Electronics parts shortage | ಎಲೆಕ್ಟ್ರಾನಿಕ್ಸ್‌ ಕಂಪನಿಗಳಿಗೆ ಬಿಡಿಭಾಗಗಳ ಕೊರತೆ ಉಂಟಾಗುವ ಭೀತಿ - Vistara News

ಪ್ರಮುಖ ಸುದ್ದಿ

Electronics parts shortage | ಎಲೆಕ್ಟ್ರಾನಿಕ್ಸ್‌ ಕಂಪನಿಗಳಿಗೆ ಬಿಡಿಭಾಗಗಳ ಕೊರತೆ ಉಂಟಾಗುವ ಭೀತಿ

ಚೀನಾದಲ್ಲಿ ಕೋವಿಡ್‌ ಬಿಕ್ಕಟ್ಟು ತೀವ್ರವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಮೂಲದ ಎಲೆಕ್ಟ್ರಾನಿಕ್ಸ್‌ ಕಂಪನಿಗಳಿಗೆ ಬಿಡಿಭಾಗಗಳ ಕೊರತೆ ಕಾಡುತ್ತಿದೆ. ಇದು ಫೆಬ್ರವರಿ-ಮಾರ್ಚ್‌ನಲ್ಲಿ ಹೆಚ್ಚುವ ( Electronics parts shortage) ಸಾಧ್ಯತೆಯೂ ಇದೆ.

VISTARANEWS.COM


on

parts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಎಲೆಕ್ಟ್ರಾನಿಕ್ಸ್‌ ಕಂಪನಿಗಳು ಹಾಗೂ ಮೊಬೈಲ್‌ ಫೋನ್‌ ಉತ್ಪಾದಕರಿಗೆ ಮುಂಬರುವ ಮಾರ್ಚ್-ಮೇ ಅವಧಿಯಲ್ಲಿ ಬಿಡಿಭಾಗಗಳ ಪೂರೈಕೆಯಲ್ಲಿ ಕೊರತೆ ಉಂಟಾಗುವ ಭೀತಿ ತಲೆದೋರಿದೆ. (Electronics parts shortage) ಚೀನಾದಲ್ಲಿ ಕೋವಿಡ್‌ ಅಲೆಯ ಅಬ್ಬರ ಸೃಷ್ಟಿಯಾಗಿರುವುದು ಈ ಆತಂಕಕ್ಕೆ ಕಾರಣವಾಗಿದೆ.

ಈಗಾಗಲೇ ಚೀನಾದ ಪೂರೈಕೆದಾರರು ನಿರ್ದಿಷ್ಟ ಸಮಯ ಮಿತಿಯಲ್ಲಿ ಬಿಡಿ ಭಾಗಗಳನ್ನು ಪೂರೈಸುವ ಖಾತರಿಯನ್ನು ನೀಡುತ್ತಿಲ್ಲ.

ಚೀನಾದಿಂದ ಪೂರೈಕೆಯಲ್ಲಿ ವ್ಯತ್ಯಯಕ್ಕೆ ಕಾರಣ

ಹಲವಾರು ಭಾರತೀಯ ಕಂಪನಿಗಳು ಬಿಡಿಭಾಗಗಳ ಕೊರತೆಯಾಗದಂತೆ ನೋಡಿಕೊಳ್ಳಲು ಮುಂಚಿತವಾಗಿಯೇ ಆರ್ಡರ್‌ಗಳನ್ನು ಕೊಡುತ್ತಿವೆ. ಹೀಗಿದ್ದರೂ, ಪೂರೈಕೆಯ ಖಾತರಿ ಸಿಗುತ್ತಿಲ್ಲ. ಕೋವಿಡ್‌ ಪರಿಣಾಮ ಚೀನಾದ ಕಾರ್ಖಾನೆಗಳಲ್ಲಿ 30-50% ಉದ್ಯೋಗಿಗಳು ಗೈರು ಹಾಜರಾಗುತ್ತಿದ್ದಾರೆ.

ಚೀನಾದಲ್ಲಿ ಜನವರಿ 22ಕ್ಕೆ ಹೊಸ ವರ್ಷಾಚರಣೆ ನಡೆಯಲಿದೆ. ಈ ಸಂದರ್ಭ 10-14ದಿನಗಳ ರಜಾ ಅವಧಿಯೂ ಇರುತ್ತದೆ. ಜತೆಗೆ ಕೋವಿಡ್‌ ಅಬ್ಬರವೂ ಮುಂದುವರಿದಿದೆ. ಹೀಗಾಗಿ ಭಾರತದಲ್ಲಿ ಎಲೆಕ್ಟ್ರಾನಿಕ್ಸ್‌ ಕಂಪನಿಗಳು ಹಾಗೂ ಮೊಬೈಲ್‌ ಫೋನ್‌ ಉತ್ಪಾದಕರಿಗೆ ಮುಂಬರುವ ಮಾರ್ಚ್-ಮೇ ಅವಧಿಯಲ್ಲಿ ಬಿಡಿಭಾಗಗಳ ಪೂರೈಕೆಯಲ್ಲಿ ಕೊರತೆ ಉಂಟಾಗುವ ಆತಂಕ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Karnataka Weather Forecast : ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Heavy Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕ ಕಡೆ ಭಾರೀ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ 14 ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ ಸೇರಿದಂತೆ ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಯಚೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಗುಡುಗು ಸಹಿತ ಮಳೆ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ಮಲ್ಲಪ್ಪ ಬಡಿಗೇರ್ (50) ಮೃತ ದುರ್ದೈವಿ. ರಾಯಚೂರಿನ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಶುಕ್ರವಾರ ಸಂಜೆ 4.30 ಗಂಟೆಗೆ ಬಳಗಾನೂರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಳಗಾನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರುಣನ ಅರ್ಭಟ ಜೋರಾಗಿತ್ತು. ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ವಡಗೇರಾ ಪಟ್ಟಣದ ನಿವಾಸಿಗಳ ಸಂಕಷ್ಟ ಅನುಭವಿಸಿದರು. ಕಲಬುರಗಿಯಲ್ಲೂ ಬಿಸಿಲ‌ ಬೇಗೆಗೆ ತತ್ತರಿಸಿದ ಜನತೆಗೆ ವರುಣ ತಂಪೆರಿದ್ದ. ನಗರದ ಹಲವೆಡೆ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇತ್ತ ಶುಕ್ರವಾರ ಬೆಂಗಳೂರು ಗ್ರಾಮಾಂತರದ ಆನೇಕಲ್, ಅತ್ತಿಬೆಲೆ, ಜಿಗಣಿ, ಚಂದಾಪುರ ಸೇರಿದಂತೆ ಹಲವೆಡೆ ಮಳೆಯಾಗಿತ್ತು. ರಸ್ತೆಯಲ್ಲಿಯೇ ಮಳೆ ನೀರು ನಿಂತು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರ ಪರದಾಡಿದರು.

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ತದಿಗೆ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (5-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ ಅಹೋರಾತ್ರಿ ವಾರ: ಶನಿವಾರ
ನಕ್ಷತ್ರ: ಸ್ವಾತಿ 21:32 ಯೋಗ: ವಿಷ್ಕುಂಭ 30:07
ಕರಣ: ತೈತುಲ 18:41 ಅಮೃತಕಾಲ: ಬೆಳಗ್ಗೆ 11:41 ರಿಂದ 01:29
ದಿನದ ವಿಶೇಷ: ಶರನ್ನವರಾತ್ರಿ ತೃತೀಯ ದಿವಸ ಬ್ರಹ್ಮಚಾರಿಣಿ ಅವತಾರ, ಪಂಢರಪುರ ಜಾತ್ರೆ

ಸೂರ್ಯೋದಯ : 06:09   ಸೂರ್ಯಾಸ್ತ : 06:07

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ
1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ವೃಥಾ ಕಾಲಹರಣ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರುವವು. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ಬುದ್ಧಿವಂತಿಕೆಯಿಂದ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಶೀಘ್ರ ಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ದುಂದು ವೆಚ್ಚವನ್ನು ತಪ್ಪಿಸಿ. ಬುದ್ದಿವಂತಿಕೆಯಿಂದ ಕೆಲಸ ಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕೊಡಗು

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

By

Kodagu News
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್
Koo

ಮಡಿಕೇರಿ: ನಮ್ಮ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕನ್ನು ನೀಡಿದೆ. ನಮ್ಮ ಇಂದಿನ ಆಚರಣೆಗಳಿಂದ ನಾಳಿನ ಬದುಕಿಗೆ ತೊಂದರೆಯಾಗಬಾರದು. ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ ಹೇರಿರುವುದು ಕೂಡ ಇದೇ ಉದ್ದೇಶದಿಂದಲೇ ಹೊರತು, ನಮ್ಮ ಸಂಸ್ಕೃತಿ , ಸಂಪ್ರದಾಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟ ಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡಗು (Kodagu News) ಪ್ರೆಸ್ ಕ್ಲಬ್ ವತಿಯಿಂದ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಸರಾದಲ್ಲಿ ನಿಗಧಿಗಿಂತ ಹೆಚ್ಚಿನ ಡೆಸಿಬಲ್ ಡಿಜೆ ಬಳಸದಂತೆ ನಿಯಮವೇ ಇದೆ. ಈ ಕಾನೂನನ್ನು ನಾವೂ ಗೌರವಿಸಬೇಕು. ಡಿಜೆಯಿಂದ ಯುವಕರಿಗೆ ಹೆಚ್ಚಿನ ತೊಂದರೆ ಇಲ್ಲ. ಆದರೆ ವಯೋವೃದ್ಧರು, ಮಂಟಪದ ರಕ್ಷಣೆಗೆ ಇರುವ ಪೊಲೀಸರು, ಸಣ್ಣ ಮಕ್ಕಳು, ಪ್ರಾಣಿ ಪಕ್ಷಿಗಳಿಗೆ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹೆಚ್ಚಿನ ತೊಂದರೆಯಾಗುತ್ತದೆ. ದೇಶದ ಕಾನೂನಿನಂತೆ ಇಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆ ಸ್ವಾತಂತ್ರ್ಯಕ್ಕೆ ಯಾರೂ ತೊಂದರೆ ಮಾಡಬಾರದು ಎಂಬ ಉದ್ದೇಶಕ್ಕೆ ಕಾನೂನು ಜಾರಿ ಮಾಡಲಾಗಿದೆ.

ನಮ್ಮ ಹಿರಿಯ ತಲೆಮಾರಿನವರು ಹಿಂದೆ ಹದಿನಾಲ್ಕು, ಹದಿನಾರು ವಯಸ್ಸಿಗೆ ಮದುವೆಯಾಗುತ್ತಿದ್ದರು. ನಾವೂ ಸಂಪ್ರದಾಯದ ಹೆಸರಿನಲ್ಲಿ ಅದನ್ನು ಮುಂದುವರೆಸಿದ್ದೇವು. ಕ್ರಮೇಣ ಕಾನೂನು ಬದಲಾವಣೆಯಿಂದ ಈ ಪದ್ಧತಿಗೆ ಕಡಿವಾಣ ಹಾಕಲಾಗಿದ್ದು, ಇಂದು ಈ ಪದ್ಧತಿಯನ್ನು ಕೈ ಬಿಡಲಾಗಿದೆ. ಡಿಜೆ ನಿರ್ಬಂಧ ಹಿಂದಿನ ಉದ್ದೇಶವೂ ಇದೆ. ನಾವು ನಮ್ಮ ಹಿಂದಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳಬೇಕು. ಹಿರಿಯರು ಸಂಪ್ರದಾಯವನ್ನು ಬಿಡದೇ ಆಚರಿಸಿದ್ದಾರೆ. ಅವರು ಉಳಿಸಿ ಬೆಳೆಸಿರುವ ಸಂಪ್ರದಾಯವನ್ನು ಅದೇ ರೀತಿಯನ್ನೇ ಮುನ್ನಡೆಸಿಕೊಂಡು ಮುನ್ನಡೆಯಬೇಕಾದ ಜವಾಬ್ದಾರಿ ನಮ್ಮ ಮುಂದಿದೆ. ದಸರಾದಲ್ಲೂ ನಮ್ಮ ಸಂಪ್ರದಾಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಳೆದ ಬಾರಿ ಡೆಸಿಬಲ್‌ ಡಿಜೆ ಬಳಕೆ

ಇಂದು ಎಲ್ಲ ಕಡೆ ಪಬ್‌ಗಳಲ್ಲಿ ಡಿಜೆ, ಲೇಸರ್ ಲೈಟ್ ಕಾಣಸಿಗುತ್ತದೆ. ಆದರೆ ಕೊಡಗಿನ ಒಲಗ ಮೈಸೂರು ದಾಟಿದರೆ ಎಲ್ಲಿ ಇದೆ. ಇಂತಹ ವೈವಿಧ್ಯಮಯ ಸಂಸ್ಕೃತಿ ನಮ್ಮದಾಗಿರುವಾಗ ಬೇರೆ ಅನುಕರಣೆ ಯಾಕೆ ಬೇಕೆಂದು ಪ್ರಶ್ನಿಸಿದರು.
ಡಿಜೆ ಬಳಸುವಾಗ 55 – 75 ಡೆಸಿಬಲ್ ಒಳಗೆ ಮಾತ್ರ ಇರಬೇಕು. ಇದಕ್ಕಿಂತ ಜಾಸ್ತಿ ಮಾಡಬಾರದು. ಇದಕ್ಕಿಂತ ಹೆಚ್ಚಿನ ಡೆಸಿಬಲ್‌ ಬಳಸಿದ್ದಲ್ಲಿ ಶಬ್ದ ಮಾಲಿನ್ಯ ಎಂದು ವ್ಯಾಖ್ಯಾನಿಸಲಾಗುತ್ತದೆ. ಹೀಗಾಗಿ ಅದು ಹಾನಿಕಾರಕವಾಗಲಿದೆ. ಕಳೆದ ಬಾರಿ ದಸರಾದಲ್ಲಿ ನಿಗಧಿತ ಡೆಸಿಬಲ್‌ಗಿಂತ ಹೆಚ್ಚಿನ ಡೆಸಿಬಲ್‌ನಲ್ಲಿ ಡಿಜೆ ಬಳಸಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಶಬ್ದಮಾಲಿನ್ಯದ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿದ್ದು, ಅವರು ಈ ಬಗ್ಗೆ ಕ್ರಮ ವಹಿಸುತ್ತಾರೆಂದು ಹೇಳಿದರು.

ದಸರಾ ಭದ್ರತೆಗೆ ಹೆಚ್ಚಿನ ಕ್ರಮ

ಈ ಬಾರಿ ದಶಮಂಟಪ ಸಮಿತಿಗಳು ಡಿಜೆ ಸಂಬಂಧದ ನಿಯಮ ಪಾಲಿಸುವ ಭರವಸೆ ಇದೆ. ಲೇಸರ್ ಬಳಕೆಯಿಂದ ತೊಂದರೆ ಆಗುತ್ತದೆ ಎಂಬ ಬಗ್ಗೆಯೂ ಸಮಿತಿಯವರೇ ಗಮನ ಹರಿಸಬೇಕು ಎಂದರು. ದಸರಾ ಭದ್ರತೆಗೆ ಈ ಬಾರಿ ಹೆಚ್ಚಿನ ಕ್ರಮ ವಹಿಸಲಾಗಿದೆ. ಸಾವಿರಕ್ಕೂ ಅಧಿಕ ಪೊಲೀಸರು, ಜಂಬೋ ಟೀಮ್ ದಸರಾ ಸಂದರ್ಭ ಹೆಚ್ಚಿನ ನಿಗಾ ವಹಿಸಲಿದೆ. ವಿಶೇಷವಾಗಿ ಹದಿನೈದು ಮಂದಿಯ, ಆರೇಳು ಜಂಬೋ ತಂಡವನ್ನು ತಯಾರಿ ಮಾಡಲಾಗಿದೆ.

ಗುಂಪಿನಲ್ಲಿ ಗಲಾಟೆ, ಮಹಿಳೆಯರಿಗೆ ಕಿರಿಕಿರಿ ಮಾಡುವುದನ್ನು ತಪ್ಪಿಸುವ ಕಾರ್ಯವನ್ನು ಈ ತಂಡ ಮಾಡಲಿದೆ. ಹಲವು ಪೊಲೀಸರು ದ್ವಿಚಕ್ರ ವಾಹನದಲ್ಲಿಯೂ ನಗರದಲ್ಲಿ ವೀಕ್ಷಣೆಯಲ್ಲಿರುತ್ತಾರೆ. ಟ್ರಾಫಿಕ್ ನಿಯಂತ್ರಣ, ಹೆಲ್ಪ್‌ಲೈನ್‌ ಬಗ್ಗೆಯೂ ಗಮನ ಹರಿಸಲಾಗಿದೆ. ಕಳೆದ ಬಾರಿಯ ಅನುಭವದೊಂದಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ದಸರಾಗೆ ಬಂದೋಬಸ್ತ್‌ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಕಳ್ಳರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಇದಕ್ಕಾಗಿಯೇ ಹೆಚ್ಚು ಲೈಟ್ ಅಳವಡಿಕೆ, ಸಿಸಿ ಕ್ಯಾಮೆರಾ ಅಳವಡಿಕೆ ಮೇಲೂ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಪ್ರತಿಯೊಂದು ಮಂಟಪಕ್ಕೂ 1 ಪೊಲೀಸ್‌ ಆಫೀಸರ್‌ ಸೇರಿದಂತೆ 8 ಮಂದಿ ಸಿಬ್ಬಂದಿ ಕಾವಲಿರುತ್ತಾರೆ ಎಂದು ಕೆ.ರಾಮರಾಜನ್ ಹೇಳಿದರು. ದಸರಾ ಸಂದರ್ಭ ಯಾವುದೇ ಅಂಗಡಿಯಲ್ಲಿಯೂ ಮುಖವಾಡ ಮಾರಾಟಕ್ಕೆ ಅವಕಾಶ ಇಲ್ಲ. ಮುಖವಾಡ ಮಾರಾಟ ಕಂಡು ಬಂದಲ್ಲಿ ನಗರಸಭೆ ವಶಕ್ಕೆ ಪಡೆಯುತ್ತದೆ ಹಾಗೂ ದಸರಾ ನಂತರ ಹಿಂತಿರುಗಿಸುವ ಕೆಲಸವಾಗುತ್ತದೆ ಎಂದು ಹೇಳಿದರು.

ಬಾಂಗ್ಲಾ ದೇಶಿಯರು ಇದ್ದ ಬಗ್ಗೆ ಸಂಶಯವಿದ್ದಲ್ಲಿ ಮಾಹಿತಿ ಕೊಡಿ

ಕೊಡಗಿನಲ್ಲಿ ಹೊರ ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಬೇಡಿಕೆ ಇದೆ. ತೋಟಗಳ ನಿರ್ವಹಣೆಗೆ ಹೊರ ರಾಜ್ಯದ ಕಾರ್ಮಿಕರ ಅಗತ್ಯವೂ ಇದೆ. ದೇಶದಲ್ಲಿ ಯಾರೂ ಎಲ್ಲಿಗೆ‌ಬೇಕಾದರೂ ತೆರಳಿ ಉದ್ಯೋಗ ಮಾಡುವ ಅವಕಾಶವಿದೆ. ಆದರಿಂದ ಅವರನ್ನು ಬರಬಾರದು ಎನ್ನಲು ಸಾಧ್ಯವಿಲ್ಲ ಅಥವಾ ಅವರ ಮೇಲೆ ಹೆಚ್ಚಿನ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಇದರಿಂದ ನೈಜ ಕಾರ್ಮಿಕರಿಗೆ ಇರುಸು ಮುರುಸು ಉಂಟಾಗುತ್ತದೆ. ಹಾಗಾಗೀ ಕಾರ್ಮಿಕರನ್ನು ನೇಮಿಸುವ ಮುನ್ನ ತೋಟದ ಮಾಲೀಕರೇ ಎಚ್ಚರ ವಹಿಸಬೇಕು. ಅವರಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಹಾಗೇಂದು ಬಂಗ್ಲಾದೇಶದಿಂದ ಬಂದರೆ ಅವರಿಗೆ ಇಲ್ಲಿರಲು ಅವಕಾಶ ಇಲ್ಲ. ಬಾಂಗ್ಲಾ ದೇಶಿಯರು ಇದ್ದ ಬಗ್ಗೆ ಸಂಶಯವಿದ್ದಲ್ಲಿ ನಮಗೆ ಮಾಹಿತಿ ಕೊಡಿ. ನಾವೂ ಪರಿಶೀಲನೆ ನಡೆಸುತ್ತೇವೆ ಎಂದು ಕೆ.ರಾಮರಾಜನ್ ಹೇಳಿದರು.

Continue Reading

ಬೆಂಗಳೂರು

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Actor Darshan : ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ ಮಂಡಿಸಿದ ಸಿ.ವಿ ನಾಗೇಶ್‌, ಪ್ರಕರಣದ ದೋಷಾರೋಪ ಪಟ್ಟಿಯಲ್ಲಿ ತನಿಖಾಧಿಕಾರಿಗಳ ಲೋಪ ಇದೆ. ದರ್ಶನ್‌ರನ್ನು ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದು ವಾದಿಸಿದ್ದಾರೆ. ಸುದೀರ್ಘ ವಾದ ಆಲಿಸಿದ ಕೋರ್ಟ್‌ ನಾಳೆ ಶನಿವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.

VISTARANEWS.COM


on

By

Actor Darshan Renukaswamy murder case
Koo

ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ (Renukaswamy Murder case) ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ ನಟ ದರ್ಶನ್ (Actor Darshan), ಪವಿತ್ರಗೌಡ, ರವಿಶಂಕರ್, ಲಕ್ಷ್ಮಣ್‌ರ ಜಾಮೀನು ಅರ್ಜಿ‌ ವಿಚಾರಣೆಯು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಶುಕ್ರವಾರ (ಅ.4) ನಡೆಯಿತು. ನಟ ದರ್ಶನ್ ಪರ ಸಿ.ವಿ ನಾಗೇಶ್, ಪವಿತ್ರಗೌಡ ಗೌಡ ಪರ ಟಾಮಿ ಸೆಬಾಸ್ಟಿಯನ್, ರವಿಶಂಕರ್ ಪರ ರಂಗನಾಥ್ ರೆಡ್ಡಿ, ಲಕ್ಷ್ಮಣ್ ಪರ ಸೂರ್ಯ ಮುಕುಂದ್ ವಾದ ಮಂಡಿಸಿದ್ದರು. ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ ನಾಗೇಶ್‌, ದೋಷಾರೋಪ ಪಟ್ಟಿಯಲ್ಲಿ ತನಿಖಾಧಿಕಾರಿಗಳ ಲೋಪವನ್ನು ಉಲ್ಲೇಖಿಸಿದರು. ವಾದ ಆಲಿಸಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು ಶನಿವಾರ ಮಧ್ಯಾಹ್ನಕ್ಕೆ ಮುಂದೂಡಿದೆ.

ಮೊದಲಿಗೆ ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ವಾದ ಶುರು ಮಾಡಿದರು. ದರ್ಶನ್ ವಿರುದ್ಧದ ಆರೋಪದ ಚಾರ್ಜ್ ಶೀಟ್ ಕ್ರೋಢೀಕೃತ ವರದಿ ಸಲ್ಲಿಕೆ ಮಾಡಲಾಗಿದೆ. ಚಾರ್ಜ್ ಶೀಟ್‌ನ ಎಲ್ಲಾ ಹೇಳಿಕೆಗಳು, ಸಾಕ್ಷಿಗಳು ಹಾಗೂ ಎಫ್ಎಸ್ಎಲ್ ರಿಪೋರ್ಟ್ ವರದಿಯಾಗಿದೆ. ಪ್ರಕರಣದ ಮೊದಲ ವಿಚಾರಣೆ ( ಟ್ರಯಲ್) ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ ಆಗಿದೆ. ಈ ವರದಿಯಿಂದ ನನ್ನ ಕಕ್ಷಿದಾರನಿಗೆ ದೊಡ್ಡ ನಷ್ಟವಾಗಿದೆ. ಸುಪ್ರೀಂ ಕೋರ್ಟ್ 2016ರ ಆದೇಶ ಉಲ್ಲೇಖಿಸಿದ ನಾಗೇಶ್‌, ಪ್ರಕರಣದ ಎವಿಡೆನ್ಸ್ ಮತ್ತು ಮೆರಿಟ್ಸ್ ತುಂಬಾ ದೊಡ್ಡ ಪಬ್ಲಿಸಿಟಿ ಆಗಬಾರದು. ಇಲ್ಲಿ ದರ್ಶನ್ ವಿರುದ್ಧ ದೊಡ್ಡ ಮಟ್ಟದ ಪ್ರಚಾರವಾಗಿದೆ. ಇದು ನ್ಯಾಯದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಆದೇಶದ ಬಗ್ಗೆ ಸಿ.ವಿ. ನಾಗೇಶ್ ಉಲ್ಲೇಖಿಸಿದರು. ಈ ವೇಳೆ ನನಗೆ ಪ್ರತಿ ನೀಡಿಲ್ಲ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ಹೇಳಿದರು.

ಈ ಪ್ರಕರಣದಲ್ಲಿ ಎಲೆಕ್ಟ್ರಾನಿಕ್ ಮೀಡಿಯಾ ಪಬ್ಲಿಸಿಟಿಯೂ ಪರಿಣಾಮ ಬೀರಿದೆ. ಎಫ್ಐಆರ್‌ನಿಂದ ಸಾಕ್ಷಿಗಳ ತನಕ ಎಲ್ಲಾ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಸಂಪೂರ್ಣ ಚಾರ್ಜ್ ಶೀಟ್ ಪ್ರತಿ ಸಿಕ್ಕಿದೆ. ಅವರು ನೇರವಾಗಿ ನ್ಯಾಯಾವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ. ಪ್ರಕರಣದ ಟ್ರಾಯಲ್ ನ್ಯಾಯಾಲಯದಲ್ಲಿ ಆಗಬೇಕು ಹೊರತು ಯಾವುದೇ ಪ್ಯಾನಲ್ ಡಿಸ್ಕ್‌ಷನ್‌ನಲ್ಲಿ ಅಲ್ಲ. ಈ ಅಂಶಗಳ ಪರಿಗಣಿಸಿ ತನಿಖಾಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದರ್ಶನ್ ಪರ ಸಿ ವಿ ನಾಗೇಶ್ ವಾದಿಸಿದರು.

ಮೊದಲು ಪ್ರಕರಣದ ಸೀಜಿಂಗ್ ವೇಳೆ ಸಿಕ್ಕಿರುವುದು ಏನು? ಮರದ ಕೊಂಬೆಗಳು, ನೈಲಾನ್ ಹಗ್ಗ, ವಾಟರ್ ಬಾಟೆಲ್ ಮತ್ತು ಬಟ್ಟೆ ಮಾತ್ರ. ಆದರೆ ಪೊಲೀಸರು ಅದನ್ನೇ ಇಲ್ಲಿ ಸಾಕ್ಷಿಯನ್ನಾಗಿ ಮಾಡಿದ್ದಾರೆ. ಸುಮಾರು ಅರ್ಧ ಅಡಿ ಉದ್ದದ ಕೋಲು, ವಾಟರ್ ಬಾಟೆಲ್ ಒಂದು ಪತ್ತೆಯಾಗಿದ್ದು, ಅದರಲ್ಲಿ ಸ್ಟೋನಿ ಬ್ರೂಕ್ ಚಿನ್ಹೆ ಇದೆ. ಕೋಲಿನ ಮೇಲೆ ಪಿಂಕ್ ಮತ್ತು ಕೆಂಪು ಬಣ್ಣದ ನೈಲಾನ್ ಹಗ್ಗ ಸಿಕ್ಕಿರುತ್ತದೆ. ಅದರಲ್ಲಿ ರಕ್ತದ ಕಲೆ ಪತ್ತೆಯಾಗಿದೆ. ಪ್ರಕರಣದ ಪಂಚನಾಮೆ ಓದಿ ವಾದ ಮುಂದುವರಿಸಿದ ಸಿ.ವಿ ನಾಗೇಶ್ ಇತರ ಆರೋಪಿಗಳ ಸ್ವ ಇಚ್ಛೆ ಹೇಳಿಕೆಯ ಬಗ್ಗೆ ಉಲ್ಲೇಖಿಸಿದರು. ಆರೋಪಿಗಳ ಬಂಧನ ಮೇ 11ರಂದು ಆಗಿದೆ, 12ರಂದು ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಹಾಗಾದರೆ ಅವರಿಗೆ ಮೊದಲೆ ಕೇಸ್ ಅಪರಾಧದ ಅರಿವು ಇರುತ್ತಾ ಎಂದು ಸಿ.ವಿ ನಾಗೇಶ್ ಪ್ರಶ್ನಿಸಿದರು.

ಓರ್ವ ವ್ಯಕ್ತಿ ಗುಪ್ತಾಂಗಕ್ಕೆ ಗುದ್ದಿ ಸಾಯಿಸಿದ್ದಾಗಿ ವಿನಯ್ ಹೇಳಿದ್ದ, ಆದಾದ ಬಳಿಕ ಗಿರೀಶ್ ನಾಯ್ಕ್ ಇನ್ಸ್‌ಪೆಕ್ಟರ್‌ಗೆ ಹೇಳಿದೆ. ಆಗ ಇನ್ಸ್‌ಪೆಕ್ಟರ್‌ ಹೇಳಿದ್ದು, ಅವರ ಕಾನ್ಫಿಡೆನ್ಸ್ ತೆಗೆದುಕೊಂಡು ಕೊಲೆ ಮಾಡಿದವರು ಯಾರು ಅಂತಾ ತಿಳಿದುಕೋ ಅಂದಿದ್ದರಂತೆ. ಕೊಲೆ ಮಾಡಿದ್ದು ದರ್ಶನ್ ಅಭಿಮಾನಿಗಳು ಅಂದಾಗ, ಮೀಡಿಯಾದವರು ಅವರೇ ಕೊಲೆ ಮಾಡಿದ್ದಾರೆ ಅಂತ ಹಾಕುತ್ತಾರೆ ಅಂತಾ ಹೇಳಿದ್ದರಂತೆ. ಇದು ಸಂಪೂರ್ಣವಾಗಿ ತಿರುಚಿದ ಹೇಳಿಕೆಯಾಗಿದೆ. ‌ಪ್ಲ್ಯಾನ್‌ ಮಾಡಿ ಈ ರೀತಿ ಹೇಳಿಕೆ ದಾಖಲಿಸಲಾಗಿದೆ ಎಂದು ದರ್ಶನ್ ಪರ ಸಿ ವಿ ನಾಗೇಶ್ ವಾದಿಸಿದರು.

ಸ್ಥಳ ಮಹಜರ್ ಮಾಡಿದ ಪಿಡಬ್ಲ್ಯೂಡಿ ಎಂಜಿನಿಯರ್ ಹೇಳಿಕೆಯನ್ನು ಓದಿದ ನಾಗೇಶ್‌, ಪ್ರಕರಣದಲ್ಲಿ ಐ ವಿಟ್ನೇಸ್ ಸೆಕ್ಯೂರಿಟಿ ಗಾರ್ಡ್, ಆತನ 164 ಹೇಳಿಕೆ ದಾಖಲಾಗಿದೆ. ಆತನಿಗೆ ಕನ್ನಡವೇ ಬರಲ್ಲ ಆದರೆ ಕನ್ನಡದಲ್ಲಿ ಹೇಳಿಕೆ ದಾಖಲಾಗಿದೆ. ಇದೊಂದು ಕ್ಲಾಸಿಕ್ ಕೇಸ್ ಆಫ್ ಫ್ಯಾಬ್ರಿಕ್ ಎವಿಡೆನ್ಸ್.. ಮರುದಿನ ಬೆಳಗ್ಗೆ ಅಂದರೆ ಮಂಗಳವಾರ 10:30ಕ್ಕೆ ಪೊಲೀಸರು ಬಂದು, ಆಚೆ ಕಳಿಸಿದರು. ಈ ಪ್ರಕಾರ ಪೊಲೀಸರು ಗೋಡಾನ್ ವಶಕ್ಕೆ ಪಡೆದಿದ್ದಾರೆ. ಪ್ಲೇಸ್ ಆಫ್ ಕ್ರೈಂ ಸೀಜ್ ಮಾಡಿದ್ದಾರೆ. ಆದಾದ ಬಳಿಕ ಏಕೆ 12ನೇ ತಾರೀಕಿನ ತನಕ ಸಾಕ್ಷಿಗಳ ಕಲೆ ಹಾಕಲು, ಕೋಲು, ಹಗ್ಗ ಎಲ್ಲಾ ಕಲೆಕ್ಟ್ ಮಾಡಲು ಕಾಯ್ದರು. ಇದೆಲ್ಲವೂ ದರ್ಶನ್ ವಿರುದ್ಧ ಸಾಕ್ಷಿಗಳ ಪ್ಲಾಂಟ್ ಮಾಡಲು ಮಾಡಿದ್ದಾರೆ.

9,10 ಹಾಗೂ 11ನೇ ತಾರೀಖು ಬಿಟ್ಟು ಆಮೇಲೆ ಮಾಡಿದ್ದಾರೆ. ಲಾಕ್ ಮಾಡಿ ಸೀಲ್ ಮಾಡಿದ ಮೇಲೆ ಏಕೆ ತಡವಾಗಿ ರಿಕವರಿ ಮಾಡಿದ್ದಾರೆ. ಅಲ್ಲಿ ಮರದ ಕೊಂಬೆಗಳು, ನೈಲಾನ್ ಹಗ್ಗ, ಎಲ್ಲವನ್ನು ಆಮೇಲೆ ಇಟ್ಟು, ಪ್ಲಾಂಟ್ ಮಾಡಿದ್ದಾರೆ. ನನ್ನ ಕಕ್ಷಿದಾರನ ವಿರುದ್ಧ ಇಟ್ಟು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಇಷ್ಟು ತಡವಾಗಿ ಮಾಡಿರುವುದು ಅನುಮಾನ ಮೂಡಿಸಿದೆ. ಕೃತ್ಯದಲ್ಲಿ ವೆಫನ್ ಫ್ಯಾಬ್ರಿಕೇಟ್ ಮಾಡಲಾಗಿದೆ ಎಂದು ನಾಗೇಶ್‌ ವಾದಿಸಿದಾಗ, ಮಧ್ಯಪ್ರವೇಶಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಇದಕ್ಕೆ ನಾನು ಉತ್ತರ ಆಮೇಲೆ ಹೇಳುತ್ತೇನೆ ಎಂದರು.

ತನಿಖಾಧಿಕಾರಿಗಳ ಲೋಪ?

ಪ್ರಕರಣದಲ್ಲಿ ಪೊಲೀಸರ ಹಾಗೂ ತನಿಖಾಧಿಕಾರಿಯ ಲೋಪದ ಬಗ್ಗೆ ಉಲ್ಲೇಖಿಸಿದ ನಾಗೇಶ್‌, ಪೊಲೀಸರಿಗೆ ಪ್ರಕರಣ ಕೃತ್ಯದ ಜಾಗ, ಬಳಸಿದ ವಸ್ತುಗಳ ಬಗ್ಗೆ ಮಾಹಿತಿ ಇತ್ತು. ಆದರೂ ಏಕೆ ತಡವಾಗಿ ಪಂಚನಾಮೆ ಮಾಡಿದರು. 11ನೇ ತಾರೀಖು ಆದರೂ ಮಾಡಬೇಕಿತ್ತು, ಸದ್ಯ ಇರುವ ಮಿಸ್ಟರಿ ಎಂದು ಸಿವಿ‌ ನಾಗೇಶ್ ಪ್ರಕರಣದ ಐಒ ನೀಡಿರುವ ಸಾಕ್ಷಿ ಹೇಳಿಕೆಯ ಅಂಶಗಳ ಓದಿದ್ರು.

ಜೂನ್‌11 ರಂದು ದರ್ಶನ್‌ನಿಂದ ಸ್ವ ಇಚ್ಛೆ ಹೇಳಿಕೆ ಪಡೆದಿದ್ದರೆ, ಆದರೆ ರಿಕವರಿ ಮಾಡಿದ್ದು ಮಾತ್ರ 14 ಮತ್ತು‌15 ರಂದು? ಅಲ್ಲಿಯವರೆಗೆ ಪೊಲೀಸರು ಏನು ಮಾಡುತ್ತಾ ಇದ್ದರು. ದರ್ಶನ್ ಹೇಳಿದ‌ ರೀತಿ ಅಂದು ಧರಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲಿ ದರ್ಶನ್ ಅಂದು ಧರಿಸಿದ್ದು ಚಪ್ಪಲಿಯೋ? ಶೂ ವೋ? ದರ್ಶನ್ ಧರಿಸಿದ್ದ ಬಟ್ಟೆಗಳನ್ನು ಬಿನ್‌ನಲ್ಲಿ ಹಾಕಿದ್ದಾಗಿ ಹೇಳಿಕೆ ನೀಡಿದ್ದರು. ಮನೆಯಲ್ಲಿ ಪಂಚನಾಮೆ ವೇಳೆ ಬಿನ್‌ನಲ್ಲಿ‌ ಬಟ್ಟೆಗಳು ದೊರಕಿಲ್ಲ. ಮನೆ ಕೆಲಸದಾಕೆ ಬಟ್ಟೆ ಒಗೆದಿರಬಹುದು ‌ಎಂದು ಟೆರೆಸ್‌ ಹೋಗಿ ನೋಡಲಾಗಿದೆ. ಬಟ್ಟೆ ಒಣಹಾಕಿದ್ದು ಪತ್ತೆಯಾಗಿದೆ. ಸರ್ಫ್ ಸೋಪ್‌ನಲ್ಲಿ ತೊಳೆದಿದ್ದಾರೆ ಅಂತಲೂ ಉಲ್ಲೇಖ ಮಾಡಲಾಗಿದೆ. ಮನೆ ಕೆಲಸದಾಕೆ ಹೇಳಿಕೆ ಪಡೆದಿದ್ದು, ಸರ್ಫ್ ಪೌಡರ್‌ನಲ್ಲಿ ನೆನೆ ಹಾಕಿ ಕೈಯಿಂದ ಕುಕ್ಕಿ ಕುಕ್ಕಿ ಒಗೆದಿದ್ದಾಗಿ ಹೇಳಿಕೆ ನೀಡಿದ್ದಾಳೆ. ಒಂದು ರೀತಿ ಅರೇಬಿಯನ್‌ ನೈಟ್ ಕಥೆ ಇದ್ದ ಹಾಗೆ ಇದೆ ಎಂದು ತನಿಖಾ ರೀತಿಯನ್ನು ಸಿ.ವಿ ನಾಗೇಶ್‌ ಪ್ರಶ್ನಿಸಿದರು.

ಹೀಗಿದ್ದಾಗ ಬಟ್ಟೆಯಲ್ಲಿ ಕಲೆ ಇದೆ ಅಂತಾ ರಿಕವರಿ ಅಂತಾರೆ ಹೇಗೆ? ರಿಕವರಿ ಮತ್ತು ಸ್ವ ಇಚ್ಚಾ ಹೇಳಿಕೆಯ ಸಂದೇಹ ಮತ್ತು ವ್ಯತ್ಯಾಸಗಳ ಬಗ್ಗೆ ಸಿ ವಿ‌ ನಾಗೇಶ್ ವಾದಿಸಿದರು. ಸ್ವ ಇಚ್ಚಾ ಹೇಳಿಕೆಗಳ ಸಾಕ್ಷಿಗಳಾಗಿ ಪರಿಗಣಿಸುವ ಬಗ್ಗೆ ಹಿಂದಿನ ಆದೇಶಗಳ ಉಲ್ಲೇಖಿಸಿದರು. ದರ್ಶನ್ ಎಲ್ಲೂ ಸಹ ತನ್ನ ಸ್ವ ಇಚ್ಚಾ ಹೇಳಿಕೆಯಲ್ಲಿ ನಾನು ಯಾವ ಡ್ರೆಸ್ ಹಾಕಿದ್ದೆ, ಯಾವ ಬಣ್ಣದ ಶರ್ಟ್ ಪ್ಯಾಂಟ್ ಅಂತ ಹೇಳಿಲ್ಲ. ಆದರೂ ಬಹಳ‌ ನಾಜೂಕಾಗಿ ಬ್ಲ್ಯಾಕ್ ಕಲರ್ ಶರ್ಟ್, ಬ್ಲೂ ಜೀನ್ಸ್ ವಶಪಡಿಸಿಕೊಂಡಿದ್ದಾರೆ.

ಸುಬ್ರಮಣ್ಯ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ ಕೇಸ್ ಬಗ್ಗೆ ಉಲ್ಲೇಖಿಸಿದ ನಾಗೇಶ್‌, ಈ ಕೇಸ್‌ನಲ್ಲಿ ಸ್ವ ಇಚ್ಛೆ ಹೇಳಿಕೆ, ಐ ವಿಟ್ನೇಸ್ ಹೇಳಿಕೆ ಮತ್ತು ರಿಕವರಿ ತಾಳೆಯಾಗಬೇಕು. ಆದರೆ ಇಲ್ಲಿ‌ ಒಂದಕ್ಕೊಂದು ತೀರಾ ವ್ಯತ್ಯಾಸ ಇದೆ. ದರ್ಶನ್ ಚಪ್ಪಲಿ ಹಾಕಿದ್ದಾಗಿ‌ ಸ್ವ ಇಚ್ಛೆ ಹೇಳಿಕೆಯಿದೆ. ಆದರೆ ರಿಕವರಿ ಪಂಚನಾಮೆಯಲ್ಲಿ ಶೂ ಅಂತಾ ಹೇಳಲಾಗಿದೆ. ಇಲ್ಲಿ ಸ್ವ ಇಚ್ಛೆ ಹೇಳಿಕೆ ನೈಜವಾಗಿದೆ, ಪಂಚನಾಮೆ ಹೇಳಿಕೆಯೂ ಪ್ಯಾಬ್ರಿಕೇಟ್ ಆಗಿದೆ ಎಂದು ಸಿ.ವಿ ‌ನಾಗೇಶ್ ವಾದಿಸಿದರು. ಬಳಿಕ ವಾದ ಆಲಿಸಿದ ಕೋರ್ಟ್‌ ನಾಳೆ ಶನಿವಾರ (ಅ.5) ಮಧ್ಯಾಹ್ನ 12.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಉಳಿದ ಆರೋಪಿಗಳ ಜಾಮೀನು ಅರ್ಜಿಗಳು ಮುಂದೂಡಿಕೆ ಆಗಿವೆ.

Continue Reading
Advertisement
karnataka Weather Forecast
ಮಳೆ2 ಗಂಟೆಗಳು ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

navaratri
ಬೆಂಗಳೂರು13 ಗಂಟೆಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು14 ಗಂಟೆಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು14 ಗಂಟೆಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು14 ಗಂಟೆಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು15 ಗಂಟೆಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು16 ಗಂಟೆಗಳು ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ17 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು18 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ದಿನ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌