ಕನ್ನಡ ಸಾಹಿತ್ಯ ಸಮ್ಮೇಳನ | 11 ಮುಸ್ಲಿಮರಿಗೆ ಅವಕಾಶ, ಇಬ್ಬರಿಗೆ ಸನ್ಮಾನ; ಮುಸ್ಲಿಂ ಪ್ರಾತಿನಿಧ್ಯ ಇಲ್ಲವೆನ್ನುವುದು ಬೇಜವಾಬ್ದಾರಿ ಮಾತು: ಮಹೇಶ್‌ ಜೋಶಿ ಸಂದರ್ಶನ - Vistara News

ಕ ಸಾ ಪ

ಕನ್ನಡ ಸಾಹಿತ್ಯ ಸಮ್ಮೇಳನ | 11 ಮುಸ್ಲಿಮರಿಗೆ ಅವಕಾಶ, ಇಬ್ಬರಿಗೆ ಸನ್ಮಾನ; ಮುಸ್ಲಿಂ ಪ್ರಾತಿನಿಧ್ಯ ಇಲ್ಲವೆನ್ನುವುದು ಬೇಜವಾಬ್ದಾರಿ ಮಾತು: ಮಹೇಶ್‌ ಜೋಶಿ ಸಂದರ್ಶನ

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲ್ಪಡುವ ಕನ್ನಡ ಸಾಹಿತ್ಯ ಪರಿಷತ್ತಿನ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ ಸಮ್ಮೇಳನ ನಡೆಸುವ ಪ್ರಯತ್ನ ಈ ಬಾರಿಯೂ ನಡೆಯುತ್ತಿದೆ. ಈ ಕುರಿತು ಕಸಾಪ ಅಧ್ಯಕ್ಷರ ಸಂದರ್ಶನ ಇಲ್ಲಿದೆ.

VISTARANEWS.COM


on

kannada sahitya sammelana mahesh joshi interview
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಮೇಶ ದೊಡ್ಡಪುರ, ಬೆಂಗಳೂರು
ಘೋಷಣೆಯಾಗಿ ಎರಡು ವರ್ಷವಾದರೂ ಕೊರೊನಾ ಕರಿನೆರಳಿನ ಕಾರಣಕ್ಕೆ ಮುಂದೂಡುತ್ತಲೇ ಸಾಗಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಜನವರಿ 6-8ರವರೆಗೆ ನಡೆಯುತ್ತಿದೆ. ಪ್ರೊ. ದೊಡ್ಡರಂಗೇಗೌಡರ ಅಧ್ಯಕ್ಷತೆಯ ಸಮ್ಮೇಳನವೂ ಇತರೆ ಸಮ್ಮೇಳನಗಳಂತೆಯೇ ಒಂದಷ್ಟು ಚರ್ಚೆ, ವಿವಾದ ಹುಟ್ಟುಹಾಕಿದೆ. ಈ ಬಗ್ಗೆ ಕಸಾಪ ಅಧ್ಯಕ್ಷ ಡಾ. ಮಹೇಶ್‌ ಜೋಶಿ ಅವರು ʼವಿಸ್ತಾರ ನ್ಯೂಸ್‌ʼಗೆ ನೀಡಿದ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಏನು?
-ಸಾಹಿತ್ಯ ಸಮ್ಮೇಳನ ನಡೆಸುವ ಉದ್ದೇಶ ಬಹಳ ಸ್ಪಷ್ಟವಾಗಿದೆ. 1915ರಲ್ಲಿ ಕಸಾಪ ಸ್ಥಾಪನೆ ಆದ ಸಂದರ್ಭದಲ್ಲಿ ಏಕೀಕರಣವೇ ಮುಖ್ಯ ಉದ್ದೇಶವಾಗಿತ್ತು. ನಂತರದಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಎಂಬ ವಿಚಾರದಲ್ಲಿ ಸಮ್ಮೇಳನ ನಡೆಯುತ್ತಿದ್ದವು. ಈಗ ಕನ್ನಡದ ಕಲೆ, ಜಾನಪದ, ಭಾಷೆ, ಉದ್ಯೋಗದ ಜತೆಗೆ ಜತೆಗೆ ಕನ್ನಡದ ಅಸ್ಮಿತೆಯ ರಕ್ಷಣೆಯ ಅಭಿವೃದ್ಧಿ. ಈ ವಿಚಾರದಲ್ಲಿ ಇರುವ ಸಮಸ್ಯೆಗಳೇನು? ಅದಕ್ಕೆ ಪರಿಹಾರ ಏನು? ಎಂಬ ಕುರಿತು ಗೋಷ್ಠಿಗಳನ್ನು ಏರ್ಪಡಿಸುವುದು ಸಮ್ಮೇಳನದ ಉದ್ದೇಶ.

ಹೊಸ ಸಾಹಿತಿಗಳಿಗೆ ಅವಕಾಶ, ಉತ್ತೇಜನ ನೀಡುವುದು. ಎಲ್ಲ ಕ್ಷೇತ್ರಗಳ ಸಮಸ್ಯೆ, ಸವಾಲುಗಳ ಜತೆಗೆ ಕನ್ನಡಿಗರು ಮಾಡಿರುವ ಸಾಧನೆಗಳನ್ನೂ ತಿಳಿಸಬೇಕು. 75ವರ್ಷಗಳಿಂದ ಕೇವಲ ಸಮಸ್ಯೆ ಮಾತ್ರವೇ ಇಲ್ಲ, ಸಾಧನೆಯೂ ಇದೆ. ಮೌಲಿಕವಾದ ಹಾಗೂ ಸರ್ಕಾರಕ್ಕೆ ಮಾರ್ಗದರ್ಶನ ನೀಡುವ ಕಾರ್ಯವೂ ಈ ಸಮ್ಮೇಳನಗಳಲ್ಲಿ ಆಗುತ್ತಿದೆ.

ನೀವು ತಿಳಿಸಿದ ಉದ್ದೇಶಕ್ಕೆ ಅನುಗುಣವಾಗಿ 86ನೇ ಸಮ್ಮೇಳನ ರೂಪಿತವಾಗಿದೆಯೇ?
-ಖಂಡಿತ ಆಗಿದೆ. ಆಹ್ವಾನ ಪತ್ರಿಕೆ ನೋಡಿ. ಮೊಟ್ಟ ಮೊದಲ ಬಾರಿಗೆ ಅತಿ ಹೆಚ್ಚು ಗೋಷ್ಠಿಗಳನ್ನು ಈ ಬಾರಿ ರೂಪಿಸಲಾಗಿದೆ. ನಾವು ಹೊಸಬರಿಗೆ ಅವಕಾಶಗಳನ್ನು ನೀಡುತ್ತಿದ್ದೇವೆ. ಕನ್ನಡದ ಮುಂದಿನ ಪೀಳಿಗೆ ಶಕ್ತಿಯುತವಾಗಿ ಬರಬೇಕಿದೆ. ಮುಂದಿನ ಪೀಳಿಗೆ ಕನ್ನಡವನ್ನೇ ಮಾತನಾಡದ ಸ್ಥಿತಿ ಇರುವಾಗ, ಅವರಿಗೆ ವೇದಿಕೆ ಕೊಟ್ಟು ಅವರಲ್ಲಿರುವ ಕನ್ನಡದ ಪ್ರೇಮ ಹೆಚ್ಚಿಸುವ ಕೆಲಸವನ್ನೂ ಸ್ಪಷ್ಟವಾಗಿ ಮಾಡುತ್ತಿದ್ದೇವೆ.

ಮುಸ್ಲಿಮರಿಗೆ ಪ್ರಾತನಿಧಿತ್ವ ನೀಡುವ ಕುರಿತು ಈಗ ಒಂದಷ್ಟು ಚರ್ಚೆಗಳು ನಡೆಯುತ್ತಿವೆಯಲ್ಲ?
-ಪ್ರಜಾಪ್ರಭುತ್ವದಲ್ಲಿ ಪರ ವಿರೋಧಗಳು ಬರುವುದು ಸಹಜ. ಧರ್ಮಸ್ಥಳದಲ್ಲಿ ನಡೆದ ಸಮ್ಮೇಳನಕ್ಕೂ ಪರ್ಯಾಯ ಮಾಡಿದರು. ಅತ್ಯಂತ ಶಿಸ್ತಿನಿಂತ, ಸುವ್ಯವಸ್ಥಿತವಾಗಿ ನಡೆಯುವ ಆಳ್ವಾಸ್‌ ನುಡಿಸಿರಿಗೂ ಪರ್ಯಾಯ ಮಾಡಿದರು. ಇದೇನೂ ಹೊಸದಲ್ಲ. ನಮ್ಮ ಸಮ್ಮೇಳನಕ್ಕೂ, ಪರ್ಯಾಯಕ್ಕೆ ಬರುವವರ ಸಂಖ್ಯೆಗೂ ಹೋಲಿಕೆ ಮಾಡಿ ನೋಡಿ. 200 ಜನ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ಅದರಲ್ಲೂ ಎಷ್ಟು ಜನ ಹೋಗುವುದಿಲ್ಲೋ ಗೊತ್ತಿಲ್ಲ. ನಮ್ಮಲ್ಲಿ ಲಕ್ಷಾಂತರ ಜನರು ಬರುತ್ತಾರೆ. ಹಾಗಾಗಿ ಅದರ ಬಗ್ಗೆ ಅಷ್ಟೊಂದು ಮಹತ್ವವನ್ನು ನೀಡುವುದು ಬೇಡ.

ಕಸಾಪ ಸಮ್ಮೇಳನಕ್ಕೆ ಪರ್ಯಾಯ ನಡೆಸುವ ಉದ್ದೇಶ ಏನು ಇರಬಹುದು?
-ಮೊದಲನೆಯದಾಗಿ ನನಗೆ ಬಿ.ಎಂ. ಹನೀಫ್‌ ಮೆಸೇಜ್‌ ಮಾಡಿದರು. “ಶಭಾಷ್‌ ಮಹೇಶ್‌ ಜೋಶಿ. ಪ್ರಧಾನ ವೇದಿಕೆಯಲ್ಲಿ ಧರ್ಮಧ್ವೇಷ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮುಸ್ಲಿಮರ ಕಡೆಗಣನೆ. 83 ಸಾಧಕರಲ್ಲಿ ಒಬ್ಬರೂ ಮುಸ್ಲಿಂ ಇಲ್ಲʼ ಎಂದು ಮೆಸೇಜ್‌ ಮಾಡಿದರು. ನಾನು ಒಬ್ಬ ವ್ಯಕ್ತಿ ಬಗ್ಗೆ ಮಾತನಾಡುವುದಿಲ್ಲ. ಆದರೆ ಹನೀಫ್‌ ಬಗ್ಗೆ ಏಕೆ ಮಾತನಾಡುತ್ತೇನೆ ಎಂದರೆ ಅವರೊಬ್ಬ ಪತ್ರಕರ್ತ. ಪತ್ರಿಕಾಧರ್ಮ ಅವರಿಗೆ ಗೊತ್ತಿರಬೇಕಾದವರು, ಸುಳ್ಳು ಸುದ್ದಿ ಸೃಷ್ಟಿ ಮಾಡಬಾರದು. ಮೊದಲನೆಯದಾಗಿ 83 ಸಂಖ್ಯೆಯೇ ತಪ್ಪು. ನಾವು 86 ಜನರಿಗೆ ಸನ್ಮಾನ ಮಾಡುತ್ತಿದ್ದೇವೆ.

ಆಹ್ವಾನ ಪತ್ರಿಕೆಯ 5ನೇ ಪುಟದ 29ನೇ ಹೆಸರು ರಾಜು ನದಾಫ್‌ ಎಂದು ಇದೆ. ಇವರು ಹಾವೇರಿ ಜಿಲ್ಲೆಯ ಹಿರಿಯ ಪತ್ರಕರ್ತರು, ಜಿಲ್ಲಾ ಮುಖ್ಯ ವರದಿಗಾರರು. ಅವರ ಹೆಸರು ರಾಜಾ ಸಾಹೇಬ್‌ ನದಾಫ್‌, ಆದರೆ ತಾವೇ ರಾಜು ನದಾಫ್‌ ಎಂದು ಗುರುತಿಸಿಕೊಂಡಿದ್ದಾರೆ. 8 ನೇ ಪುಟದ 26ನೇ ಹೆಸರು ಕೆ. ಎ. ದೊಡ್ಡಮನಿ. ಅವರ ಪೂರ್ಣ ಹೆಸರು ಖಾಜಾಸಾಹಬ್‌ ಅಮೀನ್‌ ಸಾಹಬ್‌ ದೊಡ್ಡಮನಿ. ಇವರೆಲ್ಲ ಹಿಂದುವೇ? ಜೈನರೇ? ಅಥವಾ ಹನೀಫ್‌ ಅವರನ್ನು ಮುಸ್ಲಿಂ ಸಮಾಜದಿಂದ ಬಹಿಷ್ಕಾರ ಹಾಕಿದ್ದಾರೆಯೇ?

ಜವಾಬ್ದಾರಿಯುತ ಪತ್ರಕರ್ತ ಆಗಬೇಕಿದ್ದ ಈತ ಅತ್ಯಂತ ಬೇಜವಾಬ್ದಾರಿ ಮನುಷ್ಯ. ಸಾಮರಸ್ಯದಿಂದ ಜೀವನ ನಡೆಸುವವರ ನಡುವೆ ಬೆಂಕಿ ಹಚ್ಚುವ ಮನುಷ್ಯ ಈತ. ಅವರದ್ದೇ ಸಮುದಾಯದ ಸಾಧಕರು ಯಾರು ಎಂದು ಇವರಿಗೇ ಗೊತ್ತಿಲ್ಲ. ಇದೆಂತಹ ಕುಚೇಷ್ಟೆ? ಇವರೆಲ್ಲರೂ ಕುತಂತ್ರವಾದಿಗಳು, ಮಾನಸಿಕ ವ್ಯಾಧಿಗಳಿಂದ ಬಳಲುತ್ತಿದ್ದಾರೆ.

ಇದು ಕನ್ನಡ ಸಾಹಿತ್ಯ ಸಮ್ಮೇಳನವೇ ವಿನಃ ಧರ್ಮ ಸಾಹಿತ್ಯ ಸಮ್ಮೇಳನ ಅಲ್ಲ. ಕನ್ನಡ ಮಾತ್ರವೇ ಇಲ್ಲಿ ಸಂಪೂರ್ಣ ಮಾನದಂಡ. ಎಲ್ಲರನ್ನೂ ಕನ್ನಡಿಗ ಎಂಬ ದೃಷ್ಟಿಯಿಂದ ನೋಡುತ್ತೇನೆಯೇ ಹೊರತು ಮುಸ್ಲಿಂ ಕನ್ನಡಿಗ, ಕುರುಬ ಕನ್ನಡಿಗ ಎಂದು ನೋಡುವುದಿಲ್ಲ.

ಪೆಂಡಾಲ್‌ ವಿಚಾರದಲ್ಲಿ ತಾವು ಹೇಳಿದ್ದು ಸುಳ್ಳು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದಾರಲ್ಲ?
-ಪೆಂಡಾಲ್‌ ವಿಚಾರ ಸುಳ್ಳು ಎಂದರೆ ಅವರು ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ. ಅವರಿಗೆ ನಿಜವಾಗಿ ಮಾನನಷ್ಟವಾಗಿದ್ದರೆ ದಯವಿಟ್ಟು ಮಾನನಷ್ಟ ಮೊಕದ್ದಮೆ ಹಾಕಲಿ. ಸಮ್ಮೇಳನದ ಸಂದರ್ಭದಲ್ಲಿ ಪುರುಷೋತ್ತಮ ಬಿಳಿಮಲೆಯಂಥವರು ನನ್ನ ಆರೋಗ್ಯ ವಿಚಾರಿಸಲು ಮಾತನಾಡುತ್ತಾರ? ಹಾಗಾದರೆ ನನ್ನ ಜತೆ ಮಾತಾಡುವ ಅವಶ್ಯಕತೆ ಏನಿತ್ತು? ಅವರು ಮಾನನಷ್ಟ ಮೊಕದ್ದಮೆ ಹೂಡಿದರೆ ನಾನು ಸಾಕ್ಷ್ಯಾಧಾರ ನೀಡುತ್ತೇನೆ.

ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಗೋಷ್ಠಿಗೆ ಪುರುಷೋತ್ತಮ ಬಿಳಿಮಲೆ ಅವರನ್ನೇ ಅಧ್ಯಕ್ಷತೆಗೆ ಕರೆದಿದ್ದೆ. ಅವರು ಜೆಎನ್‌ಯುನಲ್ಲಿದ್ದವರು, ಕನ್ನಡಿಗರಿಗೆ ತರಬೇತಿ ಕೊಟ್ಟವರು ಎಂಬ ಕಾರಣಕ್ಕೆ ಈ ಆಹ್ವಾನ ನೀಡಲಾಗಿತ್ತು. ಯಾವಾಗ ಪೆಂಡಾಲ್‌ ವಿಚಾರ ಪ್ರಚಾರವಾಯಿತೋ, ಆರೋಗ್ಯ ಸರಿಯಿಲ್ಲ ಎಂದು ಗೋಷ್ಠಿಗೆ ಆಗಮಿಸುವುದರಿಂದ ತಪ್ಪಿಸಿಕೊಂಡರು. ಆಗ ಆರೋಗ್ಯ ಸರಿಯಿಲ್ಲ ಎಂದು ಹೇಳಿದವರು ಈಗ ಪರ್ಯಾಯ ಮಾಡಲು ಆರೋಗ್ಯ ಸರಿಯಾಗಿದೆ ಎಂದರೆ ಹನೀಫ್‌ ಅವರು ಏನಾದರೂ ಪವಾಡ ಮಾಡಿದ್ದಾರೆಯೇ?

ಮುಸ್ಲಿಮರಿಗೆ ಅವಕಾಶ ನೀಡಿಲ್ಲ ಎನ್ನುವುದು ಸುಳ್ಳೇ?
-ಹೌದು. ಈ ಬಾರಿಯ ಸಮ್ಮೇಳನದಲ್ಲಿ ಒಟ್ಟು 11 ಮುಸ್ಲಿಮರಿಗೆ ಅವಕಾಶ ನೀಡಲಾಗಿದೆ. ಇವರೆಲ್ಲರೂ ಗೋಷ್ಠಿ, ಸ್ವಾಗತ, ನಿರೂಪಣೆ, ಸ್ವಾಗತದಲ್ಲಿ ಅವಕಾಶ ಮುಂತಾದೆಡೆ ಭಾಗವಹಿಸುತ್ತಿದ್ದಾರೆ. ಈ ಹಿಂದೆ ನಡೆದಿದ್ದ ಕಲಬುರ್ಗಿ ಸಮ್ಮೇಳನದಲ್ಲಿ 10, ಧಾರವಾಡದಲ್ಲಿ ೧೦, ಮೈಸೂರಿನಲ್ಲಿ ೧೦, ರಾಯಚೂರಿನಲ್ಲಿ ೭ ಮುಸ್ಲಿಮರಿಗೆ ಅವಕಾಶ ನೀಡಲಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ಶ್ರವಣಬೆಳಗೊಳದಲ್ಲಿ ಕೇವಲ 5 ಮುಸ್ಲಿಮರಿಗೆ ಅವಕಾಶ ನೀಡಲಾಗಿತ್ತು. ಆಗ ಈ ವಿಚಾರ ಏಕೆ ದೊಡ್ಡದಾಗಿ ಕಾಣಲಿಲ್ಲ? ಮಾಧ್ಯಮದಲ್ಲಿರುವವನಿಗೆ ಇದೆಲ್ಲ ಗೊತ್ತಾಗಬಾರದೇ?

ಈ ಬಾರಿಯ ಸಮ್ಮೇಳನದಲ್ಲಿ ನಿರ್ಣಯಗಳು ಹೇಗಿರುತ್ತವೇ?
ನನ್ನ ಅವಧಿಯಲ್ಲಿ ಬಹಳ ಸ್ಪಷ್ಟ ಬದಲಾವಣೆ ನೋಡುತ್ತೀರಿ. ನಿರ್ಣಯಗಳ ಸಂಖ್ಯೆ ಕಡಿಮೆ ಇರುತ್ತದೆ. ಅದನ್ನು ಅನುಷ್ಠಾನ ಮಾಡುವ ಭಗೀರಥ ಪ್ರಯತ್ನ ಮಾಡುತ್ತೇನೆ. ನಾನು ಒಬ್ಬ ಸರ್ಕಾರಿ ಅಧಿಕಾರಿಯಾಗಿದ್ದರಿಂದ ನನಗೆ ಅನುಷ್ಠಾನ ಹೇಗೆ ಮಾಡಬೇಕು, ಫಾಲೊಅಪ್‌ ಹೇಗೆ ಮಾಡಬೇಕೆಂದು ಗೊತ್ತಿದೆ. ನಿರ್ಣಯ ಅನುಷ್ಠಾನಕ್ಕಾಗಿಯೇ ಒಬ್ಬರು ನಿವೃತ್ತ ಕೆಎಎಸ್‌ ಅಥವಾ ಐಎಎಸ್‌ ಅಧಿಕಾರಿಯನ್ನು ನೇಮಿಸಲಾಗುತ್ತದೆ.

ಸಮ್ಮೇಳನಕ್ಕೆ ರಾಜ್ಯ ಸರ್ಕಾರದಿಂದ ಸಹಕಾರ ಹೇಗಿದೆ? ಈ ಹಿಂದೆ ಒಂದಷ್ಟು ವೈಮನಸ್ಸು ಕಾಣುತ್ತಿತ್ತಲ್ಲ?
-ಅದ್ಭುತವಾಗಿದೆ. ಜಿಲ್ಲಾಡಳಿತ ಹಾಗೂ ಕಸಾಪ ಒಟ್ಟಿಗೆ ಸೇರಿ ಕನ್ನಡದ ರಥವನ್ನು ಎಳೆದುಕೊಂಡು ಹೋಗುವ ಎರಡು ಗಾಲಿಗಳು. ಹಿಂದೆ ಕೆಲವು ಚರ್ಚೆಗಳು ನಡೆದಿದ್ದವು. ನನಗೆ ವೈಯಕ್ತಿಕ ಪ್ರತಿಷ್ಠೆ ಇಲ್ಲ. ಸಾಹಿತ್ಯ ಪರಿಷತ್ತು ಸ್ವಾಯತ್ತ ಪರಿಷತ್ತು. ಇದನ್ನು ತೋರಿಸುವುದು ನನ್ನ ಕರ್ತವ್ಯ. ನಾನು ಈ ಸರ್ಕಾರ, ಆ ಸರ್ಕಾರ ಎಂದಲ್ಲ. ನಾನು ಚುನಾಯಿತಗೊಂಡಿರುವವನು. ಅತಿ ಹೆಚ್ಚು ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ ಎಂದರೆ ಮತದಾರರಿಗೆ ನನ್ನಿಂದ ನಿರೀಕ್ಷೆಯಿದೆ. ಅದಕ್ಕೆ ತಕ್ಕಂತೆ ನಡೆದುಕೊಂಡಿದ್ದೇನೆ. ಈ ಬಾರಿಯ ಸಮ್ಮೇಳನವು ಅತ್ಯಂತ ವ್ಯವಸ್ಥಿತವಾಗಿ, ಶಿಸ್ತಿನಿಂದ ನಡೆಯುತ್ತದೆ.

ಹಾವೇರಿ ಸಮ್ಮೇಳನದ ವಿಶೇಷತೆ ಏನು?
-ದೈವ ಸಂಕಲ್ಪ ಎನ್ನುವ ಹಾಗೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ (ಬಸವರಾಜ ಬೊಮ್ಮಾಯಿ) ಹಾಗೂ ಕಸಾಪ ಅಧ್ಯಕ್ಷರ(ಮಹೇಶ್‌ ಜೋಶಿ) ಇಬ್ಬರದ್ದೂ ಒಂದೇ ಜಿಲ್ಲೆ, ಅದೇ ಜಿಲ್ಲೆಯಲ್ಲಿ ಸಮ್ಮೇಳನ ನಡೆಯುತ್ತಿದೆ. ಇಲ್ಲಿ ಅನೇಕ ಸಾಧು ಸಂತರು, ಶರಣರು, ಕ್ರಾಂತಿಪುರುಷರು ಹುಟ್ಟಿದ್ದಾರೆ. ಶಿಶುನಾಳ ಷರೀಫ್‌, ಕನಕದಾಸರು, ಸರ್ವಜ್ಞ, ಹಾನಗಲ್‌ ಕುಮಾರಸ್ವಾಮಿಗಳು, ಪಾಪು, ಚಂಪಾ, ಮಹದೇವ ಬಣಕಾರ್‌, ಶ್ರೀನಿವಾಸ ಹಾವನೂರು, ಪುಟ್ಟರಾಜ ಗವಾಯಿಗಳು, ಗಳಗನಾಥರು…. ಹಾವೇರಿ ಜಿಲ್ಲೆ ರಜತ ಸಂಭ್ರಮವೂ ನಡೆಯುತ್ತಿದೆ. ಕರ್ನಾಟಕದ ಏಕೀಕರಣದಲ್ಲಿ ಹಾವೇರಿ ಗಣನೀಯ ಪಾತ್ರ ವಹಿಸಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದೆ. ಪತ್ರಿಕೋದ್ಯಮದಲ್ಲೂ ಮಹತ್ವದ ಪಾತ್ರ ವಹಿಸಿದೆ. ಈ ವರ್ಷದ ಡಾ. ಹಿರೇಮಲ್ಲೂರು ಈಶ್ವರನ್‌, ಸು.ರಂ. ಎಕ್ಕುಂಡಿ ಅವರ ಶತಮಾನೋತ್ಸವ ನಡೆಯುತ್ತಿರುವ ವಿಶೇಷತೆಗಳ ನಡುವೆ ಸಮ್ಮೇಳನ ನಡೆಯುತ್ತಿದೆ. ನಾನು ಕನ್ನಡಿಗ ಎಂದು ಎದೆ ಉಬ್ಬಿಸಿಕೊಂಡು ಪ್ರತಿಯೊಬ್ಬರೂ ಹೋಗಬೇಕು ಎನ್ನುವಂತಹ ಸಮ್ಮೇಳನ ಆಗಬೇಕು ಎಂದು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ | Dr Doddarange Gowda | ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ದೊಡ್ಡರಂಗೇಗೌಡಗೆ ಸನ್ಮಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Job Alert
ಉದ್ಯೋಗ3 mins ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ6 mins ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Health Benefits Of Tofu
ಆರೋಗ್ಯ8 mins ago

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

2nd PUC Exam 2 Result tomorrow
ಶಿಕ್ಷಣ40 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ1 hour ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ1 hour ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ2 hours ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ2 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ3 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌