ನನಗಿನ್ನು ಅಪ್ಪನಾಗಲು ಸಾಧ್ಯವೇ ಇಲ್ಲ, ಪತ್ನಿಯರಿಗೆಲ್ಲ ಮಾತ್ರೆ ತೆಗೆದುಕೊಳ್ಳಲು ಹೇಳಿದ್ದೇನೆ; ಉಗಾಂಡದ 12 ಮಹಿಳೆಯರ ಗಂಡನ ಗೋಳು! - Vistara News

ವಿದೇಶ

ನನಗಿನ್ನು ಅಪ್ಪನಾಗಲು ಸಾಧ್ಯವೇ ಇಲ್ಲ, ಪತ್ನಿಯರಿಗೆಲ್ಲ ಮಾತ್ರೆ ತೆಗೆದುಕೊಳ್ಳಲು ಹೇಳಿದ್ದೇನೆ; ಉಗಾಂಡದ 12 ಮಹಿಳೆಯರ ಗಂಡನ ಗೋಳು!

ಅಂದಹಾಗೆ ಮೂಸಾ ಹಸಹ್ಯಗೆ ಈಗ 67ವರ್ಷ. ಅವರು ಉದ್ಯಮಿಯಾಗಿದ್ದ ಕಾಲದಲ್ಲಿ ಹೆಚ್ಚಿಗೆ ಹಣ ದುಡಿಯುತ್ತಿದ್ದಾಗ 12 ಮಹಿಳೆಯರನ್ನು ಮದುವೆಯಾಗಿದ್ದರು. ಅವರಿಗೆ 102 ಮಕ್ಕಳಿದ್ದಾರೆ.

VISTARANEWS.COM


on

Man with orders his 12 wives on the pill In Uganda
ಮೂಸಾ ಹಸಹ್ಯ ಕುಟುಂಬ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

12 ಪತ್ನಿಯರ ಗಂಡನಾಗಿ, 102 ಮಕ್ಕಳಿಗೆ ಅಪ್ಪನಾದ ಉಗಾಂಡಾದ ಮೂಸಾ ಹಸಹ್ಯ ಎಂಬಾತ ಈಗ ತನ್ನ ಪತ್ನಿಯರಿಗೆ ‘ಗರ್ಭ ನಿರೋಧಕ ಮಾತ್ರೆ’ ತೆಗೆದುಕೊಳ್ಳಿ ಎಂದು ಕಟ್ಟುನಿಟ್ಟಾಗಿ ಹೇಳಿದ್ದಾನೆ. ಉಗಾಂಡಾದ ಬುಗಿಸಾದಲ್ಲಿರುವ 12 ಬೆಡ್​​ರೂಮ್​​ಗಳ ಮನೆಯೊಂದರಲ್ಲಿ ತನ್ನ 12 ಪತ್ನಿಯರು, 102 ಮಕ್ಕಳು ಮತ್ತು 568 ಮೊಮ್ಮಕ್ಕಳೊಂದಿಗೆ ವಾಸವಾಗಿರುವ ಮೂಸಾ, ‘ನನಗೀಗ ಸಾಕಾಗಿದೆಯಪ್ಪ. ನಮ್ಮ ಬಳಿ ಇರುವ ಸೀಮಿತ ಸಂಪನ್ಮೂಲಗಳ ಕಾರಣದಿಂದ ಸರಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ಇನ್ನು ಮಕ್ಕಳನ್ನು ಮಾಡಿಕೊಳ್ಳಲು ಸಾಧ್ಯವೇ ಇಲ್ಲ’ ಎಂದಿದ್ದಾರೆ.

‘ನನ್ನ ಸಂಸಾರ ತುಂಬ ದೊಡ್ಡದಾಯಿತು. ಕುಟುಂಬವನ್ನು ಸಲುಹುವುದು ಕಷ್ಟವಾಗುತ್ತಿದೆ. ನನ್ನ 12 ಪತ್ನಿಯರಲ್ಲಿ ಇನ್ನೂ ಹೆರಿಗೆ ಸಾಮರ್ಥ್ಯ ಇರುವವರೂ ಇದ್ದಾರೆ. ಅವರಿಗೆಲ್ಲ ನಾನು ಗರ್ಭ ನಿರೋಧಕ ಮಾತ್ರೆ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ಒಂದು ಟಿಪ್ಪಣಿಯನ್ನು ಬರೆದು ಎಲ್ಲರಿಗೂ ಕೊಟ್ಟುಬಿಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.

ಅಂದಹಾಗೆ ಮೂಸಾ ಹಸಹ್ಯಗೆ ಈಗ 67ವರ್ಷ. ‘ನಾನೊಬ್ಬ ಉದ್ಯಮಿಯಾಗಿದ್ದೆ. ಹಾಗೇ, ನನ್ನ ಹಳ್ಳಿಯ ಅಧ್ಯಕ್ಷನೂ ಆಗಿದ್ದೆ. ನಾನು ಯಥೇಚ್ಛವಾಗಿ ದುಡ್ಡುದುಡಿಯುತ್ತಿದ್ದೆ. ಹೀಗಾಗಿ ಹೆಚ್ಚೆಚ್ಚು ಮಹಿಳೆಯರನ್ನು ಮದುವೆಯಾಬೇಕು ಎನ್ನಿಸಿತು. ಮಕ್ಕಳಾದರು..ಮೊಮ್ಮಕ್ಕಳೂ ಹುಟ್ಟಿದರು. ಆದರೆ ಈಗ ನನ್ನ ಗಳಿಕೆ ಕಡಿಮೆಯಾಗಿದೆ. ಸಣ್ಣ ಮಕ್ಕಳು, ಮೊಮ್ಮಕ್ಕಳಿಗೆ ಶಿಕ್ಷಣ ಕೊಡಿಸಲು ಹೆಣಗಾಡುತ್ತಿದ್ದೇನೆ. ಸರ್ಕಾರದ ಸಹಾಯ ಕೇಳಿದ್ದೇನೆ’ ಎಂದು ಹಸಹ್ಯ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Viral Video | ನನ್ನ ಬಿಟ್ಟು ಯಾರನ್ನು ಮದುವೆ ಆಗ್ತಿದ್ದೀಯಾ?-ವರನ ಮೈಮೇಲೆ ಏರಿ ಕುಳಿತ ಕಪ್ಪು ಕೋತಿ, ಪಕ್ಕಕ್ಕೆ ಸರಿದ ವಧು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

Nawaz Sharif: ತಮ್ಮ ಪಾಕಿಸ್ತಾನ ಮುಸ್ಲಿಂ ಲೀಗ್‌(N) ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ನವಾಜ್‌ ಷರೀಫ್‌, ಮೇ 28, 1998,ರಂದು ಪಾಕಿಸ್ತಾನ ಐದು ಅಣು ಬಾಂಬ್‌ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದೆವು.ಅದು ನಮ್ಮ ಅತಿ ದೊಡ್ಡ ತಪ್ಪು ಎಂದರು.

VISTARANEWS.COM


on

Nawaz Sharif
Koo

ಇಸ್ಲಮಾಬಾದ್‌: ಭಾರತದ ಜೊತೆ ಮಾಡಿಕೊಂಡಿದ್ದ 1999 ಲಾಹೋರ್‌ ಒಪ್ಪಂದ(1999 Lahore Declaration)ವನ್ನು ಪಾಕಿಸ್ತಾನವೇ ಮುರಿದಿತ್ತು. ಅದು ನಮ್ಮ ಅತಿ ದೊಡ್ಡ ತಪ್ಪಾಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌(Nawaz Sharif) ಬಹಿರಂಗ ಹೇಳಿಕೆ ನೀಡಿದ್ದಾರೆ. ಆ ಮೂಲಕ ಕಾರ್ಗಿಲ್‌ ಯುದ್ಧ(Kargil War) ಜನರಲ್‌ ಫರ್ವೇಜ್‌ ಮುಷಾರಫ್‌(Pervez Musharraf) ಕುಕೃತ್ಯ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Viral Video)ದಲ್ಲಿ ಬಹಳ ಸದ್ದು ಮಾಡುತ್ತಿದೆ.

ತಮ್ಮ ಪಾಕಿಸ್ತಾನ ಮುಸ್ಲಿಂ ಲೀಗ್‌(N) ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ನವಾಜ್‌ ಷರೀಫ್‌, ಮೇ 28, 1998,ರಂದು ಪಾಕಿಸ್ತಾನ ಐದು ಅಣು ಬಾಂಬ್‌ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದೆವು.ಅದು ನಮ್ಮ ಅತಿ ದೊಡ್ಡ ತಪ್ಪು ಎಂದರು.

ಫೆಬ್ರವರಿ 21, 1999 ರಂದು ಎರಡು ಬದ್ಧ ವೈರಿ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಭಾರತ ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ನೆರೆಹೊರ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದವು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಜನ ಸಂಪರ್ಕವನ್ನು ಉತ್ತೇಜಿಸಲು ಕರೆ ನೀಡಿತು. ಆದಾಗ್ಯೂ, ಕೆಲವು ತಿಂಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಪಾಕಿಸ್ತಾನದ ಆಕ್ರಮಣವು ಕಾರ್ಗಿಲ್ ಯುದ್ಧಕ್ಕೆ ಕಾರಣವಾಯಿತು.

ಮಾರ್ಚ್ 1999 ರಿಂದ, ಪಾಕಿಸ್ತಾನ ಸೇನೆಯ ಜನರಲ್ ಆಗಿದ್ದ ಮುಷರಫ್, ಲಡಾಖ್‌ನ ಕಾರ್ಗಿಲ್ ಜಿಲ್ಲೆಯೊಳಗೆ ಪಾಕ್‌ ಸೇನೆಯ ರಹಸ್ಯ ಒಳನುಸುಳುವಿಕೆಗೆ ಆದೇಶಿಸಿದರು. ನವದೆಹಲಿ ಒಳನುಸುಳುವಿಕೆಯನ್ನು ಕಂಡುಹಿಡಿದ ನಂತರ ಪೂರ್ಣ ಪ್ರಮಾಣದ ಯುದ್ಧವು ಸ್ಫೋಟಗೊಂಡಿತು. ಈ ಯುದ್ಧವನ್ನು ಭಾರತ ಗೆದ್ದಿತ್ತು. ಈ ಸಂರ್ಭದಲ್ಲಿ ಷರೀಫ್‌ ಪಾಕಿಸ್ತಾನದ ಪ್ರಧಾನಿ ಆಗಿದ್ದರು.

ಇದನ್ನೂ ಓದಿ:Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

ಇದೀಗ ಇದೇ ವಿಚಾರ ಬಗ್ಗೆ ಪ್ರಸ್ತಾಪಿಸಿರುವ ಷರೀಫ್‌ ಅಂದು ತಮ್ಮ ಸರ್ಕಾರ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಸರ್ಕಾರಿ ಸ್ವಾಮ್ಯದ ಪಾಕಿಸ್ತಾನ್ ಟೆಲಿವಿಷನ್ ಕಾರ್ಪೊರೇಷನ್ (ಪಿಟಿವಿ) ಪ್ರಸಾರ ಮಾಡಿದ ನವಾಜ್ ಷರೀಫ್ ಅವರ ಭಾಷಣದ ಒಂದು ಭಾಗವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Continue Reading

ವಿದೇಶ

Fraud Case: ಒಂದು ವರ್ಷ ಪ್ರೀತಿಸಿ ಮದುವೆಯಾದ; 12 ದಿನಗಳ ಬಳಿಕ ಬಯಲಾಯ್ತು ಆಕೆಯ ದೇಹ ರಹಸ್ಯ!

ಆಸ್ತಿ ಲಪಟಾಯಿಸಲು ಹೆಣ್ಣಿನಂತೆ ವೇಷಭೂಷಣ ತೊಟ್ಟು ಇಂಡೋನೇಷ್ಯಾದ ವ್ಯಕ್ತಿಯೊಬ್ಬನನ್ನು ಮದುವೆಯಾದ 12 ದಿನಗಳ ಬಳಿಕ ಆತನ ವಂಚನೆಯ (Fraud Case) ಜಾಲ ಬಯಲಾಗಿದೆ. ಈ ಕುರಿತ ಕುತೂಹಲಕಾರಿ ಕತೆ ಇಲ್ಲಿದೆ.

VISTARANEWS.COM


on

By

Fraud Case
Koo

ಒಂದು ವರ್ಷ ಪ್ರೀತಿಸಿ, ಬಳಿಕ ಮದುವೆಯಾಗಿ 12 ದಿನಗಳ ಬಳಿಕ ಇಂಡೋನೇಷ್ಯಾದ (Indonesia) 26 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮಹಿಳೆಯಲ್ಲ (Fraud Case) ಎಂಬುದನ್ನು ತಿಳಿದು ಆಘಾತಗೊಂಡಿದ್ದಾನೆ. 2023ರಲ್ಲಿ ಅವರಿಬ್ಬರು ಸಾಮಾಜಿಕ ಜಾಲತಾಣದಲ್ಲಿ (social media) ಭೇಟಿಯಾಗಿದ್ದು, ಒಂದು ವರ್ಷದ ಬಳಿಕ ಇಬ್ಬರೂ ಮದುವೆಗೆ (wedding) ಸಮ್ಮತಿ ಸೂಚಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಭೇಟಿಯಾಗಿದ್ದ ಇಬ್ಬರೂ ಒಂದು ವರ್ಷದ ಬಳಿಕ ವೈಯಕ್ತಿಕವಾಗಿ ಭೇಟಿಯಾಗಲು ನಿರ್ಧರಿಸಿದ್ದರು. ಅದಿಂಡಾ ಹೆಸರಿನಲ್ಲಿ ಪರಿಚಯವಾದ ಹುಡುಗಿ ಸಂಪೂರ್ಣ ಮುಖವನ್ನು ಮುಚ್ಚುವ ಸಾಂಪ್ರದಾಯಿಕ ಮುಸ್ಲಿಂ ಉಡುಗೆಯನ್ನು ಯಾವಾಗಲೂ ಧರಿಸುತ್ತಿದ್ದ.ಳು. ಅದು ಯಾಕೆ ಎಂದು ಯುವಕ ಪ್ರಶ್ನೆ ಮಾಡಲಿಲ್ಲ. ಅದು ಆಕೆಯ ಇಸ್ಲಾಂ ಧರ್ಮದ ಮೇಲಿನ ಭಕ್ತಿಯ ಸಂಕೇತವೆಂದು ಎಕೆ ಭಾವಿಸಿದ್ದ.

ಕೊನೆಗೆ ಇಬ್ಬರೂ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದರು. ಮದುವೆಗೆ ಹಾಜರಾಗಲು ತನಗೆ ಯಾವುದೇ ಕುಟುಂಬವಿಲ್ಲ ಎಂದು ಅದಿಂಡಾ ಎಕೆಗೆ ತಿಳಿಸಿದ್ದಳು. ಆದ್ದರಿಂದ ಇವರಿಬ್ಬರು ಏಪ್ರಿಲ್ 12ರಂದು ಎಕೆ ಮನೆಯಲ್ಲಿ ಸಾಧಾರಣ ಸಮಾರಂಭದ ಮೂಲಕ ಪತಿಪತ್ನಿಯರಾದರು.

ಮದುವೆಯ ಅನಂತರವೂ ಅದಿಂಡಾ ತನ್ನ ಪತಿಯಿಂದ ತನ್ನ ಮುಖವನ್ನು ನಿರಂತರವಾಗಿ ಮರೆಮಾಡಿದಳು ಮತ್ತು ಅವನ ಹಳ್ಳಿಯಲ್ಲಿ ಅವನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಬೆರೆಯಲು ನಿರಾಕರಿಸಿದಳು. ಇದಲ್ಲದೆ, ಅವಳು ಮದುವೆಯ ಅನಂತರದ ಶಾಸ್ತ್ರಗಳನ್ನು ಮಾಡಲು ನಿರಾಕರಿಸಿದಳು. ಋತುಚಕ್ರ, ಆರೋಗ್ಯ ಸಮಸ್ಯೆ ಎಂದು ಹೇಳಿ ಗಂಡನೊಂದಿಗೆ ಸೇರಲು ನಿರಾಕರಿಸಿದಳು.

12 ದಿನಗಳ ಬಳಿಕ ಮಾಹಿತಿ ಬಹಿರಂಗ

ಹನ್ನೆರಡು ದಿನಗಳ ಅನುಮಾನಾಸ್ಪದ ವರ್ತನೆಯ ಅನಂತರ ಎಕೆ ತನ್ನ ಹೆಂಡತಿಯನ್ನು ತನಿಖೆ ಮಾಡಲು ನಿರ್ಧರಿಸಿದ. ಅದಿಂಡಾ ಅವರ ಪೋಷಕರು ಇನ್ನೂ ಜೀವಂತವಾಗಿದ್ದಾರೆ ಎಂಬುದನ್ನು ಆತ ಕಂಡುಕೊಂಡ. ಮಗನ ಈ ಹೊಸ ಸಂಬಂಧದ ಬಗ್ಗೆ ಅವರಿಗೆ ಸಂಪೂರ್ಣವಾಗಿ ತಿಳಿದಿರಲಿಲ್ಲ. ಆಘಾತಕಾರಿ ವಿಷಯವೆಂದರೆ ಅದಿಂಡಾ ವಾಸ್ತವವಾಗಿ 2020ರಲ್ಲಿ ಕ್ರಾಸ್ ಡ್ರೆಸ್ಸಿಂಗ್ ಮಾಡುತ್ತಿರುವ ಇಎಸ್ ಹೆಚ್ ಎಂದು ಗುರುತಿಸಲ್ಪಟ್ಟಿದ್ದಾನೆ.

ಯಾಕಾಗಿ ವಂಚನೆ?

ಪೊಲೀಸ್ ತನಿಖೆಯ ಸಮಯದಲ್ಲಿ ಆಸ್ತಿ ಕದಿಯಲು ಎಕೆಯನ್ನು ಇಎಸ್ ಹೆಚ್ ವಿವಾಹವಾದ ಎಂದು ತಿಳಿದು ಬಂದಿದೆ. ಆತನನ್ನು ಬಂಧಿಸಿರುವ ಪೊಲೀಸರು ಆತನ ಧ್ವನಿ ಮಹಿಳೆಯಂತೆ ಇದೆ. ಆತ ನಿಜವಾಗಿಯೂ ತನ್ನ ಪಾತ್ರವನ್ನು ಚೆನ್ನಾಗಿ ನಿರ್ವಹಿಸಿದ್ದಾನೆ ಎಂದು ತಿಳಿಸಿದ್ದಾರೆ!

ಎಕೆ ಮತ್ತು ಇಎಸ್ ಹೆಚ್ ಮದುವೆಯ ಫೋಟೋಗಳನ್ನು ನೋಡಿದರೆ ಅದಿಂಡ ನಿಜವಾದ ಮಹಿಳೆಯಂತೆ ಕಾಣುತ್ತಾನೆ. ಸೌಮ್ಯವಾದ ಧ್ವನಿ ಮತ್ತು ಸ್ವರವೂ ಅವನಿಗಿದೆ. ಆದ್ದರಿಂದ ಅವನು ಮಹಿಳೆ ಎಂಬುದರ ಬಗ್ಗೆ ಯಾವುದೇ ಅನುಮಾನವಿರಲಿಲ್ಲ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ: Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

ಏನು ಶಿಕ್ಷೆ ?

ಸ್ಥಳೀಯ ಕಾನೂನುಗಳ ಅಡಿಯಲ್ಲಿ ವಂಚನೆ ಆರೋಪಗಳನ್ನು ಎದುರಿಸುತ್ತಿರುವ ಆತನಿಗೆ ನಾಲ್ಕು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುವುದು.

ಈ ಸುದ್ದಿ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರನ್ನು ಬೆಚ್ಚಿ ಬೀಳಿಸಿದೆ. ಒಬ್ಬ ವ್ಯಕ್ತಿ ಪಾಪ ಎಕೆ, ಒಂದು ವರ್ಷಕ್ಕೂ ಹೆಚ್ಚು ಕಾಲ ಅಡ್ಡ ಡ್ರೆಸ್ಸರ್‌ನೊಂದಿಗಿನ ಸಂಬಂಧದಲ್ಲಿದ್ದು ಮೋಸ ಹೋಗಿರುವುದು ಸಂಕಟ ಉಂಟು ಮಾಡುತ್ತದೆ. ಮದುವೆ ಮತ್ತು ಹಣ ಎರಡನ್ನೂ ಕಳೆದುಕೊಂಡಿದ್ದಾನೆ ಎಂದು ಕಾಮೆಂಟ್ ಮಾಡಿದ್ದಾರೆ.

Continue Reading

ದೇಶ

Cyclone Remal: ರೆಮಲ್‌ ಚಂಡಮಾರುತದ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ; 16 ಮಂದಿಯನ್ನು ಬಲಿ ಪಡೆದ ಭೀಕರ ಮಳೆ

Cyclone Remal: ಪ್ರಬಲ ಚಂಡಮಾರುತ ರೆಮಲ್‌ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಅಕ್ಷರಶಃ ನಲುಗಿ ಹೋಗಿವೆ. ರೆಮಲ್ ಚಂಡಮಾರುತದ ಕಾರಣದಿಂದ ಬಂಗಾಳ ಕೊಲ್ಲಿಯ ಕರಾವಳಿಯಲ್ಲಿ ಭೂಕುಸಿತ ಉಂಟಾಗಿದ್ದು, ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಮಂದಿಯನ್ನು ಬಲಿ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಉಳಿದ ಸಾವು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ಪೈಕಿ ಕೆಲವರು ಸಂತ್ರಸ್ತ ಶಿಬಿರಕ್ಕೆ ಸ್ಥಳಾಂತರಿಸುವ ವೇಳೆ ಮೃತಪಟ್ಟರೆ, ಇನ್ನು ಹಲವರು ಭೀಕರ ಮಳೆಯಿಂದ ಮನೆ ಕುಸಿದು, ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Cyclone Remal
Koo

ಕೋಲ್ಕತ್ತಾ: ಈ ವರ್ಷದ ಮೊದಲ ಪ್ರಬಲ ಚಂಡಮಾರುತ ರೆಮಲ್‌ (Cyclone Remal) ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಅಕ್ಷರಶಃ ನಲುಗಿ ಹೋಗಿವೆ. ರೆಮಲ್ ಚಂಡಮಾರುತದ ಕಾರಣದಿಂದ ಬಂಗಾಳ ಕೊಲ್ಲಿಯ ಕರಾವಳಿಯಲ್ಲಿ ಭೂಕುಸಿತ ಉಂಟಾಗಿದ್ದು, ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಮಳೆಯಿಂದಾಗಿ ಹಲವು ಮಂದಿ ಗಾಯಗೊಂಡಿದ್ದು, ಅನೇಕ ಮನೆಗಳು, ಮರಗಳು ಧರೆಗುರುಳಿವೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ವಿದ್ಯುತ್ ಮಾರ್ಗಗಳಿಗೆ ತೀವ್ರ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಗಂಟೆಗೆ 135 ಕಿ.ಮೀ ವೇಗದಲ್ಲಿ ಬೀಸಿದ ಚಂಡಮಾರುತವು ಭಾನುವಾರ ತಡರಾತ್ರಿ ಬಾಂಗ್ಲಾದೇಶದ ದಕ್ಷಿಣ ಬಂದರು ಮೊಂಗ್ಲಾ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಸಾಗರ್ ದ್ವೀಪಗಳ ಸುತ್ತಮುತ್ತಲಿನ ಪ್ರದೇಶವನ್ನು ದಾಟಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಉಳಿದ ಸಾವು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ಪೈಕಿ ಕೆಲವರು ಸಂತ್ರಸ್ತ ಶಿಬಿರಕ್ಕೆ ಸ್ಥಳಾಂತರಿಸುವ ವೇಳೆ ಮೃತಪಟ್ಟರೆ, ಇನ್ನು ಹಲವರು ಭೀಕರ ಮಳೆಯಿಂದ ಮನೆ ಕುಸಿದು, ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತದ ಪ್ರಭಾವ ವಿದ್ಯುತ್ ಮಾರ್ಗಗಳ ಮೇಲೂ ಬೀರಿದ್ದು, ಹಲವು ಕರಾವಳಿ ಪ್ರದೇಶಗಳಿಗೆ ಸಂಪರ್ಕ ಕಡಿತಗೊಂಡಿದೆ. ಪರಿಣಾಮ ಬಾಂಗ್ಲಾದೇಶದ ಲಕ್ಷಾಂತರ ಮಂದಿ ಮತ್ತು ಪಶ್ಚಿಮ ಬಂಗಾಳದ ಸಾವಿರಾರು ಮಂದಿ ವಿದ್ಯುತ್‌ ಇಲ್ಲದೆ ಪರದಾಡುವಂತಾಗಿದೆ. ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 1,200 ವಿದ್ಯುತ್‌ ಕಂಬಗಳು ಧರೆಗುರುಳಿವೆ ಮತ್ತು 300 ಮಣ್ಣಿನ ಗುಡಿಸಲುಗಳು ನೆಲಸಮವಾಗಿದೆ ಎಂದು ಅಂದಾಜಿಸಲಾಗಿದೆ.

ʼʼಅಪಘಾತಗಳನ್ನು ತಪ್ಪಿಸಲು ಕೆಲವು ಪ್ರದೇಶಗಳಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಇತ್ತ ಮರಗಳು ಬಿದ್ದು ಅನೇಕ ಕರಾವಳಿ ಪಟ್ಟಣಗಳ ವಿದ್ಯುತ್‌ ಪೂರೈಕೆಗೆ ಅಡ್ಡಿಯಾಗಿದೆʼʼ ಎಂದು ಬಾಂಗ್ಲಾದೇಶದ ವಿದ್ಯುತ್ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೀದಿಗಳಿಗೆ ನುಗ್ಗಿದ ನೆರೆ

ಚಂಡಮಾರುತ ಕಾರಣದಿಂದ ಮೇ 27ರಂದು ಭೀಕರ ಮಳೆಯಾಗಿದ್ದು, ಕೋಲ್ಕತ್ತಾದ ಹಲವು ಬೀದಿಗಳಿಗೆ ನೆರೆ ನೀರು ನುಗ್ಗಿದೆ. ಅನೇಕ ಕಡೆ ಗೋಡೆಗಳು ಕುಸಿದು ಬಿದ್ದಿದ್ದು, ಕನಿಷ್ಠ 52 ಮರಗಳು ಧರೆಗುರುಳಿವೆ. ಭಾನುವಾರ ಸುಮಾರು 50 ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದ್ದು, ಸದ್ಯ ಸಂಚಾರ ಆರಂಭಿಸಿವೆ. ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ.

ಇದನ್ನೂ ಓದಿ: Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

10 ಲಕ್ಷ ಮಂದಿಯ ಸ್ಥಳಾಂತರ

ಭಾರತ ಮತ್ತು ಬಾಂಗ್ಲಾದೇಶದ ಕನಿಷ್ಠ 10 ಲಕ್ಷ ಮಂದಿಯನ್ನು ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ʼʼನದಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ಜನರನ್ನು ನಿರಾಶ್ರಿತ ಶಿಬಿರಗಳಿಗೆ ಕರೆದೊಯ್ಯಲಾಗಿದೆʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Continue Reading

ದೇಶ

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

ಮೌಂಟ್ ಎವರೆಸ್ಟ್ ನಲ್ಲಿ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು,ಈ ಬಗ್ಗೆ ಭಾರತದ ಪರ್ವತಾರೋಹಿ ರಾಜನ್ ದ್ವಿವೇದಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video)ಆಗಿದೆ. ಅಲ್ಲೇಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ? ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Viral Video
Koo

ಮೌಂಟ್ ಎವರೆಸ್ಟ್ ನಲ್ಲಿ (Mount Everest) ಪರ್ವತಾರೋಹಿಗಳು (climber) ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಆರೋಹಿಗಳ ಉದ್ದನೆಯ ಸರತಿಯ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ (Instagram) ಭಾರತದ (indian) ಪರ್ವತಾರೋಹಿ ರಾಜನ್ ದ್ವಿವೇದಿ (Rajan Dwivedi) ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ಮೌಂಟ್ ಎವರೆಸ್ಟ್ ನಲ್ಲಿ ಮಂಗಳವಾರ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಬ್ರಿಟಿಷ್ ಪರ್ವತಾರೋಹಿ ಮಾರ್ ಪ್ಯಾಟರ್ಸನ್ (39) ಮತ್ತು ನೇಪಾಳಿ ಶೆರ್ಪಾ ಪಾಸ್ತೆಂಜಿ (23) ಅವರು ಹಿಲರಿ ಹಂತವನ್ನು ಹತ್ತುವಾಗ ಕುಸಿದು ಬಿದ್ದಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಮೇ 20ರಂದು ರಾಜನ್ ದ್ವಿವೇದಿ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋ ಅವರ ಹಿಂದೆ ಇರುವ ಆರೋಹಿಗಳ ಗುಂಪಿನ ಚಿತ್ರಣವನ್ನು ತೋರಿಸಿದೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದ್ವಿವೇದಿ ಅವರು ಮೌಂಟ್ ಎವರೆಸ್ಟ್ ಅನ್ನು ಏರುವಾಗ ಎದುರಾಗುವ ಸವಾಲುಗಳ ಬಗ್ಗೆ ಹೇಳಿದ್ದಾರೆ. ಒಂದೇ ಹಗ್ಗವನ್ನು ಹಿಡಿದುಕೊಂಡು ನಾವೆಲ್ಲ ಜೊತೆಯಾಗಿ ಸಾಗುತ್ತಿದ್ದೇವೆ. ಪರ್ವತ ಏರಲು, ಇಳಿಯಲು ಟ್ರಾಫಿಕ್ ತೊಂದರೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಹವಾಮಾನ. ಆರೋಹಿಗಳ ದೊಡ್ಡ ಸಾಲು ಬರುತ್ತಿರುವುದನ್ನು ನೋಡುವಾಗ ನನಗೆ ಕೆಳಗೆ ಬರುವುದು ಒಂದು ದುಃಸ್ವಪ್ನದಂತೆ ಕಂಡಿತ್ತು ಮತ್ತು ತೀವ್ರವಾಗಿ ದಣಿದಿದ್ದೆ ಎಂದು ಹೇಳಿದ್ದಾರೆ.


ದ್ವಿವೇದಿ ಆರೋಹಣದ ಮೂರು ನಿರ್ದಿಷ್ಟ ಪ್ರಯಾಸಕರ ವಿಭಾಗಗಳನ್ನು ಏರಿದ್ದಾರೆ. ಖುಂಬು ಐಸ್‌ಫಾಲ್ಸ್, ಕ್ಯಾಂಪ್ 3 ರಿಂದ ಕ್ಯಾಂಪ್ 4 ಕ್ಕೆ ಆರೋಹಣ. ಕ್ಯಾಂಪ್ 4 ರಿಂದ ಶಿಖರದ ಅಂತಿಮ ವಲಯ ಸಾವಿನ ವಲಯ ವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ರಾತ್ರಿಯ ಸಮಯದಲ್ಲಿ ಹೆಪ್ಪುಗಟ್ಟಿದ ತಾಪಮಾನದ ನಡುವೆ ಪ್ರವಾಸ ಕೈಗೊಳ್ಳಲಾಗುತ್ತದೆ.

ಮೌಂಟ್ ಎವರೆಸ್ಟ್ ಏರುವುದು ಒಂದು ತಮಾಷೆಯ ಸಂಗತಿ ಅಲ್ಲ ಮತ್ತು ವಾಸ್ತವವಾಗಿ ಅದು ಗಂಭೀರ ಆರೋಹಣ ಎಂದು ದ್ವಿವೇದಿ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಶಿಖರದಿಂದ ಇಳಿಯುವುದು ಸವಾಲಿನ ಕಾರ್ಯವಾಗುತ್ತಿದೆ. ವಿಶೇಷವಾಗಿ ಹವಾಮಾನ ವೈಪರೀತ್ಯದ ನಡುವೆಯೂ ಹೆಚ್ಚಿನ ಸಂಖ್ಯೆಯ ಆರೋಹಿಗಳು ಮೇಲೆ ಏರುತ್ತಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಸುಮಾರು 500 ಆರೋಹಿಗಳು, ಹವ್ಯಾಸಿಗಳು ಮತ್ತು ಅನನುಭವಿಗಳು ಇದನ್ನು ಏರಲು ಪ್ರಯತ್ನಿಸುತ್ತಾರೆ. ಬಹುಶಃ 250- 300 ಮಂದಿ ಮಾತ್ರ ಯಶಸ್ವಿಯಾಗುತ್ತಾರೆ. ಅನೇಕರು ಗಾಯಗೊಂಡು ಪ್ರವಾಸವನ್ನು ಕೊನೆಗೊಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದ್ವಿವೇದಿ ಹಂಚಿಕೊಂಡಿರುವ ವಿಡಿಯೋವು ಒಂದು ಹಗ್ಗದ ಸಾಲಿನಲ್ಲಿ ದೀರ್ಘ ಕಾಯುವಿಕೆ ಮತ್ತು ಟ್ರಾಫಿಕ್ ಅಪ್‌ಸ್ಟ್ರೀಮ್ ಮತ್ತು ಡೌನ್‌ಸ್ಟ್ರೀಮ್‌ನಲ್ಲಿ ಇಂಟರ್‌ಚೇಂಜ್‌ಗಳ ಮಾತುಕತೆಗಳನ್ನು ತೋರಿಸುತ್ತದೆ.

ಇದನ್ನೂ ಓದಿ: Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು


ಉದ್ದನೆಯ ಸರದಿಯ ಮತ್ತೊಂದು ವಿಡಿಯೋ ವನ್ನು ಹಂಚಿಕೊಂಡ ಮಾಸ್ಸಿಮೊ ಎಕ್ಸ್ ನಲ್ಲಿ ಟ್ರಾಫಿಕ್ ಜಾಮ್‌ಗಳ ಕಾರಣಗಳು, ತಾಪಮಾನದಲ್ಲಿ ತೀವ್ರ ಕುಸಿತ, ಹಗ್ಗಗಳನ್ನು ಸರಿಪಡಿಸಿದ ದಿನಾಂಕ ಮತ್ತು ನಿಧಾನ ಪ್ರಯಾಣ, ಅನನುಭವಿ ಆರೋಹಿಗಳ ಕುರಿತು ಹೇಳಿಕೊಂಡಿದ್ದಾರೆ.

ಅನೇಕ ಪರಿಸರವಾದಿಗಳು ಮತ್ತು ಆರೋಹಿಗಳು ಎವರೆಸ್ಟ್‌ನಲ್ಲಿ ಜನಸಂದಣಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರ್ವತದ ಮೇಲೆ ಅನೇಕ ಅಪಘಾತಗಳು ಮತ್ತು ಸಾವುಗಳ ಹೊರತಾಗಿಯೂ ನೂರಾರು ಜನರು ವಿಶ್ವದ ಅತಿ ಎತ್ತರದ ಶಿಖರವನ್ನು ಏರಲು ತಯಾರಾಗುತ್ತಾರೆ.

Continue Reading
Advertisement
Radhika Pandit
ಸ್ಯಾಂಡಲ್ ವುಡ್22 seconds ago

Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Ambareesh Birthday
ಸಿನಿಮಾ29 mins ago

Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Ambareesh Birthday heartfelt note By sumalatha
ಸ್ಯಾಂಡಲ್ ವುಡ್34 mins ago

Ambareesh Birthday: ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್‌ !

Vastu Tips
ಧಾರ್ಮಿಕ44 mins ago

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

Mani Shankar Aiyar
ದೇಶ54 mins ago

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Uttarakaanda Movie Shivarajkumar Visits Savadatti Yallamma Temple After Uttarakaanda Movie
ಸ್ಯಾಂಡಲ್ ವುಡ್1 hour ago

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

school reopen
ಪ್ರಮುಖ ಸುದ್ದಿ1 hour ago

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

Nawaz Sharif
ವಿದೇಶ2 hours ago

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

prajwal revanna case mattress
ಪ್ರಮುಖ ಸುದ್ದಿ2 hours ago

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

AC Side Effects
ಆರೋಗ್ಯ3 hours ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು23 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌