ಮಾಜಿ ಪ್ರಧಾನಿಗಳ ಸಮಾಧಿಗೆ ಗೌರವ ಸಲ್ಲಿಸಿದ ರಾಹುಲ್ ಗಾಂಧಿ ಪಿ.ವಿ.ನರಸಿಂಹ ರಾವ್​​ರನ್ನು​​ ಮರೆತರು; ಪ್ರಾಮಾಣಿಕತೆ ಪ್ರಶ್ನಿಸಿದ ಬಿಜೆಪಿ - Vistara News

ದೇಶ

ಮಾಜಿ ಪ್ರಧಾನಿಗಳ ಸಮಾಧಿಗೆ ಗೌರವ ಸಲ್ಲಿಸಿದ ರಾಹುಲ್ ಗಾಂಧಿ ಪಿ.ವಿ.ನರಸಿಂಹ ರಾವ್​​ರನ್ನು​​ ಮರೆತರು; ಪ್ರಾಮಾಣಿಕತೆ ಪ್ರಶ್ನಿಸಿದ ಬಿಜೆಪಿ

ಭಾರತ್ ಜೋಡೋ ಯಾತ್ರೆ ನವೆಂಬರ್​ ತಿಂಗಳಲ್ಲಿ ತೆಲಂಗಾಣದಲ್ಲಿ ನಡೆದಿತ್ತು. ಆ ವೇಳೆ ರಾಹುಲ್​ ಗಾಂಧಿಯವರು ನೆಕ್ಲೇಸ್​​ ರಸ್ತೆಯಲ್ಲಿದ್ದ ಇಂದಿರಾಗಾಂಧಿ ಪ್ರತಿಮೆಗೆ ಹೂವು ಹಾಕಿ, ಗೌರವ ಅರ್ಪಿಸಿದ್ದರು. ಆದರೆ ಅಲ್ಲೇ ಸಮೀಪದಲ್ಲಿರುವ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್​ ಅವರ ಸಮಾಧಿಗೆ ಭೇಟಿ ಕೊಟ್ಟಿರಲಿಲ್ಲ.

VISTARANEWS.COM


on

Rahuhl Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತ್ ಜೋಡೋ ಯಾತ್ರೆ ನವದೆಹಲಿಗೆ ಕಾಲಿಟ್ಟ ಬೆನ್ನಲ್ಲೇ ರಾಹುಲ್​ ಗಾಂಧಿಯವರು ಒಂದೇ ಸಮ ದೇಶದ ಮಾಜಿ ಪ್ರಧಾನಮಂತ್ರಿಗಳ ಸಮಾಧಿ ಸ್ಥಳಗಳಿಗೆ ಭೇಟಿ ಕೊಟ್ಟು ಪುಷ್ಪನಮನ ಸಲ್ಲಿಸುತ್ತಿದ್ದಾರೆ. ಇಂದಿರಾ ಗಾಂಧಿಯವರ ಸಮಾಧಿಯಿರುವ ಶಕ್ತಿ ಸ್ಥಳ, ಜವಾಹರ್​ ಲಾಲ್​ ನೆಹರೂ ಸಮಾಧಿ ಇರುವ ಶಾಂತಿ ವನ, ರಾಜೀವ್ ಗಾಂಧಿಯನ್ನು ಸಮಾಧಿ ಮಾಡಲಾದ ವೀರಭೂಮಿ, ವಿಜಯ್​ ಘಾಟ್​​ನಲ್ಲಿರುವ ಲಾಲ್​ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕ ಮತ್ತು ಸದೈವ ಅಟಲ್​​​ನಲ್ಲಿರುವ ಅಟಲ್​ ಬಿಹಾರಿ ವಾಜಪೇಯಿ ಸಮಾಧಿಗೆ ಭೇಟಿ ಕೊಟ್ಟು ಗೌರವ ಸಲ್ಲಿಸಿದ್ದಾರೆ. ಇದರೊಂದಿಗೆ ರಾಜ್​​ಘಾಟ್​​ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೂ ಭೇಟಿಕೊಟ್ಟು ನಮನ ಸಲ್ಲಿಸಿದ್ದಾರೆ.

ಆದರೆ ರಾಹುಲ್​ ಗಾಂಧಿಯವರ ಈ ನಡೆಯಲ್ಲಿ ಎಷ್ಟರಮಟ್ಟಿಗೆ ಪ್ರಾಮಾಣಿಕತೆ ಇದೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ನಿಜ ಹೇಳಬೇಕೆಂದರೆ ರಾಹುಲ್ ಗಾಂಧಿ ನಿಷ್ಕಪಟವಾಗಿ ಮಾಜಿ ಪ್ರಧಾನಿಗಳ ಸಮಾಧಿಗೆ ಗೌರವ ಸಲ್ಲಿಸುತ್ತಿಲ್ಲ. ಅವರ ನೂರಾರು ವೇಷ-ನಾಟಕಗಳಲ್ಲಿ ಇದೂ ಒಂದು. ರಾಹುಲ್​ ಗಾಂಧಿಯಲ್ಲಿ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಅವರು ಹೈದರಾಬಾದ್​​ನಲ್ಲಿ ಭಾರತ್​ ಜೋಡೋ ಯಾತ್ರೆ ನಡೆಸುತ್ತಿದ್ದಾಗ ಅಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್​ ಅವರ ಸಮಾಧಿಸ್ಥಳವಾದ ಜ್ಞಾನ ಭೂಮಿಗೂ ಭೇಟಿಕೊಡುತ್ತಿದ್ದರು ಎಂದು ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ನವೆಂಬರ್​ ತಿಂಗಳಲ್ಲಿ ತೆಲಂಗಾಣದಲ್ಲಿ ನಡೆದಿತ್ತು. ಆ ವೇಳೆ ರಾಹುಲ್​ ಗಾಂಧಿಯವರು ನೆಕ್ಲೇಸ್​​ ರಸ್ತೆಯಲ್ಲಿದ್ದ ಇಂದಿರಾಗಾಂಧಿ ಪ್ರತಿಮೆಗೆ ಹೂವು ಹಾಕಿ, ಗೌರವ ಅರ್ಪಿಸಿದ್ದರು. ಆದರೆ ಅಲ್ಲೇ ಸಮೀಪದಲ್ಲಿರುವ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್​ ಅವರ ಸಮಾಧಿಗೆ ಭೇಟಿ ಕೊಟ್ಟಿರಲಿಲ್ಲ. ರಾಹುಲ್​ ಗಾಂಧಿಯವರ ಈ ವರ್ತನೆಯನ್ನು ಆಗ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಕೆ. ಲಕ್ಷ್ಮಣ್​ ಅವರು ಖಂಡಿಸಿದ್ದರು. ‘ರಾಹುಲ್ ಗಾಂಧಿ ಯಾಕೆ ಪಿ.ವಿ. ನರಸಿಂಹರಾವ್​ ಸ್ಮಾರಕಕ್ಕೆ ಭೇಟಿ ಕೊಡಲಿಲ್ಲ? ಇದೇನಾ ಕಾಂಗ್ರೆಸ್ ಸಂಸ್ಕೃತಿ? ರಾಹುಲ್ ಗಾಂಧಿ ಕ್ಷಮೆ ಕೇಳಬೇಕು’ ಎಂದು ಹೇಳಿದ್ದರು. ಈಗ ಅದೇ ವಿಷಯವನ್ನು ಪ್ರಸ್ತಾಪ ಮಾಡಿರುವ ಬಿಜೆಪಿ ನಾಯಕ ಅಮಿತ್ ಮಾಳವಿಯಾ ‘ರಾಹುಲ್​ ಗಾಂಧಿಯದ್ದು ಪಕ್ಕಾ ಬೂಟಾಟಿಕೆ’ ಎಂದಿದ್ದಾರೆ.

ಪಿ.ವಿ.ನರಸಿಂಹ್​ ರಾವ್​ ಅವರನ್ನು ಸೋನಿಯಾ ಗಾಂಧಿ ಸರಿಯಾಗಿ ನಡೆಸಿಕೊಂಡಿಲ್ಲ. ಅವರ ಮೃತದೇಹವನ್ನು ಎಐಸಿಸಿ ಪ್ರಧಾನ ಕಚೇರಿಯೊಳಗೆ ಬಿಡಲಿಲ್ಲ. ನರಸಿಂಹ್ ​ರಾವ್​ ಅವರನ್ನು ಸೋನಿಯಾ ಗಾಂಧಿ ಹೊಗಳಿದ್ದು ತುಂಬ ಕಡಿಮೆ ಎಂಬೆಲ್ಲ ವಿಷಯಗಳು ಈಗಲೂ ಚರ್ಚೆಗೆ ಬರುತ್ತವೆ. ಪಿವಿ ನರಸಿಂಹ್​ ರಾವ್ ವಿಚಾರದಲ್ಲಿ ಸೋನಿಯಾ ಗಾಂಧಿ ಬಗ್ಗೆ ಈಗಾಗಲೇ ಅಸಮಾಧಾನ ಇರುವ ನಡುವೆಯೇ ರಾಹುಲ್​ ಗಾಂಧಿ ಕೂಡ ಅವರೊಬ್ಬರ ಸಮಾಧಿಗೆ ಭೇಟಿ ನೀಡದೆ, ಮತ್ತೆ ಆಡುವವರ ಬಾಯಿಗೆ ಆಹಾರವಾಗಿದ್ದಾರೆ.

ಇದನ್ನೂ ಓದಿ: ವಾಜಪೇಯಿ ಬ್ರಿಟಿಷರಿಗೆ ಮಾಹಿತಿ ನೀಡುತ್ತಿದ್ದರು ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್​ ಮುಖಂಡ; ಅಟಲ್​​ ಸಮಾಧಿಗೆ ನಮಿಸಿದ ರಾಹುಲ್ ಗಾಂಧಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024: ಶನಿವಾರ ಸಂಜೆ ಏಳನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳ (Exit Poll 2024) ಪ್ರಕಾರ ಕೇರಳದಲ್ಲಿ 2ರಿಂದ 3 ಮತ್ತು ತಮಿಳುನಾಡಿನಲ್ಲಿ 2-4 ಸ್ಥಾನಗಳು ಎನ್​ಡಿಎಗೆ ದೊರಕಲಿವೆ. ಒಂದು ವೇಳೆ ಇದು ಸತ್ಯವಾದರೆ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ತಾವು ಪಟ್ಟ ಶ್ರಮ ಸಾರ್ಥಕವಾದಂತೆ.

VISTARANEWS.COM


on

Exit Poll 2024
Koo

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಯಲ್ಲಿ ಮತ್ತೊಂದು ಮಹತ್ಸಾಧನೆ ಮಾಡಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಅವರ ನೇತೃತ್ವದ ಬಿಜೆಪಿ/ ಎನ್​ಡಿಎ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲಿವೆ. ಅವುಗಳೆಂದರೆ ತಮಿಳುನಾಡು ಮತ್ತು ಕೇರಳ. ಶನಿವಾರ ಸಂಜೆ ಏಳನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳ (Exit Poll 2024) ಪ್ರಕಾರ ಕೇರಳದಲ್ಲಿ 2ರಿಂದ 3 ಮತ್ತು ತಮಿಳುನಾಡಿನಲ್ಲಿ 2-4 ಸ್ಥಾನಗಳು ಎನ್​ಡಿಎಗೆ ದೊರಕಲಿವೆ. ಒಂದು ವೇಳೆ ಇದು ಸತ್ಯವಾದರೆ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ತಾವು ಪಟ್ಟ ಶ್ರಮ ಸಾರ್ಥಕವಾದಂತೆ. ಜತೆಗೆ ಆಂಧ್ರ ಪ್ರದೇಶದಲ್ಲೂ 22 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಏಪ್ರಿಲ್ 19, 2024ರಂದು ನಡೆದಿತ್ತು. ಇದು ಹಾಲಿ ಚುನಾವಣೆಯ ಮೊದಲ ಹಂತದಲ್ಲಿ ಮತದಾನ. 2019 ರ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ 39 ಲೋಕಸಭಾ ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅವು ಆಯ್ದ ಪ್ರದೇಶಗಳಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್​ಡಿಎಯಿಂದ ಪ್ರತಿರೋಧ ಎದುರಿಸಿದ್ದಾರೆ. ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ ವ್ಯಾಪಕ ಪ್ರಚಾರ ನಡೆಸಿದೆ. ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ಭಾಷಿಕರ ರಾಜ್ಯಕ್ಕೆ 9 ಬಾರಿ ಭೇಟಿ ನೀಡಿದ್ದರು. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿದೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ. ಇದರಲ್ಲಿ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅವರ ಪಾತ್ರ ದೊಡ್ಡದಿದೆ.

ಕೇರಳದಲ್ಲೂ ಖಾತೆ ಓಪನ್​

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: Exit Poll 2024: ಮುaಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 2019 ರ ಚುನಾವಣೆಯಲ್ಲಿ, ಐಎನ್​ಸಿಎ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ, ಎನ್​​ಡಿಎ ಒಂದೂ ಸ್ಥಾನ ಗೆದ್ದಿರಲಿಲ್ಲ. ಇಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಸಿಪಿಐ (ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ನಡುವೆ ನೇರ ಸ್ಪರ್ಧೆ ಇದೆ. ಸಮೀಕ್ಷೆಗಳ ಪ್ರಕಾ ಯುಡಿಎಫ್​​ಗೆ 17-19 ಸ್ಥಾನಗಳು ಮತ್ತು ಎನ್​ಡಿಎಗೆ 1-3 ಸ್ಥಾನಗಳು ಸಿಗಲಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದಕ್ಷಿಣದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ಬಲವಾದ ಪ್ರಯತ್ನ ನಡೆಸಿದ್ದರು. ಇಲ್ಲಿ ಮಾಜಿ ಸಚಿವ ರಾಜೀವ್​ ಚಂದ್ರಶೇಖರ್​ ಅವರು ಶಶಿ ತರೂರು ವಿರುದ್ಧ ತಿರುವನಂತಪುರ ಹಾಗೂ ಸುರೇಂದ್ರನ್ ಅವರು ರಾಹುಲ್ ಗಾಂಧಿ ವಿರುದ್ಧ ವಯನಾಡ್​ನಲ್ಲಿ ಸ್ಪರ್ಧಿಸಿದ್ದಾರೆ. ಅದೇ ರೀತಿ ಸಿನಿಮಾ ನಟ ಸುರೇಶ್ ಗೋಪಿ ಕೂಡ ತ್ರಿಶೂರ್​ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮತ್ತು ಪುದುಚೇರಿ ಒಂದು ಸ್ಥಾನವು 130 ಸಂಸದರನ್ನು ಕೆಳಮನೆಗೆ ಕಳುಹಿಸುತ್ತದೆ. 2019 ರಲ್ಲಿ ಬಿಜೆಪಿ ಈ ಸ್ಥಾನಗಳಲ್ಲಿ ಕೇವಲ 29 ಸ್ಥಾನಗಳನ್ನು ಗಳಿಸಿದೆ. ಅದರಲ್ಲಿ 25 ಕರ್ನಾಟಕದಿಂದ ಬಂದಿತ್ತು. ತೆಲಂಗಾಣದಿಂದ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಪಕ್ಷವು ತನ್ನ ಖಾತೆ ತೆರೆಯಲು ವಿಫಲವಾಗಿತ್ತು. ಈ ಬಾರಿ ಆಂಧ್ರದಲ್ಲಿಯೂ ಖಾತೆ ತೆರೆಯುವ ಸಾಧ್ಯತೆಗಳಿವೆ.

Continue Reading

ದೇಶ

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

Exit Poll 2024: ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ? ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದಕ್ಕೆ ಮತಗಟ್ಟೆ ಸಮೀಕ್ಷೆ ದಿಕ್ಸೂಚಿಯಾಗಿದೆ. ಆ ಮತಗಟ್ಟೆ ಸಮೀಕ್ಷೆಯ ಮಾಹಿತಿ ಇಲ್ಲಿದೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯಗೊಂಡಿದ್ದು, ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿವೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳ (Exit Poll 2024) ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇನ್ನು, ಎಲ್ಲ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ (India Bloc) ಹಿನ್ನಡೆಯಾಗಲಿದೆ ಎಂದೇ ಹೆಚ್ಚಿನ ಸಮೀಕ್ಷಾ ವರದಿಗಳು ತಿಳಿಸಿವೆ. ಇನ್ನು, ನರೇಂದ್ರ ಮೋದಿ (Narendra Modi) ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಹಾಗಾದರೆ, ರಾಜ್ಯವಾರು ಫಲಿತಾಂಶ ಏನಾಗಲಿದೆ? ಸಮೀಕ್ಷೆಗಳು ಹೇಳಿದ್ದೇನು? ಇಲ್ಲಿದೆ ಸಂಕ್ಷಿಪ್ತ ವರದಿ.

ಗುಜರಾತ್‌ನಲ್ಲಿ ಕ್ಲೀನ್‌ ಸ್ವೀಪ್‌

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿಯು ಎಲ್ಲ 26ಕ್ಕೆ 26 ಕ್ಷೇತ್ರಗಳನ್ನೂ ತನ್ನ ಮಡಿಲಿಗೆ ಸೆಳೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ. ಟಿವಿ-ಸಿಎನ್‌ಎಕ್ಸ್‌ ಎಕ್ಸಿಟ್‌ ಪೋಲ್‌ ಪ್ರಕಾರ ಬಿಜೆಪಿಯು ಎಲ್ಲ ಕ್ಷೇತ್ರಗಳಲ್ಲಿ ಜಯಿಸಲಿದೆ. ಈಗಾಗಲೇ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಕಮಲ ಅರಳಲಿದೆ. ಕಾಂಗ್ರೆಸ್‌, ಆಪ್‌ ಖಾತೆ ಕೂಡ ತೆರೆಯುವುದಿಲ್ಲ ಎಂದು ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಮೇಲುಗೈ

ರಾಮಮಂದಿರ ನಿರ್ಮಾಣ, ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರ ಅಲೆಯಿಂದಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿಯು ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಸಮೀಕ್ಷೆಗಳು ತಿಳಿಸಿವೆ. ರಿಪಬ್ಲಿಕ್‌ ಭಾರತ್‌ ವರದಿ ಪ್ರಕಾರ ಎನ್‌ಡಿಎ 69-74, ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ ಪ್ರಕಾರ 69 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.

ರಿಪಬ್ಲಿಕ್‌ ಭಾರತ್ಎನ್‌ಡಿಎ 69-74ಇಂಡಿಯಾ ಒಕ್ಕೂಟ 6-11ಇತರೆ 0
ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ಎನ್‌ಡಿಎ 69ಇಂಡಿಯಾ ಒಕ್ಕೂಟ 11ಇತರೆ 0

ಕರ್ನಾಟಕ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಬಿಜೆಪಿ 20-22ಕಾಂಗ್ರೆಸ್‌ 3-5ಇತರೆ 3
ವಿಸ್ತಾರ ನ್ಯೂಸ್ಬಿಜೆಪಿ 18-20ಕಾಂಗ್ರೆಸ್‌ 8-10ಇತರೆ 2-3
ನ್ಯೂಸ್‌ 18ಬಿಜೆಪಿ 23-26ಕಾಂಗ್ರೆಸ್‌ 3-7ಇತರೆ 0
ಟೈಮ್ಸ್‌ ನೌ- ಇಟಿಜಿ ರಿಸರ್ಚ್ಬಿಜೆಪಿ 23-26ಕಾಂಗ್ರೆಸ್‌ 3-7ಇತರೆ 0

ರಾಜಸ್ಥಾನ

ಎಬಿಪಿ- ಸಿ ವೋಟರ್ಎನ್‌ಡಿಎ 21-23ಇಂಡಿಯಾ ಒಕ್ಕೂಟ 2-4ಇತರೆ 0
ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 16-19ಇಂಡಿಯಾ ಒಕ್ಕೂಟ 5-7ಇಂಡಿಯಾ ಒಕ್ಕೂಟ 1-2

ಬಿಹಾರ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 29-33ಇಂಡಿಯಾ ಒಕ್ಕೂಟ 7-10
ನ್ಯೂಸ್‌ 18ಎನ್‌ಡಿಎ 10-13ಇಂಡಿಯಾ ಒಕ್ಕೂಟ 3-6

ಛತ್ತೀಸ್‌ಗಢ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 10-11ಇಂಡಿಯಾ ಒಕ್ಕೂಟ 0-1ಇತರೆ 0

ಜಾರ್ಖಂಡ್‌

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 8-10ಇಂಡಿಯಾ ಒಕ್ಕೂಟ 4-6ಇತರೆ 0

ಕೇರಳ

ನ್ಯೂಸ್‌ 18ಯುಡಿಎಫ್‌ 15-18ಎಲ್‌ಡಿಎಫ್‌ 2-5ಎನ್‌ಡಿಎ 1-3
ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಯುಡಿಎಫ್‌ 17-18ಎಲ್‌ಡಿಎಫ್‌ 1ಎನ್‌ಡಿಎ 2-3

ಪಶ್ಚಿಮ ಬಂಗಾಳ

ರಿಪಬ್ಲಿಕ್‌ ಟಿವಿ ಮ್ಯಾಟ್ರಿಜ್ಎನ್‌ಡಿಎ 21-25ಟಿಎಂಸಿ 16-20ಇಂಡಿಯಾ ಒಕ್ಕೂಟ 0-1
ನ್ಯೂಸ್‌ 18ಎನ್‌ಡಿಎ 6-9ಟಿಎಂಸಿ 3-6ಇಂಡಿಯಾ ಒಕ್ಕೂಟ 0
ಇಂಡಿಯಾ ನ್ಯೂಸ್‌ ಡಿ ಡೈನಾಮಿಕ್ಸ್ಎನ್‌ಡಿಎ 21ಟಿಎಂಸಿ 19ಇಂಡಿಯಾ ಒಕ್ಕೂಟ 2
ರಿಪಬ್ಲಿಕ್‌ ಟಿವಿ- ಪಿ ಮಾರ್ಕ್ಎನ್‌ಡಿಎ 22ಟಿಎಂಸಿ 20ಇಂಡಿಯಾ ಒಕ್ಕೂಟ 0
ಜನ್‌ ಕಿ ಬಾತ್ಎನ್‌ಡಿಎ 21-26ಟಿಎಂಸಿ 18-16ಇಂಡಿಯಾ ಒಕ್ಕೂಟ 2-0

ತಮಿಳುನಾಡು

ನ್ಯೂಸ್‌ 18ಎನ್‌ಡಿಎ 1-3ಇಂಡಿಯಾ 36-39ಎಡಿಎಂಕೆ 0-2

ದೆಹಲಿ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 6-7ಇಂಡಿಯಾ ಒಕ್ಕೂಟ 0-1ಇತರೆ 0

ಛತ್ತೀಸ್‌ಗಢ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 10-11ಇಂಡಿಯಾ ಒಕ್ಕೂಟ 0-1ಇತರೆ 0
ನ್ಯೂಸ್‌ 18ಎನ್‌ಡಿಎ BJP – 9-11ಇಂಡಿಯಾ ಒಕ್ಕೂಟ – 0-2ಇತರೆ 0
ಟಿವಿ9 ಭರತವರ್ಷ-ಪೋಲ್‌ ಸ್ಟ್ರ್ಯಾಟ್ಎನ್‌ಡಿಎ 99ಇಂಡಿಯಾ ಒಕ್ಕೂಟ 75ಇತರೆ 16

ತೆಲಂಗಾಣ

ನ್ಯೂಸ್‌ ನೇಷನ್ಬಿಜೆಪಿ – 9ಕಾಂಗ್ರೆಸ್ – 7ಇತರೆ- 1

ಆಂಧ್ರಪ್ರದೇಶ

ನ್ಯೂಸ್‌ 18‌ಎನ್‌ಡಿಎ 19-22ವೈಎಸ್‌ಆರ್‌ಸಿಪಿ 5-8ಇಂಡಿಯಾ 0ಇತರೆ 0
ಜನ್‌ ಕಿ ಬಾತ್ಎನ್‌ಡಿಎ 10-14ವೈಎಸ್‌ಆರ್‌ಸಿಪಿ 13-8ಇಂಡಿಯಾ 0ಇತರೆ 0
ಎಬಿಪಿ- ಸಿ ವೋಟರ್ಎನ್‌ಡಿಎ 21-25ವೈಎಸ್‌ಆರ್‌ಸಿಪಿ 0-4ಇಂಡಿಯಾ 0ಇತರೆ 0
ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ಎನ್‌ಡಿಎ 18ವೈಎಸ್‌ಆರ್‌ಸಿಪಿ 7ಇಂಡಿಯಾ 0ಇತರೆ 0
ಇಂಡಿಯಾ ಟಿವಿ- ಸಿಎನ್‌ಎಕ್ಸ್ಎನ್‌ಡಿಎ 19-23ವೈಎಸ್‌ಆರ್‌ಸಿಪಿ 3-5ಇಂಡಿಯಾ 0ಇತರೆ 0

ಇದನ್ನೂ ಓದಿ: Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Continue Reading

ಪ್ರಮುಖ ಸುದ್ದಿ

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Exit Poll 2024: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿಂ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

VISTARANEWS.COM


on

exit poll 2024
Koo

ಬೆಂಗಳೂರು: ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ನೇತೃತ್ವದ ಎನ್​ಡಿಎಯನ್ನು ಅಧಿಕಾರದಿಂದ ದೂರವಿರಿಸಿ ತಮಗೆ ಹೆಚ್ಚು ಅನುಕೂಲಕರ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿರುವುದು ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಕಟಗೊಂಡಿದೆ. ಸಮೀಕ್ಷೆಯು ಅಂದಾಜಿಸಿದ ಪ್ರಕಾರ ಮುಸ್ಲಿಂ ಸಮುದಾಯದವರು ಚಲಾವಣೆ ಮಾಡಿರುವ ಶೇಕಡಾ 72ರಷ್ಟು ಮತಗಳು ಕೈ ಪಕ್ಷದ ಪಾಲಾಗಿವೆ.

ಉತ್ತರ ಪ್ರದೇಶದ ಫರೂಕಾಬಾದ್​ನ್ಲಲಿ ಏಪ್ರಿಲ್ 29ರಂದು ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಮರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕನ್ನು ಹೊಂದಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 2006ರ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದನ್ನು ಈ ವೇಳೆ ಸ್ಮರಿಸಬಹುದು. ಕಾಂಗ್ರೆಸ್ ತನ್ನ ಅಲ್ಪಸಂಖ್ಯಾತ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದು, ಒಬಿಸಿಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೀಸಲನ್ನು ಕಸಿದು ಮುಸ್ಲಿಮರಿಗೆ ನೀಡಲಿದೆ ಎಂದು ಪ್ರಧಾನಿ ಆರೋಪಿಸಿದ್ದರು. ಮೋದಿ ಅವರಿಗೆ ಮುಸ್ಲಿಮರು ಕಾಂಗ್ರೆಸ್​ಗಾಗಿ ಒಟ್ಟಾಗಿದ್ದಾರೆ ಎಂಬ ಸುಳಿವು ಸಿಕ್ಕಿತ್ತು. ಅದಕ್ಕಾಗಿಯೇ ಅವರು ಹಿಂದೂ ಮತಗಳ ಧ್ರುವೀಕರಣಕ್ಕೆ ತಂತ್ರ ಹೆಣೆದಿದ್ದರು.

ಇದನ್ನೂ ಓದಿ: Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

ಮುಸ್ಲಿಮರು ಏಕೆ ಚುನಾವಣೆಯಲ್ಲಿ ಮುಖ್ಯವಾಗಿದ್ದರು?

ಭಾರತವು ವಿಶ್ವದಲ್ಲಿ ಮೂರನೇ ಅತಿ ಹೆಚ್ಚು ಮುಸ್ಲಿಮರನ್ನು ಹೊಂದಿದ ರಾಷ್ಟ್ರ. ಇದು ದೇಶವೊಂದರ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯ. ಮುಸ್ಲಿಮರು ಭಾರತದ ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ. ಭಾರತದ 543 ಲೋಕಸಭಾ ಕ್ಷೇತ್ರಗಳ ಪೈಕಿ 86ರಲ್ಲಿ ಮುಸ್ಲಿಮರ ಜನಸಂಖ್ಯೆ ಕನಿಷ್ಠ ಶೇ.20ರಷ್ಟಿದೆ. ಇದರಲ್ಲಿ 16 ಸ್ಥಾನಗಳಲ್ಲಿ, ಜನಸಂಖ್ಯೆಯಲ್ಲಿ ಆ ಪಾಲು ಶೇಕಡಾ 50ಕ್ಕಿಂತ ಹೆಚ್ಚಾಗಿದೆ. ಈ 86 ಸ್ಥಾನಗಳು 12 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಇವೆ. ಇದರಲ್ಲಿ 71 ಸ್ಥಾನಗಳು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ಬಿಹಾರ, ಅಸ್ಸಾಂ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹರಡಿದೆ.

Continue Reading

ಪ್ರಮುಖ ಸುದ್ದಿ

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Exit Poll 2024 :ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಲ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ.

VISTARANEWS.COM


on

Exit poll 2024
Koo

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಇದನ್ನೂ ಓದಿ: Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಳ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ. ಏತನ್ಮಧ್ಯೆ ಕಾಂಗ್ರೆಸ್​ ತನಗೆ ಭಾಗ್ಯಗಳು ಕೈ ಹಿಡಿಯಬಹುದು ಎಂದು ಅಂದಾಜಿಸಿತ್ತು. ಹೀಗಾಗಿ 10ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬಲ್ಲೆವು ಎಂದು ಆಂತರಿಕವಾಗಿ ಹೇಳಿಕೊಂಡಿತ್ತು. ಆದರೆ, ಅವರ ಲೆಕ್ಕಾಚಾರವೂ ತಪ್ಪಾಗಿದೆ. ಇವೆಲ್ಲದರ ನಡುವೆ ಜೆಡಿಎಸ್​ ಬಿಜೆಪಿ ಜತೆಗಿನ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಈ ಪಕ್ಷ ಕನಿಷ್ಠ2 ಸೀಟ್​ ಗೆಲ್ಲುವು ಖಾತರಿ. ಇನ್ನೊಂದು ಸೀಟ್​ ಕೂಡ ಅವರ ಪರವಾಗಬಹುದು ಎಂದು ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆ ಎರಡು ಪ್ರಮುಖ ಮೈತ್ರಿಕೂಟಗಳಾದ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣಗಳ ನಡುವೆ ತೀವ್ರ ಹೋರಾಟವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧರಿಸಿದ್ದರೆ, ಬಿಜೆಪಿ ಮೈತ್ರಿಕೂಟವು ಅಸಮಾಧಾನದ ಗೆಲುವನ್ನು ಸಂಘಟಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ. ಈ ಚುನಾವಣೆಯ ಫಲಿತಾಂಶವು ರಾಷ್ಟ್ರದ ರಾಜಕೀಯ ಭೂದೃಶ್ಯದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4
Continue Reading
Advertisement
Prajwal Revanna Case
ಕರ್ನಾಟಕ13 mins ago

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Exit Poll 2024
ಪ್ರಮುಖ ಸುದ್ದಿ21 mins ago

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024
ದೇಶ40 mins ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

exit poll 2024
ಪ್ರಮುಖ ಸುದ್ದಿ56 mins ago

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Union Minister Pralhad Joshi showed humanity by taking the injured to the hospital in his convoy vehicle
ಕರ್ನಾಟಕ1 hour ago

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Air Conditioner Safety
ತಂತ್ರಜ್ಞಾನ1 hour ago

Air Conditioner Safety: ಎಸಿ ಏಕೆ ಬ್ಲಾಸ್ಟ್ ಆಗುತ್ತದೆ? ಅಪಾಯ ತಡೆಯುವುದು ಹೇಗೆ?

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Ballari DC Prashanth Kumar Mishra visit to Vote counting centre Review of final preparations
ಬಳ್ಳಾರಿ2 hours ago

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Exit poll 2024
ಪ್ರಮುಖ ಸುದ್ದಿ2 hours ago

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

100 kg of banned plastic seized by municipal council in Shira
ಕರ್ನಾಟಕ2 hours ago

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು4 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌