Finance Horoscope 2023 | ಜನವರಿಯಲ್ಲಿ ಯಾವೆಲ್ಲಾ ರಾಶಿಯವರಿಗೆ ಆರ್ಥಿಕವಾಗಿ ಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Finance Horoscope 2023 | ಜನವರಿಯಲ್ಲಿ ಯಾವೆಲ್ಲಾ ರಾಶಿಯವರಿಗೆ ಆರ್ಥಿಕವಾಗಿ ಶುಭ ಫಲಗಳಿವೆ?

ಜನವರಿಯಲ್ಲಿ ದ್ವಾದಶ ರಾಶಿಗಳ ಆರ್ಥಿಕ ಸ್ಥಿತಿ ಹೇಗಿರುತ್ತದೆ? ( Finance Horoscope 2023) ಯಾವೆಲ್ಲಾ ರಾಶಿಯವರಿಗೆ ಶುಭ ಫಲಗಳಿವೆ ಎಂಬುದನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Finance Horoscope 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ಯಾಲೆಂಡರ್ ವರ್ಷ ಆರಂಭವಾಗುತ್ತಿದ್ದಂತೆಯೇ ಎಲ್ಲರಿಗೂ ವಾರ್ಷಿಕ ಭವಿಷ್ಯವನ್ನು ತಿಳಿದುಕೊಳ್ಳುವ ಕುತೂಹಲ. ಎಲ್ಲ ವಿಷಯಗಳಿಗಿಂತ ಮುಖ್ಯವಾಗಿ ನಮ್ಮ ಆರ್ಥಿಕ ಸ್ಥಿತಿ ಹೊಸ ವರ್ಷದಲ್ಲಿ (Finance Horoscope 2023) ಹೇಗಿರುತ್ತದೆ ಎಂದು ತಿಳಿಯಲು ಎಲ್ಲರೂ ಉತ್ಸುಕರಾಗಿರುತ್ತಾರೆ. 2023ರ ಜನವರಿಯಲ್ಲಿ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯ ಹೇಗಿರುತ್ತದೆ ಎಂಬುದನ್ನು ತಿಳಿಯೋಣ.

ಈ ವರ್ಷದ ಮೊದಲ ತಿಂಗಳು ಹಲವು ರಾಶಿಯವರಿಗೆ ಅರ್ಥಿಕವಾಗಿ ಅತ್ಯಂತ ಶುಭದ ಸಮಯವಾಗಿದೆ. ಹಾಗಾದರೆ ಜನವರಿಯಲ್ಲಿ ಯಾವೆಲ್ಲ ರಾಶಿಗಳಿಗೆ ಧನಲಕ್ಷ್ಮೀ ಕೃಪೆ ಹೆಚ್ಚಾಗಿರಲಿದೆ ಎಂಬುದನ್ನು ಕೂಡ ಇಲ್ಲಿ ನೀಡಲಾಗಿದೆ.

Horoscope Today

ಮೇಷ: ಜನವರಿ 2023ರಲ್ಲಿ ಮೇಷ ರಾಶಿಯವರ ಖರ್ಚು ಅಧಿಕವಾಗಿರಲಿದೆ. ಆದರೆ ಹಲವು ಆದಾಯದ ಮೂಲಗಳಿಂದ ಹಣ ಬರುತ್ತಲೇ ಇರುತ್ತದೆ. ಈ ತಿಂಗಳು ಹಣ ಹೂಡಿಕೆ ಮಾಡಿ ಉತ್ತಮ ಲಾಭವನ್ನು ಪಡೆಯಬಹುದಾಗಿದೆ. ಖರ್ಚಿನ ಜೊತೆ ಜೊತೆಗೆ ಹಣ ಉಳಿಕೆಯ ಬಗ್ಗೆಯೂ ಯೋಚಿಸುವುದು ಉತ್ತಮ. ಒಟ್ಟಾರೆ ಜನವರಿಯಲ್ಲಿ ಆರ್ಥಿಕ ಸ್ಥಿತಿ ಅತ್ಯಂತ ಉತ್ತಮವಾಗಿರಲಿದೆ.

ವೃಷಭ: ಹಣದ ವಿಷಯದಲ್ಲಿ ಈ ರಾಶಿಯವರು ಸಕಾರಾತ್ಮಕ ಪರಿಣಾಮವನ್ನು ನಿರೀಕ್ಷಿಸಬಹುದು. ವರ್ಷದ ಮೊದಲ ತಿಂಗಳ ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರಲಿದೆ. ಈ ತಿಂಗಳು ಹಣದ ಹರಿವು ಚೆನ್ನಾಗಿಯೇ ಇರಲಿದೆ. ಈ ತಿಂಗಳು ಮಾಡಿದ ಹೂಡಿಕೆ ಮುಂದೊಂದು ದಿನ ಲಾಭ ನೀಡಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಲಾಭ ಸಿಗುವ ಸಂಭವ ಹೆಚ್ಚಿದೆ. ಒಟ್ಟಾರೆಯಾಗಿ ಹೇಳಬೇಕಂದರೆ ಜನವರಿಯಲ್ಲಿ ಆದಾಯ ಹೆಚ್ಚಲಿದೆ.

ಮಿಥುನ: ಮಿಥುನ ರಾಶಿಯವರಿಗೆ ಸಾಧಾರಣವಾಗಿರಲಿದೆ. ಅಡ್ಡದಾರಿಯಿಂದ ಹಣ ಗಳಿಸುವುದರಿಂದ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ರಾಶಿಯವರು ಲಾಟರಿ, ಜೂಜು ಮತ್ತು ಶೇರ್ ಮಾರ್ಕೆಟ್‌ಗಳಲ್ಲಿ ಹೂಡಿಕೆ ಮಾಡಲು ಜನವರಿ ತಿಂಗಳು ಅನುಕೂಲಕರವಾಗಿಲ್ಲ. ಹಾಗಾಗಿ 2023ರ ಜನವರಿಯಲ್ಲಿ ಯಾವುದೇ ಹೂಡಿಕೆ ಮಾಡದಿರುವುದು ಉತ್ತಮ.

ಕಟಕ: ಜನವರಿ 2023ರಲ್ಲಿ ಕಟಕ ರಾಶಿಯವರ ಆರ್ಥಿಕ ಸ್ಥಿತಿಯು ಶುಭವಾಗಿರಲಿದೆ. ಲೇಖನ, ಕವಿತೆ ಅಥವಾ ಇನ್ನಿತರ ರಚನಾತ್ಮಕ ಕ್ಷೇತ್ರದಲ್ಲಿ ಇರುವವರಿಗೆ ಜನವರಿ ತಿಂಗಳು ಅತ್ಯಂತ ಉತ್ತಮವಾಗಿರಲಿದೆ. ವೃತ್ತಿ ಬದಲಿಸುವ ಬಗ್ಗೆ ಯೋಚಿಸುತ್ತಿದ್ದರೆ ಈ ತಿಂಗಳು ಉತ್ತಮವಾಗಿದೆ. ಜೊತೆಗೆ ಆದಾಯ ಹೆಚ್ಚುವ ಯೋಗವಿದೆ.

ಸಿಂಹ : ಸಿಂಹರಾಶಿಯವರ ಆರ್ಥಿಕ ಸ್ಥಿತಿ ಈ ತಿಂಗಳು ಸಾಧಾರಣವಾಗಿರಲಿದೆ. ಈ ತಿಂಗಳು ಹೂಡಿಕೆಗಳಲ್ಲಿ ನಷ್ಟವಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಈ ತಿಂಗಳು ಜೂಜು, ಶೇರ್ ಮಾರ್ಕೆಟ್‌ಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಆಲೋಚನೆ ಮಾಡದಿರುವುದು ಉತ್ತಮ. ಹಣ ಉಳಿಸಲು ಖರ್ಚಿನ ಬಗ್ಗೆ ನಿಗಾ ವಹಿಸುವುದೊಂದೇ ದಾರಿಯಾಗಿದೆ.

ಕನ್ಯಾ : ಕನ್ಯಾ ರಾಶಿಯವರ ಆರ್ಥಿಕ ಸ್ಥಿತಿ ಜನವರಿಯ ಮೂರನೇ ವಾರದಲ್ಲಿ ಉತ್ತಮವಾಗುತ್ತದೆ. ಅಲ್ಲಿಯ ತನಕ ಕಂಪನಿ ನಡೆಸುವವರಾಗಿದ್ದರೆ, ಅಂಥವರಿಗೆ ಅಧಿಕ ಲಾಭ ಸಿಗುವ ಸಂಭವ ಕಡಿಮೆ ಇದೆ. ಅದೇ ಜನವರಿ ಮೂರನೇ ವಾರದ ನಂತರ ಆರ್ಥಿಯ ಸ್ಥಿತಿ ಗಟ್ಟಿಯಾಗುವುದರ ಜೊತೆಗೆ ಪಿತ್ರಾರ್ಜಿತ ಸಂಪತ್ತಿಗೆ ಸಂಬಂಧಿಸಿದ ವ್ಯಾಪಾರವನ್ನು ಮಾಡಿದಲ್ಲಿ ಲಾಭ ದೊರಕಲಿದೆ. ಉದ್ಯೋಗ ಮಾಡುತ್ತಿರುವವರಿಗೆ ಸಹ ಈ ಸಮಯ ಉತ್ತಮವಾಗಿದೆ.

Horoscope Today

ತುಲಾ: ತುಲಾ ರಾಶಿಯವರ ಆರ್ಥಿಕ ಸ್ಥಿತಿ ಜನವರಿಯಲ್ಲಿ ಅತ್ಯಂತ ಉತ್ತಮವಾಗಿರಲಿದೆ. ಸರಿಯಾಗಿ ಯೋಚಿಸಿ ಖರ್ಚಿನ ಬಗ್ಗೆ ನಿಗಾ ವಹಿಸಿದರೆ ಆರ್ಥಿಕ ಸ್ಥಿತಿಯಲ್ಲಿ ಸಕಾರಾತ್ಮಕ ಪರಿಣಾಮ ಕಾಣ ಸಿಗುತ್ತದೆ. ಆದಾಯಕ್ಕೆ ಅನೇಕ ಮೂಲಗಳಿರುತ್ತದೆ. ಈ ತಿಂಗಳ ಕೊನೆಯ ಎರಡು ವಾರಗಳು ಆರ್ಥಿಕವಾಗಿ ಶುಭವಾಗಿರಲಿವೆ.

ವೃಶ್ಚಿಕ : ಈ ತಿಂಗಳು ಹನ್ನೆರಡನೇ ಮನೆಯಲ್ಲಿ ಕೇತು ಗ್ರಹ ಸ್ಥಿತವಾಗಿರುವುದಲ್ಲದೇ, ಅದೇ ಮನೆಯ ಮೇಲೆ ರಾಹು ಗ್ರಹದ ದೃಷ್ಟಿ ಬೀಳುತ್ತದೆ. ಆದ ಕಾರಣ ಖರ್ಚು ಅತ್ಯಂತ ಹೆಚ್ಚಾಗುವ ಸಂಭವವಿದೆ. ಹಾಗಾಗಿ ಅನಗತ್ಯ ವಸ್ತುಗಳಿಗೆ ಖರ್ಚು ಮಾಡದಿರುವುದು ಉತ್ತಮ. ಹಣವನ್ನು ಖರ್ಚು ಮಾಡುವ ಮೊದಲು ಸರಿಯಾಗಿ ಯೋಚಿಸುವುದು ಅಗತ್ಯವಾಗಿದೆ. ಹೀಗೆ ಮಾಡುವುದರಿಂದ ಮುಂದೆ ಉತ್ತಮ ಪರಿಣಾಮಗಳನ್ನು ಕಾಣ ಬಹುದಾಗಿದೆ.

ಧನು : ಧನು ರಾಶಿಯ ವ್ಯಕ್ತಿಗಳಿಗೆ ವರ್ಷದ ಮೊದಲ ತಿಂಗಳು ಸಾಧಾರಣವಾಗಿರಲಿದೆ. ಉಳಿದೆಲ್ಲ ತಿಂಗಳುಗಳು ಈ ರಾಶಿಯವರಿಗೆ ಉತ್ತಮವಾಗಿರಲಿದೆ. ಹಾಗಾಗಿ ಜನವರಿ ತಿಂಗಳಿನಲ್ಲಿ ಆದಾಯಕ್ಕೆ ತಕ್ಕಂತೆ ಖರ್ಚನ್ನು ಸರಿದೂಗಿಸಿಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ಈ ರಾಶಿಯ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಸಾಲ ಮಾಡುವುದು ಒಳ್ಳೆಯದಲ್ಲ.

ಮಕರ: ಈ ರಾಶಿಯವರ ಜಾತಕದ ಹನ್ನೊಂದನೇ ಮನೆಗೆ ಮಂಗಳನ ದೃಷ್ಟಿ ಬೀಳುತ್ತಿರುವುದರಿಂದ ಜನವರಿಯಲ್ಲಿ ಈ ವ್ಯಕ್ತಿಗಳ ಆರ್ಥಿಕ ಸ್ಥಿತಿ ಅತ್ಯಂತ ಉತ್ತಮವಾಗಿರಲಿದೆ. ಈ ತಿಂಗಳು ಆದಾಯ ಹೆಚ್ಚುವ ಸಾಧ್ಯತೆ ಸಹ ಇದೆ. ಗ್ರಹಗಳ ಸ್ಥಿತಿ ಉತ್ತಮವಾಗಿರುವುದರಿಂದ ಈ ರಾಶಿಯವರು ಉತ್ತಮ ಆಯವ್ಯಯವನ್ನು ಹಾಕಿಕೊಳ್ಳುವುದರಲ್ಲಿ ಸಮರ್ಥರಾಗುತ್ತಾರೆ. ಅದರಂತೆಯೇ ಖರ್ಚು ಸಹ ಮಾಡುತ್ತಾರೆ.

ಕುಂಭ: ಈ ರಾಶಿಯವರಿಗೆ ಹಿಂದೆ ಮಾಡಿದ ಹೂಡಿಕೆಗಳಿಗೆ ಈ ಬಾರಿ ಉತ್ತಮ ರಿಟರ್ನ್ಸ್ ಬರುವ ಸಾಧ್ಯತೆ ಇದೆ. ಕುಂಭ ರಾಶಿಯವರಿಗೆ ಆದಾಯದ ಜೊತೆಗೆ ಖರ್ಚು ಅಧಿಕವಾಗುವ ಸಂಭವವಿದೆ. ಆದಾಯ ಮತ್ತು ಖರ್ಚನ್ನು ಸರಿದೂಗಿಸುವುದು ಕಷ್ಟವಾಗಬಹುದು. ಹಾಗಾಗಿ ಖರ್ಚಿನ ಬಗ್ಗೆ ನಿಗಾ ವಹಿಸುವುದು ಉತ್ತಮ.

ಮೀನ: ಈ ರಾಶಿಯ ವ್ಯಕ್ತಿಗಳಿಗೆ ಬೇರೊಂದು ಆದಾಯದ ಮೂಲ ಸಿಗುವ ಸಾಧ್ಯತೆ ಇದೆ. ಇದು ಮೀನ ರಾಶಿಯವರಿಗೆ ಲಾಭದಾಯಕವೆಂದು ಸಾಬೀತಾಗುತ್ತದೆ. ಆದರೆ ಕೆಲಸದಲ್ಲಿ ಒತ್ತಡ ಹೆಚ್ಚಾಗಿರುವಂತೆ ಭಾಸವಾಗುತ್ತದೆ. ಹಾಗಾಗಿ ಸರಿಯಾದ ಸಮಯದಲ್ಲಿ ಕೆಲಸ ಮಾಡಿಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ನಿರೀಕ್ಷಿಸಿದಷ್ಟು ಲಾಭ ಸಿಗುವುದಿಲ್ಲ.

ಇದನ್ನೂ ಓದಿ | Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Prajwal Revanna Case: ‌ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಜಾಮೀನಿಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ವಾದ ಮಂಡಿಸಲು ಅವರ ವಕೀಲರ ತಂಡ ಸಜ್ಜಾಗಿದೆ. ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ.

VISTARANEWS.COM


on

Rape victim kidnapping in Prajwal Revanna Case What are the options before HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Anand Mahindra: ದೆಹಲಿಯಲ್ಲಿ ಜಸ್‌ಪ್ರೀತ್‌ ಎಂಬ ಬಾಲಕನು ತನ್ನ ತಂದೆ ತೀರಿಕೊಂಡ ಬಳಿಕ ಕುಟುಂಬಕ್ಕೆ ನೆರವಾಗಲಿ ಎಂದು ಶಾಲೆ ಬಿಟ್ಟು, ಬೀದಿ ಬದಿ ಊಟ, ತಿಂಡಿಯ ಅಂಗಡಿ ಇಟ್ಟುಕೊಂಡಿದ್ದ. ಈ ವಿಡಿಯೊ ವೈರಲ್‌ ಆಗುತ್ತಲೇ ಆತನ ನೆರವಿಗೆ ಧಾವಿಸುವ ಮೂಲಕ ಆನಂದ್‌ ಮಹೀಂದ್ರಾ ಮಾನವೀಯತೆ ಮೆರೆದಿದ್ದಾರೆ. ಬಾಲಕನ ಶಿಕ್ಷಣಕ್ಕೆ ನೆರವು ನೀಡಲಾಗುವುದು ಎಂದು ಆನಂದ್‌ ಮಹೀಂದ್ರಾ ಘೋಷಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Anand Mahindra
Koo

ನವದೆಹಲಿ: ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್‌ ಮಹೀಂದ್ರಾ (Anand Mahindra) ಅವರು ಉದ್ಯಮಿಯಾಗಿ, ಸ್ಫೂರ್ತಿದಾಯಕ ಮಾತುಗಳಿಂದ ಜನರಿಗೆ ಪ್ರೇರೇಪಣೆ ನೀಡುವ ಜತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಖ್ಯಾತಿ ಗಳಿಸಿದ್ದಾರೆ. ದೇಶಕ್ಕಾಗಿ ಸೇವೆ ಸಲ್ಲಿಸಿದವರು, ಕಷ್ಟದಲ್ಲಿರುವವರು ಸೇರಿ ಹಲವರಿಗೆ ಅವರು ಆಗಾಗ ಸಹಾಯ ಮಾಡುತ್ತಲೇ ಇರುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲಿ (Delhi) ತಂದೆ ತೀರಿಕೊಂಡ ಬಳಿಕ ಶಿಕ್ಷಣ ತೊರೆದು, ಬೀದಿ ಬದಿ ಗೂಡಂಗಡಿ ಇಟ್ಟಿದ್ದ ಬಾಲಕನಿಗೆ ಆನಂದ್‌ ಮಹೀಂದ್ರಾ ನೆರವಿನ ಹಸ್ತ ಚಾಚಿದ್ದಾರೆ.

ಹೌದು, ಜಸ್‌ಪ್ರೀತ್‌ ಎಂಬ ಬಾಲಕನು ತನ್ನ ತಂದೆ ತೀರಿಕೊಂಡ ಬಳಿಕ ಕುಟುಂಬಕ್ಕೆ ನೆರವಾಗಲಿ ಎಂದು ಶಾಲೆ ಬಿಟ್ಟು, ಬೀದಿ ಬದಿ ಊಟ, ತಿಂಡಿಯ ಅಂಗಡಿ ಇಟ್ಟುಕೊಂಡಿದ್ದ. ಈ ವಿಡಿಯೊ ವೈರಲ್‌ ಆಗುತ್ತಲೇ ಆತನ ನೆರವಿಗೆ ಧಾವಿಸುವ ಮೂಲಕ ಆನಂದ್‌ ಮಹೀಂದ್ರಾ ಮಾನವೀಯತೆ ಮೆರೆದಿದ್ದಾರೆ. “ಧೈರ್ಯಕ್ಕೆ ಇನ್ನೊಂದು ಹೆಸರೇ ಜಸ್‌ಪ್ರೀತ್.‌ ಆದರೆ, ಈತನ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು. ಈತ ದೆಹಲಿಯ ತಿಲಕ್‌ ನಗರದಲ್ಲಿ ಇದ್ದಾನೆ ಎಂದು ಅನಿಸುತ್ತಿದೆ. ಯಾರಿಗಾದರೂ ಈತನ ಕಾಂಟ್ಯಾಕ್ಟ್‌ ನಂಬರ್‌ ಸಿಕ್ಕರೆ ನನಗೆ ಕೊಡಿ. ಈತನ ಶಿಕ್ಷಣಕ್ಕೆ ಮಹೀಂದ್ರಾ ಫೌಂಡೇಷನ್‌ ಸಹಾಯ ಮಾಡಲಿದೆ” ಎಂದು ಬಾಲಕನ ವಿಡಿಯೊ ಸಮೇತ ಆನಂದ್‌ ಮಹೀಂದ್ರಾ ಅವರು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಅಮೆಜಾನ್‌ನ ಅಲೆಕ್ಸಾ (Alexa) ವಾಯ್ಸ್‌ ಅಸಿಸ್ಟಂಟ್‌ ಬಳಸಿ ಮಂಗಗಳ ದಾಳಿಯಿಂದ ತನ್ನನ್ನು ಹಾಗೂ ತನ್ನ ಅಕ್ಕನ ಮಗಳನ್ನು ರಕ್ಷಿಸಿದ 13 ವರ್ಷದ ಚಾಣಾಕ್ಷ ಬಾಲಕಿಗೆ ಈಗ ಆನಂದ್‌ ಮಹೀಂದ್ರಾ ಅವರು ಉದ್ಯೋಗ ನೀಡುವ ಆಫರ್‌ ಕೊಟ್ಟಿದ್ದರು. ತಂತ್ರಜ್ಞಾನವನ್ನು ಬಳಸಿ ಮಂಗಗಳಿಂದ ಬಚಾವಾದ 13 ವರ್ಷದ ಬಾಲಕಿ ನಿಕಿತಾಗೆ ಉದ್ಯೋಗ ಕೊಡುವ ಕುರಿತು ಆನಂದ್‌ ಮಹೀಂದ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. “ಆಧುನಿಕ ಕಾಲದಲ್ಲಿ ನಾವು ತಂತ್ರಜ್ಞಾನದ ಗುಲಾಮರಾಗುತ್ತೇವೋ ಎಂಬ ಆತಂಕ ಕಾಡುತ್ತಿದೆ. ಆದರೆ, ಈ ಬಾಲಕಿಯು ಜಗತ್ತಿನಲ್ಲಿ ಮನುಷ್ಯನ ದಕ್ಷತೆಯನ್ನು ತಂತ್ರಜ್ಞಾನವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾಳೆ” ಎಂಬುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

“ಬಾಲಕಿಯ ಕ್ಷಿಪ್ರ ಯೋಚನಾಶಕ್ತಿಯು ಅತ್ಯದ್ಭುತವಾಗಿದೆ. ಅನಿರೀಕ್ಷಿತ ಜಗತ್ತಿನಲ್ಲಿ ಹೇಗೆ ಯೋಚಿಸಬೇಕು, ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಈಕೆಯು ಸಾಬೀತುಪಡಿಸಿದ್ದಾಳೆ. ಈ ಬಾಲಕಿಯು ಶಿಕ್ಷಣ ಮುಗಿಸಿ, ಕಾರ್ಪೊರೇಟ್‌ ಜಗತ್ತಿಗೆ ಕಾಲಿಡಲು ತೀರ್ಮಾನಿಸಿದರೆ, ಮಹೀಂದ್ರಾ ಕಂಪನಿಯಲ್ಲಿ ಅವಳಿಗೊಂದು ಕುರ್ಚಿ ಕಾಯುತ್ತಿರುತ್ತದೆ” ಎಂಬುದಾಗಿ ಆನಂದ್‌ ಮಹೀಂದ್ರಾ ಅವರು ನಿಕಿತಾಗೆ ಉದ್ಯೋಗದ ಆಫರ್‌ ನೀಡಿದ್ದಾರೆ. ಆನಂದ್‌ ಮಹೀಂದ್ರಾ ಅವರ ಕುರಿತೂ ಜನ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ: Anand Mahindra: ಸರ್ಫರಾಜ್ ಖಾನ್ ತಂದೆಗೆ ಥಾರ್ ಎಸ್‌ಯುವಿ ಗಿಫ್ಟ್​ ಕೊಟ್ಟ ಮಹೀಂದ್ರಾ

Continue Reading

ಕ್ರೀಡೆ

Asha Sobhana : ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆರ್​ಸಿಬಿ ಆಟಗಾರ್ತಿ

Asha Sobhana: ಆಶಾ ಶೋಭನಾ ಅವರು ಆರ್​ಸಿಬಿ ಮಹಿಳಾ ತಂಡದ ನಾಯಕಿ, ಭಾರತದ ಉಪನಾಯಕಿ ಸ್ಮೃತಿ ಮಂದಾನ ಅವರಿಂದ ಚೊಚ್ಚಲ ಕ್ಯಾಪ್ ಪಡೆದರು. ತಿರುವನಂತಪುರಂನ 33 ವರ್ಷದ ಲೆಗ್ ಸ್ಪಿನ್ನರ್ ಮಹಿಳಾ ಐಪಿಎಲ್ (ಡಬ್ಲ್ಯುಪಿಎಲ್) ನಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. 15 ಪಂದ್ಯಗಳಿಂದ 17 ವಿಕೆಟ್​​ಗಳನ್ನು ಪಡೆದಿದ್ದಾರೆ.

VISTARANEWS.COM


on

Asha Sobhana
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ ಮಹಿಳಾ) ತಂಡದ ಆಟಗಾರ್ತಿ ಆಶಾ ಶೋಭನಾ ಜಾಯ್ (Asha Sobhana) ಬಾಂಗ್ಲಾದೇಶ ಮಹಿಳೆಯರ ವಿರುದ್ಧದ 4 ನೇ ಟಿ 20 ಪಂದ್ಯದಲ್ಲಿ ಭಾರತೀಯ ರಾಷ್ಟ್ರೀಯ ತಂಡಕ್ಕೆ (National Team) ಪಾದಾರ್ಪಣೆ ಮಾಡಿದರು. ಈ ಮೂಲಕ ಅವರು ಮಿನ್ನು ಮಣಿ (Minnu Mani) ಮತ್ತು ಸಜನಾ ಸಜೀವನ್ (Sajana Sajeevan) ನಂತರ ಭಾರತಕ್ಕಾಗಿ ಪದಾರ್ಪಣೆ ಮಾಡಿದ ಕೇರಳದ ಮೂರನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸರಣಿಯ ಮೊದಲ ಟಿ 20 ಯಲ್ಲಿ ಸಜನಾ ಪಾದಾರ್ಪಣೆ ಮಾಡಿದ್ದರು.

ಸಜೀವನ್ ಸಜನಾ ಮತ್ತು ಶೋಭನಾ ಇಬ್ಬರೂ ಬಾಂಗ್ಲಾದೇಶ ಮಹಿಳೆಯರ ವಿರುದ್ಧದ ಪಂದ್ಯದಲ್ಲಿ ಆಡುತ್ತಿದ್ದಾರೆ. ಈ ಮೂಲಕ ಭಾರತ ಮಹಿಳಾ ತಂಡ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದೆ.

ಮಂಧಾನಾ ಬಳಿಯಿಂದ ಕ್ಯಾಪ್ ಪಡೆದ ಆಶಾ ಶೋಭನಾ

ಆಶಾ ಶೋಭನಾ ಅವರು ಆರ್​ಸಿಬಿ ಮಹಿಳಾ ತಂಡದ ನಾಯಕಿ, ಭಾರತದ ಉಪನಾಯಕಿ ಸ್ಮೃತಿ ಮಂದಾನ ಅವರಿಂದ ಚೊಚ್ಚಲ ಕ್ಯಾಪ್ ಪಡೆದರು. ತಿರುವನಂತಪುರಂನ 33 ವರ್ಷದ ಲೆಗ್ ಸ್ಪಿನ್ನರ್ ಮಹಿಳಾ ಐಪಿಎಲ್ (ಡಬ್ಲ್ಯುಪಿಎಲ್) ನಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. 15 ಪಂದ್ಯಗಳಿಂದ 17 ವಿಕೆಟ್​​ಗಳನ್ನು ಪಡೆದಿದ್ದಾರೆ.

ಡಬ್ಲ್ಯುಪಿಎಲ್​ನಲ್ಲಿ ಐದು ವಿಕೆಟ್ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

ಪಂದ್ಯದಲ್ಲಿ ಭಾರತಕ್ಕೆ ಜಯ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ನಾಲ್ಕನೇ ಟಿ 20 ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 5.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿತ್ತು. ಈ ವೇಳೆ ಮಳೆ ಸುರಿಯಿತು. ಹೀಗಾಗಿ ಪಂದ್ಯವನ್ನು 14 ಓವರ್​ಗಳಿಗೆ ಸೀಮಿತಗೊಳಿಸಲಾಯಿತು.

ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ರಿಚಾ ಘೋಷ್ ಅವರ ಉತ್ತಮ ಆಟದ ನೆರವಿನಿಂದ ಭಾರತ 6 ವಿಕೆಟ್ ನಷ್ಟಕ್ಕೆ 14 ಓವರ್​ಗಳಲ್ಲಿ 122 ರನ್ ಗಳಿಸಿತು. ಎರಡು ಪ್ರಮುಖ ವಿಕೆಟ್​​ಗಳನ್ನು ಪಡೆಯುವ ಮೂಲಕ ಮಾರುಫಾ ಅಕ್ಟರ್ ಬಾಂಗ್ಲಾದೇಶದ ಅತ್ಯುತ್ತಮ ಬೌಲರ್ ಆಗಿ ಹೊರಹೊಮ್ಮಿದರು. ಬಳಿಕ ಬ್ಯಾಟ್ ಮಾಡಿದ ಬಾಂಗ್ಲಾ ತಮ್ಮ ಪಾಲಿನ 14 ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ ನಷ್ಟಕ್ಕೆ 68 ರನ್ ಬಾರಿಸಿ 56 ರನ್​ಗಳಿಂದ ಸೋಲು ಒಪ್ಪಿಕೊಂಡಿತು. ಹೀಗಾಗಿ ಸರಣಿಯು 4-0 ಅಂತರದಿಂದ ಭಾರತಕ್ಕೆ ದೊರೆಯಿತು.

ಪಂದ್ಯದಲ್ಲಿ ಆಶಾ ಶೋಭನಾ ಅತ್ಯುತ್ತಮ ಬೌಲಿಂಗ್ ಸಾಧನೆ ತೋರಿದರು. ತಮ್ಮ 3 ಓವರ್​ಗಳ ಸ್ಪೆಲ್​ನಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರು. ದೀಪ್ತಿ ಶರ್ಮಾ 13 ರನ್​ ನೀಡಿ 2 ವಿಕೆಟ್ ತಮ್ಮದಾಗಿಸಿಕೊಂಡರು.

Continue Reading

ಕರ್ನಾಟಕ

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Voter list: ಕರ್ನಾಟಕ ಸೇರಿ ದೇಶದ ಹಲವೆಡೆ ಮಂಗಳವಾರ ಮತದಾನ ನಡೆಯಲಿದ್ದು, ಮತದಾರರಾರೂ ತಮ್ಮ ಹಕ್ಕು ಚಲಾವಣೆಗೆ ಉತ್ಸಾಹಿತರಾಗಿದ್ದಾರೆ. ಯಾವುದಕ್ಕೂ ಮತಗಟ್ಟೆಗೆ ಹೊರಡುವ ಮುನ್ನ ಮತದಾನ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಒಮ್ಮೆ ಚೆಕ್ ಮಾಡುವುದು ಉತ್ತಮ. ಮನೆಯಲ್ಲೇ ಕುಳಿತು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ.

VISTARANEWS.COM


on

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆಯ (lok sabha election) ಮೂರನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ (voter list) ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಮತಗಟ್ಟೆಗೆ (election booth) ಹೋಗಬೇಕಾದ ಅವಶ್ಯಕತೆ ಈಗಿಲ್ಲ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇದ್ದರೆ ಸಾಕು ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ನಲ್ಲಿರುವ ಆನ್ ಲೈನ್ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿ ಮತಗಟ್ಟೆಯ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈಗ ಅವಕಾಶವಿದೆ.

ಹೇಗೆ ನೋಡುವುದು?

ಸ್ಮಾರ್ಟ್ ಫೋನ್ ನಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ಅನ್ನು ತೆರೆಯಿರಿ. ಬಳಿಕ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ನಮೂದಿಸಿ. ಮುಖ್ಯವಾಗಿ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಬಳಿಕ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವಂತೆ ನಿಮ್ಮ ಪೂರ್ಣ ಹೆಸರು ಮತ್ತು ತಂದೆಯ ಹೆಸರನ್ನು ನಮೂದಿಸಬೇಕು. ಬಳಿಕ ಹುಟ್ಟಿದ ದಿನಾಂಕವನ್ನು ಹಾಕಿ ಎಪಿಕ್ (ಎಪಿಐಸಿ) ಸಂಖ್ಯೆಯನ್ನು ಹಾಕಿದ ಬಳಿಕ ಸರ್ಚ್ ಬಟನ್ ಒತ್ತಿದರೆ ಫಲಿತಾಂಶ ಪುಟ ತೆರೆದುಕೊಳ್ಳುತ್ತದೆ.

Lok Sabha Election-2024

ಏನು ಮಾಹಿತಿ ?

ನಿಮ್ಮ ಹೆಸರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದರೆ ಎಪಿಕ್ ಸಂಖ್ಯೆ, ವಿಳಾಸ ಮತ್ತು ಮತಗಟ್ಟೆಯ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯವಾಗುತ್ತದೆ. ಮತಗಟ್ಟೆಯ ಸ್ಥಳವನ್ನು ಮ್ಯಾಪ್ ಮೂಲಕ ಕ್ಲಿಕ್ ಮಾಡಿ ನೋಡಲು ಅವಕಾಶವೂ ಇಲ್ಲಿ ಇದೆ.

ಎಸ್ ಎಂಎಸ್ ಮೂಲಕ ಪರಿಶೀಲಿಸಿ

ವೆಬ್ ಪೋರ್ಟಲ್ ಮಾತ್ರವಲ್ಲ ಈ ಎಲ್ಲ ಮಾಹಿತಿಯನ್ನು ಎಸ್ ಎಂಎಸ್ ಮೂಲಕವೂ ಪರಿಶೀಲನೆ ನಡೆಸಬಹುದು.
ಇದಕ್ಕಾಗಿ ಮೊಬೈಲ್ ಫೋನ್ ನಿಂದ 59191 ಕ್ಕೆ ಎಪಿಕ್ ಸಂಖ್ಯೆಯನ್ನು ಹೊಂದಿರುವ ಎಸ್ ಎಂಎಸ್ ಕಳುಹಿಸಿ ಅಥವಾ ಮತದಾರರ ಸಹಾಯವಾಣಿ 1800-111-950ಕ್ಕೆ ಕರೆ ಮಾಡಿ ಕೂಡ ಮಾಹಿತಿ ತಿಳಿದುಕೊಳ್ಳಬಹುದು.

ಯಾವಾಗ ಕೊನೆ ದಿನ?

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆಗೆ ಮತದಾನದ ಹಿಂದಿನ ದಿನ ಕೊನೆಯ ದಿನವಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಇದ್ದರೆ ಹೊಸ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಮತದಾರರ ಸೇವಾ ಪೋರ್ಟಲ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

Continue Reading
Advertisement
Press Freedom
Latest3 mins ago

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

Rape victim kidnapping in Prajwal Revanna Case What are the options before HD Revanna
ಕ್ರೈಂ4 mins ago

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Anand Mahindra
ಪ್ರಮುಖ ಸುದ್ದಿ12 mins ago

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Asha Sobhana
ಕ್ರೀಡೆ22 mins ago

Asha Sobhana : ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆರ್​ಸಿಬಿ ಆಟಗಾರ್ತಿ

Lok Sabha Election-2024
ಕರ್ನಾಟಕ48 mins ago

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

IPL 2024
ಕ್ರೀಡೆ1 hour ago

IPL 2024 : ಪೃಥ್ವಿ ಶಾ ಗರ್ಲ್​​ ಫ್ರೆಂಡ್​​​ ನಿಧಿಯನ್ನು ತಬ್ಬಿ ಅಭಿನಂದಿಸಿದ ಶಾರುಖ್​ ಖಾನ್​​

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

Arvind Kejriwal
ದೇಶ2 hours ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌