Ahimsa Chetan : ಬಿಜೆಪಿಯವರದ್ದು ಹಿಂದು ಅಜೆಂಡಾ; ಧರ್ಮದ ಪರ ಇದ್ದೇನೆನ್ನುವುದೇ ಭಯೋತ್ಪಾದನೆ: ಅಹಿಂಸಾ ಚೇತನ್‌ - Vistara News

ಕರ್ನಾಟಕ

Ahimsa Chetan : ಬಿಜೆಪಿಯವರದ್ದು ಹಿಂದು ಅಜೆಂಡಾ; ಧರ್ಮದ ಪರ ಇದ್ದೇನೆನ್ನುವುದೇ ಭಯೋತ್ಪಾದನೆ: ಅಹಿಂಸಾ ಚೇತನ್‌

Ahimsa Chetan : ಯಾರೇ ಆದರೂ ಧರ್ಮದ ಪರವಾಗಿದ್ದೇನೆ ಎಂದು ಹೇಳುವುದು ಭಯೋತ್ಪಾದನೆಯಾಗಿದೆ ಎಂದು ಹೇಳುವ ಮೂಲಕ ಚೇತನ್‌ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ.

VISTARANEWS.COM


on

chethan ahimsa ಪಂಚಮಸಾಲಿ ಮೀಸಲಾತಿ ಒಕ್ಕಲಿಗ ಸಮುದಾಯದ ಮೀಸಲಾತಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಬಿಜೆಪಿಯವರದ್ದು ಹಿಂದು ಅಜೆಂಡಾವಾಗಿದೆ. ಯಾವುದೇ ಹಿಂಸೆಯನ್ನು ನಾನು ವಿರೋಧಿಸುತ್ತೇನೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಆಪ್‌ ಪಕ್ಷದವರದ್ದು ಯಾವ ಅಜೆಂಡಾ ಎಂಬುದು ನನಗೆ ಗೊತ್ತಿಲ್ಲ. ಆದರೆ, ಧರ್ಮದ ಪರವಾಗಿದ್ದೇನೆ ಎನ್ನುವುದೇ ಭಯೋತ್ಪಾದನೆ ಎಂದು ನಟ ಅಹಿಂಸಾ ಚೇತನ್‌ (Ahimsa Chetan) ಹೇಳಿದ್ದಾರೆ.

ಅವರು ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಒಂದೊಂದು ರಾಜಕೀಯ ಪಕ್ಷಗಳು ಒಂದೊಂದು ರೀತಿಯಲ್ಲಿವೆ. ಇವೆಲ್ಲವುಗಳಿಗೂ ಪರ್ಯಾಯ ರಾಜಕೀಯ ಶಕ್ತಿ ಇಲ್ಲ. ಆದರೆ, ಇಂದು ಧರ್ಮದ ಪರ ಮಾತುಗಳು ಹೆಚ್ಚಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಧರ್ಮದ ಧರ್ಮದ ಪರವಾಗಿದ್ದೇನೆ ಎಂದು ಹೇಳುವುದೇ ಭಯೋತ್ಪಾದನೆ ಎಂದು ಹೇಳಿದರು.

ಅಮೆರಿಕವು ಮಾನವ ಹಕ್ಕು ನಾಶ ಮಾಡುವ ದೊಡ್ಡ ಭಯೋತ್ಪಾದಕ ದೇಶವಾಗಿದೆ. ಅದಕ್ಕೂ ನನ್ನ ವಿರೋಧ ಇದೆ. ಇನ್ನು ನನಗೆ ಭಾರತದಲ್ಲಿ ಮತ ಹಾಕುವ ಹಕ್ಕು ಇಲ್ಲ ಎನ್ನುವ ಕಾರಣಕ್ಕೆ ಪ್ರಶ್ನೆ ಮಾಡಬೇಕಿಲ್ಲ. ನನ್ನ ತಂದೆ-ತಾಯಿ ಅಮೆರಿಕದಲ್ಲಿರುವುದರಿಂದ ನಾನು ಭಾರತೀಯ ನಾಗರಿಕ ಹಕ್ಕನ್ನು ಪಡೆದಿಲ್ಲ. ಈಗಿನ ಸಂವಿಧಾನದಿಂದ ಎಲ್ಲವೂ ಸಾಧ್ಯತೆ ಇದೆ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಉತ್ತಮವಾಗಿದೆ ಎಂದು ಚೇತನ್‌ ಹೇಳಿದರು.

ಇದನ್ನೂ ಓದಿ | Terror attack | ದೇವರಂತಾದ ನಾಯಿ; ನಾಯಿ ಬೊಗಳಿದ್ದರಿಂದಾಗಿ ಕುಟುಂಬವೇ ಬಚಾವ್‌

ಈಗ ರಾಜಕೀಯ ಪಕ್ಷಗಳಲ್ಲಿ ಹಣ, ಜಾತಿ ಮುಖ್ಯವಾಗಿದೆ. ಕಾಂಗ್ರೆಸ್, ಬಿಜೆಪಿಯ ರಾಜಕಾರಣಿಗಳು ಬ್ಯುಸಿನೆಸ್ ಮಾಡಿಕೊಂಡಿದ್ದಾರೆ. ಗುತ್ತಿಗೆದಾರರೇ ಈಗ ಮುಖ್ಯವಾಗಿದ್ದಾರೆ. ಭ್ರಷ್ಟಾಚಾರವನ್ನು ಎಲ್ಲ ಕಡೆ ತೊಡೆದುಹಾಕಬೇಕು. ಭ್ರಷ್ಟಾಚಾರದ ಹಣ ನೇರವಾಗಿ ರಾಜಕಾರಣಿಗಳ ಜೇಬಿಗೇ ಹೋಗುತ್ತದೆ. ಎಲ್ಲ ಕಡೆ ವ್ಯವಸ್ಥಿತ ಭ್ರಷ್ಟಾಚಾರ ಇದ್ದು, ಇದರ ನಿರ್ಮೂಲನೆ ಆಗಬೇಕು. ಎಲ್ಲ ರಾಜಕಾರಣಿಗಳ ಪರಿವರ್ತನೆ ಆಗಬೇಕಿದೆ. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ಸಂಸ್ಥೆಯನ್ನು ತೆಗೆದುಹಾಕಿದ್ದು ಅಪಾಯಕಾರಿ ಬೆಳವಣಿಗೆಯಾಗಿತ್ತು ಎಂದು ಚೇತನ್‌ ಅಭಿಪ್ರಾಯಪಟ್ಟರು.

ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಜನಾಂಗದ ಸಮಸ್ಯೆ ಇದೆ. ಜೋಪಡಿಯಲ್ಲಿ ವಾಸವಾಗಿರುವ ಅವರಿಗೆ ನ್ಯಾಯ ಸಿಗುತ್ತಿಲ್ಲ. ಮಾಜಿ ದೇವದಾಸಿಯರಿಗೆ ಅನೇಕ ಸಮಸ್ಯೆಗಳಿವೆ. ಇವರೆಲ್ಲರ ಬದುಕು ಕಷ್ಟವಾಗಿದೆ. ಡಿಜಿಟಲ್ ಇಂಡಿಯಾ ಬಗ್ಗೆ ಮಾತನಾಡುವ ಸರ್ಕಾರಕ್ಕೆ‌ ಅಲೆಮಾರಿಗಳ ಸಮಸ್ಯೆ ಕಾಣುತ್ತಿಲ್ಲ. ಅಲೆಮಾರಿಗಳು ಸಣ್ಣ ಸಮುದಾಯ ಎಂಬ ಕಾರಣಕ್ಕೆ ತಾತ್ಸಾರಕ್ಕೊಳಗಾಗಿದ್ದಾರೆ. ಬಸವಣ್ಣ ಅವರ ಕ್ರಾಂತಿಯಲ್ಲಿ ಅಲೆಮಾರಿಗಳ ಪಾತ್ರವಿದೆ. ಮಾಜಿ ದೇವದಾಸಿಯರಿಗೆ 2018 ಪುನರ್ವಸತಿ ಕಾಯ್ದೆ ಜಾರಿಯಾಗಬೇಕು ಎಂದು ಚೇತನ್‌ ಆಗ್ರಹಿಸಿದರು.

ಇದನ್ನೂ ಓದಿ | Proud Police : ಮಟ್ಕಾ ದಂಧೆಗೆ ಕಡಿವಾಣ ಹಾಕಿದ ಐಜಿಪಿಗೆ ಅದ್ಧೂರಿ ಸನ್ಮಾನ, ಮೆರವಣಿಗೆ; ಕುಣಿದು ಕುಪ್ಪಳಿಸಿದ ಪಾವಗಡ ಮಂದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

Hassan Pen Drive Case: PSI, AE ಹೀಗೆ ವಿಡಿಯೋದಲ್ಲಿರುವ ಸುಮಾರು ಅರ್ಧದಷ್ಟು ಮಹಿಳೆಯರು ಸರ್ಕಾರಿ ಮಹಿಳಾ ಅಧಿಕಾರಿಗಳು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದರೊಂದಿಗೆ ಕೆಲಸ ಕೊಡಿಸುವ, ವರ್ಗಾವಣೆ ವಿಚಾರದಲ್ಲೂ ಈ ದಂಧೆ ಭಾಗಿಯಾಗಿರಬಹುದು ಎಂಬ ವ್ಯಾಪಕ ಅನುಮಾನ ವ್ಯಕ್ತವಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ 18 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಯಿದ್ದು, ವಿಡಿಯೋದಲ್ಲಿರುವ ಮಹಿಳೆಯರ ತನಿಖೆಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ.

ವಿಶೇಷ ತನಿಖಾ ತಂಡದಿಂದ ತನಿಖೆ ಚುರುಕಾಗುತ್ತಿದ್ದು, ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ಟೀಂ ಮಾಡಲಾಗಿದೆ. ಇನ್‌ಸ್ಪೆಪಕ್ಟರ್ ಸೇರಿ ನಾಲ್ವರ ಪ್ರತ್ಯೇಕ ತಂಡದಿಂದ ವಿಡಿಯೋ ಪರಿಶೀಲನೆ ಮಾಡಲಾಗುತ್ತಿದೆ. ಪೆನ್ ಡ್ರೈವ್‌ನಲ್ಲಿರುವ ಅಷ್ಟೂ ವಿಡಿಯೋ ಪರಿಶೀಲನೆ ಮಾಡಿ ಎಸ್ಐಟಿ ಮುಖ್ಯಸ್ಥರಿಗೆ ತಂಡ ವರದಿ ಕೊಡಲಿದೆ. ವಿಶೇಷ ಎಂದರೆ, ಪ್ರಾಥಮಿಕ ವರದಿಗಳ ಪ್ರಕಾರ, ವಿಡಿಯೋಗಳಲ್ಲಿರುವ ಮಹಿಳೆಯರಲ್ಲಿ ಬಹುತೇಕರು ಸರ್ಕಾರಿ ಅಧಿಕಾರಿಗಳು ಎಂಬ ಚಕಿತಗೊಳಿಸುವ ಅಂಶ ಬಯಲಾಗಿದೆ.

PSI, AE ಹೀಗೆ ವಿಡಿಯೋದಲ್ಲಿರುವ ಸುಮಾರು ಅರ್ಧದಷ್ಟು ಮಹಿಳೆಯರು ಸರ್ಕಾರಿ ಮಹಿಳಾ ಅಧಿಕಾರಿಗಳು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದರೊಂದಿಗೆ ಕೆಲಸ ಕೊಡಿಸುವ, ವರ್ಗಾವಣೆ ವಿಚಾರದಲ್ಲೂ ಈ ದಂಧೆ ಭಾಗಿಯಾಗಿರಬಹುದು ಎಂಬ ವ್ಯಾಪಕ ಅನುಮಾನ ವ್ಯಕ್ತವಾಗಿದೆ.

18 ಸಿಬ್ಬಂದಿ ನೇಮಕ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತಂಡಕ್ಕೆ ಸಿಐಡಿಯಿಂದ 18 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯದ ‌ವಿವಿಧ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪರಿಣಿತರ ತಂಡ‌ವನ್ನು ರಚಿಸಲಾಗಿದ್ದು, ಇಂದಿನಿಂದಲೇ ಕಾರ್ಯಾಚರಣೆ ಆರಂಭ ಸಾಧ್ಯತೆ ಇದೆ.

ಎಸಿಪಿಗಳಾದ ಪ್ರಿಯದರ್ಶಿನಿ ಈಶ್ವರ್‌ ಸಾನಿಕೊಪ್ಪ, ಸತ್ಯನಾರಾಯಣ ಸಿಂಗ್‌, ಧನ್ಯ ಎನ್‌. ನಾಯ್ಕ್‌, ಪಿಐಗಳಾದ ಸುಮರಾಣಿ ಬಿ.ಎಸ್.‌, ಸ್ವರ್ಣ ಬಿ.ಎಸ್.‌, ಭಾರತಿ, ಹೇಮಂತ್‌ ಕುಮಾರ್‌, ರಾಜಾ ಜಿ.ಸಿ., ಪಿಎಸ್‌ಐಗಳಾದ ವೈಲೆಟ್‌ ಫ್ಲೆಮೀನಾ, ವಿನುತ, ನಂದೀಶ್‌, ಕುಮುದ, ಎಚ್‌ಸಿಗಳಾದ ಸುಮತಿ, ಮನೋಹರ, ಸುನೀಲ್‌ ಬೆಳವಲಗಿ, ಬಸವರಾಜ್‌ ಮೈಗೇರಿ, ಪಿಸಿಗಳಾದ ರಂಗಸ್ವಾಮಿ, ಸಿಂಧುರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಈ ನಡುವೆ ಡಿಜಿ ಅಲೋಕ್ ಮೋಹನ್ ಅವರು, “ಪ್ರಕರಣ ತನಿಖೆಗೆ ಎಸ್‌ಐಟಿ ರಚನೆಯಾಗಿದೆ. ತನಿಖೆ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

ಕರೆದಾಗ ಬರುತ್ತಾನೆ: ರೇವಣ್ಣ

ಬೆಂಗಳೂರು: ನಾವೆಲ್ಲಾ ಇಲ್ಲೇ ಇದ್ದೇವೆ, ಎಲ್ಲೂ ಓಡಿ ಹೋಗಲ್ಲ. ಹಾಸನ ಪೆನ್‌ ಡ್ರೈವ್ ಪ್ರಕರಣದ (Hassan Pen Drive Case) ಬಗ್ಗೆ ಸದ್ಯ ನಾನು ಏನೂ ರಿಯಾಕ್ಟ್ ಮಾಡಲ್ಲ, ಕಾನೂನು ರೀತಿ ಪ್ರಕರಣವನ್ನು ನಾವು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ವಿದೇಶದಿಂದ ಪುತ್ರ ಬರುತ್ತಾನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ಸಂಸದ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ನಂತರ ನಗರದಲ್ಲಿ ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 4-5 ವರ್ಷದ ಹಿಂದೆ ಘಟನೆ ನಡೆದಿದೆ ಎಂದು ಈಗ ಕೇಸ್‌ ಹಾಕಿದ್ದಾರೆ. ಇದು ಯಾವ ತರಹದ್ದು ಎಂದು ಏನೂ ಮಾತನಾಡಲ್ಲ. ವಿಡಿಯೊ ಸೇರಿ ಯಾವುದರ ಬಗ್ಗೆಯೂ ಮಾತನಾಡಲ್ಲ ಎಂದು ತಿಳಿಸಿದ್ದಾರೆ.

ಪಕ್ಷದಿಂದ ಉಚ್ಚಾಟನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ನಿರ್ಧಾರ ಪಕ್ಷಕ್ಕೆ ಸೇರಿದ್ದು, ಎಸ್‌ಐಟಿ ರಚನೆ ಮಾಡಿರುವುದರಿಂದ ತನಿಖೆಗೆ ತೊಂದರೆ ಆಗಬಾರದೆಂದು ನಾನೇನೂ ಮಾತನಾಡಲ್ಲ. ಇದೆಲ್ಲಾ ರಾಜಕೀಯ. ಸರ್ಕಾರ ಅವರದು ಇದೆ, ಏನು ಬೇಕಾದರೂ ಮಾಡಿಕೊಳ್ಳಲಿ. ಪ್ರಕರಣದ ಬಗೆ ಕಾನೂನು ರೀತಿಯಲ್ಲಿ ತನಿಖೆ ಆಗಲಿ ಎಂದು ಹೇಳಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗಿರುವ ವಿಚಾರಕ್ಕೆ ಸ್ಪಂದಿಸಿ, ಚುನಾವಣೆ ಮುಗಿದ ನಂತರ ಅವನು ಹೋಗಿದ್ದಾನೆ. ಯಾವುದೋ ಕೆಲಸಕ್ಕಾಗಿ ಹೋಗ್ಬೇಕಿತ್ತು ಹೋಗಿದ್ದಾನೆ. ಇವರು ಎಫ್‌ಐಆರ್‌ ಹಾಕುತ್ತಾರೆ ಅಂತ ಗೊತ್ತಿತ್ತಾ? ಎಸ್‌ಐಟಿ ತನಿಖೆ ಮಾಡುತ್ತಾರೆ ಅಂತ ಗೊತ್ತಿತ್ತಾ? ವಿಚಾರಣೆಗೆ ಕರೆದಾಗ ಬರುತ್ತಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

Continue Reading

ಕ್ರೈಂ

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Taliban Writing: ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ.

VISTARANEWS.COM


on

taliban writing muniraju
Koo

ಆನೇಕಲ್: ಆನೆಕಲ್‌ನಲ್ಲಿ (Anekal news) ತನ್ನ ಮನೆಯ ಕಾಂಪೌಂಡ್ ಮೇಲೆ ಹುಚ್ಚುಚ್ಚಾಗಿ ದೇಶದ್ರೋಹಿ, ಪ್ರಚೋದನಾತ್ಮಕ ಬರಹ (Taliban Writing) ಬರೆದಿರುವ ಪೊಲೀಸ್ ಪೇದೆ, ತಾನೀಗ ಮುಸ್ಲಿಂ ಧರ್ಮದ ಕಟ್ಟರ್‌ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ಪಡೆದು (Crime news) ತನಿಖೆ ನಡೆಸುತ್ತಿದ್ದಾರೆ.‌ ಇದರ ಹಿಂದೆ ಮತಾಂತರ (conversion) ಆಯಾಮವೂ ಇದೆಯೇ ಎಂಬುದೂ ತನಿಖೆ ಆಗಬೇಕಾಗಿದೆ ಎಂದುಗ್ರಾಮಸ್ಥರು ಹೇಳಿದ್ದಾರೆ.

ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ. ಈ ಘಟನೆ ಸೂರ್ಯಸಿಟಿ ಠಾಣಾ ವ್ಯಾಪ್ತಿಯ ಬಂಡಾಪುರದಲ್ಲಿ ನಡೆದಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಆರೋಪಿ ಮುನಿರಾಜುನನ್ನು ಬಂಧಿಸಲು ಪೊಲೀಸರು ಮುಂದಾದಾಗ, ಬಂಧಿಸಲು ಬಂದ ಪೊಲೀಸರಿಗೆ “ನನ್ನನ್ನು ಕರೆದೊಯ್ಯಲು ಬಂದು ದೊಡ್ಡ ತಪ್ಪು ಮಾಡುತ್ತಿದ್ದೀರಿ. ನನ್ನ ಕೈಯನ್ನು ಮುಟ್ಟಬೇಡಿ. ಬಿಡಿ” ಎಂದು ಈತ ಅವಾಜ್ ಹಾಕಿದ್ದಾನೆ.

ವಿಚಾರಣೆ ವೇಳೆ ತಾನು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಸೇರುವ ಮುನ್ನಾ ಒಂದು ದರ್ಗಾಕ್ಕೆ ಹೋಗಿ ಹರಕೆ ಮಾಡಿಕೊಂಡಿದ್ದೆ. ನನಗೆ ಪೊಲೀಸ್ ಉದ್ಯೋಗ ಸಿಕ್ಕಿದ್ದು, ಅಂದಿನಿಂದಲೇ ನಾನು ಮುಸ್ಲಿಂ ಧರ್ಮದ ಅನುಯಾಯಿಯಾದೆ ಎಂದು ಹೇಳಿಕೆ ನೀಡಿದ್ದಾನೆ. ತಾನೇ ತನ್ನ ಕೈಯಿಂದ ಮನೆ ಗೋಡೆ, ಕಾಂಪೌಂಡ್ ಹಾಗೂ ಗೇಟ್ ಮತ್ತು ಸುತ್ತಲಿನ ಗೋಡೆ ಮೇಲೆ ಬರೆದಿರುವುದಾಗಿ ತಿಳಿಸಿದ್ದಾನೆ. ಈ ಬರಹಗಳು ಸಮಾಜದ ಶಾಂತಿ ಕದಡುವಂತಿವೆ. ಜವಾಬ್ದಾರಿಯುತ ಪೊಲೀಸನಾಗಿ ಹೀಗೆ ಬರೆಯಬಹುದೇ ಎಂಬ ಪ್ರಶ್ನೆಗೆ, ತಾನು ಮಾಡಿರುವುದು ಸರಿ. ಪಶ್ಚಾತ್ತಾಪವಿಲ್ಲ ಎಂದಿದ್ದಾನೆ.

ಇಸ್ಲಾಂ, ಥರ್ಡ್ ವರ್ಲ್ಡ್ ವಾರ್, ತಾಲಿಬಾನ್ ಇಂಡಿಯಾ ಹೆಡ್ ಬಿ ಕೇರ್ ಫುಲ್ (Taliban india head be careful) ಸಲಾಂ ಇಸ್ಲಾಂ, ಸೇರಿದಂತೆ ಆತಂಕ ಸೃಷ್ಟಿಸುವ ಹಲವು ರೀತಿಯ ಗೋಡೆ ಬರಹಗಳು ಕಂಡು ಬಂದಿದೆ. ಇಡೀ ಮನೆಯ ಗೋಡೆ ತುಂಬೆಲ್ಲಾ ದೇಶ ವಿರೋಧಿ ಬರಹಗಳಿದ್ದು, ಗೇಟ್‌ನ ಒಂದು ಬದಿಯಲ್ಲಿ ರಾಜೀವ್ ಗಾಂಧಿ ಎಂದೂ ಬರೆದಿದೆ. ಈ ಪ್ರಚೋದನಾತ್ಮಕ ಬರಹಗಳು ದೇಶದ್ರೋಹಿ ಕೃತ್ಯ ಎಂದು ಕೆಲವು ಗ್ರಾಮಸ್ಥರು ಆಪಾದಿಸಿದ್ದಾರೆ.

ಪಾಕಿಸ್ತಾನ ಬಾವುಟ ಹಾರಿಸಿದ್ದ!

ಕಾನ್‌ಸ್ಟೇಬಲ್‌ ಮುನಿರಾಜು ನಶೆಯಲ್ಲಿ ಇಂತಹ ಕೃತ್ಯವೆಸಗಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ, ಈತ ಬೆಂಗಳೂರಿನ ವಿಲ್ಸನ್ ಗಾರ್ಡನ್ ಮತ್ತು ಬಾಣಸವಾಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಕಳೆದ ಮೂರು ತಿಂಗಳಿಂದ ಕರ್ತವ್ಯಕ್ಕೆ ಚಕ್ಕರ್ ಹೊಡೆದಿದ್ದಾನೆ. ಸದಾ ಪಾನಮತ್ತನಾಗಿ ಹುಚ್ಚನಂತೆ ವರ್ತಿಸುವ ಈತ ಮೂರು ತಿಂಗಳ ಹಿಂದೆ ಮನೆಯ ಮೇಲೆ ಪಾಕಿಸ್ತಾನ ಬಾವುಟ ಹಾರಿಸಿದ್ದ ಎನ್ನಲಾಗಿದೆ. ಇತ್ತೀಚೆಗೆ ಗ್ರಾಮದಲ್ಲಿ ಗೂಂಡಾ ರೀತಿ ವರ್ತನೆ ಮಾಡುತ್ತಾ ಲಾಂಗು ಮಚ್ಚು ಹಿಡಿದು ಜನರನ್ನು ಹೆದರಿಸುತ್ತಿದ್ದ. ಈ ಹಿಂದೆಯೂ ಇದೇ ರೀತಿ ಬರಹಗಳನ್ನು ಬರೆದಿದ್ದು, ಗ್ರಾಮಸ್ಥರು ಎಚ್ಚರಿಸಿ ತೆರವುಗೊಳಿಸಿದ್ದರು. ಮತ್ತೆ ಇಂತಹ ದೇಶದ್ರೋಹಿ ಬರಹಗಳನ್ನು ಬರೆದಿದ್ದಾನೆ.

ಮನೆಯಲ್ಲಿ ತಂದೆ ತಾಯಿ ಮತ್ತು ಪತ್ನಿಯ ಮಾತನ್ನೂ ಕೇಳದೆ ಅವರ ಮೇಲೆಯೇ ಹಲ್ಲೆ ಮಾಡುತ್ತಿದ್ದ. ಕುಡಿತದ ಚಟಕ್ಕೆ ಬಿದ್ದ ಮತ್ತಿನಲ್ಲಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದ ಎನ್ನಲಾಗಿದೆ. ಮದುವೆ ಆದ ಬಳಿಕ ತಾನು ತಾಲಿಬಾನ್‌ಗೆ ಸೇರಿಕೊಂಡಿದ್ದಾಗಿ ತಿಳಿಸಿ ಅಲ್ಲಾ ಎಂದು ಕೂಗುತ್ತಿದ್ದ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Self Harming : ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆಹುತಿಯಾದ ತಾಯಿ

Continue Reading

ಬೆಂಗಳೂರು ಗ್ರಾಮಾಂತರ

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Road Accident: ಲಾರಿ ಪಂಚರ್‌ ಹಾಕುತ್ತಿದ್ದ ಚಾಲಕನಿಗೆ ಬೈಕ್‌ ಡಿಕ್ಕಿಯಾಗಿ ಚಾಲಕ ಸಾವು ಕಂಡಿದ್ದರೆ, ಇನ್ನೊಂದು ಪ್ರಕರಣದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವಿಗೀಡಾಗಿದ್ದಾರೆ.

VISTARANEWS.COM


on

road accident anekal
ಪ್ರತಾಪ್‌, ರೋಹಿತ್‌ ಕುಮಾರ್
Koo

ಆನೇಕಲ್: ಬೆಂಗಳೂರು ಗ್ರಾಮಾಂತರ ಪ್ರದೇಶ (Bangalore Rural) ಆನೇಕಲ್‌ನಲ್ಲಿ (Anekal news) ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road Accident) ಇಬ್ಬರು ಅಸುನೀಗಿದ್ದಾರೆ. ಅಪಘಾತದ ಭೀಕರತೆಗೆ ಇಬ್ಬರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಥಳಿರಸ್ತೆಯ ಸುಣವಾರ ಗೇಟ್ ಸಮೀಪ ಒಂದು ಘಟನೆ ನಡೆದಿದ್ದು, ಲಾರಿ ಚಾಲಕ ಪಂಚರ್ ಆಗಿದ್ದ ಲಾರಿಯ ಟೈರ್ ಚೇಂಜ್‌ ಮಾಡುವಾಗ ಅಪಘಾತ ನಡೆದಿದೆ. ಟೈರ್ ಓಪನ್ ಮಾಡಲು ಜಾಕ್ ಹಾಕುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ. ಜಾಕ್ ಸ್ಲಿಪ್ ಆಗುತ್ತಿದ್ದಂತೆ ಚಾಲಕನ ಮೇಲೆ ಲಾರಿ ಕುಸಿದಿದೆ. ಲಾರಿ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ದೊಡ್ಡಹಾಗಡೆ ಗ್ರಾಮದ ರೋಹಿತ್ ಕುಮಾರ್ ಸಾವನ್ನಪ್ಪಿದ ಲಾರಿ ಚಾಲಕ. ಗೊಬ್ಬರ ತುಂಬಿದ್ದ ಲಾರಿಯನ್ನು ಅನ್ಲೋಡ್ ಮಾಡಲು ಹೋಗುತ್ತಿದ್ದಾಗ ಸುಣವಾರ ಗೇಟ್ ಬಳಿ ಪಂಚರ್ ಆಗಿತ್ತು. ಮತ್ತೊಂದು ಟೈರ್ ಹಾಕಲು ಲಾರಿಯ ಕೆಳಗೆ ಮಲಗಿ ಜಾಕ್ ಹಾಕುತ್ತಿದ್ದರು. ಕತ್ತಲಿನಲ್ಲಿ ಕಾಣದೆ ಅತಿವೇಗವಾಗಿ ಬಂದ ಬೈಕ್ ಸವಾರ ಲಾರಿ ಚಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಲಾರಿಯ ಜಾಕ್ ಸ್ಲಿಪ್ ಆಗುತ್ತಿದ್ದಂತೆ ಚಾಲಕನ ತಲೆಯ ಮೇಲೆ ಲಾರಿ ಕುಸಿದಿತ್ತು. ಡಿಕ್ಕಿಯ ರಭಸಕ್ಕೆ ಮೆದುಳು ಹೊರಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಹಿಟ್ ಆಂಡ್ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ಘಟನೆ ನಡೆದಿದೆ. ಪ್ರತಾಪ್(26) ಸಾವನ್ನಪ್ಪಿದ ಬೈಕ್ ಸವಾರ. ಸ್ನೇಹಿತನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅಪರಿಚಿತ ವಾಹ‌ನ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಅಪಘಾತಕ್ಕೆ ಬೈಕ್ ಸವಾರ ಪ್ರತಾಪ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಧರಿಸಿ, ಅಪಘಾತ ನಡೆಸಿದ ವಾಹನದ ತಲಾಶೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Continue Reading

ಪ್ರಮುಖ ಸುದ್ದಿ

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

CET Exam: ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

VISTARANEWS.COM


on

CET exam 2024
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET exam 2024) ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್‌ನನಲ್ಲಿ ಪ್ರಕಟಿಸಲಾಗಿದೆ. ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್‌ ಮೂಲಕ ಏಪ್ರಿಲ್ 30ರಂದು ಬೆಳಗ್ಗೆ 11ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಈ ಮೂಲಕ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ. ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Continue Reading
Advertisement
Paris Olympics
ಕ್ರೀಡೆ1 min ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ವಿದೇಶ12 mins ago

Pakistan: “ಭಾರತ ಸೂಪರ್‌ ಪವರ್‌ಪುಲ್‌ ರಾಷ್ಟ್ರ..ಪಾಕಿಸ್ತಾನ ಮಾತ್ರ ಭಿಕ್ಷೆ ಬೇಡ್ತಿದೆ”; ಹೀಗಂದಿದ್ದು ಯಾರು ಗೊತ್ತಾ?

IPL 2024
ಕ್ರೀಡೆ39 mins ago

IPL 2024: ಸೌರವ್ ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್​

Hassan Pen Drive Case
ಪ್ರಮುಖ ಸುದ್ದಿ40 mins ago

Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

T20 World Cup 2024
ಕ್ರೀಡೆ1 hour ago

T20 World Cup 2024: ಇಂದು ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಸಂಭಾವ್ಯ ತಂಡ ಹೀಗಿದೆ

Manipur Violence
ದೇಶ1 hour ago

Manipur Violence:ಮಹಿಳೆಯರ ವಿವಸ್ತ್ರ ಕೇಸ್‌; ಪೊಲೀಸರೆದುರೇ ನಡೆದಿತ್ತು ನೀಚ ಕೃತ್ಯ

taliban writing muniraju
ಕ್ರೈಂ2 hours ago

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

IPL 2024 Points Table
ಕ್ರೀಡೆ2 hours ago

IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ

Rohit Sharma Birthday
ಕ್ರೀಡೆ2 hours ago

Rohit Sharma Birthday: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ಗೆ 37ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

road accident anekal
ಬೆಂಗಳೂರು ಗ್ರಾಮಾಂತರ2 hours ago

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ6 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202422 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202423 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌