Forest Survey : ಬಗೆಹರಿಯದ ಗಡಿಕಲ್ಲು ವಿವಾದ; ರಾತ್ರಿ ಸರ್ವೆಗೆ ಬಂದಿದ್ದ ಅಧಿಕಾರಿಗಳನ್ನು ತಡರಾತ್ರಿವರೆಗೆ ಕೂರಿಸಿದ ಗ್ರಾಮಸ್ಥರು! - Vistara News

ಕರ್ನಾಟಕ

Forest Survey : ಬಗೆಹರಿಯದ ಗಡಿಕಲ್ಲು ವಿವಾದ; ರಾತ್ರಿ ಸರ್ವೆಗೆ ಬಂದಿದ್ದ ಅಧಿಕಾರಿಗಳನ್ನು ತಡರಾತ್ರಿವರೆಗೆ ಕೂರಿಸಿದ ಗ್ರಾಮಸ್ಥರು!

Forest Survey : ಪುಷ್ಪಗಿರಿ ಬೆಟ್ಟಗಳ ಶ್ರೇಣಿ ಪ್ರದೇಶದಲ್ಲಿ ವನ್ಯಜೀವಿ ವಿಭಾಗದಿಂದ ಸರ್ವೆ ನಡೆಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೃಷಿ ಭೂಮಿಯನ್ನೂ ಅರಣ್ಯ ಭೂಮಿ ಎಂದು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆಂದು ಕೊತ್ನಳ್ಳಿ, ಕುಡಿಗಾಣ, ಕುಮಾರಳ್ಳಿ ಗ್ರಾಮಗಳ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

pushpagiri betta
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟಗಳ ಶ್ರೇಣಿ ಪ್ರದೇಶದ ಕೊತ್ನಳ್ಳಿ, ಕುಡಿಗಾಣ, ಕುಮಾರಳ್ಳಿ ಗ್ರಾಮಕ್ಕೆ ಸಂಬಂಧಿಸಿದ ಜನವಸತಿ ಹಾಗೂ ಕೃಷಿ ಪ್ರದೇಶಗಳಲ್ಲಿ ಪುಷ್ಪಗಿರಿ ವನ್ಯಜೀವಿ ವಿಭಾಗದಿಂದ ಮಾಡಲಾಗಿರುವ ಗಡಿ ಗುರುತು ಸಂಬಂಧ ಉದ್ಭವವಾಗಿರುವ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಇದು ಗ್ರಾಮಸ್ಥರು ಹಾಗೂ ಸರ್ಕಾರಿ ಇಲಾಖೆಯ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದು, ರಾತ್ರೋ ರಾತ್ರಿ ಅರಣ್ಯ ಸರ್ವೆ (Forest Survey) ಮಾಡಲು ಬಂದ ಅಧಿಕಾರಿಗಳನ್ನು ತಡರಾತ್ರಿವರೆಗೂ ತಡೆ ಹಿಡಿದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬ್ರಿಟಿಷರ ಕಾಲದಿಂದಲೂ ಈ ಭಾಗದ ಊರಿನ ಜನ ಅರಣ್ಯದಂಚಿನಲ್ಲೇ ವಾಸವಿದ್ದು, ಪುಷ್ಪಗಿರಿ ವನ್ಯಧಾಮದ ಸಮೀಪವೇ ಜಮೀನುಗಳನ್ನು ಹೊಂದಿದ್ದಾರೆ. ಅಲ್ಲದೆ, ಅರಣ್ಯ ಇಲಾಖೆಯ ಗಡಿ ಕಲ್ಲು ರೈತರ ಜಮೀನ ಸಮೀಪವೇ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆ ಹೊಸದಾಗಿ ಗಡಿಕಲ್ಲು ಗುರುತು ಮಾಡಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಇತ್ತೀಚೆಗಷ್ಟೇ ವನ್ಯಜೀವಿ ವಿಭಾಗದ ಅಧಿಕಾರಿಗಳು ಸರ್ವೆ ನಡೆಸಿ ಗ್ರಾಮಕ್ಕೆ ಸಮೀಪವೇ ಗಡಿ ಗುರುತು ಮಾಡಿದ್ದಾರೆ. ಕಲ್ಲುಗಳನ್ನು ನೆಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆದರೂ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ.

ಜ. 9ಕ್ಕೆ ಮತ್ತೊಂದು ಸಭೆ
ಕಳೆದ ಡಿ.26 ಹಾಗೂ ಜ.3ರಂದು ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಸಭೆ ಕರೆದಿದ್ದರು. ಆದರೆ, ಸಮಸ್ಯೆ ಇತ್ಯರ್ಥವಾಗದ ಹಿನ್ನೆಲೆ ಜನವರಿ 9ಕ್ಕೆ ಮತ್ತೆ ಸಭೆಯನ್ನು ನಿಗದಿ ಮಾಡಲಾಗಿದೆ. ಪದೇ ಪದೆ ಇದೇ ರೀತಿ ಮುಂದುವರಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ | Panchamasali Reservation | ಬೊಮ್ಮಾಯಿಗೆ 24 ಗಂಟೆ ಗಡುವು ನೀಡಿದ ಯತ್ನಾಳ್‌, ಆಗಲ್ಲಾಂದ್ರೆ ಕ್ಷಮೆನಾದ್ರೂ ಕೇಳಿ

8 ಸಾವಿರ ಹೆಕ್ಟೇರ್ ಅರಣ್ಯ ಇದೀಗ 11 ಸಾವಿರ ಹೆಕ್ಟೇರ್
ಈ ಹಿಂದೆ 8 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದ್ದಿರುವುದು, ಈಗ 11 ಸಾವಿರ ಹೆಕ್ಟೇರ್‌ಗೆ ಏರಿಕೆಯಾಗಿದೆ. ಇಡೀ ಗ್ರಾಮಗಳನ್ನು ಅರಣ್ಯಕ್ಕೆ ಸೇರ್ಪಡೆಗೊಳಿಸುವ ಹುನ್ನಾರ ನಡೆಸಲಾಗಿದೆ. ಹೀಗಾದರೆ ನಾವುಗಳು ಬದುಕುವುದಾದರೂ ಹೇಗೆ? ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸಿಎಫ್ ಶ್ರೀನಿವಾಸ್ ನಾಯಕ್ ಪ್ರತಿಕ್ರಿಯೆ ನೀಡಿ, ಹಳೆಯ ಗಡಿಕಲ್ಲು ಇರುವ ಪ್ರದೇಶಕ್ಕೂ ಈಗಿನ ಕಲ್ಲುಗಳಿರುವ ಸ್ಥಳಕ್ಕೂ ಜಿಪಿಎಸ್‌ನಲ್ಲಿ ವ್ಯತ್ಯಾಸವಿದ್ದು, ಮೂಲ ಗಡಿ ಕಲ್ಲುಗಳನ್ನೇ ಅಭಯಾರಣ್ಯದ ಗಡಿ ಎಂದು ಗುರುತಿಸಿ ಕಲ್ಲುಗಳನ್ನು ಅಳವಡಿಸಲಾಗುವುದು. ಕುಮಾರಳ್ಳಿ ಗ್ರಾಮದ ಸ.ನಂ. 1/9ಪಿ99ರಲ್ಲಿ ಗೊಂದಲವಿದ್ದು, ಅಭಯಾರಣ್ಯಕ್ಕೆ ಹೆಚ್ಚಿನ ಪ್ರದೇಶ ದಾಖಲಾಗಿದೆ. ಈ ಬಗ್ಗೆ ತಹಸೀಲ್ದಾರ್‌ರಿಗೆ ಪತ್ರ ಬರೆದಿದ್ದು, ಅಭಯಾರಣ್ಯ ಪ್ರದೇಶವನ್ನು ಮ್ಯೂಟೇಷನ್ ಮಾಡಲು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 3ರಂದು ಸರ್ವೆ ಕಂದಾಯ ಇಲಾಖೆ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಗಡಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಅದಾಗಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

Forest Survey

ತಹಸೀಲ್ದಾರ್‌ ಭರವಸೆ
ಮೂರು ದಿನದ ಹಿಂದೆ ರಾತ್ರಿ ವೇಳೆ ಸಿಸಿಎಫ್, ಡಿಎಫ್‌ಒ, ಎಸಿಎಫ್, ಆರ್‌ಎಫ್‌ಒ ಭಕ್ತಿ ಕ್ಯಾಂಪ್‌ನಿಂದ ಬೀದಳ್ಳಿ ಕ್ಯಾಂಪ್‌ಗೆ ಕಾಲ್ನಡಿಗೆಯಲ್ಲಿ ತೆರಳಿದ್ದು, ಜನರಿಗೆ ಅನುಮಾನ ಮೂಡಿ, ಅವರನ್ನು ಅಡ್ಡಗಟ್ಟಿದ್ದಾರೆ. ರಾತ್ರಿ ವೇಳೆ ಅಧಿಕಾರಿಗಳು ಬಂದು ಸರ್ವೆ ಮಾಡಲು ಕಾರಣವೇನು ಎಂದು ಗ್ರಾಮಸ್ಥರು ಪಟ್ಟುಹಿಡಿದರು. ನಮ್ಮನ್ನು ಇಲ್ಲಿಂದ ಒಕ್ಕಲೆಬ್ಬಿಸಲು ಬಂದಿದ್ದೀರಾ? ತಲೆತಲಾಂತರದಿಂದ ಬದುಕು ಕಟ್ಟಿಕೊಂಡಿರುವ ಮೂಲ ನಿವಾಸಿಗಳ ಬದುಕು ಮೂರಾಬಟ್ಟೆ ಮಾಡುವ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯ ಮಾಡಿದರು. ನಂತರ ತಹಸೀಲ್ದಾರ್ ಇದ್ದ ಭಕ್ತಿ ಕ್ಯಾಂಪ್‌ಗೆ ತೆರಳಿದ ಗ್ರಾಮಸ್ಥರು, ಕಂದಾಯ ಹಾಗೂ ಸರ್ವೆ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಹಿಂದೆ ನಡೆದ ಸಭೆಯಲ್ಲಿ ಗ್ರಾಮಸ್ಥರಿಗೆ ನೀಡಿದ ಒಂದೂ ಭರವಸೆಯನ್ನು ಈಡೇರಿಸಿಲ್ಲ ಎಂದು ಅಸಮಾಧಾನವನ್ನು ಹೊರಹಾಕಿದರು. ಕೊನೆಗೆ ತಹಸೀಲ್ದಾರ್ ನರಗುಂದ್ ಅವರು ಜ. 9ರಂದು ತಾಲೂಕು ಕಚೇರಿಯಲ್ಲಿ ಗ್ರಾಮಸ್ಥರನ್ನು ಒಳಗೊಂಡಂತೆ ಸಂಬಂಧಿಸಿದ ಎಲ್ಲ ಇಲಾಖಾಧಿಕಾರಿಗಳ ಸಭೆ ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ಬರವಣಿಗೆ
ಮೂಲಕ ಭರವಸೆ ನೀಡಿದ ನಂತರ ಅಧಿಕಾರಿಗಳನ್ನು ಬಿಟ್ಟುಕಳುಹಿಸಲಾಗಿದೆ.

ಇದನ್ನೂ ಓದಿ | Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಟ್ರೈಲರ್‌ ರಿಲೀಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Water Price Hike : ರಾಜಧಾನಿ ಬೆಂಗಳೂರು ಲೈಫ್‌ ಮತ್ತಷ್ಟು ಕಾಸ್ಟ್‌ಲಿಯಾಗಲಿದೆ. ಇತ್ತೀಚೆಗೆ ತೈಲ ಬೆಲೆ ಏರಿಕೆಯು ಜನರಿಗೆ ತಲೆ ಬಿಸಿ ಹೆಚ್ಚು ಮಾಡಿತ್ತು. ಇದೀಗ ಕುಡಿಯುವ ನೀರು ಕೂಡ ದುಬಾರಿಯಾಗಲಿದೆ. ಕಾವೇರಿ ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

VISTARANEWS.COM


on

By

water Price hike in bwssb
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರು ಮಂದಿಗೆ ಬ್ಯಾಕ್‌ ಟು ಬ್ಯಾಕ್‌ ಶಾಕ್‌ ನೀಡುತ್ತಿದೆ. ಪೆಟ್ರೋಲ್‌, ಡಿಸೇಲ್‌ ದರ ಏರಿಕೆಯಿಂದ ಕಂಗಲಾಗಿದ್ದವರಿಗೆ ಇದೀಗ ಕುಡಿಯುವ ನೀರು ಬಿಸಿತುಪ್ಪವಾಗಲಿದೆ. ಯಾಕೆಂದರೆ ನೀರಿನ ದರ ಹೆಚ್ಚಳಕ್ಕೆ (Water Price Hike) ಜಲಮಂಡಳಿ (BWSSB) ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಗುವುದೊಂದೆ ಬಾಕಿ ಇದೆ.

ಹಿಂದೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ನೀರಿನ ದರ ಏರಿಕೆ ಆಗಬಹುದು ಎಂದು ಸುಳಿವು ನೀಡಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದರ ಏರಿಕೆಗೆ ಬ್ರೇಕ್‌ ಹಾಕಿದ್ದರು. ಇದೀಗ ತೈಲ ಬೆಲೆ ಏರಿಕೆ ಬೆನ್ನಲ್ಲೆ ಜಲಮಂಡಳಿ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಇದರಿಂದಾಗಿ ಜನರಿಗೆ ಮತ್ತಷ್ಟು ಹೊರೆಯಾಗಲಿದೆ.

ಇದೀಗ ತೆರೆ ಮರೆಯಲ್ಲಿ ದರ ಪರಿಷ್ಕರಣಗೆ ಸಿದ್ಧತೆ ನಡೆದಿದ್ದು, ಗೃಹ ಬಳಕೆ, ವಾಣಿಜ್ಯ ಸೇರಿ ಎಲ್ಲ ರೀತಿಯ ನೀರು ಪೂರೈಕೆ ಮೇಲೆ ಶೇ. 40 ರಷ್ಟು ದರ ಏರಿಕೆಗೆ ಚರ್ಚೆ ನಡೆಯುತ್ತಿದೆ. ಇತ್ತ ನೀರಿನ ದರ ಏರಿಕೆ ಕುರಿತು ಜನ ಸಾಮಾನ್ಯರು ಗರಂ ಆಗಿದ್ದಾರೆ.

10 ವರ್ಷಗಳ ಬಳಿಕ ದರ ಏರಿಕೆ ಪ್ಲ್ಯಾನ್‌

ಬಿಡಬ್ಲ್ಯುಎಸ್​ಎಸ್​ಬಿ ಪರಿಸ್ಥಿತಿ ಚಿಂತಾಜನಕವಾಗಿದ್ದು, 2014ರಿಂದ ಇಲ್ಲಿಯವರೆಗೂ ನೀರಿನ ದರ ಪರಿಷ್ಕರಣೆಯಾಗಿಲ್ಲ. ಸಂಸ್ಥೆಯಲ್ಲಿ ವೇತನ ಹಾಗೂ ವಿದ್ಯುತ್ ಬಿಲ್ ಪಾವತಿಗೆ ಹಣವಿಲ್ಲದಂತಾಗಿದೆ. ಇದರಿಂದ ಇಲ್ಲಿನ ಸಿಬ್ಬಂದಿ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರಿಗೆ ಪರಿಹಾರ ಕಂಡುಕೊಡಬೇಕಾದರೆ ದರ ಹೆಚ್ಚಳ ಮಾಡುವುದು ಅನಿರ್ವಾಯವಾಗಿದೆ.

ಜಲಮಂಡಳಿಯ ಆದಾಯ ತೀರಾ ಕಡಿಮೆ ಇದೆ. ಈ ಸಂಸ್ಥೆಗೆ ಕಡಿಮೆ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಆದರೂ ಬರುವ 104 ಕೋಟಿ ರೂಪಾಯಿಯಲ್ಲಿ 90 ರಿಂದ 95 ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸಲು ಖರ್ಚಾಗುತ್ತಿದೆ ಎಂದು ಹಿಂದೊಮ್ಮೆ ಡಿ.ಕೆ ಶಿವಕುಮಾರ್‌ ತಿಳಿಸಿದ್ದರು. ಇಲ್ಲಿ ಸಂಪನ್ಮೂಲ ಕ್ರೋಡೀಕರಣ ಆಗಬೇಕಿದೆ. ಇಲ್ಲದಿದ್ದರೆ ಸಂಸ್ಥೆ ಉಳಿಯಲು ಸಾಧ್ಯವಿಲ್ಲ ಎಂದಿದ್ದರು. ಮೂಲಗಳ ಪ್ರಕಾರ ನೀರಿನ ದರ ಏರಿಕೆಯಾಗುವುದು ಖಚಿತ ಎನ್ನಲಾಗುತ್ತಿದೆ.

ಇದನ್ನೂ ಓದಿ: Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ (Petrol Diesel Price) ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು.‌ 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ಎಂದರು.

ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೋ ರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.

ಕಳ್ಳ ದಾರಿ ಮೂಲಕ ಸೇಡು

ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್‌ನಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ದೂರಿದರು.

ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್ ಗೆ ಮಾನವಿದ್ದರೆ ದರ ಏರಿಕೆ ವಾಪಾಸ್ ಪಡೆಯಲಿ ಎಂದು ಆಗ್ರಹಿಸಿದರು.

ಆಸ್ತಿ ಮಾರಾಟ

ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದ್ದಾರೆ. ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ಎಂದರು.

ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ‌. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Petrol Diesel Price: ಲೋಕಸಭಾ ಚುನಾವಣೆ (Lok Sabha Election results) ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಹಾಗೂ ಜನಸಾಮಾನ್ಯರು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿದ್ದಾರೆ.

VISTARANEWS.COM


on

petrol diesel price hike
Koo

ಬೆಂಗಳೂರು: ಇದ್ದಕ್ಕಿದ್ದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳನ್ನು (petrol diesel price hike) ಏರಿಸಿರುವ ರಾಜ್ಯ ಸರಕಾರದ (Karnataka Govt) ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ (BJP) ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ (protest) ಮುಂದಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಹಾಗೂ ರಾಜ್ಯದ ನಾನಾ ಕಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯಲಿವೆ.

ಲೋಕಸಭಾ ಚುನಾವಣೆ (Lok Sabha Election results) ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಹಾಗೂ ಜನಸಾಮಾನ್ಯರು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿದ್ದಾರೆ. ದರ ಏರಿಕೆ ವಿರೋಧಿಸಿ ಇಂದು ಪ್ರತಿಭಟನೆಗೆ ಕರೆ ನೀಡಿರುವ ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್. ಅಶೋಕ್ (R Ashok) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗ್ಗೆ 11.30ಕ್ಕೆ ಪ್ರತಿಭಟನೆ ಆರಂಭವಾಗಲಿದೆ. ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಪ್ರತಿಪಕ್ಷ ನಿರ್ಧರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ಪರಿಣಾಮ ಎತ್ತಿನ ಗಾಡಿಯೇ ಗತಿಯಾಗಿದೆ ಎಂದು ಸೂಚಿಸಲು ಎತ್ತಿನಗಾಡಿ, ಸೈಕಲ್ ಮೂಲಕ ಪ್ರಯಾಣ ಮಾಡಿ ಸರ್ಕಾರದ ನೀತಿಯನ್ನು ಖಂಡಿಸಲಿದ್ದಾರೆ. ಬಳಿಕ ಸಿಎಂ ಮನೆಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.

ಹೆಚ್ಚಿಸಿರುವ ಅಷ್ಟೂ ದರವನ್ನು ಇಳಿಸುವಂತೆ ಬಿಜೆಪಿ ಆಗ್ರಹಿಸಿದ್ದು, ದರ ಇಳಿಸುವವರೆಗೂ ಹಂತಹಂತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳ ಬೆಂಬಲವನ್ನೂ ಕೋರಿದೆ.

ರಾಜ್ಯದ ಜನರಿಗೆ ಬರೆ: ವಿಜಯೇಂದ್ರ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಗ್ಯಾರಂಟಿ ಬಗ್ಗೆ ಸಾಕಷ್ಟು ಪ್ರಚಾರ ತೆಗೆದುಕೊಂಡಿದೆ. ಗ್ಯಾರಂಟಿ ಬಗ್ಗೆ ಸಾಧನೆ ಅಂತ ಬಿಂಬಿಸಿಕೊಂಡಿದೆ. ಮತ್ತೊಂದು ಕಡೆ ರಾಜ್ಯದ ಜನರಿಗೆ ಬರೆ ಎಳೆಯುತ್ತಿದೆ. ಸ್ಟ್ಯಾಂಪ್ ಡ್ಯೂಟಿ ಜಾಸ್ತಿ ಮಾಡಿದೆ. ಲೋಕಸಭಾ ಚುನಾವಣೆ ಬಳಿಕ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಿಸಿದೆ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೂರಿದ್ದಾರೆ.

“ಬರಗಾಲದಲ್ಲಿ ರಾಜ್ಯ ಸರ್ಕಾರದ ಈ ಕೆಟ್ಟ ನಡವಳಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು, ಬರುವ ಶುಕ್ರವಾರ ಕೂಡ ಮತ್ತೊಂದು ಹೋರಾಟ ರೂಪಿಸುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ. ನೆರೆಯ ರಾಜ್ಯದಲ್ಲಿ ನಮಗಿಂತ ದರ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ. ಕೂಡಲೇ ಆದೇಶವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

“ರಾಜ್ಯದ ಮುಗ್ಧ ಮತದಾರರು ಚುನಾವಣೆ ಸಂಧರ್ಭದಲ್ಲಿ ಮತ ಕೊಟ್ಟು ಅಧಿಕಾರಕ್ಕೆ ತಂದಿದ್ದಾರೆ. ಇಂದು ಅದೇ ಜನ ಸಿಎಂಗೆ ಶಾಪ‌ ಹಾಕ್ತಿದ್ದಾರೆ. ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಹಾರಾಡುತ್ತಿದ್ದರು. ಇಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹಾಳಾಗಿದೆ. ರೈತರ ಮೇಲೆ ಹೊರೆಯಾಗುತ್ತಿದೆ. ತೈಲ ದರ ಏರಿಕೆಯಿಂದ ಟ್ಯಾಕ್ಸಿ, ಬಸ್ ಆಪರೇಟರ್, ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಸಿಎಂ‌ ಕೂಡಲೇ ದರ ಹಿಂಪಡೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ” ಎಂದು ವಿಜಯೇಂದ್ರ ಹೇಳಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಪತ್ರಿಕಾಗೋಷ್ಠಿ

ಇಂದು ಮಧ್ಯಾಹ್ನ 12.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರಿಕಾಗೋಷ್ಠಿ ಕರೆದಿದ್ದಾರೆ. ಪೆಟ್ರೋಲ್- ಡಿಸೇಲ್ ದರ ಹೆಚ್ಚಳ ಕುರಿತು ಸಿಎಂ ಮಾತನಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ದರ ಹೆಚ್ಚಳ ಕುರಿತು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ವಿವರಣೆ ನೀಡಲಿದ್ದಾರೆ. ಪ್ರತಿಪಕ್ಷ ಬಿಜೆಪಿ ದರ ಹೆಚ್ಚಳದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ದರ ಹೆಚ್ಚಳದ ಅನಿವಾರ್ಯತೆ ಹಾಗೂ ಅಂಕಿ ಅಂಶಗಳನ್ನು ಸಿಎಂ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Continue Reading

ಪ್ರಮುಖ ಸುದ್ದಿ

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ (BS Yediyurappa) ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಗೊತ್ತಾಗಿದೆ. ಬಿಎಸ್‌ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

VISTARANEWS.COM


on

BS Yediyurappa pocso case
Koo

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Physical abuse) ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಇಂದು ಸಿಐಡಿ (CID) ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಅವರನ್ನು ಬಂಧಿಸದಂತೆ ಈಗಾಗಲೇ ಹೈಕೋರ್ಟ್ (High court) ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಬಂಧನದ ಭಯವಿಲ್ಲದೇ ಸಿಐಡಿ ಮುಂದೆ ಬಿಎಸ್‌ವೈ ಹಾಜರಾಗಲಿದ್ದಾರೆ.

ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಗೊತ್ತಾಗಿದೆ. ಬಿಎಸ್‌ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬಾಲಕಿಯ ತಾಯಿ ಈ ಆರೋಪ ಮಾಡಿದ್ದು, ಈಕೆ ಇತ್ತೀಚೆಗೆ ನಿಧನರಾಗಿದ್ದರು. ಪ್ರಕರಣ ನಡೆದ ಸಂದರ್ಭದಲ್ಲಿ ಯಾರೆಲ್ಲ ಬಂದಿದ್ದರು, ಅಂದು ಏನಾಯಿತು ಇತ್ಯಾದಿ ಪ್ರಕರಣದ ಮಾಹಿತಿಯನ್ನು ಬಿಎಸ್‌ವೈ ಅವರಿಂದ ಸಿಐಡಿ ಪಡೆಯಲಿದೆ. ಇದೊಂದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಷಡ್ಯಂತ್ರ ಎಂದು ಬಿಎಸ್‌ವೈ ಈಗಾಗಲೇ ಹೇಳಿದ್ದಾರೆ.

ಬಿಎಸ್‌ವೈ ಇಂದೂ ಕೂಡ ಪ್ರತಿ ದಿನ ಏಳುವಂತೆ ಐದು ಗಂಟೆಗೆ ಎದ್ದು ಬೆಳಿಗ್ಗೆ ಮನೆಯ ಬಳಿ ವಾಕಿಂಗ್ ಮಾಡಿದ್ದು, ಬಳಿಕ ದಿನ ಪತ್ರಿಕೆ ಓದಿದ್ದಾರೆ. ಒಂಬತ್ತು ಗಂಟೆಗೆ ವಕೀಲ ಸಂದೀಪ್ ಪಾಟೀಲ್ ಅವರು ಬಿ.ವೈ ವಿಜಯೇಂದ್ರ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ್ದು, ಬಳಿಕ ವಕೀಲರ ಜತೆ ಬಿಎಸ್‌ವೈ ಹಾಗೂ ಬಿವೈವಿ ಚರ್ಚೆ ನಡೆಸಿದರು. ಸುಮಾರು ಹನ್ನೊಂದು ಗಂಟೆಗೆ ವಕೀಲ ಸಂದೀಪ್ ಪಾಟೀಲ್ ಜೊತೆಗೆ ಯಡಿಯೂರಪ್ಪ ಸಿಐಡಿ ಕಚೇರಿಗೆ ತೆರಳಲಿದ್ದಾರೆ.

ಎದುರಿಸುತ್ತೇವೆ: ಬಿವೈ ವಿಜಯೇಂದ್ರ

ಪೋಕ್ಸೋ ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದು , ಇಂದು ವಿಎಸ್‌ವೈ ಸಿಐಡಿ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ. “ಪೋಕ್ಸೋ ಪ್ರಕರಣ ಪಬ್ಲಿಕ್ ಡೊಮೈನ್‌ನಲ್ಲಿದೆ. ಯಾರು ಬೇಕಿದ್ದರೂ ವಿವರ ಪಡೆಯಬಹುದು. ಯಡಿಯೂರಪ್ಪ ಇದರಲ್ಲಿ ನಿರ್ದೋಷಿಯಾಗಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇದೆ. ವಿಚಾರಣೆಗೆ ಹಾಜರಾಗುತ್ತಾರೆ. ಪ್ರಕರಣವನ್ನು ಎದುರಿಸ್ತೇವೆ” ಎಂದು ಹೇಳಿದ್ದಾರೆ.

ಹೈಕೋರ್ಟ್‌ ರಿಲೀಫ್‌

ಬಂಧನದ ಭೀತಿಯಲ್ಲಿದ್ದ ಬಿಎಸ್‌ವೈ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿತ್ತು. ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು. ಇದರಿಂದಾಗಿ, ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್‌ ಸಿಕ್ಕಿದೆ. ಆದರೆ, ಜೂನ್‌ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಯಡಿಯೂರಪ್ಪ ಅವರಿಗೆ ಕೋರ್ಟ್‌ ಸೂಚಿಸಿತ್ತು.

ಪ್ರಕರಣದಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು “ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರೂ ಕೋರ್ಟ್‌ ಹೋಗಿ ಅರೆಸ್ಟ್‌ ವಾರಂಟ್‌ ತಂದಿದ್ದೀರಿ. ನಾಲ್ಕು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದರೆ ಆಕಾಶವೇನೂ ಕಳಚಿ ಬೀಳುತ್ತಿರಲಿಲ್ಲ. ಹಾಗಾಗಿ, ಅರೆಸ್ಟ್‌ ವಾರಂಟ್‌ ಬಗ್ಗೆ ನಮಗೆ ಅನುಮಾನವಿದೆ. ಮುಂದಿನ ವಿಚಾರಣೆವರೆಗೂ ಯಡಿಯೂರಪ್ಪ ಅವರನ್ನು ಬಂಧಿಸಬಾರದು” ಎಂಬುದಾಗಿ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್

Continue Reading

ಪ್ರಮುಖ ಸುದ್ದಿ

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

CM Siddaramaiah: ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

VISTARANEWS.COM


on

CM Siddaramaiah and Vidhanasoudha
Koo

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಅಧಿಕಾರಿಗಳನ್ನು (retired employees) ಸೇವೆಯಿಂದ ಕೈ ಬಿಡುವಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ (CM Siddaramaiah) ಮುಖ್ಯ ಕಾರ್ಯದರ್ಶಿ (Chief Secretary) ಪತ್ರ ಬರೆದಿದ್ದಾರೆ. ಸರಕಾರದ (Karnataka Govt) ಮೇಲಿನ ಹಣದ ಹೊರೆ (Fiscal deficit) ತಪ್ಪಿಸಲು ಈ ನಡೆ ಕೈಗೊಳ್ಳಲಾಗಿದೆ.

ಆರ್ಥಿಕ ಶಿಸ್ತು ಜಾರಿ‌ ಮಾಡಲು ನಾನಾ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದೆಯೂ ಒಮ್ಮೆ ಈ ಕೆಲಸ ಮಾಡಲು ಸೂಚಿಸಿದ್ದರು. ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜನವರಿ 9ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹೊರಗುತ್ತಿಗೆಯಲ್ಲಿ ನೇಮಕವಾದ ನಿವೃತ್ತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಿ; ಆ ಹುದ್ದೆಯಲ್ಲಿ ಸೇವೆಯಲ್ಲಿರುವ ಅಧಿಕಾರಿಗಳನ್ನು ನಿಯೋಜನೆ ಮಾಡಿ ಎಂದು ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಜನವರಿ 23 ಮತ್ತು ಫೆಬ್ರವರಿ 22ರಂದು ಇಲಾಖೆಗಳಿಗೆ ಸಿಎಸ್ ಅವರಿಂದ ಟಿಪ್ಪಣಿ ರವಾನೆ ಆಗಿತ್ತು.

ಆದರೂ ನಿವೃತ್ತ ನೌಕರರನ್ನು ಕೈ ಬಿಡುವ ಪ್ರಕ್ರಿಯೆ ಯಾವುದೇ ಮುನ್ನಡೆ ಕಂಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಸಿಎಂ ಸೂಚನೆ ಮೇರೆಗೆ ವಿವಿಧ ಇಲಾಖೆಗಳಿಗೆ ಸಿಎಸ್ ಪತ್ರ ಬರೆದಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿರುವ ಈ ಕಾರ್ಯಗಳ ಹೆಚ್ಚಿನ ಹೊಣೆ ಈಗಿನ ಇಲಾಖಾ ಅಧಿಕಾರಿಗಳ ಮೇಲೆ ಬೀಳಲಿದೆ.

ಈ ಹಿಂದಿನ ಸಿಎಂ ಟಿಪ್ಪಣಿಯಲ್ಲೇನಿದೆ?

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ- ಸಚಿವಾಲಯಗಳಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳೆಂದು ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.”

“ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ” ಸಿಎಎಸ್ ನಿರ್ದೇಶನ ನೀಡಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೀಗೆ ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿ ಸಚಿವಾಲಯ ನೌಕರರ ಸಂಘವೂ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Continue Reading
Advertisement
Actor Darshan case real star upendra react about case
ಸ್ಯಾಂಡಲ್ ವುಡ್6 mins ago

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

water Price hike in bwssb
ಬೆಂಗಳೂರು11 mins ago

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Maoists Killed
ದೇಶ27 mins ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

petrol diesel price hike
ಪ್ರಮುಖ ಸುದ್ದಿ35 mins ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್44 mins ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Encounter In Bandipora
ದೇಶ1 hour ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ1 hour ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ1 hour ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್2 hours ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ2 hours ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ17 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ18 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ23 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌