Black Day | ದ.ಕ., ಉ.ಕ, ಉಡುಪಿ, ಬಾಗಲಕೋಟೆಯಲ್ಲಿ ರಸ್ತೆ ಅಪಘಾತ; ಶಾಲಾ ಬಾಲಕ ಸೇರಿ ಮೂವರ ಸಾವು, ಹಲವರು ಗಂಭೀರ - Vistara News

ಉಡುಪಿ

Black Day | ದ.ಕ., ಉ.ಕ, ಉಡುಪಿ, ಬಾಗಲಕೋಟೆಯಲ್ಲಿ ರಸ್ತೆ ಅಪಘಾತ; ಶಾಲಾ ಬಾಲಕ ಸೇರಿ ಮೂವರ ಸಾವು, ಹಲವರು ಗಂಭೀರ

Black Day | ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ ನಡೆದಿದ್ದು, ಶಾಲಾ ಬಾಲಕ ಸೇರಿ ಬೈಕ್‌ ಹಿಂಬದಿ ಸವಾರ, ಲಾರಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಚಾಲಕರ ಅಜಾಗರೂಕತೆ, ಅತಿ ವೇಗವೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು/ಕಾರವಾರ/ಉಡುಪಿ/ಬಾಗಲಕೋಟೆ: ಮಂಗಳವಾರ (ಡಿ. ೨೭) ರಾಜ್ಯದ ಹಲವು ಕಡೆ ಅಪಘಾತಗಳು ಸಂಭವಿಸಿದ್ದು, ಸಾಕಷ್ಟು ಸಾವು-ನೋವುಗಳು ವರದಿಯಾಗಿವೆ. ಮಂಗಳೂರಿನ ಉಳ್ಳಾಲ ತಾಲೂಕಿನ ಮುಡಿಪು ಎಂಬಲ್ಲಿ ಕಾರು ಹರಿದು ಶಾಲಾ ಬಾಲಕನೊಬ್ಬ (Black Day) ಮೃತಪಟ್ಟಿರುವ ಘಟನೆ ನಡೆದಿದೆ.

ಶಾಲಾ ಬಾಲಕ ರಸ್ತೆ ದಾಟುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿ ಅಸುನೀಗಿದ್ದಾನೆ. ಇತ್ತ ಘಟನಾ ಸ್ಥಳದಲ್ಲಿ ಸಾರ್ವಜನಿಕರು ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದರು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Black Day

ಮತ್ತೊಂದು ಕಡೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬಳಿ ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಆಗಿದೆ. ಎರಡೂ ಬಸ್ ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಸಿಂದನೂರು ಶಾಲಾ ಮಕ್ಕಳ ಪ್ರವಾಸದ ಖಾಸಗಿ ಬಸ್ ಇದಾಗಿದ್ದು, ಧರ್ಮಸ್ಥಳದಿಂದ ನೆಲ್ಯಾಡಿ ಕಡೆ ಬರುತ್ತಿತ್ತು. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲ್ಯಾಡಿ ಹಾಗೂ ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಚಾಲಕ ಸಾವು
ರಸ್ತೆ ಬದಿ ಲಾರಿಯ ಟೈರ್ ಪಂಚರ್ ತೆಗೆಯುತ್ತಿದ್ದ ಚಾಲಕನಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ದುಂಡಕುಳಿ ಗ್ರಾಮದಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕನ ದೇಹ ಛಿದ್ರವಾಗಿತ್ತು. ವೇಗವಾಗಿ ಬಂದ ಸರಕು ಸಾಗಣೆ ಲಾರಿಯು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Black Day

ಬಸ್‌-ಆಟೋ ನಡುವೆ ಮುಖಾಮುಖಿ ಡಿಕ್ಕಿ
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಅಪಘಾತ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸಾಗರ ರಸ್ತೆಯ ಕಡವಿನಕಟ್ಟೆ ಕ್ರಾಸ್ ಬಳಿ ಘಟನೆ ನಡೆದಿದೆ. ಆಟೋ ಚಾಲಕ ಜಟ್ಟಾ ನಾಯ್ಕ, ಪ್ರಯಾಣಿಕರಾದ ಜಯಂತಿ ಪೈ ಅವರಿಗೆ ಗಂಭೀರ ಗಾಯಗೊಂಡಿದ್ದಾರೆ. ಜತೆಗೆ ಹಳಿಯಾಳ ಮೂಲದ ಸತೀಶ ಹುನ್ಸ್ನಾಡ್ಕರ್, ಸೌಮ್ಯ ಹುನ್ಸ್ನಾಡ್ಕರ್, ಹಲ್ಯಾಣಿ ನಿವಾಸಿ ಮಹಾಲಕ್ಷ್ಮಿ ಕಿಣಿ ಎಂಬುವವರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಭೀರ ಗಾಯಗೊಂಡವರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಟೋ ಭಟ್ಕಳದಿಂದ ಹಲ್ಯಾಣಿ ಗ್ರಾಮಕ್ಕೆ ತೆರಳುತ್ತಿದ್ದರೆ, ಡಿಪೋದಿಂದ ಭಟ್ಕಳಕ್ಕೆ ಹೊರಟಿದ್ದ ಬಸ್ ಮುಖಾಮುಖಿ ಡಿಕ್ಕಿ ಆಗಿದೆ. ಸ್ಥಳಕ್ಕೆ ಭಟ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಗುದ್ದಿದ ಕಾರು
ಬಾಗಲಕೋಟೆಯ ಉದ್ಯಾನಗಿರಿಯ ತೋಟಗಾರಿಕಾ ವಿವಿ ಸಮೀಪ ಕ್ಯಾಂಟರ್‌ ವಾಹನಕ್ಕೆ ಹಿಂಬದಿಯಿಂದ ಕಾರು ಬಂದು ಗುದ್ದಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಗೊಂಡ ಚಾಲಕನನ್ನು 108 ವಾಹನದ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Black Day

ಬೈಕ್‌ಗೆ ಕ್ರೇನ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು
ಉಡುಪಿಯ ಕುಂದಾಪುರ ಸಮೀಪದ ಬಳ್ಕೂರು ಪಾನಕದ ಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಕ್ರೇನ್ ಡಿಕ್ಕಿಯಾಗಿ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಹುಣಸೆಮಕ್ಕಿ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು. ದಿನೇಶ್ ಎಂಬುವವರೊಂದಿಗೆ ಬೈಕ್‌ನಲ್ಲಿ ಕುಂದಾಪುರದಿಂದ ಸಿದ್ದಾಪುರಕ್ಕೆ ತೆರಳಿತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ರಸ್ತೆಗುರುಳಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್ ಮೃತಪಟ್ಟಿದ್ದರೆ, ಸವಾರ ದಿನೇಶ್‌ಗೆ ಗಾಯಗಳಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇತ್ತ ಅಪಘಾತದ ಬಳಿಕ ಕ್ರೇನ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Prahlad Modi | ಬಂಡೀಪುರಕ್ಕೆ ಹೊರಟಿದ್ದ ಮೋದಿ ಸಹೋದರನ ಕುಟುಂಬದ ಕಾರು ಅಪಘಾತ; ಮಗುವಿನ ಕಾಲು ಮೂಳೆ ಕಟ್‌, ಉಳಿದವರು ಪಾರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶ್ರದ್ಧಾಂಜಲಿ

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Sagri Raghavendra Upadhyaya: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕರ್ಥ, ಪ್ರಕಾಶಕ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ.

VISTARANEWS.COM


on

Hiriya vidwamsa Sagri Raghavendra Upadhyaya passed away
Koo

ಬೆಂಗಳೂರು: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕಾರ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) (Sagri Raghavendra Upadhyaya) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ನರಸಿಂಹ ಉಪಾಧ್ಯಾಯ ಮತ್ತು ಸೀತಾಲಕ್ಷ್ಮಿ ದಂಪತಿಯ ಪುತ್ರನಾಗಿ 1953ರಲ್ಲಿ ಜನಿಸಿದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು, ಶೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ಕಾಪು ಹಯಗ್ರೀವಾಚಾರ್ಯರು ಮೊದಲಾದ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತ್ರದಲ್ಲಿ, ಸಂಸ್ಕೃತದಲ್ಲಿ ಎಂ.ಎ ಪಡೆದು ಎಸ್‌ಎಂಎಸ್‌ಪಿ ಸಂಸ್ಕೃತ ಕಾಲೇಜು, ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ತಮ್ಮದೇ ಆದ ಪರವಿದ್ಯಾ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ, ನೂರಾರು ಗ್ರಂಥಗಳನ್ನು ರಚಿಸಿದ್ದಾರೆ. ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿ ಗೌರವ ಮತ್ತು ಮಾನ್ಯತೆಗೆ ಭಾಜನರಾಗಿದ್ದರು. ಕನ್ನಡ ಧಾರ್ಮಿಕ ಸಾಹಿತ್ಯದಲ್ಲಿ ಉತ್ತಮ ಹೆಸರು ಗಳಿಸಿರುವ ತತ್ವವಾದ ಮತ್ತು ಸರ್ವಮೂಲ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು.

ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀ ಭಂಡಾರಕೇರಿ ಮಠದಲ್ಲಿ ಶ್ರೀ ವಿದ್ಯೇಶತೀರ್ಥರ 70ನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ತಮ್ಮ ಕೊನೆಯ ಉಪನ್ಯಾಸ ನೀಡಿ, ನಂತರದ ಕೆಲವೇ ನಿಮಿಷಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಬಳಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೇತರಿಸಿಕೊಳ್ಳಲಾಗದೇ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಚಾಮರಾಜಪೇಟೆ ಚಿತಾಗಾರದಲ್ಲಿ ನೂರಾರು ವಿದ್ವಾಂಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಒದಿ: Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

ತೀವ್ರ ಸಂತಾಪ: ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರ ನಿಧನಕ್ಕೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Continue Reading

ಮಳೆ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಪ್ರಮಾಣ ತಗ್ಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ (Karnataka Weather Forecast) ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯ ಸಿಂಚನ

ಉತ್ತರ ಒಳನಾಡು, ಕರಾವಳಿಯ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂ.ಮೀ, ಉಡುಪಿ, ಶೋರಾಪುರ, ಸೈದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ , ಕೆಂಭಾವಿ , ತಾವರಗೇರಾ , ಮುದಗಲ್, ಮಂಠಾಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಹೊನಾವರ ವೀಕ್ಷಣಾಲಯ , ಕಾರ್ಕಳ, ಸಿದ್ದಾಪುರ, ಮಂಕಿ, ಯಲ್ಲಾಪುರ, ಯಡ್ರಾಮಿ ಸೇರಿದಂತೆ ದೇವದುರ್ಗ, ಕವಡಿಮಟ್ಟಿ ಎ.ಆ‌ರ್.ಜಿ, ಮಸ್ಕಿ, ಕಲಬುರಗಿ ವೀಕ್ಷಣಾಲಯ , ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 16ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಒಳನಾಡಿನ ಕೆಲವು ಸ್ಥಳಗಳಲ್ಲಿ ಕೆಲವೊಮ್ಮೆ ಗುಡುಗು ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೀನುಗಾರರಿಗೆ ನೀಡಲಾಗಿದ್ದ ಸೂಚನೆಯು ಮುಗಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

Vitamin C foods

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂಟಲಲ್ಲಿ ನೋವಿದ್ದರೆ ಬೆಚ್ಚಗಿನ ಶುಂಠಿಯ ಕಷಾಯಕ್ಕೆ ಕೊಂಚ ಜೇನುತುಪ್ಪ ಸೇರಿಸಿ ಕುಡಿದರೆ ಆರಾಮ ದೊರೆತೀತು.

iamge of Zinc Foods

ಜಿಂಕ್‌ ಆಹಾರಗಳು

ನಮ್ಮ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸತುವಿನಂಶ ಇರುವ ಆಹಾರಗಳು ಸಹ ಅಗತ್ಯ. ಇದನ್ನು ಸಿ ಜೀವಸತ್ವದಂತೆ ಹೇರಳವಾಗಿ ಪಡೆಯಲಾಗದು. ಬದಲಿಗೆ, ಹಲವಾರು ಆಹಾರಗಳಿಂದ ಮಿಲಿ ಗ್ರಾಂ ಗಳ ಲೆಕ್ಕದಲ್ಲಿಯೇ ಪಡೆಯಬೇಕು ನಾವು. ಇದಕ್ಕಾಗಿ ಅಣಬೆಗಳು, ಪಾಲಕ್‌ ಸೊಪ್ಪು, ದ್ವಿದಳ ಧಾನ್ಯಗಳು, ಮೊಸರು, ಹಾಲು, ಗೋಡಂಬಿ, ಕುಂಬಳಕಾಯಿ ಬೀಜ, ಶೇಂಗಾ, ಬಾದಾಮಿಯಂಥ ಆಹಾರಗಳ ಮೂಲಕ ಈ ಸತ್ವವನ್ನು ಪಡೆಯಬಹುದು.

ಒಮೇಗಾ 3 ಕೊಬ್ಬಿನಾಮ್ಲ

ಇದು ನಮ್ಮ ಮೆದುಳು ಮತ್ತು ಹೃದಯದ ಯೋಗಕ್ಷೇಮ ನೋಡಿಕೊಳ್ಳುವುದಷ್ಟೇ ಅಲ್ಲ, ಸೋಂಕುಗಳನ್ನು ದೂರ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದಕ್ಕಾಗಿ ಮಳೆಗಾಲದ ಆರಂಭದಲ್ಲಿ ದೊರೆಯುವ ಬೆಣ್ಣೆ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿ. ಜೊತೆಗೆ ವಾಲ್‌ನಟ್‌, ಬಾದಾಮಿ, ಅಗಸೆಬೀಜ, ಕೊಬ್ಬಿರುವ ಮೀನುಗಳನ್ನು ಸೇವಿಸುವುದರಿಂದ ಒಮೇಗಾ ೩ ಕೊಬ್ಬಿನಾಮ್ಲ ವಿಫುಲವಾಗಿ ಲಭಿಸುತ್ತದೆ.

Probiotic foods

ಪ್ರೊಬಯಾಟಿಕ್‌ ಆಹಾರಗಳು

ನಮ್ಮ ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರವೇ ದೇಹದ ಪ್ರತಿರೋಧಕ ಶಕ್ತಿ ಬಲವಾಗಿರುತ್ತದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಭರಪೂರ ಇದ್ದಷ್ಟೂ ದೇಹ ರೋಗಮುಕ್ತವಾಗಿರುತ್ತದೆ ಎನ್ನುತ್ತವೆ ಅ‍ಧ್ಯಯನಗಳು. ಹಾಗಾಗಿ ಪ್ರೊಬಯಾಟಿಕ್‌ ಆಹಾರಗಳು ನಮ್ಮ ದೇಹಕ್ಕೆ ಬೇಕೇಬೇಕು. ಇದಕ್ಕಾಗಿ ಮೊಸರು, ಮಜ್ಜಿಗೆಯಂಥ ಹುದುಗು ಬರಿಸಿದ ಆಹಾರಗಳನ್ನು ಪ್ರತಿದಿನ ಸೇವಿಸಿ.

infusions

ಕಷಾಯಗಳು

ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗೆ ಇರಿಸಿಕೊಳ್ಳುವುದಕ್ಕೆ ತರಹೇವಾರಿ ಕಷಾಯಗಳನ್ನು ಮಾಡಿಕೊಳ್ಳಬಹುದು. ಇದರಿಂದಲೂ ನಮ್ಮ ದೇಹದ ಸೋಂಕು ನಿರೋಧಕ ಶಕ್ತಿ ಪ್ರಬಲವಾಗುತ್ತದೆ. ಇದಕ್ಕಾಗಿ ಯಾವೆಲ್ಲ ವಸ್ತುಗಳನ್ನು ಉಪಯೋಗಿಸಬಹುದು ಎನ್ನುವುದಕ್ಕೆ ಉಪಯುಕ್ತ ವಿವರಗಳು ಇಲ್ಲಿವೆ. ಈ ಯಾವುದೇ ವಸ್ತುಗಳನ್ನು ಬಳಸಿ ಕಷಾಯ ಮಾಡಿಕೊಳ್ಳಬಹುದು.

Raw Turmeric with Powder Cutout

ಅರಿಶಿನ

ಇದರಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಸೋಂಕುಗಳನ್ನು ಹೊಡೆದೋಡಿಸುತ್ತದೆ

Benefits Of Ginger

ಶುಂಠಿ

ಇದರ ಜಿಂಜರಾಲ್‌ ಅಂಶದಲ್ಲಿ ಉರಿಯೂತ ಶಮನ ಮಾಡಿ, ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ

Garlic

ಬೆಳ್ಳುಳ್ಳಿ

ಇದರ ಅಲ್ಲಿಸಿನ್‌ ಅಂಶದಲ್ಲಿ ವೈರಸ್‌ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣವಿದೆ

Cinnamon sticks Anti Infective Foods

ದಾಲ್ಚಿನ್ನಿ ಚಕ್ಕೆ

ಇದರಲ್ಲಿರುವ ಉರಿಯೂತ ಶಾಮಕ ಸತ್ವಗಳು ರೋಗನಿರೋಧಕವೂ ಹೌದು

black pepper

ಕಾಳು ಮೆಣಸು

ಇದರ ಕ್ಯಾಪ್ಸೈಸಿನ್‌ನಲ್ಲಿ ದೇಹದ ಪ್ರತಿರೋಧಕತೆಯನ್ನು ವೃದ್ಧಿಸುವ ಸಾಮರ್ಥ್ಯವಿದೆ

cumin

ಜೀರಿಗೆ

ಇದರ ಉತ್ಕರ್ಷಣ ನಿರೋಧಕಗಳು ಸೋಂಕಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ

coriander Coriander Benefits

ಧನಿಯ

ಇದರ ಉತ್ಕರ್ಷಣ ನಿರೋಧಕ ಸತ್ವಗಳು ಸೋಂಕುಗಳನ್ನು ನಿವಾರಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

Road Accident : ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Chitradurga News
Koo

ಚಿತ್ರದುರ್ಗ : ಶನಿವಾರ ಮುಂಜಾನೆ ವೇಳೆಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ(Road Accident) ನಡೆದಿದೆ. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಡಿವೈಡರ್ ಕಲ್ಲುಗಳಿಗೆ ಬಡಿದು ಕಾರು ಪಲ್ಟಿ

ರಸ್ತೆ ಮಧ್ಯೆ ಇಟ್ಟಿದ್ದ ಕಲ್ಲಿಗೆ ಕಾಣದೇ ಗುದ್ದಿದ ಕಾರೊಂದು ಪಲ್ಟಿಯಾ ಘಟನೆ ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ;ಮಧ್ಯಾಹ್ನ1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

ಮಣಿಪಾಲದಿಂದ ಉಡುಪಿಯತ್ತ ಬರುತ್ತಿದ್ದ ಫೋರ್ಡ್ ಫಿಗೊ ಕಾರು ರಸ್ತೆ ಮಧ್ಯದಲ್ಲಿ ನಿರ್ಲಕ್ಷ್ಯದಿಂದ ಇಡಲಾಗಿದ್ದ ಕಲ್ಲಿಗೆ ಗುದ್ದಿದೆ. ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದ ತಕ್ಷಣ ಕಲ್ಲಿನ ತುಂಡೊಂದು ಹಾರಿ ಸಮೀಪದಲ್ಲಿ ಹೋಗುತ್ತಿದ್ದ ಹಾರಿ ಬೈಕ್ ಗೂ ತೀವ್ರ ಹಾನಿಯಾಗಿದೆ. ಆದರೆ, ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ.

ರಸ್ತೆ ಮಧ್ಯೆ ವಿಭಜಕವನ್ನು ನಿರ್ಮಿಸಲು ಬಳಸುತ್ತಿದ್ದ ಕಲ್ಲುಗಳನ್ನು ಎಲ್ಲೆಂದರಲ್ಲಿ ಇಡಲಾಗಿತ್ತು. ಮುಂಜಾನೆ ವೇಳೆ ಹೆಡ್​ ಲೈಟ್ ಪ್ರಭಾವಕ್ಕೆ ಕಲ್ಲುಗಳು ಇರುವುದನ್ನು ಅರಿಯದ ಚಾಲಕ ಅದಕ್ಕೆ ಡಿಕ್ಕಿ ಹೊಡೆದಿದ್ದಾನೆ.

Continue Reading
Advertisement
Darshan Arrested vinish write special message for darshan fathers day
ಸ್ಯಾಂಡಲ್ ವುಡ್6 mins ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

INDW vs SAW
ಕ್ರೀಡೆ24 mins ago

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

Kannada New Movie Maryade Prashne out now
ಸ್ಯಾಂಡಲ್ ವುಡ್26 mins ago

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Darshan Arrested
ಕರ್ನಾಟಕ33 mins ago

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Kotee Movie Review dolly dhanjay News In Kannada
ಸ್ಯಾಂಡಲ್ ವುಡ್37 mins ago

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Illegal beef trade
ದೇಶ38 mins ago

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Actor Darshan ACP Chandan Kumar work salute by people
ಕ್ರೈಂ50 mins ago

Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Euro 2024
ಕ್ರೀಡೆ59 mins ago

Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

Bihar Women
ದೇಶ1 hour ago

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

Kalaburagi News
ಕರ್ನಾಟಕ1 hour ago

Kalaburagi News: ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ20 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌