Janardhan Reddy | ಜನಾರ್ದನ ರೆಡ್ಡಿ ಎಂಟ್ರಿಗೆ ಗಂಗಾವತಿಯಲ್ಲಿ ಗಡಗಡ: ಹೊಸ ಪಕ್ಷಕ್ಕೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆಗಳು ಇಲ್ಲಿವೆ - Vistara News

ಕರ್ನಾಟಕ

Janardhan Reddy | ಜನಾರ್ದನ ರೆಡ್ಡಿ ಎಂಟ್ರಿಗೆ ಗಂಗಾವತಿಯಲ್ಲಿ ಗಡಗಡ: ಹೊಸ ಪಕ್ಷಕ್ಕೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆಗಳು ಇಲ್ಲಿವೆ

ಗಂಗಾವತಿಯಿಂದಲೇ ರಾಜಕೀಯ ತಂತ್ರಗಾರಿಕೆ ಆರಂಭಿಸುವುದಾಗಿ ಜನಾರ್ದನ ರೆಡ್ಡಿ ಹೇಳಿರುವುದು ಕ್ಷೇತ್ರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ರಾಜ್ಯದ ವಿವಿಧೆಡೆ ಬಿಜೆಪಿ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

varous leaders reactions regarding janardhan-reddy-new party
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮ್ಮ ರಾಜಕೀಯ ಎರಡನೇ ಇನಿಂಗ್ಸ್ ಗಂಗಾವತಿಯಿಂದಲೇ ಆರಂಭಿಸಲು ಸಜ್ಜಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾನುವಾರ ತಮ್ಮ ಹೊಸ ಪಕ್ಷ ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಘೋಷಣೆ ಮಾಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ರೆಡ್ಡಿ ಘೋಷಣೆ ಮಾಡಿರುವುದು ಗಂಗಾವತಿ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ರೆಡ್ಡಿ ರಾಜಕೀಯ ಎಂಟ್ರಿಯಿಂದ ಗಂಗಾವತಿ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾದಂತಾಗಿದೆ.

ಸಕ್ರಿಯ ರಾಜಕಾರಣಕ್ಕೆ ಮರಳುವ ಉದ್ದೇಶದೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯನ್ನು ಆಯ್ಕೆ ಮಾಡಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಗಂಗಾವತಿಯಲ್ಲಿಯೇ ಮನೆ ಮಾಡುವ ಮೂಲಕ ಸ್ಥಳೀಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

ತಮ್ಮ ರಾಜಕೀಯ ನಿಲುವಿನ ಬಗ್ಗೆ ಕುತೂಹಲ ಹುಟ್ಟು ಹಾಕಿ ಇಂದು ತಮ್ಮ ಮನದ ಇಂಗಿತವನ್ನು ಬೆಂಗಳೂರಿನಲ್ಲಿ ಸುದೀರ್ಘ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಹೊಸ ಪಕ್ಷದ ಘೋಷಣೆಯ ಜೊತೆಗೆ ಗಂಗಾವತಿಯಿಂದಲೇ ಸ್ಪರ್ಧೆ ಮಾಡುವುದಾಗಿ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ತಮ್ಮ ಪತ್ನಿಯೂ ಸಾರ್ವಜನಿಕ ಬದುಕಿಗೆ ಬರುವ ಸುಳಿವನ್ನೂ ಸಹ ರೆಡ್ಡಿ ನೀಡಿದ್ದಾರೆ.

ಇನ್ನು ಜನಾರ್ದನ ರೆಡ್ಡಿ ಗಂಗಾವತಿಯಲ್ಲಿ ಮನೆ ಮಾಡಿದಾಗಲೇ ಗಂಗಾವತಿ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿತ್ತು. ಅದರಲ್ಲೂ ಸ್ಥಳೀಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ತಳಮಳ‌ ಶುರುವಾಗಿತ್ತು. ಈಗ ರೆಡ್ಡಿ ಹೊಸ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ್ದರಿಂದ, ತಮಗೆ ಟಿಕೆಟ್‌ ಕೈತಪ್ಪುವುದಿಲ್ಲ ಎಂದು ಪರಣ್ಣ ಮುನವಳ್ಳಿ ಕೊಂಚ ನಿರಾಳರಾದಂತಾಗಿದೆ. ಆದರೆ ಮತ್ತೊಬ್ಬ ಪ್ರಬಲ ಅಭ್ಯರ್ಥಿ ಕಣಕ್ಕಿಳಿಯುವದರಿಂದ ಗಂಗಾವತಿ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡಲಿದೆ. ಜನಾರ್ದನರೆಡ್ಡಿ ಗಂಗಾವತಿಯಿಂದ ಸ್ಪರ್ಧೆ ಮಾಡುವ ಕುರಿತು ಘೋಷಣೆ ಹಿನ್ನೆಲೆಯಲ್ಲಿ ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಅವರು ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ನಾನಂತೂ ಬಿಜೆಪಿಯ ಅಭ್ಯರ್ಥಿ ಎಂದಷ್ಟೆ ಹೇಳಿದ್ದಾರೆ.

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿತ್ತು. ಈಗ ಜನಾರ್ದನರೆಡ್ಡಿ ತಮ್ಮ ಹೊಸ ಪಕ್ಷದೊಂದಿಗೆ ಎಂಟ್ರಿ ಕೊಡುತ್ತಿರುವುದರಿಂದ ಹೈವೋಲ್ಟೇಜ್ ಜೊತೆಗೆ ತ್ರಿಕೋನ ಸ್ಪರ್ಧೆಗೆ ಅಖಾಡ ರೆಡಿಯಾದಂತಾಗಿದೆ.

ಈ ಕುರಿತು ಶಾಸಕ ಪರಣ್ಣ ಮುನವಳ್ಳಿ ಪ್ರತಿಕ್ರಿಯಿಸಿ, ಪಕ್ಷ‌ ಕಟ್ಟುವುದು ಅವರ ವೈಯಕ್ತಿಕ ವಿಷಯ, ಅದು ನಮಗೆ ಸಂಬಂಧವಿಲ್ಲದ ವಿಷಯ. ನಾನಂತೂ ಎರಡು ಬಾರಿ ಶಾಸಕನಾಗಿದ್ದೇನೆ. ಈ ಬಾರಿಯೂ ಬಿಜೆಪಿ ಟಿಕೇಟ್‌ನ ಪ್ರಬಲ ಆಕಾಂಕ್ಷಿ. ಈ ಕುರಿತು ಹೈಕಮಾಂಡ್ ಡಿಸೈಡ್ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ನಾನು ಏನೂ ಮಾತನಾಡೋದಿಲ್ಲ. ನಮ್ಮ ಪಕ್ಷದ ಅನೇಕ ಹಿರಿಯರಿದ್ದಾರೆ. ಈ ಬಗ್ಗೆ ಏನು ಹೇಳಬೇಕೋ ಅವರು ಹೇಳುತ್ತಾರೆ. ಗಂಗಾವತಿಯಲ್ಲಿ ಅವರು ಚುನಾವಣೆಗೆ ಸ್ಪರ್ಧಿಸುವುದು ಅವರ ಸ್ವಾತಂತ್ರ್ಯ. ಬೇಡ ಎನ್ನುವುದಕ್ಕೆ ನಾವು ಯಾರು ಎಂದಿದ್ದಾರೆ.

ವಿವಿಧ ನಾಯಕರ ಪ್ರತಿಕ್ರಿಯೆ

ಬಳ್ಳಾರಿಯಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು, ನಾನು ಅವರ ಜತೆಗೆ ಒಂದು ದೊಡ್ಡ ಶಕ್ತಿಯಾಗಿ ಬಂಡೆ ರೀತಿ ನಿಂತಿದ್ದೇನೆ. ಸ್ನೇಹವೇ ಬೇರೆ, ರಾಜಕಾರಣವೇ ಬೇರೆ. ಅವರು ಶಕ್ತಿವಂತರಲ್ಲ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಈ ಭಾಗದ ನೆಚ್ಚಿನ ನಾಯಕರು. ಅವರು ಬಿಜೆಪಿಗೂ ಒಂದು ಶಕ್ತಿಯಾಗಿದ್ದರು. ಇಂದು ಅವರದ್ದೇ ಬೇರೆ ಪಕ್ಷವಾಗಿರುವ ಸಂದರ್ಭದಲ್ಲಿ ನಮ್ಮ ಸಿದ್ಧಾಂತದಲ್ಲಿ ಮುಂದುವರಿಯುತ್ತೇವೆ ಎಂದಿದ್ದಾರೆ.

ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಯಾವುದೇ ಪ್ರಾದೇಶಿಕ ಪಕ್ಷ ರಾಜ್ಯದಲ್ಲಿ ಯಶಸ್ಸು ಕಂಡಿಲ್ಲ. ಜನಾರ್ದನ ರೆಡ್ಡಿ ಪಕ್ಷ ಕಟ್ಟಿರುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ ಎಂದರು. ಜನಾರ್ದನ ರೆಡ್ಡಿ ಅವರ ಮನವೊಲಿಕೆಯಲ್ಲಿ ಬಿಜೆಪಿ ವಿಫಲವಾಯಿತೇ ಎಂಬ ವಿಚಾರದ ಕುರಿತು ಪ್ರತಿಕ್ರಿಯೆಗೆ ನಿರಾಕರಣೆ ಮಾಡಿದರು. ನಾನು ಎಲ್ಲವನ್ನೂ ತಿಳಿದುಕೊಂಡೇ ಮಾತನಾಡುತ್ತೇನೆ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಯಶಸ್ಸು ಕಂಡಿಲ್ಲ ಅಂತಷ್ಟೆ ಎಂದು ಪುನರುಚ್ಚರಿಸಿದರು.

ಯಾರು ಯಾರ ಬಿ ಟೀಮ್‌, ಎ ಟೀಮ್‌ ಎನ್ನುವುದನ್ನು ಮುಂದೆ ಜನ ತಿರ್ಮಾನ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪಾರ್ಟಿ ಕಟ್ಟಲು ‌ಚುನಾವಣೆ‌ ಮಾಡಲು ಎಲ್ಲರಿಗೂ ಅಧಿಕಾರ ಇದೆ. ನಮ್ಮ‌ ಚುನಾವಣೆ ಕಾನೂನಿನಲ್ಲಿ 25 ವರ್ಷ ಆಗಿರಬೇಕು, ಭಾರತೀಯ ಆಗಿರಬೇಕು ಹಾಗೂ ಆತ ಹುಚ್ಚ‌ ಇರಬಾರದು ಎಂದು ಇದೆ. ಯಾರು ಬೇಕಾದರೂ ಚುನಾವಣೆಗೆ‌ ನಿಲ್ಲಬಹುದು. ಬಿಜೆಪಿ ಸೈದ್ಧಾಂತಿಕ ಆಧಾರದ ಪಕ್ಷ. ಈ ವಿಷಯವಾಗಿ ಸಿಎಂ ಆಗಲಿ ರಾಜ್ಯಾಧ್ಯಕ್ಷರಾಗಲಿ ಚರ್ಚೆ ಮಾಡಲು ಸಿಕ್ಕಿಲ್ಲ. ನಾನು ನಂತರ ಅವರ ಜತೆ ಮಾತನಾಡುತ್ತೇನೆ. ಸಿಎಂ ನಾಳೆ ದೆಹಲಿಗೆ ಬರಲಿದ್ದಾರೆ, ದೆಹಲಿಯಲ್ಲಿ ನಾನು ಸಿಗುತ್ತೇನೆ ಎಂದರು.

ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಮುನಿರತ್ನ, ಯಾವ ಪಕ್ಷ ಕಟ್ಟಿದ್ದಾರೋ ಗೊತ್ತಿಲ್ಲ.…ಹೊಸ ಪಕ್ಷದಿಂದ ಬಿಜೆಪಿಗೆ ಯಾವುದೇ ದಕ್ಕೆ ಆಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಹೊಸ ಪಕ್ಷದಿಂದ ನಮಗೇನೂ ತೊಂದರೆ ಇಲ್ಲ ಎಂದು ಹೇಳಿದರು.

ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ

ದಾವಣಗೆರೆಯಲ್ಲಿ ಮಾತನಾಡಿದ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆಯ ಬಗ್ಗೆ ಅವರೇ ಆತ್ಮವಲೋಕನ ಮಾಡಿಕೊಳ್ಳಬೇಕು. ಇದರಿಂದ ಅವರ ವರ್ಚಸಿಗೇ ದಕ್ಕೆ ಬರುತ್ತದೆ. ಬಿಜೆಪಿ ಜನಾರ್ಧನ ರೆಡ್ಡಿಗೆ ಎಲ್ಲವನ್ನೂ ನೀಡಿದೆ. ರೆಡ್ಡಿ ಅವರನ್ನು ಉಳಿಸಿಕೊಳ್ಳುತ್ತೇವೆ ಎಂದು ಶ್ರೀರಾಮುಲು ಹೇಳಿದ್ದರು. ಯಡಿಯೂರಪ್ಪ ಕೂಡ ರೆಡ್ಡಿ ಜತೆ ಮಾತನಾಡಿದ್ದಾರೆ. ಆದರೆ, ಜನಾರ್ದನ ರೆಡ್ಡಿ ಯಾವುದೋ ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದರಿಂದ ಬಿಜೆಪಿಗೆ ಯಾವುದೇ ನಷ್ಟ ಇಲ್ಲ. ಬಿಜೆಪಿ ರಾಜ್ಯದಲ್ಲಿ ಸದೃಢವಾಗಿದೆ ಎಂದರು.

ಕೊಪ್ಪಳದಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ, ಈ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಅವರು ಹೊಸ ಪಕ್ಷ ರಚನೆ ಮಾಡಿದ್ದಾರೆ ಎಂದರೆ ಅವರ ಉದ್ದೇಶ ಏನಿದೆ? ಗುರಿ ಏನಿದೆಯೋ ಅದಕ್ಕೆ ತಕ್ಕಂತೆ ಮಾಡಿರಬಹುದು. ಹೊಸ ಪಕ್ಷದ ಬಗ್ಗೆ ಈಗಲೇ ಏನೂ ಪರಿಣಾಮವಾಗುತ್ತದೆ ಎಂದು ಹೇಳಲಿಕ್ಕೆ ಆಗುವುದಿಲ್ಲ. ಹೊಸ ಪಕ್ಷಗಳು ಉದಯವಾಗುವುದು ಸಹಜ. ಪಕ್ಷ ಸ್ಥಾಪನೆಗೆ ಅವರಿಗೆ ಸ್ವಾತಂತ್ರ್ಯವಿದೆ. ಹೊಸ ಪಕ್ಷದಿಂದ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲವಾಗುತ್ತದೆ ಎಂದು ಹೇಳಲಿಕ್ಕೆ ಆಗುವುದಿಲ್ಲ. ಮುಂದೆ ನೇರ ಹಣಾಹಣಿಯೋ, ತ್ರಿಕೋನ ಸ್ಪರ್ಧೆ ಏರ್ಪಡುತ್ತದೆಯೋ ಎಂದು ಈಗಲೇ ಹೇಳಲು ಆಗುವುದಿಲ್ಲ. ಅವರು ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿಯಲ್ಲಿ ಹ್ಯಾಪಿಯಾಗಿರುವೆ. ಹೊಸ ಪಕ್ಷದ ಬಗ್ಗೆ ನಾವು ಏನಾದರೂ ಈಗ ರಿಯಾಕ್ಟ್ ಮಾಡಿದರೆ ಹೊಸ ಪಕ್ಷ ಕಟ್ಟಿದವರಿಗೆ ಹರ್ಟ್ ಆಗಬಹುದು. ಹೀಗಾಗಿ ಆ ಬಗ್ಗೆ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಕಾಲವೇ ನಿರ್ಣಯಿಸುತ್ತದೆ

ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಪ್ರಜಾಪ್ರಭುತ್ವದಲ್ಲಿ ಪಕ್ಷ ಕಟ್ಟಲು ಹಾಗೂ ಚುನಾವಣೆ ಸ್ಪರ್ಧಿಸಲು ಅವಕಾಶ ಇದೆ. ಇದರಲ್ಲಿ ಮತದಾರರೇ ಪ್ರಭುಗಳು. ಅವರು ಯಾರಿಗೆ ಆಶೀರ್ವಾದ ಮಾಡುತ್ತಾರೆಯೋ ನೋಡೋಣ. ಕೆಲವನ್ನು ಇವತ್ತೇ ಜಡ್ಜ್‌ಮೆಂಟ್ ಕೊಡಲು ಬರುವುದಿಲ್ಲ. ಕಾಲ ಕೆಲವನ್ನು ನಿರ್ಣಯ ಮಾಡುತ್ತದೆ. ಕಾಲವನ್ನು ನಾವೆಲ್ಲ ಕಾದು ನೋಡಬೇಕಾಗುತ್ತದೆ. ನಾನು ಅವರನ್ನು ವೈಯಕ್ತಿಕ ವಿಷಯದಲ್ಲಿ ಭೇಟಿಯಾಗಿಲ್ಲ. ಯಾರು ಬೇಕಾದರೂ ಸ್ಪರ್ದೆ ಮಾಡಲು ಅವಕಾಶ ಇದೆ ಎಂದರು.

ಮಂಡ್ಯ ಜಿಲ್ಲೆ ಕೆ. ಆರ್. ಪೇಟೆ ತಾಲೂಕಿನ ನಾಟನಹಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಹೊಸ ಪಕ್ಷ ಘೋಷಣೆ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಬೇರೆ ಪಕ್ಷ ಮಾಡಬಹುದು ಎಂದು ಎಲ್ಲರೂ ನಿರೀಕ್ಷೆ ಇಟ್ಟಿದ್ದರು. ಅವರು ಬೇರೆ ಪಕ್ಷ ಮಾಡುವ ಬೆಳವಣಿಗೆ ಏನ್ ಆಗುತ್ತದೆ ಎನ್ನುವುದನ್ನು ನೋಡೋಣ ಎಂದರು.

ವಿಜಯನಗರದಲ್ಲಿ ಮಾತನಾಡಿದ ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸನೌಡ, ಜನಾರ್ದನ ರೆಡ್ಡಿ ಪಕ್ಷ ಘೋಷಣೆಯಿಂದ ಬಿಜೆಪಿ ಲಾಸ್ ಆಗುವುದಿಲ್ಲ. ನಮ್ಮ ಕಾರ್ಯಕರ್ತರು ಬಿಜೆಪಿ ಬಿಟ್ಟು ಹೋಗುವುದಿಲ್ಲ. ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳೂ ಇವೆ, ಅದರಂತೆ ಇದೂ ಒಂದು. ಬಿಜೆಪಿಗೆ ಕಾರ್ಯಕರ್ತರು ಇದ್ದಾರೆ. ಕೇಂದ್ರದಲ್ಲಿ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಉತ್ತಮ ಆಡಳಿತ ಕೊಟ್ಟಿರುವುದು ರಾಜ್ಯದ ಜನಕ್ಕೆ ಗೊತ್ತಿದೆ. ಹೊಸ ರಾಜಕೀಯ ಪಕ್ಷದಿಂದ ರಾಜ್ಯ ಅಭಿವೃದ್ಧಿ ಆಗಲು ಸಾಧ್ಯ ಇಲ್ಲ. ಬಿಜೆಪಿ ಉತ್ತಮ ನಾಯಕರನ್ನು ಹೊಂದಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಬಿಜೆಪಿ ಹೊಂದಿದೆ ಎಂದರು.

ಇದನ್ನೂ ಓದಿ | Janardhan Reddy | ಬಿಜೆಪಿಗೆ ನಷ್ಟ, ಕಾಂಗ್ರೆಸ್ ಲಾಭದ ಲೆಕ್ಕ; ಟಿಕೆಟ್ ವಂಚಿತರಿಗೆ ವೇದಿಕೆಯಾಗಲಿದೆಯೇ ಹೊಸ ಪಕ್ಷ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Karnataka Jobs Reservation : ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

VISTARANEWS.COM


on

Karnataka Jobs Reservation
Koo

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Continue Reading

ರಾಜಕೀಯ

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದಕ್ಕೆ ಖಾಸಗಿ ಕಂಪನಿಗಳ ಪ್ರಮುಖರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸ್ಥಳೀಯರಿಂದ ಸಂತಸ ವ್ಯಕ್ತವಾಗಿದೆ. ಈ ಕಾಯಿದೆಯ ಹಿನ್ನೆಲೆ ಮುನ್ನೆಲೆ ಏನೇನು ಎಂಬ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Jobs Reservation
Koo

ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ (Karnataka Jobs Reservation) ಕಡ್ಡಾಯಗೊಳಿಸಿರುವ ಕರಡು ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ (karnataka Cabinet meeting) ಅನುಮೋದನೆ ನೀಡಿಲಾಗಿದ್ದು, ಇದಕ್ಕೆ ಉದ್ಯಮ ರಂಗದ ಪ್ರಮುಖರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ಈ ಕಾಯಿದೆ ಜಾರಿಯಾದರೆ ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗಲಿದೆ ಎಂಬ ಸಂತಸ ಸ್ಥಳೀಯ ಯುವ ಜನತೆಯಿಂದ ವ್ಯಕ್ತವಾಗುತ್ತಿದೆ.

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

Karnataka Jobs Reservation


ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

Karnataka Jobs Reservation


ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ ನೀಡುತ್ತದೆ. ಸ್ಥಳೀಯರಿಗೆ ಮೀಸಲಾತಿ ಜಾರಿಗೆ ತಂದರೆ ಉನ್ನತ ಪ್ರತಿಭೆಗಳು, ಕುಶಲತೆ ಹೊಂದಿರುವವರು ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಿಲ್ಲ ಎಂದು ಖಾಸಗಿ ಕಂಪನಿಗಳು ಈ ಕಾಯಿದೆ ವಿರೋಧಿಸಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಹಿನ್ನಡೆ ಆಗಬಹುದು.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Karnataka Jobs Reservation


ಬೇರೆ ರಾಜ್ಯಗಳಲ್ಲಿ ಈ ನಿರ್ಬಂಧ ಇದೆಯೇ?

ಭಾರತದ ಖಾಸಗಿ ವಲಯದಲ್ಲಿ ಉದ್ಯೋಗಗಳಲ್ಲಿ ಮೀಸಲಾತಿ ಕಾಯ್ದಿರಿಸಿದ ಮೊದಲ ರಾಜ್ಯಗಳಲ್ಲಿ ಆಂಧ್ರ ಪ್ರದೇಶ ಮತ್ತು ಹರಿಯಾಣ ಸೇರಿವೆ. ಎರಡೂ ರಾಜ್ಯಗಳು ಸಂಬಳದ ಮಿತಿಯೊಂದಿಗೆ ಉದ್ಯೋಗಗಳಿಗೆ ಮೀಸಲಾತಿಯನ್ನು ಒದಗಿಸಿವೆ. ಹರಿಯಾಣದಲ್ಲಿ 30,000 ರೂ. ಮಾಸಿಕ ವೇತನದ ಉದ್ಯೋಗಗಳಿಗೆ ಶೇ.75ರಷ್ಟು ಮೀಸಲಾತಿ ಅನ್ವಯಿಸುತ್ತದೆ. ಆಂಧ್ರದಲ್ಲಿ ಶೇ. 75ರಷ್ಟು ಮೀಸಲಾತಿಗೆ ಮಾಸಿಕ ವೇತನದ ಮಿತಿ 50,000 ರೂ. ಆಗಿದೆ.

ಕರ್ನಾಟಕ ಮಸೂದೆಯು ಸಂಬಳದ ಮಿತಿಯನ್ನು ವಿಧಿಸಿಲ್ಲ. ನಿರ್ದೇಶಕರನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಲಯದ ಉದ್ಯೋಗಗಳ ಮೇಲೆ ಕೋಟಾವನ್ನು ವಿಧಿಸುತ್ತದೆ. ಆದರೆ ಆಂಧ್ರಪ್ರದೇಶದಂತೆ ಕರ್ನಾಟಕವೂ ಸಹ ರಾಜ್ಯ ಶಾಸಕಾಂಗವು ಒಮ್ಮೆ ಅಂಗೀಕರಿಸಿದ ಕಾನೂನನ್ನು ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳನ್ನು ಒದಗಿಸಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಯಾವ ರೀತಿ ಎದುರಾಗಲಿದೆ ಕಾನೂನು ತೊಡಕುಗಳು?

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಈ ಕಾನೂನಿಗೆ ಕಾನೂನು ತೊಡಕುಗಳು ಎದುರಾಗಬಹುದು. ಹರಿಯಾಣವು ಸ್ಥಳೀಯ ಅಭ್ಯರ್ಥಿಗಳಿಗೆ ರಾಜ್ಯ ಉದ್ಯೋಗ ಕಾಯಿದೆಯನ್ನು 2020ರಲ್ಲಿ ಜಾರಿಗೊಳಿಸಿತು. ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ 30,000 ರೂ. ವರೆಗಿನ ವೇತನಕ್ಕಾಗಿ ಶೇ. 75ರಷ್ಟು ಮೀಸಲಾತಿಯನ್ನು ಒದಗಿಸಿತು. ಬಳಿಕ ಅದನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಇದು ಕಾನೂನನ್ನು ಸಂವಿಧಾನದ ಭಾಗ IIIರಲ್ಲಿ ಭಾರತದಾದ್ಯಂತ ಉದ್ಯೋಗ ಸ್ವಾತಂತ್ರ್ಯವನ್ನು ಒದಗಿಸುವ ಸಂವಿಧಾನದ 14 ಮತ್ತು 19ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು 2022ರಲ್ಲಿ ಹೈಕೋರ್ಟ್ ಈ ಕಾಯಿದೆಯನ್ನು ವಜಾಗೊಳಿಸಿತ್ತು.

Continue Reading

ಕರ್ನಾಟಕ

Kannada New Movie: ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿದ ರಾಜ್ ಬಿ ಶೆಟ್ಟಿ ನಟನೆಯ ‘ರೂಪಾಂತರ’ ಚಿತ್ರ ಜು.26ಕ್ಕೆ ರಿಲೀಸ್‌

Kannada New Movie: “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ “ರೂಪಾಂತರ” ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್ ಬುದ್ಧ ಫಿಲಂಸ್ ಮೂಲಕ ಈ ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ.

VISTARANEWS.COM


on

Raj B Shetty starrer roopanthara is releasing on July 26
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ರೂಪಾಂತರ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ‌. ಟ್ರೇಲರ್‌ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ (Kannada New Movie) ಜುಲೈ 26 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ರೂಪಾಂತರ” ಚಿತ್ರದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ, ‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೆಟ್ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ.

“ರೂಪಾಂತರ” ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ಅವರೆಲ್ಲಾ “ರೂಪಾಂತರ” ಗೊಳ್ಳುವುದೇ ಚಿತ್ರದ ಕಥೆ. “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್ ಬುದ್ಧ ಫಿಲಂಸ್ ಮೂಲಕ ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದರು.

ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು. ಇದೇ 26 ರಂದು ಚಿತ್ರ ಬಿಡುಗಡೆಯಾಗಲಿದೆ‌. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸುಹಾನ್ ಪ್ರಸಾದ್.

ಐದು ಪ್ರಮುಖ ಪಾತ್ರಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ರಾಜ್ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಮಿಥಿಲೇಶ್ ಎಡವಲತ್.

ಚಿತ್ರದಲ್ಲಿ ನಟಿಸಿರುವ ಅಂಜನ್ ಭಾರದ್ವಾಜ್ ಹಾಗೂ ಲೇಖಾ ನಾಯ್ಡು ಅವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಕುರಿತು ಮಿಥುನ್ ಮುಕುಂದನ್ ಮಾಹಿತಿ ನೀಡಿದರು.

ರಾಜ್ ಬಿ ಶೆಟ್ಟಿ, ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಈ ಚಿತ್ರಕ್ಕಿದೆ. ಭುವನೇಶ್ ಮಣಿವಣ್ಣನ್ ಸಂಕಲನ ಹಾಗೂ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ನಿರ್ಮಾಣ ವಿನ್ಯಾಸವಿರುವ “ರೂಪಾಂತರ ” ಚಿತ್ರಕ್ಕೆ ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.

ಇದನ್ನೂ ಓದಿ: Uttara Kannada News: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಟಿಸಿ: ಡಾ. ರಮಣ ರೆಡ್ಡಿ

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುದ್ದ ಫಿಲಂಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ. “ರೂಪಾಂತರ” ಟ್ರೇಲರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಬಾಲಕೃಷ್ಣ ಅರ್ವನಕರ್ ತಿಳಿಸಿದ್ದಾರೆ.

Continue Reading

ಕರ್ನಾಟಕ

Media Connect: ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

Media Connect: ಬೆಂಗಳೂರಿನಲ್ಲಿ ಏಷ್ಯಾ ಟುಡೆ ಮೀಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪ್ರೈಡ್‌ ಆಫ್‌ ನೇಷನ್‌ ಅವಾರ್ಡ್‌ 2024 ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ಗೆ “ಕರ್ನಾಟಕದ ವರ್ಷದ ಅತ್ಯಂತ ಭರವಸೆಯ ಹೆಲ್ತ್‌ಕೇರ್ ಪಿಆರ್ ಸೇವಾ ಸಂಸ್ಥೆ” ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೀಡಿಯಾ ಕನೆಕ್ಟ್‌ ಸಂಸ್ಥೆಯ ಸಂಸ್ಥಾಪಕಿ ದಿವ್ಯಾ ರಂಗೇನಹಳ್ಳಿ ಅವರಿಗೆ ನೀಡಿ ಗೌರವಿಸಲಾಯಿತು.

VISTARANEWS.COM


on

PR Seva Award for Media Connect in Bengaluru
Koo

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಸೇವೆ ಸಲ್ಲಿಸಿದ ಮೀಡಿಯಾ ಕನೆಕ್ಟ್‌ ಸಂಸ್ಥೆ (Media Connect) ಮತ್ತೊಂದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ನಗರದಲ್ಲಿ ಏಷ್ಯಾ ಟುಡೆ ಮೀಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪ್ರೈಡ್‌ ಆಫ್‌ ನೇಷನ್‌ ಅವಾರ್ಡ್‌ 2024 ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ಗೆ “ಕರ್ನಾಟಕದ ವರ್ಷದ ಅತ್ಯಂತ ಭರವಸೆಯ ಹೆಲ್ತ್‌ಕೇರ್ ಪಿಆರ್ ಸೇವಾ ಸಂಸ್ಥೆ” ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೀಡಿಯಾ ಕನೆಕ್ಟ್‌ ಸಂಸ್ಥೆಯ ಸಂಸ್ಥಾಪಕಿ ದಿವ್ಯಾ ರಂಗೇನಹಳ್ಳಿ ಅವರಿಗೆ ನೀಡಿ ಗೌರವಿಸಲಾಯಿತು. ಬೆಳಗಾವಿ ಸಂಸದ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪ್ರಸಿದ್ಧ ಬಾಲಿವುಡ್ ನಟ ಗುಲ್ಶನ್ ಗ್ರೋವರ್‌, ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಅವರು ದಿವ್ಯಾ ರಂಗೇನಹಳ್ಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ: Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಕಳೆದ ಹತ್ತು ವರ್ಷಗಳಿಂದ ಪಿಆರ್‌ ಕ್ಷೇತ್ರದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೀಡಿಯಾ ಕನೆಕ್ಟ್ ಸಂಸ್ಥೆ ತನ್ನ ಕ್ಲೈಂಟ್‌ಗಳಿಗೆ ಅತ್ಯುತ್ತಮ ಸೇವೆ ನೀಡಿದ್ದಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಈಗಾಗಲೆ ಪಡೆದುಕೊಂಡಿದ್ದು, ಇದೀಗ ಮತ್ತೊಂದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Continue Reading
Advertisement
Virat kohli
ಪ್ರಮುಖ ಸುದ್ದಿ3 hours ago

Virat Kohli : ವಿರಾಟ್​ ಕೊಹ್ಲಿಯನ್ನು ಅವಮಾನಿಸಿದ ಅಮಿತ್​ ಮಿಶ್ರಾ ಬೆಂಡೆತ್ತಿದ ಯಶ್​ ದಯಾಳ್​

PM Narendra Modi
ದೇಶ3 hours ago

PM Narendra Modi: ಚುನಾವಣೆಯಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ರಾ ಮೋದಿ? ನಾಳೆ ಕಾರ್ಯಕರ್ತರ ದಿಢೀರ್ ಸಭೆ?

Jay Shah
ಪ್ರಮುಖ ಸುದ್ದಿ3 hours ago

Jay Shah : ಜಯ್​ ಶಾ ಮುಂದಿನ ಐಸಿಸಿ ಅಧ್ಯಕ್ಷ; ಕೊಲೊಂಬೊ ಸಭೆಯಲ್ಲಿ ತೀರ್ಮಾನ ಸಾಧ್ಯತೆ

Oil Tanker Capsizes
ವಿದೇಶ3 hours ago

Oil Tanker Capsizes:ತೈಲ ತುಂಬಿದ್ದ ಹಡಗು ಮುಳುಗಡೆ; ಕಣ್ಮರೆಯಾಗಿದ್ದ 8 ಭಾರತೀಯರು ಸೇರಿ ಒಟ್ಟು 9 ನಾವಿಕರ ರಕ್ಷಣೆ

ಪ್ರಮುಖ ಸುದ್ದಿ4 hours ago

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

Viral Video
ವೈರಲ್ ನ್ಯೂಸ್4 hours ago

Viral Video: ಹೃದಯಾಘಾತದಿಂದ ಕೆಳಗ್ಗೆ ಬಿದ್ದು ಒದ್ದಾಡುತ್ತಿದ್ದವನ ಪಾಲಿಗೆ ದೇವರಂತೆ ಬಂದ್ಳು! ಈ ಮಹಿಳೆಯ ವಿಡಿಯೋ ಎಲ್ಲೆಡೆ ವೈರಲ್‌

Mosquitoes Bite
ಆರೋಗ್ಯ5 hours ago

Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Actress Hina Khan
Latest5 hours ago

Actress Hina Khan: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

Naxalites Killed
ದೇಶ5 hours ago

Naxalites Killed: 6 ಗಂಟೆ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 12 ನಕ್ಸಲರ ಎನ್‌ಕೌಂಟರ್

Walking Benefits
ಆರೋಗ್ಯ5 hours ago

Walking Benefits: ಊಟದ ಬಳಿಕ ಕಿರು ನಡಿಗೆಯಿಂದ ಸಿಗುವ ಆರೋಗ್ಯ ಲಾಭಗಳು ಏನೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌