EPFO Guidelines | ಪಿಂಚಣಿ ಹೆಚ್ಚಳಕ್ಕೆ ಇಪಿಎಫ್‌ಒ ಮಾರ್ಗದರ್ಶಿ ಬಿಡುಗಡೆ - Vistara News

ಪ್ರಮುಖ ಸುದ್ದಿ

EPFO Guidelines | ಪಿಂಚಣಿ ಹೆಚ್ಚಳಕ್ಕೆ ಇಪಿಎಫ್‌ಒ ಮಾರ್ಗದರ್ಶಿ ಬಿಡುಗಡೆ

ಇಪಿಎಫ್‌ಒ ತನ್ನ ಸದಸ್ಯರಿಗೆ ಸುಪ್ರೀಂಕೋರ್ಟ್‌ ಆದೇಶದ ಅನ್ವು ಹೆಚ್ಚಿನ ಪಿಂಚಣಿ ಗಳಿಸಲು ಹೊಸ ಮಾರ್ಗದರ್ಶಿಯನ್ನು ( EPFO Guidelines) ಬಿಡುಗಡೆಗೊಳಿಸಿದೆ. ಅರ್ಹ ಸದಸ್ಯರು ಅರ್ಜಿ ಸಲ್ಲಿಸಬಹುದು.

VISTARANEWS.COM


on

epfo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆ ಇಪಿಎಫ್‌ಒ, ಪಿಂಚಣಿ ಹೆಚ್ಚಳಕ್ಕೆ ಸಂಬಂಧಿಸಿ (EPFO Guidelines ) ಅರ್ಹತೆ ಪಡೆಯಲು ಮಾರ್ಗದರ್ಶಿಯನ್ನು ನಿಡುಗಡೆಗೊಳಿಸಿದೆ.

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಚಂದಾದಾರರಿಗೆ ಹೆಚ್ಚಿನ ಪಿಂಚಣಿ ಸಿಗಲು ಅನುಕೂಲ ಕಲ್ಪಿಸಲಾಗಿದೆ ಎಂದು ಇಪಿಎಫ್‌ಒ ತಿಳಿಸಿದೆ.

2014ರ ಸೆಪ್ಟೆಂಬರ್‌ 1ರ ಬಳಿಕ ಇಪಿಎಸ್‌ ಸದಸ್ಯರಾದವರು ಪಿಂಚಣಿಗೆ ಅರ್ಹ ವೇತನ ಮಿತಿಯಾದ ಮಾಸಿಕ 15,00 ರೂ.ಗಳ ಬದಲು, ಆಕ್ಚುವಲ್‌ ವೇತನದ 8.33% ತನಕದ ಮೊತ್ತವನ್ನು ಪಿಂಚಣಿ ನಿಧಿಗೆ ನೀಡಬಹುದು. ಇದರ ಪರಿಣಾಮ ಉದ್ಯೋಗಿಗಳ ಪಿಂಚಣಿ ಹೆಚ್ಚಳಕ್ಕೆ ಅವಕಾಶ ಕಲ್ಪಿಸಿದಂತಾಗಿದೆ ಎಂದು ಇಪಿಎಫ್‌ಒ ತಿಳಿಸಿದೆ.

ಅರ್ಹ ಉದ್ಯೋಗಿಗಳು ಇಪಿಎಫ್‌ಒ ಪ್ರಾದೇಶಿಕ ಕಚೇರಿಗೆ ತೆರಳಿ ಪಿಂಚಣಿ ಹೆಚ್ಚಳಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಇಪಿಎಫ್‌ಒ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

IND vs PAK: ನಾಸ್ಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್​ನಲ್ಲಿ ಹಲವು ಬಿರುಕು ಇರುವುದರಿಂದ ಇದು ಬೌಲರ್​ಗಳಿಗೆ ಯೋಗ್ಯವಾಗಿದೆ. ಆದರೆ ಬ್ಯಾಟರ್​ಗಳು ರನ್​ ಗಳಿಸಲು ಪರದಾಡುವ ಜತೆಗೆ ಗಾಯಗೊಳ್ಳುವ ಸಾಧ್ಯತೆಯೂ ಅಧಿಕವಾಗಿದೆ. ಇಲ್ಲಿ ಇದುವರೆಗೆ ನಡೆದ ಎಲ್ಲ ಪಂದ್ಯಗಳು ಕೂಡ ಕನಿಷ್ಠ ಮೊತ್ತದ ಪಂದ್ಯಗಳಾಗಿವೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಹೈವೋಲ್ಟೇಜ್​ ಪಂದ್ಯ ಇಂದು ರಾತ್ರಿ ನಡೆಯಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿರುವ ಅಭಿಮಾನಿಗಳಿಗೆ ಹವಾಮಾನ ಇಲಾಖೆ ನಿರಾಸೆಯ ಸುದ್ದಿಯೊಂದು ನೀಡಿದೆ. ಪಂದ್ಯಕ್ಕೆ ಮಳೆ ಭೀತಿ ಇದೆ ಎಂದು ತಿಳಿಸಿದೆ.

ಶೇ.51ರಷ್ಟು ಮಳೆ ಸಾಧ್ಯತೆ

ಭಾರತದಲ್ಲಿ ರಾತ್ರಿ ಪಂದ್ಯ ಪ್ರಸಾರಗೊಂಡರೂ ಕೂಡ ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಬೆಳಗ್ಗೆ ನಡೆಯಲಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಬೆಳಗ್ಗೆ 11 ಸುಮಾರಿಗೆ ಶೇ. 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುತ್ತದೆ. ಏಕೆಂದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇಲ್ಲ.

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇದನ್ನೂ ಓದಿ IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

ಪಿಚ್​ ರಿಪೋರ್ಟ್​


ನಾಸ್ಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್​ನಲ್ಲಿ ಹಲವು ಬಿರುಕು ಇರುವುದರಿಂದ ಇದು ಬೌಲರ್​ಗಳಿಗೆ ಯೋಗ್ಯವಾಗಿದೆ. ಆದರೆ ಬ್ಯಾಟರ್​ಗಳು ರನ್​ ಗಳಿಸಲು ಪರದಾಡುವ ಜತೆಗೆ ಗಾಯಗೊಳ್ಳುವ ಸಾಧ್ಯತೆಯೂ ಅಧಿಕವಾಗಿದೆ. ಇಲ್ಲಿ ಇದುವರೆಗೆ ನಡೆದ ಎಲ್ಲ ಪಂದ್ಯಗಳು ಕೂಡ ಕನಿಷ್ಠ ಮೊತ್ತದ ಪಂದ್ಯಗಳಾಗಿವೆ. ಪಿಚ್​ ಬಗ್ಗೆ ಈಗಾಗಲೇ ಹಲವು ತಂಡಗಳ ಆಟಗಾರರು ಅಸಮಾಧಾನ ಹೊರಹಾಕಿದ್ದಾರೆ.

ಬಲಾಬಲ

ಒಟ್ಟು 7 ಬಾರಿ ಇತ್ತಂಡಗಳು ಟಿ20 ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯ ಗೆದ್ದರೆ, ಪಾಕಿಸ್ತಾನ ಒಂದು ಪಂದ್ಯ ಗೆದ್ದಿದೆ. ಭಾರತಕ್ಕೆ ಸೋಲು ಎದುರಾದದ್ದು 2021ರಲ್ಲಿ ದುಬೈನಲ್ಲಿ ನಡೆದಿದ್ದ ಟೂರ್ನಿಯಲ್ಲಿ. ವಿರಾಟ್​ ಕೊಹ್ಲಿ ಸಾರಥ್ಯದ ಟೀಮ್​ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. ಒಟ್ಟಾರೆಯಾಗಿ ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದ್ದರೂ ಕೂಡ ಪಾಕ್​ ಸವಾಲನ್ನು ಅಷ್ಟು ಹಗುರವಾಗಿ ಕಡೆಗಣಿಸುವಂತಿಲ್ಲ.

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading

ದೇಶ

Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Narendra Modi: ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್‌ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ(Narendra Modi) ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಇನ್ನು ಈ ಕಾರ್ಯಕ್ರಮದಲ್ಲಿ ದೇಶ-ವಿದೇಶದ ಗಣ್ಯರು ಭಾಗಿಯಾಗಲಿದ್ದಾರೆ.

ಭಾನುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಇನ್ನು ಇಂದು ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

7 ವಿದೇಶಿ ನಾಯಕರ ಉಪಸ್ಥಿತಿ

ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅಬಿನಂದನೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಅವರನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಹೀಗಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಬಾಂಗ್ಲಾದಿಂದ ದೆಹಲಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ನಂತರ ಜೂನ್ 10 ರಂದು ವಾಪಸಾಗಲಿದ್ದಾರೆ.

ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್‌ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಈ ವೇಳೆ ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಸಹ ಮೋದಿಗೆ ಸಾಥ್‌ ನೀಡಿದ್ದರು. ಇನ್ನು ನೆರೆಯ ರಾಷ್ಟ್ರಗಳ ಜೊತೆಗಿನ ಬಾಂದವ್ಯ ಹೆಚ್ಚಿಸುವ ನಿಟ್ಟಿನಲ್ಲಿ ಭಾರತದ ನೈಬರ್‌ಹುಡ್ ಫಸ್ಟ್ ನೀತಿಯ ಭಾಗವಾಗಿ ಈ ನಾಯಕರನ್ನು ಆಹ್ವಾನಿಸಿದೆ. ಮಾಲ್ಢೀವ್ಸ್‌ ಅಧ್ಯಕ್ಷ ಮುಯಿಝು ಭಾರತಕ್ಕೆ ಬಂದರೆ, ಎರಡು ಸಾಂಪ್ರದಾಯಿಕ ಪಾಲುದಾರರ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ಪ್ರಮುಖ ಸುದ್ದಿ

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Modi 3.0 Cabinet: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಸಿಗಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ. ಸಂಪುಟ ದರ್ಜೆ ಸಚಿವರನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಇಂದು (ಶನಿವಾರ) ಮತ್ತೆ ಎನ್‌ಡಿಎ ಸಂಸದರ ಸಭೆ ಕರೆದಿದೆ. ಇಲ್ಲಿದೆ ನೋಡಿ ಸಚಿವ ಸ್ಥಾನ ಅಲಂಕರಿಸಲಿರುವ ಸಂಭಾವ್ಯ ನಾಯಕರ ಪಟ್ಟಿ.

VISTARANEWS.COM


on

Modi 3.0 Cabinet
Koo

ನವದೆಹಲಿ: ಬಹುಮತ ಪಡೆದ ಎನ್‌ಡಿಎ (NDA) ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಸಿಗಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ. ಸಂಪುಟ ದರ್ಜೆ ಸಚಿವರನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಎನ್‌ಡಿಎ ಸಂಸದರ ಸಭೆ ನಡೆಸಿದೆ (Modi 3.0 Cabinet).

ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರೂ ಹಾಜರಾಗಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. ಇನ್ನು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು, ನಿತೀಶ್ ಕುಮಾರ್ ಅವರ ಜೆಡಿಯು (12), ಏಕನಾಥ್ ಶಿಂಧೆ ಅವರ ಶಿವಸೇನೆ (7) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) (5) ಸ್ಥಾನಗಳನ್ನು ಗೆದ್ದುಕೊಂಡು ಸರ್ಕಾರ ರಚಿಸಲು ಎನ್‌ಡಿಎಗೆ ಬೆಂಬಲ ನೀಡಿವೆ. ಹೀಗಾಗಿ ಇದೀಗ ಮೋದಿ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಲಭಿಸಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ.

ಮೋದಿ ಸಂಪುಟ ಸೇರುವ ಸಂಭ್ಯಾವ ಸಚಿವರು

ಬಿಜೆಪಿ

  • ಅಮಿತ್ ಶಾ (ಗುಜರಾತ್ )
  • ರಾಜನಾಥ್ ಸಿಂಗ್ (ಉತ್ತರ ಪ್ರದೇಶ)
  • ನಿತಿನ್ ಗಡ್ಕರಿ (ಮಹಾರಾಷ್ಟ್ರ )
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ )
  • ಜೈ ಶಂಕರ್ (ರಾಜ್ಯಸಭೆ )
  • ಶಿವರಾಜ್ ಸಿಂಗ್ ಚೌಹಾನ್ (ಮಧ್ಯಪ್ರದೇಶ )
  • ಪಿಯೂಷ್‌ ಗೋಯಲ್‌ (ಮಹಾರಾಷ್ಟ್ರ )
  • ಸ್ಮೃತಿ ಇರಾನಿ (ಸೋಲು, ರಾಜ್ಯಸಭೆಗೆ ಆಯ್ಕೆಯಾಗಬಹುದು)
  • ಜ್ಯೋತಿರಾದಿತ್ಯ ಸಿಂಧಿಯಾ (ಮಧ್ಯಪ್ರದೇಶ )
  • ಅರ್ಜುನ್ ಮುಂಡಾ (ಜಾರ್ಖಂಡ್ )
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ )
  • ಅನುರಾಗ್ ಠಾಕೂರ್ (ಹಿಮಾಚಲ ಪ್ರದೇಶ )
  • ಪರಶೋತ್ತಮ್ ರೂಪಲಾ (ರಾಜ್ಯಸಭೆ )
  • ಪ್ರಲ್ಹಾದ್ ಜೋಶಿ (ಕರ್ನಾಟಕ )
  • ಗಿರಿರಾಜ್ ಸಿಂಗ್ (ಬಿಹಾರ)
  • ಬಾನ್ಸೂರಿ ಸ್ವರಾಜ್ (ದೆಹಲಿ)
  • ಗಜೇಂದ್ರ ಸಿಂಗ್ ಶೇಖಾವತ್ (ರಾಜಸ್ಥಾನ)
  • ಭೂಪೇಂದ್ರ ಯಾದವ್ (ರಾಜಸ್ಥಾನ)

ಮೈತ್ರಿ ಪಕ್ಷದ ನಾಯಕರು

  • ಚಿರಾಗ್ ಪಾಸ್ವಾನ್ (ಎಲ್‌ಜೆಪಿ- ಬಿಹಾರ)
  • ಲಾಲನ್ ಸಿಂಗ್ (ಜೆಡಿಯು- ಬಿಹಾರ)
  • ಎಚ್.ಡಿ.ಕುಮಾರಸ್ವಾಮಿ (ಜೆಡಿಎಸ್- ಕರ್ನಾಟಕ)
  • ಅನುಪ್ರಿಯಾ ಪಟೇಲ್ (ಅಪ್ನಾದಳ್- ಉತ್ತರಪ್ರದೇಶ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)

ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 7) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ದೇಶ

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

Narendra Modi: ನರೇಂದ್ರ ಮೋದಿ ಅವರು ಇಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ದೆಹಲಿಯಲ್ಲಿ ಅಭೂತಪೂರ್ವ ಸಿದ್ಧತೆಯ ಜತೆಗೆ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೇಶ-ವಿದೇಶಗಳ ಸಾವಿರಾರು ಗಣ್ಯರು ಮೋದಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅಂದಹಾಗೆ, ಪ್ರಮಾಣವಚನದ ಶಿಷ್ಟಾಚಾರ ಹೇಗಿರುತ್ತದೆ? ಮೋದಿ ಇಂದು ಏನೆಲ್ಲ ಮಾಡಲಿದ್ದಾರೆ ಎಂಬುದರ ಸಂಕ್ಷಿಪ್ತ ಮಾಹಿತಿ ಹೀಗಿದೆ…

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 9) ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಜವಾಹರ ಲಾಲ್‌ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಖ್ಯಾತಿಗೆ ಭಾಜನರಾಗಲಿದ್ದಾರೆ. ಇಂದು ಸಂಜೆ 7.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ಜತೆಗೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಹಾಗಾದರೆ, ಇಡೀ ದಿನ ಏನೆಲ್ಲ ಕಾರ್ಯಕ್ರಮ ನಡೆಯಲಿವೆ? ಮೋದಿ ಏನೆಲ್ಲ ಮಾಡಲಿದ್ದಾರೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಗಾಂಧೀಜಿ ಸಮಾಧಿ ಸ್ಥಳಕ್ಕೆ ಭೇಟಿ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು ಮಹಾತ್ಮ ಗಾಂಧೀಜಿ ಅವರ ಸಮಾಧಿಸ್ಥಳವಾದ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಲಿದ್ದಾರೆ. ಇದಾದ ನಂತರ ತಮ್ಮ ರಾಜಕೀಯ ಗುರುವಾದ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳವಾದ ಸದೈವ ಅಟಲ್‌ಗೆ ಭೇಟಿ ನೀಡಿ, ಅವರಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಭವನ ಸಜ್ಜು

ಸಂಜೆ 7.15ಕ್ಕೆ ಕಾರ್ಯಕ್ರಮ

ಭಾನುವಾರ ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ. ಸುಮಾರು 8 ಸಾವಿರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಸಚಿವರಾಗಿ ಪ್ರಮಾಣವಚನ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜತೆಗೆ ಟಿಡಿಪಿಯ ರಾಮ್‌ ಮೋಹನ್‌ ನಾಯ್ಡು, ಲಾಲನ್‌ ಸಿಂಗ್‌, ಸಂಜಯ್‌ ಝಾ, ಜೆಡಿಯುನ ರಾಮನಾಥ್‌ ಠಾಕೂರ್‌, ಲೋಕ ಜನ ಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಗಿ ಬಂದೋಬಸ್ತ್‌

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೆಹಲಿಯ ಎಲ್ಲೆಡೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಸುಮಾರು 500 ಸಿಸಿಟಿವಿಗಳ ಕಣ್ಗಾವಲು ಇದೆ. ನೋ ಫ್ಲೈಯಿಂಗ್‌ ಜೋನ್‌ ಎಂದು ಘೋಷಿಸಿದ ಕಾರಣ ಯಾವುದೇ ಡ್ರೋನ್‌ಗಳ ಹಾರಾಟ ನಡೆಸುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಷ್ಟ್ರಪತಿ ಭವನಕ್ಕೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading
Advertisement
WI vs UGA
ಕ್ರೀಡೆ28 mins ago

WI vs UGA: ಉಂಗಾಡ ವಿರುದ್ಧ 134 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್​

Modi 3.0 Cabinet
Lok Sabha Election 202441 mins ago

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪೇಜಾವರ ಶ್ರೀ

Israel-Hamas Conflict
ವಿದೇಶ42 mins ago

Israel-Hamas Conflict: ಹಮಾಸ್‌ ಉಗ್ರರ ಸೆರೆಯಲ್ಲಿದ್ದ ನಾಲ್ವರ ರಕ್ಷಣೆ; 265 ದಿನಗಳ ನರಕಯಾತನೆ ಬಳಿಕ ತಾಯ್ನಾಡಿಗೆ ವಾಪಾಸ್‌

Uttarakaanda Movie in bhavana menon
ಸ್ಯಾಂಡಲ್ ವುಡ್1 hour ago

Uttarakaanda Movie: ‘ಉತ್ತರಕಾಂಡ’ದ ವೀರವ್ವ ಪಾತ್ರದಲ್ಲಿ ಭಾವನಾ‌ ಮೆನನ್!

AUS vs ENG
ಕ್ರೀಡೆ1 hour ago

AUS vs ENG: ಆಸೀಸ್​ ಬ್ಯಾಟಿಂಗ್​ ಆರ್ಭಟಕ್ಕೆ ಮಣಿದ ಹಾಲಿ ಚಾಂಪಿಯನ್​ ಇಂಗ್ಲೆಂಡ್​

Robbery Case
ಬೆಂಗಳೂರು1 hour ago

Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Aishwarya Arjun Marriage Haldi Ceremony
ಟಾಲಿವುಡ್1 hour ago

Aishwarya Arjun:  ಅರ್ಜುನ್ ಸರ್ಜಾ ಪುತ್ರಿಯ ಮದುವೆ ಸಮಾರಂಭ ಶುರು: ಹಳದಿ ಶಾಸ್ತ್ರದ ಫೋಟೊ ವೈರಲ್‌!

Viral Video
ದೇಶ1 hour ago

Viral Video: ರೈಲಿನಲ್ಲಿ ಊಟ ಸೇವಿಸುವ ಮುನ್ನ ಎಚ್ಚರ…ಎಚ್ಚರ..! ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

IND vs PAK
ಪ್ರಮುಖ ಸುದ್ದಿ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

Narendra Modi
ದೇಶ2 hours ago

Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌