Amit Shah | ಬಿಜೆಪಿಯವರು ಭಾರತ್‌ ಮಾತಾಕಿ ಜೈ ಅಂದ್ರೆ, ಕಾಂಗ್ರೆಸ್‌ನವರು ಸೋನಿಯಾ ಮಾತಾಕಿ ಜೈ ಅಂತಾರೆ: ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Amit Shah | ಬಿಜೆಪಿಯವರು ಭಾರತ್‌ ಮಾತಾಕಿ ಜೈ ಅಂದ್ರೆ, ಕಾಂಗ್ರೆಸ್‌ನವರು ಸೋನಿಯಾ ಮಾತಾಕಿ ಜೈ ಅಂತಾರೆ: ಸಿಎಂ ಬೊಮ್ಮಾಯಿ

Amit Shah | ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿಯ ಬೂತ್‌ ವಿಜಯ ಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

VISTARANEWS.COM


on

cm in bjp samavesha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಮಾತೆಯನ್ನು ಆರಾಧ್ಯ ದೇವರು ಎಂದು ತಿಳಿದವರು ಬಿಜೆಪಿಯವರು. ದೇಶ ಮೊದಲು ಎಂದು ತಿಳಿದು ಕೆಲಸ ಮಾಡುವವರು ನಾವು. ದೇಶಕ್ಕಾಗಿ ತ್ಯಾಗ ಮಾಡಲು ಸಿದ್ಧರಾದವರು ನಮ್ಮವರು. ಆದರೆ, ಕಾಂಗ್ರೆಸ್‌ ಕೇವಲ ಅಧಿಕಾರಕ್ಕಾಗಿ ಇರುವಂತಹ ರಾಷ್ಟ್ರೀಯ ಪಕ್ಷವಾಗಿದೆ. ನಮಗೆ ಮತ್ತು ಕಾಂಗ್ರೆಸ್‌ನವರಿಗೆ ಇರುವ ಒಂದೇ ವ್ಯತ್ಯಾಸವೆಂದರೆ ನಾವು ಭಾರತ್‌ ಮಾತಾಕಿ ಜೈ ಎಂದು ಹೇಳುತ್ತೇವೆ. ಕಾಂಗ್ರೆಸ್‌ನವರು ಸೋನಿಯಾ ಮಾತಾಕಿ ಜೈ ಎಂದು ಹೇಳುತ್ತಾರೆ. ಹೀಗಾಗಿ ನಮ್ಮ ಅವರ ನಡುವೆ ಇರುವ ವ್ಯತ್ಯಾಸ ಇಷ್ಟೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅರಮನೆ ಮೈದಾನದಲ್ಲಿ ಬಿಜೆಪಿಯ ಬೂತ್‌ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್‌ನವರ ಶ್ರದ್ಧೆ, ಭಕ್ತಿ ಏನಿದ್ದರೂ ಇಟಲಿ ನಾಯಕಿಗೆ ಮಾತ್ರ. ಆದರೆ, ನಮ್ಮ ಶ್ರದ್ಧಾ-ಭಕ್ತಿ ಏನಿದ್ದರೂ ಭಾರತ ಮಾತೆಗೆ. ದೇಶವನ್ನು ಉಳಿಸಿ, ಉಜ್ವಲ ಭವಿಷ್ಯವನ್ನು ಕೊಡುವುದು ಬಿಜೆಪಿಯಿಂದ ಮಾತ್ರ ಸಾಧ್ಯ. ಆ ಜವಾಬ್ದಾರಿ ನಮ್ಮೆಲ್ಲ ಕಾರ್ಯಕರ್ತರ ಮೇಲಿದೆ. ದೇಶದ ಭದ್ರತೆ, ಅಖಂಡತೆ, ಸುರಕ್ಷತೆಯ ಜತೆಗೆ ಆರ್ಥಿಕತೆ, ಸಾಮರಸ್ಯವನ್ನು ಬಿಜೆಪಿ ಕಾಪಾಡಲಿದೆ. ಕಡು ಬಡವರೂ ಸಹ ಸಮಾಜದಲ್ಲಿ ಮೇಲೆ ಬರುವಂತೆ ಮಾಡುವಲ್ಲಿ ಬಿಜೆಪಿ ಶ್ರಮ ವಹಿಸುತ್ತಿದೆ. ಈ ಕೆಲಸ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನೋಂದಣಿಯಾಗಿರುವ ಸುಮಾರು ೨ ಸಾವಿರಕ್ಕೂ ಹೆಚ್ಚು ಪಕ್ಷಗಳಿವೆ. ನಾವು ಯಾವುದಾದರೂ ಪಕ್ಷದ ಸದಸ್ಯರಾಗಿರಬಹುದಿತ್ತು. ಆದರೆ, ನಾವು ಏಕೆ ಬಿಜೆಪಿ ಸದಸ್ಯರಾಗಿದ್ದೇವೆ? ಅದಕ್ಕೆ ಕಾರಣ ಏನು? ನಾವು ಪಕ್ಷದ ಜವಾಬ್ದಾರಿಯನ್ನು ತೆಗೆದುಕೊಂಡು ಹೆಮ್ಮೆಯಿಂದ ಏಕೆ ಕೆಲಸವನ್ನು ಮಾಡುತ್ತಿದ್ದೇವೆ ಎಂಬುದನ್ನು ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ನಾವು ಸ್ಫೂರ್ತಿಯಿಂದ ಕೆಲಸ ಮಾಡಬಹುದಾಗಿದೆ. ಇಡೀ ಜಗತ್ತಿನಲ್ಲಿಯೇ ದೊಡ್ಡ ಪಕ್ಷವೆಂದರೆ ಬಿಜೆಪಿಯಾಗಿದೆ. ಚೀನಾದ ಕಮ್ಯುನಿಸ್ಟ್‌ ಪಕ್ಷಕ್ಕಿಂತ ಹೆಚ್ಚು ಕಾರ್ಯಕರ್ತರನ್ನು ನಾವು ಹೊಂದಿದ್ದೇವೆ. ಇದು ಕೇವಲ ಸಂಖ್ಯೆಯಲ್ಲಿ ಮಾತ್ರ ದೊಡ್ಡದಲ್ಲ, ವಿಚಾರದಲ್ಲಿಯೂ ದೊಡ್ಡದಿದೆ ಎಂದು ಹೇಳಿದರು.

Amit Shah

ಇದನ್ನೂ ಓದಿ | Amit Shah | ದೇವನಹಳ್ಳಿಯಲ್ಲಿ ಕೇಂದ್ರೀಯ ಬೇಹುಗಾರಿಕೆ ತರಬೇತಿ ಶಾಲೆ ಕಟ್ಟಡಕ್ಕೆ ಶಂಕುಸ್ಥಾಪನೆ

ನಮ್ಮ ನೀತಿ, ಸಿದ್ಧಾಂತ, ನಾಯಕತ್ವ ಹಾಗೂ ಕ್ರಿಯಾಶೀಲ ಸದಸ್ಯತ್ವ ನಮ್ಮ ಪಕ್ಷದಲ್ಲಿರುವುದರಿಂದ ಗೆಲುವು ಸಾಧ್ಯವಾಗುತ್ತಿದೆ. ಭಾರತವನ್ನು ಯಾವ ರೀತಿ ಮುನ್ನಡೆಸಬೇಕು ಎಂಬ ಸ್ಪಷ್ಟತೆ ಇರುವ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ನಮಗೆ ಇಂದು ನಾಯಕರಾಗಿದ್ದಾರೆ. ಆದರೆ, ಯುಪಿಎ ಸರ್ಕಾರದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯುತ್ತಿದ್ದ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ನಾವು ನೋಡಿದ್ದೇವೆ. ಆಗ ಭಾರತ ಹಿಂದೆ ಹೋಗುತ್ತಿತ್ತೇ ವಿನಃ ಎಂದೂ ಸಹ ಮುಂದೆ ಬಂದಿದ್ದನ್ನು ನಾವು ನೋಡಲಿಲ್ಲ. ಹಗರಣಗಳೇ ಹೆಚ್ಚಿದ್ದವು, ಭ್ರಷ್ಟಾಚಾರದಿಂದ ದೇಶ ಮತ್ತು ರಾಜ್ಯವನ್ನಾಳಿದ್ದರು. ಆದರೆ, ಈಗ ನಮಗೆ ಮೋದಿಯವರು ಪ್ರಧಾನಿಯಾಗಿದ್ದರಿಂದ ನಮಗೆ ಒಂದು ಸ್ಪಷ್ಟ ದಿಕ್ಸೂಚಿ ಸಿಕ್ಕಿದಂತಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇಂದು ನಮ್ಮ ಬಿಜೆಪಿ ಗೆಲುವಿಗೆ ದೊಡ್ಡ ಶಕ್ತಿಯಾಗಿ ಅಮಿತ್‌ ಶಾ ಅವರಿದ್ದಾರೆ. ಅವರ ದೃಢ ಸಂಕಲ್ಪವನ್ನು ನಾವು ನೋಡಿದ್ದೇವೆ. ತ್ರಿಬಲ್‌ ತಲಾಖ್‌ ಅನ್ನು ಹಿಂಪಡೆಯುವಾಗ ಅವರು ಕೈಗೊಂಡ ದೃಢ ಹೆಜ್ಜೆಯನ್ನು ಇಡೀ ದೇಶ ನೋಡಿದೆ. ಅದೇ ರೀತಿ ಆರ್ಟಿಕಲ್‌ ೩೭೦ ಅನ್ನು ಕಾಶ್ಮೀರದಲ್ಲಿ ಜಾರಿಗೆ ತಂದರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಾಲ ಹೆಚ್ಚು ಮಾಡಿದ್ದ ಸಿದ್ದರಾಮಯ್ಯ
ಕರ್ನಾಟಕ ಪ್ರಗತಿಪರವಾದ ರಾಜ್ಯವಾಗಿದ್ದರೂ ಹಿಂದುಳಿಯುವಂತೆ ಮಾಡಿದ್ದು ಕಾಂಗ್ರೆಸ್‌ ಆಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ೫ ವರ್ಷ ಕಾಲ ಆಡಳಿತ ನಡೆಸಿದರೂ ೨ ಲಕ್ಷ ಕೋಟಿ ರೂಪಾಯಿ ಸಾಲವನ್ನು ಮಾಡಿದ್ದರು. ಅವರು ಅಧಿಕಾರಕ್ಕೆ ಬರುವುದಕ್ಕೆ ಮುಂಚೆ ೧ ಲಕ್ಷ ಕೋಟಿ ಸಾಲ ಇತ್ತು. ಆದರೆ, ಅವರು ಬಂದ ಮೇಲೆ ೨ ಲಕ್ಷ ಕೋಟಿ ರೂಪಾಯಿಗೆ ಸಾಲವನ್ನು ಏರಿಸಿದ್ದರು. ಆಗೇನೂ ಕೋವಿಡ್‌ ಸಹಿತ ಏನೂ ಇರಲಿಲ್ಲ. ಈಗ ನಮಗೆ ಸಾಲ ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಕೋವಿಡ್‌ನಿಂದ ಇಡೀ ವಿಶ್ವವೇ ಆರ್ಥಿಕ ಹಿಂಜರಿತದಿಂದ ತತ್ತರಿಸಿ ಹೋಗಿದೆ. ಇಷ್ಟಾದರೂ ಅಭಿವೃದ್ಧಿ ನಿಲ್ಲಬಾರದು ಎಂಬ ಕಾರಣಕ್ಕೆ ನಾವು ಕಷ್ಟಪಟ್ಟು ಅಭಿವೃದ್ಧಿಯನ್ನು ಮಾಡಿದ್ದೇವೆ. ಕೋವಿಡ್‌ ಅನ್ನು ನಿಯಂತ್ರಣ ಮಾಡುವುದಲ್ಲದೆ, ಆರ್ಥಿಕ ಸಮೀಕರಣವನ್ನೂ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದರು.

ಇದನ್ನೂ ಓದಿ | Video Viral | ಅಯ್ಯಪ್ಪ ಮಾಲಾಧಾರಿ ಮೇಲೆ ಗುರುಸ್ವಾಮಿ ಗರಂ; ಪಾನಮತ್ತ ಮಾಲಾಧಾರಿಗೆ ಕಪಾಳಮೋಕ್ಷ

ಕಳೆದ ವರ್ಷ ನಮ್ಮ ಬಜೆಟ್‌ನಲ್ಲಿ ೭೧ ಸಾವಿರ ಕೋಟಿ ರೂಪಾಯಿ ಸಾಲವನ್ನು ಪಡೆದುಕೊಳ್ಳಬೇಕಿತ್ತು. ಆದರೆ, ನಾನು ಕೇವಲ ೬೧ ಸಾವಿರ ಕೋಟಿ ರೂಪಾಯಿ ಸಾಲದಲ್ಲಿ ಅದನ್ನು ನಿಭಾಯಿಸಿದ್ದೇನೆ. ೧೦ ಸಾವಿರ ಕೋಟಿ ಸಾಲವನ್ನು ಪಡೆಯದೇ ನಿಭಾಯಿಸಿದ್ದೇವೆ. ಕೇಂದ್ರ ಸರ್ಕಾರ ಹತ್ತು ಹಲವಾರು ಯೋಜನೆಗಳಿದ್ದು, ೬ ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಾಡಿದ್ದೇವೆ. ಜಲಜೀವನ್‌ ಮಿಷನ್‌ ಅನ್ನು ಮಾಡಿ ಪ್ರತಿ ಮನೆಗೆ ಕುಡಿಯುವ ನೀರನ್ನು ನಮ್ಮ ಕೇಂದ್ರ ಸರ್ಕಾರ ಮಾಡಿದೆ. ಸ್ವಾತಂತ್ರ್ಯ ಬಂದು ೭೫ ವರ್ಷವಾದರೂ ಯಾವುದೇ ಒಬ್ಬ ಪ್ರಧಾನ ಮಂತ್ರಿ ಪ್ರತಿ ಮನೆಗೆ ಕುಡಿಯುವ ನೀರನ್ನು ತಲುಪಿಸುತ್ತೇನೆ ಎಂದು ಹೇಳುವ ಸಾಹಸವನ್ನು ಮಾಡಿರಲಿಲ್ಲ. ಆದರೆ, ಆ ಕೆಲಸವನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಕಳೆದ ೨ ವರ್ಷದಲ್ಲಿ 8 ಕೋಟಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ೭೫ ವರ್ಷದಲ್ಲಿ ೨೫ ಲಕ್ಷ ಮನೆಗಳಿಗೆ ಮಾತ್ರ ನೀರು ಕೊಡಲಾಗಿತ್ತು. ಆದರೆ, ಕಳೆದೆರಡು ವರ್ಷದಲ್ಲಿ ೩೦ ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವನ್ನು ಒದಗಿಸಿದ್ದೇವೆ. ಈ ವರ್ಷ ೨೫ ಲಕ್ಷ ಮನೆಗಳಿಗೆ ನೀರಿನ ಸಂಪರ್ಕವನ್ನು ಒದಗಿಸಲಿದ್ದೇವೆ. ಈಗಾಗಲೇ ೧೪ ಲಕ್ಷ ಮನೆಗಳಿಗೆ ನೀರಿನ ಸಂಪರ್ಕವನ್ನು ಒದಗಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ೫ ವರ್ಷ ಹಾಗೂ ಸಮ್ಮಿಶ್ರ ಸರ್ಕಾರ ಒಂದೂವರೆ ವರ್ಷ ಅಧಿಕಾರ ನಡೆಸಿ ಭ್ರಷ್ಟಾಚಾರವನ್ನೇ ಮಾಡಿತ್ತು. ನಾವು ಅದನ್ನೆಲ್ಲವನ್ನೂ ಸ್ವಚ್ಛ ಮಾಡುತ್ತಿರುವುದರಿಂದ ಹತಾಶರಾಗಿ ನಮ್ಮ ಮೇಲೆ ಮಾತನಾಡುತ್ತಿದ್ದಾರೆ. ಸರಿಯಾದ ಪುರಾವೆ ಕೊಡಿ ನಾವು ಸಿದ್ಧರಿದ್ದೇವೆ, ತನಿಖೆಯನ್ನು ಮಾಡಿಸೋಣ ಎಂದು ನಾನು ಹೇಳಿದೆ. ಆದರೆ, ಇದುವರೆಗೂ ಯಾರೂ ಮುಂದೆ ಬಂದಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ೫೯ ಕೇಸ್‌ಗಳು ಎಸಿಬಿಗೆ ಹೋಗಿತ್ತು. ಎಲ್ಲದಕ್ಕೂ ಬಿ ರಿಪೋರ್ಟ್‌ ಕೊಟ್ಟರು. ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಎಸಿಬಿಯನ್ನು ಸೃಷ್ಟಿ ಮಾಡಿ, ಲೋಕಾಯುಕ್ತವನ್ನು ಮುಚ್ಚಿದರು. ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ತಮ್ಮ ಹಗರಣಗಳು ಗೊತ್ತಾಗುತ್ತದೆ ಎಂಬ ಭಯದಲ್ಲಿಯೇ ಲೋಕಾಯುಕ್ತವನ್ನು ಮುಚ್ಚಿದರು ಎಂದು ಸಿಎಂ ಬೊಮ್ಮಾಯಿ ಆರೋಪ ಮಾಡಿದರು.

ಇದನ್ನೂ ಓದಿ | Amit Shah | ರಾಹುಲ್‌ ಗಾಂಧಿ ಸೋಲಿನ ಸರದಾರ, ಕಾಂಗ್ರೆಸ್‌ ದಿಕ್ಕಾಪಾಲು; ಸಿದ್ದು ಮನೆಗೆ, ಕನಕಪುರಕ್ಕೆ ಮಾತ್ರ ಡಿಕೆಶಿ ಲೀಡರ್‌: ಅಶೋಕ್ ಗೇಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Davanagere News: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

Karnataka police
Koo

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಮುಸ್ಲಿಂ ಯುವಕನ ಮೇಲೆಯೇ ಹಲವು ಮುಸ್ಲಿಂ ಯುವಕರು ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿ, ಹಲ್ಲೆ ಮಾಡಿದ ಪ್ರಕರಣವನ್ನು (Davanagere News) ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೇ 31ರಂದು ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಬಳಿಯ ಖಾಲಿ‌ ಕೊಠಡಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಈಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಹರಿಹರದ ಕಾಳಿದಾಸ ನಗರದ ನಿವಾಸಿ ಮಹಮ್ಮದ್ ಅಲಿ (26) ಮೇಲೆ ಏಳು ಯುವಕರು ಹಲ್ಲೆ ನಡೆಸಿದ್ದರು. ಆಸೀಫ್, ಗೌಸ್, ತೌಫಿಕ್, ಸಯ್ಯದ್, ದಾದು, ಚೋಟು, ಫಿರೋಜ್‌ ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ಏಳು ಜನರಲ್ಲಿ ನಾಲ್ವರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದಾರೆ.

ಖಾಲಿ ಕೊಠಡಿಯಲ್ಲಿ ಯುವಕನ ಮೇಲೆ ಆರೋಪಿಗಳು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಸಾಮಾಜಿಕ‌ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೊ ವೈರಲ್‌ ಆಗಿತ್ತು. ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾರಣ ಕ್ರಮ ತೆಗೆದುಕೊಳ್ಳುವಂತೆ ಜನ ಆಗ್ರಹಿಸಿದ್ದರು.

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Continue Reading

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading

ದಾವಣಗೆರೆ

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Davanagere News: ಹೊನ್ನಾಳಿ ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kittur Rani Chennamma Residential School
Koo

ಹೊನ್ನಾಳಿ: ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು (Davanagere News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ, ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಪರಿಸರವು ಸಕಲ ಜೀವರಾಶಿಗಳಿಗೂ ಆಶ್ರಯ ನೀಡಿದೆ. ಎಲ್ಲರೂ ಪರಿಸರ ಉಳಿಸಿ, ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕಾಳಜಿ ಮೂಡಿಸಬೇಕು ಎಂದ ಅವರು, ಗಿಡಗಳನ್ನು ನೆಡುವುದರ ಜತೆಗೆ ಅದನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಕೆ.ಆರ್. ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

Physical Abuse: ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Physical Abuse
Koo

ಮೈಸೂರು: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.

2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್‌ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ
ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.

ಇದನ್ನೂ ಓದಿ | Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ

ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ‌ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
NED vs RSA
T20 ವಿಶ್ವಕಪ್3 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ4 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ5 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ5 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ5 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ5 hours ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ5 hours ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ6 hours ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ6 hours ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ6 hours ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌