Pakistan | ಸಾಲದ ಸುಳಿಯಲ್ಲಿ ಪಾಕಿಸ್ತಾನ, ಫ್ಯಾನ್- ಬಲ್ಬ್ ಉತ್ಪಾದನೆಯೂ ಸ್ಥಗಿತ! - Vistara News

ವಿದೇಶ

Pakistan | ಸಾಲದ ಸುಳಿಯಲ್ಲಿ ಪಾಕಿಸ್ತಾನ, ಫ್ಯಾನ್- ಬಲ್ಬ್ ಉತ್ಪಾದನೆಯೂ ಸ್ಥಗಿತ!

ಪಾಕಿಸ್ತಾನದಲ್ಲಿ (Pakistan) ಸಾಲದ ಹೊರೆ ಹೆಚ್ಚಾದ ಹಿನ್ನೆಲೆ ಮದುವೆ ಹಾಲ್‌ಗಳು, ಮಾರುಕಟ್ಟೆಗಳ ವೇಳೆ ಕಡಿಮೆಗೊಳಿಸಲಾಗಿದೆ. ಬಲ್ಬ್, ಫ್ಯಾನ್‌ಗಳ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್: ನೆರೆ ದೇಶ ಪಾಕಿಸ್ತಾನವು ವಿಪರೀತ ಸಾಲದ ಸುಳಿಗೆ ಸಿಲುಕಿದ್ದು, ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದೆ. ಪಾಕಿಸ್ತಾನ(Pakistan) ಸರ್ಕಾರವು ಎಲ್ಲ ರೀತಿಯಲ್ಲಿಯೂ ಹಣ ಉಳಿಸುವುದಕ್ಕೆ ಪ್ರಯತ್ನ ಮಾಡಲಾರಂಭಿಸಿದೆ. ಅದೇ ಹಿನ್ನೆಲೆ ವಿದ್ಯುತ್ ಉಳಿತಾಯ ಮಾಡಬೇಕೆಂದು ಮಾರುಕಟ್ಟೆಗಳು, ಮದುವೆ ಹಾಲ್‌ಗಳ ಸಮಯವನ್ನು ಕಡಿಮೆಗೊಳಿಸಲಾಗಿದೆ. ಫ್ಯಾನ್ ಹಾಗೂ ಬಲ್ಬ್‌ಗಳ ಉತ್ಪಾದನೆಯನ್ನೂ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಮಾರಕಾಸ್ತ್ರ ಹಿಡಿದು ಪಾಕಿಸ್ತಾನದಿಂದ ಭಾರತಕ್ಕೆ ನುಸುಳಿದ್ದವನ ಹತ್ಯೆಗೈದ ಬಿಎಸ್​ಎಫ್​; ಈ ವರ್ಷದ ಮೊದಲ ಪ್ರಕರಣ

ಇನ್ನು ಮುಂದೆ ದೇಶದಲ್ಲಿ ಎಲ್ಲ ಮಾರುಕಟ್ಟೆಗಳು ರಾತ್ರಿ 8.30ಕ್ಕೆ ಮುಚ್ಚಬೇಕು ಹಾಗೆಯೇ ಮದುವೆ ಹಾಲ್‌ಗಳನ್ನು ಕೂಡ ರಾತ್ರಿ 10ರೊಳಗೆ ಮುಚ್ಚಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜ್ ಆಸಿಫ್ ಆದೇಶಿಸಿದ್ದಾರೆ. ಈ ರೀತಿ ಮಾಡುವುದರಿಂದ ದೇಶಕ್ಕೆ 26 ಮಿಲಿಯನ್ ಡಾಲರ್ (215 ಕೋಟಿ ರೂ.) ಉಳಿತಾಯ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಫ್ಯಾನ್‌ಗಳ ಉತ್ಪಾದನೆಯನ್ನು ಸ್ಥಗಿತಗೊಳಿಸುವುದಕ್ಕೆ ಆದೇಶಿಸಲಾಗಿದೆ. ಹಲವು ಕಂಪನಿಗಳು ತಯಾರಿಸುತ್ತಿರುವ ಫ್ಯಾನ್‌ಗಳು 120-130 ವ್ಯಾಟ್ ವಿದ್ಯುತ್ ಬಳಸಿಕೊಳ್ಳುತ್ತಿವೆ. ಆದರೆ ಜಾಗತಿಕವಾಗಿ ಕೇವಲ 60-80 ವ್ಯಾಟ್ ಬಳಕೆ ಮಾಡಿಕೊಳ್ಳುವ ಫ್ಯಾನ್‌ಗಳು ಲಭ್ಯವಿವೆ. ಹಾಗಾಗಿ ಹೆಚ್ಚು ವಿದ್ಯುತ್ ಬಳಸುವ ಫ್ಯಾನ್‌ಗಳ ಉತ್ಪಾದನೆಯನ್ನೂ ಸ್ಥಗಿತಗೊಳಿಸಲು ಮುಂದಾಗಿದೆ. ಹಾಗೆಯೇ ಹೆಚ್ಚು ವಿದ್ಯುತ್ ಬಳಸಿಕೊಳ್ಳುವ ಬಲ್ಬ್‌ಗಳ (incandescent bulb) ಉತ್ಪಾದನೆಯನ್ನೂ ಸ್ಥಗಿತಗೊಳಿಸುವುದಾಗಿ ಆಸಿಫ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Taliban shames Pakistan | 71ರ ಯುದ್ಧದಲ್ಲಿ ಭಾರತಕ್ಕೆ ಶರಣಾದ ಚಿತ್ರ ತೋರಿಸಿ ಪಾಕಿಸ್ತಾನವನ್ನು ಅಣಕಿಸಿದ ತಾಲಿಬಾನ್‌!

ಎಲ್ಲ ಸರ್ಕಾರಿ ಕಚೇರಿಗಳಲ್ಲೂ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲಾಗುವುದು. ಈ ನಿಟ್ಟಿನಲ್ಲಿ ವರ್ಕ್ ಫ್ರಂ ಹೋಂ ಪಾಲಿಸಿಯನ್ನು ಇನ್ನು 10 ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ವರದಿಯೊಂದರ ಪ್ರಕಾರ ಪಾಕಿಸ್ತಾನವು ಸದ್ಯ 10.5 ಬಿಲಿಯನ್ ಡಾಲರ್‌ನಷ್ಟು ಸಾಲದ ಹೊರೆಯಲ್ಲಿದೆ ಎಂದು ಪಾಕಿಸ್ತಾನ ವಿದ್ಯುತ್ ಇಲಾಖೆ ಹೇಳಿದೆ. ಇದು ಕಳೆದ ಸೆಪ್ಟೆಂಬರ್ ತಿಂಗಳಿಗೆ ಹೋಲಿಸಿದರೆ 6,700 ಕೋಟಿ ರೂ. (815 ಮಿಲಿಯನ್ ಡಾಲರ್) ಹೆಚ್ಚಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಚೆನ್ನೈನಲ್ಲಿ ಅವರಿಗೆ ಬೇರೆ ವ್ಯಕ್ತಿಯ ಹೃದಯವನ್ನು ಕಸಿ ಮಾಡಲಾಗಿತ್ತು. ಇದಾದ ಬಳಿಕ ಆಯೇಷಾ, ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದರು.

VISTARANEWS.COM


on

Pakistan Teen
Koo

ಇಸ್ಲಾಮಾಬಾದ್:‌ ಜಗತ್ತಿನ ಯಾವುದೇ ಧರ್ಮಗಳು, ಧರ್ಮ ಗ್ರಂಥಗಳು ಹಿಂಸೆ, ದ್ವೇಷವನ್ನು ಬೆಂಬಲಿಸುವುದಿಲ್ಲ. ಶಾಂತಿ, ಸಹಬಾಳ್ವೆ, ಮಾನವೀಯತೆಯನ್ನೇ ಪ್ರತಿಯೊಂದು ಧರ್ಮವು ಬೋಧಿಸುತ್ತದೆ. ಆದರೆ, ಧರ್ಮಪಾಲಕರ ಎಡವಟ್ಟುಗಳಿಂದಾಗಿ ಧರ್ಮಗಳ ಸಾರಕ್ಕೇ ಕೆಲವೊಮ್ಮೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದಿಂದ (Pakistan) ಭಾರತಕ್ಕೆ ಬಂದು, ಚೆನ್ನೈ ಆಸ್ಪತ್ರೆಯಲ್ಲಿ ಹೃದಯದ ಕಸಿ ಮಾಡಿಸಿಕೊಂಡ ಪಾಕಿಸ್ತಾನದ ಯುವತಿಯೊಬ್ಬಳನ್ನು ಅಲ್ಲಿನ ಧರ್ಮಗುರುವೊಬ್ಬ (Pakistani Imam) ಟೀಕಿಸಿದ್ದಾನೆ.

ಯುವತಿಯು ಹೃದಯದ ಕಸಿ ಮಾಡಿಸಿಕೊಂಡಿರುವ ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಮಾಮ್‌, “ಯುವತಿಗೆ ಹೃದಯ ದಾನ ಮಾಡಿದವನು ಸತ್ತಿದ್ದಾನೆ. ಅವನು ಖಂಡಿತವಾಗಿಯೂ ನಾಸ್ತಿಕನೇ ಆಗಿರುತ್ತಾನೆ. ಅಂತಹ ಹಿಂದುವಿನ ಹೃದಯವನ್ನು ಕಸಿ ಮಾಡಿಸಿಕೊಂಡು ಬಂದ ಪಾಕಿಸ್ತಾನದ ಯುವತಿಯ ಧೈರ್ಯವನ್ನು ಮೆಚ್ಚಬೇಕು. ಆದರೆ, ಹಿಂದುವಿನ ಹೃದಯ ಹೊಂದಿರುವ ಆಯೇಷಾ ಈಗ ಅಲ್ಲಾನ ಎದುರು ತಲೆ ಬಾಗಿ ನಿಲ್ಲಬೇಕು. ಆಗ ಆಕೆಯ ಧೈರ್ಯವನ್ನು ಮೆಚ್ಚುತ್ತೇನೆ” ಎಂಬುದಾಗಿ ಇಮಾಮ್‌ ಹೇಳಿದ್ದಾನೆ. “ಮುಸ್ಲಿಮರು ಅಂಗಾಂಗ ಹಾಗೂ ರಕ್ತವನ್ನು ದಾನ ಮಾಡುವುದು ತಪ್ಪು” ಎಂದು ಕೂಡ ಹೇಳಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದ್ದು, ಇಮಾಮ್‌ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೃದಯದ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಆಯೇಷಾ ರೆಶಾನ್‌ (19) ಎಂಬ ಯುವತಿಗೆ ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ವೈದ್ಯರು ಉಚಿತವಾಗಿ ಹೃದಯದ ಕಸಿ ಮಾಡುವ ಮೂಲಕ ನೆರೆ ರಾಷ್ಟ್ರದ ಯುವತಿಯ ಬಾಳಿಗೆ ಬೆಳಕಾಗಿದ್ದಾರೆ. ಭಾರತೀಯರೊಬ್ಬರ ಹೃದಯವನ್ನು ಪಾಕಿಸ್ತಾನದ ಯುವತಿಗೆ ಕಸಿ ಮಾಡುವ ಮೂಲಕ, ಆಕೆ ಮತ್ತೆ ಬದುಕು ಕಟ್ಟಿಕೊಳ್ಳಲು ಅಪೂರ್ವ ಅವಕಾಶ ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಇದಕ್ಕಾಗಿ ಆಯೇಷಾ ರೆಶಾನ್‌ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯೇಷಾ ರೆಶಾನ್‌ಗೆ ಏನಾಗಿತ್ತು?

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಆದರೆ, ಹಾರ್ಟ್‌ ಪಂಪ್‌ ಅಳವಡಿಸಿದ ಬಳಿಕ ಶಸ್ತ್ರಚಿಕಿತ್ಸೆಯು ವಿಫಲವಾಗಿತ್ತು. ಇದರಿಂದಾಗಿ ಆಯೇಷಾ ರೆಶಾನ್‌ ಅವರ ಪ್ರಾಣಕ್ಕೆ ಕುತ್ತು ಬಂದಿತ್ತು. ಆಗ, ಆಸ್ಪತ್ರೆಯ ಸರ್ಜನ್‌ಗಳು ದಾನಿಯೊಬ್ಬರ ಹೃದಯವನ್ನು ಆಯೇಷಾ ರೆಷಾನ್‌ ಅವರಿಗೆ ಅಳವಡಿಸುವ ಮೂಲಕ ಆಕೆಯ ಪ್ರಾಣ ಉಳಿಸಿದ್ದಾರೆ.

ಹೃದಯದ ಕಸಿ ಮಾಡಲು ಸುಮಾರು 35 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಚೆನ್ನೈನ ಐಶ್ವರ್ಯನ್‌ ಟ್ರಸ್ಟ್‌ ಹಾಗೂ ಆಸ್ಪತ್ರೆ ವೈದ್ಯರೇ ಖರ್ಚು ಭರಿಸಿ, ಉಚಿತವಾಗಿ ಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದೆಹಲಿ ಮೂಲದ ದಾನಿಯಿಂದ ಹೃದಯ ಪಡೆದ ವೈದ್ಯರು, ಆಯೇಷಾಗೆ ಅಳವಡಿಸಿದ್ದಾರೆ. “ಹೃದಯ ಕಸಿ ಬಳಿಕ ನಾನೀಗ ಆರೋಗ್ಯದಿಂದ ಇದ್ದೇನೆ. ಚೆನ್ನೈ ವೈದ್ಯರಿಂದಾಗಿ ನಾನು ಉಸಿರಾಡುತ್ತಿದ್ದೇನೆ. ನನ್ನ ಜೀವ ಉಳಿಸಿದ ವೈದ್ಯರಿಗೆ ಕೃತಜ್ಞತೆಗಳು. ಪಾಕಿಸ್ತಾನಕ್ಕೆ ತೆರಳಿ ನಾನು ಪದವಿ ಪಡೆಯುತ್ತೇನೆ” ಎಂಬುದಾಗಿ ಆಯೇಷಾ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Continue Reading

ವೈರಲ್ ನ್ಯೂಸ್

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Lottery: ಅಮೆರಿಕದ ಮಹಿಳೆಗೆ ಕರೆ ಮಾಡಿ, ನಿಮಗೆ ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದು ಅಧಿಕಾರಿಗಳನ್ನು ಇನ್ನಷ್ಟು ತಬ್ಬಿಬ್ಬಾಗಿಸಿದೆ.

VISTARANEWS.COM


on

Lottery
Koo

ವಾಷಿಂಗ್ಟನ್:‌ ನಿಮಗೆ 5 ಕೋಟಿ ರೂ. ಲಾಟರಿ (Lottery) ಹೊಡೆದಿದೆ ಎಂದು ಕರೆ ಬರುತ್ತದೆ. ಲಾಟರಿ ಕುರಿತು ಮೆಸೇಜ್‌ ಕೂಡ ಬರುತ್ತದೆ. ನಂಬಿ ಅವರು ಕಳುಹಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ, ನಿಮ್ಮ ಖಾತೆಯಲ್ಲಿರುವ ಹಣ ಕಟ್‌ ಆಗುವುದು ಗ್ಯಾರಂಟಿ. ಇಂತಹ ಸ್ಕ್ಯಾಮ್‌ಗಳಿಂದಲೇ ಜನ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಅನಾಮಧೇಯ ವ್ಯಕ್ತಿಗಳ ಕರೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ಹೀಗೆ, ಬರುವ ಕರೆಗಳಲ್ಲ ಸ್ಕ್ಯಾಮ್‌ (Cyber Crime) ಎಂದು ತಿಳಿದುಕೊಂಡ ಅಮೆರಿಕದ (America) ಮಹಿಳೆಯೊಬ್ಬರು 1 ಕೋಟಿ ಲಾಟರಿ ಹೊಡೆದಿದೆ ಎಂಬುದಾಗಿ ಬಂದ ಕರೆಯನ್ನು ನಿರ್ಲಕ್ಷಿಸಿದ್ದಾರೆ. ಆದರೆ, ಅವರಿಗೆ ಒಂದು ಕೋಟಿ ರೂ. ಲಾಟರಿ ಮೊತ್ತವನ್ನು ತಲುಪಿಸಲು ಅಧಿಕಾರಿಗಳು ಹೆಣಗಾಡಿದ್ದಾರೆ.

ಹೌದು, ಗ್ರೇಟರ್‌ ಮ್ಯಾಂಚೆಸ್ಟರ್‌ನ ಹೀಲ್ಡ್‌ ಗ್ರೀನ್‌ನಲ್ಲಿರುವ ಅನೆ (Anne) ಎಂಬುವರು ಲಾಟರಿ ಟಿಕೆಟ್‌ ಖರೀದಿಸಿದ್ದರು. ಬಂದರೆ ಬರಲಿ, ಹೋದರೆ ಹೋಗಲಿ ಎಂಬ ಮನಸ್ಥಿತಿಯಲ್ಲಿ ಅವರು ಟಿಕೆಟ್‌ ಖರೀದಿಸಿದ್ದರು. ಟಿಕೆಟ್‌ ಖರೀದಿಸಿ ತುಂಬ ದಿನ ಆದ ಕಾರಣ ನಿರ್ಲಕ್ಷದಿಂದ ಇದ್ದರು. ಆದರೆ, ಕೆಲ ದಿನಗಳ ಹಿಂದಷ್ಟೇ ಅನೆ ಅವರಿಗೆ ಲಾಟರಿ ಕಂಪನಿಯ ಅಧಿಕಾರಿಗಳು ಅನೆ ಅವರಿಗೆ ಕರೆ ಮಾಡಿದ್ದಾರೆ. ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಇದು ಸ್ಕ್ಯಾಮ್‌ ಎಂದ ಅನೆ, ಕಾಲ್‌ ಕಟ್‌ ಮಾಡಿದ್ದಾರೆ.

ಅನೆಗೆ ದುಡ್ಡು ಸಿಕ್ಕಿದ್ದು ಹೇಗೆ?

ಮಹಿಳೆಯು ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದರಿಂದಲೂ ಅಧಿಕಾರಿಗಳಿಗೆ ಗೊಂದಲ ಉಂಟಾಗಿದೆ. ಈಗ ಲಾಟರಿ ಮೊತ್ತವನ್ನು ಇಟ್ಟುಕೊಳ್ಳುವ ಹಾಗೂ ಇಲ್ಲ, ಕೊಡೋಣವೆಂದರೆ ಮಹಿಳೆಯು ಸಿಗುತ್ತಿಲ್ಲ. ಹಾಗಾಗಿ, ಅಧಿಕಾರಿಗಳಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು.

ಲಾಟರಿ ಕಂಪನಿ ಅಧಿಕಾರಿಗಳು ಅಷ್ಟಕ್ಕೇ ಸುಮ್ಮನಾಗಿಲ್ಲ. ಅನೆ ಅವರ ವಿಳಾಸವನ್ನು ಹುಡುಕಿದ್ದಾರೆ. ಗಲ್ಲಿ ಗಲ್ಲಿ ಸುತ್ತಾಡಿ ಕೊನೆಗೂ ಅನೆ ಅವರನ್ನು ಹುಡುಕಿ, ಅವರಿಗೆ ಒಂದು ಕೋಟಿ ರೂ. ಮೌಲ್ಯದ ಚೆಕ್‌ ನೀಡಿದ್ದಾರೆ. ಇದನ್ನು ಕಂಡ ಅನೆ ಹಾಗೂ ಸುತ್ತಮುತ್ತಲಿನವರಿಗೆ ಆಶ್ಚರ್ಯ ಉಂಟಾಗಿದೆ. “ನನಗೆ ಕರೆ ಮಾಡಿದರು, ಇ-ಮೇಲ್‌ ಮಾಡಿದರು. ಇದೆಲ್ಲ ಸ್ಕ್ಯಾಮ್‌ ಇರಬಹುದು ಎಂದು ಸುಮ್ಮನಾದೆ. ಆದರೆ, ಅಧಿಕಾರಿಗಳು ಮನೆಗೇ ಬಂದು ಚೆಕ್‌ ನೀಡಿದ್ದಾರೆ. ಇದರಲ್ಲಿ ಒಂದಷ್ಟು ಹಣವನ್ನು ದಾನವಾಗಿ ನೀಡುವೆ” ಎಂದು ಅನೆ ತಿಳಿಸಿದ್ದಾರೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading

ದೇಶ

Goldy Brar: ಸಿಧು ಮೂಸೆವಾಲಾ ಹತ್ಯೆ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಕೊಲೆ; ಕೊಂದಿದ್ದು ಯಾರು?

Goldy Brar: ಪಂಜಾಬಿ ಗಾಯಕ, ಕಾಂಗ್ರೆಸ್​ ಮುಖಂಡ ಸಿಧು ಮೂಸೆವಾಲಾ ಅವರನ್ನು 2022ರ ಮೇ ತಿಂಗಳಲ್ಲಿ ಮಾನ್ಸಾ ಜಿಲ್ಲೆಯಲ್ಲಿ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಸಿಧು ಹತ್ಯೆಯ ಮಾಸ್ಟರ್​ ಮೈಂಡ್​ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್​ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈಗ ಲಾರೆನ್ಸ್‌ ಬಿಷ್ಣೋಯಿ ಆಪ್ತ, ಸಿಧು ಮೂಸೆವಾಲಾ ಹತ್ಯೆಯ ರೂವಾರಿ ಗೋಲ್ಡಿ ಬ್ರಾರ್‌ನನ್ನು ಅಮೆರಿಕದಲ್ಲಿ ಹತ್ಯೆ ಮಾಡಲಾಗಿದೆ.

VISTARANEWS.COM


on

Goldy Brar
Koo

ವಾಷಿಂಗ್ಟನ್: ಪಂಜಾಬ್​ ಗಾಯಕ ಸಿಧು ಮೂಸೆವಾಲಾ (Sidhu Moosewala) ಹತ್ಯೆಯ ರೂವಾರಿ, ಕೆನಡಾ ಮೂಲದ ಗ್ಯಾಂಗ್​ಸ್ಟರ್​ ಗೋಲ್ಡಿ ಬ್ರಾರ್ (Gangster Goldy Brar) ಅಮೆರಿಕದಲ್ಲಿ ಹತ್ಯೆಗೀಡಾಗಿದ್ದಾನೆ. ದಲ್ಲಾ ಲಖಬೀರ್‌ ಗ್ಯಾಂಗ್‌ ಸದಸ್ಯರು ಕ್ಯಾಲಿಫೋರ್ನಿಯಾದಲ್ಲಿ (California) ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದಾಗ್ಯೂ, ಗೋಲ್ಡಿ ಬ್ರಾರ್‌ ಹತ್ಯೆಯ ಕುರಿತು ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ.

ಕ್ಯಾಲಿಫೋರ್ನಿಯಾದಲ್ಲಿರುವ ಹೋಟೆಲ್‌ ಫೇರ್‌ಮೌಂಟ್‌ನಲ್ಲಿ ಲಖಬೀರ್‌ ಗ್ಯಾಂಗ್‌ನ ಸದಸ್ಯರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. 2022ರ ಮೇ 29ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿದ್ದು, ಈತನೇ ಮಾಸ್ಟರ್‌ಮೈಂಡ್‌ ಎಂದು ತಿಳಿದುಬಂದಿದೆ. ವರ್ಷಾರಂಭದಲ್ಲಿಯೇ ಈತನನ್ನು ಭಯೋತ್ಪಾದಕ ಎಂದು ಭಾರತ ಸರ್ಕಾರ ಘೋಷಿಸಿತ್ತು .

Killer of Sidhu Moosewala Goldy brar declared 'terrorist' under UAPA

ಸಿಧು ಹತ್ಯೆಯ ಮಾಸ್ಟರ್​ ಮೈಂಡ್​ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್​ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈ ಬ್ರಾರ್​ ಕೂಡ ಅದೇ ಬಿಷ್ಣೋಯಿ ಗ್ಯಾಂಗ್​​ನವನು. ಬ್ರಾರ್ ಮೂಲತಃ ಪಂಜಾಬ್​ನ ಮುಕ್ತ್ಸಾರ್​​ನವನಾಗಿದ್ದು, ಕೆನಡಾದಲ್ಲಿ ನೆಲೆಸಿದ್ದ. ಇವನ​​ ವಿರುದ್ಧ ಇಂಟರ್​​​ಪೋಲ್​ ರೆಡ್​ ನೋಟಿಸ್​ ಜಾರಿಯಾಗಿತ್ತು. ಇವನ ವಿರುದ್ಧ ಕೇವಲ ಸಿಧು ಮೂಸೆ ಹತ್ಯೆ ಕೇಸ್​ ಮಾತ್ರವಲ್ಲ, ಇನ್ನಿತರ ಕೆಲವು ಹತ್ಯೆ, ಕ್ರಿಮಿನಲ್​ ಪಿತೂರಿ, ಕಾನೂನು ಬಾಹಿರ ಶಸ್ತ್ರಾಸ್ತ್ರಗಳ ಪೂರೈಕೆ, ಹತ್ಯೆ ಪ್ರಯತ್ನ ಇನ್ನಿತರ ಅನೇಕ ಕೇಸ್​​ಗಳಲ್ಲಿ ಬೇಕಾದವನಾಗಿದ್ದ.

ಗೋಲ್ಡಿ ಬ್ರಾರ್ ಎಂದೇ ಕುಖ್ಯಾತನಾಗಿರುವ ಸತೀಂದರ್ಜಿತ್ ಸಿಂಗ್, ವಿದ್ಯಾರ್ಥಿ ವೀಸಾ ಮೂಲಕ 2007ರಲ್ಲಿ ಕೆನಾಡಗೆ ಹೋಗಿದ್ದ. ಕೊಲೆ, ಸುಲಿಗೆ ಸೇರಿದಂತೆ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಕೆನಡಾದಲ್ಲಿದ್ದುಕೊಂಡೇ ನಡೆಸುತ್ತಿದ್ದ. ಗಡಿಯಾಚೆಗಿನ ಏಜೆನ್ಸಿಯ ಬೆಂಬಲದೊಂದಿಗೆ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತು ರಾಷ್ಟ್ರೀಯವಾದಿ ಪರ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಎಂದು ತಿಳಿದುಬಂದಿದೆ.

ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದ. ಭಾರತದಲ್ಲಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಈತನ ಪಾಲಿದೆ. ಬ್ರಾರ್ ಪಂಜಾಬ್‌ನ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದ. ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳು ಮತ್ತು ಇತರ ದೇಶವಿರೋಧಿ ಚಟುವಟಿಕೆಗಳಿಗೆ ಈತ ಉತ್ತೇಜನ ನೀಡುತ್ತಿದ್ದ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading
Advertisement
Love Jihad
ದೇಶ22 mins ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ24 mins ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ58 mins ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

T20 Rankings
ಕ್ರೀಡೆ1 hour ago

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

Pakistan Teen
ದೇಶ1 hour ago

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Prajwal Revanna Case
ಕರ್ನಾಟಕ2 hours ago

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

KL Rahul
ಕ್ರಿಕೆಟ್2 hours ago

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

Rahul Gandhi
ದೇಶ2 hours ago

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ3 hours ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ3 hours ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌