ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ, ಖಾಸಗಿ ಅಂಗ ಪ್ರದರ್ಶಿಸಿದ ಪ್ರಯಾಣಿಕ; ಏರ್​ ಇಂಡಿಯಾ ಪ್ಲೈಟ್​ನಲ್ಲಿ ಅಸಹ್ಯ ಘಟನೆ! - Vistara News

ದೇಶ

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ, ಖಾಸಗಿ ಅಂಗ ಪ್ರದರ್ಶಿಸಿದ ಪ್ರಯಾಣಿಕ; ಏರ್​ ಇಂಡಿಯಾ ಪ್ಲೈಟ್​ನಲ್ಲಿ ಅಸಹ್ಯ ಘಟನೆ!

ವಿಮಾನ ದೆಹಲಿಯಲ್ಲಿ ಲ್ಯಾಂಡ್​ ಆದ ಮೇಲೆ ಆ ಪ್ರಯಾಣಿಕ ಇಳಿದು ಹೋಗಿದ್ದ. ಆತನ ವಿರುದ್ಧ ಯಾವುದೇ ಕ್ರಮವೂ ಜರುಗಲಿಲ್ಲ. ಇತ್ತೀಚೆಗೆ ಮಹಿಳೆ ಏರ್​ ಇಂಡಿಯಾ ಅಧ್ಯಕ್ಷರಿಗೆ ದೂರಿನ ಪತ್ರ ಬರೆದು ಈ ವಿಚಾರ ತಿಳಿಸಿದ್ದರು.

VISTARANEWS.COM


on

A Man pees on female passenger In Air India Flight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ವಿಮಾನದಲ್ಲಿ ವಿಲಕ್ಷಣ ವರ್ತನೆ ಮಾಡುವ ಪ್ರಯಾಣಿಕರು ಕಾಣ ಸಿಗುವುದು ಅಪರೂಪವೇನೂ ಅಲ್ಲ. ಆದರೆ ಈ ಪ್ರಯಾಣಿಕ ಅತಿರೇಕ ಮತ್ತು ಅಸಹ್ಯ ಎನ್ನಿಸುವಂತೆ ನಡೆದುಕೊಂಡಿದ್ದಾನೆ. ನ್ಯೂಯಾರ್ಕ್​-ದೆಹಲಿ ಏರ್​ ಇಂಡಿಯಾದಲ್ಲಿ ಪ್ರಯಾಣ ಮಾಡುತ್ತಿದ್ದ ಈತ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಘಟನೆ ನಡೆದಿದ್ದು ನವೆಂಬರ್ 26ರಂದು. ಆದರೆ ಅದು ಬಹಿರಂಗವಾಗಿರಲಿಲ್ಲ. ಇತ್ತೀಚೆಗೆ ಮಹಿಳೆ ತನಗಾದ ಕೆಟ್ಟ ಅನುಭವವನ್ನು ಪತ್ರದಲ್ಲಿ ಬರೆದು, ಅದನ್ನು ಏರ್​ ಇಂಡಿಯಾ ಅಧ್ಯಕ್ಷ ಎನ್​. ಚಂದ್ರಶೇಖರನ್​ ಅವರಿಗೇ ಕಳಿಸಿದ್ದರು. ಅದರ ಬೆನ್ನಲ್ಲೇ ಮಾಧ್ಯಮಗಳಲ್ಲೂ ವರದಿ ಪ್ರಕಟವಾಗಿ ವಿಷಯ ದೊಡ್ಡದಾಗಿದೆ.

ಏರ್​ ಇಂಡಿಯಾ ವಿಮಾನ ಯುಎಸ್​​ನಿಂದ ದೆಹಲಿಗೆ ಬರುತ್ತಿತ್ತು. ಕೆಲ ತಾಸುಗಳ ಬಳಿಕ ವಿಮಾನದಲ್ಲಿ ಪ್ರಯಾಣಿಕರಿಗೆ ಊಟವನ್ನು ನೀಡಲಾಯಿತು. ಎಲ್ಲರಿಗೂ ಊಟ ಮಾಡಿದ ಬಳಿಕ ವಿಮಾನದಲ್ಲಿ ಸ್ವಿಚ್​ಗಳನ್ನೆಲ್ಲ ಆಫ್​ ಮಾಡಲಾಯಿತು. ಅದಾಗಿ ಕೆಲ ಹೊತ್ತಲ್ಲಿ ಪ್ರಯಾಣಿಕನೊಬ್ಬ ತನ್ನ ಸೀಟ್​​ನಿಂದ ಎದ್ದು ಪಕ್ಕದ ಸೀಟ್​​ನಲ್ಲಿ ಕುಳಿತಿದ್ದ ಮಹಿಳೆ ಬಳಿಗೆ ಬಂದ. ಪ್ಯಾಂಟ್​ ಜಿಪ್​ ತೆರೆದು ಆಕೆಯ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆಕೆಯ ಉಡುಪು, ಶೂ, ಬ್ಯಾಗ್​ಗಳೆಲ್ಲ ಸಂಪೂರ್ಣವಾಗಿ ನೆಂದು ಹೋಗಿವೆ. ಆತ ಮೂತ್ರ ವಿಸರ್ಜನೆ ಮಾಡಿಯಾದ ಮೇಲೆ ಕೂಡ ಹಲವು ನಿಮಿಷಗಳ ಕಾಲ ತನ್ನ ಖಾಸಗಿ ಅಂಗವನ್ನು ಹಾಗೇ ಪ್ರದರ್ಶಿಸುತ್ತ ನಿಂತಿದ್ದ, ಅವನು ಕುಡಿದಿದ್ದ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಅಲ್ಲಿಗೆ ಧಾವಿಸಿದ ವಿಮಾನ ಸಿಬ್ಬಂದಿ ಮಹಿಳೆಗೆ ಒಂದು ಜೊತೆ ಹೊಸ ಬಟ್ಟೆ ನೀಡಿದ್ದಾರೆ. ಅಲ್ಲದೆ, ಆಕೆ ಸೀಟ್​​ನ್ನು ಕ್ಲೀನ್​ ಮಾಡಿಕೊಟ್ಟಿದ್ದಾರೆ.

ವಿಮಾನ ದೆಹಲಿಯಲ್ಲಿ ಲ್ಯಾಂಡ್​ ಆದ ಮೇಲೆ ಆ ಪ್ರಯಾಣಿಕ ಇಳಿದು ಹೋಗಿದ್ದ. ಆತನ ವಿರುದ್ಧ ಯಾವುದೇ ಕ್ರಮವೂ ಜರುಗಲಿಲ್ಲ. ಇತ್ತೀಚೆಗೆ ಮಹಿಳೆ ಏರ್​ ಇಂಡಿಯಾ ಅಧ್ಯಕ್ಷರಿಗೆ ದೂರಿನ ಪತ್ರ ಬರೆದು ಈ ವಿಚಾರ ತಿಳಿಸಿದ್ದರು. ‘ನಾನು ವಿಮಾನ ಸಿಬ್ಬಂದಿಗೆ ವಿಷಯ ತಿಳಿಸಿದೆ. ಆದರೂ ಅವರು ಆತನನ್ನು ಹಾಗೇ ಹೋಗಲು ಬಿಟ್ಟರು. ತುಂಬ ಸೂಕ್ಷ್ಮವಾದ ಮತ್ತು ಆಘಾತಕಾರಿ ಸನ್ನಿವೇಶದಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎಂಬ ಅರಿವು ಸಿಬ್ಬಂದಿಗೆ ಇಲ್ಲ ಎಂದು ಮಹಿಳೆ ಹೇಳಿದ್ದರು.

ಮಹಿಳೆಯಿಂದ ದೂರು ಬಂದ ಬೆನ್ನಲ್ಲೇ ಏರ್​ ಇಂಡಿಯಾ ಆ ಪ್ರಯಾಣಿಕನ ವಿರುದ್ಧ ಪೊಲೀಸರಿಗೆ ದೂರು ನೀಡಿದೆ. ಮತ್ತು ಒಂದು ಆಂತರಿಕ ಸಮಿಯನ್ನು ರಚಿಸಿ ಆತನನ್ನು ‘ನೋ ಫ್ಲೈ’ (ವಿಮಾನ ಹಾರಾಟ ನಿರ್ಬಂಧ ಪಟ್ಟಿ) ಲಿಸ್ಟ್​ಗೆ ಸೇರಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಈ ಬಗ್ಗೆ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಮುಂಬಯಿನಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ತುರ್ತು ಭೂಸ್ಪರ್ಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

Droupadi Murmu: ನಿನ್ನೆಯಷ್ಟೇ ಸ್ಪೀಕರ್‌ ಓಂ ಬಿರ್ಲಾ ಅವರು ಸಂಸತ್‌ನಲ್ಲಿ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ ಎಂದಿದ್ದಾರೆ.

VISTARANEWS.COM


on

Droupadi Murmu
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಮಾತನಾಡಿದ್ದಾರೆ. ಲೋಕಸಭಾ ಸ್ಪೀಕರ್‌ ಆಗಿ ಎರಡನೇ ಬಾರಿ ಚುನಾಯಿತರಾಗಿರುವ ಓಂ ಬಿರ್ಲಾ ಹಾಗೂ ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಮುರ್ಮು ಅವರು ತಮ್ಮ ಭಾಷಣ ಆರಂಭಿಸಿದರು.

ತುರ್ತು ಪರಿಸ್ಥಿತಿ ಬಗ್ಗೆ ಮುರ್ಮು ಪ್ರಸ್ತಾಪ

ನಿನ್ನೆಯಷ್ಟೇ ಸ್ಪೀಕರ್‌ ಓಂ ಬಿರ್ಲಾ ಅವರು ಸಂಸತ್‌ನಲ್ಲಿ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ ಎಂದಿದ್ದಾರೆ.

ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿ ಹೆಚ್ಚು ಮತದಾನ ಆಗಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ರಾಷ್ಟ್ರಪತಿ ಮರ್ಮು, ದಶಕಗಳ ದಾಖಲೆಯನ್ನು ಮುರಿದು ಜಮ್ಮು ಮತ್ತು ಕಾಶ್ಮೀರ ಹೊರಹೊಮ್ಮಿದೆ. ಇದು ಬಹಳ ಉತ್ತಮ ಬೆಳವಣಿಗೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯಂತ ಕಡಿಮೆ ಮತದಾನ ಆಗುವಂತೆ ನೋಡಿಕೊಂಡು ನಮ್ಮ ಶತ್ರುಗಳು ನಮ್ಮ ವಿರುದ್ಧ ಸಂಚು ರೂಪಿಸುತ್ತಿದ್ದರು. ಅಲ್ಲದೇ ಕಣಿವೆ ರಾಜ್ಯ ಜನರ ಅಭಿಪ್ರಾಯಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದರು. ಆದರೆ ಈ ಬಾರಿ ಅತಿಹೆಚ್ಚು ಮತದಾನ ಮೂಲಕ ಜನ ಶತ್ರುಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ದೇಶದ ಆರ್ಥಿಕತೆ ಬಗ್ಗೆ ಮೆಚ್ಚುಗೆ

ಇದೇ ವೇಳೆ ಅವರು ದೇಶದ ಆರ್ಥಿಕ ಸುಧಾರಣೆ ಬಗ್ಗೆ ಪ್ರಸ್ತಾಪಿಸಿದ್ದು, “ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರದ ಪ್ರತಿಜ್ಞೆಯು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನಾಗಿ ರೂಪಿಸಿದೆ. 10 ವರ್ಷಗಳಲ್ಲಿ, 11 ನೇ ಸ್ಥಾನದಿಂದ 5ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಿ ಭಾರತ ಬೆಳೆಯಿತು. ಸಾಂಕ್ರಾಮಿಕ ಮತ್ತು ವಿವಿಧ ಸಂಘರ್ಷಗಳ ಹೊರತಾಗಿಯೂ ಪ್ರಪಂಚದ ಕೆಲವು ಭಾಗಗಳಲ್ಲಿ, ಭಾರತವು ಕಳೆದ 10 ವರ್ಷಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿಯಿಂದ ಕೈಗೊಂಡ ಸುಧಾರಣೆಗಳು ಮತ್ತು ನಿರ್ಧಾರಗಳಿಂದಾಗಿ ಈ ಬೆಳವಣಿಗೆಯನ್ನು ಸಾಧಿಸಲು ಸಾಧ್ಯವಾಯಿತು. ಪ್ರಪಂಚದ ಅಭಿವೃದ್ಧಿಯಲ್ಲಿ ಭಾರತ 15% ರಷ್ಟು ಕೊಡುಗೆ ನೀಡುತ್ತಿದೆ. ಭಾರತವನ್ನು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವುದೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

CAA ಬಗ್ಗೆ ಮುರ್ಮು ಏನಂದ್ರು?

ನನ್ನ ಸರ್ಕಾರವು CAA ಕಾನೂನಿನ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವವನ್ನು ನೀಡಲು ಪ್ರಾರಂಭಿಸಿದೆ. CAA ಅಡಿಯಲ್ಲಿ ಪೌರತ್ವವನ್ನು ಪಡೆದ ಕುಟುಂಬಗಳಿಗೆ ನಾನು ಉತ್ತಮ ಭವಿಷ್ಯವನ್ನು ಬಯಸುತ್ತೇನೆ. ನನ್ನ ಸರ್ಕಾರವು ಭಾರತದ ಪರಂಪರೆ ಮತ್ತು ಸಂಸ್ಕೃತಿಯನ್ನು ಮರುಸ್ಥಾಪಿಸಲು ಬಯಸುತ್ತದೆ ಎಂದರು.

ಇದನ್ನೂ ಓದಿ: Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Continue Reading

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

ಕ್ರೈಂ

Orissa High Court: ‘ದಿನಕ್ಕೆ ಹಲವು ಬಾರಿ ನಮಾಜ್‌ ಮಾಡ್ತಾನೆʼ- ಅಪ್ರಾಪ್ತೆ ಹತ್ಯಾಚಾರ ಎಸಗಿದವನ ಗಲ್ಲು ಶಿಕ್ಷೆ ರದ್ದುಪಡಿಸಿದ ಕೋರ್ಟ್‌

Orissa High Court: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

VISTARANEWS.COM


on

Orissa High Court
Koo

ಭುವನೇಶ್ವರ: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿ (Sheikh Asif Ali)ಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ (Orissa High Court) ತೀರ್ಪು ನೀಡಿದೆ.

ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ನ್ಯಾಯಮೂರ್ತಿ ಎಸ್.ಕೆ.ಸಾಹೂ ಮತ್ತು ನ್ಯಾಯಮೂರ್ತಿ ಆರ್.ಕೆ.ಪಟ್ನಾಯಕ್ ಅವರನ್ನೊಳಗೊಂಡ ನ್ಯಾಯಪೀಠವು, ಶೇಖ್ ಆಸಿಫ್ ಅಲಿ ವಿರುದ್ಧ ಮರಣ ದಂಡನೆ ವಿಧಿಸಬಹುದಾದ ಪ್ರಬಲ ಸಾಕ್ಷಿಗಳಿಲ್ಲ ಎಂದು ತಿಳಿಸಿದೆ. ಈ ಪ್ರಕರಣವು ಸಾಂದರ್ಭಿಕ ಪುರಾವೆಗಳನ್ನು ಆಧರಿಸಿದೆ ಮತ್ತು ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

ಘಟನೆಯ ಹಿನ್ನೆಲೆ

ಇದು ಸುಮಾರು 10 ವರ್ಷಗಳ ಹಿಂದಿನ ಘಟನೆ. 2014ರ ಆಗಸ್ಟ್‌ 21ರಂದು ಆರು ವರ್ಷದ ಸಂತ್ರಸ್ತೆ ತನ್ನ ಅಪ್ರಾಪ್ತ ವಯಸ್ಸಿನ ಕಸಿನ್‌ ಜತೆ ಅಪರಾಹ್ನ 2 ಗಂಟೆ ಸುಮಾರಿಗೆ ಚಾಕೋಲೆಟ್‌ ಖರೀದಿಸಲು ಅಂಗಡಿಗೆ ತೆರಳಿದ್ದಳು. 3 ಗಂಟೆಯಾದರೂ ಬಾಲಕಿ ಹಿಂದಿರುಗದ ಕಾರಣ ಮನೆಯವರಿಗೆ ಗಾಬರಿ ಅಕ್ಕ ಪಕ್ಕದ ಮನೆಯವರಿಗೆ ಸುದ್ದಿ ತಿಳಿಸಿದರು. ಹೀಗೆ ಅವರೆಲ್ಲ ಸೇರಿ ಬಾಲಕಿಯನ್ನು ಹುಡುಕತೊಡಗಿದರು.

ಅನೇಕ ತಾಸಿನ ಹುಡುಕಾಟದ ಬಳಿಕ ಆರು ವರ್ಷದ ಬಾಲಕಿ ನಗ್ನಾವಸ್ಥೆಯಲ್ಲಿ, ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಶೇಖ್ ಖೈರುದ್ದೀನ್‌ ಎಂಬಾತನ ಮನೆಯ ಸಮೀಪ ಕಂಡು ಬಂದಿದ್ದಳು. ಕೂಡಲೇ ಆಕೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸುವಂತೆ ಸಲಹೆ ನೀಡಿದರು. ಆದರೆ ಅಷ್ಟರಲ್ಲಿ ಬಾಲಕಿ ಅಸುನೀಗಿದ್ದಳು.

ಶೇಕ್‌ ಆಸಿಫ್‌ ಅಲಿ ಮತ್ತು ಶೇಕ್‌ ಅಕಿಲ್‌ ಅಲಿ ಬಾಲಕಿಯನ್ನು ಬಲವಂತದಿಂದ ಕರೆದೊಯ್ದಿರುವುದನ್ನು ನೋಡಿರುವುದಾಗಿ ಆಕೆಯ ಜತೆಗಿದ್ದ ಕಸಿನ್‌ ತಿಳಿಸಿದ್ದಳು. ಹೀಗಾಗಿ ಸಂತ್ರಸ್ತೆಯ ಕುಟುಂಬ ನೀಡಿದ ದೂರಿನಂತೆ ಈ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302, 376-ಡಿ ಮತ್ತು 376-ಎ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮರಣೋತ್ತರ ವರದಿ ಮತ್ತು ವಿಚಾರಣೆ ವೇಳೆ, ಆರೋಪಿಗಳು ಬಾಲಕಿಯ ಬಾಯಿಯನ್ನು ಮುಚ್ಚಿಕೊಂಡು ಅವಳನ್ನು ಕರೆದೊಯ್ದು, ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿದ್ದಾರೆ ಎಂದು ತಿಳಿದು ಬಂದಿತ್ತು. ಬಳಿಕ ವಿಚಾರಣಾ ನ್ಯಾಯಾಲಯವು ಐಪಿಸಿ ಮತ್ತು ಪೋಕ್ಸೊ ಸೆಕ್ಷನ್‌ ಅಡಿಯಲ್ಲಿ ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದ್ದರೂ, ಒರಿಸ್ಸಾ ಹೈಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶೇಖ್ ಅಕಿಲ್ ಅಲಿಯನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಶೇಖ್ ಆಸಿಫ್ ಅಲಿ ಪ್ರಕರಣದಲ್ಲಿ ತೀರ್ಪು ನೀಡಿ “ಶೇಖ್ ಆಸಿಫ್ ಅಲಿ ವಿರುದ್ಧ ಐಪಿಸಿಯ ಸೆಕ್ಷನ್ 376-ಡಿ ಅಡಿಯಲ್ಲಿ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಆದರೆ ಐಪಿಸಿಯ ಸೆಕ್ಷನ್ 302, 376-ಎ ಮತ್ತು ಪಿಒಸಿಯ ಸೆಕ್ಷನ್ 6ರ ಅಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆʼʼ ಎಂದು ಹೇಳಿತ್ತು. ಇದೀಗ ಪೂರಕ ಸಾಕ್ಷ್ಯಾಧಾರಗಳ ಕೊರತೆಯಿಂದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: Physical Abuse : ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿದ ಕಾಮುಕ

Continue Reading

ದೇಶ

Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನದ ನಾಲ್ಕನೇ ದಿನವಾದ ಇಂದು ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಈ ಮೊದಲ ಅಧಿವೇಶನ ಜೂನ್‌ 24ರಂದು ಆರಂಭವಾಗಿದ್ದು, ಜು. 3ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಜೂ. 27ರಿಂದ ಜು. 3ರವರೆಗೆ ನಡೆಯಲಿದೆ.

ಭಾರತೀಯ ಸಂವಿಧಾನದ 87ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಪ್ರತಿ ಲೋಕಸಭಾ ಚುನಾವಣೆಯ ನಂತರದ ಮೊದಲ ಅಧಿವೇಶನದ ಆರಂಭದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುತ್ತಾರೆ. ದ್ರೌಪದಿ ಮುರ್ಮು ಅವರು ತಮ್ಮ ಭಾಷಣದ ಮೂಲಕ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸಲಿದ್ದಾರೆ. ಅಧಿವೇಶನದ ಮೊದಲ ಎರಡು ದಿನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರೆ ಮೂರನೇ ದಿನ ಸ್ಪೀಕರ್‌ ಆಯ್ಕೆ ನಡೆಯಿತು.

ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ನೇಮಕ

ಇನ್ನು ಬುಧವಾರ ನಡೆದ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನುವಾಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ನೇಮಕಗೊಂಡಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದರು.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನು ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಮೋದಿ ಮಾತನಾಡಿ, ʼʼಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಗಾಂಧಿ ಮಾತನಾಡಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆʼʼ ಎಂದು ನುಡಿದರು. ಈ ಬಾರಿ ಪ್ರತಿಪಕ್ಷ ಪ್ರಬಲವಾಗಿರುವುದರಿಂದ ಅಧಿವೇಶನ ಯಾವ ರೋತಿ ನಡೆಯಲಿದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Continue Reading
Advertisement
Road Accident
ಕ್ರೈಂ11 mins ago

Road Accident : ರೈಲು ಬಡಿದು ವ್ಯಕ್ತಿ ಸಾವು;ನಿಂತಿದ್ದ ಬಸ್‌ಗೆ ಗುದ್ದಿ ಛಿದ್ರಗೊಂಡ ಹೊಸ ಕಾರು

Rohit Sharma
ಕ್ರೀಡೆ16 mins ago

Rohit Sharma : ಇಂಗ್ಲೆಂಡ್​ ಸೋಲಿಸುವ ಯೋಜನೆ ವಿವರಿಸಿದ ನಾಯಕ ರೋಹಿತ್ ಶರ್ಮಾ

Droupadi Murmu
ದೇಶ34 mins ago

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

IND vs ENG
ಪ್ರಮುಖ ಸುದ್ದಿ40 mins ago

IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

karnataka Rains Effected
ಮಳೆ47 mins ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Share Market
ವಾಣಿಜ್ಯ1 hour ago

Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

pattanagere shed actor darshan renuka swamy murder
ಕ್ರೈಂ1 hour ago

Actor Darshan: ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

Chris Silverwood
ಪ್ರಮುಖ ಸುದ್ದಿ1 hour ago

Chris Silverwood : ಲಂಕಾ ಕೋಚ್​ ಕ್ರಿಸ್​ ಸಿಲ್ವರ್​ವುಡ್​​ ಏಕಾಏಕಿ ರಾಜೀನಾಮೆ

Viral Video
Latest2 hours ago

Viral Video : ನೋಯ್ಡಾದಲ್ಲಿ ನಿರ್ಮಾಣವಾಗುತ್ತಿದೆ ಲಕ್ಷುರಿ ಅಪಾರ್ಟ್‌ಮೆಂಟ್‌! ಇದರ ಬೆಲೆ ಅಬ್ಬಬ್ಬಾ!

Yelahanka railway Newborn baby found at Yelahanka railway station in Bengaluru
ಬೆಂಗಳೂರು2 hours ago

Yelahanka Railway : ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು; ನರಳಾಡಿ ಪ್ರಾಣಬಿಟ್ಟ ಕಂದ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ47 mins ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌