Salman Khan | ಬರ್ತ್​ಡೇ ದಿನ ಮಾಜಿ ಪ್ರಿಯತಮೆಗೆ ಮುತ್ತಿಟ್ಟ ಸಲ್ಮಾನ್ ಖಾನ್​​; ಯಾರವರು? - Vistara News

ಬಾಲಿವುಡ್

Salman Khan | ಬರ್ತ್​ಡೇ ದಿನ ಮಾಜಿ ಪ್ರಿಯತಮೆಗೆ ಮುತ್ತಿಟ್ಟ ಸಲ್ಮಾನ್ ಖಾನ್​​; ಯಾರವರು?

ಸಲ್ಮಾನ್​ ಹಾಗೂ ಸಂಗೀತ ಜತೆಗಿರುವ ಚಿತ್ರ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

VISTARANEWS.COM


on

salman khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್ ಖಾನ್​ ಸೋಮವಾರ (ಡಿಸೆಂಬರ್​ 27) ತಮ್ಮ 57ನೇ ಜನುಮದಿನ ಆಚರಣೆ ಮಾಡಿದ್ದಾರೆ. ಮುಂಬಯಿಯಲ್ಲಿ ಅವರು ದೊಡ್ಡ ಪಾರ್ಟಿ ಆಯೋಜಿಸಿದ್ದು, ಶಾರುಖ್​ ಖಾನ್​, ನಟಿ ಪೂಜಾ ಹೆಗ್ಡೆ ಸೇರಿದಂತೆ ಸೆಲೆಬ್ರಿಟಿಗಳ ದಂಡು ಸಂಭ್ರಮದಲ್ಲಿ ಪಾಲ್ಗೊಂಡಿತ್ತು. ಇವೆಲ್ಲದರ ಮಧ್ಯೆ ಗಮನ ಸೆಳೆದಿದ್ದು ಸಲ್ಮಾನ್​ ಅವರ ಮಾಜಿ ಪ್ರಿಯತಮೆ ಸಂಗೀತಾ ಬಿಜಲಾನಿ. ತಮ್ಮ ಹುಟ್ಟಿದ ದಿನದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂಗೀತಾ ಅವರ ಹಣೆಗೆ ಮುತ್ತಿಟ್ಟು ಸ್ವಾಗತಿಸಿದ್ದಾರೆ ಸಲ್ಲು ಭಾಯ್​. ಹೆಗಲ ಮೇಲೆ ಕೈ ಇಟ್ಟುಕೊಂಡು ನಿಂತಿದ್ದ ಅವರು ತಮ್ಮಿಬ್ಬರ ಪ್ರೇಮದ ದಿನಗಳನ್ನು ನೆನಪಿಸಿಕೊಂಡರು.

ಸಲ್ಮಾನ್​ ಖಾನ್​ ಮತ್ತು ಸಂಗೀತ ಬಿಜಲಾನಿ 90ರ ದಶಕದಲ್ಲಿ 10 ವರ್ಷಕ್ಕೂ ಅಧಿಕ ಕಾಲ ಡೇಟಿಂಗ್​ನಲ್ಲಿ ಇದ್ದರು. ಬಳಿಕ ಅವರು ಬೇರ್ಪಟ್ಟಿದ್ದರು. ಕ್ರಿಕೆಟರ್ ಹಾಗೂ ಭಾರತ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು ಸಂಗೀತಾ ಮದುವೆಯಾಗಿದ್ದರು. 2010ರಲ್ಲಿ ಅವರಿಬ್ಬರು ವಿಚ್ಛೇದನ ಪಡೆದುಕೊಂಡಿದ್ದಾರೆ.

ದಶಕಕ್ಕೂ ಅಧಿಕ ಕಾಲ ಪ್ರೀತಿಸಿದ್ದ ಸಲ್ಮಾನ್​ ಹಾಗೂ ಸಂಗೀತಾ ತಮ್ಮ ಪ್ರೀತಿ ಮುರಿದು ಹೋದ ಬಳಿಕವೂ ಸ್ನೇಹ ಮುಂದುವರಿಸಿದ್ದರು. ಹೀಗಾಗಿ 57ನೇ ವರ್ಷದ ಬರ್ತ್​ಡೇ ಸಂಭ್ರಮಕ್ಕೆ ಅವರು ಆಗಮಿಸಿ ಸಲ್ಮಾನ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಅವರಿಬ್ಬರು ಜತೆಯಾಗಿ ನಿಂತು ಮಾತನಾಡುವ ಹಾಗೂ ಮುತ್ತಿಡುವ ಚಿತ್ರಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿವೆ. ಸಲ್ಲು ಅಭಿಮಾನಿಗಳಿಗಂತೂ ಇದರಿಂದ ಸಕ್ಕರೆ ತಿಂದಷ್ಟು ಖುಷಿಯಾಗಿದೆ.

ಸಲ್ಮಾನ್​ ಬರ್ತ್​ ಪಾರ್ಟಿಯಲ್ಲಿ ಪೂಜಾ ಹೆಗ್ಡೆ, ಯುಲಿಯಾ ವಂತೂರ್, ತಬು, ಜೆನಿಲಿಯಾ ಡಿಸೋಜಾ ಮತ್ತು ರಿತೇಶ್ ದೇಶ್‌ಮುಖ್, ಕಾರ್ತಿಕ್ ಆರ್ಯನ್, ಸಿದ್ಧಾಂತ್ ಚತುರ್ವೇದಿ, ಸೋನಾಕ್ಷಿ ಸಿನ್ಹಾ, ಸುನೀಲ್ ಶೆಟ್ಟಿ ಮತ್ತು ಜಹೀರ್ ಇಕ್ಬಾಲ್ ಮತ್ತಿತರು ಪಾಲ್ಗೊಂಡಿದ್ದರು. ಸಲ್ಮಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮತ್ತು ಅವರ ಪತಿ ಆಯುಶ್ ಶರ್ಮಾ, ಸಹೋದರ ಅರ್ಬಾಜ್ ಮತ್ತು ಸೊಹೈಲ್ ಮತ್ತು ಸೋದರಳಿಯ ಅರ್ಹಾನ್ ಖಾನ್ ಅವರೂ ಜತೆಗಿದ್ದರು.

ಸಲ್ಮಾನ್ ಖಾನ್ ಹೊಸ ಸಿನಿಮಾವೊಂದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರ ತೆರೆಗೆ ಬರಲಿದ್ದು, ಪೂಜಾ ಹೆಗ್ಡೆ, ವೆಂಕಟೇಶ್ ದಗ್ಗುಬಾಟಿ, ಶೆಹನಾಜ್ ಗಿಲ್, ಪಾಲಕ್ ತಿವಾರಿ ಮತ್ತು ವಿಜೇಂದರ್ ಸಿಂಗ್ ಇದರಲ್ಲಿ ಪಾತ್ರ ವಹಿಸಲಿದ್ದಾರೆ. ಅದೇ ರೀತಿ ಸಲ್ಮಾನ್ ಅವರು ಬಿಗ್​ ಬಾಸ್ 16 ಟಿವಿ ರಿಯಾಲಿಟಿ ಶೋದಲ್ಲೂ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ | Salman Khan | 57ನೇ ಜನುಮದಿನದ ಸಂಭ್ರಮದಲ್ಲಿರುವ ಭಾಯ್‌ ಜಾನ್‌ ʼಸಲ್ಮಾನ್ ಖಾನ್ʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

ಬಾಲಿವುಡ್ ನ ಆದರ್ಶ ಜೋಡಿಯಲ್ಲಿ ಶಾರುಖ್ ಮತ್ತು ಗೌರಿ ಅವರೂ ಸೇರಿದ್ದಾರೆ. ಈ ಜೋಡಿ ಮದುವೆಯಾಗಿ 33 ವರ್ಷಗಳಾಗಿದ್ದು ಮೂವರು ಮಕ್ಕಳ ಪೋಷಕರಾಗಿದ್ದರೆ. ಧರ್ಮದ ವಿಚಾರದಲ್ಲಿ ಗೌರಿ (Gauri Khan) ಈಗಲೂ ಹಿಂದುವಾಗಿಯೇ ಉಳಿದಿದ್ದಾರೆ. ಇದಕ್ಕೆ ಕಾರಣ ಏನೆಂಬುದನ್ನು ಅವರೇ ಹೇಳಿದ್ದಾರೆ.

VISTARANEWS.COM


on

By

Gauri Khan
Koo

ಬಾಲಿವುಡ್ ನ (bollywood) ಆದರ್ಶ ದಂಪತಿಗಳ ಸಾಲಿನಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan), ಗೌರಿ ಖಾನ್ (Gauri Khan) ದಂಪತಿಯೂ ಇದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರಿಬ್ಬರ ನಡುವಿನ ಪ್ರೀತಿ ಮತ್ತು ಹೊಂದಾಣಿಕೆ. ಇದು ಅವರ ಅಭಿಮಾನಿಗಳ ಮನಸ್ಸನ್ನು ಗೆಲ್ಲುವಂತೆ ಮಾಡಿದೆ.

ಅಭಿಮಾನಿಗಳನ್ನು ಪ್ರೀತಿ, ವಾತ್ಸಲ್ಯದಿಂದ ಕಾಣುವ ಈ ದಂಪತಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಾನು ನಿಮ್ಮೊಂದಿಗೆ ಬೆಳೆಯಲು ಬಯಸುತ್ತೇನೆ ಎಂದು ಹೇಳಿ ಮತ್ತೆ ಎಲ್ಲರ ಮನ ಗೆದ್ದಿದ್ದಾರೆ.

ಗೌರಿ ಮತ್ತು ಶಾರುಖ್ ಖಾನ್ ಅವರ ಧರ್ಮ ಬೇರೆಬೇರೆಯಾದರೂ ಇದು ಅವರಿಬ್ಬರ ನಡುವಿನ ಪ್ರೀತಿಗೆ ಅಡ್ಡಿಯಾಗಲಿಲ್ಲ. ಮದುವೆಯ ಮೊದಲು ಕೆಲವು ತೊಂದರೆಗಳು ಎದುರಾದರೂ ಮದುವೆಯ ಬಳಿಕ ದಂಪತಿ ಎಂದರೆ ಹೀಗಿರಬೇಕು ಎನ್ನುವಷ್ಟು ಇವರಿಬ್ಬರೂ ಮಾದರಿಯಾಗಿದ್ದಾರೆ.

ಕಿಂಗ್ ಖಾನ್ ಮೊದಲಿನಿಂದಲೂ ತನ್ನ ರಾಣಿಗೆ ಆದರ್ಶ ಪತಿ. ಶಾರುಖ್ ಖಾನ್ ಮುಸ್ಲಿಂ ಆಗಿರುವುದರಿಂದ ಮದುವೆಯಾದ ಬಳಿಕ ಗೌರಿ ಮುಸ್ಲಿಂ ಆಗಿ ಮತಾಂತರವಾಗುತ್ತಾರೆ ಎನ್ನುವ ಹೇಳಿಕೆಗಳು ಜೋರಾಗಿ ಕೇಳಿ ಬಂದಿತ್ತು. ಹೀಗಾಗಿ ಅವರಿಗೂ ಪದೇಪದೇ ತಾವು ಮುಸ್ಲಿಂ ಆಗಿ ಮತಾಂತರಗೊಳ್ಳುವುದಿಲ್ಲ ಎಂದು ಹೇಳಬೇಕಾದ ಸಂದರ್ಭಗಳು ಎದುರಾಗಿತ್ತು.

ಇತ್ತೀಚೆಗೆ ಕರಣ್ ಜೋಹರ್ ಅವರ ಕಾರ್ಯಕ್ರಮ ಕಾಫಿ ವಿತ್ ಕರಣ್‌ನಲ್ಲಿಹೃತಿಕ್ ರೋಷನ್ ಅವರ ಪತ್ನಿ ಸುಸ್ಸಾನ್ನೆ ಖಾನ್ ಅವರೊಂದಿಗೆ ಗೌರಿ ಆಗಮಿಸಿದ್ದರು. ಅಲ್ಲಿ ಗೌರಿ ಮುಸ್ಲಿಂ ಆಗಿ ಮತಾಂತರಗೊಳ್ಳದಿರುವ ಕುರಿತು ಚರ್ಚೆ
ನಡೆದಿತ್ತು.

ಯಾಕೆ ಮತಾಂತರವಾಗಲಿಲ್ಲ?

ಶಾರುಖ್ ಖಾನ್ ಅವರ ಧರ್ಮಕ್ಕೆ ನಾನು ಮತಾಂತರವಾಗುವುದಿಲ್ಲ ಎಂದು ಗೌರಿ ಖಾನ್ ಹೇಳಿರುವ ಹಳೆಯ ವಿಡಿಯೋ ಈಗ ಮತ್ತೆ ಸದ್ದು ಮಾಡಿದೆ. ಇದರಲ್ಲಿ ಅವರು ತಾವು ಇಸ್ಲಾಂ ಧರ್ಮಕ್ಕೆ ಮತಾಂತರವಾಗದೇ ಉಳಿಯಲು ಕಾರಣವನ್ನೂ ಕೊಟ್ಟಿದ್ದಾರೆ.

ನಮ್ಮಿಬ್ಬರ ಮಧ್ಯೆ ಸಮತೋಲನವಿದೆ. ನಾನು ಶಾರುಖ್ ಅವರ ಧರ್ಮವನ್ನು ಗೌರವಿಸುತ್ತೇನೆ. ಮತ್ತು ಅವರೂ ನನ್ನ ಧರ್ಮವನ್ನು ಗೌರವಿಸುತ್ತಾರೆ. ಹೀಗಾಗಿ ನಾನು ಮತಾಂತರಗೊಂಡು ಮುಸ್ಲಿಂ ಆಗಬೇಕು ಈ ಎನ್ನುವುದರಲ್ಲಿ ಅರ್ಥವಿಲ್ಲ. ಪರಸ್ಪರ ಜೊತೆಯಾಗಿ ಬಾಳಲು ಅದು ಅನಿವಾರ್ಯ ಎಂಬುದನ್ನು ನಾನು ನಂಬುವುದಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಮತ್ತು ಅವರ ಧರ್ಮವನ್ನು ಅನುಸರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?


ಶಾರುಖ್‌ನಂತೆ ನನ್ನ ಧರ್ಮವನ್ನು ಯಾವತ್ತೂ ಅಗೌರವಗೊಳಿಸುವುದಿಲ್ಲ. ಮಗ ಆರ್ಯನ್ ತನ್ನ ತಂದೆಯ ಧರ್ಮವನ್ನು ಅನುಸರಿಸುತ್ತಾನೆ. ಆರ್ಯನ್ ಗೆ ಶಾರುಖ್‌ ಎಂದರೆ ತುಂಬಾ ಇಷ್ಟ.ಹೀಗಾಗಿ ಆತ ಅವರ ಧರ್ಮವನ್ನು ಅನುಸರಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಮುಸ್ಲಿಂ ಎಂದು ಅವರಿಬ್ಬರು ಯಾವಾಗಲೂ ಹೇಳುತ್ತಿರುತ್ತಾರೆ. ಅದನ್ನು ನಾನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ ಗೌರಿ ಖಾನ್.

ಶಾರುಖ್ ಖಾನ್ ಹಾಗೂ ಗೌರಿ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 33 ವರ್ಷಗಳಾಗಿವೆ. ಬಾಲಿವುಡ್‌ನ ಈ ಸುವರ್ಣ ದಂಪತಿಗೆ ಆರ್ಯನ್ ಖಾನ್, ಸುಹಾನಾ ಖಾನ್ ಮತ್ತು ಅಬ್ರಾಮ್ ಖಾನ್ ಎಂಬ ಮೂರು ಮಕ್ಕಳಿದ್ದಾರೆ.

Continue Reading

ಕ್ರಿಕೆಟ್

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Andre Russell Dance: ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Andre Russell Dance:
Koo

ಮುಂಬಯಿ: ಭಾನುವಾರ(ಮೇ 26) ನಡೆದಿದ್ದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೆಕೆಆರ್​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ಆ್ಯಂಡ್ರೆ ರಸೆಲ್(Andre Russell Dance)​ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ(Ananya Pandey) ಜತೆ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ‘ಲುಟ್ ಪಟ್ ಗಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಈ ಹಾಡಿನಲ್ಲಿ ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚುವ ಜತೆಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೂರನೇ ಟ್ರೋಫಿ ಗೆದ್ದ ಕೆಕೆಆರ್​


ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ 18.3 ಓವರ್​ಗಳಲ್ಲಿ 113 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಚೇಸಿಂಗ್​ ನಡೆಸಿದ ಕೆಕೆಆರ್​ ಕೇವಲ 10.3 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 114 ರನ್​ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಇದು ಕೆಕೆಆರ್​ಗೆ ಒಲಿದ ಮೂರನೇ ಐಪಿಎಲ್​ ಟ್ರೋಫಿ.

Continue Reading

ಬಾಲಿವುಡ್

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

Dhadak 2:ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

VISTARANEWS.COM


on

Karan Johar announces Dhadak 2
Koo

ಬೆಂಗಳೂರು:  ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar ) ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಕರಣ್ ಜೋಹರ್ ತಮ್ಮ ಹೊಸ ಚಿತ್ರಕ್ಕೆ ‘ಧಡಕ್ 2’ (Dhadak 2) ಎಂದು ಹೆಸರಿಟ್ಟಿದ್ದಾರೆ. ಕರಣ್‌ ಜೋಹರ್ ನಿರ್ಮಿಸಿದ ಈ ಚಿತ್ರದಲ್ಲಿ ಸಿದ್ಧಾಂತ್ ಚತುರ್ವೇದಿ ಮತ್ತು ʻಅನಿಮಲ್‌ʼ ಸಿನಿಮಾ ಖ್ಯಾತಿಯ ತೃಪ್ತಿ ಡಿಮ್ರಿ ನಟಿಸಲಿದ್ದಾರೆ. ಶಾಜಿಯಾ ಇಕ್ಬಾಲ್ ನಿರ್ದೇಶಿಸಲಿದ್ದಾರೆ.

ʻಗಲ್ಲಿ ಬಾಯ್’ ಖ್ಯಾತಿಯ ಸಿದ್ಧಾಂತ್​ ಚತುರ್ವೇದಿ ಅವರು ತೆರೆ ಹಂಚಿಕೊಳ್ಳಲಿದ್ದಾರೆ. ‘ಧಡಕ್​ 2’ ಸಿನಿಮಾದಲ್ಲಿ ಜಾತಿಯ ಕುರಿತಾದ ಕಹಾನಿ ಇರಲಿದೆ ಎಂಬುದನ್ನು ಅವರು ತಿಳಿಸಿದ್ದಾರೆ.ಕರಣ್​ ಜೋಹರ್​ ಅವರ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ‘ಧಡಕ್​ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ಕರಣ್ ಜೋಹರ್ “ಒಂದು ಕಾಲದಲ್ಲಿ ಒಬ್ಬನಿದ್ದ ರಾಜ, ಒಬ್ಬಳಿದ್ದಳು ರಾಣಿ. ಆದರೆ ಅವರಿಬ್ಬರದ್ದೂ ಬೇರೆ ಜಾತಿ. ಕಥೆ ಮುಗಿಯಿತುʼʼಎಂದು ವಿಡಿಯೊ ಜತೆ ಕ್ಯಾಪ್ಞನ್‌ ಶೇರ್‌ ಮಾಡಿಕೊಂಡಿದ್ದಾರೆ. ಧಡಕ್ 2 ಚಿತ್ರಮಂದಿರಗಳಲ್ಲಿ 2024ರ ನವೆಂಬರ್‌ 22ರಂದು ಬಿಡುಗಡೆಯಾಗುತ್ತಿದೆ.

ಜೀ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್ ಮತ್ತು ಕ್ಲೌಡ್ 9 ಪಿಕ್ಚರ್ಸ್ ನಿರ್ಮಿಸಿರುವ ‘ಧಡಕ್ 2’ ಸಿದ್ಧಾಂತ್ ಚತುರ್ವೇದಿ ಮತ್ತು ತೃಪ್ತಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

2018ರಲ್ಲಿ ಕರಣ್​ ಜೋಹರ್​ ನಿರ್ಮಾಣ ಮಾಡಿದ್ದ ‘ಧಡಕ್​’ ಸಿನಿಮಾದಲ್ಲಿ ಕೂಡ ಜಾತಿಗೆ ಸಂಬಂಧಿಸಿದ ಕಥೆ ಇತ್ತು. ಆ ಸಿನಿಮಾ ಮೂಲಕ ನಟಿ ಜಾನ್ವಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡಿದರು. ಅದು ಮರಾಠಿಯ ‘ಸೈರಾಟ್​’ ಸಿನಿಮಾದ ರಿಮೇಕ್​ ಆಗಿತ್ತು.

ಇದನ್ನೂ ಓದಿ: Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

Continue Reading

ಬಾಲಿವುಡ್

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Munawar Faruqui: ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ತಮ್ಮ ಮಗನನ್ನು ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

VISTARANEWS.COM


on

Munawar Faruqui gets married for second timeʼ Munawar Faruqui gets married for second timeʼ
Koo

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui)  ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ತಿಂಗಳ ಆರಂಭದಲ್ಲಿ ಮೆಹಜಬೀನ್ ಕೋಟ್ವಾಲಾ (Mehzabeen Coatwala) ಅವರನ್ನು ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮುನಾವರ್ ಮದುವೆಯಲ್ಲಿ ಅವರ ಆತ್ಮೀಯರು ಮಾತ್ರ ಹಾಜರಿದ್ದರು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ. ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಮುಂಬೈನ ಐಟಿಸಿ ಗ್ರ್ಯಾಂಡ್ ಮರಾಠಾದಲ್ಲಿ ಆರತಕ್ಷತೆಯನ್ನು ಕೂಡ ಆಯೋಜಿಸಿದ್ದರು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಮುನಾವರ್ ಅವರ ಸ್ನೇಹಿತ-ನಟ ಹಿನಾ ಖಾನ್ ಈ ಸಮಾರಂಭಕ್ಕೆ ಆಹ್ವಾನಿತರಾದವರಲ್ಲಿ ಒಬ್ಬರು. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹಿನಾ ಈ ಫೋಟೊಗಳನ್ನು ಹಂಚಿಕೊಂಡಿದ್ದರು.

ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಮುನಾವರ್ ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಏ. 10ರ ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

Continue Reading
Advertisement
Ambareesh Birthday
ಸಿನಿಮಾ19 mins ago

Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Ambareesh Birthday heartfelt note By sumalatha
ಸ್ಯಾಂಡಲ್ ವುಡ್24 mins ago

Ambareesh Birthday: ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್‌ !

Vastu Tips
ಧಾರ್ಮಿಕ33 mins ago

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

Mani Shankar Aiyar
ದೇಶ44 mins ago

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Uttarakaanda Movie Shivarajkumar Visits Savadatti Yallamma Temple After Uttarakaanda Movie
ಸ್ಯಾಂಡಲ್ ವುಡ್55 mins ago

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

school reopen
ಪ್ರಮುಖ ಸುದ್ದಿ1 hour ago

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

Nawaz Sharif
ವಿದೇಶ1 hour ago

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

prajwal revanna case mattress
ಪ್ರಮುಖ ಸುದ್ದಿ2 hours ago

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

AC Side Effects
ಆರೋಗ್ಯ2 hours ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

karnataka weather forecast
ಮಳೆ3 hours ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು22 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌