Kannada New Movie | ಸೈನ್ಸ್ ಫಿಕ್ಷನ್ ಸಿನಿಮಾದಲ್ಲಿ ಮಿಂಚಲಿದ್ದಾರೆ ʻವಿಕ್ರಾಂತ್‌ ರೋಣʼ ಪಿಟಿ ಮೇಷ್ಟ್ರು ವಜ್ರಧೀರ್ ಜೈನ್ - Vistara News

ಸಿನಿಮಾ

Kannada New Movie | ಸೈನ್ಸ್ ಫಿಕ್ಷನ್ ಸಿನಿಮಾದಲ್ಲಿ ಮಿಂಚಲಿದ್ದಾರೆ ʻವಿಕ್ರಾಂತ್‌ ರೋಣʼ ಪಿಟಿ ಮೇಷ್ಟ್ರು ವಜ್ರಧೀರ್ ಜೈನ್

‘ವಿಕ್ರಾಂತ್ ರೋಣ’ ಚಿತ್ರದಲ್ಲಿ (Kannada New Movie) ಪಿಟಿ ಮೇಷ್ಟ್ರು ಪಾತ್ರದ ಮೂಲಕ ಗಮನ ಸೆಳೆದ ಕಲಾವಿದ ವಜ್ರಧೀರ್ ಜೈನ್ ‘ಬ್ಲಿಂಕ್’ ಸಿನಿಮಾದ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ (Kannada New Movie) ಪಿಟಿ ಮೇಷ್ಟ್ರು ಪಾತ್ರದ ಮೂಲಕ ಗಮನ ಸೆಳೆದ ಕಲಾವಿದ ವಜ್ರಧೀರ್ ಜೈನ್ ‘ಬ್ಲಿಂಕ್’ ಸಿನಿಮಾದ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಲಾರೆನ್ಸ್ ಪಿಂಟೋ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಕನ್ನಡ ‘ರಾಜರಥ’ ಸಿನಿಮಾದಲ್ಲಿ ನಟಿಸಿದ್ದ ವಜ್ರಧೀರ್ ಜೈನ್‌ ಮೂಲತಃ ರಂಗಭೂಮಿ ಕಲಾವಿದ. ʻಸಮಷ್ಟಿʼ ನಾಟಕ ತಂಡದಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ‘ರಾಜರಥ’ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟ ಇವರು ವಿಜಯ ರಾಘವೇಂದ್ರ ಅಭಿನಯದ ‘ಮಾಲ್ಗುಡಿ ಡೇಸ್’ ಚಿತ್ರದಲ್ಲೂ ಅಭಿನಯಿಸಿದ್ದಾರೆ. ಇದೀಗ ವಿಶೇಷ ಶೀರ್ಷಿಕೆಯುಳ್ಳ ‘ಬ್ಲಿಂಕ್’ ಸಿನಿಮಾದಲ್ಲೂ ವಜ್ರಧೀರ್ ಜೈನ್ ನಟಿಸಿದ್ದಾರೆ.

ಇದನ್ನೂ ಓದಿ | Kannada New Movie | 25ನೇ ದಿನದತ್ತ ʻಧರಣಿ ಮಂಡಲ ಮಧ್ಯದೊಳಗೆʼ ಸಿನಿಮಾ: ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ

ಶ್ರೀನಿಧಿ ಬೆಂಗಳೂರು ನಿರ್ದೇಶನದ ಈ ಚಿತ್ರದಲ್ಲಿ ವಜ್ರಧೀರ್ ಜೈನ್ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಈ ಬಗ್ಗೆ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾಹಿತಿ ಹಂಚಿಕೊಂಡಿದ್ದಾರೆ. ಶ್ರೀನಿಧಿ ಮಾತನಾಡಿ ʻʻವಜ್ರಧೀರ್ ಜೈನ್‌ ಜತೆ ಕೆಲಸ ಮಾಡಿದ್ದು ಒಂದು ಹೊಸ ಅನುಭವ ನೀಡಿದೆ. ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ದೊಡ್ಡ ಪಾತ್ರ ನಿಭಾಯಿಸಿದ್ದಾರೆ ಎಂದು ನಮಗೆ ಗೊತ್ತಿರಲಿಲ್ಲ. ಅವರು ಕೂಡ ಈ ಬಗ್ಗೆ ಹೇಳಿಕೊಂಡಿರಲಿಲ್ಲ. ನಮಗೆ ನಾಟಕ ತಂಡದ ಮೂಲಕ ಅವರ ಪರಿಚಯವಾಗಿದ್ದು. ಬ್ಲಿಂಕ್‌ನಲ್ಲೂ ಬಹಳ ಪ್ರಾಮುಖ್ಯತೆ ಇರುವ ಪಾತ್ರವನ್ನು ನಿಭಾಯಿಸಿದ್ದಾರೆ. ಪಾತ್ರವನ್ನು ತುಂಬಾ ಸಟಲ್ ಆಗಿ ನಿರ್ವಹಿಸಿದ್ದಾರೆ. ನೋಡುಗರಿಗೆ ಬಹಳ ಬೇಗ ಅವರ ಪಾತ್ರ ಕನೆಕ್ಟ್ ಆಗುತ್ತದೆ. ಆದ್ದರಿಂದಲೇ ಅವರ ಪಾತ್ರಕ್ಕೆ ಅರಿವು ಎಂದು ಹೆಸರಿಟ್ಟಿದ್ದೇವೆʼʼ ಎಂದು ಸಂತಸ ಹಂಚಿಕೊಂಡಿದ್ದಾರೆ.

‘ಬ್ಲಿಂಕ್’ ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು ಶ್ರೀನಿಧಿ ಬೆಂಗಳೂರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡು ಭರವಸೆ ಮೂಡಿಸಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನನಿ ಪಿಕ್ಚರ್ಸ್ ಬ್ಯಾನರ್ ನಡಿ ರವಿಚಂದ್ರ ಎ.ಜೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Kannada New Movie

ಚಿತ್ರದಲ್ಲಿ ಆರು ಪ್ರಮುಖ ಪಾತ್ರಗಳು ಟ್ರಾವೆಲ್ ಮಾಡಲಿದ್ದು, ದಿಯಾ ಖ್ಯಾತಿಯ ದೀಕ್ಷಿತ್, ಚೈತ್ರ ಜೆ. ಆಚಾರ್, ಮಂದಾರ ಬಟ್ಟಲಹಳ್ಳಿ, ಗೋಪಾಲ ಕೃಷ್ಣ ದೇಶಪಾಂಡೆ, ಯಶಸ್ವಿನಿ ರಾವ್, ಕಿರಣ್ ನಾಯ್ಕ್, ಸುರೇಶ್ ಅನಗಳ್ಳಿ ಮುಖ್ಯ ತಾರಾಗಣದಲ್ಲಿದ್ದಾರೆ. ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಪ್ರಸನ್ನ ಕುಮಾರ್ ಸಂಗೀತ, ಸಂಜೀವ್ ಜಹಗೀರ್ದಾರ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movie | ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ʻತೂತು ಮಡಿಕೆʼ ಖ್ಯಾತಿಯ ಚಂದ್ರ ಕೀರ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Actor Kiran Raj: ಈ ಹಿಂದೆ ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿತ್ತು. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

VISTARANEWS.COM


on

Actor Kiran Raj Ronny Movie Reels with Fans Song
Koo

ಬೆಂಗಳೂರು: ʻಕನ್ನಡತಿ ಧಾರಾವಾಹಿʼ (Kannadathi serial) ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್‌ರಾಜ್‌ (Actor Kiran Raj) ನಾಯಕನಾಗಿ ನಟಿಸುತ್ತಿರುವ ʻರಾನಿʼ (Ronny Movie) ಸಿನಿಮಾ ಒಂದೊಲೊಂದು ಸುದ್ದಿ ಮಾಡುತ್ತಲೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ.

“ನೀನೆಂದರೆ ನೀನೆಂದರೆ ನನಗೊಂತರ ಅರಿಯದ ಅಮಲು” ಎನ್ನುವ ಸಾಲಿನಿಂದ ಶುರುವಾಗುವ ಹಾಡಿಗೆ ಸಾವಿರಾರು ಜನ ಇನ್‌ಸ್ಟಾ ರೀಲ್ಸ್ ಮಾಡುವ ಮುಖಾಂತರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಹಾಡು ಹಿಟ್ ಮಾಡಿದ ಅಭಿಮಾನಿಗಳೊಂದಿಗೆ ಕಿರಣ್ ರಾಜ್ ಇದೆ ಭಾನುವಾರ ರೀಲ್ಸ್ ಮಾಡುತ್ತಿದ್ದಾರೆ.ಪೊಸ್ಟರ್,ಟೀಸರ್,ಹಾಡುಗಳಿಂದ ಭಾರಿ ನಿರೀಕ್ಷೆ ಹುಟ್ಟಿಸಿರುವ “ರಾನಿ” ಚಿತ್ರ ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈ ಹಿಂದೆ ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿತ್ತು. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಟೀಸರ್‌ ಹೇಗಿತ್ತು?

 ʻನಾನು ಮನುಷ್ಯನಾಗಬಯಸುತ್ತೇನೆ, ಡಾನ್‌ ಅಲ್ಲʼ ಎಂದು ಕಿರಣ್‌ರಾಜ್‌ ಅಬ್ಬರಿಸುವ ದೃಶ್ಯವೊಂದು ಇದರಲ್ಲಿತ್ತು. ಇದರೊಂದಿಗೆ ಇದು ಆಕಸ್ಮಿಕವಾಗಿ ಭೂಗತ ಜಗತ್ತು ಪ್ರವೇಶಿಸಿದ ಅಮಾಯಕ ಯುವಕನೊಬ್ಬನ ಕಥೆಯಂತೆ ಕಾಣಿಸುತ್ತಿತ್ತು. ಜತೆಗೆ ಸಖತ್‌ ರೊಮ್ಯಾನ್ಸ್‌ ಕೂಡಾ ಕಾಣಿಸಿತ್ತು. ಟೀಸರ್‌ನಲ್ಲಿ ಕಿರಣ್‌ರಾಜ್‌ ಅವರ ಆಕ್ಷನ್‌, ರವಿಶಂಕರ್‌ ಅವರ ಅಬ್ಬರ ಕಣ್ಮನ ತಣಿಸುವಂತಿತ್ತು. ಕಿರಣ್‌ ಅಂತೂ ಕಿಲ್ಲರ್‌ ಲುಕ್‌ನಿಂದ ಕೊಲ್ಲುತ್ತಾರೆ. ಮಣಿಕಾಂತ್‌ ಕದ್ರಿ ಅವರ ಹಿನ್ನೆಲೆ ಸಂಗೀತವೂ ಟೀಸರ್‌ಗೆ ಹೊಸ ರೂಪ ನೀಡಿತ್ತು.

ಈ ಚಿತ್ರದಲ್ಲಿ ಕಿರಣ್‌ ರಾಜ್‌ ಜತೆಗೆ ರವಿಶಂಕರ್‌, ಮೈಕೋ ನಾಗರಾಜ್‌, ನಾಗತಿಹಳ್ಳಿ ಚಂದ್ರಶೇಖರ್‌, ಬಿ ಸುರೇಶ್‌, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್‌ ಹೆಗ್ಡೆ, ಪ್ರಥ್ವೀರಾಜ್‌, ಯಶ್‌ ಶೆಟ್ಟಿ, ಉಮೇಶ್‌, ಸುಜಯ್‌ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್‌ ಮಲಾನಿ, ಅನಿಲ್‌, ಧರ್ಮೇಂದ್ರ ಅರಸ್‌, ಮನಮೋಹನ ರೈ ಮೊದಲಾದವರು ಇದ್ದಾರೆ. ಪ್ರಮೋದ್‌ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್‌ ಕದ್ರಿ ಟ್ಯೂನ್‌ ಹಾಕಿದ್ದಾರೆ.

ಇದೊಂದು ಪಕ್ಕಾ ಆಕ್ಷನ್‌ ಚಿತ್ರವಾಗಿದೆ. ಆದರೆ, ಅತ್ಯಂತ ಸೂಕ್ಷ್ಮ ಅಂಶಗಳನ್ನು ಬೆಸೆದುಕೊಂಡು ಕಟ್ಟಿದ ದೃಶ್ಯ ಕಾವ್ಯ ಎಂಬುದು ಟೀಸರ್‌ನಿಂದ ಸ್ಪಷ್ಟವಾಗುತ್ತದೆ. ರಾನಿ ಸಿನಿಮಾದಲ್ಲಿ ಆರು ಆಕ್ಷನ್‌ ಸೀನ್‌ಗಳಿವೆ ಎಂದು ಚಿತ್ರತಂಡ ಹೇಳಿದೆ.


ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ ಎನ್ನುವುದು ಸದ್ಯದ ಲೆಕ್ಕಾಚಾರ. ಹಿಂದಿ ಟೀಸರ್‌ ಔಟ್‌ ಆಗಿರುವುದರಿಂದ ಹಿಂದಿಗೆ ಡಬ್‌ ಆಗಿ ಬಿಡುಗಡೆಯಾದರೂ ಅಚ್ಚರಿ ಇಲ್ಲ.

Continue Reading

ಸಿನಿಮಾ

Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

Munawar Faruqui: ಹಿಂದಿಯ ಬಿಗ್ ಬಾಸ್ 17ನೇ (Bigg Boss 17) ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು. ಇನ್ನು ಕೆಲವರು ಮುನಾವರ್‌ ಗೆದ್ದ ಬಳಿಕ ಇದು ಫಿಕ್ಸಿಂಗ್‌ ಎಂದು ಆರೋಪ ಕೂಡ ಮಾಡಿದ್ದರು. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Munawar Faruqui hospitalised Bigg Boss 17 winner
Koo

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುನಾವರ್ ಸ್ನೇಹಿತರೊಬ್ಬರು ಮೇ 24ರಂದು ಆಸ್ಪತ್ರೆಯ ಬೆಡ್‌ನಲ್ಲಿ ಮುನಾವರ್‌ ಮಲಗಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಮುನಾವರ್ ಅವರ ಸ್ನೇಹಿತ ನಿತಿನ್ ಮೆಂಘಾನಿ ಅವರು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಮುನಾವರ್ ಆಸ್ಪತ್ರೆಯಲ್ಲಿರುವ ಫೋಟೊ ವನ್ನು ಹಂಚಿಕೊಂಡಿದ್ದಾರೆ. ನಿತಿನ್ ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿ, “ನನ್ನ ಸಹೋದರ ಮುನಾವರ್‌ಗೆ ದೇವರು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ. ಶೀಘ್ರದಲ್ಲೇ ಗುಣಮುಖರಾಗಲಿ.”ಎಂದು ಬರೆದುಕೊಂಡಿದ್ದಾರೆ. ಇನ್ನು ಮುನಾವರ್ ಕೂಡ ರಿಕವರ್‌ ಮೋಡ್‌ ಎಂದು ಇನ್‌ಸ್ಟಾ ಸ್ಟೋರಿಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಮೇಲೆ ಮೊಟ್ಟೆ ಎಸೆತ!

ಏ. 10) ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

ಹಿಂದಿಯ ಬಿಗ್ ಬಾಸ್ 17ನೇ (Bigg Boss 17) ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು. ಇನ್ನು ಕೆಲವರು ಮುನಾವರ್‌ ಗೆದ್ದ ಬಳಿಕ ಇದು ಫಿಕ್ಸಿಂಗ್‌ ಎಂದು ಆರೋಪ ಕೂಡ ಮಾಡಿದ್ದರು. ಈ ಬಗ್ಗೆ ಮುನಾವರ್‌ ಕೂಡ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ʻನಾನು ಫಿಕ್ಸಿಂಗ್​ ವಿನ್ನರ್​ ಆಗಿದ್ದಿದ್ದರೆ ಇಷ್ಟೆಲ್ಲ ಕಷ್ಟ ಅನುಭವಿಸಬೇಕಿರಲಿಲ್ಲ. ಎಲ್ಲವೂ ನನಗೆ ಸುಲಭವಾಗಿ ಸಿಗುತ್ತಿತ್ತು. ಇಡೀ ಸೀಸನ್​ನಲ್ಲಿ ನಾನು ಕಷ್ಟಪಟ್ಟಿದ್ದೇನೆ. ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುವವರು ಕುಳಿತುಕೊಂಡು ಪೂರ್ತಿ ಸೀಸನ್​ನ ಸಂಚಿಕೆಗಳನ್ನು ನೋಡಲಿ. ಫಿಕ್ಸಿಂಗ್​ ಅಲ್ಲ ಎಂಬುದು ಆಗ ಗೊತ್ತಾಗುತ್ತದೆʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Samarjit Lankesh: ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕಿದರು. ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

VISTARANEWS.COM


on

Samarjit Lankesh Love you Samantha Song Teaser
Koo

ಬೆಂಗಳೂರು: ಸಾಂಸ್ಕೃತಿಕ ನಗರಿ (Samarjit Lankesh) ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಕಾರಣ ಈ ಕಾಲೇಜಿನ ಕ್ಲಾಸ್ ರೂಂನಲ್ಲಿ ʻಗೌರಿ’ ಚಿತ್ರತಂಡ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ (Love you Samantha Song Teaser) ಮಾಡಿದೆ. ಕರ್ನಾಟಕದ ಹೆಮ್ಮೆಯ ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು.

ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತ ʻಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿದರು.

ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಫಿದಾ ಆಗಿದ್ದಾರೆ. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕಾ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಈ ವೇಳೆ ವಿದ್ಯಾರ್ಥಿಗಳಿಗೆ ʻಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿಗಿದೆ.
ʻಲವ್ ಯೂ ಸಮಂತಾ’ಗೆ ಸಾಹಿತ್ಯ ಕವಿರಾಜ್ ಅವರದ್ದಾದರೆ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನವಿದೆ.
ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.

ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Continue Reading

ಬಾಲಿವುಡ್

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Janhvi Kapoor: 2018ರಲ್ಲಿ ಜಾನ್ವಿ ಕಪೂರ್ ಬಾಲಿವುಡ್ ಪ್ರವೇಶಿಸಿದರು. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. . ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

VISTARANEWS.COM


on

Janhvi Kapoor views on Gandhi Ambedkar casteism
Koo

ಬೆಂಗಳೂರು: ಬಾಲಿವುಡ್‌ ನಟಿ ಜಾನ್ವಿ ಕಪೂರ್ (Janhvi Kapoor) ಅವರು ಸೌತ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜತೆಗೆ ಆಗಾಗ ಇವರು ಸಂದರ್ಶನ ನೀಡುತ್ತಲೇ ಇರುತ್ತಾರೆ. ಇದೀಗ ಸಂದರ್ಶನವೊಂದರಲ್ಲಿ ಜಾನ್ವಿ ಕಪೂರ್ ಅವರ ಮಾತುಗಳು ಕೆಲವರಿಗೆ ಅಚ್ಚರಿ ತಂದಿದೆ. ಗಾಂಧಿ ಹಾಗೂ ಅಂಬೇಡ್ಕರ್ ನಡುವಿನ ಜಾತಿವಾದದ ( Janhvi opened up on casteism) ಕುರಿತ ಚರ್ಚೆಯ ಬಗ್ಗೆ ತಮಗೆ ಆಸಕ್ತಿ ಇರುವುದಾಗಿ ನಟಿ ಹೇಳಿಕೊಂಡಿದ್ದಾರೆ. ನಟಿ ಶ್ರೀದೇವಿ ಮಗಳ ಸಾಮಾಜಿಕ ಆಸಕ್ತಿಯ ಬಗ್ಗೆ ಮತ್ತು ಅವರ ಪ್ರೌಢತೆಯ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಜಾನ್ವಿ ಕಪೂರ್‌ ಅವರು ಸಂದರ್ಶನ ವೇಳೆ ತಮಗೆ ಇತಿಹಾಸದಲ್ಲಿ ತುಂಬ ಆಸಕ್ತಿ ಇದೆ ಎಂದರು. ಜತೆಗೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಭಾರತೀಯ ಸಂವಿಧಾನದ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರು ಜಾತಿವಾದದ ಬಗ್ಗೆ ವ್ಯಕ್ತಪಡಿಸಿದ್ದ ಅಭಿಪ್ರಾಯಗಳ ಬಗ್ಗೆ ಚರ್ಚೆ ನಡೆಸುವುದನ್ನು ನೋಡಲು ಬಯಸುತ್ತೇನೆ ಎಂದು ಜಾನ್ವಿ ಹೇಳಿದರು.

ನಟಿ ಮಾತನಾಡಿ ʻʻಅಂಬೇಡ್ಕರ್ ಅವರಿಗೆ ತಮ್ಮ ನಿಲುವು ಏನು ಎಂಬುದು ಮೊದಲಿನಿಂದಲೂ ಸ್ಪಷ್ಟವಾಗಿತ್ತು. ಹಾಗೇ ನಿಷ್ಠುರರಾಗಿದ್ದರು. ಆದರೆ ಗಾಂಧಿಯವರ (ಜಾತಿಭೇದ) ದೃಷ್ಟಿಕೋನವು ಹೆಚ್ಚು ಹೆಚ್ಚು ತೆರೆದುಕೊಂಡಂತೆ ವಿಕಸನಗೊಂಡಿತು ಎಂದು ನಾನು ಭಾವಿಸುತ್ತೇನೆ. ನಮ್ಮ ಸಮಾಜದಲ್ಲಿರುವ ಈ ಜಾತಿವಾದದ ಸಮಸ್ಯೆ ಬಗ್ಗೆ ಮಾತನಾಡುವುದಾದರೆ, ಮೂರನೇ ವ್ಯಕ್ತಿಯಿಂದ ಆ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವುದಕ್ಕೂ, ಅಲ್ಲಿದ್ದು ನಿಜವಾಗಿ ಬದುಕುವುದಕ್ಕೂ ಬಹಳ ವ್ಯತ್ಯಾಸವಿದೆʼʼ ಎಂದು ಅಭಿಪ್ರಾಯಪಟ್ಟರು.

ಇದೀಗ ನಟಿ ಈ ಬಗ್ಗೆ ಮಾತನಾಡಿದ್ದಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಇಂಥ ಸಾಮಾಜಿಕ ಚಿಂತನೆಯ ಮಾತುಗಳು ಪ್ರಮುಖ ನಟಿಯ ಬಾಯಿಯಿಂದ ಕೇಳಿದ್ದು ಆಶ್ಚರ್ಯವಾಯಿತು. ಅಂಬೇಡ್ಕರ್, ಗಾಂಧಿ ಮತ್ತು ಜಾತಿವಾದದ ಕುರಿತು ಜಾನ್ವಿ ಕಪೂರ್‌ ಹೇಳಿದ್ದು ಗಮನ ಸೆಳೆಯಿತು. ನಟಿ ಸ್ವರಾ ಭಾಸ್ಕರ್ ಅವರು ಆಗಾಗ ರಾಜಕೀಯ ವಿಷಯಗಳ ಬಗ್ಗೆ ಮಾತನಾಡುತ್ತಾರೆʼʼ ಎಂದು ಜನ ಕಮೆಂಟ್‌ ಮಾಡಿದ್ದಾರೆ. “ಈ ಮಟ್ಟದ ತಿಳಿವಳಿಕೆ ಮತ್ತು ಅಧ್ಯಯನವನ್ನು ನೋಡುವುದು ಬಹಳ ಅಪರೂಪ ಎಂದು ನಟಿಯನ್ನು ಹೊಗಳಿದ್ದಾರೆ.” ಮತ್ತೊಬ್ಬರು “ನಟಿ ಸ್ವರಾ ಭಾಸ್ಕರ್‌ ಕೂಡ ರಾಜಕೀಯ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಇದರಲ್ಲೇನು ವಿಶೇಷತೆ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ: Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

2018ರಲ್ಲಿ ಜಾನ್ವಿ ಕಪೂರ್ ಬಾಲಿವುಡ್ ಪ್ರವೇಶಿಸಿದರು. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. . ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ʼದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading
Advertisement
Hardik Pandya
ಕ್ರೀಡೆ2 mins ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ13 mins ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್14 mins ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ14 mins ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್16 mins ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ29 mins ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ42 mins ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ51 mins ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ52 mins ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Karnataka Rain
ಮಳೆ55 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ55 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌