Year Eneder 2022 | ಆರಕ್ಕೇರದ, ಮೂರಕ್ಕಿಳಿಯದ ಭಾರತದ ಸ್ಮಾರ್ಟ್​​ಫೋನ್​ ಮಾರುಕಟ್ಟೆ - Vistara News

New year 2023

Year Eneder 2022 | ಆರಕ್ಕೇರದ, ಮೂರಕ್ಕಿಳಿಯದ ಭಾರತದ ಸ್ಮಾರ್ಟ್​​ಫೋನ್​ ಮಾರುಕಟ್ಟೆ

2022ರಲ್ಲಿ ಭಾರತದ ಸ್ಮಾರ್ಟ್​ ಫೋನ್​ ಕಂಪನಿಗಳ ಏಳು ಬೀಳುಗಳು ಈ ರೀತಿ ಇದೆ.

VISTARANEWS.COM


on

smart phone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಭಾರತದ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ ಜಗತ್ತಿನಲ್ಲಿ ಎರಡನೇ ಸ್ಥಾನವಿದ್ದು, ಚೀನಾದ ನಂತರದ ಸ್ಥಾನವಿದೆ. 60 ಕೋಟಿಗೂ ಹೆಚ್ಚು ಮಂದಿ ಇಲ್ಲಿ ಸ್ಮಾರ್ಟ್​​ಫೋನ್​ಗಳನ್ನು ಬಳಸುತ್ತಾರೆ. ಇದೇ ಕಾರಣಕ್ಕೆ ವಿಶ್ವದ ಬಹುತೇಕ ಸ್ಮಾರ್ಟ್​ಫೋನ್​ ತಯಾರಕ ಕಂಪನಿಗಳು ಭಾರತಕ್ಕೆ ದಾಂಗುಡಿ ಇಡುತ್ತವೆ. ಆದರೆ, ಚೀನಾ ಮೂಲದ ಕಂಪನಿಗಳದ್ದೇ ಇಲ್ಲಿ ಪಾಬಲ್ಯ. ಅಗ್ಗದ ದರಕ್ಕೆ ಅತ್ಯಾಧುನಿಕ ಫೀಚರ್​ಗಳು ಲಭ್ಯವಾಗುತ್ತಿರುವುದೇ ಅದಕ್ಕೆ ಕಾರಣ. ಜತೆಗೆ ಕ್ಯಾಮೆರಾ ವಿಚಾರಕ್ಕೆ ಬಂದಾಗಲೂ ಚೀನಾ ಮೂಲದ ಕಂಪನಿಗಳು ಸಿಕ್ಕಾಪಟ್ಟೆ ಫ್ಯಾನ್ಸಿ. ಹೀಗಾಗಿ ಅಲ್ಲಿನ ಫೋನ್​ಗಳು ಭಾರತದಲ್ಲಿ ಸಿಂಹಪಾಲು ಹೊಂದಿದೆ.

ವರ್ಷದಿಂದ ವರ್ಷಕ್ಕೆ ಭಾರತದಲ್ಲಿ ಸ್ಮಾರ್ಟ್​ಫೋನ್​ಗಳ ಬಳಕೆದಾರರು ಹೆಚ್ಚಾಗುತ್ತಿದ್ದರೂ, 2022ರಲ್ಲಿ ಅಷ್ಟೇನೂ ಪ್ರಗತಿ ಕಂಡಿಲ್ಲ. 5 ತಂತ್ರಜ್ಞಾನ ವರ್ಷದ ಕೊನೆಯಲ್ಲಿ ಬಳಕೆಗೆ ಬಂದಿದ್ದರೂ ಹಿಂದಿನ ಲಯದಲ್ಲೇ ಮೊಬೈಲ್​ ಫೋನ್​ಗಳು ಮಾರಾಟವಾಗಿವೆ. ಹೀಗಾಗಿ ಸ್ಮಾರ್ಟ್​​ಫೋನ್​ ಮಾರಾಟದ ವಿಚಾರದಲ್ಲಿ ಭಾರತದ ಮಾರುಕಟ್ಟೆಯದ್ದು ಆರಕ್ಕೇಳದ, ಮೂರಕ್ಕಿಳಿಯದ ಸ್ಥಿತಿ ಎದುರಿಸಿದೆ. ಆದಾಗ್ಯೂ ಸ್ವಲ್ಪ ಪ್ರಗತಿ ಕಂಡಿರುವ ಒಪ್ಪೊ ಕಂಪನಿ ಮಾತ್ರ. ಈ ರೀತಿಯಾಗಿ 2022ರಲ್ಲಿ (Year Eneder 2022) ಭಾರತದಲ್ಲಿ ಸ್ಮಾರ್ಟ್​ಫೋನ್​ ಕಂಪನಿಗಳು ಹೇಗೆ ಪ್ರಗತಿ ಸಾಧಿಸಿದವು ಎಂಬುದನ್ನು ನೋಡೊಣ.

ಆ್ಯಪಲ್​

2022ರಲ್ಲಿ ಆ್ಯಪಲ್​ ಕಂಪನಿಯು ನಾಚ್ ಡಿಸ್​ಪ್ಲೆ ಬಳಕೆಯನ್ನು ನಿಲ್ಲಿಸಿತು. ಐಫೋನ್ 14 ಪ್ರೊ ಸೀರಿಸ್​ನಿಂದ ಡೈನಾಮಿಕ್​ ಐಲ್ಯಾಂಡ್​ ಫೀಚರ್​ ತಂದಿತು. ಆದರೆ, ಹಿಂದಿನ ಐಫೋನ್ 14ನಲ್ಲಿ ನಾಚ್​ ಡಿಸ್​ಪ್ಲೇ ಕೊಡುವುದನ್ನು ಮುಂದುವರಿಸಿತು. ಇದು ಸ್ವಲ್ಪ ಮಟ್ಟಿಗೆ ಗೊಂದಲಕಾರಿ ನಿರ್ಧಾರ ಎನಿಸಿತು. ಅಲ್ಲದೆ, ಐಫೋನ್​ 14ನೊಂದಿಗೆ ಮಿನಿ ಸೀರಿಸ್​ನ ಫೋನ್​ಗಳ ಉತ್ಪಾದನೆಯನ್ನೂ ನಿಲ್ಲಿಸಿತು. ಐಫೋನ್​ ಕಂಪನಿ ಮೊದಲ ಬಾರಿಗೆ 13 ಎಂಪಿ ಸೆನ್ಸಾರ್​ಗೆ ಬದಲಅಗಿ 48 ಎಂಪಿ ಕ್ಯಾಮೆರಾ ಬಳಕೆಯನ್ನು ಆರಂಭಿಸಿತು. ಜತೆಗೆ ಕ್ರ್ಯಾಶ್​ ಡಿಟೆಕ್ಷನ್​ ಹಾಗೂ ಸ್ಯಾಟಲೈಟ್​ ನ್ಯಾವಿಗೇಷನ್​ ಫೀಚರ್​ ಅನ್ನೂ ನೀಡಿತು. ಇದು ಎಲ್ಲ ಕಡೆ ಬಳಕೆಯಲ್ಲಿ ಇಲ್ಲ.

ಆಸುಸ್​

ತೈವಾನ್​ ಮೂಲದ ಲ್ಯಾಪ್​ಟಾಪ್​ ತಯಾರಕ ಸಂಸ್ಥೆಯಾಗಿರುವ ಆಸುಸ್​ ROG 6 ಸೀರಿಸ್​ನ ಮೊಬೈಲ್​ಗಳನ್ನು ಭಾರತದ ಮಾರುಕಟ್ಟೆಗೆ ಇಳಿಸಿತು. 18 ಜಿಬಿ ರ್ಯಾಮ್​, 512 ಜಿಬಿ ರೋಮ್​ ಹಾಗೂ 6000 ಎಮ್​ಎಎಚ್​ ಬ್ಯಾಟರಿ ಸಾಮರ್ಥ್ಯದ ಈ ಫೋನ್​ ಗೇಮಿಂಗ್​ಗಾಗಿಯೇ ಮಾಡಿದ ಸ್ಮಾರ್ಟ್​ಫೋನ್​. ಇದು ಅಷ್ಟೇನೂ ಯಶಸ್ಸು ಸಾಧಿಸಲಿಲ್ಲ ಹಾಗೂ ಫೋನ್​ಗಳ ಮಾರಾಟದಲ್ಲೂ ಪ್ರಗತಿ ಸಾಧಿಸಲಿಲ್ಲ.

ಗೂಗಲ್​

ಎರಡು ವರ್ಷಗಳ ಅಂತರದ ಬಳಿಕ ಸರ್ಚ್​ ಎಂಜಿನ್ ದೈತ್ಯ ಆಲ್ಫಾಬೆಟ್​, ಪಿಕ್ಸೆಲ್​ ಫೋನ್​ಗಳನ್ನು ಭಾರತದ ಮಾರುಕಟ್ಟೆಗೆ ಇಳಿಸಿತು. ಪಿಕ್ಸೆಲ್​ 6ಎ, ಪಿಕ್ಸೆಲ್​7 ಹಾಗೂ ಪಿಕ್ಸೆಲ್​ 7 ಪ್ರೊ ಈ ಫೋನ್​ಗಳು. ಭಾರತದ ಪ್ರೀಮಿಯಮ್​ ಸೆಗ್ಮೆಂಟ್​ನ ಗ್ರಾಹಕರನ್ನು ಮನ ಸೆಳೆಯುವ ತಂತ್ರ ಮಾಡಿದರೂ ಪೂರ್ಣ ಯಶಸ್ಸು ದೊರೆಯಲಿಲ್ಲ. ಪಿಕ್ಸೆಲ್​ ಇಯರ್​ ಬಡ್​ ಅನ್ನು ಭಾರತದಲ್ಲಿ ಮಾರುಕಟ್ಟೆಗೆ ಇಳಿಸುವ ಯೋಜನೆಯೂ ಇದೆ.

ಲಾವಾ

ಇನ್ನೂ ಕಣ್ಮುಚ್ಚದ ಭಾರತದ ಏಕೈಕ ಸ್ಮಾರ್ಟ್​ಫೋನ್​ ಬ್ರಾಂಡ್ ಲಾವಾ, ಚೀನಾ ಕಂಪನಿಗಳ ಅಬ್ಬರದ ನಡುವೆಯೂ ಮಾರುಕಟ್ಟೆಯಲ್ಲಿ ಉಳಿಯುವ ಪ್ರಯತ್ನವನ್ನು ಮಾಡಿದೆ. ಬ್ಲೇಜ್​ ಸೀರಿಸ್​ ಫೋನ್​ಗಳನ್ನು ಮಾರುಕಟ್ಟೆಗೆ ಬಿಡುವ ಮೂಲಕ ಜನಮನ ಸೆಳೆಯಲು ಯತ್ನಿಸಿದೆ. ಬ್ಲೇಜ್​ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ದೊರೆಯುವ 5 ಜಿ ಫೋನ್. ಇದರ ಪ್ರೊ ಆವೃತ್ತಿಯಲ್ಲಿ 50 ಎಂಪಿ ಕ್ಯಾಮೆರಾ ಕೂಡ ನೀಡಲಾಗಿದೆ.

ಸ್ಯಾಮ್ಸಂಗ್​

2022ರಲ್ಲಿ ಸ್ಯಾಮ್ಸಂಗ್​ ಕಂಪನಿಯು ಎರಡು ಫೋಲ್ಡೇಬಲ್​ ಫೋನ್​ಗಳನ್ನು ಮಾರಾಟಕ್ಕೆ ಇಳಿಸಿತು. ಝಡ್ ಸೀರಿಸ್​ನ ಈ ಫೋನ್​ಗಳು ಪ್ರೀಮಿಯಮ್​ ಮಾರುಕಟ್ಟೆಯ ಫೋನ್​ಗಳಾಗಿವೆ. 2023ರಲ್ಲಿ ಇನ್ನಷ್ಟು ಹೊಸ ತಾಂತ್ರಿಕತೆಯೊಂದಿಗೆ ಬರುವುದಾಗಿ ದಕ್ಷಿಣ ಕೊರಿಯಾ ಮೂಲದ ಕಂಪನಿಯು ಹೇಳಿದೆ. ಅಲ್ಲದೆ, ಫೋಲ್ಡ್​ (ಮಡಚಬಹುದಾದ) ಫೋನ್​ಗಳ ಜನಪ್ರಿಯತೆ ಹೆಚ್ಚಿಸಲು ಬೆಲೆ ಕಡಿಮೆ ಮಾಡುವ ಉದ್ದೇಶವನ್ನೂ ಹೊಂದಿದೆ.

ಒಪ್ಪೊ

ಭಾರತದ ಮಾರುಕಟ್ಟೆಯಲ್ಲಿ 2022ರಲ್ಲಿ ಸ್ವಲ್ಪ ಮಟ್ಟಿಗೆ ಪ್ರಗತಿ ಸಾಧಿಸಿದ ಸ್ಮಾರ್ಟ್​​ಫೋನ್ ತಯಾರ ಕಂಪನಿಯೆಂದರೆ ಒಪ್ಪೊ. ರೆನೊ ಸೀರಿಸ್​ ಕಡೆಗೆ ಈ ಕಂಪನಿಯು ಹೆಚ್ಚು ಗಮನ ಹರಿಸಿದ್ದು ಮಾರಾಟವೂ ಪ್ರಗತಿಯಲ್ಲಿದೆ. ಮುಂದಿನ ವರ್ಷ ಫೋಲ್ಡ್​ ಫೋನ್​ ರುವ ಸೂಚನೆಯನ್ನು ಒಪ್ಪೊ ಕಂಪನಿ ನೀಡಿದೆ.

ವಿವೊ

ಬಿಬಿಕೆ ಎಲೆಕ್ಟ್ರಾನಿಕ್ಸ್​ನ ವಿವೊ ಬ್ರಾಂಡ್​ 2022ರಲ್ಲಿ ತನ್ನ ಮೌಲ್ಯವನ್ನು ಕಳೆದುಕೊಂಡಿದೆ. ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿರುವ ಒತ್ತಡದಲ್ಲಿತ್ತು ವಿವೊ. ಜತೆಗೆ ಮಾರಾಟವೂ ಕುಸಿತ ಕಂಡಿದೆ. ಆದರೆ, ಸಬ್​ಬ್ರಾಂಡ್​ ಐಕೂ ಭಾರತದಲ್ಲಿ ಜನಪ್ರಿಯತೆ ಪಡೆಯಲು ಆರಂಭಿಸಿದೆ. ಇದೊಂದು ಗೇಮಿಂಗ್​ ಉದ್ದೇಶದ ಫೊನ್​.

ಒನ್​ ಪ್ಲಸ್​

ಒನ್​ಪ್ಲಸ್​ 10 ಮೂಲಕ ಒನ್​ಪ್ಲಸ್​ ಕಂಪನಿಯು 2022ನೇ ವರ್ಷವನ್ನು ಆರಂಭಿಸಿತ್ತು. ಆದರೆ, ನಾರ್ಡ್​ ಸೀರಿಸ್​ನ ಮೊಬೈಲ್​ಗಳು ಜನಪ್ರಿಯತೆ ಗಳಿಸಿದವು. ಹೀಗಾಗಿ ಸತತವಾಗಿ ನಾರ್ಡ್​ ಸೀರಿಸ್​ನ ಮೊಬೈಲ್​ಗಳನ್ನು ಮಾರುಕಟ್ಟೆಗೆ ಇಳಿಸಿತು. ಸ್ಮಾರ್ಟ್​ವಾಚ್​, ಇಯರ್ ಬಡ್​ ಹಾಗೂ ಸ್ಮಾರ್ಟ್​ ಟಿವಿಯನ್ನು ಮಾರುಕಟ್ಟೆಗೆ ಇಳಿಸಿದ ಹಿನ್ನೆಲೆಯಲ್ಲಿ ನಿಧಾನವಾಗಿ ಜನಪ್ರಿಯತೆ ಕಂಡುಕೊಂಡಿತು.

ರಿಯಲ್​ಮಿ

ಬಜೆಟ್​ ಹಾಗೂ ಮಿಡ್​ ಸೆಗ್ಲೆಂಟ್​ ಎಂಬ ಗೊಂದಲದ ನಡುವೆ ರಿಯಲ್​ಮಿ ಸ್ವಲ್ಪ ಮಟ್ಟಿನ ಮಾರುಕಟ್ಟೆಯನ್ನು ಕಂಡುಕೊಂಡಿದೆ. ಕ್ಸಿಯೊಮಿಗೆ ಪೈಪೋಟಿ ನೀಡುವುದೇ ಈ ಕಂಪನಿಯ ಉದ್ದೇಶದಂತಿದೆ. 2022ರಲ್ಲಿ 150 ವ್ಯಾಟ್​ನ ಚಾರ್ಜಿಂಗ್​ ತಾಂತ್ರಿಕತೆಯನ್ನು ಪರೀಕ್ಷೆಗೆ ಒಳಪಡಿಸಿದೆ. ವಿನ್ಯಾಸದ ಕಡೆಗೆ ರಿಯಲ್​ಮಿ ಹೆಚ್ಚು ಆಸಕ್ತಿ ವಹಿಸಿದೆ.

ಶಿವೊಮಿ

ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಸಿಲುಕಿ ಬಿದ್ದು ಬ್ಯಾಂಕ್​ ಖಾತೆಗಳು ತಟಸ್ಥಗೊಂಡ ಕಾರಣ ಈ ಕಂಪನಿಗೆ 2022ರಲ್ಲಿ ಹೆಚ್ಚಿನ ಸಾಧನೆ ಸಾಧ್ಯವಾಗಿಲ್ಲ. ಅತ್ಯಂತ ಕೆಟ್ಟ ವರ್ಷ ಎಂದೇ ಇದನ್ನು ಪರಿಗಣಿಸಲಾಗಿದೆ. 2014 ಜುಲೈನಲ್ಲಿ ಭಾರತದ ಮಾರುಕಟ್ಟೆಗೆ ಪ್ರವೇಶ ಪಡೆದ ಬಳಿಕದಿಂದ ಈ ಕಂಪನಿಯು ಅತ್ಯಂತ ಕಳಪೆ ಪ್ರದರ್ಶನ ನೀಡಿದ ವರ್ಷವಿದು. ರೆಡ್​ಮಿ ಮತ್ತು ಪೊಕೊ ಬ್ರಾಂಡ್​ಗಳ ಮೂಲಕ ಆನ್​ಲೈನ್​ ಮಾರುಕಟ್ಟೆಯಲ್ಲಿ ಮುಂಚೂಣಿ ಸ್ಥಾನ ಹೊಂದಿರುವ ಹೊರತಾಗಿಯೂ ಪ್ರಗತಿ ಸಾಧಿಸಿದ್ದ ಶೂನ್ಯ. ಹೊಸ ಸೀರಿಸ್​ಗಳ ಪರಿಚಯಿಸುವಲ್ಲೂ ಸೋತಿದೆ. ನ

ನಥಿಂಗ್

ಲಂಡನ್​ ಮೂಲದ ನಥಿಂಗ್ ಕಂಪನಿಯು 2022ರ ಬೇಸಿಗೆಯಲ್ಲಿ ಫೋನ್ ನಂಥಿಂಗ್ ಫೋನ್​ 1 ಅನ್ನು ಮಾರುಕಟ್ಟೆಗೆ ಇಳಿಸಿತು. ಇದು ನಿಧಾನವಾಗಿ ಜನಪ್ರಿಯತೆ ಪಡೆದುಕೊಂಡಿದೆ. ಬ್ರಾಂಡ್​ನ ಪರಿಚಯವೇ ಈ ಕಂಪನಿಯ ಗುರಿಯಾಗಿರುವ ಕಾರಣ ಹೆಚ್ಚು ಫೋನ್​ಗಳನ್ನು ಬಿಡುಗಡೆ ಮಾಡಿಲ್ಲ. ಆದರೆ, ಪಾರದರ್ಶಕ ವಿನ್ಯಾಸ ಸೇರಿದಂತೆ ಹಲವು ಹೊಸತನಗಳು ಮೆಚ್ಚುಗೆ ಗಳಿಸಿದೆ.

ಇದನ್ನೂ ಓದಿ | OnePlus and Jio | ಭಾರತದಲ್ಲಿ ಇನ್ನು ಒನ್‌ಪ್ಲಸ್‌ನ ಸ್ಮಾರ್ಟ್‌ಫೋನ್‌ಗಳಿಗೆ ಜಿಯೋ ಟ್ರೂ 5ಜಿ ಸೇವೆಯ ಬೆಂಬಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
HD Kumaraswamy
ಪ್ರಮುಖ ಸುದ್ದಿ11 mins ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ15 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್18 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ51 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ59 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ1 hour ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ2 hours ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ24 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌