COM


on

Jawan Teaser Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶಾರುಖ್‌ ಖಾನ್ ಫ್ಯಾನ್ಸ್‌ಗೆ ಇದೀಗ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. ಹಲವು ದಿನಗಳಿಂದ ಶಾರುಖ್ ಅವರ ಜವಾನ್ ಸಿನಿಮಾದ ಬಗ್ಗೆ ಹಲವು ಊಹಾಪೋಹಗಳಿದ್ದವು. ನಯನತಾರಾ ಅವರೊಂದಿಗೆ ಶಾರುಖ್ ನಟಿಸುತ್ತಿದ್ದಾರಾ? ದ್ವಿಪಾತ್ರದಲ್ಲಿ ಶಾರುಖ್ ಮಿಂಚಲಿದ್ದಾರಾ? ಇದೀಗ ಟೀಸರ್‌ ಬಿಡುಗಡೆ ಮೂಲಕ ಕುತೂಲಹದ ಕೋಟೆಗೆ ಮತ್ತೊಂದಷ್ಟು ಸೇರಿಸಿದ್ದಾರೆ ಶಾರುಖ್.

ಹೌದು‌, ಜವಾನ್‌ ಟೀಸರ್‌ ಔಟ್‌ ಆಗಿದೆ. ತಮ್ಮ ಹೊಸ ಮುಖದ ಮೂಲಕ ಫ್ಯಾನ್ಸ್ ಮುಂದೆ ಅಚ್ಚರಿ ನೀಡಿದ್ದಾರೆ. ಫುಲ್‌ ಖಡಕ್‌ ಲುಕ್‌ ರಿವೀಲ್‌ ಮಾಡಿದ್ದಾರೆ ಶಾರುಖ್.

ಇದನ್ನೂ ಓದಿ | Jawan: ಡಬಲ್‌ ರೋಲ್‌ನಲ್ಲಿ ಶಾರುಖ್‌, ನಾಯಕಿಯಾಗಿ ನಯನ ತಾರಾ?

SRK ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ

ಶಾರುಖ್ ಖಾನ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್ ಬಿಡುಗಡೆಯಾಗಿದ್ದು, ಕನ್ನಡ ಭಾಷೆಗೂ ಸ್ಥಾನ ನೀಡಲಾಗಿದೆ. ಇದರಿಂದ ಕನ್ನಡಿಗರು ಫಿದಾ ಆಗಿದ್ದಾರೆ. ಅಟ್ಲೀ ನಿರ್ದೇಶನದ, ಗೌರಿ ಖಾನ್ ನಿರ್ಮಿಸಿರುವ ಈ  ಚಿತ್ರದ ಟೀಸರ್ ಅನ್ನು ಶಾರುಖ್ ಖಾನ್ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ.

ಶಾರುಖ್‌ ಈ ಮುಂಚೆ ಪ್ಯಾನ್‌ ಇಂಡಿಯಾ ಸಿನಿಮಾಗೆ ಪ್ರಾಧಾನ್ಯತೆ ನೀಡಿರಲಿಲ್ಲ. ಕೆಜಿಎಫ್‌-2 ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಬ್ಲಾಕ್‌ಬಸ್ಟರ್‌ ಆದ ಕಾರಣ ಎಲ್ಲಾ ಚಿತ್ರರಂಗಗಳೂ ಎಚ್ಚೆತ್ತು ಕೊಂಡು ಆ ಕಡೆ ಗಮನ ಹರಿಸುತ್ತಿದ್ದಾರೆ.

ಕಾಪಿ ಮಾಡಿದ್ರಾ SRK?

ಇದರ ಮಧ್ಯೆ ಜವಾನ್‌ ಸಿನಿಮಾ ಟೀಸರ್ ರಿಲೀಸ್‌ ಆದ ಕೂಡಲೇ, ಶಾರುಖ್‌ ಅವರ ಲುಕ್‌ ಬಗ್ಗೆ ಸಕತ್‌ ಟ್ರೋಲ್‌ ಆಗುತ್ತಿದೆ. ಅದರಲ್ಲಿಯೂ ಲಿಯಾಮ್‌ ನೀಸನ್‌ ಅವರ 1990ರ ಸೂಪರ್‌ ಹೀರೋ ಚಿತ್ರ ಡಾರ್ಕ್‌ಮ್ಯಾನ್‌ ಲುಕ್‌ ಕಾಪಿ ಮಾಡಿದ್ದಾರಾ? ಎಂದು ಟ್ವೀಟ್‌ ಮೂಲಕ ಜನರು ಮಾತನಾಡುತ್ತಿದ್ದಾರೆ.

ಜವಾನ್‌ ಟೀಸರ್‌ ಹವಾ

ಜೂನ್‌ 3ರಂದು ಟೀಸರ್ ಬಿಡುಗಡೆ ಮಾಡಿದ್ದು, ಶಾರುಖ್‌ ಇದರಲ್ಲಿ ರಕ್ತ ಸಿಕ್ತವಾದ ದೇಹದೊಂದಿಗೆ, ಬ್ಯಾಂಡೇಜ್ ಮೂಲಕ ಮುಖವನ್ನು ಕವರ್ ಮಾಡಿ, ಭಯಂಕರವಾದ ಲುಕ್‌ನೊಂದಿಗೆ ರಿವೀಲ್‌ ಆಗಿದ್ದಾರೆ. ರೆಡ್‌ ಚಿಲ್ಲೀಸ್‌ ಎಂಟರ್‌ಟೇನ್‌ಮೆಂಟ್‌ ಅನೌನ್ಸ್ ಮಾಡಿದೆ.

ಇದನ್ನೂ ಓದಿ | ಕ್ರೂಸ್‌ನಲ್ಲಿ ಡ್ರಗ್ಸ್‌ ಕೇಸ್‌, ಶಾರುಖ್‌ ಪುತ್ರ ಆರ್ಯನ್‌ ಖಾನ್‌ಗೆ ಕ್ಲೀನ್‌ ಚಿಟ್‌

ಚಿತ್ರದ ಬಗ್ಗೆ ಮಾತನಾಡಿದ ಶಾರುಖ್‌ ಖಾನ್’ ʼʼಜವಾನ್‌ ಒಂದು ಯುನಿವರ್ಸಲ್ ಸ್ಟೋರಿಯಾಗಿದ್ದು, ಎಲ್ಲ ಭಾಗದ ಜನರಿಗೆ ಇಷ್ಟವಾಗುವಂತಹ ಸಿನಿಮಾ. ಸಿನಿಮಾ ಯುನಿಕ್‌ ಆಗಿದ್ದು, ಇಂತಹ ವಿಶೇಷ ಚಿತ್ರದ ಕ್ರೆಡಿಟ್‌ ನಿರ್ದೇಶಕ ಅಟ್ಲಿಗೆ ಸಲ್ಲುತ್ತದೆ. ಸಾಹಸಮಯವಾದ ಸಿನಿಮಾಗಳನ್ನು ಇಷ್ಟಪಡುವ ನನಗೆ ಇದು ಒಂದು ಅದ್ಭುತವಾದ ಸಿನಿಮಾʼʼ ಎಂದು ಹೇಳಿಕೊಂಡಿದ್ದಾರೆ.

ಈ ಕುರಿತಂತೆ ನಿರ್ದೇಶಕ ಅಟ್ಲಿ, ʼʼಜವಾನ್ ಸಿನಿಮಾ ಎಮೋಷನ್, ಡ್ರಾಮಾ, ಎಲ್ಲದರ ಸಮ್ಮಿಶ್ರಣವಾಗಿದೆ. ಪ್ರೇಕ್ಷಕರಿಗೆ ಅಸಾಧಾರಣ ಅನುಭವ ನೀಡಬೇಕೆಂಬುದು ಅಷ್ಟೇ ಮುಖ್ಯʼʼ ಎಂದಿದ್ದಾರೆ.

ಜವಾನ್‌ ಗೌರಿ ಖಾನ್ ನಿರ್ಮಾಣ ಮಾಡಿರುವುದು ಇನ್ನೂ ವಿಶೇಷ. ತಮ್ಮ ಟ್ವೀಟ್‌ ಮೂಲಕ ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಯೋಗಿ ಬಾಬು ಶಾರುಖ್ ಜೊತೆಗೆ ʼಚೆನ್ನೈ ಎಕ್ಸ್‌ಪ್ರೆಸ್‌ʼನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಹುನಿರೀಕ್ಷಿತ ಈ ಚಿತ್ರದಲ್ಲಿ ನಟರಾದ ಸನ್ಯಾ ಮಲ್ಹೋತ್ರಾ ಮತ್ತು ಸುನಿಲ್ ಗ್ರೋವರ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ 2 ಜೂನ್‌ 2023ರಲ್ಲಿ ರಿಲೀಸ್‌ ಆಗಲಿದೆ.

ಇದನ್ನೂ ಓದಿ | ಅಕ್ಷಯ್‌, ಅಜಯ್‌ ನಂತರ ಸರ್ಕಾರದತ್ತಲೇ ತಿರುಗಿದ ʼವಿಮಲ್‌ʼ ಬಾಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

Cannes 2024: 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ.

VISTARANEWS.COM


on

Cannes 2024 Indian influencer who stitched a 20 kg dress
Koo

ಬೆಂಗಳೂರು: ಫ್ಯಾಶನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ( Nancy Tyagi) ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ್ದಾರೆ. 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ.

“77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದು ಖುಷಿಯಾಯ್ತು. 30 ದಿನಗಳು, 1000 ಮೀಟರ್ ಬಟ್ಟೆ ಮತ್ತು 20 ಕೆಜಿಗಿಂತ ಹೆಚ್ಚು ತೂಕವಿರುವ ಈ ಗುಲಾಬಿ ಗೌನ್ ಅನ್ನು ರಚಿಸಲು ನಾನು ನನ್ನ ಹೃದಯ ಮತ್ತು ಆತ್ಮವನ್ನೇ ಅರ್ಪಿಸಿದ್ದೇನೆ. ನನ್ನ ಕನಸು ಈಗ ನನಸಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದ. ನಿಮ್ಮ ಬೆಂಬಲವು ನನಗೆ ಸ್ಫೂರ್ತಿ ನೀಡಿದೆʼʼಎಂದು ಹೇಳಿಕೊಂಡಿದ್ದಾರೆ ನ್ಯಾನ್ಸಿ ತ್ಯಾಗಿ.

ಇದನ್ನೂ ಓದಿ: Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

ನ್ಯಾನ್ಸಿ ತ್ಯಾಗಿ ಶೇರ್‌ ಮಾಡಿಕೊಂಡ ಬಳಿಕ ಕೇವಲ ಒಂದು ಗಂಟೆಯಲ್ಲಿ 1.8 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ನ್ಯಾನ್ಸಿ ಫ್ಯಾನ್ಸ್‌ ಈಗ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ,ಮಾತ್ರವಲ್ಲ ಕಮೆಂಟ್‌ ಮೂಲಕ ʻʻನ್ಯಾನ್ಸಿ, ಇದು ವೈಯಕ್ತಿಕ ಗೆಲುವಿನಂತೆ ಭಾಸವಾಗುತ್ತಿದೆ” ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಕಠಿಣ ಪರಿಶ್ರಮ ಮತ್ತು ಪ್ರತಿಭೆ ಇದೆ ನಿಮ್ಮಲ್ಲಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಮತ್ತೊಬ್ಬರು ʻʻನನಗೆ ನ್ಯಾನ್ಸಿ ತ್ಯಾಗಿ ಬಗ್ಗೆ ವೈಯಕ್ತಿಕವಾಗಿ ತಿಳಿದಿಲ್ಲ, ಆದರೆ ನಾನು ಅವರನ್ನು ರೆಡ್‌ ಕಾರ್ಪೆಟ್ ಮೇಲೆ ನೋಡಿ ಸಂತೋಷವಾಯ್ತು. ದೇವರು ನಿಮ್ಮನ್ನು ಆಶೀರ್ವದಿಸಲಿ. ನಾನು ನಿಮಗೆ ಇನ್ನೊಂದು ವಿಷಯವನ್ನು ಹೇಳುತ್ತೇನೆ. ನೀವು ಬಾಲಿವುಡ್ ಸೆಲೆಬ್ರಿಟಿಗಳಿಗಿಂತ ಉತ್ತಮವಾಗಿ ಕಾಣುತ್ತೀರಿʼʼಎಂದು ಕಮೆಂಟ್‌ ಮಾಡಿದ್ದಾರೆ.

ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

Continue Reading

ಬಾಲಿವುಡ್

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Aishwarya Rai : ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Aishwarya Rai stopping blue gown at Cannes 2024
Koo

ಬೆಂಗಳೂರು: ಐಶ್ವರ್ಯಾ ರೈ (Aishwarya Rai ) ಬಚ್ಚನ್ ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವವಾದ ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ (Cannes 2024) ಎರಡನೇ ಬಾರಿ ಮಿಂಚಿದ್ದಾರೆ. ಸ್ಕ್ರೀನಿಂಗ್‌ ಆಫ್‌ ಕೈಂಡ್ಸ್ ಆಫ್ ಕೈಂಡನೆಸ್‌ ಪ್ರದರ್ಶನಕ್ಕೆ ಹಾಜರಾಗುವ ಮೊದಲು ನಟಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ.

ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಬರ್ತ್‌ಡೇ ಪಾರ್ಟಿ ಇಂದ ಪ್ರಭಾವಿತರಾದರೇ? ನಿಮ್ಮ ಸ್ಟೈಲಿಶ್‌ರನ್ನು ಮೊದಲು ಕೆಲಸದಿಂದ ಕಿತ್ತು ಹಾಕಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Aishwarya Rai : ಐಶ್ವರ್ಯಾ ರೈಯಂತ ಕಣ್ಣು ಬೇಕೇ? ಮೀನು ತಿನ್ನಿ; ಮಹಾರಾಷ್ಟ್ರದ ಸಚಿವನ ವಿವಾದಾತ್ಮಕ ಹೇಳಿಕೆ

ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ.

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಇದನ್ನೂ ಓದಿ: Aishwarya Rai: ಅತ್ತೆ, ನಾದಿನಿ ಕ್ರಾಪ್‌ ಮಾಡಿ ಫೋಟೊ ಹಂಚಿಕೊಂಡ ಐಶ್ವರ್ಯಾ ರೈ; ಕುಟುಂಬದಲ್ಲಿ ಬಿರುಕು?

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಲಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ಬಾಲಿವುಡ್

Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

Cannes 2024: ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಬೆನ್ನಲ್ಲೇ ರೆಡ್ ಕಾರ್ಪೆಟ್ ಮೇಲೆ ನಟಿ ಕಿಯಾರಾ ಆಡ್ವಾಣಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ.

VISTARANEWS.COM


on

Kiara Advani Makes Cannes Debut In Thigh-High Slit Dress
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಬೆನ್ನಲ್ಲೇ ರೆಡ್ ಕಾರ್ಪೆಟ್ ಮೇಲೆ ನಟಿ ಕಿಯಾರಾ ಆಡ್ವಾಣಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ. ಕಿಯಾರಾ ಆಡ್ವಾಣಿ ಇದೀಗ ತಮ್ಮ ಲುಕ್‌ನ ವಿಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊವನ್ನು ಹಂಚಿಕೊಂಡ ಕಿಯಾರಾ, “ರಿವೇರಿಯಾದಲ್ಲಿ ರೆಂಡೆಜ್ವಸ್ (ನೀಲಿ ಹೃದಯದ ಎಮೋಜಿ)” ಎಂದು ಶೀರ್ಷಿಕೆ ನೀಡಿದ್ದಾರೆ. ಕಿಯಾರ ಉಡುಪನ್ನು ಲಕ್ಷ್ಮಿ ಲೆಹರ್ ಮತ್ತು ಪ್ರಬಲ್ ಗುರುಂಗ್ ಅವರು ವಿನ್ಯಾಸಗೊಳಿಸಿದ್ದಾರೆ. ಅಭಿಮಾನಿಯೊಬ್ಬರು ಕಿಯಾರ ಪೋಸ್ಟ್‌ಗೆ “ಅತ್ಯಂತ ಸುಂದರ ಮಹಿಳೆ” ಎಂದು ಕಮೆಂಟ್‌ ಮಾಡಿದ್ದಾರೆ. ಕಿಯಾರ ಮಿಲ್ಕಿ ವೈಟ್​ ಬಣ್ಣದ ಗೌನ್ ಬಟ್ಟೆ ಧರಿಸಿದ್ದರು. ಗೌನ್‌ ಕಟ್‌ ರೀತಿ ಉಡುಪನ್ನು ಧರಿಸಿದ್ದರು. ಮ್ಯಾಚಿಂಕ್‌ ಕಿವಿಯೋಲೆಯೊಂದಿಗೆ ಅತ್ಯಂತ ಸುಂದರವಾಗಿ ಕಂಡರು ಕಿಯಾರ. ಕಾರ್‌ನಲ್ಲಿ ಅಪ್ಸರಂತೆ ಇಳಿದು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ಅವರೂ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಲಿಪಾಲಾ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. 

ಇದನ್ನೂ ಓದಿ: Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ!

ಎಸ್ ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ನಟ ಯಶ್ (Yash) ನಾಯಕನಟನಾಗಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದಲ್ಲಿ ಕಿಯಾರಾ (kiara) ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕರೀನಾ ಕಪೂರ್ (kareena kapoor) ಟಾಕ್ಸಿಕ್ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಸುದ್ದಿಯ ಬಳಿಕ ಇದೀಗ ಕಿಯಾರಾ ಅಡ್ವಾಣಿಯೂ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ಚಿತ್ರದಲ್ಲಿ ಕಿಯಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮೂವರು ಪ್ರಮುಖರು ನಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರೀನಾ ಕಪೂರ್ ಖಾನ್ ಮತ್ತು ಕಿಯಾರಾ ಅಡ್ವಾಣಿ ಈಗಾಗಲೇ ಚಿತ್ರತಂಡಕ್ಕೆ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಯಶ್ ಅವರ ಸಹೋದರಿಯಾಗಿ ಕರೀನಾ ನಟಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಆದರೆ ನಿರ್ಮಾಪಕರಿಂದ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

Continue Reading

ಬಾಲಿವುಡ್

Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

Singer Suchitra: ಸಂದರ್ಶನದಲ್ಲಿ, ಸುಚಿತ್ರಾ ತನ್ನ ಮಾಜಿ ಪತಿ ಕಾರ್ತಿಕ್ ಕುಮಾರ್ ‘ಸಲಿಂಗಕಾಮಿ’ ಎಂದು ಹೇಳಿಕೊಂಡಿದ್ದಾರೆ. ಲಂಡನ್ ಪ್ರವಾಸದ ವೇಳೆ ಮಾಜಿ ಪತಿ ಕಾರ್ತಿಕ್ ಕುಮಾರ್, ಶಾರುಖ್ ಮತ್ತು ಕರಣ್ ಒಟ್ಟಿಗೇ ಪಾರ್ಟಿಗಳಿಗೆ ತೆರಳಿದ್ದರು ಎಂದು ಸುಚಿತ್ರಾ ಹೇಳಿದ್ದಾರೆ. ಸಲಿಂಗಕಾಮಿಗಳಿಗೆ ಕಾನೂನುಬದ್ಧವಾಗಿ ಅವಕಾಶವಿರುವ ದೇಶಗಳಿಗೆ ಅವರು ಹೋಗುತ್ತಾರೆ ಎಂದಿದ್ದಾರೆ.

VISTARANEWS.COM


on

Singer Suchitra makes shocking aligeations against shahrukh khan
Koo

ಬೆಂಗಳೂರು: ಗಾಯಕಿ ಸುಚಿತ್ರಾ ರಾಮದುರೈ (Singer Suchitra) ಅವರು ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಮತ್ತು ಸೂಪರ್ ಸ್ಟಾರ್ ಶಾರುಖ್ ಖಾನ್ ಬಗ್ಗೆ ಕೆಲವು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಮಾಜಿ ಪತಿ ನಟ ಕಾರ್ತಿಕ್ ಕುಮಾರ್, ನಟರಾದ ಧನುಷ್, ವಿಜಯ್, ಕಮಲ್ ಹಾಸನ್, ನಟಿ ತ್ರಿಶಾ ಸೇರಿದಂತೆ ಹಲವರ ಬಗ್ಗೆ ನಾನಾ ರೀತಿಯಲ್ಲಿ ಆರೋಪ ಮಾಡಿದ್ದಾರೆ. ಕಾರ್ತಿಕ್, ಧನುಷ್ ಇಬ್ಬರೂ ಸಲಿಂಗಕಾಮಿಗಳು ಎಂದಿದ್ದಾರೆ.

ಸಂದರ್ಶನದಲ್ಲಿ, ಸುಚಿತ್ರಾ ತನ್ನ ಮಾಜಿ ಪತಿ ಕಾರ್ತಿಕ್ ಕುಮಾರ್ ‘ಸಲಿಂಗಕಾಮಿ’ ಎಂದು ಹೇಳಿಕೊಂಡಿದ್ದಾರೆ. ಲಂಡನ್ ಪ್ರವಾಸದ ವೇಳೆ ಮಾಜಿ ಪತಿ ಕಾರ್ತಿಕ್ ಕುಮಾರ್, ಶಾರುಖ್ ಮತ್ತು ಕರಣ್ ಒಟ್ಟಿಗೇ ಪಾರ್ಟಿಗಳಿಗೆ ತೆರಳಿದ್ದರು ಎಂದು ಸುಚಿತ್ರಾ ಹೇಳಿದ್ದಾರೆ. ಸಲಿಂಗಕಾಮಿಗಳಿಗೆ ಕಾನೂನುಬದ್ಧವಾಗಿ ಅವಕಾಶವಿರುವ ದೇಶಗಳಿಗೆ ಅವರು ಹೋಗುತ್ತಾರೆ ಎಂದಿದ್ದಾರೆ. ಈ ಬಗ್ಗೆ ಕಾರ್ತಿಕ್ ಖುದ್ದು ನನಗೆ ಈ ವಿಷಯ ಹೇಳಿದ್ದರು. ಕರಣ್- ಶಾರುಖ್ ಸಲಿಂಗಕಾಮಿಗಳಿಗೆ ಸ್ವತಂತ್ರವಾಗಿರುವ ಅವಕಾಶವಿರುವ ಜಾಗಗಳಿಗೆ ಹೋಗುತ್ತಾರೆ. ಅಲ್ಲಿ ನಡೆಯುವ ಪಾರ್ಟಿಗಳಿಗೆ ಗೇಗಳ ರೀತಿ ವೇಷ ಬದಲಿಸಿಕೊಂಡು ಅವರೊಟ್ಟಿಗೆ ಸೇರಿ ಪಾರ್ಟಿಯಲ್ಲಿ ಸೇರಿಕೊಳ್ಳುತ್ತಾರೆ. ಕಾರ್ತಿಕ್ ಕೂಡ ಅಲ್ಲಿ ಹೋದಾಗ ಅವರಿಬ್ಬರನ್ನು ಭೇಟಿ ಮಾಡಿದ್ದಾಗಿ ಹೇಳಿದ್ದರುʼʼಎಂದರು.

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸುಚಿತ್ರಾ ತಮಿಳು ಚಿತ್ರರಂಗದಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಎಕ್ಸ್‌ಕ್ಯೂಸ್ ಮಿ, ಎನ್ ಇಧಯಂ ಸೇರಿದತೆ ಅನೇಕ ಹಿಟ್‌ ಹಾಡುಗಳನ್ನು ಹಾಡಿದ್ದಾರೆ. ಸುಚಿತ್ರಾ ಈ ಹಿಂದೆ ಕಮಲ್‌ ಹಾಸನ್‌ ಬಗ್ಗೆಯೂ ಹೇಳಿಕೆ ನೀಡಿದ್ದರು. ʻʻಕಮಲ್‌ ಅವರು ಹೆಚ್ಚಾಗಿ ಕುರ್ತಾ ರೀತಿಯ ಬಟ್ಟೆಗಳನ್ನು ಧರಿಸುತ್ತಾರೆ. ‘ವಿಶ್ವರೂಪಂ’ ಚಿತ್ರದಲ್ಲಿ ಕ್ಲಾಸಿಕಲ್ ಡ್ಯಾನ್ಸ್ ಕಲಿಸುವಾಗ ಕಮಲ್ ಎಕ್ಸ್‌ಪ್ರೇಶನ್ ಬಹುತೇಕ ಟ್ರಾನ್ಸ್‌ಜೆಂಡರ್ ರೀತಿ ಇರುತ್ತದೆʼʼಎಂದಿದ್ದರು.

ಇದೆಲ್ಲದರ ಜತೆಗೆ ಧನುಷ್‌ ಮತ್ತು ಐಶ್ವರ್ಯಾ ಅವರ ಡಿವೋರ್ಸ್‌ ವಿಚಾರವಾಗಿಯೂ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ದಾಂಪತ್ಯ ಜೀವನ ಸಾಕಾಗಿದೆ. ಇಬ್ಬರೂ ಬೇರೆಯವರ ಜತೆ ಡೇಟಿಂಗ್‌ ನಡೆಸುತ್ತಿದ್ದಾರೆ. ಐಶ್ವರ್ಯಾ ಮಕ್ಕಳಿಗೆ ಒಳ್ಳೆಯ ತಾಯಿಯಾಗಲಿಲ್ಲ. ಒಬ್ಬರಿಗೊಬ್ಬರು ಮೋಸ ಮಾಡುತ್ತಾ ಇರುವ ಬದಲು ದೂರಾಗೋಣ ಎಂದು ನಿರ್ಧರಿಸಿದ್ದಾರೆʼʼಎಂದಿದ್ದಾರೆ. ಸುಚಿತ್ರಾ ಅವರು ಸ್ಟ್ಯಾಂಡಪ್ ಕಮಿಡಿಯನ್, ನಟ ಕಾರ್ತಿಕ್ ಕುಮಾರ್ ಅವರನ್ನು ಹಿಂದೆ ಮದುವೆ ಆಗಿದ್ದರು. ಈಗ ಜೋಡಿ ದೂರವಾಗಿದೆ.

Continue Reading
Advertisement
SSLC 2024 Exam 2
ಪ್ರಮುಖ ಸುದ್ದಿ7 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ15 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Voter Turnout
ದೇಶ30 mins ago

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ33 mins ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ35 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ39 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

cylinder explosion in Kunigal 6 people seriously injured, Kunigal MLA Dr Ranganath visit victoria Hospital in bengaluru
ತುಮಕೂರು41 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

RCB vs CSK
ಕ್ರೀಡೆ52 mins ago

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Virat Kohli
ಕ್ರೀಡೆ1 hour ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ23 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌