ಲೊಡ್ಡೆ ಸಿನಿಮಾ ಮಾಡಿ ಲಾಸ್‌ ಆದ ನಿರ್ಮಾಪಕ ವಂಚನೆ ಪ್ರಕರಣದಲ್ಲಿ ಅಂದರ್‌ - Vistara News

ಕ್ರೈಂ

ಲೊಡ್ಡೆ ಸಿನಿಮಾ ಮಾಡಿ ಲಾಸ್‌ ಆದ ನಿರ್ಮಾಪಕ ವಂಚನೆ ಪ್ರಕರಣದಲ್ಲಿ ಅಂದರ್‌

ಚಿತ್ರದ ನಿರ್ಮಾಣ ದಲ್ಲಿ ಹಣ ಹೂಡಿ ಕೈ ಸುಟ್ಟುಕೊಂಡ ವ್ಯಕ್ತಿಯೊಬ್ಬ ಈಗ ಅದನ್ನು ಮರಳಿ ಗಳಿಸುವುದಕ್ಕಾಗಿ ರಿಯಲ್‌ ಎಸ್ಟೇಟ್‌ ವಂಚನೆಗೆ ಇಳಿದು ಸಿಕ್ಕಿಬಿದ್ದಿದ್ದಾರೆ. ಲೊಡ್ಡೆ ಸಿನಿಮಾ ನಿರ್ಮಿಸಿದ ಮಂಜುನಾಥ್‌ ಅವರ ಈ ರೀತಿ ಮಾಡಿದವರು. ಅವರ ಜತೆ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿನಿಮಾ ನಿರ್ಮಾಣ ಮಾಡಿ ನಷ್ಟ ಅನುಭವಿಸಿದ ಸ್ಯಾಂಡಲ್‌ವುಡ್‌ ನಿರ್ಮಾಪಕನೊಬ್ಬ ಅಡ್ಡದಾರಿಯಲ್ಲಿ ಹಣ ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ. ಜತೆಗೆ ಅವನ ಮೂವರು ಸಹಚರರರು ಕೂಡಾ ಕಂಬಿ ಎಣಿಸುತ್ತಿದ್ದಾರೆ.

ಅಡ್ಡ ದಾರಿ ಹಿಡಿದ ನಿರ್ಮಾಪಕನ ಹೆಸರು ಮಂಜುನಾಥ್.‌ ಕಾಮಿಡಿ ಸ್ಟಾರ್‌ ಕೋಮಲ್‌ ಕುಮಾರ್‌ ಅಭಿನಯದ ಲೊಡ್ಡೆ ಸಿನಿಮಾವನ್ನು ನಿರ್ಮಿಸಿದ್ದ ಮಂಜುನಾಥ ಭಾರಿ ನಷ್ಟ ಅನುಭವಿಸಿದ್ದರು. ಚಿತ್ರ ಸಂಪೂರ್ಣವಾಗಿ ನೆಲ ಕಚ್ಚಿದ್ದರಿಂದ ಹಾಕಿದ ಕೋಟ್ಯಂತರ ರೂ. ನೀರಿನಲ್ಲಿಟ್ಟ ಹೋಮದಂತಾಗಿತ್ತು. ಹೀಗೆ ಕೈ ಸುಟ್ಟುಕೊಂಡ ಅವರು ಹಣವನ್ನು ಮರಳಿ ಪಡೆಯಲು ಆರಿಸಿಕೊಂಡಿದ್ದು ಮಾತ್ರ ವಂಚನೆಯ ದಾರಿಯನ್ನು.

ರಿಯಲ್‌ ಎಸ್ಟೇಟ್‌ ವ್ಯವಹಾರ

ನಷ್ಟ ಭರ್ತಿಗಾಗಿ ಅವರು ಆರಿಸಿಕೊಂಡಿದ್ದು ರಿಯಲ್‌ ಎಸ್ಟೇಟ್‌ ಕ್ಷೇತ್ರವನ್ನು. ಆದರೆ, ಅಲ್ಲಿ ಒಳ್ಳೆಯ ದಾರಿಯಲ್ಲಿ ಹೋಗಲಿಲ್ಲ. ಬದಲಾಗಿ ಅಡ್ಡ ದಾರಿ ಹಿಡಿದರು. ರಾಜಾಜಿನಗರದಲ್ಲಿ ಸೈಟ್, ನಿವೇಶನಗಳನ್ನು ಮಾರಾಟ ಮಾಡಿಸು ಕಂಪನಿ ಆರಂಭಿಸಿದರು. ಈಗಲ್ ಟ್ರೀ ಬಿಲ್ಡರ್ಸ್ ಹಾಗೂ ಡೆವಲಪರ್ಸ್ ಡಾಟ್ ಎಂಬ ಹೆಸರಲ್ಲಿ ಕಚೇರಿ ಶುರು ಮಾಡಿದರು. ಈ ಬಗ್ಗೆ ಹಲವು ಜಾಹಿರಾತು ನೀಡಲಾಗಿತ್ತು. ಜಾಹೀರಾತು ನೋಡಿ ಪುಷ್ಪಕುಮಾರ್ ಎಂಬ ವ್ಯಕ್ತಿ ನಿರ್ಮಾಪಕ ಮಂಜುನಾಥ್ ಅವರನ್ನು ಸಂಪರ್ಕಿಸಿದ್ದರು.

ಆಗ ಮಂಜುನಾಥ್‌ ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಪಷ್ಪಕುಮಾರ್‌ಗೆ ಭರವಸೆ ನೀಡಿದರು. ಅಲ್ಲದೆ, ಹಂತ ಹಂತವಾಗಿ 2 ಲಕ್ಷ ರೂ. ಹಣವನ್ನು ಪಡೆದರು. ಯಾರದ್ದೋ ಸೈಟ್ ತೋರಿಸಿ ಅದನ್ನು ಕೊಡಿಸುವುದಾಗಿ ಪುಷ್ಪಕುಮಾರ್‌ಗೆ ನಂಬಿಸಿದ್ದರು. ಆದರೆ ಪುಷ್ಪರಾಜ್‌ ದಾಖಲೆಗಳನ್ನು ತೋರಿಸಲು ಮಂಜುನಾಥ್‌ಗೆ ಕೇಳಿಕೊಂಡರು. ದಾಖಲೆಗಳು ಲಭ್ಯವಿಲ್ಲದಿದ್ದಾಗ ಮಂಜುನಾಥ್‌ ಅವರ ಬಂಡವಾಳ ಬಯಲಾಗಿದೆ.

ಈ ಬಗ್ಗೆ ಪುಷ್ಪಕುಮಾರ್ ಕೂಡಲೇ ರಾಜಾಜಿನಗರ ಠಾಣೆಗೆ ದೂರು ನೀಡಿದರು. ದೂರು ದಾಖಲಿಸಿಕೊಂಡು ‌ಕ್ರಮ ಕೈಗೊಂಡಿದ್ದಾರೆ. ನಿರ್ಮಾಪಕ ಮಂಜುನಾಥ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಧನ ಸಹಾಯದ ಮೆಸೆಜ್‌ ಕಳುಹಿಸಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

Road Accident: ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ. ವೇಗವಾಗಿ ಬಂದು ಬೈಕ್ ಸವಾರರ ಮೇಲೆ ಸ್ಯಾಂಟ್ರೋ ಕಾರು ಹರಿದಿದ್ದರಿಂದ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲ್ಹಾಪುರ ನಗರದ ಸೈಬರ್ ಚೌಕದಲ್ಲಿ ಘಟನೆ ನಡೆದಿದ್ದು, ಅತಿ ವೇಗವಾಗಿ ಬಂದ ಕಾರು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಮುಂದೆ ಹೋಗಿ ಕಾರು ಗೋಡೆಗೆ ಗುದ್ದಿದ್ದರಿಂದ ಚಾಲಕ ಮೃತಪಟ್ಟಿದ್ದಾನೆ. ಭಯಾನಕ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರು ಹಾರಿ ಹೋಗಿ ಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇನ್ನುಳಿದ ಮೂವರು ಗಾಯಾಗಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಬ್ರೆಕ್ ಫೇಲ್ ಆದ ಹಿನ್ನೆಲೆಯಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲ್ಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನ ಆರೋಪ ಹೊರಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ

ಮೈಸೂರು: ಕಳ್ಳತನ ಆರೋಪ ಹೊರಿಸಿದ್ದಾರೆ ಎಂದು ಮನನೊಂದು ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಡದ ತಪ್ಪಿಗೆ ನನ್ನ ಹೊಣೆ ಮಾಡಿದ್ದಾರೆ ಎಂದು ಆರೋಪಿಸಿ, ವಿಡಿಯೊ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಮಹದೇವ ನಗರದ ನಿವಾಸಿ ನಂಜೇಶ್ ಮೃತರು. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನಂಜೇಶ್, ಫ್ಯಾಕ್ಟರಿ ಆವರಣದಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಮಾಡದ ತಪ್ಪಿಗೆ ನನ್ನ ಹೊಣೆ ಮಾಡಿದ್ದಾರೆ. ಹೆಂಡತಿ, ಮಕ್ಕಳಿಗೆ ಕ್ಷಮೆಯಾಚಿಸುವೆ. ಗೋವಿಂದ, ರಾಜು ಹಾಗೂ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಸಾವಿಗೂ ಮುನ್ನ ವಿಡಿಯೊದಲ್ಲಿ ಆರೋಪಿಸಿದ್ದಾರೆ.

Continue Reading

ಕರ್ನಾಟಕ

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Rave Party: ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣದಲ್ಲಿ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಮಾದಕ ವಸ್ತು ಸೇವನೆ ಆರೋಪದಲ್ಲಿ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.

ನಾನೇನು ತಪ್ಪು ಮಾಡಿಲ್ಲ ಎಂದ ನಟಿ

ಕೋರ್ಟ್‌ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್‌ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್‌ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್‌ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

ಎಂಡಿಎಂಎ ಸೇವಿಸಿದ್ದ ನಟಿ

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

Continue Reading

ವೈರಲ್ ನ್ಯೂಸ್

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Viral News: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕೈಗೆ ಸಿಕ್ಕಿದ್ದನ್ನೆಲ್ಲಾ ದರೋಡೆ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ ಆರಾಮ ಮತ್ತು ತಂಪಾಗಿಸುವ ಎಸಿ ಗಾಳಿಯ ಅಡಿಯಲ್ಲಿ ನಿದ್ದೆಗೆ ಜಾರಿದ್ದು, ಪೊಲೀಸರು ಬಂದ ಬಳಿಕವೇ ಆತನಿಗೆ ಎಚ್ಚರವಾಯಿತು!

VISTARANEWS.COM


on

By

Viral News
Koo

ಲಕ್ನೋ: ಸರ್ಕಾರಿ ನೌಕರನೊಬ್ಬನ (government employee) ಮನೆಗೆ (house) ದರೋಡೆ ಮಾಡಲು ಬಂದ ಕಳ್ಳನೊಬ್ಬ (burglars) ಕೂಲಿಂಗ್ ಎಸಿ ಪ್ರಭಾವದಿಂದ ನಿದ್ದೆಗೆ ಜಾರಿದ ಘಟನೆ ಲಕ್ನೋದಲ್ಲಿ (Lucknow) ನಡೆದಿದ್ದು, ಪೊಲೀಸರು ಬಂದ ಬಳಿಕವೇ ಆತನಿಗೆ ಎಚ್ಚರವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral News) ಆಗಿದೆ.

ಕಳ್ಳತನದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮನೆಗೆ ಬಂದಾಗ ಬಹಳಷ್ಟು ವಸ್ತುಗಳನ್ನು ಕಳ್ಳರು ಕದ್ದೊಯ್ದಿರುವುದು ತಿಳಿದು ಬಂದಿದೆ. ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾಗ ಆರಾಮವಾಗಿ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಂಡು ಅವರು ಬೆಚ್ಚಿಬಿದ್ದರು. ಕಳ್ಳ ಎಚ್ಚರಗೊಂಡಾಗ ಅವನ ಮುಂದೆ ಪೊಲೀಸರು ಕುಳಿತಿರುವುದನ್ನು ಕಂಡು ಅವನೂ ಗಾಬರಿಗೊಂಡಿದ್ದಾನೆ. ಬಳಿಕ ಪೊಲೀಸರಿಗೆ ಸಂಪೂರ್ಣ ಕಥೆಯನ್ನು ವಿವರಿಸಿದ್ದಾನೆ. ಬಳಿಕ ಪೊಲೀಸರು ಆತನನ್ನು ಬಂಧಿಸಿದರು.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆ ಇದಾಗಿದೆ. ಕೈಗೆ ಸಿಕ್ಕಿದ್ದನ್ನೆಲ್ಲಾ ದರೋಡೆ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ ಆರಾಮ ಮತ್ತು ತಂಪಾಗಿಸುವ ಎಸಿ ಗಾಳಿಯ ಅಡಿಯಲ್ಲಿ ನಿದ್ದೆಗೆ ಜಾರಿದನು. ಇತರ ದರೋಡೆಕೋರರ ಜೊತೆಯಲ್ಲಿ ಮನೆಗೆ ಪ್ರವೇಶಿಸಿದ ಈತ ಗಾಢವಾದ ನಿದ್ರೆಯಿಂದ ಎಚ್ಚರವಾಗಲೇ ಇಲ್ಲ. ಹೀಗಾಗಿ ಇತರರು ಆತನನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ.

ವಾರಣಾಸಿಯಲ್ಲಿ ನಿಯೋಜನೆಗೊಂಡಿರುವ ಸರ್ಕಾರಿ ನೌಕರನಿಗೆ ಸೇರಿದ ಇಂದಿರಾನಗರದ ಸೆಕ್ಟರ್ 20ರ ಮನೆಗೆ ಕಳ್ಳರ ತಂಡ ನುಗ್ಗಿದೆ. ಕಳ್ಳರು ಈ ಮನೆಯಿಂದ ಕೈಗೆ ಸಿಕ್ಕಿದ್ದನ್ನೆಲ್ಲ ಎತ್ತಿಕೊಂಡು ಹೋಗಿದ್ದಾರೆ. ರೂಮಿನಲ್ಲಿದ್ದ ಎಸಿಯ ಕೆಳಗೆ ಕಳ್ಳ ಮಲಗಿ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾನೆ. ಆದರೆ ಯಾವುದೋ ನಶೆಯಲ್ಲಿದ್ದ ಈತ ಇನ್ವರ್ಟರ್ ಎತ್ತಲು ಹೋಗಿದ್ದಾನೆ. ಆದರೆ ಅದಕ್ಕೂ ಮೊದಲು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ನಿರ್ಧರಿಸಿದ. ಕೋಣೆಯಲ್ಲಿದ್ದ ಎಸಿ ಸ್ವಿಚ್ ಆನ್ ಮಾಡಿ ಅಲ್ಲೇ ಗಟ್ಟಿಯಾಗಿ ನಿದ್ದೆಗೆ ಜಾರಿದ್ದಾನೆ.


ಇತರ ಕಳ್ಳರು ಆತನನ್ನು ಎಬ್ಬಿಸಲು ಪ್ರಯತ್ನಿಸಿದರೂ ಆತ ಎದ್ದೇಳಲಿಲ್ಲ. ಬೆಳಗ್ಗೆ ಮನೆಯ ಗೇಟ್ ತೆರೆದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರಾಮವಾಗಿ ಮಲಗಿರುವ ಕಳ್ಳನನ್ನು ನೋಡಿದ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Rupert Murdoch: ಮಾಧ್ಯಮ ಲೋಕದ ದೊರೆಗೆ ಐದನೇ ಮದುವೆ; 93ನೇ ವಯಸ್ಸಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರೂಪರ್ಟ್ ಮುರ್ಡೋಕ್

ಪೊಲೀಸರು ಮನೆಗೆ ಬಂದ ಬಳಿಕ ಕಳ್ಳರು ಬಹಳಷ್ಟು ವಸ್ತುಗಳನ್ನು ಕದ್ದೊಯ್ದಿರುವುದು ತಿಳಿದುಬಂದಿದೆ.
ಕಳ್ಳ ಎಚ್ಚರಗೊಂಡಾಗ ಅವನ ಮುಂದೆ ಪೊಲೀಸರು ಕುಳಿತಿರುವುದನ್ನು ಕಂಡು ಆತ ಗಾಬರಿಯಾಗಿದ್ದಾನೆ. ಬಳಿಕ ಆತ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ವಿವರಿಸಿದ್ದು, ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು ಇತರ ಕಳ್ಳರನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಇತರ ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Bangalore Rain: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು. ಮಳೆ ಹಾನಿ ನಿರ್ವಹಣೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

VISTARANEWS.COM


on

Bangalore Rain
Koo

ಬೆಂಗಳೂರು: ರಾಜಧಾನಿಯಲ್ಲಿ ಮಳೆ ಅವಾಂತರ (Bangalore Rain) ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಒಗ್ಗೂಡಿ ಮಳೆ ಹಾನಿ ನಿರ್ವಹಣೆ ಮಾಡಬೇಕು. ರಾಜಕಾಲುವೆ ಸರ್ಕಾರದ ಜಾಗ, ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು ಮಾಡಿ ಎಂದು ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಬೆಂಗಳೂರಿನಲ್ಲಿ 133 ವರ್ಷದ ನಂತರ ಭಾರಿ ಮಳೆಯಾಗಿದೆ. 261 ವಿದ್ಯುತ್ ಕಂಬಗಳು ಉರುಳಿದ್ದು, ಮೂವರಿಗೆ ಗಾಯಗಳಾಗಿವೆ. ನೆಲಕ್ಕುರುಳಿದ 96 ಮರಗಳನ್ನು ತೆರವು ಮಾಡಿದ್ದು, ನಾನೇ ಖುದ್ದು ಪರಿಶೀಲನೆ ಮಾಡಿದ್ದೇನೆ. ಮಳೆ ಹಾನಿ ಬಗ್ಗೆ 695 ದೂರುಗಳು ಬಂದಿವೆ. ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಎಲ್ಲರೂ ಒಟ್ಟಾಗಿ ಮಳೆ ಹಾನಿ ನಿರ್ವಹಣೆ ಮಾಡಬೇಕು ಎಂದು ಸೂಚಿಸಲಾಗಿದೆ. ರಾಜಕಾಲುವೆ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು ಮಾಡಲು ಅಧಿಕಾರಿಗಳಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.

ಹಳೆಯ ಕಟ್ಟಡಗಳು ಬೀಳದಂತೆ ನೋಡಿಕೊಳ್ಳಬೇಕು. ಶಿಥಿಲಾವಸ್ಥೆ ಇರುವ ಕಟ್ಟಡಗಳನ್ನು ತೆರವು ಮಾಡಬೇಕು. ಒಣಗಿರುವ ಮರಗಳನ್ನು ಸಹ ಗುರುತಿಸಿ ತೆಗೆದು ಹಾಕಬೇಕು. ಪ್ರತಿ ವಾರ್ಟ್‌ನಲ್ಲಿ ಮೋಟಾರ್ ಪಂಪ್‌ ಇಟ್ಟುಕೊಂಡು ನೀರು ತೆರವು ಮಾಡಬೇಕು. ಇದಕ್ಕೆ ದೊಡ್ಡ ಟೀಂ ಮಾಡಿ ಅಂತ ಹೇಳಿದ್ದೇನೆ. ವಿಶೇಷವಾಗಿ ಮಹದೇವಪುರ ವ್ಯಾಪ್ತಿಯಲ್ಲಿ ಸಮಸ್ಯೆ ಇದೆ. ಎನ್‌ಡಿಆರ್‌ಎಫ್‌ ಟೀಂ ಜತೆ ಟಚ್‌ನಲ್ಲಿ ಇರಬೇಕು. ಇನ್ನು ಮುಂದಿನ 24 ಗಂಟೆಗಳಲ್ಲಿ ದೊಡ್ಡ ಮಟ್ಟದ ಮಳೆ ಆಗುವ ಸಂಭವ ಇದೆ ಹೀಗಾಗಿ ಎಲ್ಲರೂ 24/7 ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಆಸ್ತಿ ಪಾಸ್ತಿ ಹಾನಿ, ಪ್ರಾಣಾಪಾಯ ಆಗಬಾರದು. ಮೆಟ್ರೋ ಹಳಿ ಮೇಲೆ ಮರ ಬಿದ್ದು ಹೋಗಿತ್ತು, ಈಗ ಸರಿಯಾಗಿದೆ. ಹೀಗಾಗಿ 1533 ಸಂಖ್ಯೆಗೆ ಕರೆ ಮಾಡಿ ಜನರು ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಿಳಿಸಿದರು.

ಇದನ್ನೂ ಓದಿ | Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

‌ಬಿಬಿಎಂಪಿ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಪೊರೇಟರ್ ಏನು ಕೆಲಸ ಮಾಡುತ್ತಾರೆ. ಜನ ಸೇವೆ ಅಂದಾಗ ಎಲ್ಲರೂ ಕೆಲಸ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೂ ಜನಪ್ರತಿನಿಧಿ ಬೇಕು. ಪಾರ್ಲಿಮೆಂಟ್ ಚುನಾವಣೆ ಮುಗಿಯಲಿ, ಎಲ್ಲ ರೆಡಿ‌ ಮಾಡೋಣ, ಚುನಾವಣೆಗೆ ಶುಭ ಮುಹೂರ್ತ ಫಿಕ್ಸ್ ಮಾಡೋಣ ಎಂದು ಹೇಳಿದರು.

ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ನೆನ್ನೆಯ ಮಳೆ!

Bangalore Rain

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯು (Bangalore Rain) ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹೀಗಾಗಿ ಬೆಸ್ಕಾಂ ಹೆಲ್ಪ್ ಲೈನ್‌ 1912ಗೆ ದೂರುಗಳ ಸುರಿಮಳೆಯೇ ಬಂದಿದ್ದು, ವಿದ್ಯುತ್‌ ಕಂಬಗಳು ಉರುಳಿರುವುದು, ಮರಗಳು ಬಿದ್ದಿರುವುದು, ವಿದ್ಯುತ್‌ ಕಡಿತ ಸೇರಿ ಹಲವು ಸಮಸ್ಯೆಗಳ ಬಗ್ಗೆ ಬರೋಬ್ಬರಿ 8745 ದೂರುಗಳು ದಾಖಲಾಗಿವೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಭಾನುವಾರ (ಜೂ.2) ಸುರಿದ ಮಳೆಯು (Heavy Rain) 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿರುವುದು ಕಂಡುಬಂದಿದೆ.

ಧಾರಕಾರ ಮಳೆ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ದೂರುಗಳು ಬಂದಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್‌ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಭಾರಿ ಮಳೆಗೆ ಬೆಸ್ಕಾಂ ತತ್ತರಿಸಿದ್ದು, ತಡರಾತ್ರಿ ಸುರಿದ ಮಳೆಯಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 111.2 ಮಿ.ಮೀ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಯು 133 ವರ್ಷಗಳ ದಾಖಲೆಯನ್ನು ಮುರಿದಿದೆ. ರಾಜಧಾನಿಯಲ್ಲಿ ಮೇ 2ರಂದು 111.2 ಮಿ.ಮೀ ಮಳೆ ಸುರಿದಿದ್ದು, ಜೂನ್ ತಿಂಗಳಲ್ಲಿ ಆದ ದಾಖಲೆಯ ಮಳೆ ಇದಾಗಿದೆ. 1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. ಆದರೆ, ನೆನ್ನೆ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ ಮುರಿದಿದೆ ಎಂದು ವಿಸ್ತಾರನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. 2013 ಜೂನ್ 1 ರಂದು 100 ಮಿ.ಮೀ ಮಳೆ ಹಾಗೂ 2009 ಜೂನ್ 11 ರಂದು 89.6 ಮಿ.ಮೀ ಮಳೆಯಾಗಿತ್ತು.

Continue Reading
Advertisement
karnataka weather Forecast
ಮಳೆ4 mins ago

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Home Remedies For Mosquito Bite
ಆರೋಗ್ಯ34 mins ago

Home Remedies For Mosquito Bite: ಸೊಳ್ಳೆ ಕಚ್ಚಿದ ಜಾಗದಲ್ಲಿ ವಿಪರೀತ ಉರಿಯೇ? ಈ ಸರಳ ಮನೆಮದ್ದುಗಳನ್ನು ಬಳಸಿ

Lok Sabha Election Result
ದೇಶ2 hours ago

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು?

Dina Bhavishya
ಭವಿಷ್ಯ2 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Mallikarjun Kharge
Lok Sabha Election 20247 hours ago

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

SA vs SL
ಕ್ರೀಡೆ7 hours ago

SA vs SL: ಲಂಕಾ ದಹನ ಮಾಡಿದ ನೋರ್ಜೆ; ಹರಿಣ ಪಡೆಗೆ 6 ವಿಕೆಟ್​ ಜಯ

Arecanut Price
ಕೃಷಿ7 hours ago

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

First PU Class Commencement Programme at Vishwadarshana College
ಉತ್ತರ ಕನ್ನಡ8 hours ago

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Job News
ಉದ್ಯೋಗ8 hours ago

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Road Accident
ಕರ್ನಾಟಕ9 hours ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ15 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌