AUS VS SA | ಶತಕ ಬಾರಿಸಿ ಡಾನ್‌ ಬ್ರಾಡ್‌ಮನ್‌ ದಾಖಲೆ ಮುರಿದ ಸ್ವೀವನ್​ ಸ್ಮಿತ್​! - Vistara News

ಕ್ರಿಕೆಟ್

AUS VS SA | ಶತಕ ಬಾರಿಸಿ ಡಾನ್‌ ಬ್ರಾಡ್‌ಮನ್‌ ದಾಖಲೆ ಮುರಿದ ಸ್ವೀವನ್​ ಸ್ಮಿತ್​!

ಸ್ಟೀವನ್​ ಸ್ಮಿತ್​ ಮತ್ತು ಉಸ್ಮಾನ್ ಖ್ವಾಜಾ ಅವರ ಶತಕದಾಟದ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 4 ವಿಕೆಟ್​ಗೆ 475 ರನ್​ ಗಳಿಸಿದೆ.

VISTARANEWS.COM


on

steve smith
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟೆಸ್ಟ್​ ಪಂದ್ಯದಲ್ಲಿ ಸ್ಟೀವನ್​ ಸ್ಮಿತ್(104)​ ಶತಕ ಬಾರಿಸಿ ಮಿಂಚಿದ್ದಾರೆ. ಇದೇ ವೇಳೆ ವೃತ್ತಿಜೀವನದ 30ನೇ ಟೆಸ್ಟ್ ಶತಕ ಪೂರ್ತಿಗೊಳಿಸಿ ಕ್ರಿಕೆಟ್​ ದಂತಕಥೆ ಡಾನ್‌ ಬ್ರಾಡ್‌ಮನ್‌ ಅವರ ದಾಖಲೆಯನ್ನು ಮುರಿದಿದ್ದಾರೆ.

ಸಿಡ್ನಿಯಲ್ಲಿ ನಡೆಯುತ್ತಿರುವ ಈ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸುತ್ತಿರುವ ಆಸ್ಟ್ರೇಲಿಯಾ 2ನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್​ ಕಳೆದುಕೊಂಡು 475 ರನ್​ ಗಳಿಸಿದೆ. ದ್ವಿತೀಯ ದಿನ ಬ್ಯಾಟಿಂಗ್​ ಆರಂಭಿಸಿದ ಸ್ಟೀವನ್​ ಸ್ಮಿತ್​ ಒಟ್ಟು 190 ಎಸೆತಗಳನ್ನು ಎದುರಿಸಿ 104ರನ್ ಗಳಿಸಿ ಕೇಶವ್ ಮಹಾರಾಜ್‌ಗೆ ವಿಕೆಟ್​ ಒಪ್ಪಿಸಿದರು.​ ಇದೇ ವೇಳೆ ಶತಕ ಬಾರಿಸಿ ಮಿಂಚಿದ ಸ್ಮಿತ್,​ ತನ್ನದೇ ದೇಶದ ಕ್ರಿಕೆಟ್​ ದಿಗ್ಗಜ ಡಾನ್ ಬ್ರಾಡ್​ಮನ್​ ಅವರ 29 ಶತಕಗಳ ದಾಖಲೆಯನ್ನು ಬ್ರೇಕ್ ಮಾಡುವಲ್ಲಿ ಯಶಸ್ವಿಯಾದರು. ಇನ್ನೊಂದೆಡೆ ಆರಂಭಿಕ ಆಟಗಾರ ಉಸ್ಮಾನ್​ ಖ್ವಾಜಾ ಅಜೇಯ 195 ರನ್ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ.

ಸ್ಟೀವನ್​ ಸ್ಮಿತ್ ಈ ಪಂದ್ಯದಲ್ಲಿ ಮತ್ತೊಂದು ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಬರೆದಿದ್ದಾರೆ. ಆಸ್ಟ್ರೇಲಿಯಾ ಪರ ಗರಿಷ್ಠ ಟೆಸ್ಟ್ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೈಕಲ್ ಕ್ಲಾರ್ಕ್ ಅವರನ್ನು ಹಿಂದಿಕ್ಕಿ 4ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಕ್ಲಾರ್ಕ್‌ 115 ಟೆಸ್ಟ್ ಪಂದ್ಯಗಳನ್ನಾಡಿ 8643 ರನ್ ಬಾರಿಸಿದ್ದರು. ಇದೀಗ ಸ್ಮಿತ್ 92 ಟೆಸ್ಟ್‌ ಪಂದ್ಯಗಳನ್ನಾಡಿ 8,647 ರನ್ ಬಾರಿಸುವ ಮೂಲಕ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಉಳಿದಂತೆ ರಿಕಿ ಪಾಂಟಿಂಗ್(13,378), ಅಲೆನ್ ಬಾರ್ಡರ್(11,174) ಹಾಗೂ ಸ್ಟೀವ್ ವಾ(10,927) ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿರುವ ಆಟಗಾರರಾಗಿದ್ದಾರೆ.

ಇದನ್ನೂ ಓದಿ | AUS VS SA | ಪಂದ್ಯದ ಮಧ್ಯೆ ದಿಢೀರ್​​ ಬ್ಯಾಟಿಂಗ್​​ ನಿಲ್ಲಿಸಿ ಸಿಗರೇಟ್​​​ ಲೈಟರ್ ಕೇಳಿದ ಲಬುಶೇನ್; ವಿಡಿಯೊ ವೈರಲ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

IPL 2024 : ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು.

VISTARANEWS.COM


on

IPL 2024
Koo

ಬೆಂಗಳೂರು: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) 53 ನೇ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಯಾಮ್ ಕರ್ರನ್ ನೇತೃತ್ವದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ 28 ರನ್​ಗಳ ಗೆಲವು ಸಾಧಿಸಿದೆ. ಅದರ ಹೊರತಾಗಿಯೂ ಸಿಎಸ್​ಕೆ ತಂಡದಲ್ಲಿ ಕೆಲವೊಂದು ಸಮಸ್ಯೆಗಳು ಉಂಟಾಗಿವೆ ಎಂಬುದಾಗಿ ನಾಯಕ ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಗಾಯಕ್ವಾಡ್ ಟಾಸ್ ಸೋತರು. ಸಿಎಸ್​​ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡದ ಕಾರಣ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ರವೀಂದ್ರ ಜಡೇಜಾ (43) ಗರಿಷ್ಠ ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ ಮತ್ತು ಡ್ಯಾರಿಲ್ ಮಿಚೆಲ್ 30 ರನ್ ಗಳಿಸಿದರು. ರವೀಂದ್ರ ಜಡೇಜಾ 20 ರನ್ ನೀಡಿ 3 ವಿಕೆಟ್ ಪಡೆದರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಮತ್ತು ಮಿಚೆಲ್ ಸ್ಯಾಂಟ್ನರ್​ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು. ಸಿಮರ್ಜೀತ್ ಸಿಂಗ್ ಬಗ್ಗೆ ಮಾತನಾಡಿದ ಋತುರಾಜ್ ಗಾಯಕ್ವಾಡ್, ವೇಗಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅವರನ್ನು ಪರಿಚಯಿಸಲು ತಡ ಮಾಡಿಲ್ಲ ಎಂದ ಹೇಳಿದರ.

ತಂಡದಲ್ಲಿದೆ ಸಮಸ್ಯೆ

ನಮ್ಮ ತಂಡದಲ್ಲಿ ಸಮಸ್ಯೆಯಿದೆ. ಆಟಗಾರರು ಜ್ವರದಿಂದ ಬಳಲುತ್ತಿದ್ದಾರೆ. ಯಾರು ಆಡುತ್ತಿದ್ದಾರೆ ಅಥವಾ ಇಲ್ಲ ಎಂದು ಬೆಳಿಗ್ಗೆಯವರೆಗೆ ಖಚಿತವಾಗಿರಲಿಲ್ಲ. ಹೀಗಾಗಿ ಗೆಲುವು ನಿಜವಾಗಿಯೂ ಸಂತೋಷ ಕೊಟ್ಟಿದೆ ಎಂದು ಹೇಳದಿರು.

ಐದು ಸೋಲುಗಳನ್ನು ಕಂಡಿದ್ದ ಚೆನ್ನೈ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ದಾಖಲೆಯನ್ನು ಹೊಂದಿಲ್ಲ. 2024ರ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗಿರುವ ಸಿಎಸ್​ಕೆ ತಂಡ ಪಿಬಿಕೆಎಸ್ ವಿರುದ್ಧ 15-14 ಗೆಲುವಿನ ಅಂತರದ ಮುನ್ನಡೆ ಹೊಂದಿದೆ. ಆದಾಗ್ಯೂ, ಹಿಂದಿನ ಐದು ಪಂದ್ಯಗಳಲ್ಲಿ, ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಏಕೆಂದರೆ ಅವರು ಆ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ.

ಇದನ್ನೂ ಓದಿ: IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

ಐಪಿಎಲ್ ಇತಿಹಾಸದಲ್ಲಿ, ಕೇವಲ ಎರಡು ತಂಡಗಳು 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸತತ ಐದು ಪಂದ್ಯಗಳಲ್ಲಿ ಸೋಲಿಸಿವೆ, ಮೊದಲ ತಂಡ ಮುಂಬೈ ಇಂಡಿಯನ್ಸ್ ಮತ್ತು ಇನ್ನೊಂದು ತಂಡ ಪಂಜಾಬ್ ಕಿಂಗ್ಸ್, ಇದು 2021 ರಲ್ಲಿ ತಮ್ಮ ಗೆಲುವಿನ ಸರಣಿಯನ್ನು ಪ್ರಾರಂಭಿಸಿತು ಮತ್ತು ಮೇ 1 ರ ಬುಧವಾರ ಚೆಪಾಕ್​​ನಲ್ಲಿ ಸಿಎಸ್ಕೆ ವಿರುದ್ಧ ಏಳು ವಿಕೆಟ್​​ಗಳಿಂದ ಸೋಲಿಸುವ ಮೂಲಕ ಮುಂಬೈ ದಾಖಲೆ ಸರಿಗಟ್ಟಿತು.

ಅಕ್ಟೋಬರ್ 7, 2021 ರಂದು, ಪಿಬಿಕೆಎಸ್ 42 ಎಸೆತಗಳು ಬಾಕಿ ಇರುವಾಗ 6 ವಿಕೆಟ್​​ಗಳಿಂದ ಗೆದ್ದಿತು ಮತ್ತು ಐಪಿಎಲ್ 2022ರಲ್ಲಿ ಕ್ರಮವಾಗಿ 54 ಮತ್ತು 11 ರನ್​ಗಳಿಂದ ಸತತ ಗೆಲುವುಗಳನ್ನು ದಾಖಲಿಸಿತು. ಐಪಿಎಲ್ 2023 ರಲ್ಲಿ, ಅವರು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದರು ಏಪ್ರಿಲ್ 30 ರಂದು ನಡೆದ ಪಂದ್ಯವನ್ನು ಪಿಬಿಕೆಎಸ್ 4 ವಿಕೆಟ್​​ಗಳಿಂದ ಗೆದ್ದಿತು.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಪಂದ್ಯದ ಮುಕ್ತಾಯದ ನಂತರ, ಸಿಎಸ್​ಕೆ ಪರವಾಗಿ 16-14 ಅಂತರದ ದಾಖಲೆ ಹೊಂದಿದೆ.

Continue Reading

Latest

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

IPL 2024: ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಎಸ್ಆರ್​ಎಚ್​​ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್​ ಮಹೀಶ್ ಪತಿರಾನಾ ಐಪಿಎಲ್​ನ (IPL 2024) ಉಳಿದ ಭಾಗದಿಂದ ಹೊರಗುಳಿಯುವಂತಾಗಿದೆ. ಅವರು ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅವರು ಫಿಟ್ ಆಗಿರುತ್ತಾರೆ ಎಂದು ವರದಿಯಾಗಿತ್ತು. ಆದರೆ ಸಿಎಸ್​​ಕೆ ಸ್ಟಾರ್​ ಇನ್ನೂ ಗುಣಮುಖರಾಗದ ಕಾರಣ ತಾಯ್ನಾಡಿಗೆ ಮರಳಿದ್ದಾರೆ ಎಂದು ಸಿಎಸ್​ಕೆ ಮೂಲಗಳೂ ಬಹಿರಂಗಪಡಿಸಿವೆ. ಇದರರ್ಥ ಅವರು ಟಿ20 ವಿಶ್ವಕಪ್​​ನಲ್ಲಿ ಲಂಕಾ ತಂಡದ ಭಾಗವಾಗಲಿದ್ದಾರೆ.

ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

ಇದನ್ನೂ ಓದಿ : IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ಸ್ನಾಯುಸೆಳೆತದ ಗಾಯಗಳು ಚೇತರಿಸಿಕೊಳ್ಳಲು ಸಾಮಾನ್ಯವಾಗಿ ಐದರಿಂದ ಆರು ವಾರಗಳನ್ನು ತೆಗೆದುಕೊಳ್ಳುತ್ತವೆ. ಆದ್ದರಿಂದ ಪಥಿರಾನಾ ಈ ಹೊಡೆತದಿಂದ ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಕುತೂಹಲಕರವಾಗಿದೆ. ಅವರು ಶ್ರೀಲಂಕಾದ ವಿಶ್ವಕಪ್ 2023 ತಂಡದ ಭಾಗವಾಗಿದ್ದರು. ಆದರೆ ಮಧ್ಯದಲ್ಲಿ ಗಾಯಗೊಂಡಿದ್ದರು. ವಿಶ್ವ ದರ್ಜೆಯ ಕೌಶಲ್ಯಗಳನ್ನು ಹೊಂದಿರುವ ಪಥಿರಾನಾ ಆ ಪಂದ್ಯಾವಳಿಗೆ ಸಂಪೂರ್ಣ ಫಿಟ್ ಆಗುವುದು ಕಡ್ಡಾಯ ಎಂದು ಹೇಳಿದರು.

ಇದು ಖಂಡಿತವಾಗಿಯೂ ಸಿಎಸ್​ಕೆಗೆ ದೊಡ್ಡ ಹೊಡೆತವಾಗಿದೆ. ಪಥಿರಾನಾ ನಿಜವಾಗಿಯೂ ಇಡೀ ಐಪಿಎಲ್ 2024 ರಿಂದ ಹೊರಗುಳಿದರೆ ಋತುರಾಜ್ ಗಾಯಕ್ವಾಡ್ ಮತ್ತು ತಂಡವು ತಮ್ಮ ವ್ಯವಹಾರವನ್ನು ಹೇಗೆ ನಡೆಸುತ್ತದೆ ಎಂಬುದನ್ನು ನೋಡಬೇಕಾಗಿದೆ ಎಂದು ಕ್ರಿಕೆಟ್ ಪಂಡಿತರು ಹೇಳಿದ್ದಾರೆ.

Continue Reading

ಕ್ರೀಡೆ

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

MI vs SRH: ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

VISTARANEWS.COM


on

MI vs SRH
Koo

ಮುಂಬಯಿ: ಪ್ಲೇ ಆಫ್​​ನಿಂದ ಬಹುತೇಕ ಹೊರಬಿದ್ದಿರುವ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್​(MI vs SRH) ಸೋಮವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​(sunrisers hyderabad) ವಿರುದ್ಧ ಆಡಲಿದೆ. ಮುಂಬೈಗೆ ತವರಿನ ಪಂದ್ಯವಾಗಿದ್ದರೂ ಕೂಡ ತಂಡದ ಪ್ರದರ್ಶನ ನೋಡುವಾಗ ಗೆಲುವು ಕಷ್ಟ ಎನ್ನಲಡ್ಡಿಯಿಲ್ಲ.

ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಇತ್ತಂಡಗಳ ನಡುವಣ ಮೊದಲ ಮುಖಾಮುಖಿಯಲ್ಲಿ ಉಭಯ ತಂಡಗಳು ಸೇರಿ 523 ರನ್ ಬಾರಿಸಿತ್ತು. ಹೈದರಾಬಾದ್​ 3 ವಿಕೆಟ್​ಗೆ 277 ರನ್ ಬಾರಿಸಿದ್ದರೆ, ಮುಂಬೈ  5 ವಿಕೆಟ್​ಗೆ 246 ರನ್ ಗಳಿಸಿ 31 ರನ್​ ಅಂತರದಿಂದ ಸೋಲು ಕಂಡಿತ್ತು. ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಈ ಸೋಲಿಗೆ ಮುಂಬೈ ತವರಿನಲ್ಲಿ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಉತ್ಸಾಹ ಕಳೆದುಕೊಂಡ ಮುಂಬೈ


ಐದು ಬಾರಿಯ ಚಾಂಪಿಯನ್​ ಮುಂಬೈ ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಯಾರೂ ಕೂಡ ತಂಡಕ್ಕಾಗಿ ಹಾಗೂ ಉತ್ಸಾಹ ಭರಿತವಾಗಿ ಆಡುತ್ತಿಲ್ಲ. 11 ಪಂದ್ಯಗಳಿಂದ ಕೇವಲ 3 ಗೆಲುವು ಸಾಧಿಸಿ 6 ಅಂಕದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಕಳೆದ 16 ಆವೃತ್ತಿಯ ಐಪಿಎಲ್​ ಟೂರ್ನಿಯನ್ನು ನೋಡುವುದಾದರೆ ಮುಂಬೈ ಈ ಸ್ಥಿತಿ ತಲುಪಿದ್ದು ಇದೇ ಮೊದಲು.

ಇದನ್ನೂ ಓದಿ IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ನಾಯಕ ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಇಶಾನ್​ ಕಿಶನ್​, ಟಿಮ್​ ಡೇವಿಡ್​ ಹೀಗೆ ಸಾಗಿ ಎಲ್ಲ ಬ್ಯಾಟರ್​ಗಳು ಘೋರ ವೈಫಲ್ಯ. ಬೌಲಿಂಗ್​ನಲ್ಲಿ ಜಸ್​ಪ್ರೀತ್​ ಬುಮ್ರಾ ಹೊರತುಪಡಿಸಿದ ಉಳಿದೆಲ್ಲರು ಲೆಕ್ಕಭರ್ತಿಗೆ ಆಡಿದಂತೆ ಆಡುತ್ತಿದ್ದಾರೆ. ಸಂಘಟಿತ ಪ್ರದರ್ಶನ ತೋರದೇ ಹೋದಲ್ಲಿ ಈ ಪಂದ್ಯದಲ್ಲಿಯೂ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ರೋಹಿತ್​ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಅಧಿಕ. ಕಳೆದ ಪಂದ್ಯದಲ್ಲಿ ರೋಹಿತ್​ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿದಿದ್ದರು. ಮುಂದಿನ ತಿಂಗಳು ಟಿ20 ವಿಶ್ವಕಪ್​ ಕೂಡ ಆರಂಭಗೊಳ್ಳುವ ಕಾರಣ ಬಿಸಿಸಿಐ ಕೂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿರಬಹುದು.

ಹೈದರಾಬಾದ್​ಗೆ ಮಹತ್ವದ ಪಂದ್ಯ


ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 12 ಅಂಕ ಗಳಿಸಿ ನಾಲ್ಕನೇ(ಚೆನ್ನೈ-ಪಂಜಾಬ್​ ಪಂದ್ಯಕ್ಕೂ ಮುನ್ನ) ಸ್ಥಾನದಲ್ಲಿದೆ. ಕಮಿನ್ಸ್​ ಪಡೆ ಕಳೆದ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಹೀಗಾಗಿ ತಂಡಕ್ಕೆ ಲಕ್​ ಕೂಡ ಇದೆ. ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

Continue Reading

ಕ್ರೀಡೆ

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

IPL 2024: ಮ್ಯಾಕ್ಸ್ವೆಲ್ ಚೆಂಡಿನೊಂದಿಗೆ ಪರಿಣಾಮಕಾರಿಯಾಗಿದ್ದರೂ, ಅವರ ಬ್ಯಾಟಿಂಗ್ ಫಾರ್ಮ್ ಅಸಮಂಜಸವಾಗಿದೆ. ಜಿಟಿ ವಿರುದ್ಧದ ಆರ್ಸಿಬಿ 148 ರನ್​ಗಳ ಗುರಿ ಬೆನ್ನಟ್ಟಿದಾಗ ಮ್ಯಾಕ್ಸ್ವೆಲ್ ಮೂರು ಎಸೆತಗಳಲ್ಲಿ ಕೇವಲ 4 ರನ್ ಗಳಿಸಲಷ್ಟೇ ಶಕ್ತರಾದರು. ಆರಂಭಿಕ ಜೋಡಿ ವಿರಾಟ್ ಕೊಹ್ಲಿ (42) ಮತ್ತು ಫಾಫ್ ಡು ಪ್ಲೆಸಿಸ್ (64) ಕೇವಲ 5.5 ಓವರ್ಗಳಲ್ಲಿ 92 ರನ್​​ಗಳನ್ನು ಸೇರಿಸಿದ್ದರು. ಇದು ಆರ್​ಸಿಬಿಯ ಸಾರ್ವಕಾಲಿಕ ಗರಿಷ್ಠ ಪವರ್ಪ್ಲೇ ಸ್ಕೋರ್ ಕೂಡ ಹೌದು.

VISTARANEWS.COM


on

IPL2024
Koo

ಬೆಂಗಳೂರು: ಐಪಿಎಲ್ 2024 ರಲ್ಲಿ (IPL 2024) ಆರಂಭಿಕ ಕಳಪೆ ಪ್ರದರ್ಶನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಮತ್ತೆ ಪುಟಿದೆದ್ದಿದೆ. ಸತತ 3 ಗೆಲುವುಗಳನ್ನು ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದೆ ಮತ್ತು ಪ್ಲೇಆಫ್ ಅವಕಾಶಗಳನ್ನು ಜೀವಂತವಾಗಿರಿಸಿದೆ. ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿತು.

ಗೆಲುವಿನ ಸರಣಿಯ ಹೊರತಾಗಿಯೂ, ಆರ್​​ಸಿಬಿ ಮ್ಯಾನೇಜ್ಮೆಂಟ್ ಮತ್ತು ಅಭಿಮಾನಿಗಳು ಗ್ಲೆನ್ ಮ್ಯಾಕ್ಸ್ವೆಲ್ ಅವರ ಫಾರ್ಮ್ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಆಟಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಮ್ಯಾಕ್ಸ್ವೆಲ್ ಚೆಂಡಿನೊಂದಿಗೆ ಪರಿಣಾಮಕಾರಿಯಾಗಿದ್ದರೂ, ಅವರ ಬ್ಯಾಟಿಂಗ್ ಫಾರ್ಮ್ ಅಸಮಂಜಸವಾಗಿದೆ. ಜಿಟಿ ವಿರುದ್ಧದ ಆರ್ಸಿಬಿ 148 ರನ್​ಗಳ ಗುರಿ ಬೆನ್ನಟ್ಟಿದಾಗ ಮ್ಯಾಕ್ಸ್ವೆಲ್ ಮೂರು ಎಸೆತಗಳಲ್ಲಿ ಕೇವಲ 4 ರನ್ ಗಳಿಸಲಷ್ಟೇ ಶಕ್ತರಾದರು. ಆರಂಭಿಕ ಜೋಡಿ ವಿರಾಟ್ ಕೊಹ್ಲಿ (42) ಮತ್ತು ಫಾಫ್ ಡು ಪ್ಲೆಸಿಸ್ (64) ಕೇವಲ 5.5 ಓವರ್ಗಳಲ್ಲಿ 92 ರನ್​​ಗಳನ್ನು ಸೇರಿಸಿದ್ದರು. ಇದು ಆರ್​ಸಿಬಿಯ ಸಾರ್ವಕಾಲಿಕ ಗರಿಷ್ಠ ಪವರ್ಪ್ಲೇ ಸ್ಕೋರ್ ಕೂಡ ಹೌದು.

ದಿನೇಶ್ ಕಾರ್ತಿಕ್ ಮತ್ತು ಸ್ವಪ್ನಿಲ್ ಸಿಂಗ್ ಕೊನೆಯಲ್ಲಿ ನಿರ್ಣಾಯಕ ಅಂತ್ಯವನ್ನು ಒದಗಿಸಿ ಆರ್​ಸಿಬಿಗೆ ಗೆಲುವು ತಂದುಕೊಟ್ಟರು. ಇದಕ್ಕೆ ಮೊದಲು ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿಯ ಆಟಗಾರರು ಕೆಟ್ಟ ಪ್ರದರ್ಶನ ನೀಡಿದ್ದರು. ಇದನ್ನು ಆರ್​ಸಿಬಿಯ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಪ್ರಶ್ನಿಸಿದ್ದಾರೆ. ಮ್ಯಾಕ್ಸ್​​ವೆಲ್​ ಅವರ ಕಳಪೆ ಪ್ರದರ್ಶನವನ್ನು ಟೀಕಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ, ಪಾರ್ಥಿವ್ ಮ್ಯಾಕ್ಸ್ವೆಲ್ ಅವರನ್ನು ಲೀಗ್​ನಲ್ಲಿ “ಅತಿ ಹೆಚ್ಚು ರೇಟಿಂಗ್ ಪಡೆದ ಕ್ರಿಕೆಟಿಗ” ಎಂದು ಕರೆದಿದ್ದಾರೆ. “ಗ್ಲೆನ್ ಮ್ಯಾಕ್ಸ್ವೆಲ್… ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಆಟಗಾರ…” ಎಂದು ಅವರು ತಮ್ಮ ಖಾತೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

ಈ ಟ್ವೀಟ್ ಬಿಸಿ ಚರ್ಚೆ ಹುಟ್ಟುಹಾಕಿದೆ. ಮ್ಯಾಕ್ಸ್ವೆಲ್ ಅಭಿಮಾನಿಗಳು ಪಾರ್ಥಿವ್ ಪಟೇಲ್ ಅವರ ಕಾಮೆಂಟ್​ ವಿಭಾಗದಲ್ಲಿ ಪರ ವಿರೋಧ ಚರ್ಚೆ ನಡೆಸಿದ್ದಾರೆ.

ದಾಳಿಯನ್ನು ನೋಡಿದ ನಂತರ ಐಪಿಎಲ್​ನಲ್ಲಿ ಮ್ಯಾಕ್ಸ್ವೆಲ್ ಅವರ ಪ್ರದರ್ಶನವನ್ನು ಆಸ್ಟ್ರೇಲಿಯಾದ ಪ್ರದರ್ಶನಕ್ಕೆ ಹೋಲಿಸುವಂತೆ ಅವರು ಅಭಿಮಾನಿಗಳಿಗೆ ಮನವಿ ಮಾಡಿದರು. ಆಸ್ಟ್ರೇಲಿಯಾ ಪರ ಮ್ಯಾಕ್ಸ್​ವೆಲ್​ ಅವರ ಪ್ರದರ್ಶನಕ್ಕೆ ಭಾರಿ ಬಹುಮತ ಒಲವು ತೋರಿದೆ. ಮ್ಯಾಕ್ಸ್ವೆಲ್ ಆರ್​ಸಿಬಿಯ ಪ್ರಮುಖ ಆಟಗಾರ. ಬೆಂಗಳೂರು ಮೂಲದ ಫ್ರಾಂಚೈಸಿಗೆ ಸೇರಿದಾಗಿನಿಂದ ಮ್ಯಾಕ್ಸ್​ವೆಲ್​ ತಂಡಕ್ಕೆ ನಿರ್ಣಾಯಕರಾಗಿದ್ದಾರೆ. ಹಿಂದಿನ ಋತುವಿನಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 2021 ರ ಋತುವಿನಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ 500 ರನ್​​ಗಳ ಗಡಿಯನ್ನು ದಾಟಿದ್ದಾರೆ (15 ಪಂದ್ಯಗಳಲ್ಲಿ 513 ರನ್). ಪಂದ್ಯಾವಳಿಯಲ್ಲಿ ಮುಂದುವರಿಯುತ್ತಿದ್ದು, ಮ್ಯಾಕ್ಸ್​ವೆಲ್​ ತನ್ನ ಅತ್ಯುತ್ತಮ ಫಾರ್ಮ್​​ಗೆ ಮರಳುವುದು ಆರ್​ಸಿಬಿಗೆ ಅಗತ್ಯವಾಗಿತ್ತು.

Continue Reading
Advertisement
Pralhad Joshi
ಕರ್ನಾಟಕ2 mins ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest13 mins ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest39 mins ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ40 mins ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 202445 mins ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Radhika Khera
ದೇಶ47 mins ago

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Viral News
ಕ್ರೈಂ47 mins ago

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

Self-Healing Roads
ತಂತ್ರಜ್ಞಾನ49 mins ago

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

IPL 2024
ಪ್ರಮುಖ ಸುದ್ದಿ57 mins ago

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

Narendra Modi
ದೇಶ59 mins ago

Narendra Modi: ಪ್ರಚಾರದ ಮಧ್ಯೆಯೇ ರಾಮಮಂದಿರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ3 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌