ಬ್ರಾಹ್ಮಣರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ರೋಹಿತ್‌ ಚಕ್ರತೀರ್ಥ ಆರೋಪ - Vistara News

ಕರ್ನಾಟಕ

ಬ್ರಾಹ್ಮಣರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ರೋಹಿತ್‌ ಚಕ್ರತೀರ್ಥ ಆರೋಪ

ಪಠ್ಯಪುಸ್ತಕದಲ್ಲಿ ದೋಷವಿದೆ ಎಂದು ಪ್ರತಿಭಟನೆ ನಡೆಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಮತ್ತು ನಮ್ಮ ಸಮಿತಿಯ ಪಠ್ಯವನ್ನು ಓದುವ ವಿವೇಚನೆ ತೋರುತ್ತಿಲ್ಲ ಎಂದು ರೋಹಿತ್‌ ಚಕ್ರತೀರ್ಥ ಆಕ್ಷೇಪಿಸಿದರು.

VISTARANEWS.COM


on

Rakshit Shetty Richard Anthony Produce By Hombale
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತಕ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವವರು ಈ ವಿವಿಧ ಜಾತಿ, ಸಮುದಾಯಗಳನ್ನು ಟಾರ್ಗೆಟ್‌ ಮಾಡಿಕೊಂಡು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಆರೋಪಿಸಿದ್ದಾರೆ. ಬ್ರಾಹ್ಮಣರ ವಿರುದ್ಧ ಅತ್ಯಂತ ಕೇವಲ ಹಾಗೂ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ರೋಹಿತ್‌ ಚಕ್ರತೀರ್ಥ, ಪಠ್ಯಪುಸ್ತಕ ಕುರಿತಂತೆ ವಿರೋಧಿಗಳು ಒಂದೊಂದೆ ಸಮುದಾಯವನ್ನು ಕೆರಳಿಸುತ್ತಿದ್ದಾರೆ. ಈ ಹಿಂದೆ ಲಿಂಗಾಯತ, ಬಿಲ್ಲವ, ಒಕ್ಕಲಿಗ, ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಈಗ ದಲಿತರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ನೂರಾರು ಪೋಸ್ಟರ್‌ಗಳನ್ನು ಕ್ರಿಯೇಟ್‌ ಮಾಡುತ್ತಿದ್ದಾರೆ. ಸಮಿತಿ ಹೆಸರಿನಲ್ಲೆ ಬರೆಯುತ್ತಿದ್ದಾರೆ, ಇದೆಲ್ಲವೂ ಸತ್ಯಕ್ಕೆ ದೂರವಾದದ್ದು. ಕಾಂಗ್ರೆಸ್‌ ಪಕ್ಷದ ನಾಯಕರ ಟ್ವೀಟ್‌, ಪೋಸ್ಟರ್‌ಗಳು ನಮಗೆ ಹಾಗೂ ವೈಯಕ್ತಿಕವಾಗಿ ನನಗೆ ಸಂಬಂಧಪಟ್ಟದ್ದಲ್ಲ ಎಂದರು.

ಇದನ್ನೂ ಓದಿ | ರೋಹಿತ್‌ ಚಕ್ರತೀರ್ಥ ಸಮಿತಿ ಮೇಲಿನ ಆರೋಪಕ್ಕೆ ಸಚಿವ ನಾಗೇಶ್‌ರವರ ಸಂಪೂರ್ಣ ವರದಿ ಇಲ್ಲಿದೆ

ಪ್ರತಿಭಟನೆ ಮಾಡುವವರು ವಿವೇಚನೆ ಮಾಡುತ್ತಿಲ್ಲ

ತಮ್ಮ ತೇಜೋವಧೆ ಮಾಡುವ ಹಾಗೂ ಹಣಿಯುವ ಕೆಲಸ ಮಾಡಲಾಗುತ್ತಿದೆ ಎಂದು ಶನಿವಾರ ಬೆಳಗ್ಗೆಯಷ್ಟೆ ಆರೋಪಿಸಿದ್ದ ಚಕ್ರತೀರ್ಥ ಇದೀಗ ಮತ್ತಷ್ಟು ವಿವರ ನೀಡಿದ್ದಾರೆ. ಪಠ್ಯಪುಸ್ತಕದಲ್ಲಿ ತಪ್ಪುಗಳಾಗಿವೆ, ಅವಮಾನಿಸಲಾಗಿದೆ ಎಂದು ಆರೋಪ ಮಾಡುತ್ತಿರುವವರು ಸತ್ಯಾಸತ್ಯತೆಯನ್ನು ವಿವೇಚನೆ ಮಾಡುತ್ತಿಲ್ಲ ಎಂದು ರೋಹಿತ್‌ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆ ಮಾಡುವವರು ಸತ್ಯಾಸತ್ಯತೆ ವಿವೇಚನೆ ಮಾಡುತ್ತಿಲ್ಲ. ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ನಮ್ಮ ಪಠ್ಯ ಇಟ್ಟುಕೊಂಡು ನೋಡಿದ್ದರೂ ಅವರಿಗೆ ವಿಷಯ ಸ್ಪಷ್ಟವಾಗುತ್ತಿತ್ತು. ಆದರೆ ಇವರು ಅದನ್ನು ನೋಡಲು ತಯಾರಿಲ್ಲ. ಕುವೆಂಪು ಅವರ ಪಠ್ಯದಲ್ಲೂ ಹೀಗೆಯೇ ಆಗಿದೆ. ಆದರೆ ಇವೆಲ್ಲವನ್ನೂ ನೋಡದೆ ವಿವಾದ ಮಾಡುತ್ತಿದ್ದಾರೆ. ಯಾರೂ ನಿಜವಾದ ವಿಷಯವನ್ನೇ ನೋಡುತ್ತಿಲ್ಲ ಎಂದರು.

ಸರ್ಕಾರ ಗಂಭೀರವಾಗಬೇಕಿತ್ತು

ಪಠ್ಯಪುಸ್ತಕ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕಿತ್ತು ಎಂದು ರೋಹಿತ್‌ ಚಕ್ರತೀರ್ಥ ಹೇಳಿದರು. ಕುವೆಂಪು ಅವರ ಕುರಿತು ತಪ್ಪಿ ಮಾಹಿತಿ ಹರಿಬಿಡುತ್ತಿದ್ದಾಗ, ಇದನ್ನು ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಗಂಭೀರವಾಗಿ ತನಿಖೆ ಮಾಡಬೇಕಿತ್ತು. ಈ ರೀತಿ ಸರ್ಕಾರ ಗಂಭೀರವಾಗಿ ತನಿಖೆ ಮಾಡಿದೆಯೋ ಇಲ್ಲವೋ ಗೊತ್ತಿಲ್ಲ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ರೋಹಿತ್‌ ಚಕ್ರತೀರ್ಥ, ಸಿದ್ದರಾಮಯ್ಯನವರಿಗೆ ಕುವೆಂಪು ಅವರ ಬಗ್ಗೆ ಅಭಿಮಾನ ಇದ್ದಿದ್ದರೆ ಈ ಹಿಂದೆಯೇ ತನಿಖೆಗೆ ನೀಡಬೇಕಿತ್ತು. ನನ್ನನ್ನು ಬಲಿಪಶು ಮಾಡಿ ದಾಳಿ ಮಾಡುತ್ತಿದ್ದಾರೆ. ನಾನು ಬಲಿಪಶುವಾಗಿದ್ದೇನೆ. ಇವರೆಲ್ಲರೂ ಒಂದು ಜಾತಿಯನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಈ ಸಮಿತಿಯ ಮೂಲಕ ಬ್ರಾಹ್ಮಣ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಸಮುದಾಯವನ್ನು ಕೇವಲವಾಗಿ, ಅವಹೇಳನಕಾರಿಯಾಗಿ ಚಿತ್ರಿಸುತ್ತಿದ್ದಾರೆ. ನಾನು ಎಂದಿಗೂ ಬ್ರಾಹ್ಮಣ ಪರ ಅಥವಾ ವಿರೋಧ ಮಾತನಾಡಿದವನಲ್ಲ. ಬ್ರಾಹ್ಮಣ ಎನ್ನುವ ಸಿಂಪಥಿಯೂ ನನಗೆ ಬೇಕಾಗಿಲ್ಲ. ಆದರೆ ಈ ವಿಚಾರ ಹೇಳಲೇಬೇಕಿದೆ ಎಂದರು.

ಇದನ್ನೂ ಓದಿ | ರೋಹಿತ್‌ ಚಕ್ರತೀರ್ಥ ಸಮಿತಿ ಒಳ್ಳೆಯ ಕೆಲಸ ಮಾಡಿದೆ, ಸಮಿತಿಯನ್ನು ವಿಸರ್ಜಿಸಲಾಗಿದೆ !: CM ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

Electric shock : ಕರೆಂಟ್‌ ಶಾಕ್‌ನಿಂದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲೆಗೆಂದು ಹೋದವಳು ಮಸಣ ಸೇರಿದ್ದಾಳೆ. ಬಾಲಕಿಯ ಅಗಲಿಕೆಗೆ ಇಡೀ ಊರಿಗೆ ಊರೇ ದುಃಖದಲ್ಲಿದೆ.

VISTARANEWS.COM


on

By

Electric shock in vijayanagara
Koo

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.

ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟವಳಿ. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

ಮಾಸ್ಕೋ: ರಷ್ಯಾದಲ್ಲಿ ಘೋರ ದುರಂತವೊಂದು ನಡೆದಿದ್ದು, ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Drown In River). ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಂಟ್‌ ಪೀಟರ್ಸ್‌ಬರ್ಗ್‌ (St. Petersburg) ಬಳಿ ನದಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ದೃಢಪಡಿಸಿದೆ. ಶವಗಳನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ರಷ್ಯಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದೆ.

ʼʼಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯ ಮೃತಪಟ್ಟಿದ್ದು, ಇವರ ವಯಸ್ಸು ಅಂದಾಜು 18-20 ವರ್ಷ. ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿ(Novgorod State University)ಯಲ್ಲಿ ಅಧ್ಯಯನ ಮಾಡುತ್ತಿದ್ದರುʼʼ ಎಂದು ಮೂಲಗಳು ವರದಿ ಮಾಡಿವೆ.

ದುರಂತ ನಡೆದಿದ್ದು ಹೇಗೆ?

ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ. ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮಗಳು ಹೇಳಿವೆ. “ಸಾಧ್ಯವಾದಷ್ಟು ಬೇಗ ಶವಗಳನ್ನು ಸಂಬಂಧಿಕರಿಗೆ ಕಳುಹಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಅಪಾಯದಿಂದ ಪಾರಾದ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು

ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿತ್ತು.

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದರು. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದರು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿತ್ತು. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿತ್ತು.

ಆರ್ಯನ್‌ ಜೋಷಿ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡು, ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Bhavani Revanna: ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

VISTARANEWS.COM


on

bhavani revanna Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯ ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಆರೋಪಿಯಾಗಿರುವ, ಸದ್ಯಕ್ಕೆ ತಲೆ ಮರೆಸಿಕೊಂಡಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಕೋರ್ಟ್‌ ಮಧ್ಯಂತರ ಜಾಮೀನು (Interim Bail) ನೀಡಿದೆ. ಇದರಿಂದ ಭವಾನಿ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರಲ್ಲಿ ಇಂದು ಟ್ವಿಸ್ಟ್‌ ಇದೆ. ಅದೇನೆಂದರೆ, ಇಂದು ಮಧ್ಯಾಹ್ನ 1 ಗಂಟೆಗೆ ಅವರು ಎಸ್‌ಐಟಿ (SIT) ಮುಂದೆ ಹಾಜರಾಗಬೇಕಿದೆ.

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿದೆ. ಆದರೆ ಇಂದು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು ಎಂದಿದೆ. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿದೆ.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಭವಾನಿ ಅವರಿಗೆ ಕೋರ್ಟ್‌ ಕೆಲವು ಸೂಚನೆಗಳನ್ನು ನೀಡಿದೆ. ಅದರಂತೆ ಅವರು ನಡೆದುಕೊಳ್ಳಬೇಕಿದೆ. ಅವುಗಳು ಹೀಗಿವೆ:
1) ಭವಾನಿ ಅವರು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಬೇಕು.
2) ವಿಚಾರಣೆಯ ನಂತರ ಐದು ಗಂಟೆಯ ಬಳಿಕ ಅವರನ್ನು ಇಟ್ಟುಕೊಳ್ಳಬಾರದು.
3) ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು.
4) ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು.

ಇದೀಗ ಕುತೂಹಲದ ಅಂಶವೆಂದರೆ ಇಂದು 1 ಗಂಟೆಗೆ ಅವರು ಎಸ್‌ಐಟಿ ಮುಂದೆ ಹಾಜರಾಗ್ತಾರಾ ಎಂಬುದು. ಬೆಂಗಳೂರಿನಲ್ಲೇ ಇದ್ದರೆ ಅವರು ಎಸ್‌ಐಟಿ ಮುಂದೆ ಹಾಜರಾಗಬಹುದು. ಆದರೆ ಬೆಂಗಳೂರಿನಿಂದ ದೂರ ಎಲ್ಲಾದರೂ ಅಥವಾ ಹೊರರಾಜ್ಯದಲ್ಲಿ ಇದ್ದರೆ ಒಂದು ಗಂಟೆ ವೇಳೆಗೆ ಆಗಮಿಸುವುದು ಕಷ್ಟವಾಗಲಿದೆ. ಅಷ್ಟು ಹೊತ್ತಿಗೆ ಬರದಿದ್ದರೆ ಅದೇ ಕಾರಣ ನೀಡಿ ಅವರನ್ನು ಎಸ್‌ಐಟಿ ಬಂಧಿಸಬಹುದಾಗಿದೆ.

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗಿತ್ತು. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆದಿತ್ತು. ಅವರ ಮೊಬೈಲ್ ಲೊಕೇಶನ್‌ ಟವರ್ ಡಂಪ್, ಸಿಡಿಆರ್ ಪರಿಶೀಲನೆ ನಡೆಸಲಾಗಿತ್ತು.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

Continue Reading

ಮೈಸೂರು

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Tragedy Case : ತೆಂಗಿರ ಮರದಿಂದ ಬಿದ್ದು ಯುವಕನೊರ್ವ ದಾರುಣ ಅಂತ್ಯ ಕಂಡಿದ್ದಾನೆ. ಮರವೇರಿ ಎಳೆನೀರು ಕೀಳುವಾಗ ಕಾಲು ಜಾರಿದೆ. ನಿಯಂತ್ರಣ ಸಿಗದೇ ಕೆಳಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

By

Mysuru Tragedy
Koo

ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕನೊರ್ವ ಮೃತಪಟ್ಟಿದ್ದಾನೆ. ಎಳನೀರು ಕೀಳುವಾಗ ಅವಘಡ (Mysuru tragedy) ಸಂಭವಿಸಿದೆ. ಮೈಸೂರಿನ ಕೆಆರ್ ನಗರದ ಮುಂಜನಹಳ್ಳಿಯಲ್ಲಿ ಘಟನೆ (Tragedy Case) ನಡೆದಿದೆ. ಚೇತನ್ (27) ಮೃತ ದುರ್ದೈವಿ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಚೇತನ್ ಜಮೀನಿಗೆ ಹೋಗಿದ್ದ. ಮರವೇರಿ ಎಳನೀರು ಕೀಳುವಾಗ ಕಾಲು ಜಾರಿದೆ. ಈ ವೇಳೆ ಮರದ ಮೇಲಿಂದ ಬಿದ್ದ ರಭಸಕ್ಕೆ ಚೇತನ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಚೇತನ್‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೆಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಆರ್‌ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Rahul Gandhi: 42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲರು ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು.

VISTARANEWS.COM


on

defamation case rahul gandhi
Koo

ಬೆಂಗಳೂರು: ಬಿಜೆಪಿ (BJP) ಹೂಡಿರುವ ಮಾನನಷ್ಟ ಮೊಕದ್ದಮೆ (Defamation case) ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಗೆ (Rahul Gandhi) ಷರತ್ತುಬದ್ಧ ಜಾಮೀನು (Bail) ದೊರೆತಿದೆ. ಪ್ರಕರಣದ ವಿಚಾರಣೆಯನ್ನು ಜೂನ್‌ 30ಕ್ಕೆ ಮುಂದೂಡಲಾಗಿದೆ.

42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲ ನಿಶಾನ್ ಕುಮಾರ್ ಶೆಟ್ಟಿ ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು. ಕಾಂಗ್ರೆಸ್‌ ಮುಖಂಡ ಡಿ.ಕೆ ಸುರೇಶ್‌ (DK Suresh) ಅವರು ರಾಹುಲ್‌ ಗಾಂಧಿಗೆ 75 ಲಕ್ಷ ರೂಪಾಯಿ ಮೌಲ್ಯದ ಶ್ಯೂರಿಟಿ ಒದಗಿಸಿದರು. ಬಾಂಡ್‌ ಕಾಗದಗಳಿಗೆ ಸಹಿ ಹಾಕಿದ ಬಳಿಕ ರಾಹುಲ್‌ ಕೋರ್ಟ್‌ನಿಂದ ತೆರಳಿದರು. ಈ ಸಂದರ್ಭದಲ್ಲಿ ಕೋರ್ಟ್‌ನಲ್ಲಿ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸಹ ಉಪಸ್ಥಿತರಿದ್ದರು.

ರಾಹುಲ್‌ ಮೇಲೆ ಕೋರ್ಟ್‌ ಗರಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕಳೆದ ಬಾರಿ ಇದರ ವಿಚಾರಣೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಇವರಿಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಆದರೆ ರಾಹುಲ್‌ ಗಾಂಧಿ ಆಗಮಿಸಿರಲಿಲ್ಲ. ಇದರಿಂದ ಗರಂ ಆಗಿದ್ದ ನ್ಯಾಯಾಧೀಶರು, ಮುಂದಿನ ಬಾರಿ ರಾಹುಲ್‌ ಖುದ್ದು ಹಾಜರಿರುವಂತೆ ನಿರ್ದೇಶನ ನೀಡಿತ್ತು.

ಈ ಪ್ರಕರಣದ ದಾಖಲಿಸಿರುವ ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವಪ್ರಸಾದ್, “ಸಾಮಾನ್ಯರಂತೆ ರಾಹುಲ್‌ ಅವರಿಗೂ ಕಾನೂನು ಒಂದೇ” ಎಂದು ಹೇಳಿದ್ದಾರೆ. “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸುಳ್ಳು ಜಾಹೀರಾತು ನೀಡಿದ್ದರು. ರಾಹುಲ್‌ ಗಾಂಧಿ ಅದನ್ನು ರಿಟ್ವೀಟ್ ಮಾಡಿಕೊಂಡರು. ಹಾಗಾಗಿ ಮೂವರ ವಿರುದ್ಧ ದೂರು ನೀಡಲಾಗಿತ್ತು. ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ಹೋರಾಟ ಮಾಡುವ ಕ್ಷಮತೆ ಇದೆ. ನಮ್ಮ ವಿರುದ್ಧ ಹಾಕಿರುವ ಜಾಹೀರಾತು ಸುಳ್ಳು. ಅವರು ಅದಕ್ಕೆ ದಾಖಲೆ ಕೊಡಬೇಕು. ಜನರ ದಾರಿ ತಪ್ಪಿಸಬಹುದು, ಆದರೆ ಕೋರ್ಟ್ ದಾರಿ ತಪ್ಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

Continue Reading
Advertisement
Posani Krishna Murali End of Career In Tollywood
ಟಾಲಿವುಡ್27 mins ago

Posani Krishna Murali: ಟಾಲಿವುಡ್‌ನಲ್ಲಿ ಪೋಸಾನಿ ಕೃಷ್ಣ ಮುರಳಿ ವೃತ್ತಿಜೀವನ ಅಂತ್ಯ?

Electric shock in vijayanagara
ವಿಜಯನಗರ31 mins ago

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

bhavani revanna Prajwal Revanna Case
ಪ್ರಮುಖ ಸುದ್ದಿ40 mins ago

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Mysuru Tragedy
ಮೈಸೂರು1 hour ago

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Drown In Rive
ವಿದೇಶ1 hour ago

Drown In River: ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

defamation case rahul gandhi
ಪ್ರಮುಖ ಸುದ್ದಿ1 hour ago

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Write a story for a new movie one lakh rupees Win a prize kishore megalamane movie
ಸ್ಯಾಂಡಲ್ ವುಡ್1 hour ago

Kannada New Movie: ಹೊಸ ಸಿನಿಮಾಗೆ ಕಥೆ ಬರೆಯಿರಿ: 1 ಲಕ್ಷ ರೂ. ಬಹುಮಾನ ಗೆಲ್ಲಿರಿ!

Bajrangi Bhaijaan 2 Kabir Khan Says Sequel Of Salman Khan
ಬಾಲಿವುಡ್1 hour ago

Bajrangi Bhaijaan 2: `ಬಜರಂಗಿ ಭಾಯಿಜಾನ್ 2ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್‌!

road Accident in vijayanagar
ವಿಜಯನಗರ2 hours ago

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

uttarakhand trekking tragedy 2
ಕರ್ನಾಟಕ2 hours ago

Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌