Yellapur News | ಸಾತೊಡ್ಡಿ ಜಲಪಾತದ ಬಳಿ ಮುಳುಗಿ ಹುಬ್ಬಳ್ಳಿ ವ್ಯಕ್ತಿ ಸಾವು - Vistara News

ಉತ್ತರ ಕನ್ನಡ

Yellapur News | ಸಾತೊಡ್ಡಿ ಜಲಪಾತದ ಬಳಿ ಮುಳುಗಿ ಹುಬ್ಬಳ್ಳಿ ವ್ಯಕ್ತಿ ಸಾವು

ಯಲ್ಲಾಪುರ (Yellapur News) ತಾಲೂಕಿನ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಕ್ಕೆ ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದ ಮೂಲದವರಾದ ಇವರು ಹುಬ್ಬಳ್ಳಿಯಲ್ಲಿ ರೈಲ್ವೆ ಕಾಮಗಾರಿ ಗುತ್ತಿಗೆದಾರರಾಗಿದ್ದರು.

VISTARANEWS.COM


on

Satoddi Falls Yellapur
ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ. ಮೃತ ವ್ಯಕ್ತಿ (ಒಳ ಚಿತ್ರ)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ತಾಲೂಕಿನ ಸಾತೊಡ್ಡಿ ಜಲಪಾತಕ್ಕೆ ಭಾನುವಾರ (ಡಿ.೨೫) ಪ್ರವಾಸಕ್ಕೆಂದು ಬಂದ ವ್ಯಕ್ತಿಯೊಬ್ಬರು ನೀರಿನಲ್ಲಿ (Yellapur News) ಮುಳುಗಿ ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯ ಪೋತುಲ್ ರಾಮನೇಂದ್ರ ರಾವ್ (೫೦) ಮೃತರು. ಮೃತದೇಹವು ಸೋಮವಾರ (ಡಿ.೨೬) ಪತ್ತೆಯಾಗಿದೆ. ಇವರು ಪತ್ನಿ, ಇಬ್ಬರು ಮಕ್ಕಳು, ತಂಗಿ ಮತ್ತು ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸ ಬಂದಿದ್ದರು. ಆಂಧ್ರ ಪ್ರದೇಶದ ಮೂಲದವರಾದ ಇವರು ಹುಬ್ಬಳ್ಳಿಯಲ್ಲಿ ರೈಲ್ವೆ ಕಾಮಗಾರಿ ಗುತ್ತಿಗೆದಾರರಾಗಿದ್ದರು ಎಂದು ತಿಳಿದು ಬಂದಿದೆ.

ಮಗನೊಂದಿಗೆ ನೀರಿಗಿಳಿದಿದ್ದ ಇವರು ನೀರಿನಲ್ಲಿ ಆಕಸ್ಮಿಕ ವಾಗಿ ಮುಳುಗಿದರು. ರಕ್ಷಿಸಲು ಸ್ಥಳೀಯರು, ಉಳಿದ ಪ್ರವಾಸಿಗರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಮಗ ಅಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ | Bigg Boss Kannada | ಫಿನಾಲೆ ದಿನಾಂಕ ಬದಲಾವಣೆ: ಮಿಡ್‌ ವೀಕ್‌ನಲ್ಲಿ ಎಲಿಮಿನೇಟ್‌ ಆಗೋದು ಯಾರು?

ವಿಷಯ ತಿಳಿದ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ನಾರಾಯಣ ಭಟ್ಟ ಕಂಚನಳ್ಳಿ, ಸಮಿತಿಯ ಸದಸ್ಯರಾದ ಶ್ರೀಪತಿ ಮೆಣಸುಮನೆ, ಶಶಿಧರ ಕೋಟೆಮನೆ, ರಾಘವೇಂದ್ರ ಮೆಣಸುಮನೆ, ಯಶವಂತ ಪಟಗಾರ, ಡಿ.ಆರ್.ಎಫ್.ಒ ಶಿವಾನಂದ, ಕಾವಲುಗಾರ ಸಂಗಮೇಶ ಹಾಗೂ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ರಾತ್ರಿ 11 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ.

ಶೋಧ ಕಾರ್ಯವನ್ನು ಸೋಮವಾರ (ಡಿ.೨೬) ಬೆಳಗ್ಗೆ ತೀವ್ರಗೊಳಿಸಿದಾಗ, 10.30 ಗಂಟೆಯ ಸುಮಾರಿಗೆ ಮೃತದೇಹ ದೊರೆಯಿತು. ವಿಷಯ ತಿಳಿದ ಸಂಬಂಧಿಕರು, ಸ್ನೇಹಿತರು ನೂರಾರು ಸಂಖ್ಯೆಯಲ್ಲಿ ಸ್ಥಳದಲ್ಲಿದ್ದರು. ಯಲ್ಲಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Kangana Ranaut | 10 ಸಿನಿಮಾಗಳಲ್ಲಿ ನಟಿಸುತ್ತಿದ್ದಂತೆ ಕಂಗನಾಗೆ ಪದ್ಮಶ್ರಿ ಪ್ರಶಸ್ತಿ, ನಮಗೇಕಿಲ್ಲ: ನಟಿ ಜಯಸುಧಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
List of Movies Releasing From may 24
ಟಾಲಿವುಡ್13 mins ago

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

Prashant Kishor
ದೇಶ27 mins ago

Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್‌ ಕಿಶೋರ್‌ ಭವಿಷ್ಯ

Viral Video
ವೈರಲ್ ನ್ಯೂಸ್38 mins ago

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

Diabetes Management Tips
Latest41 mins ago

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

gold rate today beauty
ಚಿನ್ನದ ದರ41 mins ago

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

Viral News
ವೈರಲ್ ನ್ಯೂಸ್44 mins ago

Viral News: ಸಿಂಹದ ಹಿಂಡನ್ನೇ ಹಿಮ್ಮೆಟ್ಟಿಸಿದ ಕಾಡುಕೋಣಗಳು; ರೋಮಾಂಚನಕಾರಿ ವಿಡಿಯೊ ನೀವೂ ನೋಡಿ

Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್1 hour ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್1 hour ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ1 hour ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್1 hour ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌