Video Viral | ಅಯ್ಯಪ್ಪ ಮಾಲಾಧಾರಿ ಮೇಲೆ ಗುರುಸ್ವಾಮಿ ಗರಂ; ಪಾನಮತ್ತ ಮಾಲಾಧಾರಿಗೆ ಕಪಾಳಮೋಕ್ಷ - Vistara News

ಕರ್ನಾಟಕ

Video Viral | ಅಯ್ಯಪ್ಪ ಮಾಲಾಧಾರಿ ಮೇಲೆ ಗುರುಸ್ವಾಮಿ ಗರಂ; ಪಾನಮತ್ತ ಮಾಲಾಧಾರಿಗೆ ಕಪಾಳಮೋಕ್ಷ

ಪಾನಮತ್ತ ಅಯ್ಯಪ್ಪ ಮಾಲಾಧಾರಿಗೆ ಗುರುಸ್ವಾಮಿಯೊಬ್ಬರು ಕೋಪಗೊಂಡು ಕಪಾಳಮೋಕ್ಷ ಮಾಡಿರುವ ವಿಡಿಯೊ ವೈರಲ್‌ (Video Viral) ಆಗಿದೆ.

VISTARANEWS.COM


on

Drunk maladhari slapped
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಇಲ್ಲಿನ ಗೋಕುಲದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಪಾನಮತ್ತನಾಗಿ ಬಂದಿದ್ದ ಅಯ್ಯಪ್ಪ ಮಾಲಾಧಾರಿಗೆ ಗುರುಸ್ವಾಮಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ವ್ರತ ಪಾಲಿಸದೆ ಅಯ್ಯಪ್ಪಸ್ವಾಮಿ ಸನ್ನಿಧಾನಕ್ಕೆ ಕುಡಿದು ಬಂದವನ ವಿರುದ್ಧ ಅವರು ಕಿಡಿಕಾರಿದ್ದಾರೆ.

Video Viral  Drunk maladhari slapped

ಬಾಯಿಂದ ಬರುತ್ತಿದ್ದ ಮದ್ಯದ ವಾಸನೆಗೆ ಕೋಪಗೊಂಡ ಗುರುಸ್ವಾಮಿ ಮೋಹನ ಅವರು ಯುವಕನ ಕಪಾಳಕ್ಕೆ ಬಾರಿಸಿದ್ದಲ್ಲದೆ, ಧರಿಸಿದ್ದ ಅಯ್ಯಪ್ಪ ಮಾಲೆ ತೆಗೆದುಹಾಕಿ ಕಪ್ಪುಬಟ್ಟೆಯನ್ನೂ ಬಿಚ್ಚಿಸಿದ್ದಾರೆ. ಯುವಕನನ್ನು ದೇವಸ್ಥಾನದಿಂದ ಆಚೆ ಕಳಿಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 Video Viral Drunk maladhari slapped

ಶಬರಿಮಲೆಗೆ ಹೋಗುವ ವ್ರತಧಾರಿಯು 41 ದಿನಗಳ ಕಾಲ ವ್ರತಾಚರಣೆ ಮಾಡಬೇಕಾದರೆ ಸಾಕಷ್ಟು ನಿಯಮಗಳನ್ನು ಪಾಲಿಸಬೇಕು. ದುಶ್ಚಟಗಳಿಂದ ದೂರ ಉಳಿದು, ಮುಂಜಾನೆ ಎದ್ದು ತಣ್ಣೀರಿನಲ್ಲಿ ಮಿಂದು ಮಡಿಯಲ್ಲಿದ್ದು ಅಯ್ಯಪ್ಪನಾಮ ಜಪಿಸುತ್ತಿರಬೇಕು.

Video Viral Drunk maladhari slapped

ಮಾಂಸಾಹಾರ, ಮದ್ಯಪಾನ, ಧೂಮಪಾನ ಸೇವನೆ ಮಾಡಬಾರದು. ನಿತ್ಯ ಎರಡು ಬಾರಿ ದೇವಸ್ಥಾನಕ್ಕೆ ತೆರಳಿ ಅಯ್ಯಪ್ಪನ ದರ್ಶನ ಮಾಡಬೇಕು. ಹೀಗೆ ಹತ್ತು ಹಲವು ನಿಮಯಗಳಿದ್ದು, ಈ ನಿಯಮವನ್ನು ಮುರಿದಿದ್ದಕ್ಕೆ ಯುವಕನಿಗೆ ಗುರುಸ್ವಾಮಿ ಕಪಾಳಮೋಕ್ಷ ಮಾಡಿದ್ದಾರೆ.

ಇದನ್ನೂ ಓದಿ | Cold Feeling | ಕೆಲವರಿಗೆ ಮಾತ್ರ ಏಕೆ ಚಳಿ ಹೆಚ್ಚು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Kannada New Movie: ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಏಳು ಮಿಲಿಯನ್‌ಗೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ.

VISTARANEWS.COM


on

Chinnamma song from Krishnam Pranaya Sakhi is at 3rd position in All India YouTube trending list
Koo

ಬೆಂಗಳೂರು: ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಇತ್ತೀಚಿಗೆ ಬಿಡುಗಡೆಯಾಗಿತ್ತು. ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ “ಚಿನ್ನಮ್ಮ” ಹಾಡು ಬಿಡುಗಡೆಯಾದ (Kannada News Movie) 4 ದಿನಗಳಲ್ಲಿ ಏಳು ಮಿಲಿಯನ್‌ಗೂ ಅಧಿಕ ವೀಕ್ಷಣೆಗೊಂಡು 3ನೇ ಸ್ಥಾನದಲ್ಲಿದೆ.

ಕವಿರಾಜ್ ಅವರು ಬರೆದು ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ.

ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ “ಚಿನ್ನಮ್ಮ” ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಏಳು ಮಿಲಿಯನ್‌ಗೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಮೊದಲ ಸ್ಥಾನದಲ್ಲಿ ದಳಪತಿ ವಿಜಯ್ ಅವರ “ಗ್ರೇಟೆಸ್ಟ್ ಆಫ್ ಆಲ್ ಟೈಮ್” ಚಿತ್ರದ “ಚಿನ್ನ ಚಿನ್ನ ಕಣ್ಗಳ್” ಹಾಗೂ ಎರಡನೇ ಸ್ಥಾನದಲ್ಲಿ ಪ್ರಭಾಸ್ ನಟನೆಯ “ಕಲ್ಕಿ 2898 AD” ಚಿತ್ರದ “ಥೀಮ್ ಆಫ್ ಕಲ್ಕಿ” ಹಾಡು ಇದೆ. ಇದೇ ವೇಗದಲ್ಲಿ ವೀಕ್ಷಣೆಯಾಗುತ್ತಿದ್ದರೆ “ಚಿನ್ನಮ್ಮ” ಹಾಡು ಮೊದಲ ಸ್ಥಾನಕ್ಕೆ ಬರುವ ಸಾಧ್ಯತೆ ಇದೆ.

Continue Reading

ಬೆಂಗಳೂರು

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

DCET 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ ನಡೆಯಲಿದೆ.

VISTARANEWS.COM


on

By

DCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿಸಿಇಟಿ-2024ರ (DCET 2024) ಪರೀಕ್ಷೆ ಫಲಿತಾಂಶವನ್ನು (Result) ಕೆಇಎ (KEA) ಶನಿವಾರ ಮಧ್ಯಾಹ್ನ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ. ಒಟ್ಟು 17,483 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಡಿಪ್ಲೊಮಾ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಹೊಂದಿದ್ದು, ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ರ‍್ಯಾಂಕ್ ಪ್ರಕಟವಾಗಿರದಿದ್ದರೆ ಅಂತಹ ಅಭ್ಯರ್ಥಿಗಳು ಡಿಪ್ಲೊಮಾ ಅಂಕ ಮತ್ತು ಅಂಕಪಟ್ಟಿಯನ್ನು ಪಿಡಿಎಫ್ ಫಾರ್ಮ್ಯಟ್‌ನಲ್ಲಿ ಪ್ರಾಧಿಕಾರದ ಇಮೇಲ್ ಸಲ್ಲಿಸಿದಲ್ಲಿ ಅರ್ಹತೆಯನ್ನು ಪರಿಶೀಲಿಸಿ, ನಿಯಮಾನುಸಾರ ರ‍್ಯಾಂಕ್ ನೀಡಲಾಗುತ್ತದೆ.

ಡಿಸಿಇಟಿ: ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ

ಬೆಂಗಳೂರು: ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

ಇದನ್ನೂ ಓದಿ: DCET 2024 : ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರಿಗೆ ಜುಲೈ 1ರಂದು ವೈದ್ಯಕೀಯ ತಪಾಸಣೆ

ಯುಜಿಸಿಇಟಿ ದಾಖಲೆಗಳ ಆನ್ ಲೈನ್ ಪರಿಶೀಲನೆ; ವೆಬ್‌ಸೈಟ್ ನಲ್ಲಿ ಮಾಹಿತಿ ಲಭ್ಯ

ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್ ಸೇರಲು ಬಯಸಿ ಅಭ್ಯರ್ಥಿಗಳು ಯುಜಿಸಿಇಟಿ-2024 ಆನ್‌ಲೈನ್ ಅರ್ಜಿಯಲ್ಲಿ ಕ್ಲೇಮ್ ಮಾಡಿದ್ದ ವಿವಿಧ ಮೀಸಲಾತಿಗಳನ್ನು
ಪರಿಗಣಿಸಿ ಆನ್‌ಲೈನ್ ಮೂಲಕ ಪರಿಶೀಲನೆ ನಡೆಸಿದ್ದು, ಅದರ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS (ಸ್ಯಾಟ್ಸ್) ಸಂಖ್ಯೆ ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಪರಿಶೀಲಿಸಲಾಗಿದೆ. ಅದೇ ರೀತಿಯಾಗಿ, RD (ಆರ್‌ಡಿ) ಸಂಖ್ಯೆ ಆಧರಿಸಿ ಮೀಸಲಾತಿ (ಎಸ್‌ಸಿ, ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ) 371(ಜೆ), ಧಾರ್ಮಿಕ ಅಲ್ಪಸಂಖ್ಯಾತ, ಎನ್‌ಸಿಎಲ್‌ಸಿ (Non Creamy Layer Certificate) ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್ ಮೂಲಕ ಪರಿಶೀಲಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಶನಿವಾರ ತಿಳಿಸಿದ್ದಾರೆ. ಅರ್ಹತಾ ಕಂಡಿಕೆ ಇ, ಎಫ್, ಜಿ, ಹೆಚ್ ಮತ್ತು ಒ ಕ್ಲಾಸ್ ಗಳಿಗೆ ಅನ್ವಯಿಸುವಂತೆ ಆಯಾ ಇಲಾಖೆಯವರು ಪರಿಶೀಲನೆ ನಂತರ ನೀಡಿದ ಅರ್ಹತೆಯನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

SATS ಮತ್ತು RD ಸಂಖ್ಯೆ ಆಧರಿಸಿ ಮಾಡಲಾಗಿರುವ ಪರಿಶೀಲನೆಯ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್‌ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ, ವಿವರಗಳನ್ನು ನೋಡಬಹುದು. ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್‌ ಅನ್ನು ಸದ್ಯದಲ್ಲಿಯೇ ಸಕ್ರಿಯಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಹಂತಗಳು:

ಅಭ್ಯರ್ಥಿಗಳು ಪ್ರಕಟಿಸಲಾಗುವ ವೇಳಾಪಟ್ಟಿಯನುಸಾರ ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು; ಆದ್ಯತಾ ಕ್ರಮದಲ್ಲಿ ಆಸಕ್ತಿ ಇರುವ ಕಾಲೇಜು ಮತ್ತು ಕೋರ್ಸುಗಳ ಪಟ್ಟಿ ಸಿದ್ದಪಡಿಸಿಟ್ಟುಕೊಳ್ಳಬೇಕು; ಮೊದಲನೇ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದ ನಂತರ ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್‌ನಲ್ಲಿ ಆಯ್ಕೆ (options) ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಅವರು ವಿವರಿಸಿದರು.

ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಮ್, ಎನ್, ಜೆಡ್, ಗಳನ್ನು ನಮೂದಿಸಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಪರಿಶೀಲನೆಗೆ ಹಾಜರಾಗಲು ಪ್ರತ್ಯೇಕ ವೇಳಾಪಟ್ಟಿ ನೀಡಿ ಪರಿಶೀಲನೆ ಮಾಡಲಾಗಿರುತ್ತದೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ವೆರಿಫಿಕೇಶನ್ ಸ್ಲಿಪ್ ನೀಡಲಾಗಿದೆ. ಈ ಅಭ್ಯರ್ಥಿಗಳು ಮೇಲಿನ ಲಿಂಕ್‌ಅನ್ನು ಪರಿಶೀಲಿಸಬೇಕಾಗಿಲ್ಲ. ಆಫ್‌ಲೈನ್ ಪರಿಶೀಲನೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Continue Reading

ಕರ್ನಾಟಕ

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Vinay Kulkarni: ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಆರೋಪಗಳಿರುವ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿಷೇಧವಿದೆ.

VISTARANEWS.COM


on

vinay Kulkarni
Koo

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ‌ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಪ್ರವೇಶವನ್ನು ನ್ಯಾಯಾಲಯ ನಿರಾಕರಿಸಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಧಾರವಾಡ ಜಿಲ್ಲೆಯ ಪ್ರವೇಶ ಪಡೆದಿದ್ದರು. ಆದರೆ, ಈಗ ಮತ್ತಿ ಪ್ರವೇಶ ಕೋರಿ ಸಲ್ಲಿಸಿರುವ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಆರೋಪಿಯಾಗಿದ್ದಾರೆ. ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆವರೆಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಜೂನ್‌ 14ರಂದು ಹೈಕೋರ್ಟ್‌ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ. ಅಲ್ಲದೇ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿದೆ.

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

Continue Reading

ಕರ್ನಾಟಕ

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

VISTARANEWS.COM


on

Rakshana Vedike
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Continue Reading
Advertisement
Job Alert
ಉದ್ಯೋಗ17 mins ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

OTT Release
Latest22 mins ago

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Chinnamma song from Krishnam Pranaya Sakhi is at 3rd position in All India YouTube trending list
ಕರ್ನಾಟಕ27 mins ago

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Kanguva vs Alia Bhatt Kanguva finally set a date
ಕಾಲಿವುಡ್28 mins ago

Kanguva vs Alia Bhatt: ಕಂಗುವ- ಮಾರ್ಟಿನ್‌ ಜತೆ ಆಲಿಯಾ ಭಟ್‌ ಸಿನಿಮಾ ಕೂಡ ಕ್ಲ್ಯಾಶ್‌!

DCET 2024
ಬೆಂಗಳೂರು36 mins ago

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

vinay Kulkarni
ಕರ್ನಾಟಕ37 mins ago

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Sania Mirza
ಕ್ರೀಡೆ56 mins ago

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Mohamed Muizzu
ವಿದೇಶ57 mins ago

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Rakshana Vedike
ಕರ್ನಾಟಕ1 hour ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Heavy Rain
ದೇಶ1 hour ago

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ21 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌