NPS News | ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಒಪಿಎಸ್‌ ವಿಷಯ: ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ್‌ ಭರವಸೆ - Vistara News

ನೌಕರರ ಕಾರ್ನರ್

NPS News | ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಒಪಿಎಸ್‌ ವಿಷಯ: ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ್‌ ಭರವಸೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ(NPS News) ಭಾಗವಹಿಸಿದ್ದ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಡಾ. ಜಿ. ಪರಮೇಶ್ವರ್‌ ಪಕ್ಷ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸಲಿದೆ ಎಂದಿದ್ದಾರೆ.

VISTARANEWS.COM


on

NPS News ops karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರ ಸಂಘ ನಡೆಸುತ್ತಿರುವ ಪ್ರತಿಭಟನೆಯಲ್ಲಿ (NPS News) ಭಾಗವಹಿಸಿದ್ದ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಡಾ. ಜಿ. ಪರಮೇಶ್ವರ್‌, “ಕಾಂಗ್ರೆಸ್‌ ಪಕ್ಷ ನಿಮ್ಮೊಂದಿಗಿರಲಿದೆʼʼ ಎಂದು ಪ್ರಕಟಿಸಿದ್ದಾರೆ.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಭಾಗವಹಿಸಿ ಭರವಸೆ ನೀಡಿದ್ದಾರೆ. ನಾನೂ ಕೂಡ ಪಕ್ಷದ ಹೈಕಮಾಂಡ್‌ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಅವರು ನೀವೂ ಪ್ರತಿಭಟನೆಯಲ್ಲಿ ಭಾಗವಹಿಸಿ, ಪ್ರತಿಭಟನಾಗಾರರಿಗೆ ನಾವಿದ್ದೇವೆ ಎಂದು ಹೇಳಿ ಎಂದು ತಿಳಿಸಿದ್ದಾರೆ. ಹೀಗಾಗಿ ನಮ್ಮ ಭರವಸೆ ಕಾರ್ಯಗತವಾಗುತ್ತದೆ ಎಂದು ಹೇಳಿದ್ದಾರೆ.

NPS News
ops karnataka
ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈಗಾಗಲೇ ನಮ್ಮ ಪಕ್ಷ ಅಧಿಕಾರದಲ್ಲಿರುವ ರಾಜಸ್ಥಾನ, ಛತ್ತೀಸ್ ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿಗೆ ತೀರ್ಮಾನಿಸಿ, ಕ್ರಮ ತೆಗೆದುಕೊಳ್ಳಲಾಗಿದೆ. ಅದೇ ರೀತಿಯಾಗಿ ರಾಜ್ಯದಲ್ಲಿಯೂ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಒಪಿಎಸ್‌ ಮರುಜಾರಿ ಮಾಡುವುದರ ಬಗ್ಗೆ ಸೇರಿಸುವುದಾಗಿ ಹೇಳಿದರು. ಪ್ರಣಾಳಿಕೆಯಲ್ಲಿ ನಾವು ಪ್ರಕಟಿಸಿದ ಮೇಲೆ ಅದರ ಜಾರಿಗೆ ಬದ್ಧರಾಗಿರಬೇಕಾಗುತ್ತದೆ. ಹೀಗಾಗಿ ನೌಕರರ ಸಂಧ್ಯಾಕಾಲದ ಭದ್ರತೆಯನ್ನು ಖಾತ್ರಿಪಡಿಸುವ ನಿಶ್ಚಿತ ಪಿಂಚಣಿ ಮರು ಸ್ಥಾಪನೆಯಾಗುವುದು ಖಚಿತ ಎಂದರು.

ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೌಕರರು “ವೋಟ್‌ ಫಾರ್‌ ಒಪಿಎಸ್‌ʼʼ ಎಂಬ ಘೋಷಣೆ ಮೊಳಗಿಸಿದರು. ಇದಕ್ಕೂ ಮೊದಲು ಮಾತನಾಡಿದ ಎನ್‌ಪಿಎಸ್‌ ನೌಕರ ಸಂಘದ ಅಧ್ಯಕ್ಷ ಶಾಂತರಾಮ, ಒಪಿಎಸ್‌ ಜಾರಿಯು ಕೇವಲ ಆರ್ಥಿಕ ವಿಷಯಕ್ಕೆ ಸಂಬಂಧಿಸಿದ ವಿಷಯವಲ್ಲ. ಇದು ಪ್ರತಿಯೋರ್ವ ಸರ್ಕಾರಿ ನೌಕರರ, ಗೌರವ ಮತ್ತು ಘನತೆಯ ಪ್ರಶ್ನೆ. ಸರ್ಕಾರ ನೌಕರರ ಸಂಧ್ಯಾಕಾಲದ ಜೀವನಕ್ಕೆ ಭದ್ರತೆ ಒದಗಿಸಿದಲ್ಲಿ, ನೌಕರರು ಅತ್ಯಂತ ಪ್ರಮಾಣಿಕತೆಯಿಂದ ಈ ನಾಡು, ದೇಶ ಕಟ್ಟುವ ಕೆಲಸ ಮಾಡಲಿದ್ದಾರೆ ಎಂದರು.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪ್ರತಿಭಟನೆಯು ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಬೆಳಗಾವಿಯಲ್ಲಿ ಈಗ ನಡೆಯುತ್ತಿರುವ ಅಧಿವೇಶನದಲ್ಲಿಯೇ, ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ ಒಪಿಎಸ್‌ ಜಾರಿಯ ಕುರಿತು ಚರ್ಚೆ ನಡೆಯಬೇಕೆಂದು ಪ್ರತಿಭಟನಾಗಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ| NPS News | ಎನ್‌ಪಿಎಸ್‌ ರದ್ದುಪಡಿಸುವ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ: ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಭೇಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

GPF Interest: ಸಾಮಾನ್ಯ ಭವಿಷ್ಯ ನಿಧಿಯು (General Provident Fund) ರಾಜ್ಯ ಮತ್ತು ಕೇಂದ್ರ ಸರ್ಕಾರದ ಭವಿಷ್ಯ ನಿಧಿ ಯೋಜನೆಯಾಗಿದ್ದು, ಕೇವಲ ಸರ್ಕಾರಿ ನೌಕರರಿಗೆ (ಗ್ರೂಪ್‌ ಡಿ ಹೊರತುಪಡಿಸಿ) ಇದನ್ನು ಒದಗಿಸಲಾಗುತ್ತದೆ.

VISTARANEWS.COM


on

GPF Interest
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಾಮಾನ್ಯ ಭವಿಷ್ಯ ನಿಧಿ (General Provident Fund) ಚಂದಾದಾರರ ಪ್ರಕರಣಗಳಲ್ಲಿ 2023-24 ನೇ ಆರ್ಥಿಕ ವರ್ಷದಲ್ಲಿ 5 ಲಕ್ಷ ರೂ.ಗಳಿಗೂ ಮೀರಿ ಜಿಪಿಎಫ್ ವಂತಿಗೆ ಕಟಾವಣೆಯಾಗಿರುವ ಮೊತ್ತಕ್ಕೆ ಬಡ್ಡಿಯನ್ನು (GPF Interest) ಪಾವತಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ ಅವರು ಆದೇಶ ಹೊರಡಿಸಿದ್ದು, 2023-24 ನೇ ಸಾಲಿಗೆ ಅನ್ವಯಿಸುವಂತೆ ಕರ್ನಾಟಕ ರಾಜ್ಯದ ಜಿಪಿಎಫ್ ಚಂದಾದಾರರ ಖಾತೆಗಳಿಗೆ 5 ಲಕ್ಷ ರೂ. ಮೀರಿ ಜಮಾವಣೆ ಮಾಡಿರುವ ಮೊತ್ತಕ್ಕೆ ಆದಾಯ ತೆರಿಗೆ ಅನ್ವಯಿಕೆಗೊಳಪಟ್ಟು ಬಡ್ಡಿಯನ್ನು ಪಾವತಿಸಲು ಸರ್ಕಾರದ ಮಂಜೂರಾತಿಯನ್ನು ನೀಡಲಾಗಿದೆ. ಅದರಂತೆ ಖಜಾನೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಖಜಾನೆಗಳ ಪ್ರಭಾರಾಧಿಕಾರಿಗಳಿಗೆ ತಿಳಿಸಿದ್ದಾರೆ.

ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ನಿಯಮಗಳು, 2016ರ ಅಡಿಯಲ್ಲಿ ರಾಜ್ಯ ಸರ್ಕಾರವು ಈ ಭವಿಷ್ಯ ನಿಧಿಯನ್ನು ಸ್ಥಾಪಿಸಿದೆ. ಪ್ರತಿ ನೌಕರರು ಮಾಸಿಕ ವಂತಿಗೆಯನ್ನು ಪಾವತಿಸುವ ಮೂಲಕ ಈ ನಿಧಿಯ ಚಂದಾದಾರಾಗಬಹುದು. ತಾವು ಹೊಂದಿರುವ ಹುದ್ದೆಯ ಗರಿಷ್ಠ ಮೂಲ ವೇತನಕ್ಕೆ ಒಳಪ್ಟಟ ಕನಿಷ್ಠ ಪ್ರಮಾಣಕ್ಕಿಂತ ಹೆಚ್ಚಿನ ವಂತಿಗೆಯನ್ನು ಆಯ್ಕೆಮಾಡಿಕೊಳ್ಳಬಹುದು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರವನ್ನು ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. 01-04-2006 ಕ್ಕಿಂತ ಮೊದಲು ರಾಜ್ಯದ ಸೇವೆಗೆ ಸೇರಿದ ರಾಜ್ಯ ಸರ್ಕಾರಿ ನೌಕರರು ಈ ಭವಿಷ್ಯ ನಿಧಿಯ ವಂತಿಕೆದಾರರಾಗಿರುತ್ತಾರೆ. 2024ರ ಜನವರಿ 1ರಿಂದ ಮಾರ್ಚ್‌ 31ರವರೆಗೆ ಶೇ.7.1 ಬಡ್ಡಿ ದರ ನಿಗದಿಯಾಗಿತ್ತು.

ಸಾಮಾನ್ಯ ಭವಿಷ್ಯ ನಿಧಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಭವಿಷ್ಯ ನಿಧಿ ಯೋಜನೆಯಾಗಿದ್ದು, ಕೇವಲ ಸರ್ಕಾರಿ ನೌಕರರಿಗೆ (ಗ್ರೂಪ್‌ ಡಿ ಹೊರತುಪಡಿಸಿ) ಇದನ್ನು ಒದಗಿಸಲಾಗುತ್ತದೆ. ಪ್ರತಿ ತಿಂಗಳು ನೌಕರರು ಇಂತಿಷ್ಟು ಎಂದು ತಮ್ಮ ವೇತನದಲ್ಲಿ ಹಣವನ್ನು ಇದಕ್ಕೆ ತೆಗೆದಿರಿಸುತ್ತಾರೆ. ಹೀಗೆ ಸಂಗ್ರಹವಾದ ಮೊತ್ತವನ್ನು ಅಗತ್ಯವಿರುವಾಗ ನೌಕರರು ಮನೆ ಅಥವಾ ನಿವೇಶನ ಕೊಳ್ಳುವ ಸಂದರ್ಭದಲ್ಲಿ, ಮನೆ ಕಟ್ಟುವಾಗ, ಮದುವೆಯಾಗುವ, ಕಾರು ಕೊಳ್ಳುವಾಗ ಅಥವಾ ಮಕ್ಕಳ ಶೈಕ್ಷಣಿಕ ಉದ್ದೇಶಗಳಿಗಾಗಿ ಈ ಹಣವನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡಲಾಗಿರುತ್ತದೆ. ಪಡೆದುಕೊಳ್ಳಬಹುದು, ಇಲ್ಲವೇ, ನಿವೃತ್ತಿ ಸಂದರ್ಭದಲ್ಲಿ ಒಟ್ಟಾಗಿ ಪಡೆದುಕೊಳ್ಳಬಹುದಾಗಿದೆ. ಮಹಾಲೇಖಪಾಲಕರ ಕಚೇರಿಯು ಈ ನಿಧಿಯನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ | EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

ಇತ್ತೀಚೆಗೆ ಕೇಂದ್ರ ಸರ್ಕಾರವು ಈ ನಿಧಿಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಈಗ ಜಿಪಿಎಫ್‌ ಅನ್ನು ಕಾರು, ಸ್ಕೂಟರ್‌ನಂಥ ಗ್ರಾಹಕೋತ್ಪನ್ನಗಳ ಖರೀದಿ ಸಲುವಾಗಿಯೂ ಬಳಸಬಹುದಾಗಿದೆ. ಈ ಹೊಸ ನಿಯಮದ ಪ್ರಕಾರ ಜಿಪಿಎಫ್‌ನಿಂದ ಹಣ ತೆಗೆಯುವ ಸಂದರ್ಭದಲ್ಲಿ ಅದನ್ನು ಮಂಜೂರು ಮಾಡುವ ಮತ್ತು ಕೈಗೆ ನೀಡುವ ಅವಧಿಯನ್ನು 15 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅನಾರೋಗ್ಯದಂಥ ತುರ್ತು ಸಂದರ್ಭಗಳಲ್ಲಿ 7 ದಿನದೊಳಗೆ ಹಣವನ್ನು ಪಡೆಯಬಹುದಾಗಿದೆ.

Continue Reading

ಪ್ರಮುಖ ಸುದ್ದಿ

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

CM Siddaramaiah: ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

VISTARANEWS.COM


on

CM Siddaramaiah and Vidhanasoudha
Koo

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಅಧಿಕಾರಿಗಳನ್ನು (retired employees) ಸೇವೆಯಿಂದ ಕೈ ಬಿಡುವಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ (CM Siddaramaiah) ಮುಖ್ಯ ಕಾರ್ಯದರ್ಶಿ (Chief Secretary) ಪತ್ರ ಬರೆದಿದ್ದಾರೆ. ಸರಕಾರದ (Karnataka Govt) ಮೇಲಿನ ಹಣದ ಹೊರೆ (Fiscal deficit) ತಪ್ಪಿಸಲು ಈ ನಡೆ ಕೈಗೊಳ್ಳಲಾಗಿದೆ.

ಆರ್ಥಿಕ ಶಿಸ್ತು ಜಾರಿ‌ ಮಾಡಲು ನಾನಾ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದೆಯೂ ಒಮ್ಮೆ ಈ ಕೆಲಸ ಮಾಡಲು ಸೂಚಿಸಿದ್ದರು. ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜನವರಿ 9ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹೊರಗುತ್ತಿಗೆಯಲ್ಲಿ ನೇಮಕವಾದ ನಿವೃತ್ತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಿ; ಆ ಹುದ್ದೆಯಲ್ಲಿ ಸೇವೆಯಲ್ಲಿರುವ ಅಧಿಕಾರಿಗಳನ್ನು ನಿಯೋಜನೆ ಮಾಡಿ ಎಂದು ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಜನವರಿ 23 ಮತ್ತು ಫೆಬ್ರವರಿ 22ರಂದು ಇಲಾಖೆಗಳಿಗೆ ಸಿಎಸ್ ಅವರಿಂದ ಟಿಪ್ಪಣಿ ರವಾನೆ ಆಗಿತ್ತು.

ಆದರೂ ನಿವೃತ್ತ ನೌಕರರನ್ನು ಕೈ ಬಿಡುವ ಪ್ರಕ್ರಿಯೆ ಯಾವುದೇ ಮುನ್ನಡೆ ಕಂಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಸಿಎಂ ಸೂಚನೆ ಮೇರೆಗೆ ವಿವಿಧ ಇಲಾಖೆಗಳಿಗೆ ಸಿಎಸ್ ಪತ್ರ ಬರೆದಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿರುವ ಈ ಕಾರ್ಯಗಳ ಹೆಚ್ಚಿನ ಹೊಣೆ ಈಗಿನ ಇಲಾಖಾ ಅಧಿಕಾರಿಗಳ ಮೇಲೆ ಬೀಳಲಿದೆ.

ಈ ಹಿಂದಿನ ಸಿಎಂ ಟಿಪ್ಪಣಿಯಲ್ಲೇನಿದೆ?

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ- ಸಚಿವಾಲಯಗಳಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳೆಂದು ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.”

“ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ” ಸಿಎಎಸ್ ನಿರ್ದೇಶನ ನೀಡಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೀಗೆ ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿ ಸಚಿವಾಲಯ ನೌಕರರ ಸಂಘವೂ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Continue Reading

ಕರ್ನಾಟಕ

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

Course Fee Hike: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

VISTARANEWS.COM


on

Koo

ಬೆಂಗಳೂರು: ವೃತ್ತಿಪರ ಕೋರ್ಸ್‌ ವ್ಯಾಸಾಂಗ ಮಾಡ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕ ಶೇ.10ರಷ್ಟು ಹೆಚ್ಚಳವಾಗಲಿದೆ.

ಪ್ರವೇಶ ಶುಲ್ಕದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುದೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ತರಾದ ಎಂ.ಆ‌ರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Continue Reading

ಪ್ರಮುಖ ಸುದ್ದಿ

7th pay commission : ಸಂಪುಟದಲ್ಲಿ ಚರ್ಚೆಯಾಗದ 7ನೇ ವೇತನ ಆಯೋಗ ಶಿಫಾರಸು; ಸರ್ಕಾರಿ ನೌಕರರ ಸಂಘಗಳ ಆಕ್ರೋಶ

7th pay commission: ಈ ಕುರಿತು ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಸಂಘದ ಅಧ್ಯಕ್ಷರಾದ ರಮೇಶ್​ ಸಂಗಾ, 7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರ ಉದಾಸೀನ ಧೋರಣೆ ತಳೆಯುತ್ತಿರುವುದು ಸ್ಪಷ್ಟ. ಇದೇ ನಿಲುವು ಮುಂದುವರಿದರೆ ನೌಕರರ ಸಂಘವು ಪ್ರತಿ ಭಟನೆಯನ್ನು ಆಯೋಜಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ (7th pay commission ) ಶಿಫಾರಸು ಜಾರಿಗೊಳಿಸುವ ಕುರಿತು ಯಾವುದೇ ನಿರ್ಣಯ ಕೈಗೊಳ್ಳದಿರುವುದು ಸರ್ಕಾರಿ ನೌಕರರ ಸಂಘಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ನಿರ್ಣಯ ಕೈಗೊಳ್ಳದಿರುವುದು ರಾಜ್ಯ ಸರ್ಕಾರದ ಸಮಸ್ತ ಸರ್ಕಾರಿ ನೌಕರರಿಗೆ ಬೇಸರವನ್ನುಂಟು ಮಾಡಿದೆ ಎಂಬುದಾಗಿ ಸಚಿವಾಲಯದ ನೌಕರರ ಸಂಘ ಹೇಳಿದೆ. ಆಯೋಗದ ಶಿಫಾರಸಿನ ಜಾರಿ ಕುರಿತು ನಿರೀಕ್ಷೆಯಲ್ಲಿದ್ದ ನಮಗೆ ನಿರಾಸೆಯಾಗಿದೆ ಎಂದು ಅದು ಹೇಳಿದೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಸಂಘದ ಅಧ್ಯಕ್ಷರಾದ ರಮೇಶ್​ ಸಂಗಾ, 7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರ ಉದಾಸೀನ ಧೋರಣೆ ತಳೆಯುತ್ತಿರುವುದು ಸ್ಪಷ್ಟ. ಇದೇ ನಿಲುವು ಮುಂದುವರಿದರೆ ನೌಕರರ ಸಂಘವು ಪ್ರತಿ ಭಟನೆಯನ್ನು ಆಯೋಜಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡುವಂತೆ ಸಚಿವಾಲಯದ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿದ್ದೆವು. ಈ ವೇಳೆ ಅವರು ಚುನಾವಣೆ ಮುಗಿದ ಬಳಿಕ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಚುನಾವಣೆ ಮುಗಿದ ಬಳಿಕ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವ ನಂಬಿಕೆ ಇರಿಸಿಕೊಂಡಿದ್ದೆವು. ಅದು ಹುಸಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

ಈಗಾಗಲೇ ವೇತನ ಆಯೋಗವು ಶಿಫಾರಸು ಮಾಡಿರುವ ಶೇ. 27.5 ಫಿಟ್ಮೆಂಟಿಗೆ, ಶೇಕಡಾ 2.5ರಷ್ಟು ಸೇರ್ಪಡೆಗೊಳಿಸಿ ಒಟ್ಟು ಶೇಕಡಾ 30ರಷ್ಟು ಫಿಟ್ಮೆಂಟ್​ನೊಂದಿಗೆ ವೇತನ ಹೆಚ್ಚಳ ಮಾಡುವುದು ನಮ್ಮ ಬೇಡಿಕೆ ಎಂಬುದಾಗಿ ಸಂಗಾ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ನೌಕರರಿಗೆ ನಿರಾಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜೂನ್‌ 13) ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ (7th Pay Commission) ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದಾಗಿ, ಏಳನೇ ವೇತನ ಆಯೋಗದ ಜಾರಿ ಕುರಿತು ಭಾರಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇದರಿಂದ ನಿರಾಸೆಯಾದಂತಾಗಿದೆ.

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದ್ದರು.

Continue Reading
Advertisement
Amy Jackson shares a glimpse of her Paris bachelorette
ಸಿನಿಮಾ2 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ6 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ11 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ19 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ27 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ1 hour ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ1 hour ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ2 hours ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ2 hours ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌