ಡಾ.ಬಿ.ಆರ್. ಅಂಬೇಡ್ಕರ್‌ ಜನ್ಮದಿನ: ಮಹಾನಾಯಕನ 17 ನುಡಿಮುತ್ತುಗಳು - Vistara News

ಕಲೆ/ಸಾಹಿತ್ಯ

ಡಾ.ಬಿ.ಆರ್. ಅಂಬೇಡ್ಕರ್‌ ಜನ್ಮದಿನ: ಮಹಾನಾಯಕನ 17 ನುಡಿಮುತ್ತುಗಳು

ಸಂವಿಧಾನ ನಿರ್ಮಾತೃ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಜಯಂತಿ ಇಂದು (ಏ.14). ಸ್ವತಂತ್ರ ಆಧುನಿಕ ಭಾರತದ ಶಿಲ್ಪಿಗಳಲ್ಲಿ ಒಬ್ಬರಾದ ಅವರ ಮನನೀಯ ಮಾತುಗಳು ಇಲ್ಲಿವೆ.

VISTARANEWS.COM


on

Dr.B.R.Ambedkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಧರ್ಮ ಇರಬೇಕಾದುದು ತತ್ವವಾಗಿ, ಹೊರತು ನಿಯಮಾವಳಿಯಾಗಿ ಅಲ್ಲ. ಅದು ಕಡ್ಡಾಯ ನಿಯಮಗಳಾಗಿ ಮಾರ್ಪಾಡಾದ ಕೂಡಲೇ ಧರ್ಮ ಎನಿಸುವ ಅರ್ಹತೆ ಕಳೆದುಕೊಳ್ಳುತ್ತದೆ. ನೈಜ ಧರ್ಮದ ಆಂತರಂಗಿಕ ಸ್ಫೂರ್ತಿಯನ್ನೇ ಕಳೆದುಕೊಳ್ಳುತ್ತದೆ.


2. ಸಾಗರದಲ್ಲಿ ಒಂದಾಗಿ ಅಸ್ತಿತ್ವ ಕಳೆದುಕೊಳ್ಳುವ ಹನಿಯಂತಲ್ಲ ಮನುಷ್ಯ. ಆತ ಸಮಾಜದಲ್ಲಿ ಬೆರೆತಿದ್ದರೂ ತನ್ನ ಅನನ್ಯತೆ ಕಾಪಾಡಿಕೊಳ್ಳುತ್ತಾನೆ. ಆತ ಸಮಾಜದ ಬೆಳವಣಿಗೆಗಾಗಿ ಹುಟ್ಟುವುದಲ್ಲ, ತನ್ನ ಬೆಳವಣಿಗೆಗಾಗಿ.


3. ಪ್ರಜಾಪ್ರಭುತ್ವ ಎಂದರೆ ಕೇವಲ ಆಡಳಿತದ ವಿಧಾನವಲ್ಲ. ಅದೊಂದು ಜತೆಯಾಗಿ ಬಾಳುವ ವಿಧಾನ, ಸಮಗ್ರ ಬದುಕಿನ ಅನುಭವ. ಜೊತೆಯಲ್ಲಿರುವ ಮನುಷ್ಯರಿಗೆ ಘನತೆ, ಗೌರವ ನೀಡುವ ಕ್ರಮ.


4. ನಾನು ಒಂದು ಸಮುದಾಯದ ಬೆಳವಣಿಗೆಯನ್ನು ಅಳೆಯುವುದು ಅಲ್ಲಿರುವ ಮಹಿಳೆಯರು ಎಷ್ಟು ಪ್ರಮಾಣದ ಪ್ರಗತಿ ಸಾಧಿಸಿದ್ದಾರೆ ಎಂಬುದರ ಮೇಲೆ.


5. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲೇಬೇಕು. ಅದರಿಂದಲೇ ನಮಗೆ ಅಧಿಕಾರ, ಘನತೆ ದೊರೆಯುತ್ತದೆ. ಹೋರಾಡದವನಿಗೆ ಏನೂ ದೊರೆಯುವುದಿಲ್ಲ.


6. ಮನುಷ್ಯರು ಸಾವಿಗೆ ಈಡಾಗುವವರು. ಚಿಂತನೆಗಳೂ ಹಾಗೆಯೇ. ಸಸಿಗಳಿಗೆ ನೀರು ಎರೆಯುವಂತೆ ಚಿಂತನೆಗಳಿಗೂ ಬೆಳೆಯಲು ಪೋಷಣೆ ಬೇಕು.


7. ಸಂಪೂರ್ಣ ಸಮಾನತೆ ಎಂಬುದು ಕಲ್ಪನೆಯೇ ಇರಬಹುದು. ಆದರೆ ಅದನ್ನು ಆಡಳಿತ ತತ್ವವಾಗಿ ನಾವು ಅಂಗೀಕರಿಸಲೇಬೇಕು.


8. ಎಲ್ಲರೂ ಮೊತ್ತಮೊದಲಿಗೆ ಭಾರತೀಯರಾಗಿರಬೇಕು, ಕೊನೆಗೂ ಭಾರತೀಯರಾಗಿರಬೇಕು, ಭಾರತೀಯರಲ್ಲದೆ ಇನ್ನೇನೂ ಆಗಿರಬೇಕಿಲ್ಲ.


9. ವಿಜ್ಞಾನದ ಕ್ಷೇತ್ರದಲ್ಲಿ ಭಾವನೆಗಳನ್ನು ದೂರವಿಡಬೇಕು. ಅಲ್ಲಿ ವಸ್ತುನಿಷ್ಠ ನೆಲೆಯಿಂದ ಸಂಗತಿಗಳನ್ನು ಪರಾಮರ್ಶಿಸಬೇಕು.


10. ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆಯದೇ ಹೋದರೆ, ನಾವು ಕಾನೂನಾತ್ಮಕವಾಗಿ ಎಂಥ ಸ್ವಾತಂತ್ರ್ಯವನ್ನು ಪಡೆದರೂ ಉಪಯೋಗವಿಲ್ಲ.


11. ಸಂವಿಧಾನದ ದುರುಪಯೋಗ ಆಗುವಂತಿದೆ ಎನಿಸಿದರೆ, ಅದನ್ನು ಸುಟ್ಟುಹಾಕುವಲ್ಲಿ ನಾನೇ ಮೊದಲಿಗನಾಗಿರುತ್ತೇನೆ.


12. ಇತಿಹಾಸವನ್ನು ಮರೆಯುವವರು ಇತಿಹಾಸವನ್ನು ಸೃಷ್ಟಿಸಲಾರರು.


13. ವ್ಯಕ್ತಿಯ ಜೀವನ ಸುದೀರ್ಘವಾಗಿರಬೇಕಿಲ್ಲ. ಆದರೆ ಅತ್ಯುತ್ತಮವಾಗಿರಬೇಕು.


14. ಸ್ವಾತಂತ್ರ್ಯ, ಸಮಾನತೆ ಹಾಗೂ ಸಾಹೋದರ್ಯವನ್ನು ಪ್ರತಿಪದಿಸುವ ಧರ್ಮವನ್ನು ನಾನು ಇಷ್ಟಪಡುತ್ತೇನೆ.


15. ಮನಸ್ಸಿನ ಸಂಸ್ಕೃತಿಯ ಉನ್ನತಿಯೇ ಮಾನವನ ಅಸ್ತಿತ್ವದ ಪರಮ ಗುರಿಯಾಗಿರಬೇಕು.


16. ಅಸ್ಪೃಶ್ಯತೆಯು ಮನುಷ್ಯರನ್ನು ಬಾಧಿಸಬಹುದಾದ ಅತೀ ಕೆಟ್ಟ ಕಾಯಿಲೆ.


17. ಧರ್ಮ ಹಾಗೂ ಜೀತಗಳು ಜೊತೆಯಾಗಿ ಇರಲಾರವು.

ಹೆಚ್ಚಿನ ಓದಿಗಾಗಿ: ಇದು ಮನುಷ್ಯರನ್ನು ಓದೋ ‌ಹ್ಯೂಮನ್‌ ಲೈಬ್ರರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading

ಪ್ರಮುಖ ಸುದ್ದಿ

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Kendra Sahitya Akademi Award: ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ. ಇಬ್ಬರ ಕೃತಿಗಳಿಗೂ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಶಸ್ತಿ ಘೋಷಿಸಿದೆ/

VISTARANEWS.COM


on

Kendra Sahitya Akademi Award
Koo

ನವದೆಹಲಿ: ಒಡಿಶಾದ ಇಬ್ಬರು ಲೇಖಕರಿಗೆ 2024ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award 2024) ಅವರಿಗೆ ಘೋಷಣೆ ಮಾಡಲಾಗಿದೆ. ಒಡಿಶಾ ಲೇಖಕರಾದ ಮಾನಸ್‌ ರಂಜನ್‌ ಸಮಾಲ್‌ (Manas Ranjan Samal) ಹಾಗೂ ಸಂಜಯ್‌ ಕುಮಾರ್‌ ಪಾಂಡಾ (Sanjay Kumar Panda) ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಪುರಸ್ಕಾರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಂಜಯ್‌ ಕುಮಾರ್‌ ಪಾಂಡಾ ಅವರಿಗೆ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಘೋಷಿಸಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ (Gapa Kalika) ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ (Hu Baia) ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ ಅವರ ಇತರ ಕೃತಿಗಳಾಗಿವೆ. ಜತೆಗೆ, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕವಾಗುತ್ತಲೇ ಇರುತ್ತವೆ.

ಇದನ್ನೂ ಓದಿ: All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Bengaluru News: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nari Samman 2024 award ceremony on June 15 in Bengaluru
Koo

ಬೆಂಗಳೂರು: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ, ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಂಬೆ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾ. ಮಂಜುಳಾ ಚೆಲ್ಲೂರು, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್‌, ಖ್ಯಾತ ಚಲನಚಿತ್ರ ನಟ ಶ್ರೀನಾಥ್‌, ಬೆಂಗಳೂರಿನ ಬಸವ ಪರಿಷತ್‌ ಅಧ್ಯಕ್ಷೆ ಎಂ.ಪಿ. ಉಮಾದೇವಿ, ಮಾಜಿ ಸಚಿವೆ ರಾಣಿ ಸತೀಶ್‌, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಇಸ್ರೋ ಸಂಸ್ಥೆ ವಿಜ್ಞಾನಿ ಬಿ.ಎಚ್‌.ಎಂ. ದಾರುಕೇಶ್‌, ಡಾ. ಎಚ್‌.ಆರ್‌. ಶಾಂತರಾಜಣ್ಣ, ಚಲನಚಿತ್ರ ನಟ ಸುಚೇಂದ್ರ ಪ್ರಸಾದ್‌, ಚಲನಚಿತ್ರ ನಟಿ ಭಾವನಾ, ಡಾ. ಮಂಜುಳಾ ಎ. ಪಾಟೀಲ್‌ ಪಾಲ್ಗೊಳ್ಳುವರು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಕಿರುತೆರೆ ನಿರೂಪಕಿ ಅನುಶ್ರೀ, ಚಲನಚಿತ್ರ ನಟಿ ಸೋನಾಲ್‌ ಮಂಥೇರೋ, ಉದ್ಯಮಿ ಪಲ್ಲವಿ ರವಿ, ಡಾ. ಮಮತಾ ಎಸ್‌.ಎಚ್‌., ಉಮಾಬಾಯಿ ಖರೆ, ಜ್ಯೋತಿ ಟೋಸೂರ, ಡಾ. ರತ್ನಮ್ಮ ಆರ್‌., ಹಿರಿಯ ನಿರೂಪಕಿ ನವಿತ ಜೈನ್‌, ಸುಜಾತ ಬಯ್ಯಾಪುರ, ಮಧುರ ಅಶೋಕ್‌ ಕುಮಾರ, ಡಾ. ಸುಮಾ ಬಿರಾದಾರ, ಸುಮಿತ್ರಾ ಎಂ.ಪಿ.ರೇಣುಖಾಚಾರ್ಯ, ಡಾ. ಸಂದರ್ಶಿನಿ ನರೇಂದ್ರಕುಮಾರ್‌, ಡಾ. ಪುಲಿಗೆರೆ ಸಂಪದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ನಾಟ್ಯ ಸಂಪದ ನೃತ್ಯ ಶಾಲೆ ಸಂಸ್ಥಾಪಕಿ ಡಾ. ಮಾನಸ ಕಂಠಿ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

Continue Reading

Latest

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

Veeraloka Books: ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ ಅವರು ಹಾರೈಸಿದರು.

VISTARANEWS.COM


on

Veeraloka
Koo

ಬೆಂಗಳೂರು: ಇವತ್ತು ದಾಲ್ ತಡ್ಕ ರೇಟ್ ಜಾಸ್ತಿಯಾದರೆ (Veeraloka Books) ನಾವು ಯಾರನ್ನೂ ಕೇಳುವುದಿಲ್ಲ. ಸುಮ್ಮನೆ ಹೋಗಿ ಹಣ ಕೊಟ್ಟು ತಿಂದು ಬರುತ್ತೇವೆ. ಆದರೆ ಕನ್ನಡ ಪುಸ್ತಕಗಳಿಗೆ ದಾಲ್‌ ತಡ್ಕಾಗಿರುವಷ್ಟು ಬೇಡಿಕೆಯೂ ಇಲ್ಲ. ಮುಖಬೆಲೆ ಐದು ರೂಪಾಯಿ ಜಾಸ್ತಿಯಾದರೂ ಓದುಗ ಪುಸ್ತಕ ಖರೀದಿಸಲು ಹಿಂದೆ ಮುಂದೆ ನೋಡುವಂಥ ಪರಿಸ್ಥಿತಿ ಇದೆ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ (jayant kaikini) ವಿಷಾದಿಸಿದರು. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ವೀರಲೋಕ ಬುಕ್ಸ್ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಕಾಯ್ಕಿಣಿ ಅವರು ಹಾರೈಸಿದರು.

ವೀರಲೋಕ ಬುಕ್ಸ್ ಆಯೋಜಿಸಿದ್ದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐದು ಕೃತಿಗಳ ಬಿಡುಗಡೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಅವುಗಳಲ್ಲಿ ರಾಧಾಕೃಷ್ಣ ಕಲ್ಚಾರ್‌ ಅವರ ‘ಕವಚ’ ಕಾದಂಬರಿ ವೀರಲೋಕದ ನೂರನೇ ಕೃತಿಯಾಗಿತ್ತು. ಡಾ. ಎಂ ವೆಂಕಟಸ್ವಾಮಿಯವರ ‘ಜಗತ್ತಿನ ಭೀಕರ ಯುದ್ಧಗಳು’, ನೌಶಾದ್ ಜನ್ನತ್ತ್ ಅವರ ‘ಬೇವಾಚ್’, ಸಂದ್ಯಾರಾಣಿಯವರ ‘ನಾತಿಚರಾಮಿ’, ಡಾ. ಶೈಲೇಶ್ ಕುಮಾರ್ ಅವರ ‘ಸುಪ್ತ ಸಾಗರದಾಚೆ’ ಇನ್ನಿತರ ಕೃತಿಗಳಾಗಿದ್ದವು.
ವೀರಲೋಕ ಬುಕ್ಸ್ ಸಂಸ್ಥಾಪಕರಾದ ವೀರಕಪುತ್ರ ಶ್ರೀನಿವಾಸ್ ಅವರು ಆಶಯ ನುಡಿಗಳನ್ನಾಡಿದರು. ಎರಡು ವರ್ಷಗಳಲ್ಲಿನ ಏಳುಬೀಳುಗಳು, ಮೈಲುಗಲ್ಲುಗಳು, ಮುಂದಿನ ತಯಾರಿಗಳ ಬಗ್ಗೆ ವಿವರಿಸಿದರು.

ಇದೇ ವೇದಿಕೆಯಲ್ಲಿ ಅನಂತ ಕುಣಿಗಲ್ ಅವರು ಸಂಪಾದಿಸಿರುವ ವೀರಕಪುತ್ರ ಶ್ರೀನಿವಾಸ್ ಅವರ ಲಲಿತ ಪ್ರಬಂಧಗಳ ಸಂಕಲನ ‘ಬದುಕೇ ಥ್ಯಾಂಕ್ಯೂ’ ಕೃತಿಯೂ ಬಿಡುಗಡೆಯಾಯಿತು. ಕನ್ನಡ ಮಾಣಿಕ್ಯ ಮಾಸ ಪತ್ರಿಕೆಯ ದಶಮಾನೋತ್ಸವವನ್ನೂ ಆಚರಿಸಲಾಯಿತು. ವೀರಲೋಕದ ಐದು ಕೃತಿಗಳ ಮರುಮುದ್ರಣದ ಆವೃತ್ತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್, ನಿರ್ದೇಶಕ ಮಂಸೋರೆ, ಸಂಭಾಷಣೆಕಾರ ಮಾಸ್ತಿ, ಮಹೇಶ ಅರಬಳ್ಳಿ, ಭಾರತಿ ಬಿ.ವಿ, ಪೂರ್ಣಿಮಾ ಮಾಳಗಿಮನಿ, ಶೋಭಾ ರಾವ್, ನವೀನ್ ಸಾಗರ್, ಮಂಡ್ಯ ರಮೇಶ್, ಜೋಗಿ, ಸಂತೋಷ್ ಹಾನಗಲ್, ದಿವ್ಯಾ ಆಲೂರು, ಹರಿವು ರತೀಶ್, ಕಾನ್ಕೇವ್ ನಂದೀಶ್, ಪ್ರಕಾಶ್ ಕಂಬತ್ತಳ್ಳಿ, ಷಡಕ್ಷರಿ, ವಿ ನಾಗೇಂದ್ರ ಪ್ರಸಾದ್ ಮತ್ತಿತರು ಉಪಸ್ಥಿತರಿದ್ದರು.

Continue Reading
Advertisement
Euro 2024
ಕ್ರೀಡೆ10 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ11 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ53 mins ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ56 mins ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ57 mins ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ1 hour ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ1 hour ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್1 hour ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ2 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ2 hours ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌