RBI Report | ಆರ್ಥಿಕ ಹಿಂಜರಿತದ ಪರಿಣಾಮ ಬ್ಯಾಂಕ್‌ಗಳಿಗೆ ಭಾರಿ ಅನಿಶ್ಚಿತತೆಯ ಮುನ್ನೋಟ: ಆರ್‌ಬಿಐ - Vistara News

ಪ್ರಮುಖ ಸುದ್ದಿ

RBI Report | ಆರ್ಥಿಕ ಹಿಂಜರಿತದ ಪರಿಣಾಮ ಬ್ಯಾಂಕ್‌ಗಳಿಗೆ ಭಾರಿ ಅನಿಶ್ಚಿತತೆಯ ಮುನ್ನೋಟ: ಆರ್‌ಬಿಐ

ಜಾಗತಿಕ ಆರ್ಥಿಕತೆ 2023ರಲ್ಲಿ ಹಿಂಜರಿತಕ್ಕೆ ಸಿಲುಕುವ ಅಪಾಯ ಇದೆ. ಆಗ ಬ್ಯಾಂಕ್‌ಗಳಲ್ಲಿ ಸಾಲ ವಿತರಣೆಯೂ ಕುಸಿದು ಅವುಗಳ ಲಾಭ ತಗ್ಗಬಹುದು ಎಂದು ಆರ್‌ಬಿಐ ಮುನ್ನೋಟ (RBI Report) ತಿಳಿಸಿದೆ.

VISTARANEWS.COM


on

RBI imposed huge fine on ICICI Bank, Kotak Mahindra Bank
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತೀಯ ಬ್ಯಾಂಕ್‌ಗಳು ಈ ವರ್ಷ ತಮ್ಮ ಬಂಡವಾಳವನ್ನು ಸುಧಾರಿಸಿವೆ. ಸ್ವತ್ತಿನ ಗುಣಮಟ್ಟ ಕೂಡ ವೃದ್ಧಿಸಿರಬಹುದು. ಆದರೆ ಮುಂಬರುವ ದಿನಗಳಲ್ಲಿ ಅತ್ಯಧಿಕ ಅನಿಶ್ಚಿತತೆ ಕಂಡು ಬರುವ ಸಾಧ್ಯತೆ ಇದೆ (RBI Report) ಎಂದು ಆರ್‌ಬಿಐ ಎಚ್ಚರಿಸಿದೆ.

ಅಂತಾರಾಷ್ಟ್ರೀಯ ವಿಪ್ಲವಗಳು, ಬಿಗಿಯಾದ ಆರ್ಥಿಕ ನೀತಿ, ಆರ್ಥಿಕ ಹಿಂಜರಿತದ ಪರಿಣಾಮಗಳು ಭಾರತವನ್ನೂ ಕಾಡುವ ಸಾಧ್ಯತೆ ಇದೆ. ಇದು ಬ್ಯಾಂಕ್‌ಗಳ ಲಾಭಾಂಶ ಮತ್ತು ಸ್ವತ್ತಿನ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಆರ್‌ಬಿಐ ಮಂಗಳವಾರ ಬಿಡುಗಡೆಗೊಳಿಸಿದ ವರದಿಯಲ್ಲಿ ತಿಳಿಸಿದೆ.

2022ರಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆ ಮುಗ್ಗರಿಸಿದೆ. 2023ರಲ್ಲಿ ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಆವರಿಸಿದೆ. ಇದರ ಪರಿಣಾಮ ಬ್ಯಾಂಕ್‌ಗಳಲ್ಲಿ ಸಾಲದ ವಿತರಣೆ ಕಡಿಮೆಯಾಗಬಹುದು. ಅಂದರೆ ಬ್ಯಾಂಕ್‌ಗಳ ಲಾಭವೂ ತಗ್ಗಬಹುದು ಎಂದು ಆರ್‌ಬಿಐ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Rishbha Pant: ರಿಷಭ್ ಪಂತ್ ಅವರನ್ನು ಅಪಘಾತದ ಸ್ಥಳದಿಂದ ರಕ್ಷಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ವಿಮಾನದಲ್ಲಿ ಕರೆದೊಯ್ಯುವ ಮೊದಲು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಪಂತ್​ 2-3 ವರ್ಷಗಳ ಅವಧಿಯಲ್ಲಿ ಚೇತರಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದಿದ್ದರು. ಆದರೆ ಆಟಗಾರನ ಇಚ್ಛಾಶಕ್ತಿಯು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಿತು.

VISTARANEWS.COM


on

Rishabh Pant
Koo

ಬೆಂಗಳೂರು : ಭಾರತ ತಂಡ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ (Rishbha Pant) 2022 ರ ಡಿಸೆಂಬರ್​ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಅಪಘಾತದಲ್ಲಿ 26 ವರ್ಷದ ಆಟಗಾರ ಅನೇಕ ಜೀವಕ್ಕೆ ಅಪಾಯ ತರುವ ಮತ್ತು ಅಂಗವೈಕಲ್ಯಕ್ಕೆ ತುತ್ತಾಗಬಹುದಾಗಿದ್ದಂತ ಗಾಯಗಳಿಗೆ ಒಳಗಾಗಿದ್ದರು. ಹೀಗಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕ್ರಿಕೆಟ್ ಆಡುವ ಅವಕಾಶ ಕಳೆದುಕೊಂಡಿದ್ದರು. ಈ ಬ್ಯಾಟರ್​ ಐಪಿಎಲ್ 2023 ಮತ್ತು ಏಕದಿನ ವಿಶ್ವಕಪ್ 2023 ಅನ್ನು ಸಂಪೂರ್ಣವಾಗಿ ತಪ್ಪಿಸಿಕೊಂಡಿದ್ದರು. ಆದರೆ ಇದೀಗ ಅವರು ಟಿ20 ವಿಶ್ವಕಪ್​ಗಾಗಿ ತಯಾರಿ ನಡೆಸುತ್ತಿದ್ದಾರೆ.

ರಿಷಭ್ ಪಂತ್ ಅವರನ್ನು ಅಪಘಾತದ ಸ್ಥಳದಿಂದ ರಕ್ಷಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ವಿಮಾನದಲ್ಲಿ ಕರೆದೊಯ್ಯುವ ಮೊದಲು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಪಂತ್​ 2-3 ವರ್ಷಗಳ ಅವಧಿಯಲ್ಲಿ ಚೇತರಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದಿದ್ದರು. ಆದರೆ ಆಟಗಾರನ ಇಚ್ಛಾಶಕ್ತಿಯು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಿತು.

ಇತ್ತೀಚೆಗೆ, ಪಂತ್ ತಮ್ಮ ಅಪಘಾತದ ಬಗ್ಗೆ ಮಾತನಾಡಿದ್ದಾರೆ. ಅವರ ಗಾಯಗಳ ಬಗ್ಗೆ ವೈದ್ಯರು ಏನು ಹೇಳಿದರು ಮತ್ತು ಅದು ಅಂಗಗಳನ್ನು ತೆಗೆದು ಹಾಕುವುದಕ್ಕೆ ಹೇಗೆ ಕಾರಣವಾಗಬಹುದು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

ವೈದ್ಯರು ನನ್ನ ಬಳಿಗೆ ಬಂದು ರಿಷಭ್, ನೀವು ಮೂರು ಪವಾಡಗಳನ್ನು ಮಾಡಬೇಕಾಗಿದೆ. ಅವುಗಳಲ್ಲಿ ಎರಡು ನೀವು ಈಗಾಗಲೇ ಮಾಡಿದ್ದೀರಿ ಎಂದು ಹೇಳಿದರು. ಆಗ ನನ್ನ ಜೀವನದ ಬಗ್ಗೆ ನನಗೆ ಯಾವುದೇ ಕಲ್ಪನೆ ಇರಲಿಲ್ಲ. ಆದ್ದರಿಂದ ನಾನು ಅದನ್ನು ಸಂಪೂರ್ಣವಾಗಿ ಕೇಳುತ್ತಿದ್ದೆ. ಮೊದಲನೆಯದಾಗಿ, ಇಂತಹ ಭೀಕರ ಅಪಘಾತದ ನಂತರ ನೀವು ಜೀವಂತವಾಗಿದ್ದೀರಿ ಎಂಬುದೇ ದೊಡ್ಡ ಪವಾಡ ಎಂದು ವೈದ್ಯರು ಹೇಳಿದ್ದರು ಎಂಬುದಾಗಿ ‘ಆಪ್ ಕಿ ಅದಾಲತ್’ ನಲ್ಲಿ ಪಂತ್​ ಹೇಳಿದ್ದಾರೆ.

“ಅಪಘಾತವಾದಾಗ ನನ್ನ ಬಲಗಾಲು 90 ಡಿಗ್ರಿ ಬಾಗಿತ್ತು. ಆ ಹೊತ್ತಿನಲ್ಲಿ ನನಗೆ ಏನು ಮಾಡಬೇಕೋ ಎಂದು ತಿಳಿದಿರಲಿಲ್ಲ. ನನ್ನನ್ನು ರಕ್ಷಿಸಿದ ವ್ಯಕ್ತಿಗೆ ಕಾಲನ್ನು ಹಿಡಿದು ಸ್ವಸ್ಥಾನಕ್ಕೆ ಮರಳಿಸುವಂತೆ ಹೇಳಿದ್ದೆ. ನೋವಿನ ನಡುವೆಯೂ ಅದನ್ನು ಮಾಡಿದ್ದೆ. ಈ ಬಗ್ಗೆ ವೈದ್ಯರು ಹೇಳಿದ್ದರು. ಎರಡನೆಯದಾಗಿ, ನಿಮ್ಮ ಕಾಲನ್ನು ನೀವು ಸರಿ ಮಾಡದೇ ಹೋಗಿದ್ದರೆ ಅದು ಅಂಗಚ್ಛೇದನಕ್ಕೆ ಕಾರಣವಾಗುತ್ತಿತ್ತು” ಎಂದು ಅವರು ಹೇಳಿದರು.

ಶಸ್ತ್ರ ಚಿಕಿತ್ಸೆಯ ಭರವಸೆ

ವೈದ್ಯರು ಎಸಿಎಲ್ ಮತ್ತು ಸಿಎಲ್​ನಲ್ಲಿ ಯಾವುದೇ ಗಾಯ ಉಳಿದಿಲ್ಲ ಎಂದು ಹೇಳಿದ್ದರು. ಅದು ನನಗೆ ನೆರವಾಯಿತು ಎಂದು ಪಂತ್ ಹೇಳಿದ್ದಾರೆ. ಮೂರನೇ ಪವಾಡವೆಂದರೆ ಎಸಿಎಲ್ ಮತ್ತು ಪಿಸಿಎಲ್​​ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದು ಅವರು ಹೇಳಿದ್ದರು. ನನ್ನ ಮೊಣಕಾಲುಗಳಲ್ಲಿ ಯಾವುದೇ ಲಿಗಮೆಂಟ್​ ಉಳಿದಿಲ್ಲ ಎಂದು ಅವರು ಹೇಳಿದ್ದರು. ಇದು ಕೂಡ ಮೂರನೇ ಪವಾಡ ಎಂಬುದಾಗಿ ಪಂತ್ ಹೇಳಿದ್ದಾರೆ.

Continue Reading

ದೇಶ

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi Live: ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರೂ ಹಾಜರಾಗಲಿದ್ದಾರೆ.

VISTARANEWS.COM


on

Narendra Modi Live
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 293 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ, ಜೆಡಿಎಸ್‌ ಸೇರಿ ಹಲವು ಮಿತ್ರಪಕ್ಷಗಳೊಂದಿಗೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಪ್ರಮಾಣವಚನ ಕಾರ್ಯಕ್ರಮದ ಲೈವ್‌ ಅನ್ನು ಇಲ್ಲಿ ವೀಕ್ಷಿಸಿ…

10 ವರ್ಷದಲ್ಲಿ ಮೋದಿ ಸಾಧನೆಗಳು

ಮೂಲ ಸೌಕರ್ಯ ಅಭಿವೃದ್ಧಿ

ಗ್ರಾಮಗಳಲ್ಲಿ ಮನೆ ಮನೆಗಳಲ್ಲಿ ಶೌಚಾಲಯ ನಿರ್ಮಾಣದಿಂದ ಹಿಡಿದು ಸಾಮಾನ್ಯ ಜನರೂ ವಿಮಾನದಲ್ಲಿ ಪ್ರಯಾಣಿಸುವ ಉಡಾನ್‌ ಯೋಜನೆತನಕ ಮೋದಿ ಆಡಳಿತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯಾಗಿದೆ. ದೇಶಾದ್ಯಂತ 11.72 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 3.5 ಕೋಟಿ ಮನೆ ನಿರ್ಮಾಣ, ಉಜ್ವಲ ಯೋಜನೆ ಅಡಿಯಲ್ಲಿ 9.6 ಕೋಟಿ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ. ಇನ್ನು ಉಡಾನ್‌ ಯೋಜನೆ ಅಡಿಯಲ್ಲಿ ದೇಶಾದ್ಯಂತ ಇದ್ದ 74 ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 141ಕ್ಕೆ ಏರಿಸಲಾಗಿದೆ. ಜನಧನ್‌ ಯೋಜನೆ ಮೂಲಕ 50 ಕೋಟಿ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ರೈಲು ನಿಲ್ದಾಣಗಳನ್ನು ಅತ್ಯಾಧುನೀಕರಣ ಮಾಡಲಾಗಿದೆ. ರೈಲುಗಳಲ್ಲಿ ಜೈವಿಕ ಶೌಚಾಲಯಗಳ ಅಳವಡಿಕೆ, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು ದೇಶದ ನರನಾಡಿಗಳಂತೆ ಕಾಣುತ್ತಿವೆ.

ಡಿಜಿಟಲ್‌ ಇಂಡಿಯಾ ಮೇನಿಯಾ

ನರೇಂದ್ರ ಮೋದಿ ಅವರು ಕಂಡ ಡಿಜಿಟಲ್‌ ಇಂಡಿಯಾ ಕನಸು ಬಹುತೇಕ ನನಸಾಗಿದೆ. ಮೊದಲೆಲ್ಲ ಯಾರಿಗಾದರೂ ಹಣ ಕಳುಹಿಸಬೇಕು ಎಂದರೆ ನೆಟ್‌ ಬ್ಯಾಂಕಿಂಗ್‌ ಮೊರೆ ಹೋಗಬೇಕಿತ್ತು. ಇಲ್ಲವೇ, ಬ್ಯಾಂಕ್‌ನಲ್ಲಿ ಕ್ಯೂ ನಿಂತು ಎನ್‌ಇಎಫ್‌ಟಿ (NEFT) ಮಾಡಬೇಕಿತ್ತು. ಆದರೆ, ಡಿಜಿಟಲ್‌ ಇಂಡಿಯಾ ಅಭಿಯಾನವು ಯಶಸ್ವಿಯಾಗಿದ್ದು, ಈಗ ಯುಪಿಐ ಮೂಲಕ ಕ್ಷಣಮಾತ್ರದಲ್ಲಿ ಹಣ ಕಳುಹಿಸಬಹುದಾಗಿದೆ. ಡಿಜಿಟಲ್‌ ಆರ್ಥಿಕತೆ ಸೃಷ್ಟಿಯಾಗಿದೆ. ಗ್ರಾಮದ ಗೂಡಂಗಡಿಗಳಿಂದ ಹಿಡಿದು ನಗರಗಳಲ್ಲಿ ತರಕಾರಿ ಮಾರುವವರೂ ಈಗ ಕ್ಯೂಆರ್‌ ಕೋಡ್‌ ಸ್ಕ್ಯಾನರ್‌ ಇಟ್ಟುಕೊಂಡಿದ್ದಾರೆ. ಸದ್ಯ, ಶೇ. 75ರಷ್ಟು ಚಿಲ್ಲರೆ ವ್ಯಾಪಾರವು ಯುಪಿಐ ಮೂಲಕವೇ ಆಗುತ್ತಿದೆ. ಕೋಟ್ಯಂತರ ಜನ, ಲಕ್ಷಾಂತರ ಕೋಟಿ ರೂಪಾಯಿಯನ್ನು ಯುಪಿಐ ಮೂಲಕವೇ ವರ್ಗಾವಣೆ ಮಾಡುತ್ತಿದ್ದಾರೆ. ಯುಪಿಐ ವ್ಯವಸ್ಥೆಯನ್ನು ಬೇರೆ ದೇಶಗಳೂ ಅಳವಡಿಸಿಕೊಂಡಿವೆ.

Digital Payment

370ನೇ ವಿಧಿ ರದ್ದು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿರುವುದು ನರೇಂದ್ರ ಮೋದಿ ಸರ್ಕಾರದ ದಿಟ್ಟ ತೀರ್ಮಾನಗಳಲ್ಲಿ ಒಂದಾಗಿದೆ. ಉಗ್ರರ ತಾಣವಾಗಿದ್ದ, ಪ್ರತ್ಯೇಕವಾದಿಗಳ ಗೂಡಾಗಿದ್ದ, ಕಲ್ಲು ತೂರಾಟಗಾರರ ಪ್ರಯೋಗ ತಾಣವಾಗಿದ್ದ ಕಾಶ್ಮೀರದಲ್ಲಿ ಈಗ ಜಿ-20 ಸಭೆ ನಡೆಯುವಂತಾಗಿದ್ದರೆ ಅದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣವಾಗಿದೆ. 2019ರ ಆಗಸ್ಟ್‌ 5ರಂದು 370ನೇ ವಿಧಿ ರದ್ದು ಬಳಿಕ ಉಗ್ರರ ಉಪಟಳ ನಿಲ್ಲದಿದ್ದರೂ ಪ್ರತ್ಯೇಕವಾದಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಕಾಶ್ಮೀರದಲ್ಲಿ ವಿದೇಶಿ ಗಣ್ಯರು ಬಂದು ಶಾಪಿಂಗ್‌ ಮಾಡುವಂತಾಗಿದೆ. ಆದರೂ, ಕೇಂದ್ರ ಸರ್ಕಾರವು ಕಾಶ್ಮೀರ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಹಿನ್ನಡೆ ಅನುಭವಿಸಿದ್ದು, ಅದರ ಕುರಿತು ಹೆಚ್ಚಿನ ಗಮನ ಹರಿಸಬೇಕಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೊನೆಯ ಹಂತಕ್ಕೆ ಬಂದಿದ್ದು, ಇದನ್ನು ಸುಗಮವಾಗಿ ಕೈಗೊಂಡ ಕೀರ್ತಿ, ಬಿಜೆಪಿ ನೀಡಿದ ಭರವಸೆಯನ್ನು ಈಡೇರಿಸಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ಪರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ದೇಶಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಂಡಿದ್ದು, ಸುಗಮವಾಗಿ ರಾಮಮಂದಿರ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದು ಕೇಂದ್ರ ಸರ್ಕಾರದ ಸಾಧನೆಯಾಗಿದೆ. ಅಷ್ಟೇ ಅಲ್ಲ, 2024ರ ಜನವರಿಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗೆ ಸರ್ಕಾರ ಸಿದ್ಧವಾಗಿದೆ. ಹಾಗೆಯೇ, ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿ ನಿರ್ಮಾಣಕ್ಕೂ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.

PM Narendra Modi

ಕೊರೊನಾ ಸಂದರ್ಭದಲ್ಲಿ ಉಚಿತವಾಗಿ ಆಹಾರ ಧಾನ್ಯ ವಿತರಣೆ

ಕೊರೊನಾ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ದೇಶದ ಕೋಟ್ಯಂತರ ಜನ ಸಂಕಷ್ಟಕ್ಕೆ ಸಿಲುಕಿದ್ದಾಗ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮೂಲಕ (PMGKAY) ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಿದ್ದು ಕೂಡ ಕೇಂದ್ರದ ಸಾಧನೆಯಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡುವ ಮೂಲಕ ಜನರ ನೆರವಿಗೆ ಕೇಂದ್ರ ಸರ್ಕಾರ ನಿಂತಿದ್ದು ಸ್ಮರಣೀಯ.

ದೇಶದ ಗಡಿ ಭದ್ರ, ಉಗ್ರರಿಗೆ ತಿರುಗೇಟು

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಗಡಿಗಳು ಮತ್ತಷ್ಟು ಭದ್ರವಾಗಿವೆ. ಉಗ್ರರ ದಾಳಿಗಳು ಬಹುತೇಕವಾಗಿ ನಿಂತುಹೋಗಿವೆ. 2016ರಲ್ಲಿ ಪಾಕಿಸ್ತಾನದ ಉಗ್ರರು ಜಮ್ಮು-ಕಾಶ್ಮೀರದ ಉರಿ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರ ಚಟುವಟಿಕೆಗಳಿಗೆ ಪ್ರತ್ಯುತ್ತರ ನೀಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ, ಕಲ್ಲು ತೂರಾಟ, ಪ್ರತ್ಯೇಕವಾದಿಗಳನ್ನು ಹೆಡೆಮುರಿಕಟ್ಟಿದ್ದು ಮೋದಿ ಸರ್ಕಾರದ ದಿಟ್ಟ ನಿರ್ಧಾರವಾಗಿದೆ.

ಎಲ್ಲರಿಗೂ ಲಸಿಕೆ ವಿತರಣೆ

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶೀಯವಾಗಿ ಕೊರೊನಾ ನಿರೋಧಕ ಲಸಿಕೆ ಉತ್ಪಾದನೆ ಜತೆಗೆ ದೇಶಾದ್ಯಂತ ಕೋಟ್ಯಂತರ ಜನರಿಗೆ ವಿತರಣೆ ಮಾಡಿದ್ದು, ಎರಡು ಲಾಕ್‌ಡೌನ್‌ ಮಾಡಿಯೂ ಆರ್ಥಿಕತೆ ದಿವಾಳಿಯಾಗದಂತೆ ನೋಡಿಕೊಂಡಿದ್ದು, ಆಮ್ಲಜನಕ ಕೊರತೆ, ವೈದ್ಯಕೀಯ ಮೂಲ ಸೌಕರ್ಯಗಳ ಕೊರತೆ ಮಧ್ಯೆಯೂ ಕೊರೊನಾ ನಿರ್ವಹಣೆ ಮಾಡಿದ್ದು ಮೋದಿ ಸರ್ಕಾರದ ಸಾಧನೆ ಎಂಬುದರಲ್ಲಿ ಎರಡು ಮಾತಿಲ್ಲ. ಕೊರೊನಾ ನಿರೋಧಕ ಲಸಿಕೆಯ 200 ಕೋಟಿಗೂ ಅಧಿಕ ಡೋಸ್‌ ವಿತರಣೆ ಮಾಡಿದ್ದು, ಬೇರೆ ರಾಷ್ಟ್ರಗಳಿಗೂ ಲಸಿಕೆ ರವಾನೆ ಮಾಡಿದ್ದು ಸಾಧನೆಯಾಗಿದೆ.

ರೈತರ ಖಾತೆಯಲ್ಲಿ ಕಾಂಚಾಣ ಝಣಝಣ

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ರೈತರಿಗೆ ವರ್ಷದಲ್ಲಿ ತಲಾ 2 ಸಾವಿರ ರೂ. ನಂತೆ ಮೂರು ಬಾರಿ 6 ಸಾವಿರ ರೂ. ನೀಡುವ ಮೂಲಕ ಕೇಂದ್ರ ಸರ್ಕಾರ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಇದರಿಂದ ದೇಶದ ಕೋಟ್ಯಂತರ ರೈತರ ಖಾತೆಗೆ ಹಣ ಜಮೆಯಾಗುತ್ತಿದ್ದು, ಯೋಜನೆ ಜಾರಿಯಲ್ಲಿ ಎಲ್ಲೂ ಲೋಪವಾಗದಂತೆ ಕೇಂದ್ರ ಸರ್ಕಾರ ನೋಡಿಕೊಂಡಿದೆ.

ವಿದೇಶಗಳಿಂದ ಭಾರತೀಯರ ರಕ್ಷಣೆ

ಮೋದಿ ಸರ್ಕಾರವು ಎರಡನೇ ಅವಧಿಯ ವೇಳೆ, ಬೇರೆ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ರಕ್ಷಿಸುವಲ್ಲಿ ಬೇರೆ ರಾಷ್ಟ್ರಗಳಿಗೂ ಮಾದರಿ ಎನಿಸಿದೆ. ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಉಪಟಳ ಆರಂಭವಾದಾಗ ಕೇಂದ್ರ ಸರ್ಕಾರವು 700 ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ. ಉಕ್ರೇನ್‌ನಲ್ಲಿ ರಷ್ಯಾ ಆಕ್ರಮಣ ಆರಂಭಿಸಿದಾಗ 23 ಸಾವಿರ ಭಾರತೀಯರನ್ನು ತಾಯ್ನಾಡಿಗೆ ಕರೆದುಕೊಂಡು ಬಂದಿದೆ. ಅಷ್ಟೇ ಏಕೆ, ಕೆಲ ದಿನಗಳ ಹಿಂದೆಯೇ ಸುಡಾನ್‌ನಲ್ಲಿ ಆಂತರಿಕ ಸಂಘರ್ಷ ಉಂಟಾದಾಗ, ‘ಆಪರೇಷನ್‌ ಕಾವೇರಿ’ ಮೂಲಕ ಕನ್ನಡಿಗರೂ ಸೇರಿ ನೂರಾರು ಭಾರತೀಯರನ್ನು ಸರ್ಕಾರ ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ.

ದೇಶದಲ್ಲಿ ಇಷ್ಟೆಲ್ಲ ಬದಲಾವಣೆಗೆ ಕಾರಣವಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಅವರು ನೆಹರು ಅವರ ದಾಖಲೆಯನ್ನು ಮುರಿಯಲು ಮತ್ತೊಂದು ಹೆಜ್ಜೆ ಮುಂದಿಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

Continue Reading

ಪ್ರಮುಖ ಸುದ್ದಿ

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Champions Trophy 2025 : ಈ ಬಾರಿ ಬಿಜೆಪಿ ಸರಳ ಬಹುಮತ ಪಡೆದಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದಾಗ್ಯೂ ಈ ಸರ್ಕಾರದ ವಿದೇಶಾಂಗ ನೀತಿ ಬದಲಾಗುವ ಸಾಧ್ಯತೆಗಳು ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಲ್ಲ ಎಂದು ಕ್ರಿಕ್ಬಝ್ ವರದಿ ಮಾಡಿದೆ.

VISTARANEWS.COM


on

Champions Trophy 2025
Koo

ನವದೆಹಲಿ: 2024 ರ ಟಿ 20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ (IND vs PAK) ನಡೆಯುತ್ತಿರುವ ನಡುವೆಯೇ ಚಾಂಪಿಯನ್ಸ್ ಟ್ರೋಫಿಯ ಸಂಘಟಕರಾದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಪಂದ್ಯಾವಳಿಯ 2025 ರ ಆವೃತ್ತಿಗೆ 20 ದಿನಗಳನ್ನು ನಿಗದಿ ಮಾಡಿದೆ. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 09 ರವರೆಗೆ ನಡೆಯಲಿದ್ದು, ಇದು 19 ದಿನಗಳ (+1 ಮೀಸಲು ದಿನ) ಟೂರ್ನಿಯಾಗಿದೆ.

2017 ರ ಫೈನಲ್ ತಲುಪಿದ ಭಾರತೀಯ ತಂಡವು ಟೂರ್ನಿಯ ಆತಿಥ್ಯ ವಹಿಸಿರುವ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆಗಳು ಇಲ್ಲ. ಇತ್ತೀಚೆಗೆ ಮುಕ್ತಾಯಗೊಂಡ ಲೋಕ ಸಭಾ ಚುನಾವಣೆಯ ನಂತರ ಬಿಜೆಪಿ ನೇತೃತ್ವದ ಎನ್​ಡಿಎಗೆ ಅಧಿಕಾರಕ್ಕೆ ಏರಿದ ಬಳಿಕ ಈ ಸುದ್ದಿ ಪ್ರಕಟಗೊಂಡಿದೆ. ಈ ಬಾರಿ ಬಿಜೆಪಿ ಸರಳ ಬಹುಮತ ಪಡೆದಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದಾಗ್ಯೂ ಈ ಸರ್ಕಾರದ ವಿದೇಶಾಂಗ ನೀತಿ ಬದಲಾಗುವ ಸಾಧ್ಯತೆಗಳು ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಲ್ಲ ಎಂದು ಕ್ರಿಕ್​ಬಜ್​ ವರದಿ ಮಾಡಿದೆ.

2014ರಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನೆರೆಯ ರಾಷ್ಟ್ರದೊಂದಿಗೆ ಯಾವುದೇ ಸ್ನೇಹಪರ ರೀತಿಯಲ್ಲಿ ಸಂಬಂಧ ಹೊಂದಿಲ್ಲ. ಶತ್ರು ದೇಶದ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪುಲ್ವಾಮಾ ಮತ್ತು ಉರಿ ದಾಳಿಯ ನಂತರ ಎರಡೂ ದೇಶಗಳ ಸಂಬಂಧ ಹದಗೆಟ್ಟಿದೆ. ಇದರ ಪರಿಣಾಮವಾಗಿ, 2012-13ರಲ್ಲಿ ಪಾಕಿಸ್ತಾನವು ಬಹು-ಸ್ವರೂಪದ ಸರಣಿಗಾಗಿ ಭಾರತಕ್ಕೆ ಭೇಟಿ ನೀಡಿದ ನಂತರ ಉಭಯ ದೇಶಗಳು ಯಾವುದೇ ದ್ವಿಪಕ್ಷೀಯ ಸ್ಪರ್ಧೆಗಳಲ್ಲಿ ಭಾಗಿಯಾಗಿಲ್ಲ. ಅದರ ನಂತರ, ಎರಡೂ ತಂಡಗಳು ಬಹುರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ.

ಈ ಬಾರಿಯೂ ಸಾಧ್ಯವಿಲ್ಲ

ಪಕ್ಷವು ದೇಶದಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದರಿಂದ, ಪಾಕಿಸ್ತಾನವನ್ನು ಪರಕೀಯ ರಾಷ್ಟ್ರವಾಗಿ ನೋಡುವ ಭಾರತದ ದೃಷ್ಟಿಕೋನವು ಬದಲಾಗದೆ ಉಳಿಯುವ ಸಾಧ್ಯತೆಯಿದೆ ಎಂದು ವರದಿ ಸೂಚಿಸಿದೆ. ಪಂದ್ಯಾವಳಿಯ ಆತಿಥ್ಯ ವಹಿಸಲು ಐಸಿಸಿ ಹೈಬ್ರಿಡ್ ಮಾದರಿಯನ್ನು ಬಳಸಲು ಹೇಳಬಹುದು. ಯುಎಇ ಸಹ-ಆತಿಥ್ಯ ಪಡೆಯುವ ಸಾಧ್ಯತೆಗಳಿವೆ.

ಮುಂದಿನ ಎರಡು ತಿಂಗಳಲ್ಲಿ ಸ್ಪಷ್ಟತೆ

ವಾಘಾ ಗಡಿಗೆ ಹತ್ತಿರದ ಸ್ಥಳವಾದ ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಭಾರತ ತಂಡ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಆಡಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈಗಾಗಲೇ ದೃಢಪಡಿಸಿದೆ. ಇದು ಭಾರತಕ್ಕೆ ಕನಿಷ್ಠ ವ್ಯವಸ್ಥಾಪನಾ ಮತ್ತು ಭದ್ರತಾ ಸವಾಲುಗಳನ್ನು ಒಡ್ಡಿದೆ. ಅಭಿಮಾನಿಗಳಿಗೆ ಪಂದ್ಯಗಳನ್ನು ವೀಕ್ಷಿಸಲು ಗಡಿಯಾಚೆಗಿನ ಅನುಭವ ನೀಡಲಿದೆ.

ಇದನ್ನೂ ಓದಿ: IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ಹಿಂದೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದೆ ಮತ್ತು ಮಂಡಳಿಯು ಇದನ್ನು ಈ ಬಾರಿಯೂ ಅನುಸರಿಸುವ ನಿರೀಕ್ಷೆಯಿದೆ. “ಮುಂದಿನ ಎರಡು ತಿಂಗಳಲ್ಲಿ ನಾವು ಕೆಲವು ಆಲೋಚನೆಗಳನ್ನು ಹೊಂದಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಕೊಲಂಬೊದಲ್ಲಿ ಜುಲೈನಲ್ಲಿ ನಡೆಯಲಿರುವ ವಾರ್ಷಿಕ ಸಮ್ಮೇಳನದ ನಂತರ ಅಂತಿಮ ನಿರ್ಧಾರಕ್ಕೆ ಬರಲು ಸರ್ಕಾರದೊಂದಿಗೆ ಸಂವಹನ ನಡೆಸುವಂತೆ ಐಸಿಸಿ ಈಗಾಗಲೇ ಭಾರತೀಯ ಮಂಡಳಿಗೆ ತಿಳಿಸಿರಬೇಕು ಎಂದು ನಿರೀಕ್ಷಿಸಲಾಗಿದೆ.

Continue Reading

ಕ್ರಿಕೆಟ್

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

IND vs PAK : 024ರ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನವು ಭಾರತವನ್ನು ಎದುರಿಸಲಿದ್ದು, ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಬಾಬರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ನಾಯಕನನ್ನು ಭಾರತದ ಸ್ಟಾರ್ ಬ್ಯಾಟರ್​ಗಳಿಗೆ ಕೊಹ್ಲಿಗೆ ಹೋಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

IND vk PAK
Koo

ಬೆಂಗಳೂರು : 2024 ರ ಟಿ 20 ವಿಶ್ವಕಪ್ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ 44 ರನ್ ಗಳಿಸಿದ್ದ ಪಾಕ್​ ತಂಡದ ನಾಯಕ ಬಾಬರ್ ಅಜಮ್ (Babar Azam) ಟಿ 20 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದಿದ್ದಾರೆ. ಪಾಕಿಸ್ತಾನಿಗಳು ಮತ್ತು ಅವರ ಅಭಿಮಾನಿಗಳು ಈ ಮೈಲಿಗಲ್ಲಿನ ಬಗ್ಗೆ ಸಂಭ್ರಮದಲ್ಲಿದ್ದಾರೆ. ಆದರೆ, ಬಾಬರ್ ಸ್ಕೋರ್ ಮಾಡಿರುವುದೆಲ್ಲ ಸಣ್ಣಪುಟ್ಟ ತಂಡಗಳ ಜತೆ ಎಂಬುದು ಹಲವರ ಅಭಿಪ್ರಾಯ. ಬಾಬರ್ ಪಾಕಿಸ್ತಾನದ ಸ್ಟಾರ್ ಬ್ಯಾಟರ್​​ ಆಗಿದ್ದು, ತವರಿನಲ್ಲಿ ಮಾತ್ರ ಸಾಕಷ್ಟು ಪ್ರಭಾವ ಹೊಂದಿದ್ದಾರೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ (IND vs PAK) ನಡುವಿನ ಪಂದ್ಯದ ವೇಳೆ ಈ ಚರ್ಚೆ ಮುನ್ನೆಲೆಗೆ ಬಂದಿದೆ.

2024ರ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನವು ಭಾರತವನ್ನು ಎದುರಿಸಲಿದ್ದು, ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಬಾಬರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ನಾಯಕನನ್ನು ಭಾರತದ ಸ್ಟಾರ್ ಬ್ಯಾಟರ್​ಗಳಿಗೆ ಕೊಹ್ಲಿಗೆ ಹೋಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕನೇರಿಯಾ ಅವರು ಭಾರತೀಯ ದಂತಕಥೆಗೆಗೆ ಬಾಬರ್ ಕನಿಷ್ಠ ಹತ್ತರವೂ ಇಲ್ಲ ಎಂದು ವ್ಯಂಗ್ಯವಾಡಿದರು. 30 ವರ್ಷದ ಕನೇರಿಯಾ ಯುಎಸ್ಎ ಬೌಲಿಂಗ್ ಲೈನ್ಅಪ್ ವಿರುದ್ಧ ಬಾಬರ್​ ಹೇಗೆ ಹೆಣಗಾಡಿದ್ದರು ಎಂಬುದನ್ನು ಬೊಟ್ಟು ಮಾಡಿ ತೋರಿಸಿದ್ದಾರೆ.

ಇದನ್ನೂ ಓದಿ: INDvsPAK : ಪಾಕ್​ ಮತ್ತು ಭಾರತ ಪಂದ್ಯದ ಕುರಿತು ನಟ ಕಮಲ್​ ಹಾಸನ್​ ನೀಡಿರುವ ಹೇಳಿಕೆಯ ವಿಡಿಯ ಇಲ್ಲಿದೆ

ಬಾಬರ್ ಅಜಮ್ ಶತಕ ಬಾರಿಸಿದ ಕೂಡಲೇ ನೀವು ವಿರಾಟ್ ಕೊಹ್ಲಿಯೊಂದಿಗೆ ಹೋಲಿಕೆಗಳನ್ನು ಮಾಡಲಾಗುತ್ತಿದೆ. ಬಾಬಾರ್ ಅಜಂ ವಿರಾಟ್ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಎಂದು ಕನೇರಿಯಾ ಹೇಳಿದ್ದಾರೆ. ದೊಡ್ಡ ಬೌಲರ್​ಗಳನ್ನು ಎದುರಿಸುವ ಸಾಮರ್ಥ್ಯ ಇಲ್ಲ. ಉತ್ತಮ ಬೌಲರ್​ಗಳಿಗೆ ರನ್​ ಗಳಿಸಲು ಸಾಧ್ಯವಾಗುವುದಿಲ್ಲ. ಅಮೆರಿಕದ ಬಲಿಷ್ಠ ಬೌಲಿಂಗ್ ವಿರುದ್ಧವೇ 40 ರನ್​ಗೆ ಔಟಾಗಿದ್ದಾರೆ. ಕೊಹ್ಲಿಯ ರೀತಿ ಉತ್ತಮ ಆಟಗಾರನಾಗಿದ್ದರೆ ಕ್ರೀಸ್​ನಲ್ಲಿ ಉಳಿದು ಆಟವನ್ನು ಗೆಲ್ಲಬೇಕಾಗಿತ್ತು. ಪಾಕಿಸ್ತಾನ ಏಕಪಕ್ಷೀಯವಾಗಿ ಪಂದ್ಯವನ್ನು ಗೆಲ್ಲಬೇಕಿತ್ತು, “ಎಂದು ಕನೇರಿಯಾ ಹೇಳಿದ್ದಾರೆ.

ಭಾರತ ತಂಡವು ಪಾಕಿಸ್ತಾನವನ್ನು ಕೆಟ್ಟದಾಗಿ ಸೋಲಿಸುತ್ತದೆ. ಪಾಕಿಸ್ತಾನ ಭಾರತವನ್ನು ಸೋಲಿಸುವ ಸಾಮರ್ಥ್ಯ ಹೊಂದಿಲ್ಲ. ಪಾಕಿಸ್ತಾನ ವಿಶ್ವಕಪ್​ಗೆ ಬಂದಾಗಲೆಲ್ಲಾ ತಮ್ಮ ಬೌಲಿಂಗ್ ಘಟಕವನ್ನು ಶ್ಲಾಘಿಸುತ್ತಲೇ ಇರುತ್ತಾರೆ. ಅದರೆ, ಅವರ ಬೌಲಿಂಗ್ ಅನ್ನು ಸಲೀಸಾಗಿ ಎದುರಿಸಲು ಸಾಧ್ಯ, “ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಜಯ ಅನಿವಾರ್ಯ

ಪಾಕಿಸ್ತಾನದ ಟಿ 20 ವಿಶ್ವಕಪ್ ಅಭಿಯಾನದ ಬಗ್ಗೆ ಮಾತನಾಡುವುದಾದರೆ, ಮೆನ್ ಇನ್ ಗ್ರೀನ್ ತಂಡವು ಜೂನ್ 9 ರಂದು ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದೆ. ತಂಡಕ್ಕೆ ಗೆಲುವಿನ ಅವಶ್ಯಕತೆಯಿದೆ. ಯುಎಸ್ಎ ವಿರುದ್ಧದ ಸೋಲನ್ನು ಟಿ 20 ವಿಶ್ವಕಪ್ ಇತಿಹಾಸದ ಅತಿದೊಡ್ಡ ಅವಮಾನ ಎಂದು ಕರೆಯಲಾಗುತ್ತಿದೆ. ನಿರ್ಣಾಯಕ ಪಂದ್ಯಕ್ಕೆ ಮೊದಲು ತಂಡದ ನೈತಿಕ ಸ್ಥೈರ್ಯವು ಕೆಳಮಟ್ಟಕ್ಕೆ ಕುಸಿದಿದೆ. ಹಿಂದಿನ ಆವೃತ್ತಿಯಲ್ಲಿ ಫೈನಲ್ ತಲುಪಿದ ಮಾಜಿ ಚಾಂಪಿಯನ್ಸ್ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

Continue Reading
Advertisement
Modi 3.0 Cabinet BS Yediyurappa congratulates Pralhad Joshi
Lok Sabha Election 202418 mins ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Rishabh Pant
ಪ್ರಮುಖ ಸುದ್ದಿ29 mins ago

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Health Tips
ಆರೋಗ್ಯ41 mins ago

Health Tips: ಆರೋಗ್ಯಕರ ಆಗಿರಬೇಕಿದ್ದರೆ ನಾವು ಪ್ರತಿದಿನ ಎಷ್ಟು ಪ್ರಮಾಣದಲ್ಲಿ ಆಹಾರ ಸೇವಿಸಬೇಕು?

Narendra Modi Live
ದೇಶ48 mins ago

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Champions Trophy 2025
ಪ್ರಮುಖ ಸುದ್ದಿ1 hour ago

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Fake CBI Gang
ಕ್ರೈಂ1 hour ago

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

Kannada New Movie Chilli Chicken Official Trailer
ಸ್ಯಾಂಡಲ್ ವುಡ್2 hours ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

IND vk PAK
ಕ್ರಿಕೆಟ್2 hours ago

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

Champions Trophy 2025
ಕ್ರೀಡೆ2 hours ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಮುಹೂರ್ತ ಫಿಕ್ಸ್​; ಪಾಕ್​ಗೆ ತೆರಳಲಿದೆಯೇ ಭಾರತ?

Killer Python
ಕ್ರೈಂ2 hours ago

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌