ವಿಸ್ತಾರ TOP 10 NEWS | ಎಲ್ಲೆಡೆ ಮಾಸ್ಕ್‌ ಕಡ್ಡಾಯದಿಂದ, ಸುಶಾಂತ್‌ ಸಿಂಗ್‌ರದ್ದು ಹತ್ಯೆ ಎಂಬ ಮಾಹಿತಿವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಎಲ್ಲೆಡೆ ಮಾಸ್ಕ್‌ ಕಡ್ಡಾಯದಿಂದ, ಸುಶಾಂತ್‌ ಸಿಂಗ್‌ರದ್ದು ಹತ್ಯೆ ಎಂಬ ಮಾಹಿತಿವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news New Covid Guidelnes to sushant death mystery and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋವಿಡ್‌ ತಡೆ ಕುರಿತು ಸಚಿವ ಸಂಪುಟ ಸಭೆ ಜತೆಗೆ ತಜ್ಞರ ಸಭೆಯನ್ನೂ ನಡೆಸಿದ ರಾಜ್ಯ ಸರ್ಕಾರ, ಕೋವಿಡ್‌ ನಿಯಮಾವಳಿಗಳನ್ನು ಜಾರಿ ಮಾಡಿದೆ. ಎಸ್‌ಸಿಎಸ್‌ಟಿ ಮೀಸಲಾತಿ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದೆ, ಗಡಿ ವಿವಾದಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ತುಪ್ಪ ಸುರಿದಿದ್ದಾರೆ, ಸುರತ್ಕಲ್‌ ಜಲೀಲ್‌ ಕೊಲೆ ಸಂಬಂಧ ಮೂವರು ಬಂಧನಕ್ಕೊಳಗಾಗಿದ್ದಾರೆ, ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬ ಹೊಸ ಮಾಹಿತಿ ಹೊರಬಂದಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Coronavirus | ʼಬಾಯಿ ಮುಚ್ಚಿಕೊಂಡುʼ ಕೋವಿಡ್‌ ಮಾರ್ಗಸೂಚಿ ಪಾಲಿಸಿ !: ಹೊಸ ವರ್ಷದ ಸಂಭ್ರಮಕ್ಕೂ ಮಾಸ್ಕ್‌ ಕಡ್ಡಾಯ; ರಾಜಕೀಯ ರ‍್ಯಾಲಿಗಿಲ್ಲ ನಿರ್ಬಂಧ
ವರ್ಷಾಂತ್ಯಕ್ಕೆ ವಿವಿಧ ಸಂಭ್ರಮಾಚರಣೆಗೆ ಸಿದ್ಧವಾಗುತ್ತಿರುವ ನಾಗರಿಕರಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದು, ಕೋವಿಡ್‌ (Coronavirus) ನಿಯಂತ್ರಣ ಸಲುವಾಗಿ ಎಲ್ಲ ಕಡೆಗಳಲ್ಲೂ ಮಾಸ್ಕ್‌ ಧರಿಸಿಯೇ ಇರಬೇಕು ಎಂದು ತಿಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ನಡುವೆಯೇ ಕಂದಾಯ ಸಚಿವ ಆರ್‌. ಅಶೊಕ್‌ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ನೇತೃತ್ವದಲ್ಲಿ ಕೋವಿಡ್‌ ತಜ್ಞರೊಂದಿಗೆ ಸಭೆ ನಡೆಸಿ ಅನೇಕ ನಿರ್ಧಾರ ಮಾಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕೋವಿಡ್‌ ಕುರಿತ ಸಮಗ್ರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

2. Coronavirus | ಕೋವಿಡ್‌ ಬಗ್ಗೆ ಓವರ್‌ ಆ್ಯಕ್ಟಿಂಗ್ ಮಾಡಬಾರದು ಎಂದ ಆರ್‌. ಅಶೋಕ್‌: ಹೀಗೆ ಹೇಳಿದ್ದು ಡಾ. ಸುಧಾಕರ್‌ ಅವರಿಗಾ?
ಕೋವಿಡ್‌ ಸೋಂಕು ಹರಡುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದಲ್ಲಿ ಕ್ರಮ ಕೈಗೊಳ್ಳುವ ಮುನ್ನವೇ ಇಬ್ಬರು ಸಚಿವರ ನಡುವೆ ಭಿನ್ನಾಭಿಪ್ರಾಯದ ಅನುಮಾನಗಳು ವ್ಯಕ್ತವಾಗುತ್ತಿವೆ. ಕಂದಾಯ ಸಚಿವ ಆರ್‌. ಅಶೋಕ್‌ ಅವರ ಮಾತಿನಿಂದ ಈ ಅನುಮಾನ ವ್ಯಕ್ತವಾಗಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಕುರಿತು ಈ ಮಾತು ಹೇಳಿದ್ದಾರೆಯೇ ಎಂಬ ಚರ್ಚೆಗಳೂ ನಡೆಯುತ್ತಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. ‌SCST Reservation | ದಲಿತ ಮೀಸಲಾತಿ ಹೆಚ್ಚಿಸುವ ಮಸೂದೆಗೆ ವಿಧಾನಸಭೆ ಒಪ್ಪಿಗೆ: ಬಿಜೆಪಿಯೇ ಮೀಸಲಾತಿ ಪರ ಎಂದ ಸರ್ಕಾರ
ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಸುಗ್ರೀವಾಜ್ಞೆಯನ್ನು ಕಾಯ್ದೆಯಾಗಿ ಪರಿವರ್ತಿಸುವ ಪ್ರಸ್ತಾವನೆಗೆ ವಿಧಾನಸಭೆ ಸರ್ವಾನುಮತದ ಅಂಗೀಕಾರ ನೀಡಿದೆ. ಎಸ್‌ಸಿ ಸಮುದಾಯಕ್ಕೆ ಈ ಹಿಂದೆ ಇದ್ದ ಶೇ. 15 ಮೀಸಲಾತಿಯನ್ನು ಶೇ. 17 ಕ್ಕೆ ಹಾಗೂ ಎಸ್‌ಟಿ ಸಮುದಾಯಕ್ಕೆ ಈ ಹಿಂದೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7ಕ್ಕೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರ, ಈ ಹಿಂದೆಯೇ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದೆ. ಇದೀಗ ಸುಗ್ರೀವಾಜ್ಞೆಯನ್ನು ಕಾಯ್ದೆಯನ್ನಾಗಿ ಪರಿವರ್ತಿಸುವ ಮಸೂದೆಗೆ ಒಪ್ಪಿಗೆ ದೊರಕಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. ‌Talk War | ಸಿ.ಟಿ. ರವಿ ಕಳ್ಳಬಟ್ಟಿ ಕುಡಿದು ಮಾತಾಡುತ್ತಿದ್ದಾರೆ ಎಂದ ಬಿ.ಕೆ. ಹರಿಪ್ರಸಾದ್;‌ ನಾನು ಕೊತ್ವಾಲ್‌ ಶಿಷ್ಯ ಅಲ್ಲ ಎಂದ ರವಿ
ಮಾಜಿ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಕ್ರಮ ಆಸ್ತಿ ಗಳಿಕೆ ಕುರಿತ ಮಾತು ಇದೀಗ ವಿಧಾನ ಪರಿಷತ್‌ ಪ್ರತಿಪಕ್ಷ ಬಿ.ಕೆ. ಹರಿಪ್ರಸಾದ್‌ ಹಾಗೂ ಸಿ.ಟಿ. ರವಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಸಿ.ಟಿ. ರವಿ ಚಿಕ್ಕಮಗಳೂರಿಂದ ಬೆಂಗಳೂರಿಗೆ ಬರಬೇಕಾದರೆ ಯಾರದರೂ ಲಿಫ್ಟ್ ಕೊಡಬೇಕಿತ್ತು. ಆದರೆ ಈಗ ಐಶಾರಾಮಿ ಕಾರಿನಲ್ಲಿ ಓಡಾಡುತ್ತಿದ್ದಾರೆ ಹರಿಪ್ರಸಾದ್‌ ಹೇಳಿದರೆ, ನಾನು ಇಲ್ಲಿಂದ ಬೆಳಗಾವಿಯವರೆಗೂ ಓಡಬಲ್ಲೆ, ಕೆಲವರಿಗೆ ನಡೆಯೋದಕ್ಕೂ ಸಾಧ್ಯವಿಲ್ಲ ಎಂದು ರವಿ ಟೀಕಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Border Dispute | ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ, ಉದ್ಧವ್‌ ಹೊಸ ಉಪಟಳ
ಕರ್ನಾಟಕ-ಮಹಾರಾಷ್ಟ್ರ ಗಡಿ ಬಿಕ್ಕಟ್ಟಿನ (Border Dispute) ವಿಷಯದಲ್ಲಿ ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಬಿಜೆಪಿ ಮಧ್ಯೆಯೇ ಒಮ್ಮತದ ಅಭಿಪ್ರಾಯ ಇಲ್ಲ. ಇದರ ಬೆನ್ನಲ್ಲೇ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಹೊಸ ವರಸೆ ಆರಂಭಿಸಿದ್ದಾರೆ. “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶ ಎಂಬುದಾಗಿ ಘೋಷಿಸಿ” ಎಂದು ಒತ್ತಾಯಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Surathkal Murder | ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣ; ಮೂವರ ಬಂಧನ, ಹಿಂದು ಮಹಿಳೆ ಜತೆ ಅಕ್ರಮ ಸಂಬಂಧ ಕೊಲೆಗೆ ಕಾರಣ?
ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣ ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕೊಲೆಯ (Surathkal Murder) ನಿಜವಾದ ಉದ್ದೇಶ ಏನು ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Sushant Singh | ನಟ ಸುಶಾಂತ್​ ಸಿಂಗ್‌​ರದ್ದು ಆತ್ಮಹತ್ಯೆಯಲ್ಲ ಕೊಲೆ; ಮರಣೋತ್ತರ ಪರೀಕ್ಷೆ ಮಾಡಿದಾತ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ!
ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸುಶಾಂತ್ ಮೃತದೇಹ​ 2020ರ ಜೂನ್​ 14ರಂದು ಮುಂಬಯಿಯ ಬಾಂದ್ರಾದ ಅಪಾರ್ಟ್​​ಮೆಂಟ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ‘ಸುಶಾಂತ್​ ಸಿಂಗ್​ ರಜಪೂತ್​ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ’ ಎಂದು ಸುಶಾಂತ್​ ಸಿಂಗ್​ ಮರಣೋತ್ತರ ಪರೀಕ್ಷೆ ನಡೆದ ಕೂಪರ್ ಆಸ್ಪತ್ರೆಯ ಪೋಸ್ಟ್​ಮಾರ್ಟಮ್​ ವಿಭಾಗದ ಸಿಬ್ಬಂದಿ ರೂಪ್​ಕುಮಾರ್ ಶಾ ಎಂಬುವರು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Bellary Politics | ಜೀವದ ಗೆಳೆಯರು ದೂರ ದೂರವಾಗಲು ಅಹಂ ಕಾರಣವಾಯಿತೇ?
ಬಳ್ಳಾರಿಯ ರಾಜಕೀಯಕ್ಕೆ ಹೊಸ ತಿರುವು ನೀಡಿದ್ದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ದೂರ ದೂರವಾಗಲು ಕಾರಣವೇನು ಎಂಬುದರ ಕುರಿತು ಈಗ ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಕುರಿತ ವಿಶ್ಲೇಷಣೆ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Smoking Zone | ಹೋಟೆಲ್​​​, ಬಾರ್‌ & ರೆಸ್ಟೋರೆಂಟ್‌ನಲ್ಲಿ ಸ್ಮೋಕಿಂಗ್ ಜೋನ್ ಕಡ್ಡಾಯ ವಿವಾದ; ಧೂಮಪಾನಕ್ಕೆ ಅವಕಾಶ ಏಕೆ ಎಂಬ ವಾದ
ನಗರದಲ್ಲಿರುವ ಹೋಟೆಲ್‌, ಬಾರ್‌ & ರೆಸ್ಟೋರೆಂಟ್‌, ಕಾಫಿ ಬಾರ್‌ಗಳಲ್ಲಿ ಪ್ರತ್ಯೇಕ ಸ್ಮೋಕಿಂಗ್‌ ಜೋನ್‌ ನಿರ್ಮಿಸಬೇಕು ಎಂಬ ಬಗ್ಗೆ ಬಿಬಿಎಂಪಿ ಹೊರಡಿಸಿರುವ ಸುತ್ತೋಲೆ ಚರ್ಚೆಗೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. ವಾಜಪೇಯಿ ಬ್ರಿಟಿಷರಿಗೆ ಮಾಹಿತಿ ನೀಡುತ್ತಿದ್ದರು ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್​ ಮುಖಂಡ; ಅಟಲ್​​ ಸಮಾಧಿಗೆ ನಮಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಪದಾಧಿಕಾರಿ ಗೌರವ್ ಪಾಂಡಿ ಅವರು, ಮಾಜಿ ಪ್ರಧಾನಮಂತ್ರಿ ಅಟಲ್​ ಬಿಹಾರಿ ವಾಜಪೇಯಿ ಬಗ್ಗೆ ವಿವಾದಾತ್ಮಕವಾಗಿ ಟ್ವೀಟ್ ಮಾಡಿ, ಬಳಿಕ ಡಿಲೀಟ್​ ಮಾಡಿದ್ದಾರೆ. ಅದರ ಬೆನ್ನಲ್ಲೇ ಇಂದು ರಾಹುಲ್ ಗಾಂಧಿ ಸದೈವ್​ ಅಟಲ್​​ಗೆ ಭೇಟಿ ಕೊಟ್ಟು ವಾಜಪೇಯಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. JDS Pancharatna | ಪಂಚರತ್ನ ಯಾತ್ರೆಗೆ ಬಂದವರಿಗೆ ರಾಶಿ ರಾಶಿ ಬಿಂದಿಗೆ ಗಿಫ್ಟ್‌ ಎಸೆತ!
  2. MLAs Poaching Case | ಆಪರೇಷನ್‌ ಕಮಲ ಆರೋಪ, ಸಿಬಿಐ ತನಿಖೆಗೆ ಕೇಸ್‌ ವರ್ಗ, ತೆಲಂಗಾಣ ಸಿಎಂ ಕೆಸಿಆರ್‌ಗೆ ಹಿನ್ನಡೆ
  3. Job News | ಸರ್ಕಾರದ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ ಇವೆ?; ಇಲ್ಲಿದೆ ಸಂಪೂರ್ಣ ಮಾಹಿತಿ
  4. Videocon Chairman | ಸಿಬಿಐನಿಂದ ವಿಡಿಯೊಕಾನ್‌ ಚೇರ್ಮನ್‌ ವೇಣುಗೋಪಾಲ್‌ ಧೂತ್‌ ಅರೆಸ್ಟ್
  5. RSS Family Shakhas | ಭಾರತದಲ್ಲಿ ಕೌಟುಂಬಿಕ ಶಾಖೆ ಪದ್ಧತಿ ಜಾರಿಗೆ ಆರೆಸ್ಸೆಸ್‌ ಚಿಂತನೆ
  6. ವಿಸ್ತಾರ Money Guide | UIDAI | 10 ವರ್ಷ ಹಳೆಯ ಆಧಾರ್‌ ಅಪ್‌ಡೇಟ್‌ಗೆ ಸರ್ಕಾರದ ಸೂಚನೆ, ಪರಿಷ್ಕರಣೆ ಮಾಡುವುದು ಹೇಗೆ?
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

RCB vs CSK: ಶಿವರಾಜ್​ ಕುಮಾರ್​ ಆರ್​ಸಿಬಿಯ ಜೆರ್ಸಿ ತೊಟ್ಟು ಗಮನಸೆಳೆದಿದ್ದಾರೆ. ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ತವರಿನ ತಂಡಕ್ಕೆ ಬೆಂಬಲ ಸೂಚಿಸಲು ರಾಜಕೀಯ ಗಣ್ಯರು, ಸಿನೆಮಾ ನಟ ನಟಿಯರು ಹಾಜರಾಗಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡ ಕಣಕ್ಕಿಳಿದಿದೆ. ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ತವರಿನ ತಂಡಕ್ಕೆ ಬೆಂಬಲ ಸೂಚಿಸಲು ರಾಜಕೀಯ ಗಣ್ಯರು, ಸಿನೆಮಾ ನಟ ನಟಿಯರು ಹಾಜರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್‌, ನಟ ಶಿವರಾಜ್​ ಕುಮಾರ್​, ರಿಷಬ್​ ಶೆಟ್ಟಿ ಸೇರಿ ಅನೇಕರು ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದಾರೆ. ಶಿವರಾಜ್​ ಕುಮಾರ್​ ಆರ್​ಸಿಬಿಯ ಜೆರ್ಸಿ ತೊಟ್ಟು ಗಮನಸೆಳೆದಿದ್ದಾರೆ. ಗಣ್ಯರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಆರ್​ಸಿಬಿಗೆ ಸಪೋರ್ಟ್​ ಮಾಡಲು ಮಹಿಳಾ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ, ತಂಡದ ಆಟಗಾರ್ತಿಯರಾದ ಶ್ರೇಯಾಂಕ ಪಾಟೀಲ್​,ಆಶಾ ಶೋಭನಾ ಹಾಗೂ ಇತರೆ ಆಟಗಾರ್ತಿಯರು ಕೂಡ ಹಾಜರಾಗಿದ್ದಾರೆ. ಆರ್​ಸಿಬಿ ಮಾಜಿ ಆಟಗಾರ ಕ್ರಿಸ್​ ಗೇಲ್​ ಕೂಡ 333 ನಂಬರ್​ನ ಆರ್​ಸಿಬಿ ಜೆರ್ಸಿಯಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ.

ಪಂದ್ಯವನ್ನು ಆರ್​ಸಿಬಿ ತಂಡ ಗೆಲ್ಲುತ್ತದೆ ಎಂದು ಮಹಿಳಾ ಆಟಗಾರ್ತಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೋಟೋವನ್ನು ಕನ್ನಡತಿ ಶ್ರೇಯಾಂಕ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹ್ಯಾಟ್ರಿಕ್​ ಹೀರೊ ಶಿವರಾಜ್​ ಕುಮಾರ್​ ಅವರು ಆರ್​ಸಿಬಿ ಜೆರ್ಸಿ ತೊಟ್ಟ ಫೋಟೊವನ್ನು ಅವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್​ಸಿಬಿ ಹುಡುಗರೇ ಎಂದು ಬರೆದುಕೊಂಡಿದ್ದಾರೆ.

ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

Continue Reading

ಕರ್ನಾಟಕ

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Road Accident: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ಭೀಕರ ಅಪಘಾತ ನಡೆದಿದೆ. ಬೈಕ್‌ನಲ್ಲಿ ಹೋಗುತ್ತಿದ್ದವರಿಗೆ ಟಿಪ್ಪರ್ ಡಿಕ್ಕಿಯಾಗಿ ದುರಂತ ನಡೆದಿದೆ.

VISTARANEWS.COM


on

Road Accident
Koo

ಕಲಬುರಗಿ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವುದು (Road Accident) ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ನಡೆದಿದೆ. ಅಫಜಲಪುರ ತಾಲೂಕಿನ ಹೊಸೂರು ಗ್ರಾಮದ ದೇವಾನಂದ್ ಘತ್ತರಗಿ (25), ಬಸವರಾಜ್ ದುರ್ಗ (56) ಮೃತ ದುರ್ದೈವಿಗಳು.

ಚೌಡಾಪುರದಿಂದ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿಯಾಗಿದ್ದರಿಂದ ದುರಂತ ನಡೆದಿದೆ. ಅಪಘಾತ ನಡೆದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News Boy dies after being struck by lightning in Banavasi Heavy rains lash Chikkamagaluru and Hassan

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading

ಕರ್ನಾಟಕ

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

MLC Election: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ

VISTARANEWS.COM


on

MLC Election Withdrawal of nomination paper says Suresh Sajjan
Koo

ಬೆಂಗಳೂರು: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (MLC Election) ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದರು.

ಇದನ್ನೂ ಓದಿ: Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದು ತಿಳಿಸಿದರು. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದರು.

ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಅಮರನಾಥ ಪಾಟೀಲ್‌ ಅವರ ಗೆಲುವಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸುರೇಶ್ ಸಜ್ಜನ್ ತಿಳಿಸಿದರು.

Continue Reading
Advertisement
RCB vs CSK
ಕ್ರೀಡೆ18 mins ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Road Accident
ಕರ್ನಾಟಕ29 mins ago

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Russia Tourism
ಪ್ರವಾಸ34 mins ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ35 mins ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ41 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 202443 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ1 hour ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ1 hour ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ1 hour ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ1 hour ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌