R Ashwin | ಕ್ರಿಕೆಟ್ ಕ್ಷೇತ್ರದಲ್ಲಿ ಸ್ಟಾರ್ ಗಿರಿ ದೊರಕದಿದ್ದರೂ ಸ್ಟಾರ್​ಗಳ ಸ್ಟಾರ್ ಈ ಅಶ್Win - Vistara News

ಕ್ರಿಕೆಟ್

R Ashwin | ಕ್ರಿಕೆಟ್ ಕ್ಷೇತ್ರದಲ್ಲಿ ಸ್ಟಾರ್ ಗಿರಿ ದೊರಕದಿದ್ದರೂ ಸ್ಟಾರ್​ಗಳ ಸ್ಟಾರ್ ಈ ಅಶ್Win

VISTARANEWS.COM


on

R ashwin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಿತ್ಯಾನಂದ ವಿವೇಕವಂಶಿ

ಬಾಂಗ್ಲಾದೇಶದ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಭಾರತದ ಗೆಲುವಿಗೆ ಕಾರಣಕರ್ತರಾದ ಆರ್ ಅಶ್ವಿನ್ ಎಲೆ ಮರೆ ಕಾಯಿಯಂತೆ ಇದ್ದುಕೊಂಡು ಮಾಡಿರುವ ಸಾಧನೆ ಅಮೋಘ. ಆದರೆ ಕೊಹ್ಲಿ, ಧೋನಿ ಇವರಿಗೆ ಸಿಕ್ಕ ಸ್ಟಾರ್ ವ್ಯಾಲ್ಯೂ ಅಶ್ವಿನ್ ಗೆ ಸಿಗದಿದ್ದುದು ಆಶ್ಚರ್ಯ. ಬನ್ನಿ ಅಶ್ವಿನ್ ಮಾಡಿರುವ ಸಾಧನೆಯನ್ನು ಗಮನಿಸೋಣ.

ಟೆಸ್ಟ್ ನಲ್ಲಿ 3,000 ರನ್ ಗಳು ಮತ್ತು 400 ವಿಕೆಟ್ ಗಳಿಸಿರುವ ಭಾರತದ ಇಬ್ಬರೇ ಆಲ್ ರೌಂಡರ್​ಗಳಲ್ಲಿ ಆಶ್ವಿನ್ ಒಬ್ಬರು. ಇನ್ನೊಬ್ಬರು ಕಪಿಲ್ ದೇವ್ (131 ಟೆಸ್ಟ್). ಪ್ರಪಂಚದಲ್ಲಿ ಈ ಸಾಧನೆ ಮಾಡಿರುವವ ಇನ್ನೂ ಮೂವರೆಂದರೆ ಶಾನ್ ಪೊಲಾಕ್(108 ಟೆಸ್ಟ್), ಸ್ಟುವರ್ಟ್ ಬ್ರಾಡ್ (159 ಟೆಸ್ಟ್), ಶೇನ್ ವಾರ್ನ್(145 ಟೆಸ್ಟ್), ರಿಚರ್ಡ್ ಹ್ಯಾಡ್ಲಿ (86 ಟೆಸ್ಟ್). ಆದರೆ ಇಷ್ಟು ಸಾಧನೆ ಮಾಡಲು ಅಶ್ವಿನ್ ತೆಗೆದುಕೊಂಡಿರುವುದು ಕೇವಲ 88 ಟೆಸ್ಟ್. ಅಂದರೆ ಆಶ್ವಿನ್ ಎಂತಹ ಪ್ರತಿಭಾನ್ವಿತ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು.

ಟೆಸ್ಟ್​​ನಲ್ಲಿ 449 ವಿಕೆಟ್​ ಗಳಿಸಿರುವ ಅಶ್ವಿನ್ ಇನ್ನೊಂದು ವಿಕೆಟ್ ತೆಗೆದ ತಕ್ಷಣ ಟೆಸ್ಟ್ ಕ್ರಿಕೆಟ್​ನಲ್ಲಿ 450 ವಿಕೆಟ್​ಗಳ ಸರದಾರನಾಗುತ್ತಾರೆ. ಆಗ ಟೆಸ್ಟ್ ಕ್ರಿಕೆಟ್​ನಲ್ಲಿ 450 ವಿಕೆಟ್ ಮತ್ತು 3,000 ರನ್ ಗಳಿಸಿದ ವಿಶ್ವದ ಮೂರೇ ಆಟಗಾರರಲ್ಲಿ ಒಬ್ಬರಾಗುತ್ತಾರೆ. ಈ ಸಾಧನೆ ಮಾಡಿದ ಏಕೈಕ ಭಾರತೀಯನಾಗುತ್ತಾರೆ. ಅಶ್ವಿನ್ ಬಿಟ್ಟರೆ ಈ ಸಾಧನೆ ಮಾಡಿರುವ ಇನ್ನಿಬ್ಬರು ಶೇನ್ ವಾರ್ನ್ ಮತ್ತು ಸ್ಟುವರ್ಟ್ ಬ್ರಾಡ್ ಮಾತ್ರ.

ಅತಿ ಹೆಚ್ಚು ಬಾರಿ ಟೆಸ್ಟ್ ಇನ್ನಿಂಗ್ಸ್ ಒಂದರಲ್ಲಿ ಸೆಂಚುರಿ ಮತ್ತು ಐದು ವಿಕೆಟ್ ಪಡೆದಿರುವವರಲ್ಲಿ ಎರಡನೇ ಸ್ಥಾನದಲ್ಲಿರುವವರು ಆಲ್ ರೌಂಡರ್ ಅಶ್ವಿನ್‌ (ಒಟ್ಟು 3 ಬಾರಿ). ಮೊದಲ ಸ್ಥಾನದಲ್ಲಿರುವ ಇಂಗ್ಲೆಂಡ್​ನ ಇಯಾನ್ ಬಾಥಮ್ 5 ಬಾರಿ ಈ ಸಾಧನೆ ಮಾಡಿದ್ದಾರೆ. ಭಾರತದ ಪರವಾಗಿ ಈ ಸಾಧನೆ ಮಾಡಿರುವ ಇತರರೆಂದರೆ ಎಮ್​ ಎಚ್​ ಮಂಕಂಡ್ (1 ಬಾರಿ), ಉಮ್ರಿಗರ್ (1 ಬಾರಿ) ರವೀಂದ್ರ ಜಡೇಜಾ (1ಬಾರಿ).

ಪ್ರಪಂಚದ ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿರುವ ಎರಡನೇ ಆಟಗಾರ ಆರ್ ಅಶ್ವಿನ್. (ಒಟ್ಟು 9 ಬಾರಿ) ಇದಕ್ಕಾಗಿ ಅವರು ಕೇವಲ 88 ಟೆಸ್ಟ್ ಮತ್ತು 36 ಸರಣಿಗಳಲ್ಲಿ ಆಡಿದ್ದಾರೆ. ಮೊದಲ ಸ್ಥಾನದಲ್ಲಿ 133 ಟೆಸ್ಟ್ ಆಡಿ 61 ಸರಣಿಗಳಲ್ಲಿ ಭಾಗವಹಿಸಿರುವ ಮುತ್ತಯ್ಯ ಮುರಳೀಧರನ್(11 ಬಾರಿ ಸರಣಿ ಶ್ರೇಷ್ಠ) ಇದ್ದರೆ, ಅಶ್ವಿನ್ ರ ಜೊತೆ ಜಂಟಿ ಎರಡನೇ ಸ್ಥಾನವನ್ನು ಹಂಚಿಕೊಂಡಿರುವ ದಕ್ಷಿಣ ಆಫ್ರಿಕಾದ ಜಾಕ್​ ಕಾಲೀಸ್ 9 ಬಾರಿ ಸರಣಿ ಶ್ರೇಷ್ಠರಾಗಲು 166 ಟೆಸ್ಟ್ ಮತ್ತು 61 ಸರಣಿಗಳಲ್ಲಿ ಭಾಗವಹಿಸಿದ್ದರು. ಇನ್ನು ಭಾರತೀಯ ಸಾಧಕರಿಗೆ ಹೋಲಿಸಿದರೆ ಅಶ್ವಿನ್​ಗಿಂತ ಹಿಂದೆ ಇರುವವರು ವೀರೇಂದ್ರ ಸೆಹ್ವಾಗ್( 104 ಟೆಸ್ಟ್ 39 ಸರಣಿ) ಮತ್ತು ಸಚಿನ್ ತೆಂಡೂಲ್ಕರ್ (200 ಟೆಸ್ಟ್ 74 ಸರಣಿ). ಇವರಿಬ್ಬರು ಕೇವಲ 5 ಬಾರಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನು ಗಮನಿಸಿದರೆ ತಂಡದ ಗೆಲುವಿನಲ್ಲಿ ಅಶ್ವಿನ್ ಪಾತ್ರ ಮತ್ತು ಅವರ ನಿರಂತರ ಮತ್ತು ಯಶಸ್ಸನ್ನು ಗುರುತಿಸಬಹುದು.

ಟೆಸ್ಟ್ ಮ್ಯಾಚ್ ಒಂದರಲ್ಲಿ ಅತಿ ಹೆಚ್ಚು ಬಾರಿ ಹತ್ತು ವಿಕೆಟ್ ಗೊಂಚಲು (ಒಟ್ಟು 7 ಬಾರಿ) ಗಳಿಸಿದ ಭಾರತದ ಎರಡನೇ ಮತ್ತು ಪ್ರಪಂಚದ ಒಂಭತ್ತನೇ ಬೌಲರ್. ಈ ಸಾಧನೆ ಮಾಡಿರುವ ಇನ್ನೊಬ್ಬ ಭಾರತೀಯ ಬೌಲರ್ ಎಂದರೆ ಅನಿಲ್ ಕುಂಬ್ಳೆ(8 ಬಾರಿ). ಅಶ್ವಿನ್ ತಾವು ನಿವೃತ್ತರಾಗುವುದರೊಳಗೆ ಇನ್ನೊಂದು ಬಾರಿ ಈ ಸಾಧನೆ ಮಾಡಿದರೆ ಕುಂಬ್ಳೆ(8ಬಾರಿ) ಯವರನ್ನು ಸರಿಗಟ್ಟುವುದಲ್ಲದೇ ಭಾರತದ ಪಟ್ಟಿಯಲ್ಲಿ ಕುಂಬ್ಳೆಯವರೊಂದಿಗೆ ಜಂಟಿ ಮೊದಲ ಸ್ಥಾನ ಮತ್ತು ಪ್ರಪಂಚದ ಪಟ್ಟಿಯಲ್ಲಿ ಕುಂಬ್ಳೆಯವರೊಂದಿಗೆ ಜಂಟಿ ನಾಲ್ಕನೇ ಸ್ಥಾನ ಗಳಿಸಲಿದ್ದಾರೆ. ನಿವೃತ್ತರಾಗುವುದರೊಳಗೆ ಎರಡು ಬಾರಿ ಏನಾದರೂ ಈ ಸಾಧನೆ ಮಾಡಿದರೆ ಅನಿಲ್ ಕುಂಬ್ಳೆಯವರನ್ನು ಹಿಂದಿಕ್ಕಿ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಎನಿಸುವುದಲ್ಲದೇ ಪ್ರಪಂಚದ ಪಟ್ಟಿಯಲ್ಲಿ ನ್ಯೂಜಿಲೆಂಡ್ ನ ರಿಚರ್ಡ್ ಹ್ಯಾಡ್ಲಿ(9 ಬಾರಿ) ಮತ್ತು ಶ್ರೀಲಂಕಾದ ಹೇರತ್(9 ಬಾರಿ) ಜೊತಗೆ ಜಂಟಿ ಮೂರನೇ ಸ್ಥಾನ ಪಡೆಯಲಿದ್ದಾರೆ. ಇನ್ನೂ ಮೂರು ಬಾರಿ ಏನಾದರೂ ಈ ಸಾಧನೆ ಮಾಡಿಬಿಟ್ಟರೆ ಶೇನ್ ವಾರ್ನ್ (10 ಬಾರಿ) ರವರ ಜೊತೆ ಜಂಟಿ ಎರಡನೇ ಸ್ಥಾನ ಪಡೆಯಲಿದ್ದಾರೆ. ಮೊದಲ ಸ್ಥಾನದಲ್ಲಿ 22 ಬಾರಿ ಈ ಸಾಧನೆ ಮಾಡಿರುವ ಶ್ರೀಲಂಕಾ ದ ಮುತ್ತಯ್ಯ ಮುರಳೀಧರನ್ ಹೆಸರಿದ್ದು, ಭಾರತದ ಅಶ್ವಿನ್ ಸೇರಿದಂತೆ ಪ್ರಪಂಚದ ಇನ್ಯಾವ ಬೌಲರ್ ಕೈಲೂ ಮುರಿಯುವುದು ಅಸಾಧ್ಯವಾದ ದಾಖಲೆಯಾಗಿದೆ.

ಟೆಸ್ಟ್ ಇನ್ನಿಂಗ್ಸ್ ಒಂದರಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಬಾರಿ ಐದು ವಿಕೆಟ್ ಗಳಿಸಿದ ಬೌಲರ್​ಗಳ ಪೈಕಿಯೂ ಟಾಪ್ 10 ರ ಪಟ್ಟಿಯಲ್ಲಿ ಇದ್ದಾರೆ ಅಶ್ವಿನ್. (ಒಟ್ಟು 30 ಬಾರಿ, 10ನೇ ಸ್ಥಾನ). ಪ್ರಪಂಚದ ಟಾಪ್ 10 ಪಟ್ಟಿಯಲ್ಲಿ ಇರುವ ಇನ್ನೊಬ್ಬ ಭಾರತೀಯ ಅನಿಲ್ ಕುಂಬ್ಳೆ ಮಾತ್ರ. (4 ನೇ ಸ್ಥಾನ 35 ಬಾರಿ). ಹೀಗಾಗಿ ನಿವೃತ್ತರಾಗುವುದರೊಳಗೆ ಅಶ್ವಿನ್​ಗೆ ಕುಂಬ್ಳೆ ಯವರ ದಾಖಲೆ ಮುರಿಯುವ ಸಾಮರ್ಥ್ಯವಿದೆ. ಕುಂಬ್ಳೆಯವರಿಗಿಂಥ ಮೇಲಿರುವವರೆಂದರೆ ಶೇನ್​ ವಾರ್ನ್ (37 ಬಾರಿ) ಹ್ಯಾಡ್ಲಿ ( 36 ಬಾರಿ) ಮುರಳೀಧರನ್(67 ಬಾರಿ) ಮಾತ್ರ. ಪ್ರಯತ್ನ ಪಟ್ಟರೆ ಅಶ್ವಿನ್ ನಿವೃತ್ತರಾಗುವುದರೊಳಗೆ ನಂ 2 ಸ್ಥಾನಕ್ಕೇರಬಹುದು.

ಬ್ಯಾಟ್ಸ್​ಮನ್​ಗಳನ್ನು ಅತಿ ಹೆಚ್ಚು ಬಾರಿ ಎಲ್​ಬಿಡಬ್ಲ್ಯು ಬಲೆಗೆ ಕೆಡವಿದ ಪ್ರಪಂಚದ ಹತ್ತು ಬೌಲರ್​ಗಳಲ್ಲಿ ಅಶ್ವಿನ್ ಕೂಡಾ ಒಬ್ಬರು (96 ಬಾರಿ). ಇನ್ನೂ ಆರು ವಿಕೆಟ್​​ಗಳನ್ನು ಎಲ್​ಬಿಡಬ್ಲ್ಯು ರೂಪದಲ್ಲಿ ಅಶ್ವಿನ್ ಪಡೆದರೆ 100 ಬಾರಿ ಈ ಸಾಧನೆ ಮಾಡಿದವರಾಗಿ 100 ಎಲ್​ಬಿಡಬ್ಲ್ಯು ವಿಕೆಟ್ ಕ್ಲಬ್​ಗೆ ಸೇರುತ್ತಾರೆ. ಪ್ರಪಂಚದಲ್ಲಿ ಇದುವರೆಗೂ ಈ ಸಾಧನೆ ಮಾಡಿರುವವರು ಕೇವಲ 9 ಬೌಲರ್ ಗಳು ಮಾತ್ರ. ಅಂದ ಹಾಗೆ ಪ್ರಪಂಚದ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಭಾರತದ ಅನಿಲ್ ಕುಂಬ್ಳೆ ಎಂಬುದು ಹೆಮ್ಮೆಯ ಸಂಗತಿ. (ಒಟ್ಟು 150 ಸಲ) ಈ ಪಟ್ಟಿಯಲ್ಲಿ ಇರುವ ಇನ್ನೊಬ್ಬ ಭಾರತೀಯ ಕಪಿಲ್ ದೇವ್ (111 ಸಲ) ಮಾತ್ರ.

ಟೆಸ್ಟ್​​ನಲ್ಲಿ ಅತಿ ಹೆಚ್ಚು ಬಾರಿ ಎಡಗೈ ಬ್ಯಾಟ್ಸ್​ಮನ್​ ಗಳನ್ನು ಔಟ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನ ಅಶ್ವಿನ್ ಅವರದ್ದು. ಇನ್ನೂರು ಎಡಗೈ ಆಟಗಾರರನ್ನು ಪೆವಿಲಿಯನ್​ಗೆ ಕಳುಹಿಸಿದ ಪ್ರಪಂಚದ ಏಕೈಕ ಬೌಲರ್ ಅಶ್ವಿನ್ ಅನ್ನುವುದು ವಿಶೇಷ.

ಪ್ರಪಂಚದಲ್ಲಿ ಅತಿವೇಗದ 250, 300, 350 ವಿಕೆಟ್ ಗಳಿಸಿದವರ ಪೈಕಿ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಕೇವಲ 45, 54, 66 ಟೆಸ್ಟ್​​ಗಳಲ್ಲಿ ಅವರು ಈ ಸಾಧನೆ ಮಾಡಿದ್ದರು.

ಅಶ್ವಿನ್ ರೊಂದಿಗೆ ಅತಿ ವೇಗದ 350 ವಿಕೆಟ್ ಸಾಧನೆಯಲ್ಲಿ ಜಂಟಿ ಮೊದಲ ಸ್ಥಾನ ಪಡೆದಿರುವ ಮುತ್ತಯ್ಯ ಮುರಳಿಧರನ್ ಈ ಸಾಧನೆ ಮಾಡಲು ವೃತ್ತಿ ಜೀವನದ 9 ವರ್ಷ 9 ದಿನಗಳನ್ನು ತೆಗೆದುಕೊಂಡಿದ್ದರೆ ಅಶ್ವಿನ್ ಕೇವಲ 7 ವರ್ಷ 330 ದಿನಗಳಲ್ಲಿ ಈ ಸಾಧನೆ ಮಾಡಿದ್ದರು ಎಂಬುದು ಗಮನಾರ್ಹ. ಇನ್ನುಳಿದಂತೆ ವೇಗದ 350 ವಿಕೆಟ್ ಪಟ್ಟಿಯಲ್ಲಿರುವ ಇತರ ಭಾರತೀಯರೆಂದರೆ ಅನಿಲ್ ಕುಂಬ್ಳೆ (77 ಟೆಸ್ಟ್ 6 ನೇ ಸ್ಥಾನ), ಹರ್ಭಜನ್ ಸಿಂಗ್(83 ಟೆಸ್ಟ್ 11 ನೇ ಸ್ಥಾನ) ಮತ್ತು ಕಪಿಲ್ ದೇವ್ (100 ಟೆಸ್ಟ್ 19 ನೇ ಸ್ಥಾನ) ಮಾತ್ರ.

ಇನ್ನು ಅತಿ ವೇಗದ 400 ವಿಕೆಟ್ ಸಾಧನೆಯಲ್ಲಿ ಅಶ್ವಿನ್ ಎರಡನೇ ಸ್ಥಾನ ಪಡೆದಿದ್ದಾರೆ (77 ಟೆಸ್ಟ್). ಮೊದಲ ಸ್ಥಾನದಲ್ಲಿರುವ ಮುತ್ತಯ್ಯ ಮುರಳೀಧರನ್ 72 ಟೆಸ್ಟ್​​ಗಳಲ್ಲಿ ಈ ಸಾಧನೆ ಮಾಡಿದ್ದರು. ಮೂರನೇ ಸ್ಥಾನದಲ್ಲಿ ರಿಚರ್ಡ್ ಹ್ಯಾಡ್ಲಿ 80 ಟೆಸ್ಟ್​​ಗಳಲ್ಲಿ ಈ ಸಾಧನೆ ಮಾಡಿದ್ದರು. ಕುಂಬ್ಳೆ (85 ಟೆಸ್ಟ್), ಹರ್ಭಜನ್ (96 ಟೆಸ್ಟ್) ಮತ್ತು ಕಪಿಲ್ ದೇವ್(115 ಟೆಸ್ಟ್) ಈ ರೇಸ್ ನಲ್ಲಿರುವ ಭಾರತೀಯರು.

ಮುಂದಿನ ಟೆಸ್ಟ್​​ನಲ್ಲಿ ಇನ್ನೊಂದು ವಿಕೆಟ್ ಕಿತ್ತರೆ ಅತಿ ವೇಗದ 450 ವಿಕೆಟ್ ರೇಸ್​​ನಲ್ಲೂ ಅಶ್ವಿನ್ (89 ಟೆಸ್ಟ್) ಮತ್ತೆ 2ನೇ ಸ್ಥಾನ ಪಡೆಯಲಿದ್ದಾರೆ. ಮೊದಲ ಸ್ಥಾನ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್(80 ಟೆಸ್ಟ್) ಮತ್ತು ಮೂರನೇ ಸ್ಥಾನ ನಮ್ಮ ಅನಿಲ್ ಕುಂಬ್ಳೆ (93 ಟೆಸ್ಟ್) ಅವರದ್ದಾಗಿದೆ. ಪ್ರಪಂಚದಲ್ಲಿ ಕೇವಲ 10 ಜನ ಮಾತ್ರ ಮಾಡಿರುವ ಈ ಸಾಧನೆಯ ರೇಸ್​​ನಲ್ಲಿ ಅಶ್ವಿನ್ ಮತ್ತು ಕುಂಬ್ಳೆ ಬಿಟ್ಟರೆ ಇನ್ಯಾವ ಭಾರತೀಯನೂ ಇಲ್ಲ.

ಒಂದು ವೇಳೆ ಅಶ್ವಿನ್ 500 ವಿಕೆಟ್​ನ ಗುರಿ ಮುಟ್ಟಿದರೆ ಬಹುಶಃ ಈ ಸಾಧನೆ ಮಾಡಿದ ವಿಶ್ವದ 8 ನೇ ಆಟಗಾರರಾಗಲಿದ್ದಾರೆ. ವೇಗದ 500 ವಿಕೆಟ್ ಗಳಿಸುವಲ್ಲಿ ಎರಡನೇ ಸ್ಥಾನ ಗಳಿಸುವ ಸಾಧ್ಯತೆ ಇದೆ. ಅಶ್ವಿನ್ ಆ ಸ್ಥಾನ ಪಡೆಯಬೇಕಿದ್ದರೆ ಕುಂಬ್ಳೆ(105 ಟೆಸ್ಟ್) ಯವರಿಗಿಂತ ಮೊದಲು ಅಂದರೆ ಇನ್ನು 17 ಟೆಸ್ಟ್​ ಪಂದ್ಯದ ಒಳಗೆ 51 ವಿಕೆಟ್ ಗಳಿಸಬೇಕು. ಅಷ್ಟು ಟೆಸ್ಟ್​​ಗಳಲ್ಲಿ ಆಡುವ ಅವಕಾಶ ಅಶ್ವಿನ್​ಗೆ ದೊರೆತರೆ ನೀರು ಕುಡಿದಷ್ಟೇ ಸುಲಭವಾಗಿ ಈ ರೆಕಾರ್ಡ್ ಅನ್ನು ಮುರಿದುಹಾಕುವುದು ಖಚಿತ. ಇನ್ನು ಮೊದಲ ಸ್ಥಾನದಲ್ಲಿರುವ ಮುತ್ತಯ್ಯ ಮುರಳೀಧರನ್ (87 ಟೆಸ್ಟ್) ರವರ ದಾಖಲೆ ಮುರಿಯಲು ಸಾಧ್ಯವೇ ಇಲ್ಲ. ಯಾಕೆಂದರೆ ಅದಾಗಲೇ ಅಶ್ವಿನ್ 88 ಟೆಸ್ಟ್ ಮ್ಯಾಚ್ ಆಡಿಯಾಗಿದೆ. ಆದರೆ ಭವಿಷ್ಯದಲ್ಲಿ ಅಶ್ವಿನ್​ ಅವರ ಎರಡನೇ ಅತಿ ವೇಗದ 500 ವಿಕೆಟ್ ಗಳ ದಾಖಲೆಯನ್ನೂ ಮುರಿಯುವುದು ಕಷ್ಟಸಾಧ್ಯ. ಏಕೆಂದರೆ ಈಗ ಆಡುತ್ತಿರುವವರಲ್ಲಿ ಅಶ್ವಿನ್ ಅವರ ಸನಿಹದಲ್ಲೂ ಯಾರೂ ಇಲ್ಲ.

ಭಾರತ ಟೆಸ್ಟ್ ಬೌಲರ್ ಗಳಲ್ಲಿ ವೇಗದ 50, 100, 150, 200, 250, 300, 350, 400, 450 ವಿಕೆಟ್ ಗಳ ದಾಖಲೆಯೂ ಅಶ್ವಿನ್ ಹೆಸರಿನಲ್ಲಿಯೇ ಇದೆ. ವೇಗದ 500 ಕೂಡಾ ಕೆಲವೇ ದಿನಗಳಲ್ಲಿ ಅವರದ್ದೇ ಆಗಲಿದೆ.

ಅಶ್ವಿನ್ ಐಸಿಸಿಯ ಪ್ರಪಂಚದ ಸರ್ವಕಾಲಿಕ ಶ್ರೇಷ್ಠ ಆಲ್ ರೌಂಡರ್ ಗಳ ಪೈಕಿ 12 ನೇ ಸ್ಥಾನ ಗಳಿಸಿದ್ದಾರೆ. 20 ಆಟಗಾರರ ಈ ಪಟ್ಟಿಯಲ್ಲಿ ಅಶ್ವಿನ್ ಬಿಟ್ಟರೆ ಇನ್ನೊಬ್ಬ ಭಾರತೀಯ ಆಟಗಾರನಿಲ್ಲ . ಹಾಗೆಯೇ ಬೌಲರ್ ಗಳ ಪಟ್ಟಿಯಲ್ಲಿ ಅಶ್ವಿನ್ 19ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲೂ ಸಹಾ ಅಶ್ವಿನ್ ಹೊರತುಪಡಿಸಿ ಇನ್ನೊಬ್ಬ ಭಾರತೀಯ ಆಟಗಾರನಿಲ್ಲ ಅನ್ನುವುದು ಅಶ್ವಿನ್ ಶ್ರೇಷ್ಠ ನಿರ್ವಹಣೆಯನ್ನು ಎತ್ತಿ ತೋರಿಸುತ್ತದೆ. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ 11 ನೇ ಸ್ಥಾನದಲ್ಲಿದ್ದು ಕೊಹ್ಲಿಯನ್ನು ಹೊರತುಪಡಿಸಿ ಇನ್ನೊಬ್ಬ ಈ ಪಟ್ಟಿಯಲ್ಲಿ ಭಾರತೀಯ ಇಲ್ಲ. ಅಂದರೆ ಪ್ರಪಂಚದ ಸಾರ್ವಕಾಲಿಕ ಟೆಸ್ಟ್ ಆಟಗಾರರಲ್ಲಿ ಇರುವ ಇಬ್ಬರೇ ಇಬ್ಬರು ಭಾರತೀಯರಲ್ಲಿ ಅಶ್ವಿನ್ ಒಬ್ಬರು. ಕೊಹ್ಲಿ ಬ್ಯಾಟಿಂಗ್ ನಲ್ಲಿ ಸ್ಥಾನ ಪಡೆದಿದ್ದರೆ ಅಶ್ವಿನ್ ಬೌಲಿಂಗ್ ಮತ್ತು ಆಲ್ ರೌಂಡರ್ ಎರಡೂ ವಿಭಾಗಗಳಲ್ಲಿ ಸ್ಥಾನ ಪಡೆದಿದ್ದಾರೆ. ಇಷ್ಟಾದರೂ ಭಾರತೀಯ ಕ್ರಿಕೆಟ್ ಲೋಕ ಈ ಆಟಗಾರನನ್ನು ಸ್ಟಾರ್ ಎಂದು ನೋಡುವುದೇ ಇಲ್ಲ ಎನ್ನುವುದೇ ಅಚ್ಚರಿಯ ಸಂಗತಿ.

ಪ್ರಪಂಚದ ಸರ್ವ ಶ್ರೇಷ್ಠ ಟೆಸ್ಟ್ ಆಲ್ ರೌಂಡರ್ ಆಗಿರುವ ಈ ಅಶ್ವಿನ್ ಟೆಸ್ಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಪ್ರಪಂಚದ ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಸಾಮಾನ್ಯದ ಮಾತಲ್ಲ. ಇನ್ನು ಕೆಲವೇ ಕೆಲವು ಟೆಸ್ಟ್ ಮ್ಯಾಚ್ ಗಳಲ್ಲಿ ಆಡುವ ಅವಕಾಶ ಸಿಕ್ಕರೆ ಟೆಸ್ಟ್ ವಿಕೆಟ್ ಗಳಿಕೆಯ ದೃಷ್ಟಿಯಲ್ಲಿ ಪ್ರಪಂಚದ ಟಾಪ್ 7 ಸ್ಥಾನ ಪಡೆಯುವುದು ಗ್ಯಾರಂಟಿ. ಇನ್ನು 12 ಟೆಸ್ಟ್ ಗಳಲ್ಲಿ ಆಡಿದರೆ ಸಾಕು ಅಶ್ವಿನ್ ಒಟ್ಟು100 ಟೆಸ್ಟ್ ಆಡಿದಂತಾಗುತ್ತದೆ. ಉತ್ತಮ ಫಾರ್ಮ್ ನಲ್ಲಿರುವ ಅಶ್ವಿನ್ ಇನ್ನಿಂಗ್ಸ್ ಒಂದರಲ್ಲಿ 3 ವಿಕೆಟ್​ ತೆಗೆದರೂ ತನ್ನ ಖಾತೆಗೆ 72 ವಿಕೆಟ್ ಸೇರಿಸಿಕೊಳ್ಳುತ್ತಾರೆ. ಆ ಮೂಲಕ ಕರ್ಟ್ನಿ ವಾಲ್ಷ್ ರ 519 ವಿಕೆಟ್​ಗಳ ದಾಖಲೆ ಪುಡಿಯಾಗಿ 521 ವಿಕೆಟ್ ಗಳಿಸುವ ಅಶ್ವಿನ್ ಪ್ರಪಂಚದ ಅತಿ ಹೆಚ್ಚು ಟೆಸ್ಟ್ ವಿಕೆಟ್ ಗಳಿಸಿದವರ ಪೈಕಿ 7 ನೇ ಸ್ಥಾನಕ್ಕೇರುತ್ತಾರೆ.

ಅಶ್ವಿನ್ ಅವರು ಭಾರತದ ಪರ ನೂರು ಟೆಸ್ಟ್ ಆಡಿದ ಕೇವಲ 15 ಜನರ ಪೈಕಿಯೂ ಸ್ಥಾನ ಪಡೆಯುತ್ತಾರೆ. ಈಗಾಗಲೇ ಹನ್ನೆರಡು ಜನರಿರುವ ಈ ಕ್ಲಬ್ ಸೇರುವ ಅರ್ಹತೆ ಇರುವ ಇನ್ನೂ ಮೂವರೆಂದರೆ 88 ಟೆಸ್ಟ್ ಆಡಿರುವ ಅಶ್ವಿನ್, 98 ಟೆಸ್ಟ್ ಆಡಿರುವ ಚೇತೇಶ್ವರ ಪೂಜಾರ, 82 ಟೆಸ್ಟ್ ಆಡಿರುವ ಅಜಿಂಕ್ಯ ರಹಾನೆ. ಸದ್ಯಕ್ಕೆ ಆಡುತ್ತಿರುವವರಲ್ಲಿ ಈ ಮೂವರಿಗೆ ಹತ್ತಿರ ಇರುವ ಇನ್ನೊಬ್ಬ ಆಟಗಾರ ಅಂದರೆ 60 ಟೆಸ್ಟ್ ಆಡಿರುವ ಜಡೇಜಾ. ಅಂದರೆ 20-20 ಯುಗದಲ್ಲಿ ಜಡೇಜಾ ಸೇರಿದಂತೆ ಈ ದಾಖಲೆಯನ್ನು ಇನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ಆದರೆ ಆಯ್ಕೆ ಸಮಿತಿ ಅಶ್ವಿನ್ ಎಂಬ ಈ ಅನುಭವಿ ಆಟಗಾರನಿಗೆ ಇನ್ನೂ 12 ಟೆಸ್ಟ್ ಆಡುವ ಅವಕಾಶ ನೀಡುವುದೇ? ಟ್ವೆಂಟಿ ಟ್ವೆಂಟಿ ಯುಗದಲ್ಲಿ ಟೀಮ್ ಇಂಡಿಯಾ ಅಷ್ಟು ಮ್ಯಾಚ್ ಆಡಲು ಇನ್ನೂ ಎಷ್ಟು ವರ್ಷ ಬೇಕೋ? ಅಲ್ಲಿಯವರೆಗೂ ಅಶ್ವಿನ್ ಗೆ ಎಷ್ಟು ವರ್ಷಗಳಾಗುತ್ತವೆ? ಅಲ್ಲದೆ ಅವರು ಫಿಟ್ ಇರುತ್ತಾರೆಯೇ ಅನ್ನುವುದೇ ಪ್ರಶ್ನೆ.

ಟೆಸ್ಟ್ ಆಡುತ್ತಿರುವ ಪ್ರಪಂಚದ ಆಟಗಾರರಲ್ಲಿ ಹಿರಿತನದ ದೃಷ್ಟಿಯಿಂದ 9 ನೇ ಸ್ಥಾನ ಅಶ್ವಿನ್ ಅವರದ್ದು. ಭಾರತ ತಂಡದಲ್ಲೇ ಅತ್ಯಂತ ಹಿರಿಯನಾದ ಈ ಆಟಗಾರನಿಗೆ ಈಗ 36 ವರ್ಷ ವಯಸ್ಸು. ಇನ್ನೈದು ವರ್ಷ ಏನಾದರೂ ಅಶ್ವಿನ್ ಟೆಸ್ಟ್ ಕ್ರಿಕೆಟ್ ಆಡಿದರೆ ಒಟ್ಟು 42 ಟೆಸ್ಟ್ ಗಳು ಆಡಲು ಸಿಗುತ್ತವೆ. ಈಗಿರುವ ಸರಾಸರಿಯಲ್ಲೇ ಆಡಿದರೆ ಇನ್ನೂ 200 ವಿಕೆಟ್ ಗಳಿಸಲು ಶಕ್ತ ಅಶ್ವಿನ್. ಹಾಗಾದಲ್ಲಿ ನಿವೃತ್ತಿ ಆಗುವ ವೇಳೆಗೆ ಪ್ರಪಂಚದ ಬೌಲಿಂಗ್ ವಿಭಾಗದಲ್ಲಿ ಮುತ್ತಯ್ಯ ಮುರಳೀಧರನ್ ಶೇನ್ ವಾರ್ನ್ ಮತ್ತು ಕುಂಬ್ಳೆಯಂಥ ದಿಗ್ಗಜರ ಸಾಲಿನಲ್ಲಿ ಅಶ್ವಿನ್ ವಿರಾಜಮಾನರಾಗಲಿದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

ಅಶ್ವಿನ್ ಇನ್ನೂ ಅನೇಕ ದಾಖಲೆಗಳನ್ನು ಮುರಿದು ಹೊಸಾ ದಾಖಲೆಗಳನ್ನು ಸೃಷ್ಟಿಸಲಿ, ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣಗಳಂಥಾ ಗೌರವವನ್ನು ಪಡೆಯಲಿ.

ಇದನ್ನೂ ಓದಿ ’ R Ashwin | ಟೀಮ್​ ಇಂಡಿಯಾದ ಸ್ಪಿನ್​ ಬೌಲರ್​​ ಆರ್​ ಅಶ್ವಿನ್​ ಅವರ ಟೆಸ್ಟ್​ ಬೌಲಿಂಗ್​ ಸಾಧನೆ ಈ ರೀತಿ ಇದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

PBKS vs CSK: ಕೆಕೆಆರ್​ ದಾಖಲೆ ಹಿಂದಿಕ್ಕಿದ ಪಂಜಾಬ್​ ಕಿಂಗ್ಸ್

PBKS vs CSK: ಚೆನ್ನೈಗೆ ತವರಿನಲ್ಲೇ ಅತ್ಯಧಿಕ ಸೋಲುಣಿಸಿದ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರವಾಗಿದೆ. ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ವಿರುದ್ಧ ಮುಂಬೈ ಇದುವರೆಗೆ 5 ಪಂದ್ಯಗಳನ್ನು ಜಯಿಸಿದೆ. ಪಂಜಾಬ್​ 4 ಬಾರಿ ಸೋಲುಣಿಸಿ ಕೆಕೆಆರ್​(3 ಬಾರಿ) ತಂಡದ ದಾಖಲೆಯನ್ನು ಹಿಂದಿಕ್ಕಿದೆ.

VISTARANEWS.COM


on

PBKS vs CSK
Koo

ಚೆನ್ನೈ: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(PBKS vs CSK) ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪಂಜಾಬ್​ ಕಿಂಗ್ಸ್​ ದಾಖಲೆಯೊಂದನ್ನು ನಿರ್ಮಿಸಿದೆ. ಚೆನ್ನೈಗೆ ತವರಿನಲ್ಲಿಯೇ ಅತ್ಯಧಿಕ ಸೋಲುಣಿಸಿದ 2ನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೇ ವೇಳೆ ಕೆಕೆಆರ್​(3 ಬಾರಿ) ತಂಡದ ದಾಖಲೆಯನ್ನು ಹಿಂದಿಕ್ಕಿದೆ.

ಚೆನ್ನೈಗೆ ತವರಿನಲ್ಲೇ ಅತ್ಯಧಿಕ ಸೋಲುಣಿಸಿದ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರವಾಗಿದೆ. ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ವಿರುದ್ಧ ಮುಂಬೈ ಇದುವರೆಗೆ 5 ಪಂದ್ಯಗಳನ್ನು ಜಯಿಸಿದೆ. ಪಂಜಾಬ್​ 4 ಬಾರಿ ಸೋಲುಣಿಸಿದೆ. ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು.

ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

Continue Reading

ಕ್ರೀಡೆ

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶಿಸಲಿದೆ. ಸನ್​ರೈಸರ್ಸ್​ ಗೆದ್ದರೆ ಚೆನ್ನೈ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ.

VISTARANEWS.COM


on

IPL 2024 Points Table
Koo

ಚೆನ್ನೈ: ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 7 ವಿಕೆಟ್​ ಅಂತರದ ಹೀನಾಯ ಸೋಲು ಕಂಡಿತು. ಗೆಲುವು ಸಾಧಿಸಿದ ಪಂಜಾಬ್​ ಅಂಕಪಟ್ಟಿಯಲ್ಲಿ(IPL 2024 Points Table) ಗುಜರಾತ್​ ಟೈಟಾನ್ಸ್​ ತಂಡವನ್ನು ಹಿಂದಿಕ್ಕಿ 7ನೇ ಸ್ಥಾನಕ್ಕೇರಿತು. ಜತೆಗೆ ಪ್ಲೇ ಆಫ್​ ಆಸೆಯನ್ನು ಇನ್ನೂ ಜೀವಂತವಿರಿಸಿತು. ಚೆನ್ನೈ ಸೋಲು ಕಂಡರೂ ಕೂಡ ಈ ಹಿಂದಿನಂತೆ 4ನೇ ಸ್ಥಾನದಲ್ಲೇ ಮುಂದುವರಿಯಿತು.

ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶಿಸಲಿದೆ. ಸನ್​ರೈಸರ್ಸ್​ ಗೆದ್ದರೆ ಚೆನ್ನೈ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಚೆನ್ನೈ​105510 (+0.627)
ಹೈದರಾಬಾದ್​95410 (+0.075)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

Continue Reading

ಕ್ರೀಡೆ

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

CSK vs PBKS: ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು

VISTARANEWS.COM


on

CSK vs PBKS
Koo

ಚೆನ್ನೈ: ಪ್ಲೇ ಆಫ್​ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(CSK vs PBKS)​ ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರದ್ದೇ ನೆಲದಲ್ಲಿ 7 ವಿಕೆಟ್​ಗಳಿಂದ ಮಗುಚಿ ಹಾಕಿದೆ. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು. ಜಾನಿ ಬೇರ್​ಸ್ಟೋ(46 ರನ್​) ಮತ್ತು ರಾಹುಲ್​ ಚಹರ್​ (16ಕ್ಕೆ 2 ವಿಕೆಟ್​) ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈಗೆ ಗಾಯಕ್ವಾಡ್​ ಆಸರೆ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ದುಬೆ ಬ್ಯಾಟಿಂಗ್​ ವಿಫಲ


ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಹರ್​ಪ್ರೀತ್​ ಬ್ರಾರ್​ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. ಮೊಯಿನ್​ ಅಲಿ ಕ್ಯಾಚ್​ನಿಂದ ಒಂದು ಜೀವದಾನ ಪಡೆದರೂ ಕೂಡ ಇದರ ಲಾಭವೆತ್ತಲು ವಿಫಲರಾದರು. 15 ರನ್​ ಗಳಿಸಿ ರಾಹುಲ್​ ಚಹರ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಮಹೇಂದ್ರ ಸಿಂಗ್​ ಧೋನಿ 11 ಎಸೆತಗಳಿಂದ 14 ರನ್​ ಗಳಿಸಿ ರನೌಟ್​ ಆದರು.

ಇದುವರೆಗೆ ದ್ವಿತೀಯ ಕ್ರಮಾಂಕದಲ್ಲಿ ಆಡುತ್ತಿದ್ದ ಡೇರಿಯಲ್​ ಮಿಚೆಲ್​ ಅವರನ್ನು ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಆಡಿಸಲಾಯಿತು. ಈ ಪ್ರಯೋಗ ಚೆನ್ನೈಗೆ ಭಾರೀ ಹಿನ್ನಡೆ ಉಂಟುಮಾಡಿತು. ಅವರನ್ನು ಎಂದಿನಂತೆ 2ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದರೆ ದೊಡ್ಡ ಮೊತ್ತವನ್ನು ಕಲೆಹಾಕಬಹುದಾಗಿತ್ತು. ಪಂಜಾಬ್​ ಪರ ರಾಹುಲ್​ ಚಹರ್​ ಮತ್ತು ಹರ್​ಪ್ರೀತ್​ ಬ್ರಾರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading

ಕ್ರೀಡೆ

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

T20 Rankings: ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​ ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ.

VISTARANEWS.COM


on

T20 Rankings
Koo

ದುಬೈ: ಐಸಿಸಿ ನೂತನ ಟಿ20(T20 Rankings) ಬ್ಯಾಟಿಂಗ್​ ಶ್ರೇಯಾಂಕ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(babar azam) ಒಂದು ಸ್ಥಾನಗಳ ಪ್ರಗತಿ ಸಾಧಿಸಿದ್ದಾರೆ. ಟೀಮ್​ ಇಂಡಿಯಾದ ಸೂರ್ಯಕುಮಾರ್​ ಯಾದವ್(861 ರೇಟಿಂಗ್​ ಅಂಕ)​ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ.

ಬಾಬರ್​ ನ್ಯೂಜಿಲ್ಯಾಂಡ್​ ವಿರುದ್ಧದ ತವರಿನ ಟಿ20 ಪಂದ್ಯದಲ್ಲಿ ಆಡಿದ ನಾಲ್ಕು ಇನಿಂಗ್ಸ್​ಗಳಿಂದ ಒಂದು ಅರ್ಧಶತಕ ಮತ್ತು ಒಳಗೊಂಡಂತೆ ಒಟ್ಟು 125 ರನ್​ ಬಾರಿಸಿದ್ದರು. ಇದು ಬ್ಯಾಟರ್‌ಗಳಿಗಾಗಿ ನವೀಕರಿಸಿದ ಟಿ20 ಶ್ರೇಯಾಂಕಗಳ ಪಟ್ಟಿಯಲ್ಲಿ ಬಾಬರ್ ಒಂದು ಸ್ಥಾನವನ್ನು ಸುಧಾರಿಸಲು ನೆರವಾಯಿತು. ಬಾಬರ್​ 10 ರೇಟಿಂಗ್​ ಅಂಗಳ ಪ್ರಗತಿಯೊಂದಿಗೆ ಸದ್ಯ 763 ರೇಟಿಂಗ್​ ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(suryakumar yadav) ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ. ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅವರು ತಮ್ಮ ಚೊಚ್ಚಲ ನಾಯಕತ್ವದಲ್ಲ ಭಾರತಕ್ಕೆ ಟಿ20 ಸರಣಿಯನ್ನು ಗೆದ್ದು ಕೊಟ್ಟ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡು ಬಳಿಕ ಯಾವುದೇ ಸರಣಿ ಆಡಿಲ್ಲ. ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಕಪ್​ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ.

ಇಂಗ್ಲೆಂಡ್​ ತಂಡ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಫಿಲ್​ ಸಾಲ್ಟ್​(802) ಮತ್ತು ಪಾಕಿಸ್ತಾನದ ಮೊಹಮ್ಮದ್​ ರಿಜ್ವಾನ್​(784) ರೇಟಿಂಗ್​ ಅಂಕದೊಂದಿಗೆ ಕ್ರಮವಾಗಿ 2 ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಯುವ ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್​(714) 6ನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಟಾಪ್​ 10ನಲ್ಲಿ ಇಬ್ಬರು ಭಾರತೀಯ ಬ್ಯಾಟರ್​ಗಳು ಮಾತ್ರ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾದ ಮೂವರು ಬ್ಯಾಟರ್​ಗಳು ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ.

ಟಾಪ್​ 5 ಬ್ಯಾಟರ್​ಗಳು


1. ಸೂರ್ಯಕುಮಾರ್​ ಯಾದವ್​ (861 ರೇಟಿಂಗ್​ ಅಂಕ)

2. ಫಿಲ್​ ಸಾಲ್ಟ್​(802 ರೇಟಿಂಗ್​ ಅಂಕ)

3. ಮೊಹಮ್ಮದ್​ ರಿಜ್ವಾನ್​ (784 ರೇಟಿಂಗ್​ ಅಂಕ)

4. ಬಾಬರ್​ ಅಜಂ(763 ರೇಟಿಂಗ್​ ಅಂಕ)

5. ಐಡೆನ್​ ಮಾರ್ಕ್ರಮ್​(755 ರೇಟಿಂಗ್​ ಅಂಕ)

Continue Reading
Advertisement
Jammu Tour
ಪ್ರವಾಸ2 mins ago

Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

Uma Ramanan dies in Chennai
ಕಾಲಿವುಡ್11 mins ago

Uma Ramanan: ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ ಇನ್ನಿಲ್ಲ

CoWin Certificates
ದೇಶ26 mins ago

CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

PBKS vs CSK
ಕ್ರೀಡೆ28 mins ago

PBKS vs CSK: ಕೆಕೆಆರ್​ ದಾಖಲೆ ಹಿಂದಿಕ್ಕಿದ ಪಂಜಾಬ್​ ಕಿಂಗ್ಸ್

Parineeti Chopra husband Raghav Chadha doing well after eye surgery
ಬಾಲಿವುಡ್37 mins ago

Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

Rahul Gandhi
ಪ್ರಮುಖ ಸುದ್ದಿ45 mins ago

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Job Alert
ಉದ್ಯೋಗ49 mins ago

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Best Courses After SSLC
ಶಿಕ್ಷಣ53 mins ago

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಯಾವುದು ಉತ್ತಮ ಆಯ್ಕೆ?

Thomas Cup 2024
ಬ್ಯಾಡ್ಮಿಂಟನ್53 mins ago

Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

Aadhaar Crads For Dog
ಪ್ರಮುಖ ಸುದ್ದಿ58 mins ago

Aadhaar Crads For Dog: ದೆಹಲಿಯಲ್ಲಿ ನಾಯಿಗಳಿಗೂ ಬಂತು ಆಧಾರ್ ಕಾರ್ಡ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌