ವಿಸ್ತಾರ TOP 10 NEWS |‌ ಮೀಸಲಾತಿ ಕುರಿತು ಅಚ್ಚರಿಯ ನಿರ್ಧಾರದಿಂದ, ಅಮಿತ್‌ ಶಾ ಕರ್ನಾಟಕ ಪ್ರವಾಸದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS |‌ ಮೀಸಲಾತಿ ಕುರಿತು ಅಚ್ಚರಿಯ ನಿರ್ಧಾರದಿಂದ, ಅಮಿತ್‌ ಶಾ ಕರ್ನಾಟಕ ಪ್ರವಾಸದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news panchamasali reservation to amit shah in karnataka and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Reservation | ಪಂಚಮಸಾಲಿ-ಒಕ್ಕಲಿಗರಿಗೆ 2D ವರ್ಗ ಸೃಜನೆ: 2A ಮೀಸಲಾತಿ ಕುರಿತು ಸರ್ಕಾರದ ಮಹತ್ವದ ನಿರ್ಧಾರ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸಿನಂತೆ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬದಲಿಗೆ ಹೊಸದಾಗಿ 2ಡಿ ವರ್ಗವನ್ನು ಸೃಜಿಸಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ. ಅದೇ ರೀತಿ ಒಕ್ಕಲಿಗ ಸಮುದಾಯಕ್ಕೆ 2ಸಿ ವರ್ಗಕ್ಕೆ ಸೇರ್ಪಡೆ ಮಾಡುವ ತೀರ್ಮಾನ ಮಾಡಲಾಗಿದೆ. ಇನ್ನು ಮುಂದೆ 3ಎ ಹಾಗೂ 3ಬಿ ವರ್ಗ ಇರುವುದಿಲ್ಲ ಎಂದು ಸಭೆಯ ನಂತರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. ಬೆಳಗಾವಿ ಅಧಿವೇಶನ | ಅಮಿತ್‌ ಶಾ ಆಮೇಲ್‌ ಬನ್ರಿ ಅಂತ ಹೇಳ್ಬೇಕಿತ್ತು? ಆ ದಮ್‌ ಇಲ್ಲ ಇವ್ರಿಗೆ: ಸದನ ಮೊಟಕಿಗೆ ಸಿದ್ದರಾಮಯ್ಯ ಕುಟುಕು
ಚಳಿಗಾಲದ ಅಧಿವೇಶನವನ್ನು ಒಂದು ದಿನ ಮೊದಲೇ ಮೊಟಕುಗೊಳಿಸುತ್ತಿರುವುದಕ್ಕೆ ಪ್ರತಿಪಕ್ಷ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಈಗ ಸದನ ನಡೆಯುತ್ತಿದೆ ಆಮೇಲೆ ಬನ್ನಿ ಅಂತ ಅಮಿತ್‌ ಅವರಿಗೆ ಹೇಳಲು ಬಿಜೆಪಿಯವರಿಗೆ ದಮ್‌ ಇಲ್ಲ ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Kalasa Banduri | ಕಳಸಾ ಬಂಡೂರಿ ಯೋಜನೆಯ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದ ಅನುಮತಿ: ಸಚಿವ ಪ್ರಲ್ಹಾದ್‌ ಜೋಷಿ ಮಾಹಿತಿ
ಕಿತ್ತೂರು ಕರ್ನಾಟಕ ಭಾಗದ ಜನತೆ ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ, ಕುಡಿಯುವ ನೀರಿನ ಯೋಜನೆಯಾದ ಕಳಸಾ ಬಂಡೂರಿ (Kalasa Banduri) ನಾಲಾ ತಿರುವು ಯೋಜನೆಯ (ಮಹದಾಯಿ) ಅನುಷ್ಠಾನಕ್ಕೆ ಅಗತ್ಯವಾಗಿದ್ದ ವಿಸ್ತೃತ ಯೋಜನಾ ವರದಿ(ಡಿಪಿಆರ್‌)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಪ್ರಕಟಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. NPS News | ಕಂಡಿಷನ್‌ ಒಪ್ಪಿ ಕೆಲಸಕ್ಕೆ ಸೇರಿ ಈಗ OPS ಕೇಳುವುದು ಸೌಜನ್ಯವಲ್ಲ: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ
ಹೊಸ ಪಿಂಚಣಿ ಯೋಜನೆಯನ್ನು (NPS News) ರದ್ದುಗೊಳಿಸಿ, ಈ ಹಿಂದಿನಂತೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕು ಎಂಬ ಹೋರಾಟದ ಕುರಿತು ಸರ್ಕಾರ ನಕಾರಾತ್ಮಕ ಪ್ರತಿಕ್ರಿಯೆ ನೀಡಿದೆ. ೨೦೦೪ರಲ್ಲಿ ಕೇಂದ್ರ ಸರ್ಕಾರ ಪಿಂಚಣಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಆದೇಶ ಹೊರಡಿಸಿತು. ಅದನ್ನು ಒಪ್ಪಿ ಕೆಲಸಕ್ಕೆ ಸೇರಿದವರು ಈಗ ಈ ರೀತಿ ಒತ್ತಾಯ ಮಾಡುವುದು ಸರಿಯಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. ‌ಹಳೆ ಮೈಸೂರಿನಲ್ಲಿ ಶೇ.50 ಸೀಟು ಗೆಲ್ಲುತ್ತದೆ ಬಿಜೆಪಿ ಎಂದ ಡಿ.ವಿ. ಸದಾನಂದಗೌಡ: ಶುಕ್ರವಾರ ಕರ್ನಾಟಕಕ್ಕೆ ಅಮಿತ್‌ ಶಾ ಆಗಮನ
ರಾಜ್ಯದಲ್ಲಿ ಸುಶಾಸನ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನೀಡುವ ಬಿಜೆಪಿ ಸರ್ಕಾರ ಮುಂದುವರಿಯಬೇಕು ಎಂಬ ದೃಷ್ಟಿಯಿಂದ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ. ಬಿಜೆಪಿ ರಿಪೋರ್ಟ್ ಕಾರ್ಡ್ ಮುಂದಿಟ್ಟು ಮತ ಕೇಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಪಾಕಿಸ್ತಾನದಲ್ಲಿ ಹಿಂದು ಮಹಿಳೆಯ ಭೀಕರ ಹತ್ಯೆ; ಗ್ಯಾಂಗ್​ರೇಪ್​ ಮಾಡಿ, ಆಕೆಯ ತಲೆ-ಸ್ತನಗಳನ್ನು ಕತ್ತರಿಸಿ ಕೊಂದ ಕಟುಕರು
ಪಾಕ್​​ನ ಸಿಂಧ್​ ಪ್ರಾಂತ್ಯದಲ್ಲಿರುವ ಶಿಂಜೋರೋ ಪಟ್ಟಣದಲ್ಲಿ 40 ವರ್ಷದ ಹಿಂದು ಮಹಿಳೆಯೊಬ್ಬರ ಮೃತದೇಹ ತಲೆ ಮತ್ತು ಸ್ತನಗಳನ್ನು ಕತ್ತರಿಸಿದ, ಚರ್ಮವನ್ನು ಸುಲಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಮಹಿಳೆಯನ್ನು ದಿಯಾ ಎಂದು ಗುರುತಿಸಲಾಗಿದ್ದು, ಭೀಲ್​ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವಳು ಎನ್ನಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Indian drugs | ಭಾರತದಲ್ಲಿ ತಯಾರಾದ ಔಷಧ ಓವರ್‌ಡೋಸ್‌ನಿಂದ ಉಜ್ಬೆಕಿಸ್ತಾನದಲ್ಲಿ 18 ಮಕ್ಕಳ ಸಾವು
ಭಾರತದ ಕಂಪನಿಯೊಂದು ತಯಾರಿಸಿರುವ ಸಿರಪ್‌ ಸೇವಿಸಿದ ಬಳಿಕ ಉಜ್ಬೆಕಿಸ್ತಾನದಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಈ ಕುರಿತು ತನಿಖೆಗೆ ಭಾರತ ಸರ್ಕಾರ ಮುಂದಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Election Reform | ಕ್ಷೇತ್ರದಿಂದ ದೂರ ಇರುವವರಿಗೂ ಮತದಾನದ ಅವಕಾಶ: RVM ಮೂಲಕ ಐತಿಹಾಸಿಕ ಪ್ರಯೋಗಕ್ಕೆ ಮುಂದಾದ ಚುನಾವಣಾ ಆಯೋಗ
ತಮ್ಮ ಮತ ಕ್ಷೇತ್ರದಿಂದ ವಿವಿಧ ಕಾರಣಕ್ಕೆ ದೂರ ಇರುವ ಮತದಾರರು, ತಮ್ಮದೇ ಮತಗಟ್ಟೆಗೆ ಆಗಮಿಸುವ ಅನಿವಾರ್ಯತೆ ಇಲ್ಲದೆಯೇ ಮತದಾನದ ಹಕ್ಕನ್ನು ಚಲಾಯಿಸಲು ದೂರ ಮತದಾನ ಯಂತ್ರವನ್ನು (Remote Voting Machine-RVM) ಕೇಂದ್ರ ಚುನಾವಣಾ ಆಯೋಗ ರೂಪಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. ನಟಿ ತುನಿಶಾರದ್ದು ಕೊಲೆ ಎಂದ ಕಂಗನಾ; ​ತನ್ನ ಪ್ರೇಮಕಥೆಯಲ್ಲಿ ‘ಪ್ರೀತಿ’ಯೇ ಇಲ್ಲ ಎಂಬ ನೋವನ್ನು ಹೆಣ್ಣು ಸಹಿಸೋದಿಲ್ಲ ಎಂದು ಪೋಸ್ಟ್​
ನಟ ಸುಶಾಂತ್​ ಸಿಂಗ್​ ಮೃತಪಟ್ಟಾಗ ಅದು ಆತ್ಮಹತ್ಯೆಯಲ್ಲ, ಕೊಲೆ. ಸುಶಾಂತ್ ಸಿಂಗ್​ ರಜಪೂತ್​ ಸಾವಿಗೆ ಬಾಲಿವುಡ್​​ನಲ್ಲಿರುವ ನೆಪೋಟಿಸಂ (ಸ್ವಜನಪಕ್ಷಪಾತ) ಕಾರಣ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಬಾಲಿವುಡ್​ ನಟಿ ಕಂಗನಾ ರಣಾವತ್,​ ಇದೀಗ ನಟಿ ತುನಿಶಾ ಶರ್ಮಾಳದ್ದೂ ಕೊಲೆ ಎಂದೇ ಹೇಳುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Heeraben Modi | ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ಆರೋಗ್ಯ ಚೇತರಿಕೆ, ಆಸ್ಪತ್ರೆಯಿಂದ ಶೀಘ್ರ ಬಿಡುಗಡೆ ನಿರೀಕ್ಷೆ
ಅನಾರೋಗ್ಯದ ಪರಿಣಾಮ ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, 99 ವರ್ಷ ಇಳಿ ವಯಸ್ಸಿನ ಹೀರಾಬೆನ್‌ ಮೋದಿ ಅವರ ಆರೋಗ್ಯ ಚೇತರಿಸಿದ್ದು, (Heeraben Modi) ಇನ್ನು ಒಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. Anant Ambani | ಬಾಲ್ಯ ಸ್ನೇಹಿತೆ ರಾಧಿಕಾ ಮರ್ಚೆಂಟ್‌ ಜತೆ ಅನಂತ್‌ ಅಂಬಾನಿ ನಿಶ್ಚಿತಾರ್ಥ
  2. Hassan Blast | ಮಿಕ್ಸಿ ಬಾಂಬರ್‌ ಬಳಿ ಕೆಜಿಗಟ್ಟಲೆ ಚಿನ್ನ, ಕೋಟಿ ಹಣ? ಕಿರಾತಕ ಮಾಡಿದ ವಿಡಿಯೋಗಳ ಅಸಲಿಯತ್ತು ಇಲ್ಲಿದೆ ನೋಡಿ!
  3. Russia Ukraine War | ಉಕ್ರೇನ್‌ನ ನಗರಗಳ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ, ಕಗ್ಗತ್ತಲಿನತ್ತ ಕೀವ್‌, ಲ್ವಿವ್‌ ನಗರಗಳು
  4. ಭದ್ರತಾ ವೈಫಲ್ಯ ಆಗಿದ್ದಲ್ಲ, ರಾಹುಲ್​ ಗಾಂಧಿಯೇ ನಿಯಮ ಉಲ್ಲಂಘಿಸಿದ್ದಾರೆ; ಪ್ರತಿಕ್ರಿಯಾ ಪತ್ರ ಬರೆದ ಸಿಆರ್​ಪಿಎಫ್​​
  5. Santa Claus | ಸಾಂತಾ ಕ್ಲಾಸ್ ವೇಷದಲ್ಲಿ ದೈವ ಅಣಕಿಸುವ ವಿಡಿಯೊ; ನೆಟ್ಟಿಗರು ಗರಂ
  6. ಗ್ಲೋಕಲ್‌ ಲೋಕ ಅಂಕಣ | ಮೆಟಾವರ್ಸ್ ಮುಂದಿರುವ ಸವಾಲುಗಳು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

Assault Case : ಮೂರು ವರ್ಷದ ಬಾಲಕಿ ಮೇಲೆ ಎರಗಿದ ಮಲತಂದೆ ಕ್ರೌರ್ಯವನ್ನೇ ಮೆರೆದಿದ್ದಾನೆ. ಬಾಲಕಿಯ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿದ್ದಾನೆ. ಸದ್ಯ ಮಲತಂದೆ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

VISTARANEWS.COM


on

By

assault Case
ವಿಕೃತಿ ಮೆರೆದಿದ್ದ ಮಲತಂದೆ
Koo

ಬೆಂಗಳೂರು/ಚಿಕ್ಕಬಳ್ಳಾಪುರ: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ದೌರ್ಜನ್ಯ (Assault Case) ನಡೆಸಿದ್ದಾನೆ. ಮಹಿಳೆಯ ಮೂರನೇ ಗಂಡನ ವಿಕೃತಿ ಅದ್ಯಾವ ಪರಿ ಇದೆ ಎಂದರೆ ಮಗುವಿನ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ಮೃಗೀಯ ರೀತಿ ವರ್ತಿಸಿದ್ದಾನೆ.

ಗೌರಿಬಿದನೂರಿನಲ್ಲಿ ಮಲತಂದೆಯೊಬ್ಬ ಅಟ್ಟಹಾಸ ತೋರಿದ್ದಾನೆ. ಜರೀನಾ ತಾಜ್‌ ಎಂಬಾಕೆ ಒಟ್ಟು ಮೂರು ಮದುವೆ ಆಗಿದ್ದು, ಅದರಲ್ಲಿ ಎರಡನೇ ಗಂಡನ ಮಗುವಿಗೆ ಮೂರನೇ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಅಜ್ಮಂತ್‌ ಎಂಬಾತ ಮಗುವಿಗಷ್ಟೇ ಅಲ್ಲದೇ ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ.

ಮೂರು ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು, ಮಗುವಿನ ಗುಪ್ತಾಂಗ ಕಚ್ಚಿ, ಮನಬಂದಂತೆ ಥಳಿಸಿದ್ದಾನೆ. 15 ವರ್ಷದ ಮತ್ತೊಬ್ಬ ಮಗಳ ಕೈ ಮುರಿದು ವಿಕೃತಿ ಮೆರೆದಿದ್ದಾನೆ.

ಜರೀನಾ ತಾಜ್‌ಗೆ ಮೂರು ಮದುವೆಯಾಗಿದ್ದು, ಮೊದಲ ಪತಿಯಿಂದ 2 ಹೆಣ್ಮಕ್ಕಳು ಆಗಿದ್ದವು. 2ನೇ ಪತಿಯಿಂದ ಮತ್ತೊಂದು ಹೆಣ್ಣು ಮಗು ಜನಿಸಿತ್ತು. ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ಅಜ್ಮಂತ್‌ ಜತೆಗೆ ಮೂರನೇ ಮದುವೆಯಾಗಿದ್ದಳು. ಎರಡನೇ ಪತಿಯಿಂದ ಜನಿಸಿದ್ದ ಹೆಣ್ಣು ಮಗುವಿನ ಮೇಲೆ ಅಜ್ಮಂತ್‌ ಕಿರುಕುಳ ನೀಡಿದ್ದಾನೆ.

ತೀವ್ರ ಗಾಯಗೊಂಡಿರುವ ಮೂರು ವರ್ಷದ ಮಗುವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ತಂದೆಯ ವಿಕೃತಿಯಿಂದ ಪುತ್ರಿ ಶಾಕ್‌ಗೆಗೊಳಗಾಗಿದ್ದಾಳೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

ಪುಣೆ : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಈಗ ಹೆಚ್ಚು ಟ್ರೆಂಡ್ ಆಗುತ್ತಿದೆ. ಹಾಗಾಗಿ ಯುವಕ-ಯುವತಿಯರು ತಮ್ಮ ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ಹಾಗೂ ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಅನೇಕರು ಸಾವನಪ್ಪಿರುವುದು, ಗಾಯಗೊಂಡಿರುವುದು ನಾವು ಆಗಾಗ ನೋಡಿದ್ದೇವೆ. ಆದರೂ ಜನರಿಗೆ ರೀಲ್ಸ್ ಹುಚ್ಚು ಬಿಡುವುದಿಲ್ಲ. ಇದೀಗ ಪುಣೆಯಲ್ಲಿ ಹುಡುಗಿಯೊಬ್ಬಳು, ಹುಡುಗನೊಬ್ಬನ ಕೈಯನ್ನು ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ವಿಡಿಯೊ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಹುಡುಗನೊಬ್ಬ ಕಟ್ಟಡದ ತುದಿಯಲ್ಲಿ ಮಲಗಿದ್ದಾನೆ. ಹುಡುಗಿ ಆತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿಯುತ್ತಿರುವುದನ್ನು ಕಾಣಬಹುದು. ಇನ್ನೊಂದು ಬದಿಯಲ್ಲಿ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೊವನ್ನು ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ತೆಗೆಯಲಾಗಿದೆ. ಜೂನ್ 19ರಂದು ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಇದಕ್ಕೆ 55,000ಕ್ಕೂ ಹೆಚ್ಚು ವೀವ್ಸ್ ಸಿಕ್ಕಿದೆ ಮತ್ತು ಅನೇಕರು ಅವರ ಮೂರ್ಖತನಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಈ ವಿಡಿಯೊವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಹಲವಾರು ಘಟನೆಗಳು ವರದಿಯಾದ ಮೇಲೂ ಇಂತಹ ಬೇಜವಾಬ್ದಾರಿ ಕೆಲಸ ನಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯ. ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ತನ್ನ ಕುಟುಂಬವನ್ನು ಜೀವನಪರ್ಯಂತ ನರಳುವಂತೆ ಮಾಡುವ ಮನೋಭಾವ ಇದು ಎಂದು ಮತ್ತೊಬ್ಬ ಬಳಕೆದಾರರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Actor Darshan: ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

ram mohan raju actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ. ಈ ಮೋಹನ್‌ ರಾಜು 2019ರಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ. ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದ. ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾನೆ.

ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷವೆಂದರೆ, 2018ರಲ್ಲಿ ಇದೇ ಮೋಹನ್ ರಾಜ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ, ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Continue Reading

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಕ್ರೈಂ

‌Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸರು ವಶಪಡಿಸಿಕೊಂಡದ್ದೇನು?

‌Actor Darshan: ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

VISTARANEWS.COM


on

Actor Darshan Please leave Pavitra Darshan request to police
Koo

ಬೆಂಗಳೂರು: ಆರ್‌ಆರ್‌ ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ, ನಟ ದರ್ಶನ್‌ (Actor Darshan) ಹಾಗೂ ಈತನ ಗ್ಯಾಂಗ್‌ (D boss Gang) ವಿರುದ್ಧ ಸಾಕ್ಷಿಯಾಗಿ (evidence) 139ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 28 ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ.

ಆರೋಪಿಗಳು ಧರಿಸಿದ್ದ ಬಟ್ಟೆ, ಶೆಡ್‌ನಲ್ಲಿ ಹಲ್ಲೆಗೆ ಬಳಸಿದ್ದ ಲಾಠಿ, ಮರದ ರಿಪೀಸ್ ವಸ್ತುಗಳು, ತುಳಿದ ಶೂಗಳು, ಆರೋಪಿಗಳು ತಂಗಿದ್ದ ಹೋಟೆಲ್ ಲೆಡ್ಜರ್ ಬುಕ್, ಸಿಸಿಟಿವಿ ರೆಕಾರ್ಡ್, ಕೃತ್ಯದ ವೇಳೆ ಹಾಗೂ ಶವ ಬಿಸಾಡಲು ಬಳಸಿದ್ದ ಕಾರುಗಳು‌, ಆರೋಪಿಗಳು ಪಡೆದುಕೊಂಡಿದ್ದ ಹಣ, ಆರೋಪಿಗಳ ಮೊಬೈಲ್ ಪೋನ್, ಕಾರ್ ಶೆಡ್ ಕಡೆ ಹೋಗುವ ಸಿಸಿಟಿವಿ ರೆಕಾರ್ಡ್‌, ಮೃತದೇಹದ ಮೇಲಿಂದ ಕಳುವಾಗಿದ್ದ ‍ಚಿನ್ನಾಭರಣ ಸೇರಿದಂತೆ ಒಟ್ಟು 139 ವಸ್ತು ಸೀಜ್ ಮಾಡಲಾಗಿದೆ.

ಪ್ರಕರಣದಲ್ಲಿ ಇದುವರೆಗೂ 28 ಕಡೆ ಮಹಜರ್ ಮಾಡಲಾಗಿದೆ. ದರ್ಶನ್ ಸೇರಿ ಎಲ್ಲ 17 ಆರೋಪಿಗಳ ನಿವಾಸ ಹಾಗೂ ಬೇರೆ 11 ಸ್ಥಳಗಳಲ್ಲೂ ಮಹಜರ್ ನಡೆಸಲಾಗಿದೆ. ರೇಣುಕಾಸ್ವಾಮಿ ಕರೆತಂದು ಹಲ್ಲೆ ಕೃತ್ಯ ನಡೆಸಿದ ಪಟ್ಟಣಗೆರೆ ಶೆಡ್, ರೇಣುಕಾಸ್ವಾಮಿಯ ಶವ ಬಿಸಾಡಿದ ರಾಜಕಾಲುವೆ, ಶವ ಬಿಸಾಡಿದ್ದ ಆರೋಪಿಗಳು ತಂಗಿದ್ದ ಆರ್.ಆರ್.ನಗರದ ಹೋಟೆಲ್, ಪಾರ್ಟಿ ಮಾಡಿದ್ದ ಸ್ಟೋನಿಬ್ರೂಕ್ ರೆಸ್ಟೋರೆಂಟ್, ಕಿಡ್ನಾಪ್ ಮಾಡಿದ್ದ ಚಿತ್ರದುರ್ಗದ ಸ್ಥಳ, ಮೈಸೂರಿನ ಖಾಸಗಿ ಹೋಟೆಲ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

ವಿಡಿಯೋ ಮಾಡಿದ ಮೂವರು ಪೊಲೀಸ್‌ ವಶಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Continue Reading
Advertisement
assault Case
ಕ್ರೈಂ6 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ10 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್13 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest29 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest32 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ37 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌