Year End 2022 | ಕಾಶ್ಮೀರದಾದ್ಯಂತ 2022ರಲ್ಲಿ 172 ಉಗ್ರರ ಹತ್ಯೆ, ಪಂಡಿತರು ಸೇರಿ 29 ನಾಗರಿಕರ ಬಲಿ - Vistara News

New year 2023

Year End 2022 | ಕಾಶ್ಮೀರದಾದ್ಯಂತ 2022ರಲ್ಲಿ 172 ಉಗ್ರರ ಹತ್ಯೆ, ಪಂಡಿತರು ಸೇರಿ 29 ನಾಗರಿಕರ ಬಲಿ

ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಎನ್‌ಕೌಂಟರ್‌ ಮಾಡುವ ದಿಸೆಯಲ್ಲಿ ಭದ್ರತಾ ಸಿಬ್ಬಂದಿಗೆ 2022 ಯಶಸ್ವಿ (Year End 2022) ವರ್ಷ ಎಂದು ಕಣಿವೆಯ ಪೊಲೀಸರು ಹೇಳಿದ್ದಾರೆ.

VISTARANEWS.COM


on

Rajouri Terror Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಕೆಲವೇ ಗಂಟೆಗಳಲ್ಲಿ ಜಗತ್ತು ಹೊಸ ವರ್ಷಕ್ಕೆ (Year End 2022) ಕಾಲಿಡಲಿದೆ. ಇಂತಹ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯು 2022ರಲ್ಲಿ ಜಮ್ಮು-ಕಾಶ್ಮೀರದಾದ್ಯಂತ ಕಾರ್ಯಾಚರಣೆ ಕೈಗೊಂಡು ಉಗ್ರರನ್ನು ಹತ್ಯೆ ಮಾಡಿರುವ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ, ಉಗ್ರರನ್ನು ಹೊಡೆದುರುಳಿಸುವ ವಿಚಾರದಲ್ಲಿ 2022 ಯಶಸ್ವಿ ವರ್ಷ ಎಂದು ಹೇಳಿದ್ದಾರೆ.

“ಜಮ್ಮು-ಕಾಶ್ಮೀರದಾದ್ಯಂತ 2022ರಲ್ಲಿ ಭದ್ರತಾ ಸಿಬ್ಬಂದಿಯು 93 ಯಶಸ್ವಿ ಕಾರ್ಯಾಚರಣೆಗಳನ್ನು ಕೈಗೊಂಡು 172 ಉಗ್ರರನ್ನು ಎನ್‌ಕೌಂಟರ್‌ ಮಾಡಿದೆ. ಇವರಲ್ಲಿ 42 ಉಗ್ರರು ವಿದೇಶದವರಾಗಿದ್ದಾರೆ. ಲಷ್ಕರೆ ತಯ್ಬಾ, ಇದರ ಅಂಗಸಂಸ್ಥೆ ದಿ ರೆಸಿಸ್ಟಂಟ್‌ ಫ್ರಂಟ್‌ನ 108, ಜೈಶೆ ಮೊಹಮ್ಮದ್‌ 35, ಹಿಜ್ಬುಲ್‌ ಮುಜಾಹಿದ್ದೀನ್‌ 22, ಅಲ್‌-ಬದ್ರ್‌ ಉಗ್ರ ಸಂಘಟನೆಯ ನಾಲ್ಕು ಉಗ್ರರನ್ನು ಒಳಗೊಂಡು 172 ಉಗ್ರರನ್ನು ಹತ್ಯೆಗೈಯಲಾಗಿದೆ” ಎಂದು ಕಾಶ್ಮೀರ ಎಡಿಜಿಪಿ ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಹೊಸ ಉಗ್ರರಿಗಿಲ್ಲ ಉಳಿಗಾಲ
“ಹೊಸದಾಗಿ ಉಗ್ರ ಸಂಘಟನೆಗಳಿಗೆ ಸೇರುವವರ ಜೀವಿತಾವಧಿಯನ್ನೇ ಭದ್ರತಾ ಸಿಬ್ಬಂದಿ ಇಳಿಕೆ ಮಾಡಿದ್ದಾರೆ. ಉಗ್ರ ಸಂಘಟನೆಗೆ ಸೇರಿದ ಒಂದೇ ತಿಂಗಳಲ್ಲಿ ಹತ್ಯೆಗೀಡಾದ ಉಗ್ರರ ಪ್ರಮಾಣ ಶೇ.89ರಷ್ಟಿದೆ. ಒಂದು ವರ್ಷದಲ್ಲಿ 100 ಯುವಕರು ಉಗ್ರ ಸಂಘಟನೆ ಸೇರಿದ್ದು, 2021ಕ್ಕೆ ಹೋಲಿಸಿದರೆ ಇದರ ಪ್ರಮಾಣ ಶೇ.37ರಷ್ಟು ಕುಸಿತವಾಗಿದೆ” ಎಂದು ತಿಳಿಸಿದ್ದಾರೆ.

6 ಹಿಂದುಗಳು ಸೇರಿ 21 ಸ್ಥಳೀಯರ ಹತ್ಯೆ
“ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಗಳಲ್ಲಿ 2022ರಲ್ಲಿ ಆರು ಹಿಂದುಗಳು ಸೇರಿ 21 ಸ್ಥಳೀಯರು ಹತರಾಗಿದ್ದಾರೆ. ಇವರಲ್ಲಿ ಮೂವರು ಕಾಶ್ಮೀರಿ ಪಂಡಿತರಾಗಿದ್ದಾರೆ. ಎಂಟು ಜನ ಬೇರೆ ರಾಜ್ಯದವರನ್ನು ಸೇರಿಸಿದರೆ ಒಂದು ವರ್ಷದಲ್ಲಿ 29 ನಾಗರಿಕರ ಹತ್ಯೆಯಾದಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ | Terrorists Killed | ಜಮ್ಮುವಿನಲ್ಲಿ ನಾಲ್ವರು ಉಗ್ರರ ಹತ್ಯೆ; ಭದ್ರತಾ ಪಡೆ ಗುಂಡಿನ ದಾಳಿಗೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
Karnataka weather Forecast
ಮಳೆ52 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ2 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ7 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ8 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ8 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ8 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು8 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ8 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ52 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ17 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು20 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌