Radhika Pandit | ರಾಕಿಂಗ್‌ ಸ್ಟಾರ್‌ ಮನೆಯಲ್ಲಿ ಕ್ರಿಸ್ಮಸ್‌ ಸಂಭ್ರಮ: ಕುಕ್ಕೀಸ್‌ ಮಾಡೋದ್ರಲ್ಲಿ ಐರಾ, ಯಥರ್ವ ಬ್ಯುಸಿ! - Vistara News

ಸಿನಿಮಾ

Radhika Pandit | ರಾಕಿಂಗ್‌ ಸ್ಟಾರ್‌ ಮನೆಯಲ್ಲಿ ಕ್ರಿಸ್ಮಸ್‌ ಸಂಭ್ರಮ: ಕುಕ್ಕೀಸ್‌ ಮಾಡೋದ್ರಲ್ಲಿ ಐರಾ, ಯಥರ್ವ ಬ್ಯುಸಿ!

ರಾಕಿಂಗ್ ಸ್ಟಾರ್ ಮನೆಯಲ್ಲಿ ಐರಾ ಮತ್ತು ಯಥರ್ವ್‌ ಕುಕ್ಕೀಸ್ ತಯಾರಿಸುವ ಫೋಟೊವನ್ನು ರಾಧಿಕಾ ಪಂಡಿತ್‌ (Radhika Pandit) ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Radhika Pandit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಮನೆಯಲ್ಲಿ ನಡೆಯುತ್ತಿರುವ ಕ್ರಿಸ್ಮಸ್‌ ಸಂಭ್ರಮವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಸಂತಸಪಡುತ್ತಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಮನೆಯಲ್ಲಿ ಐರಾ ಮತ್ತು ಯಥರ್ವ್‌ ಕುಕ್ಕೀಸ್ ತಯಾರಿಸುವ ಫೋಟೊವನ್ನು ರಾಧಿಕಾ ಪಂಡಿತ್‌ (Radhika Pandit) ಶೇರ್‌ ಮಾಡಿಕೊಂಡಿದ್ದಾರೆ.

ಐರಾ ಮತ್ತು ಯಥರ್ವ್‌ ಕುರಿತು ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿರುತ್ತಾರೆ ರಾಧಿಕಾ ಪಂಡಿತ್‌. ಕ್ರಿಸ್ಮಸ್ ಟ್ರೀ, ಸಾಕ್ಸ್‌ ಮತ್ತು ಸ್ನೋ ಆಕಾರದ ಕುಕ್ಕೀಸ್‌ಗಳನ್ನು ಮಾಡಿಸುತ್ತಿರುವ ಫೋಟೊ ಹಂಚಿಕೊಂಡಿದ್ದಾರೆ. ಐರಾ ಕುಕ್ಕೀಸ್‌ಗೆ ಬಣ್ಣ ಹಚ್ಚುತ್ತಿದ್ದರೆ ಯಥರ್ವ್‌ ಕುಕ್ಕೀಸ್‌ಗಳನ್ನು ಅದರ ಶೇಪ್‌ನಲ್ಲಿ ಕಟ್ ಮಾಡುತ್ತಿದ್ದಾನೆ. ಇಬ್ಬರೂ ಒಟ್ಟಿಗೆ ಕ್ರಿಸ್ಮಸ್‌ ಎಂಜಾಯ್ ಮಾಡುತ್ತಿದ್ದಾರೆ. 

ಇದನ್ನೂ ಓದಿ | Radhika Pandit | ʻʻಬಂಕ್‌ ಮಾಡಿದರೂ ನನ್ನ ಅಪ್ಪನೇ ನನಗೆ ಸಾರಥಿʼʼ: ರಾಧಿಕಾ ಪಂಡಿತ್‌ ಪೋಸ್ಟ್‌ ವೈರಲ್‌! 

Radhika Pandit

ಪ್ರತಿ ಹಬ್ಬಕ್ಕೂ ರಾಕಿಂಗ್ ಮನೆಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಪ್ರತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದರ ಫೋಟೊ ಹಂಚಿಕೊಳ್ಳುತ್ತಾರೆ. ಈ ಹಿಂದೆಯಷ್ಟೇ ನಟಿ ರಾಧಿಕಾ ಪಂಡಿತ್‌ ತಮ್ಮ ತಂದೆಯ ಜತೆ ಇರುವ ಫೋಟೊವನ್ನು ಹಂಚಿಕೊಂಡಿದ್ದರು. ಮಕ್ಕಳು ಅಜ್ಜನ ಸ್ಕೂಟರ್‌ ಅನ್ನು ಹತ್ತಿದ್ದರು. ಅವರ ಜತೆ ರಾಧಿಕಾ ಕೂಡ ಸಾಥ್ ನೀಡಿದ್ದರು.

Radhika Pandit

ಇದನ್ನೂ ಓದಿ | Yash-Radhika Pandit | ರಾಕಿಂಗ್​ ಸ್ಟಾರ್​ ಮನೆಯಲ್ಲಿ ದೀಪಾವಳಿ ಸಡಗರ; ಮಕ್ಕಳೊಂದಿಗೆ ನಕ್ಷತ್ರ ಕಡ್ಡಿ ಹಚ್ಚಿದ ಯಶ್​-ರಾಧಿಕಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಿರುತೆರೆ

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Amruthadhare Serial : ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ. ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ.

VISTARANEWS.COM


on

Amruthadhare Serial Bhumika-Gautham angryness has melted like ice
Koo

ಬೆಂಗಳೂರು: ಜೀ ಕನ್ನಡ ಧಾರಾವಾಹಿಯಲ್ಲಿ ʻಅಮೃತಧಾರೆʼ (Amruthadhare Serial) ಪ್ರಸಾರ ಕಾಣುತ್ತಿದೆ. ಈಗಾಗಲೇ ಭೂಮಿಕಾ ಮತ್ತು ಗೌತಮ್‌ ನಡುವೆ ಬಿರುಕು ಉಂಟಾಗಿ ಈಗ ಐಸ್ ಥರ ಕೋಪ‌ ಕರಗಿ ರಾಜಿ ಕೂಡ ಮಾಡಿಕೊಂಡಿದ್ದಾರೆ. ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ.

ಗೌತಮ್‌ ತಮ್ಮ ಪಾರ್ಥ ಹಾಗೂ ಭೂಮಿಕಾ ತಂಗಿ ಅಪ್ಪಿ ಒಬ್ಬರಿಗೊಬ್ಬರು ಪ್ರೀತಿಸುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಭೂಮಿಗೆ ಈ ಪ್ರೀತಿ ವಿಚಾರ ಗೊತ್ತಾಗಿ ಪಾರ್ಥನಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರೀತಿ ಎಂದರೆ ಜವಬ್ಧಾರಿ ಎಂದು ಪಾರ್ಥಗೆ ತಿಳಿ ಹೇಳಿದ್ದಾಳೆ ಭೂಮಿಕಾ. ಅತ್ತ ಗೌತಮ್‌ ತಾಯಿ ಶಕುಂತಲಾ ಮಗ ಮತ್ತು ಸೊಸೆ ಒಂದಾಗಬಾರದೆಂದು ಹೊಂಚು ಹಾಕುತ್ತಿದ್ದಾಳೆ.

ಭೂಮಿಕಾಗೆ ಕೋಚಿಂಗ್‌ ಸೆಂಟರ್‌ನಲ್ಲಿ ಪಾಠ ಮಾಡಬೇಕು ಎಂಬ ಆಸೆ. ಗೌತಮ್‌ ಪರ್‌ಮಿಶನ್‌ ಸಿಕ್ಕ ಬಳಿಕ ಕೋಚಿಂಗ್‌ಗೆ ಬರುತ್ತಾರೆ. ಅಲ್ಲಿ ಆದದ್ದೇ ಬೇರೆ. ಅಲ್ಲಿ ಹೋಗುತ್ತಿದ್ದಂತೆ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿರುತ್ತಾರೆ. ಇದರಿಂದ ಸಹುದ್ಯೋಗಿಗಳು ಚುಚ್ಚಿ ಮಾತನಾಡಿದ್ದಾರೆ. ಗೌತಮ್ ಹೆಂಡತಿಗೆ ಸುಲಭವಾಗಿ ಬೋರ್ಡ್ ಮೆಂಬರ್ ಪಟ್ಟ ಸಿಕ್ಕಿದೆ. ಟ್ಯಾಲೆಂಟ್ ಗಿಂತಲೂ ಹಣಕ್ಕೆ ಹೆಚ್ಚು ಆದ್ಯತೆ ಎಂದಿದ್ದಾರೆ. ಇದೆಲ್ಲವೂ ಭೂಮಿಕಾಳ ಮನಸ್ಸಿಗೆ ಘಾಸಿ ಮಾಡಿದೆ. ಶಕುಂತಲಾ ಬೋರ್ಡ್‌ಗೆ ಕಾಲ್ ಮಾಡಿ ನಾವು ಡೊನೇಷನ್ ಕೊಡುತ್ತಿದ್ದೇವೆ. ನನ್ನ ಸೊಸೆಗೆ ದೊಡ್ಡ ಸ್ಥಾನವನ್ನು ಕೊಡಿ ಎಂದು ತಾಕೀತು ಮಾಡಿದ್ದಾಳೆ .ಭೂಮಿಕಾ ಮನೆಗೆ ಬಂದವಳೇ ಗೌತಮ್ ಮೇಲೆ ಕೂಗಾಡಲು ಶುರು ಮಾಡುತ್ತಾಳೆ.

ಗೌತಮ್‌ ಮೇಲೆ ಭೂಮಿಕಾ ಕೂಗಾಡಿದ ಬಳಿಕ ಆನಂದ್‌ ಸಮಾಧಾನ ಮಾಡುತ್ತಾನೆ. ಗೌತಮ್‌ ಬಗ್ಗೆ ಅರಿಯದೇ ಮಾತನಾಡಬೇಡಿ ಎಂದು ಭೂಮಿಕಾಗೆ ತಿಳಿ ಹೇಳುತ್ತೇನೆ. ಈ ರೀತಿ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿದ್ದು ಗೌತಮ್‌ಗೆ ಗೊತ್ತಿಲ್ಲ ಎಂದು ಆನಂದ್‌ ಹೇಳಿದಾಗ ಭೂಮಿಕಾಗೆ ತಪ್ಪಿನ ಅರಿವಾಗುತ್ತದೆ. ಅತ್ತ ಗೌತಮ್‌ಗೆ ಕೂಡ ಶಕುಂತಲ ಕುತಂತ್ರ ಅರಿವಾಗದೇ ಹೋಗುತ್ತದೆ.

ಇದನ್ನೂ ಓದಿ: Amruthadhare Serial: ಕೆಂಪು ಗುಲಾಬಿಯಂತೆ ಕಂಗೊಳಿಸಿದ ʻಮಹಿಮಾʼ; ಸಾರಾ ಅಣ್ಣಯ್ಯ ಹೊಸ ಲುಕ್‌!

ಮಧ್ಯರಾತ್ರಿ ಐಸ್‌ಕ್ರೀಮ್ ತಿಂತಿದ್ದಾರೆ ಗೌತಮ್-ಭೂಮಿಕಾ

ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ. ಆ ಬಳಿಕ ಜೋಡಿ ಮಧ್ಯರಾತ್ರಿ ಕೂತು ಐಸ್‌ಕ್ರೀಮ್‌ ತಿಂದು ರಾಜಿಯಾಗಿ ಖುಷಿಯಲ್ಲಿ ಇರುತ್ತಾರೆ.

ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ದೇಶ

Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

Elvish Yadav: ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಸಿದ್ದಾರ್ಥ್‌ ಯಾದವ್‌ ಅಲಿಯಾಸ್‌ ಎಲ್ವಿಶ್ ಯಾದವ್ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದೆ. ಉತ್ತರಪ್ರದೇಶದ ಗೌತಮ್‌ ಬುದ್ಧನಗರ ಜಿಲ್ಲೆಯಲ್ಲಿ ದಾಖಲಾಗಿರುವ ಎಫ್‌ ಐಆರ್‌ ಮತ್ತು ಚಾರ್ಜ್‌ಶೀಟ್‌ಗಳ ಆಧಾರದ ಮೇಲೆ ಇಡಿ ಎಲ್ವಿಶ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಲ್ಲಿ ಕೇಸ್‌ ದಾಖಲಿಸಿದೆ.

VISTARANEWS.COM


on

Elvish Yadav
Koo

ನವದೆಹಲಿ: ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಸಿದ್ದಾರ್ಥ್‌ ಯಾದವ್‌ ಅಲಿಯಾಸ್‌ ಎಲ್ವಿಶ್ ಯಾದವ್ (Elvish Yadav) ವಿರುದ್ಧ ಜಾರಿ ನಿರ್ದೇಶನಾಲಯ(ED) ಅಕ್ರಮ ಹಣ ವರ್ಗಾವಣೆ ಕೇಸ್‌ (Money laundering case) ದಾಖಲಿಸಿದೆ. ಉತ್ತರಪ್ರದೇಶದ ಗೌತಮ್‌ ಬುದ್ಧನಗರ ಜಿಲ್ಲೆಯಲ್ಲಿ ದಾಖಲಾಗಿರುವ ಎಫ್‌ ಐಆರ್‌ ಮತ್ತು ಚಾರ್ಜ್‌ಶೀಟ್‌ಗಳ ಆಧಾರದ ಮೇಲೆ ಇಡಿ ಎಲ್ವಿಶ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(PMLA)ಯಲ್ಲಿ ಕೇಸ್‌ ದಾಖಲಿಸಿದೆ.

ಎಲ್ವಿಶ್‌ ಯಾದವ್‌ ಅಕ್ರಮವಾಗಿ ಹಣ ಪಡೆದು ವಿವಿಧ ಕಡೆಗಳಲಿ ರೇವ್‌ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಎಂಬುದು ಚಾರ್ಜ್‌ಶೀಟ್‌ ನಲ್ಲಿ ದಾಖಲಿಸಲಾಗಿದೆ. ಹೀಗಾಗಿ ಶೀಘ್ರದಲ್ಲೇ ಎಲ್ವಿಶ್‌ನನ್ನು ಇಡಿ ವಿಚಾರಣೆಗೊಳಪಡಿಸಲಿದೆ. ಇನ್ನು ಪ್ರಕರಣದಲ್ಲಿ ಭಾಗಿಯಾದ ಇನ್ನಿತರ ಆರೋಪಿಗಳನ್ನೂ ಇಡಿ ಗ್ರಿಲ್‌ ಮಾಡಲಿದೆ. ಯಾದವ್‌ ಜೊತೆಗೆ ಒಟ್ಟು ಆರು ಜನರ ವಿರುದ್ಧ ಇಡಿ ಕೇಸ್‌ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಎಲ್ವಿಶ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಂಧಿತರನ್ನು ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್(32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿತ್ತು.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಯಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದ್ದು, ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಅಂದು ಎಲ್ವಿಶ್ ಯಾದವ್ ಅವರನ್ನು ಬಂಧಿಸಿರಲಿಲ್ಲ.
ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್‌ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಈ ಮುಂಚೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

ಎಲ್ವಿಶ್ ಯಾದವನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದ. ಇದಾದ ಕೆಲವೇ ದಿನಗಳಲ್ಲಿ ಎಲ್ವಿಶ್‌ 3 ಕೋಟಿ ರೂ ಮೌಲ್ಯದ ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದ.

Continue Reading

ಟಾಲಿವುಡ್

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

Bandaru Supritha Naidu: ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು.ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು. ನಟಿಯ ಉತ್ತರಕ್ಕೆ ನೆಟ್ಟಿಗರು ಶಾಕ್‌ ಆಗಿದ್ದಾರೆ.

VISTARANEWS.COM


on

Bandaru Supritha Naidu surekha vani daughter wants to marry vijay deverakonda
Koo

ತೆಲುಗಿನ ಹಿರಿಯ ನಟಿ ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ (Bandaru Supritha Naidu) ಹೆಸರು ವಿಜಯ್ ದೇವರಕೊಂಡ ಜತೆ ಕೇಳಿಬರುತ್ತಿದೆ.

ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು. ತಮ್ಮನ್ನು ಫಾಲೋ ಮಾಡುವವರಿಗೆ ನಿಮ್ಮಲ್ಲಿ ಏನಾದರೂ ಪ್ರಶ್ನೆಗಳಿದ್ದರೆ ಕೇಳಿ ಎಂದಿದ್ದರು. ಈ ವೇಳೆ ನೆಟ್ಟಿಗರು ಪ್ರಶ್ನೆಗಳನ್ನು ಕೇಳಿದ್ದರು.

ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು.ಈ ಪ್ರಶ್ನೆಗೆ ಸುಪ್ರಿತಾ ವಿಜಯ್ ದೇವರಕೊಂಡ ಎಂದು ಹೇಳಿದ್ದಾರೆ. ವಿಜಯ್ ದೇವರಕೊಂಡ ಅವರ ಫೋಟೊವನ್ನು ಕೂಡ ಶೇರ್ ಮಾಡಿಕೊಂಡಿದ್ದರು.

ಇದನ್ನೂ ಓದಿ: MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

ಇದೀಗ ನೆಟ್ಟಿಗರು ವಿಜಯ್ ದೇವರಕೊಂಡ ಜೊತೆ ಸುಪ್ರಿತಾರನ್ನು ಮದುವೆ ಮಾಡಿಸುವುದಕ್ಕೆ ನಿಂತಿದ್ದಾರೆ.

ಅಮರ್ ದೀಪ್ ಚೌಧರಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಮೂಲಕ ಸುಪ್ರಿತಾ ನಾಯಕಿಯಾಗಿ ಪರಿಚಯವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading
Advertisement
Nikhil Kumaraswamy
ಕರ್ನಾಟಕ17 seconds ago

Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

PBKS vs CSK
ಕ್ರೀಡೆ12 mins ago

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

Road Accident in bagalakote
ಬಾಗಲಕೋಟೆ12 mins ago

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

MTR Karunadu Svada food festival inauguration in Bengaluru
ಕರ್ನಾಟಕ12 mins ago

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

Vijay Devarakonda announces new film
ಕಿರುತೆರೆ14 mins ago

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Amruthadhare Serial Bhumika-Gautham angryness has melted like ice
ಕಿರುತೆರೆ16 mins ago

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Gold smuggling
ದೇಶ19 mins ago

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Prajwal Revanna Case
ಕರ್ನಾಟಕ25 mins ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Money Guide
ಮನಿ-ಗೈಡ್35 mins ago

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

mangaluru airport bomb threat
ದಕ್ಷಿಣ ಕನ್ನಡ47 mins ago

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ24 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌