Katrina Kaif | ಕತ್ರಿನಾ ಕೈಫ್-ವಿಜಯ್ ಸೇತುಪತಿ ಕಾಂಬಿನೇಶನ್‌ ʻಮೆರ‍್ರಿ ಕ್ರಿಸ್‌ಮಸ್‌ʼ ಮುಂದಿನ ವರ್ಷ ತೆರೆಗೆ? ಟ್ವಿಸ್ಟ್‌ ಇರಲಿದೆ ಎಂದ ನಟಿ! - Vistara News

ಕಾಲಿವುಡ್

Katrina Kaif | ಕತ್ರಿನಾ ಕೈಫ್-ವಿಜಯ್ ಸೇತುಪತಿ ಕಾಂಬಿನೇಶನ್‌ ʻಮೆರ‍್ರಿ ಕ್ರಿಸ್‌ಮಸ್‌ʼ ಮುಂದಿನ ವರ್ಷ ತೆರೆಗೆ? ಟ್ವಿಸ್ಟ್‌ ಇರಲಿದೆ ಎಂದ ನಟಿ!

ಕತ್ರಿನಾ ಕೈಫ್ (Katrina Kaif) ಮತ್ತು ಕಾಲಿವುಡ್‌ ನಟ ವಿಜಯ್ ಸೇತುಪತಿ ಅಭಿನಯದ ʻಮೆರ‍್ರಿ ಕ್ರಿಸ್‌ಮಸ್ʼ ಇದೀಗ ಹೊಸ ಟ್ವಿಸ್ಟ್‌ ಒಂದನ್ನು ನೀಡಿದೆ. 2023 ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Katrina Kaif
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್‌ ನಟಿ ಕತ್ರಿನಾ ಕೈಫ್ (Katrina Kaif) ಮತ್ತು ಕಾಲಿವುಡ್‌ ನಟ ವಿಜಯ್ ಸೇತುಪತಿ ಅಭಿನಯದ ʻಮೆರ‍್ರಿ ಕ್ರಿಸ್‌ಮಸ್ʼ ಇದೀಗ ಹೊಸ ಟ್ವಿಸ್ಟ್‌ ಒಂದನ್ನು ನೀಡಿದೆ. ಸಿನಿಮಾ ಘೋಷಣೆಯಾದ ಕ್ಷಣದಿಂದಲೇ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಮೆರ‍್ರಿ ಕ್ರಿಸ್‌ಮಸ್ ಈ ವರ್ಷದ ಕ್ರಿಸ್‌ಮಸ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಚಿತ್ರತಂಡ ಹೇಳಿಕೊಂಡಿತ್ತು. ಇದೀಗ ನಟಿ ಚಿತ್ರದ ಫಸ್ಟ್‌ ಲುಕ್‌ ಹಂಚಿಕೊಂಡಿದ್ದು, 2023 ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ. ಜತೆಗೆ ಒಂದು ಟ್ವಿಸ್ಟ್‌ ಇದೆ ಎಂತಲೂ ಹೇಳಿಕೊಂಡಿದ್ದಾರೆ. ಸಿನಿಮಾ ತಮಿಳು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

ಕತ್ರಿನಾ ಕೈಫ್‌ ʻಮೆರ‍್ರಿ ಕ್ರಿಸ್‌ಮಸ್ʼ ಸಿನಿಮಾದ ಫಸ್ಟ್‌ ಲುಕ್‌ ಅನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಶ್ರೀರಾಮ್ ರಾಘವನ್ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದು, ರಮೇಶ್ ತೌರಾನಿ ಮತ್ತು ಸಂಜಯ್ ರೌತ್ರೇ ನಿರ್ಮಿಸಿದ್ದಾರೆ. ಕತ್ರಿನಾ ಕೈಫ್‌ ಪೋಸ್ಟ್‌ ಶೇರ್‌ ಮಾಡಿಕೊಂಡು ʻʻಈ ವರ್ಷ ಕ್ರಿಸ್‌ಮಸ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಬಯಸಿದ್ದೇವೆ. ಆದರೆ ಒಂದು ಟ್ವಿಸ್ಟ್ ಇದೆ. ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇವೆ. ಕ್ರಿಸ್ಮಸ್ ಶುಭಾಶಯಗಳು,” ಎಂದು ಅವರು ಬರೆದುಕೊಂಡಿದ್ದಾರೆ. ಇಷ್ಟಾದರೂ ಚಿತ್ರತಂಡ ಬಿಡುಗಡೆ ದಿನಾಂಕವನ್ನು ನಿಖರವಾಗಿ ಎಲ್ಲಿಯೂ ತಿಳಿಸಿಲ್ಲ. ಇದೀಗ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ.

ಇದನ್ನೂ ಓದಿ | Katrina Kaif | ವಿಕ್ಕಿ ಕೌಶಲ್ ಡೈರೆಕ್ಟರ್‌ ಆಗಿದ್ದಾರಂತೆ: ವೈರಲ್‌ ಆಯ್ತು ಕತ್ರಿನಾ ಕೈಫ್‌ ದಂಪತಿ ವಿಡಿಯೊ!

ಕತ್ರಿನಾ ಕೈಫ್ ಮತ್ತು ವಿಜಯ್ ಸೇತುಪತಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಮೊದಲ ಸಿನಿಮಾ ಇದಾಗಿದೆ. ಕಳೆದ ವರ್ಷ ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾದ ಕೆಲವೇ ದಿನಗಳಲ್ಲಿ ಕತ್ರಿನಾ ಕೈಫ್ ಚಿತ್ರವನ್ನು ಘೋಷಿಸಿದರು. ಈ ಮೊದಲು ಚಿತ್ರದ ಬಗ್ಗೆ ಪೋಸ್ಟ್‌ ಹಂಚಿಕೊಂಡು ʻʻನನಗೆ ಮೊದಲಿನಿಂದಲೂ ಶ್ರೀರಾಮ್ ಸರ್ ಜತೆ ಕೆಲಸ ಮಾಡುವ ಆಸೆ ಇತ್ತು. ಥ್ರಿಲ್ಲರ್‌ಗಳನ್ನು ಪ್ರದರ್ಶಿಸುವ ನಿರೂಪಣೆಯ ವಿಷಯಕ್ಕೆ ಬಂದಾಗ ಅವರು ಮಾಸ್ಟರ್ ಆಗಿದ್ದಾರೆʼʼಎಂದು ಬರೆದುಕೊಂಡಿದ್ದರು. ಶೂಟಿಂಗ್ ಸಮಯದಲ್ಲಿ, ಕತ್ರಿನಾ ಕೈಫ್ ಮೆರ‍್ರಿ ಕ್ರಿಸ್‌ಮಸ್‌ನ ಸೆಟ್‌ಗಳಿಂದ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಸದ್ಯ ಕತ್ರಿನಾ ಕೈಫ್ ಸಲ್ಮಾನ್ ಖಾನ್ ಜತೆ ʻಟೈಗರ್ 3ʼ ಮತ್ತು ಪ್ರಿಯಾಂಕಾ ಚೋಪ್ರಾ ಮತ್ತು ಆಲಿಯಾ ಭಟ್ ಅವರೊಂದಿಗೆ ಫರ್ಹಾನ್ ಅಖ್ತರ್ ನಿರ್ದೇಶನದ ʻಜೆ ಲೀ ಜರಾʼಚಿತ್ರದ ಚಿತ್ರೀಕರಣದಲ್ಲಿಯೂ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ | ಕತ್ರಿನಾ, ವಿಕ್ಕಿ ಕೌಶಲ್‌ಗೆ ಬೆದರಿಕೆ ಹಾಕುತ್ತಿದ್ದವ ಅರೆಸ್ಟ್‌, ಅವನಿಗೆ ಕತ್ರಿನಾಳನ್ನೇ ಮದ್ವೆ ಆಗೋ ಆಸೆಯಂತೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಾಲಿವುಡ್

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Aishwarya Rajinikanth: ರಜನಿಕಾಂತ್ ಮಗಳು ಐಶ್ವರ್ಯಾ ಅವರ ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು.

VISTARANEWS.COM


on

Aishwarya Rajinikanth new house priceless reaction Rajinikanth
Koo

ಬೆಂಗಳೂರು: ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಹೊಸ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ರಜನಿ ಮತ್ತು ಪತ್ನಿ ಲತಾ ಮಗಳ ಹೊಸ ಮನೆಗೆ ಭೇಟಿ ನೀಡಿದ್ದರು. ಮಾತ್ರವಲ್ಲ ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು. ಮನೆಯ ಒಳಗೆ ಬರಬರುತ್ತಲೇ ಅಲಂಕಾರಗಳನ್ನು ಕಂಡು ಹುಬ್ಬೇರಿಸಿದ್ದಾರೆ. ಇದೀಗ ಈ ವಿಡಿಯೊಗಳು ವೈರಲ್‌ ಆಗಿವೆ.

ರಜನಿಕಾಂತ್ ಮಗಳು ಐಶ್ವರ್ಯಾ ಅವರು ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಇಡೀ ಮನೆ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು. ಬಳಿಕ ಲತಾ ಅವರು ದೇವರ ಮನೆಯಲ್ಲಿ ದೀಪ ಹಚ್ಚಿ ಮಗಳಿಗೆ ವಿಶ್‌ ಮಾಡಿದ್ದಾರೆ.

 ನಟ ಧನುಷ್ (Actor Dhanush) ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Aishwaryaa Rajinikanth: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಕದ್ದ ಕಳ್ಳರು ಕೊನೆಗು ಸಿಕ್ಕಿಬಿದ್ದರು; ಯಾರವರು?

ಪರಸ್ಪರ ಒಪ್ಪಿಗೆ ಮೇರೆಗೆ ಜೋಡಿ ವಿಚ್ಛೇದನ ಸಲ್ಲಿಸಿತ್ತು. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಜನವರಿ 2022ರಲ್ಲಿ ಬೇರೆಯಾಗುತ್ತಿದ್ದೇವೆ ಎಂದು ದಂಪತಿ ಘೋಷಿಸಿದ್ದರು. “18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳಾಗಿ , ಪೋಷಕರಾಗಿ ಹಿತೈಷಿಗಳಾಗಿ ಒಟ್ಟಿಗೆ ಇದ್ದೆವು. ಈ ಪಯಣ ನಮ್ಮಿಬ್ಬರ ಪ್ರಗತಿ, ತಿಳಿವಳಿಕೆ, ಹೊಂದಾಣಿಕೆ ಮತ್ತು ಪರಸ್ಪರ ಸ್ವೀಕಾರದ ಹಾದಿಯಾಗಿತ್ತು. ಇಂದು ನಾವು ನಮ್ಮ ಪ್ರತ್ಯೇಕ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ. ಓಂ ನಮಶಿವಾಯ” ಎಂದು ಒಂದೂವರೆ ವರ್ಷದ ಹಿಂದೆ ಧನುಷ್ ಟ್ವೀಟ್ ಮಾಡಿದ್ದರು. ಹಿರಿಯ ನಟ ರಜನಿಕಾಂತ್ ಅವರ ಪುತ್ರಿ ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು.
ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ಸದ್ಯದಲ್ಲೇ ಇವರ ವಿಚ್ಛೇದನ ಅಂತಿಮಗೊಳ್ಳಲಿದೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು

Continue Reading

ಕಾಲಿವುಡ್

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Actor Dhanush: ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

VISTARANEWS.COM


on

ACTOR DHANUSH Nagarjuna mysterious first look from Kubera
Koo

ಬೆಂಗಳೂರು: ಸೂಪರ್ ಸ್ಟಾರ್ ಧನುಷ್ (Actor Dhanush) ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾ (Kubera Movie) ನಾಗಾರ್ಜುನ ಅವರ ಫಸ್ಟ್ ಲುಕ್ ಪ್ರೋಮೊ ಔಟ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ.

ಫಸ್ಟ್‌ ಲುಕ್‌ನಲ್ಲಿ ನಾಗಾರ್ಜುನ ಅವರು ನೀಲಿ ಶರ್ಟ್, ಕಪ್ಪು ಪ್ಯಾಂಟ್ ಮತ್ತು ಭಾರೀ ಮಳೆಯಲ್ಲಿ ಛತ್ರಿ ಹಿಡಿದು ರಡಗ್‌ ಲುಕ್‌ನಲ್ಲಿ ಕಂಡಿದ್ದಾರೆ. ಹಣಗಳು ತುಂಬಿದ ಟ್ರಕ್‌ಗಳ ಮಧ್ಯೆ ಅವರು ಕಾಣಿಸಿಕೊಂಡಿದ್ದಾರೆ. ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.

ಇದನ್ನೂ ಓದಿ: Actor Dhanush: ಧನುಷ್ – ಐಶ್ವರ್ಯಾ ರಜನಿಕಾಂತ್‌ಗೆ ಕೋರ್ಟ್ ನೋಟಿಸ್

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ಸಿನಿಮಾ ಇದು.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading

ಕಾಲಿವುಡ್

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Ilaiyaraaja Issues Legal Notice: ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಇಳಯರಾಜಾ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

VISTARANEWS.COM


on

Ilaiyaraaja Issues Legal Notice to Rajinikanth Coolie
Koo

ಬೆಂಗಳೂರು: ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ ‘ಕೂಲಿ’ (Coolie Movie) ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ (Ilaiyaraaja Issues Legal Notice) ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

ವರದಿಯ ಪ್ರಕಾರ, ʻಕೂಲಿʼ ಸಿನಿಮಾ ತಂಡ 1983ರ ʻತಂಗ ಮಗನ್ʼ ಚಿತ್ರದ ʻವಾ ವಾ ಪಕ್ಕಂ ವಾʼ (‘Wa Wa Pabha Wa’)ಹಾಡನ್ನು ಅನುಮತಿ ಪಡೆಯದೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಇಳಯರಾಜ. ಈ ಸಿನಿಮಾ ಟೈಟಲ್ ಟೀಸರ್‌ ಇತ್ತೀಚೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಇಳಯರಾಜ ಟ್ಯೂನ್ ಹಾಕಿದ ಹಾಡನ್ನು ನೆಟ್ಟಿಗರೇ ಗುರುತಿಸಿದ್ದರು.

ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಿದ್ದರು. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ‘ಕೂಲಿ’ ಟೀಸರ್ ನಿಂದ ಮ್ಯೂಸಿಕ್‌ ತೆಗೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಸಂಸ್ಥೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಘಟನೆ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.

ʻತಲೈವರ್ 171ʼ ಸಿನಿಮಾ ಇದೀಗ ಕೂಲಿ ಎಂದು ಟೈಟಲ್‌ ಇಡಲಾಗಿದೆ. ಲೋಕೇಶ್ ಜತೆ ರಜನಿಕಾಂತ್ ಅಭಿನಯದ ಮೊದಲ ಚಿತ್ರ ಇದಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು. ಚಿತ್ರದಲ್ಲಿ ಶಿವಕಾರ್ತಿಕೇಯನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಉಳಿದ ಪಾತ್ರವರ್ಗ ಇನ್ನೂ ಘೋಷಿಸಿಲ್ಲ. ಟೈಟಲ್ ಅನೌನ್ಸ್ ಆದ ದಿನವೇ ಚಿತ್ರದ ಫುಲ್ ಟೀಮ್ ರಿವೀಲ್ ಆಗುವ ನಿರೀಕ್ಷೆ ಇದೆ. ಅನಿರುದ್ಧ್ ರವಿಚಂದರ್ ಸಂಗೀತ ಇದ್ದರೆ, ಜೋಡಿ ಅನ್ಬರಿವ್ ಸಾಹಸ ನಿರ್ದೇಶನ ಇದೆ.
ಇನ್ನು ಲೋಕೇಶ್‌ ಕನಕರಾಜ್‌ ಅವರು ಇತ್ತೀಚೆಗೆ ಶ್ರುತಿ ಹಾಸನ್ ಅವರ ʻಇನಿಮೆಲ್ʼ ಹಾಡಿನ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ರಜನಿಕಾಂತ್ ಜತೆಗಿನ ಚಿತ್ರದ ಹೊರತಾಗಿ, ಲೋಕೇಶ್ ಅವರು ಕಾರ್ತಿ ಜತೆಗಿನ ʻಕೈದಿ 2ʼ ಸಿನಿಮಾ ಸಹ ಹೊಂದಿದ್ದಾರೆ.

Continue Reading
Advertisement
HD Revanna
ಕರ್ನಾಟಕ3 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ3 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ3 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ4 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ4 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ4 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ4 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ5 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ5 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ5 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ22 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌