World Environment Day | ಇಂದು ವಿಶ್ವ ಪರಿಸರ ದಿನ: ಪ್ರಕೃತಿ ಸಂರಕ್ಷಣೆಗಾಗಿ ಈ ಅಭ್ಯಾಸ ಅನುಸರಿಸಿ

ಪ್ರಮುಖ ಸುದ್ದಿ

World Environment Day | ಇಂದು ವಿಶ್ವ ಪರಿಸರ ದಿನ: ಪ್ರಕೃತಿ ಸಂರಕ್ಷಣೆಗಾಗಿ ಈ ಅಭ್ಯಾಸ ಅನುಸರಿಸಿ

ಬೈಸಿಕಲ್, ಸಾರ್ವಜನಿಕ ಸಾರಿಗೆ ಬಳಸುವುದರಿಂದ ಹಿಡಿದು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವವರೆಗೆ‌ ಪರಿಸರ ರಕ್ಷಣೆಗೆ ನಾವು ಹಲವು ಕೊಡುಗೆ ನೀಡಬಹುದು.

VISTARANEWS.COM


on

World Environment Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾವು ತಿನ್ನುವ ಆಹಾರ, ಕುಡಿಯುವ ನೀರಿನಿಂದ ಹಿಡಿದು ನಾವು ಉಸಿರಾಡುವ ಗಾಳಿಯವರೆಗೆ ಎಲ್ಲಾ ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಪ್ರಕೃತಿ ಯಾವಾಗಲೂ ನಮಗೆ ಉದಾರ ಕೊಡುಗೆಗಳನ್ನು ನೀಡುತ್ತಿದೆ. ನಮ್ಮ ಬದುಕಿಗೆ ಪ್ರಕೃತಿಯೇ ಆಧಾರ.

ಹಾಗಿದ್ದರೂ, ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ದುಷ್ಪರಿಣಾಮಗಳು ನಮಗೆ ಎಚ್ಚರಿಕೆಯ ಕರೆಗಂಟೆ ಬಾರಿಸುತ್ತಿವೆ. ತಡವಾಗುವ ಮೊದಲು ಎಚ್ಚೆತ್ತುಕೊಂಡು ಪರಿಸರ ರಕ್ಷಣೆಗಾಗಿ ನಾವು ಏನನ್ನಾದರೂ ಮಾಡಲೇಬೇಕಿದೆ. ಮಾನವನ ಚಟುವಟಿಕೆಗಳು ಯಾವ ರೀತಿ ಪರಿಸರದ ವಿನಾಶವನ್ನು ಉಂಟುಮಾಡುತ್ತಿವೆ ಎಂಬುದನ್ನು ಹಲವಾರು ಅಧ್ಯಯನಗಳು ಮತ್ತು ಸಂಶೋಧನಾ ವರದಿಗಳು ಬಹಿರಂಗಪಡಿಸುತ್ತವೆ. ಸುಸ್ಥಿರತೆ ಮತ್ತು ಪರಿಸರ ಸ್ನೇಹಿ ಜೀವನಕ್ಕಾಗಿ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವುದು ಎಲ್ಲಾ ವ್ಯಕ್ತಿಗಳಿಗೆ ಮುಖ್ಯ. ಸುಸ್ಥಿರ ಅಭಿವೃದ್ಧಿಗಾಗಿ ಹಲವು ವರ್ಷಗಳ ವರೆಗೆ ವಿಸ್ತರಿಸುವ ಭಾರೀ ಯೋಜನೆಗಳು ಅಥವಾ ವ್ಯಾಪಕವಾದ ಯೋಜನೆಗಳ ಅಗತ್ಯವಿಲ್ಲ. ವ್ಯಕ್ತಿಯ ದೈನಂದಿನ ಜೀವನದಲ್ಲಿ ಅನುಸರಿಸುವ ಸರಳ ಕ್ರಮಗಳೇ ಪರಿಸರದ ಸಂರಕ್ಷಣೆಯಲ್ಲಿ ಅದ್ಭುತಗಳನ್ನು ಸೃಷ್ಟಿಸಬಹುದು.

ಜೀವನಶೈಲಿ ಬದಲಿಸಿಕೊಳ್ಳೋಣ…

ಪರಿಸರ ಸ್ನೇಹಿ ಜೀವನಕ್ಕಾಗಿ ನಾವೆಲ್ಲರೂ ಕೆಲವು ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಮತ್ತು ಪ್ರತಿದಿನ ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಇಂಗಾಲದ ಹೊರ ಸೂಸುವಿಕೆಯನ್ನು ಕಡಿಮೆ ಮಾಡಲು ನಾವು ಪ್ರತಿದಿನ ಅಭ್ಯಾಸ ಮಾಡಬಹುದಾದ ಕೆಲವು ಸಂಗತಿಗಳು ಇಲ್ಲಿವೆ:

1. ನಡೆಯುವ ಅಭ್ಯಾಸ ಇರಲಿ…
ದೈನಂದಿನ ಓಡಾಟಕ್ಕಾಗಿ ನಿಮ್ಮ ವಾಹನವನ್ನು ಬಳಸುವ ಬದಲು ನಡೆದುಕೊಂಡು ಹೋಗುವುದನ್ನು ಅಭ್ಯಾಸ ಮಾಡಿ ಅಥವಾ ಬೈಸಿಕಲ್ ಸವಾರಿ ಮಾಡಲು ಪ್ರಾರಂಭಿಸಿ ಅಥವಾ ಸಾರ್ವಜನಿಕ ಸಾರಿಗೆಯನ್ನು ಬಳಸಿಕೊಳ್ಳಿ. ಕೆಲಸಕ್ಕೆ ಅಥವಾ ಮಾರುಕಟ್ಟೆಗೆ ಹೋಗಲು ಸ್ವಂತ ವಾಹನಗಳ ಬಳಕೆಗೆ ಹೋಲಿಸಿದರೆ ಇದು ಹೆಚ್ಚು ಪರಿಸರ ಸ್ನೇಹಿಯಾಗಿದೆ.

2. ರಸ್ತೆಯಲ್ಲಿ ಉಗುಳಬೇಡಿ
ರಸ್ತೆಗಳಲ್ಲಿ ಕಸ ಹಾಕುವುದನ್ನು ಅಥವಾ ಉಗುಳುವುದನ್ನು ತಪ್ಪಿಸಿ. ಸ್ಥಳೀಯ ಸಂಸ್ಥೆಗಳು ನೀಡಿರುವ ಕಸ ವಿಲೇವಾರಿ ಮಾರ್ಗಸೂಚಿಗಳನ್ನು ಅನುಸರಿಸಿ ಮತ್ತು ಸಾಧ್ಯವಾದಾಗಲೆಲ್ಲಾ ನಿಮ್ಮ ಪ್ರದೇಶವನ್ನು ಸ್ವಚ್ಛವಾಗಿಡಲು ಸಮುದಾಯ ಅಭಿಯಾನಗಳಲ್ಲಿ ಭಾಗವಹಿಸಿ.

3. ಪ್ಲಾಸ್ಟಿಕ್ ಬಳಕೆ ತಪ್ಪಿಸಿ…
ಪ್ಲಾಸ್ಟಿಕ್ ಬಾಟಲಿಗಳು ಅಥವಾ ಪ್ಲಾಸ್ಟಿಕ್‌ನಿಂದ ಮಾಡಿದ ಯಾವುದನ್ನಾದರೂ ಬಳಸುವುದನ್ನು ತಪ್ಪಿಸಿ. ಪ್ಲಾಸ್ಟಿಕ್ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾದರೆ ಪೂರೈಕೆಯೂ ಆಗುತ್ತದೆ.

4.ಲೈಟ್ ಆಫ್ ಮಾಡಲು ಮರೆಯಬೇಡಿ…
ಕೊಠಡಿಯಿಂದ ಹೊರಡುವ ಮೊದಲು ದೀಪಗಳು, ಫ್ಯಾನ್‌ಗಳನ್ನು ಆಫ್ ಮಾಡಿ ಮತ್ತು ಇಂಧನ ಉಳಿಸಿ. ಚಳಿಗಾಲದಲ್ಲಿ ಹೀಟರ್ ಬಳಸುವುದನ್ನು ತಪ್ಪಿಸಿ. ಅದರ ಬದಲಿಗೆ ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ಅಲ್ಲದೆ, ಬೇಸಿಗೆಯಲ್ಲಿ ಹವಾ ನಿಯಂತ್ರಣಗಳನ್ನು ಅತಿಯಾಗಿ ಬಳಸದೆ ಮಿತವಾಗಿ ಬಳಸಿ.

5. ಮರುಬಳಕೆ ರೂಢಿಸಿಕೊಳ್ಳಿ…
ಸಾಧ್ಯವಾದಾಗಲೆಲ್ಲಾ ನಿಮ್ಮ ಉತ್ಪನ್ನಗಳನ್ನು ಮರುಬಳಕೆ ಮಾಡಿ ಮತ್ತು ಮರು ಸಂಸ್ಕರಣೆ ಮಾಡಿ. ಜ್ಯೂಸ್ ಬಾಟಲಿಗಳನ್ನು ಎಸೆಯುವ ಬದಲು, ಅವುಗಳನ್ನು ಮನೆಯಲ್ಲಿ ಶೇಖರಣಾ ಪಾತ್ರೆಗಳಾಗಿ ಬಳಸಿ. ನೀವು ಶಾಪಿಂಗ್‌ಗೆ ಹೋಗುವಾಗ ಪ್ರತಿ ಬಾರಿಯೂ ಪೇಪರ್ ಬ್ಯಾಗ್‌ಗಳು ಅಥವಾ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಖರೀದಿಸುವುದಕ್ಕಿಂತ ನಿಮ್ಮ ಸ್ವಂತ ಶಾಪಿಂಗ್ ಬ್ಯಾಗ್ ತೆಗೆದುಕೊಂಡು ಹೋಗಲು ಆರಂಭಿಸಿ.

6. ನಲ್ಲಿ ನಿರ್ಲಕ್ಷ್ಯ ಬೇಡ
ಬಳಕೆಯಲ್ಲಿಲ್ಲದ ಸಮಯದಲ್ಲಿ ನೀರಿನ ನಲ್ಲಿಗಳನ್ನು ತಿರುಗಿಸಿಟ್ಟು ನೀರನ್ನು ಪೋಲು ಮಾಡದೆ, ನಲ್ಲಿಗಳನ್ನು ಬಂದ್ ಮಾಡಿ. ಶವರ್‌ಗಳನ್ನು ಬಳಸುವುದಕ್ಕಿಂತ ಹೆಚ್ಚಾಗಿ ಬಕೆಟ್ ನಲ್ಲಿ ನೀರು ತುಂಬಿಕೊಂಡು ಸ್ನಾನ ಮಾಡಿ.

7. ಗಿಡ ನೆಡಿ, ಮರ ಬೆಳೆಸಿ…
ಹೆಚ್ಚು ಮರಗಳನ್ನು ನೆಡಿ, ಪರಿಸರ ಮತ್ತು ಅದರ ಸಂರಕ್ಷಣೆಗೆ ಸ್ವತಃ ನೀವು ಮುಂದಾಗಿ; ನಂತರ ಇತರರಿಗೂ ಈ ವಿಷಯಗಳನ್ನು ಮನದಟ್ಟು ಮಾಡಿಸಿ.

ಇದನ್ನೂ ಓದಿ: Environment Day: ನಿಮ್ಮದಾಗಲಿ ಇಕೋ ಫ್ರೆಂಡ್ಲಿ ವಾರ್ಡ್ ರೋಬ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Covaxin: ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ ಎಂಬುದಾಗಿ ಭಾರತ್‌ ಬಯೋಟೆಕ್‌ ಪ್ರಕಟಣೆ ಹೊರಡಿಸಿದೆ. ಕೋವಿಶೀಲ್ಡ್‌ ಅಡ್ಡಪರಿಣಾಮಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಭಾರತ್‌ ಬಯೋಟೆಕ್‌ ಕಂಪನಿಯು ಸ್ಪಷ್ಟನೆ ನೀಡಿದೆ.

VISTARANEWS.COM


on

Covaxin
Koo

ನವದೆಹಲಿ: ಬ್ರಿಟನ್‌ನಲ್ಲಿ (UK) ಅಸ್ಟ್ರಾಜೆನಿಕಾ ಕಂಪನಿಯ ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆಯೇ ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಕುರಿತು ಅಧ್ಯಯನ ನಡೆಯಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೊವ್ಯಾಕ್ಸಿನ್‌ (Covaxin) ಅತ್ಯಂತ ಸುರಕ್ಷಿತವಾಗಿ ತಯಾರಿಸಲಾದ ಲಸಿಕೆಯಾಗಿದೆ ಎಂಬುದಾಗಿ ಭಾರತದ ಲಸಿಕಾ ತಯಾರಿಕಾ ಕಂಪನಿಯಾದ ಭಾರತ್‌ ಬಯೋಟೆಕ್‌ (Bharat Biotech) ಪ್ರಕಟಣೆ ತಿಳಿಸಿದೆ.

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿಯು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ.

“ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು, ರಕ್ತ ಹೆಪ್ಪುಗಟ್ಟುವುದು, ಥ್ರಂಬೊಸಿಟೋಪೇನಿಯಾ, ಪೆರಿಕಾರ್ಡಿಟಿಸ್‌ ಹಾಗೂ ಮೈಯೋಕಾರ್ಡಿಟಿಸ್‌ ಸೇರಿ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಹಾಗಾಗಿ, ಕೊವ್ಯಾಕ್ಸಿನ್‌ ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ” ಎಂದು ಮಾಹಿತಿ ನೀಡಿದೆ.

ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಕೋಟ್ಯಂತರ ಮಂದಿ ಪಡೆದಿದ್ದಾರೆ. ಈಗ ಅಮೆರಿಕದಲ್ಲಿ ಅಡ್ಡಪರಿಣಾಮದ ಕುರಿತು ಕಂಪನಿಯೇ ಒಪ್ಪಿಕೊಂಡಿರುವುದರಿಂದ ಭಾರತದಲ್ಲೂ ಈ ಕುರಿತು ಅಧ್ಯಯನ ನಡೆಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಕ್ರೈಂ

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Prajwal Revanna Case: ಈಗ ಎಸ್ಐಟಿ ಮುಂದೆ ಹಾಜರಾಗಿರುವ ಮತ್ತೊಬ್ಬ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆ ಸಂಬಂಧ ಸಿಐಡಿಯಲ್ಲಿಯೇ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಖಾತ್ರಿಪಡಿಸಿದ್ದಾರೆ. ಸಂಜೆ ಮ್ಯಾಜಿಸ್ಟ್ರೇಟರ್ ಮುಂದೆ ಮತ್ತೊಬ್ಬ ಸಂತ್ರಸ್ತೆಯನ್ನು ಹಾಜರುಪಡಿಸಿ 164 ಅಡಿಯಲ್ಲಿ‌ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ. ಈ ಸಂಬಂಧ ಮತ್ತೊಂದು ದೂರನ್ನು ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆಯು ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ನೀಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನೀಡಿದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

VISTARANEWS.COM


on

Prajwal Revanna Case Another victim gives statement before judge Will Revanna get anticipatory bail
Koo

ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ (Prajwal Revanna Case) ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕಾಗಿದೆ. ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಬಾರದ ಪ್ರಜ್ವಲ್ ಪತ್ತೆಗೆ ಲುಕ್ ಔಟ್ ನೋಟಿಸ್ ಅನ್ನು ಎಸ್‌ಐಟಿ ಅಧಿಕಾರಿಗಳು ಈಗಾಗಲೇ ಜಾರಿ ಮಾಡಿದ್ದಾರೆ.‌ ಅದರ ಬೆನ್ನಲ್ಲೇ ಈಗ ಮತ್ತೊಬ್ಬ ಸಂತ್ರಸ್ತೆ ದೂರು ನೀಡಿದ್ದಾರೆ. ಇದರಿಂದ ಈ ಪ್ರಕರಣವು ಪ್ರಜ್ವಲ್‌ಗೆ ಮತ್ತಷ್ಟು ಕಂಟಕವಾಗಿ ಪರಿಣಮಿಸಿದೆ. ಇತ್ತ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಂತೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ನೋಟಿಸ್‌ ನೀಡಿತ್ತು. ಆದರೆ, ಇಬ್ಬರೂ ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಎಚ್‌.ಡಿ. ರೇವಣ್ಣ ಬೆಂಗಳೂರಿನಲ್ಲಿದ್ದರೂ ಎಸ್‌ಐಟಿಯತ್ತ ಸುಳಿಯುತ್ತಿಲ್ಲ. ಇನ್ನು ಪ್ರಜ್ವಲ್‌ ಸಹ ತಾವು ಬೆಂಗಳೂರಿನಲ್ಲಿ ಇಲ್ಲ. ವಿದೇಶದಲ್ಲಿರುವುದರಿಂದ ಬರಲು ಸಮಯಾವಕಾಶ ಬೇಕು. ಹೀಗಾಗಿ ಏಳು ದಿನ ಅವಕಾಶ ಕೊಡಿ ಎಂದು ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ್ದರು. ಆದರೆ, ಸಮಯ ನೀಡಲು ಎಸ್ಐಟಿ ನಿರಾಕರಣೆ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಖಡಕ್ ಸೂಚನೆ ನೀಡಿದೆ. ಇದು ಪ್ರಜ್ವಲ್‌ ಸಂಕಷ್ಟಕ್ಕೆ ಕಾರಣವಾಗಿದೆ.

ದುಬೈಗೆ ಹಾರಿರುವ ಪ್ರಜ್ವಲ್‌

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು (ಗುರುವಾರ ಮೇ 2) ಎಚ್.ಡಿ. ರೇವಣ್ಣ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಪ್ರಶ್ನಾವಳಿಗಳನ್ನೂ ಸಿದ್ಧಪಡಿಸಿಟ್ಟುಕೊಂಡಿತ್ತು. ಆದರೆ, ಸಂಜೆವರೆಗೂ ಎಸ್ಐಟಿಯತ್ತ ಮುಖ ಮಾಡದೇ ರೇವಣ್ಣ ಟೆಂಪಲ್ ರನ್ ಮಾಡಿಕೊಂಡಿದ್ದಾರೆ. ಇದರ ಜತೆಗೆ ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಯಲ್ಲಿ ಮೀಟಿಂಗ್‌ ಮಾಡುತ್ತಿದ್ದಾರೆ. ಇವೆಲ್ಲದರ ನಡುವೆ ಪ್ರಜ್ವಲ್ ರೇವಣ್ಣ ಮೇ 15ಕ್ಕೆ ಬರುವುದಾಗಿ ವಿಮಾನ ಟಿಕೆಟ್‌ ಬುಕ್ ಮಾಡಿದ್ದರು ಎಂಬ ಅವರ ಹೆಸರಿನಲ್ಲಿದ್ದ ಟಿಕೆಟ್ ವೈರಲ್ ಆಗಿತ್ತು. ಆದರೆ, ಬೆಂಗಳೂರಿಗೆ ಬರಬೇಕಾದ ಪ್ರಜ್ವಲ್ ಬುಧವಾರ ರಾತ್ರಿಯೇ ಜರ್ಮನಿಯಿಂದ ದುಬೈಗೆ ಹಾರಿದ್ದಾರೆ.

ದೂರು ದಾಖಲಿಸಿದ ಮತ್ತೊಬ್ಬ ಸಂತ್ರಸ್ತೆ!

ಈ ಎಲ್ಲ ಬೆಳವಣಿಗೆಗಳ‌ ಎಸ್ಐಟಿ ಮುಂದೆ ಹಾಜರಾಗಿರುವ ಮತ್ತೊಬ್ಬ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆ ಸಂಬಂಧ ಸಿಐಡಿಯಲ್ಲಿಯೇ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಖಾತ್ರಿಪಡಿಸಿದ್ದಾರೆ. ಸಂಜೆ ಮ್ಯಾಜಿಸ್ಟ್ರೇಟರ್ ಮುಂದೆ ಮತ್ತೊಬ್ಬ ಸಂತ್ರಸ್ತೆಯನ್ನು ಹಾಜರುಪಡಿಸಿ 164 ಅಡಿಯಲ್ಲಿ‌ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ. ಈ ಸಂಬಂಧ ಮತ್ತೊಂದು ದೂರನ್ನು ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆಯು ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ನೀಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನೀಡಿದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

ಮತ್ತೊಂದು ನೋಟಿಸ್‌ಗೆ ಸಿದ್ಧತೆ

ಮತ್ತೊಂದೆಡೆ ಸಂಜೆಯೊಳಗೆ ವಿಚಾರಣೆಗೆ ಬರುತ್ತಾರೆ ಅಂದುಕೊಂಡಿದ್ದ ಎಚ್‌.ಡಿ. ರೇವಣ್ಣ ಅವರು ಕೊನೇ ಕ್ಷಣದಲ್ಲಿ ವಕೀಲರ ಮೂಲಕ‌ ಜನ್ರತಿನಿಧಿಗಳ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ‌ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯು ಶುಕ್ರವಾರ (ಮೇ 3) ನಡೆಯಲಿದ್ದು, ಯಾವ ತೀರ್ಪು ಹೊರ ಬರುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಇದರ ಮಧ್ಯೆ ತನಿಖಾಧಿಕಾರಿಗಳು ಮತ್ತೊಂದು‌ ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

KL Rahul: ಇತ್ತೀಚೆಗೆ ಭಾರತವು ನಾಲ್ಕು ಮೀಸಲು ಆಟಗಾರರು ಸೇರಿದಂತೆ 19 ಸದಸ್ಯರ ಬಲವಾದ ತಂಡವನ್ನು ಆಯ್ಕೆಗಾರರು ಪ್ರಕಟಿಸಿದ್ದರು. ಆದಾಗ್ಯೂ, ಕರ್ನಾಟಕದ ಸ್ಟೈಲಿಶ್ ಬ್ಯಾಟ್ಸ್ಮನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲಗೊಂಡಿದ್ದರು. ಆಯ್ಕೆದಾರರು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಎರಡು ವಿಕೆಟ್ ಕೀಪಿಂಗ್ ಸ್ಥಾನಗಳಿಗೆ ಆದ್ಯತೆ ನೀಡಿದರು.

VISTARANEWS.COM


on

KL Rahul
Koo

ನವದೆಹಲಿ: ಅಮರಿಕೆ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ಆಯೋಜನೆಗೊಂಡಿರುವ ಮುಂಬರುವ ಟಿ 20 ಐ (T20 World Cup) ವಿಶ್ವಕಪ್​​ ತಂಡವನ್ನು ಪ್ರಕಟಿಸುವಾಗ ಬಿಸಿಸಿಐ ಆಯ್ಕೆ ಮಂಡಳಿ ಅನುಭವಿ ಬ್ಯಾಟರ್​ ಕೆಎಲ್ ರಾಹುಲ್ (KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​ (Ajit Agarkar) ಅವರನ್ನು ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿತ್ತು. ವಿದೇಶಿ ನೆಲದಲ್ಲಿ ಅವರ ಸಾಮರ್ಥ್ಯದ ಹೊರತಾಗಿಯೂ ತಂಡಕ್ಕೆ ಆಯ್ಕೆಯಾಗದಿರುವುದು ಸರಿಯಲ್ಲ ಎಂಬ ದೂಷಣೆಗಳನ್ನು ಆಯ್ಕೆ ಮಂಡಳಿ ಎದುರಿಸಿತ್ತು. ಗುರುವಾರ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಗರ್ಕರ್ ಕನ್ನಡಿಗ ಕ್ರಿಕೆಟಿಗನನ್ನು ಯಾಕೆ ಸೇರಿಸಿಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಇದೇ ವೇಳೆ ಹಲವಾರು ಮಾಹಿತಿಗಳನ್ನೂ ನೀಡಿದ್ದಾರೆ.

ಇತ್ತೀಚೆಗೆ ಭಾರತವು ನಾಲ್ಕು ಮೀಸಲು ಆಟಗಾರರು ಸೇರಿದಂತೆ 19 ಸದಸ್ಯರ ಬಲವಾದ ತಂಡವನ್ನು ಆಯ್ಕೆಗಾರರು ಪ್ರಕಟಿಸಿದ್ದರು. ಆದಾಗ್ಯೂ, ಕರ್ನಾಟಕದ ಸ್ಟೈಲಿಶ್ ಬ್ಯಾಟ್ಸ್ಮನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲಗೊಂಡಿದ್ದರು. ಆಯ್ಕೆದಾರರು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಎರಡು ವಿಕೆಟ್ ಕೀಪಿಂಗ್ ಸ್ಥಾನಗಳಿಗೆ ಆದ್ಯತೆ ನೀಡಿದರು.

ಆಯ್ಕೆಯ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಗರ್ಕರ್, ರಾಹುಲ್ ವಿಶ್ವಕಪ್​ನಿಂದ ವಂಚಿತರಾಗಿರುವುದು ದುರದೃಷ್ಟಕರ ಎಂದು ಬಹಿರಂಗಪಡಿಸಿದ್ದಾರೆ. ಏಕೆಂದರೆ ಭಾರತೀಯ ಥಿಂಕ್ ಟ್ಯಾಂಕ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಲ್ಲ ಕೀಪರ್​ಗಳನ್ನು ಬಯಸಿತ್ತು. ಅದಕ್ಕಾಗಿ ಭಾರತದ ಮಾಜಿ ವೇಗದ ಬೌಲರ್ ಬಹಿರಂಗಪಡಿಸಿದಂತೆ ಸ್ಯಾಮ್ಸನ್ ಮತ್ತು ಪಂತ್ ಮಧ್ಯಮ ಕ್ರಮಾಂಕದ ಬ್ಯಾಟರ್​​ಗಳಾಗಿ ಆಡಿದ್ದಾರೆ.

“ಕೆಎಲ್ ಅದ್ಭುತ ಆಟಗಾರ. ನಾವು ನೋಡುತ್ತಿದ್ದ ವಿಷಯವೆಂದರೆ ಮಧ್ಯದಲ್ಲಿ ಬ್ಯಾಟಿಂಗ್ ಮಾಡಬಲ್ಲ ಆಟಗಾರ. ಡಿಸಿ ಪರ ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಇಬ್ಬರು (ಸ್ಯಾಮ್ಸನ್ ಮತ್ತು ಪಂತ್) ಉತ್ತಮ ಎಂದು ನಾವು ಭಾವಿಸಿದ್ದೇವೆ. ಕೆ.ಎಲ್. ರಾಹುಲ್ ಉತ್ತಮವೋ ಅಥವಾ ರಿಷಭ್ ಪಂತ್ ಉತ್ತಮವೋ ಅಥವಾ ಸಂಜು ಸ್ಯಾಮ್ಸನ್ ಉತ್ತಮವೋ ಎಂಬುದು ಮುಖ್ಯವಲ್ಲ. ಇದು ಬ್ಯಾಟಿಂಗ್ ಸ್ಲಾಟ್​​ಗಳ ಬಗ್ಗೆ (ಆದ್ದರಿಂದ ಪಂತ್ ಮತ್ತು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಯಿತು), “ಎಂದು ಅಗರ್ಕರ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ರಾಹುಲ್ ಈ ಐಪಿಎಲ್​ನಲ್ಲಿ 40.60 ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. 142.96 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಆದಾಗ್ಯೂ, ಅವರ ಎಲ್ಲಾ ರನ್​​ಗಳ ಅಗ್ರ ಕ್ರಮಾಂಕದ ಬ್ಯಾಟರ್​​ಗಳಾಗಿ ಆಗಿ ಬಂದಿರುವುದರಿಂದ ಡೈನಾಮಿಕ್ ಬ್ಯಾಟರ್​​ ಅಂತಿಮ ಹದಿನೈದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

2024ರ ಟಿ20 ವಿಶ್ವಕಪ್​​ಗೆ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಶ್​​ದೀಪ್​ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ರಿಂಕು ಸಿಂಗ್, ಶುಭ್ಮನ್ ಗಿಲ್, ಖಲೀಲ್ ಅಹ್ಮದ್, ಅವೇಶ್ ಖಾನ್

ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

ನವದೆಹಲಿ: ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಕ್ಕೆ (T20 World Cup) ಭಾರತವು ಪ್ರಬಲ ಸ್ಪರ್ಧಿ ಎಂದು ಶ್ರೀಲಂಕಾದ ಮಾಜಿ ನಾಯಕ ಮತ್ತು ರಾಜಸ್ಥಾನ್ ರಾಯಲ್ಸ್ (Rajasthan Royals​ ) ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ. 2024 ರ ಟಿ 20 ವಿಶ್ವಕಪ್ ಭಾರತದ ತಂಡವನ್ನು ಶ್ಲಾಘಿಸಿದ ಸಂಗಕ್ಕಾರ, ಇದು ಅಸಾಧಾರಣವಾಗಿ ಬಲಿಷ್ಠ ಮತ್ತು ಸಮತೋಲಿತವಾಗಿದೆ ಎಂದು ಬಣ್ಣಿಸಿದರು. ಶ್ರೀಲಂಕಾದ ದಂತಕಥೆ ಟೀಮ್ ಇಂಡಿಯಾದ ಅಸಾಧಾರಣ ಬ್ಯಾಟಿಂಗ್ ಮತ್ತು ಬಹುಮುಖ ಆಲ್​ರೌಂಡರ್​ಗಳ ಶಕ್ತಿಯನ್ನು ಎತ್ತಿ ತೋರಿಸಿದರು. ಜೊತೆಗೆ ಅವರ ಉತ್ತಮ ಗುಣಮಟ್ಟದ ಸ್ಪಿನ್ ಆಯ್ಕೆಗಳಿವೆ. ಇದು ಮೆಗಾ ಈವೆಂಟ್​​ನ ಸಂದರ್ಭಗಳನ್ನು ಅವಲಂಬಿಸಿ ತಂತ್ರಗಾರಿಕೆಯ ಹೊಂದಾಣಿಕೆ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು. ಇದು ಅಪೇಕ್ಷಿತ ಬ್ಯಾಟಿಂಗ್ ಅಥವಾ ಬೌಲಿಂಗ್ ಶಕ್ತಿ ಅವಲಂಬಿಸಿ ವಿಭಿನ್ನ ಸಂಯೋಜನೆಗಳೊಂದಿಗೆ ಆಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದು ಬಲಿಷ್ಠ ತಂಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸಂಗಕ್ಕಾರ, “ಇದು ಅತ್ಯಂತ ಬಲಿಷ್ಠ ತಂಡ. ಅವರು ತಮ್ಮ ಬ್ಯಾಟಿಂಗ್ ಬಲ ಹೊಂದಿದ್ದಾರೆ. ಅತ್ಯುತ್ತಮ ಆಲ್​ರೌಂಡರ್​ಗಳನ್ನು ಹೊಂದಿದ್ದಾರೆ. ಅವರು ಉತ್ತಮ ಗುಣಮಟ್ಟದ ಸ್ಪಿನ್ ಹೊಂದಿದ್ದಾರೆ ಮತ್ತು ಅವರು ಆಡಬಹುದಾದ ಉತ್ತಮ ಸಂಯೋಜನೆಗಳನ್ನು ಹೊಂದಿದ್ದಾರೆ. ಅಲ್ಲಿನ ಪರಿಸ್ಥಿತಿಗಳನ್ನು ತಿಳಿದಿರುವ ರಾಹುಲ್ ಮತ್ತು ರೋಹಿತ್, ವಿಶ್ವಕಪ್​ನಲ್ಲಿ ಅವರು ಬಯಸುವ ಕ್ರಿಕೆಟ್ ಆಡಲು ತಂಡ ಹೇಗಿರಬೇಕು ಎಂಬುದರ ಬಗ್ಗೆ ಉತ್ತಮ ಕಲ್ಪನೆಯನ್ನು ಹೊಂದಿದ್ದಾರೆ ಎಂದು ನನಗೆ ಖಾತ್ರಿಯಿದೆ.

Continue Reading

ಕ್ರೀಡೆ

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

T20 World Cup: ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು

VISTARANEWS.COM


on

T20 World Cup
Koo

ನವದೆಹಲಿ: ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಕ್ಕೆ (T20 World Cup) ಭಾರತವು ಪ್ರಬಲ ಸ್ಪರ್ಧಿ ಎಂದು ಶ್ರೀಲಂಕಾದ ಮಾಜಿ ನಾಯಕ ಮತ್ತು ರಾಜಸ್ಥಾನ್ ರಾಯಲ್ಸ್ (Rajasthan Royals​ ) ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ. 2024 ರ ಟಿ 20 ವಿಶ್ವಕಪ್ ಭಾರತದ ತಂಡವನ್ನು ಶ್ಲಾಘಿಸಿದ ಸಂಗಕ್ಕಾರ, ಇದು ಅಸಾಧಾರಣವಾಗಿ ಬಲಿಷ್ಠ ಮತ್ತು ಸಮತೋಲಿತವಾಗಿದೆ ಎಂದು ಬಣ್ಣಿಸಿದರು. ಶ್ರೀಲಂಕಾದ ದಂತಕಥೆ ಟೀಮ್ ಇಂಡಿಯಾದ ಅಸಾಧಾರಣ ಬ್ಯಾಟಿಂಗ್ ಮತ್ತು ಬಹುಮುಖ ಆಲ್​ರೌಂಡರ್​ಗಳ ಶಕ್ತಿಯನ್ನು ಎತ್ತಿ ತೋರಿಸಿದರು. ಜೊತೆಗೆ ಅವರ ಉತ್ತಮ ಗುಣಮಟ್ಟದ ಸ್ಪಿನ್ ಆಯ್ಕೆಗಳಿವೆ. ಇದು ಮೆಗಾ ಈವೆಂಟ್​​ನ ಸಂದರ್ಭಗಳನ್ನು ಅವಲಂಬಿಸಿ ತಂತ್ರಗಾರಿಕೆಯ ಹೊಂದಾಣಿಕೆ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು. ಇದು ಅಪೇಕ್ಷಿತ ಬ್ಯಾಟಿಂಗ್ ಅಥವಾ ಬೌಲಿಂಗ್ ಶಕ್ತಿ ಅವಲಂಬಿಸಿ ವಿಭಿನ್ನ ಸಂಯೋಜನೆಗಳೊಂದಿಗೆ ಆಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದು ಬಲಿಷ್ಠ ತಂಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸಂಗಕ್ಕಾರ, “ಇದು ಅತ್ಯಂತ ಬಲಿಷ್ಠ ತಂಡ. ಅವರು ತಮ್ಮ ಬ್ಯಾಟಿಂಗ್ ಬಲ ಹೊಂದಿದ್ದಾರೆ. ಅತ್ಯುತ್ತಮ ಆಲ್​ರೌಂಡರ್​ಗಳನ್ನು ಹೊಂದಿದ್ದಾರೆ. ಅವರು ಉತ್ತಮ ಗುಣಮಟ್ಟದ ಸ್ಪಿನ್ ಹೊಂದಿದ್ದಾರೆ ಮತ್ತು ಅವರು ಆಡಬಹುದಾದ ಉತ್ತಮ ಸಂಯೋಜನೆಗಳನ್ನು ಹೊಂದಿದ್ದಾರೆ. ಅಲ್ಲಿನ ಪರಿಸ್ಥಿತಿಗಳನ್ನು ತಿಳಿದಿರುವ ರಾಹುಲ್ ಮತ್ತು ರೋಹಿತ್, ವಿಶ್ವಕಪ್​ನಲ್ಲಿ ಅವರು ಬಯಸುವ ಕ್ರಿಕೆಟ್ ಆಡಲು ತಂಡ ಹೇಗಿರಬೇಕು ಎಂಬುದರ ಬಗ್ಗೆ ಉತ್ತಮ ಕಲ್ಪನೆಯನ್ನು ಹೊಂದಿದ್ದಾರೆ ಎಂದು ನನಗೆ ಖಾತ್ರಿಯಿದೆ.

ಅವರು ತಮ್ಮ ಬೌಲಿಂಗ್​ನಲ್ಲಿ ಆಳವಾದ ಬ್ಯಾಟಿಂಗ್ ಲೈನ್ಅಪ್ ಅಥವಾ ಹೆಚ್ಚಿನ ಶಕ್ತಿ ಬಯಸುತ್ತಾರೆಯೇ ಎಂಬುದರ ಮೇಲೆ ಅವಲಂಬಿತವಾಗಿ ಎರಡು ಅಥವಾ ಮೂರು ವಿಭಿನ್ನ ಸಂಯೋಜನೆಗಳನ್ನು ಹೊಂದಿದ್ದಾರೆ. ಆದರೆ ಇದು ನಿಜವಾಗಿಯೂ ಸಮತೋಲಿತ ತಂಡ. ಬಲವಾದ ತಂಡ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತ ಯಾವಾಗಲೂ ತುಂಬಾ ಪ್ರಬಲವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಭಾರತದ ಟಿ 20 ವಿಶ್ವಕಪ್ 2024 ತಂಡದಲ್ಲಿ ರಾಜಸ್ಥಾನ್ ರಾಯಲ್ಸ್ ನ ನಾಲ್ವರು ಆಟಗಾರರಿದ್ದಾರೆ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಯುಜ್ವೇಂದ್ರ ಚಹಲ್ ಅವರು ಪ್ರಾಥಮಿಕ ತಂಡದಲ್ಲಿದ್ದಾರೆ. ಭಾರತದ ತಂಡಕ್ಕೆ ಆಯ್ಕೆಯಾದ ತಮ್ಮ ಆಟಗಾರರ ಬಗ್ಗೆ ಅವರು ನಿಜವಾಗಿಯೂ ಹೆಮ್ಮೆಪಟ್ಟಿದ್ದಾರೆ.

2024ರ ಐಸಿಸಿ ಟಿ20 ವಿಶ್ವಕಪ್​​ಗೆ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಉತ್ತಮ ಫಾರ್ಮ್​ನಲ್ಲಿ ರಾಜಸ್ಥಾನ್​

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (ರಾಜಸ್ಥಾನ್​ ರಾಯಲ್ಸ್​ ) ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಸಂಜು ಸ್ಯಾಮ್ಸನ್ ನೇತೃತ್ವದ ಫ್ರಾಂಚೈಸಿ ಈ ಋತುವಿನಲ್ಲಿ ಅತ್ಯುತ್ತಮ ಫಾರ್ಮ್​​ನಲ್ಲಿದೆ. ಐಪಿಎಲ್ 2024 ರಲ್ಲಿ ರಾಯಲ್ಸ್ ಇದುವರೆಗೆ ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಸೋತಿದೆ ಮತ್ತು ಅವರು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಐಪಿಎಲ್ 2024 ರ ಪ್ಲೇಆಫ್ನಲ್ಲಿ ಆರ್ಆರ್ ಬಹುತೇಕ ತಮ್ಮ ಸ್ಥಾನ ಕಾಯ್ದಿರಿಸಿದೆ ಮತ್ತು ಮೇ 2 ರಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಋತುವಿನ 50ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧ ಸೆಣಸಲಿದೆ.

Continue Reading
Advertisement
Covaxin
ದೇಶ12 mins ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ14 mins ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ28 mins ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ52 mins ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್1 hour ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ1 hour ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು1 hour ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ2 hours ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Brij Bhushan Singh
ದೇಶ2 hours ago

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ14 mins ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ14 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌