Madhya Pradesh | ಬಿಜೆಪಿಯಿಂದ ಅಮಾನತಾದ ನಾಯಕ, ಕೊಲೆ ಆರೋಪಿಯ ಹೋಟೆಲ್ ನೆಲಸಮ! - Vistara News

ದೇಶ

Madhya Pradesh | ಬಿಜೆಪಿಯಿಂದ ಅಮಾನತಾದ ನಾಯಕ, ಕೊಲೆ ಆರೋಪಿಯ ಹೋಟೆಲ್ ನೆಲಸಮ!

ಎಸ್‌ಯುವಿ ಹರಿಸಿ ವ್ಯಕ್ತಿಯನ್ನು ಕೊಂದಿರುವ ಆರೋಪ ಹೊತ್ತಿರುವ ನಾಯಕರೊಬ್ಬರ ಹೋಟಲನ್ನು ಅಧಿಕಾರಿಗಳು ನೆಲಸಮ ಮಾಡಿದ್ದಾರೆ. ಬಿಜೆಪಿಯ ನಾಯಕರಾಗಿದ್ದ ಕೊಲೆ ಆರೋಪಿಯನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ(Madhya Pradesh).

VISTARANEWS.COM


on

BJP Leade @ Hotel @ Madhya Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್: ಬಿಜೆಪಿಯಿಂದ ಅಮಾನತುಗೊಂಡಿರುವ ಕೊಲೆ ಆರೋಪಿ ಮಿಶ್ರಿ ಚಂದ್ ಗುಪ್ತಾ ಅವರ ಸಾಗರ್ ಸಿಟಿಯ ಅಕ್ರಮ ಹೋಟಲನ್ನು ಜಿಲ್ಲಾಡಳಿತವು ನೆಲಸಮ ಮಾಡಿದೆ. ಮಧ್ಯಪ್ರದೇಶ (Madhya Pradesh) ಸಾಗರ್ ಸಿಟಿಯ ಆರೋಪಿ ಮಿಶ್ರಿ ಚಂದ್ ಗುಪ್ತಾ ಅವರು ಡಿಸೆಂಬರ್ 22ರಂದು ಜಗದೀಶ್ ಯಾದವ್ ಎಂಬಾತನ ಮೇಲೆ ತಮ್ಮ ಎಸ್‌ಯುವಿಯನ್ನು ಹರಿಸಿ, ಕೊಲೆ ಮಾಡಿದ್ದರು. ಬಳಿಕ ಬಿಜೆಪಿಯ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.

ಸಾಗರ್ ಸಿಟಿಯ ಜೈರಾಮ್ ಪ್ಯಾಲೇಸ್ ಹೋಟೆಲ್ ಅನ್ನು ಇಂಧೋರ್‌ನ ಅಧಿಕಾರಿಗಳ ಟೀಮ್ ನೆಲಸಮ ಮಾಡಿದೆ. ಹೋಟೆಲ್ ನೆಲಸಮವಾಗುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸಾಗರ್ ಜಿಲ್ಲಾ ಡಿಸಿ ದೀಪಕ್ ಆರ್ಯ ಅವರು, ಹೋಟೆಲ್ ನೆಲಸಮ ಮಾಡುವ ವೇಳೆ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹೊಟೇಲ್ ಅಕ್ಕ ಪಕ್ಕದ ಬಿಲ್ಡಿಂಗ್‌ಗಳಲ್ಲಿ ವಾಸವಿದ್ದ ಜನರಿಗೂ ಈ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಯಾವುದೇ ಜೀವ ಹಾನಿಯಾಗಿಲ್ಲ. ಕೇವಲ ಬಿಲ್ಡಿಂಗ್ ಮಾತ್ರವೇ ನೆಲಸಮ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಮುಖಂಡರಾಗಿದ್ದ ಮಿಶ್ರಿ ಚಂದ್ ಗುಪ್ತಾ ಮತ್ತು ಅವರ ಕುಟುಂಬ ಸದಸ್ಯರು ಮಕ್ರೋನಿಯಾ ಛೇದಕದಲ್ಲಿರುವ ಡೈರಿ ಫಾರ್ಮ್‌ನಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್ ಯಾದವ್ ಅವರ ಮೇಲೆ ಎಸ್‌ಯುವಿ ಹರಿಸಿ ಕೊಲೆ ಮಾಡಿದ್ದಾರೆಂದು ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಒಟ್ಟು 8 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಐವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಮಿಶ್ರಿ ಚಂದ್ ಗುಪ್ತಾ ಅವರು ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ | 19 ವರ್ಷದ ರಿಸಪ್ಷನಿಸ್ಟ್​ ಹತ್ಯೆ; ಉತ್ತರಾಖಂಡ ಬಿಜೆಪಿ ಮಾಜಿ ಸಚಿವನ ಪುತ್ರನ ರೆಸಾರ್ಟ್​ ಸಂಪೂರ್ಣ ನೆಲಸಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Chitta Ranjan Dash: ಸೋಮವಾರ (ಮೇ 20) ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್‌ ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’ ಎಂದು ಘೋಷಿಸಿದ್ದಾರೆ.

VISTARANEWS.COM


on

Chitta Ranjan Dash
Koo

ಕೋಲ್ಕತ್ತಾ: ಸೋಮವಾರ (ಮೇ 20) ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್‌ (Chitta Ranjan Dash) ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’ ಎಂದು ಘೋಷಿಸಿದ್ದಾರೆ. ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.

“ನಾನು ಆರ್‌ಎಸ್‌ಎಸ್‌ಗೆ ತುಂಬಾ ಋಣಿಯಾಗಿದ್ದೇನೆ. ಧೈರ್ಯದಿಂದ ಮಾತನಾಡಲು, ನೇರವಾಗಿರಲು, ಇತರರಿಗೆ ಸಮಾನವಾದ ದೃಷ್ಟಿಕೋನವನ್ನು ಹೊಂದಲು ಆರ್‌ಎಸ್‌ಎಸ್‌ ನನಗೆ ಕಲಿಸಿದೆ. ನಾನು ಬಾಲ್ಯ ಮತ್ತು ಯೌವನವನ್ನು ಆರ್‌ಎಸ್‌ಎಸ್‌ನೊಂದಿಗೆ ಕಳೆದಿದ್ದೇನೆ. ವೃತ್ತಿಯ ಕಾರಣದಿಂದ ನಾನು ಸುಮಾರು ವರ್ಷ ಆರ್‌ಎಸ್‌ಎಸ್‌ನಿಂದ ದೂರ ಉಳಿದಿದ್ದೆ. ಈಗ ಮರಳಲು ಸಿದ್ಧʼʼ ಎಂದು ಅವರು ಹೇಳಿದ್ದಾರೆ.

ಚಿತ್ತ ರಂಜನ್ ದಾಸ್‌ ಅವರು 1962ರಲ್ಲಿ ಒಡಿಶಾದ ಸೋನೆಪುರದಲ್ಲಿ ಜನಿಸಿದರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಉಲ್ಲುಂಡಾದಲ್ಲಿ ಪೂರೈಸಿದರು. ಬಳಿಕ ಧೆಂಕನಲ್ ಮತ್ತು ಭುವನೇಶ್ವರದಲ್ಲಿ ತಮ್ಮ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದರು. 1985ರಲ್ಲಿ ಕಟಕ್‌ನಲ್ಲಿ ಕಾನೂನು ಪದವಿ ಪಡೆದರು. ಅವರು 1986ರಲ್ಲಿ ವಕೀಲರಾಗಿ ಹೆಸರು ನೋಂದಾಯಿಸಿಕೊಂಡರು ಮತ್ತು 1992ರಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಆಯ್ಕೆಯಾದರು.

ಅವರು 1999ರಲ್ಲಿ ಒಡಿಶಾ ಸುಪೀರಿಯರ್ ಜುಡಿಷಿಯಲ್ ಸರ್ವಿಸ್ (ಹಿರಿಯ ಶಾಖೆ)ಗೆ ನೇರ ನೇಮಕಗೊಂಡರು. 2009ರ ಅಕ್ಟೋಬರ್‌ನಲ್ಲಿ ಒಡಿಶಾ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅದಾಗಿ 15 ವರ್ಷ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು ಕೋಲ್ಕತ್ತಾ ಹೈಕೋರ್ಟ್‌ ನ್ಯಾಯಾಧೀಶರಾಗಿ 2022ರ ಜೂನ್‌ನಲ್ಲಿ ನಿಯುಕ್ತಿಗೊಂಡಿದ್ದರು.

“ನಾನು 37 ವರ್ಷಗಳಿಂದ ಆರ್‌ಎಸ್‌ಎಸ್‌ನಿಂದ ದೂರ ಸರಿದಿದ್ದೇನೆ. ಆದರೆ ನನ್ನ ಸದಸ್ಯತ್ವವನ್ನು ಎಂದಿಗೂ ಯಾವುದೇ ಅನುಕೂಲಕ್ಕಾಗಿ ಬಳಸಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇನೆ. ಯಾವುದೇ ಕೆಲಸಕ್ಕೆ ನನ್ನ ಅಗತ್ಯವಿದ್ದರೆ ನಾನು ಆರ್‌ಎಸ್‌ಎಸ್‌ಗೆ ಹಿಂತಿರುಗಲು ಸಿದ್ಧನಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ನಾನು ಆರ್‌ಎಸ್‌ಎಸ್‌ಗೆ ಸೇರಿದವನು ಎಂದು ಹೇಳಿದರೆ ಅದು ತಪ್ಪಲ್ಲ” ಎಂದು ಅವರು ತಿಳಿಸಿದ್ದಾರೆ.

ಚಿತ್ತ ರಂಜನ್‌ ದಾಸ್‌ ಅವರು ತಾವು ತೀರ್ಪು ನೀಡುವ ವೇಳೆ ಆತ ಶ್ರೀಮಂತ, ಬಡವ, ಕಮ್ಯುನಿಸ್ಟ್‌, ಬಿಜೆಪಿ, ಕಾಂಗ್ರೆಸ್ ಅಥವಾ ಟಿಎಂಸಿಯವನು ಎಂದು ಎಂದಿಗೂ ಬೇಧ ಮಾಡಿಲ್ಲ. ಎಲ್ಲರನ್ನೂ ಸಮಾನಾಗಿ ಪರಿಗಣಿಸಿದ್ದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

ಕೆಲವು ಹೈಕೋರ್ಟ್ ನ್ಯಾಯಾಧೀಶರು ಕಾನೂನಿನೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪದೇ ಪದೆ ಆರೋಪಿಸುವ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕಳೆದ ತಿಂಗಳು ಉದ್ಯೋಗಕ್ಕಾಗಿ ನಗದು ಪ್ರಕರಣದ ತೀರ್ಪು ಪ್ರಕಟವಾದ ಒಂದು ದಿನದ ನಂತರ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ್ದ ಅವರು, “ಬಿಜೆಪಿಯವರು ಎಲ್ಲವನ್ನೂ ಖರೀದಿಸಿದ್ದಾರೆ. ನ್ಯಾಯಾಲಯಗಳೂ ಇದಕ್ಕೆ ಹೊರತಲ್ಲ. ನಾನು ಸುಪ್ರೀಂ ಕೋರ್ಟ್ ಬಗ್ಗೆ ಮಾತನಾಡುತ್ತಿಲ್ಲʼʼ ಎಂದು ಪರೀಕ್ಷವಾಗಿ ಆರೋಪಿಸಿದ್ದರು.

Continue Reading

ಪ್ರಮುಖ ಸುದ್ದಿ

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.

VISTARANEWS.COM


on

NIA raid rameshwaram cafe blast
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು (NIA Raid) ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರಿನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮತೀನ್‌, ಶಾಜಿಬ್‌ ಜೊತೆ ಶಾಮೀಲು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳಾದ ಮತೀನ್ ಮತ್ತು ಶಾಜಿಬ್‌ಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಒಟ್ಟು ನಾಲ್ಕು ಸ್ಥಳದಲ್ಲಿ ಎನ್ಐಎ ದಾಳಿ ಮಾಡಿ ದಾಖಲೆಗಳನ್ನು ಪಡೆದುಕೊಂಡಿದೆ. ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Continue Reading

ದೇಶ

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Emirates Flight: ದುಬೈಯಿಂದ ಮುಂಬೈ ಆಗಮಿಸಿದ ಎಮಿರೇಟ್ಸ್‌ ವಿಮಾನಕ್ಕೆ ಸಿಲುಕಿ ಸುಮಾರು 36 ಫ್ಲೆಮಿಂಗೊಗಳು ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಸುಮಾರು 310 ಪ್ರಯಾಣಿಕರನ್ನು ಹೊತ್ತ ಇಕೆ 508 (EK 508) ಎಮಿರೇಟ್ಸ್‌ ವಿಮಾನ ರಾತ್ರಿ 9.18ರ ಸುಮಾರಿಗೆ ಮುಂಬೈಗೆ ಆಗಮಿಸಿತ್ತು. ಈ ವೇಳೆ ಕೊಕ್ಕರೆಯಂತಹ ಫ್ಲೆಮಿಂಗೊಗಳು ವಿಮಾನಕ್ಕೆ ಸಿಲುಕಿ ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ. ವಿಮಾನಕ್ಕೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಯಾವುದೇ ಅಪಾಯವಿಲ್ಲದೆ ಲ್ಯಾಂಡ್‌ ಆಗಿದೆ.

VISTARANEWS.COM


on

Emirates Flight
Koo

ಮುಂಬೈ: ದುಬೈಯಿಂದ ಮುಂಬೈ ಆಗಮಿಸಿದ ಎಮಿರೇಟ್ಸ್‌ ವಿಮಾನ (Emirates Flight)ಕ್ಕೆ ಸಿಲುಕಿ ಸುಮಾರು 36 ಫ್ಲೆಮಿಂಗೊ(Flamingos) ಪಕ್ಷಿಗಳು ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಮುಂಬೈಯ ಘಾಟ್‌ಕೋಪರ್‌ನ ಪಂತ್‌ನಗರದ ಲಕ್ಷ್ಮೀ ನಗರ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಅವಘಡ ನಡೆದಿದೆ. ಸುಮಾರು 310 ಪ್ರಯಾಣಿಕರನ್ನು ಹೊತ್ತ ಇಕೆ 508 (EK 508) ಎಮಿರೇಟ್ಸ್‌ ವಿಮಾನ ರಾತ್ರಿ 9.18ರ ಸುಮಾರಿಗೆ ಮುಂಬೈಗೆ ಆಗಮಿಸಿತ್ತು. ಈ ವೇಳೆ ಕೊಕ್ಕರೆಯಂತಹ ಫ್ಲೆಮಿಂಗೊಗಳು ವಿಮಾನಕ್ಕೆ ಸಿಲುಕಿ ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ. ವಿಮಾನಕ್ಕೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಯಾವುದೇ ಅಪಾಯವಿಲ್ಲದೆ ಲ್ಯಾಂಡ್‌ ಆಗಿದೆ.

ಘಾಟ್ಕೋಪರ್ ಪೂರ್ವ ಪ್ರದೇಶದ ರಸ್ತೆಯಲ್ಲಿ ಫ್ಲೆಮಿಂಗೊ ಮೃತದೇಹಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳು ದುಃಖ ವ್ಯಕ್ತಪಡಿಸಿದ್ದಾರೆ. ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಇವು ಹಿಂಡಾಗಿ ಹಾರಾಡುತ್ತಿದ್ದಾಗ ವಿಮಾನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ.

ಗಾಯಗೊಂಡಿರುವ ಪಕ್ಷಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪಕ್ಷಿಪ್ರೇಮಿಗಳು ತಿಳಿಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ವಿಮಾನಗಳು ಘಾಟ್ಕೋಪರ್ ಪ್ರದೇಶದ ಮೂಲಕ ಹಾದು ಹೋಗುತ್ತವೆ. ಈ ವೇಳೆ ವಿಮಾನಗಳು ಕಡಿಮೆ ಎತ್ತರದಿಂದ ಹಾರುತ್ತವೆ. ಆದ್ದರಿಂದ ವಿಮಾನಕ್ಕೆ ಸಿಲುಕಿ ಫ್ಲೆಮಿಂಗೊ ಸಾವನ್ನಪ್ಪಿರುವ ಸಾಧ್ಯತೆ ಇದೆ. ವಿಮಾನ ನಿಲ್ದಾಣ ಅದಿಕಾರಿಗಳು ಹಕ್ಕಿಗಳ ಸಾವನ್ನು ದೃಢಪಡಿಸಿದ್ದಾರೆ.

ಅರಣ್ಯ ಅಧಿಕಾರಿ ಪ್ರಶಾಂತ್‌ ಬಹಾದುರ್‌ ಮಾತನಾಡಿ, ʼʼಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಆದರೆ ಅವರು ಒಳ ಪ್ರವೇಶಿಸಲು ನಿರಾಕರಿಸಿದ್ದಾರೆ. ಎಮಿರೇಟ್ಸ್‌ ವಿಮಾನ ಡಿಕ್ಕಿ ಹೊಡೆದ ಕಾರಣದಿಂದಲೇ ಪಕ್ಷಿಗಳ ಮಾರಣ ಹೋಮ ನಡೆದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮೊದಲು ಸ್ಥಳೀಯರು ಮಾಹಿತಿ ನೀಡಿದ್ದರುʼʼ ಎಂದು ತಿಳಿಸಿದ್ದಾರೆ.

ಪರಿಸರ ಪ್ರೇಮಿಗಳ ಆತಂಕ

ಪರಿಸರ ಪ್ರೇಮಿ ಡಿ.ಸ್ಟಾಲಿನ್‌ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ, ʼʼವಿಮಾನ ನಿಲ್ದಾಣದ ಬಳಿ ಹಕ್ಕಿಗಳು ಯಾಕೆ ಹಾರಾಡುತ್ತವೆ ಎನ್ನುವುದನ್ನು ತನಿಖೆಗೆ ಒಳಪಡಿಸಬೇಕು. ಅಭಯಾರಣ್ಯದ ಮೂಲಕ ಹಾದುಹೋಗುವ ಹೊಸ ವಿದ್ಯುತ್ ಮಾರ್ಗಗಳು ಪಕ್ಷಿಗಳಿಗೆ ದಿಗ್ಭ್ರಮೆಯನ್ನುಂಟು ಮಾಡುತ್ತಿವೆ. ಹೀಗಾಗಿ ಭಯದಿಂದ ಪಕ್ಷಿಗಳು ತಮ್ಮ ಪಥ ಬದಲಾಯಿಸಿ ನಗರ ಪ್ರದೇಶಗಳತ್ತ ಬರುತ್ತವೆ. ಅಭಯಾರಣ್ಯದಲ್ಲಿ ವಿದ್ಯುತ್ ಮಾರ್ಗಗಗಳಿಗೆ ಅನುಮತಿ ನೀಡಬಾರದು. ಇದಕ್ಕೆ ಅನೇಕ ಪರ್ಯಾಯ ಮಾರ್ಗಗಳಿವೆ. ಅದನ್ನು ಬಳಸಿಕೊಳ್ಳಬೇಕು. ಈ ಹಿಂದೆ ಇಲ್ಲಿ ಅನುಮತಿ ನೀಡುತ್ತಿರಲಿಲ್ಲ. ಇದರ ಜತೆಗೆ ಥಾಣೆ ಕ್ರೀಕ್ ವನ್ಯಜೀವಿ ಅಭಯಾರಣ್ಯವನ್ನು ನೆಲಸಮಗೊಳಿಸಲಾಯಿತು ಮತ್ತು ಗೋಪುರಗಳನ್ನು ನಿರ್ಮಿಸಲಾಯಿತು. ಇದು ಕೂಡ ಪಕ್ಷಿಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆʼʼ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ʼʼಫ್ಲೆಮಿಂಗೊ ಪಕ್ಷಿಗಳು ಮುಖ್ಯವಾಗಿ ತೇವಾಂಶ ಪ್ರದೇಶ ಮತ್ತು ಕೆರೆಗಳಲ್ಲಿ ವಾಸಿಸುತ್ತವೆ. ಈ ಪ್ರದೇಶಗಳು ಗಣನೀಯವಾಗಿ ಕುಗ್ಗುತ್ತಿರುವುದರಿಂದಲೂ ಅವು ವಾಸಯೋಗ್ಯ ಜಾಗಗಳಿಲ್ಲದೆ ಎಲ್ಲೆಂದರಲ್ಲಿ ಹಾರಾಡುತ್ತಿವೆʼʼ ಎಂದು ಸ್ಟಾಲಿನ್‌ ತಿಳಿಸಿದ್ದಾರೆ. ತಮ್ಮ ಸೌಂದರ್ಯದಿಂದಲೇ ಗಮನ ಸೆಳೆಯುವ ಫ್ಲೆಮಿಂಗೊ ಪಕ್ಷಿಗಳು ಮುಂಬೈಯ ಪ್ರಧಾನ ಆಕರ್ಷಣೆ.

ಇದನ್ನೂ ಓದಿ: Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Continue Reading

ಪ್ರಮುಖ ಸುದ್ದಿ

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

CM Siddaramaiah: ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

VISTARANEWS.COM


on

Mallikarjuna Kharge siddaramaiah
Koo

ಬೆಂಗಳೂರು: ಈ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದಲ್ಲಿ ಕಾಂಗ್ರೆಸ್ (congress) ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಪ್ರಧಾನ ಮಂತ್ರಿ (Prime minister) ಆಗಬಹುದು ಎಂಬ ಒಂದು ಸಣ್ಣ ಆಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಚಿವುಟಿ ಹಾಕಿದ್ದಾರೆ. “ರಾಜ್ಯದ ಯಾವ ನಾಯಕನೂ ಪಿಎಂ ಆಗಲ್ಲ” ಎನ್ನುವ ಮೂಲಕ ಅವರು ಈ ಚರ್ಚೆಗೆ ತೆರೆ ಎಳೆದಿದ್ದಾರೆ.

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

ಹಾಗಾದರೆ ರಾಜ್ಯದಿಂದ ಪಿಎಂ ಸ್ಥಾನದ ಅರ್ಹರು, ಆಕಾಂಕ್ಷಿಗಳು ಕಾಂಗ್ರೆಸ್‌ನಲ್ಲಿ ಯಾರು ಇಲ್ಲವೇ? ಸ್ವತಃ ಎಐಸಿಸಿ ಅಧ್ಯಕ್ಷರೇ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಎದುರಿಸಿದೆ. ಕಾಂಗ್ರೆಸ್ ಒಕ್ಕೂಟ ಅಧಿಕ ಸ್ಥಾನ ಗೆದ್ದರೆ ಪಿಎಂ ರೇಸ್‌ನಲ್ಲಿ‌‌ ಖರ್ಗೆಯೂ ಪರಿಗಣನೆಗೆ ಒಳಗಾಗುವವರೇ. ರೇಸ್‌ನಲ್ಲಿ ನಾನಿಲ್ಲ ಎಂದು ಅವರು ಹೇಳಿಲ್ಲ. ಆದರೆ ರಾಹುಲ್‌ ಗಾಂಧಿಯವರನ್ನು ಓವರ್‌ಟೇಕ್‌ ಮಾಡಿ ಮುಂದೆ ಹೋಗಲು ಸ್ವತಃ ಖರ್ಗೆಯವರೇ ತಯಾರಿಲ್ಲ.

ಇನ್ನು ಸಿದ್ದರಾಮಯ್ಯ. ಸ್ವತಃ ಅವರು ರಾಜ್ಯದ ರಾಜಕಾರಣ ಬಿಟ್ಟು ಹೋಗಲು ತಯಾರಿಲ್ಲ. ಬೇರೆ ರಾಜ್ಯಗಳಿಗೆ ಚುನಾವಣಾ ಪ್ರಚಾರಕ್ಕೆ ಹೋಗುವುದು ಕೂಡ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಇತ್ತೀಚೆಗೆ ಹೇಳಿದ್ದರು. ಸ್ವತಃ ರಾಜ್ಯದ ಕಾಂಗ್ರೆಸ್‌ ನಾಯಕತ್ವವನ್ನು ಗಟ್ಟಿಯಾಗಿ ಹಿಡಿದಿರುವ ಸಿದ್ದರಾಮಯ್ಯ, ಅದನ್ನು ಸುತರಾಂ ಬಿಟ್ಟುಕೊಡಲು ಸಿದ್ಧರಿಲ್ಲ. ಇದನ್ನೇ ಅವರು ʼನಾನು ಪಿಎಂ ಸ್ಥಾನ ಆಕಾಂಕ್ಷಿಯಲ್ಲʼ ಎನ್ನುವ ಮೂಲಕ ತಿಳಿಸಿದ್ದಾರೆ.

ಸಿದ್ದು ಹೇಳಿಕೆ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿದ ಚೆಕ್‌ಮೇಟ್‌ ಕೂಡ ಎಂದು ವಿಶ್ಲೇಷಿಸಲಾಗುತ್ತಿದೆ. ಪಿಎಂ ಸ್ಥಾನಕ್ಕೆ ಹೋಗಬಹುದಾದ ಖರ್ಗೆಯವರನ್ನು ಹೆಸರಿಸಿ, ಆ ಮೂಲಕ ಇನ್ನೊಂದು ಶಕ್ತಿ ಕೇಂದ್ರವನ್ನು ಪಕ್ಷದೊಳಗೆ ಬೆಂಬಲಿಸಲು ಸಿದ್ದು ಸಿದ್ಧರಿಲ್ಲ. ಹಾಗೆಯೇ ಅವರು ಈ ಮಾತು ರಾಹುಲ್ ಗಾಂಧಿಗೆ ಬೆಂಬಲ ಕೂಡ ಇರಬಹುದು ಅಂತಿದಾರೆ ವಿಶ್ಲೇಷಕರು. ಯಾಕೆಂದರೆ ಸದ್ಯ ಕಾಂಗ್ರೆಸ್‌ನಲ್ಲಿ ರಾಷ್ಟ್ರಮಟ್ಟದ ಹಲವು ನಾಯಕರು ರಾಹುಲ್‌ ಅವರನ್ನೇ ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Continue Reading
Advertisement
Chitta Ranjan Dash
ದೇಶ27 mins ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ30 mins ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ38 mins ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Mysuru News actress Vidhya Nandish congress leader killed by her husband
ಕ್ರೈಂ58 mins ago

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Anant Ambani Radhika 2nd pre wedding bash
ಬಾಲಿವುಡ್1 hour ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

NIA raid rameshwaram cafe blast
ಪ್ರಮುಖ ಸುದ್ದಿ1 hour ago

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Viral Video
ವೈರಲ್ ನ್ಯೂಸ್1 hour ago

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Love Case Father throws hot water on man who loved his daughter for coming home
ಕೊಡಗು2 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

RCB IPL Records
ಕ್ರೀಡೆ2 hours ago

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

Emirates Flight
ದೇಶ2 hours ago

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌