Student death | ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು - Vistara News

ಕ್ರೈಂ

Student death | ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಕಟ್ಟಡದ ಮೇಲಿನಿಂದ ವಿದ್ಯಾರ್ಥಿಯೊಬ್ಬ ಬಿದ್ದು ಸಾವಿಗೀಡಾಗಿದ್ದಾನೆ. ಸಾವಿನ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

student death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಟ್ಟಡದ ಮೇಲಿನಿಂದ ವಿದ್ಯಾರ್ಥಿಯೊಬ್ಬ ಬಿದ್ದು ಸಾವಿಗೀಡಾಗಿದ್ದಾನೆ. ಸಾವಿನ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸುಬ್ರಮಣ್ಯನಗರದಲ್ಲಿ ಈ ಘಟನೆ ನಡೆದಿದ್ದು, ಪವನ್ (19) ಸಾವಿಗೀಡಾಗಿರುವ ವಿದ್ಯಾರ್ಥಿ. ಎಎಸ್‌ಸಿ ಕಾಲೇಜಿನಲ್ಲಿ ಫೈನಲ್ ಇಯರ್ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಪವನ್ ನಿನ್ನೆ ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದಿದ್ದ. ಬಳಿಕ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿ ಬಳಿ ಬಂದಿದ್ದಾನೆ. ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಯಾರೊಂದಿಗೆ ಬಂದಿದ್ದ, ಕಟ್ಟಡದ ಮೇಲೆ ಏಕೆ ಹೋಗಿದ್ದ ಅನ್ನುವು ನಿಗೂಢವಾಗಿದೆ. ಸದ್ಯ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿರುವ ಪೊಲೀಸರು, ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ಇತ್ಯಾದಿ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ | Child Death | ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವು; ವೈದ್ಯರು, ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕೋಡಿ

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

Self Harming: ಕೃಷ್ಣಾ ನದಿಗೆ (Krishna River) ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

VISTARANEWS.COM


on

By

Self Harming
Koo

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ (Assault Case) ನಡೆಸಿದ್ದಾರೆ. ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ ಬಡತನದ ಕಾರಣ ಆಶ್ರಮದಲ್ಲಿದ್ದ. ಸಹಪಾಠಿಗಳ ಜತೆ ಆಟವಾಡುತ್ತಾ ಪೆನ್ನು ಕದ್ದಿದ್ದ. ಶ್ರವಣಕುಮಾರ್ ವಿರುದ್ಧ ಸಹಪಾಠಿಗಳು ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬಾತ ಶ್ರವಣಗೆ ಮನಬಂದಂತೆ ಥಳಿಸಿದ್ದಾರೆ. ಚಿಕ್ಕ ಹುಡುಗ ಎಂಬುದನ್ನು ಪರಿಗಣಿಸಿದೇ ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರು ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಟ್ಟ ಬಾಲಕನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

ಯುವತಿಯ ಪರ್ಸ್‌ ಕಿತ್ತುಕೊಂಡು ಮಂಗಳಮುಖಿಯರಿಂದ ಕಿರುಕುಳ

ಮಂಗಳಮುಖಿಯರ ಕುಕೃತ್ಯವನ್ನು ಯುವತಿಯೊಬ್ಬಳು ಬಿಚ್ಚಿಟ್ಟಿದ್ದಾಳೆ. 10 ರೂಪಾಯಿ ನಿವಾಳಿಸಿ ಕೊಡುತ್ತಿನಿ ಎಂದು 700 ರೂಪಾಯಿ ಪಡೆದರಂತೆ. ಪರ್ಸ್ ಕಿತ್ತು ಅದರಲ್ಲಿದ್ದ ಹಣವನ್ನು ಬಲವಂತವಾಗಿ ಪಡೆದು ಕಿರುಕುಳ ನೀಡಿದ್ದರಂತೆ. 700 ಪಡೆದು ಹತ್ತು ರೂಪಾಯಿ ವಾಪಾಸ್ ಕೊಟ್ಟರಂತೆ. ಮೂರು ಮಂಗಳಮುಖಿಯರಿಂದ ಯುವತಿಗೆ ಬೆಂಗಳೂರಿನ ಮಾರತ್ ಹಳ್ಳಿ ಸಿಗ್ನಲ್ ಬಳಿ ಕಿರುಕುಳ ನೀಡಿದ್ದಾರೆ. ಅಷ್ಟು ಜನ ಇದ್ದರೂ ಏನೂ ಮಾಡೋದಕ್ಕೆ ಸಾಧ್ಯವಾಗಿಲ್ಲ ಎಂದು ವಿಡಿಯೋ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

Murder case : ಶಿವಮೊಗ್ಗದಲ್ಲಿ (Shivamogga News) ಮಹಿಳೆಯೊಬ್ಬರ ಕೊಲೆಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಹಂತಕರ ಬೆನ್ನಿಗೆ ಬಿದ್ದಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

murder case
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಒಂಟಿ ಮಹಿಳೆಯ (Murder Case) ಕೊಲೆಯಾಗಿದೆ. ಕತ್ತು ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಶುಕ್ರವಾರ ತಡರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ಮಹಿಳೆಯ ಕೊಲೆಯಾಗಿದೆ. ಸಾವಿತ್ರಮ್ಮ (65) ಕೊಲೆಯಾದವರು. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಕೊಲೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.

ಸದ್ಯ ಪೊಲೀಸರು ಈ ಕುರಿತು ತನಿಖೆಯನ್ನು ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಂತಕರ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

ಒಂಟಿ ಕೈ ರೌಡಿಯಿಂದ ಇನ್ನೊಬ್ಬ ರೌಡಿಯ ಕೊಚ್ಚಿ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ (Bangalore crime) ರೌಡಿ ಗ್ಯಾಂಗ್‌ಗಳ ಬೀದಿಜಗಳ, ಹಲ್ಲೆಗಳು ತಾರಕಕ್ಕೇರಿದ್ದು, ಹೆಣಗಳು ಬೀಳುತ್ತಿವೆ. ಒಂಟಿ ಕೈಯ ರೌಡಿಶೀಟರ್ (Rowdy Sheeter) ಒಬ್ಬನ ಗ್ಯಾಂಗ್ ಇನ್ನೊಬ್ಬ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder Case) ಮಾಡಿದೆ.

ಸಿದ್ಧಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಐಸಾಕ್ (30) ಮೃತಪಟ್ಟ ರೌಡಿಶೀಟರ್. ವೆಂಕಟೇಶ ಅಲಿಯಾಸ್ ಒಂಟಿ ಕೈ ವೆಂಕಟೇಶ ಎಂಬಾತನ ಗ್ಯಾಂಗ್‌, ಐಸಾಕ್‌ನನ್ನು ಸುತ್ತುಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಂದುಹಾಕಿದೆ.

ಡ್ರಗ್ಸ್ ಹಾವಳಿ ಹಾಗೂ ವಹಿವಾಟಿನ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಮೂಡಿದೆ. ಮೃತ ಐಸಾಕ್ ಹಲವು ಕಡೆ ಡ್ರಗ್ಸ್, ಗಾಂಜಾ ಮಾರಾಟ ಮಾಡುತ್ತಿದ್ದ. ಇದನ್ನು ಒಂಟಿ ಕೈ ವೆಂಕಟೇಶ ವಿರೋಧಿಸಿದ್ದ. ವೆಂಕಟೇಶನ ಸ್ನೇಹಿತರಿಗೂ ಕೂಡ ಐಸಾಕ್ ಗಾಂಜಾ ನೀಡಿ ಅಡಿಕ್ಟ್ ಆಗುವಂತೆ ಮಾಡಿದ್ದ. ಒಂದೇ ಏರಿಯಾ ಆದ ಕಾರಣ ಹುಡುಗರು ಗಾಂಜಾ ಚಟಕ್ಕೆ ಬಿದ್ದಿದ್ದರು.

ಈ ಹಿನ್ನೆಲೆಯಲ್ಲಿ ಐಸಾಕ್‌ಗೆ ಒಂಟಿ ಕೈ ವೆಂಕಟೇಶ್ ವಾರ್ನ್ ಮಾಡಿದ್ದ. ಆದರೂ ಐಸಾಕ್ ಗಾಂಜಾ ಮಾರಾಟ ನಿಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 3-30ರ ಸಂದರ್ಭದಲ್ಲಿ ಐಸಾಕ್‌ನನ್ನು ಕೊಲೆ ಮಾಡಲಾಗಿದೆ. ಸದ್ಯ ನಿಖರ ಕಾರಣ ಹಾಗು ಆರೋಪಿಗಳಿಗಾಗಿ ಸಿದ್ದಾಪುರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಒಂಟಿ ಕೈ ವೆಂಕಟೇಶ್ ಈ ಹಿಂದೆ ನಾಲ್ಕು ಕೊಲೆ ಕೇಸುಗಳಲ್ಲಿ ಭಾಗಿಯಾಗಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

Physical Abuse: 2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

VISTARANEWS.COM


on

Physical abuse
Koo

ನವದೆಹಲಿ: ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ(Physical Abuse) ಎಸಗಿದ್ದ ಕಿಡಿಗೇಡಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಈ ಮಹತ್ವ ತೀರ್ಪು ಹೊರಹಾಕಿದೆ.

2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದು, ಅಂಕಿತ್‌ಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಈ ಘಟನೆಯ ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಇನ್ನು ಅಂಕಿತ್ ಅಲಿಯಾಸ್ ಮೊಗ್ಲಿ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆಯೂ ಇಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. 85 ವರ್ಷದ ವೃದ್ಧೆಯ ಮೇಲೆ 35 ವರ್ಷದ ಕಿಡಿಗೇಡಿಯೊಬ್ಬ ಬರ್ಬರವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಮೃತಪಟ್ಟಿರುವ ಹೀನಕೃತ್ಯ ಉತ್ತರಪ್ರದೇಶದ ಬರೇಲಿಯ ಹಫೀಜ್‌ಗಂಜ್‌ನಲ್ಲಿ ನಡೆದಿದೆ. 85 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ(Physical Abuse)ಕ್ಕೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ನೆರೆಮನೆಯಲ್ಲಿ ವಾಸಿಸುವ ರಾಕೇಶ್ ಎಂದು ಗುರುತಿಸಲಾದ 35 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ. ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂತ್ರಸ್ತೆಯ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು ಎಂದು ಆರ್ಯ ಹೇಳಿದರು.

ಬಳಿಕ ಆಕೆ ಆತನಿಗೆ ಎಚ್ಚರಿಕೆ ನೀಡಿದಾಗ ಆರೋಪಿ ಪರಾರಿಯಾಗಿದ್ದು, ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಈ ಭೀಕರ ಕೃತ್ಯದ ಬಳಿಕ ವೃದ್ಧೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ. ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: Akshay Kumar: ನಾನು ಸತ್ತೇ ಹೋದೆ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ ಎಂದು ಗರಂ ಆದ ಅಕ್ಷಯ್‌ ಕುಮಾರ್‌!

Continue Reading

ಚಿತ್ರದುರ್ಗ

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

Road Accident: ಚಿತ್ರದರ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ಸ್ಥಳದಲ್ಲಿ ಗಂಟೆಗಳ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ.

VISTARANEWS.COM


on

By

road Accident
Koo

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ (Road Accident) ಗುದ್ದಿದೆ. ಗುದ್ದಿದ ರಭಸಕ್ಕೆ ಓರ್ವ ವಿಧ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗೇಟ್ ಬಳಿ ಅಪಘಾತ‌ ನಡೆದಿದೆ.

ತೋರಣಗಲ್ಲು ಮೂಲದ ಪಲ್ಲವಿ (18) ಮೃತ ದುರ್ದೈವಿ. ಚಾಲಕ ಸುರೇಶ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಕಾರೊಂದು ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿತ್ತು. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ರಾಂಪೂರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಾಖಲು ಮಾಡಲಾಗಿದೆ.

ರಸ್ತೆ ದಾಟುತ್ತಿದ್ದ ವಿಕಲಚೇತನನ ಪ್ರಾಣ ಕಸಿದ ಲಾರಿ

ಚಿತ್ರದುರ್ಗದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುವ ವ್ಯಕ್ತಿ ಮೇಲೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದವನ ಮೇಲೆ ಹರಿದಿದ್ದು, ಕ್ಷಣಾರ್ಧದಲ್ಲಿ ವ್ಯಕ್ತಿಯ ಪ್ರಾಣಪಕ್ಷಿ ಹಾರಿಹೋಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ಘಟನೆ ನಡೆದಿದೆ.

Road Accident
Road Accident

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲಿಕಾರ್ಜುನ್ (52) ಮೃತ ದುರ್ದೈವಿ. ತಿರುಮಲಾಪುರ ಗ್ರಾಮದ ನಿವಾಸಿಯಾದ ಮಲ್ಲಿಕಾರ್ಜುನ ವಿಕಲಚೇತನರಾಗಿದ್ದರು. ರಸ್ತೆ ದಾಟುವ ವೇಳೆ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ನಾಪತ್ತೆಯಾಗಿದ್ದ ಲಾರಿ ಚಾಲನನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್‌ಐ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ಒಂದು ಗಂಟೆ ಅಂತರದಲ್ಲಿ ಒಂದೇ ಕಡೆ ಎರಡು ಅಪಘಾತ!

ಒಂದೇ ಸ್ಥಳದಲ್ಲಿ ಒಂದೆರಡು ಗಂಟೆ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ವಿಂಡ್ಸರ್ ಮ್ಯಾನರ್ ಬ್ರಿಡ್ಜ್‌ ಎಡ್ಜ್‌ಗೆ ಒಂದೇ ಜಾಗದಲ್ಲಿ ಪ್ರತ್ಯೇಕವಾಗಿ ಎರಡು ಆಟೋಗಳು ಡಿಕ್ಕಿ ಹೊಡೆದಿವೆ.

ಶನಿವಾರ ಬೆಳಗ್ಗೆ 4 ಗಂಟೆಗೆ ಹಾಗೂ 6 ಗಂಟೆಯ ಸಂದರ್ಭದಲ್ಲಿ ಅಪಘಾತ ನಡೆದಿದೆ. ಒಂದೇ ಜಾಗದಲ್ಲಿ ಪ್ರತ್ಯೇಕ ಆಟೋಗಳ ಅಪಘಾತದಿಂದಾಗಿ ನಝೀರ್ ಎಂಬಾತನ ತಲೆಗೆ ಗಂಭೀರ ಗಾಯವಾಗಿದೆ. ಪ್ಯಾಸೆಂಜರ್ ಕರೆದೊಯ್ಯುವ ವೇಳೆ ಅಪಘಾತ ನಡೆದಿದೆ. ಪ್ಯಾಸೆಂಜರ್‌ಗೆ ತರಚಿದ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಮಾಲಿವುಡ್3 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ4 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್ ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ20 mins ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ20 mins ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ37 mins ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ38 mins ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ40 mins ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Ismail Haniyeh
ವಿದೇಶ59 mins ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ1 hour ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌